• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಸಂವಿಧಾನ ಉಳಿದು, ಪ್ರಜಾಪ್ರಭುತ್ವ ಗಟ್ಟಿಯಾದರೆ ದುಡಿಯುವವರಿಗೆ ಬದುಕಿನ ಅವಕಾಶಗಳು ದಕ್ಕುತ್ತವೆ: ಸಿದ್ದರಾಮಯ್ಯ

by Dynamic Leader
27/12/2023
in ರಾಜ್ಯ
0
0
SHARES
0
VIEWS
Share on FacebookShare on Twitter

ಪಟ್ಟಭದ್ರರು ಬಹಳ ಕೆಟ್ಟ ವ್ಯವಸ್ಥೆಯನ್ನು ರೂಪಿಸಿದ್ದಾರೆ. ಬಸವಾದಿ ಶರಣರು 800 ವರ್ಷಗಳ ಹಿಂದೆಯೇ “ಇವ ನಮ್ಮವ ಇವ ನಮ್ಮವ” ಎಂದು ಕರೆದರೂ ಇವತ್ತಿಗೂ “ಇವನಾರವ ಇವನಾರವ” ಎನ್ನುವ ವ್ಯವಸ್ಥೆಯೇ ಮುಂದುವರೆದಿದೆ.

ಆದಿಮ‌ ಸಾಂಸ್ಕೃತಿಕ ಕೇಂದ್ರದ ಹುಣ್ಣಿಮೆ ಹಾಡು-200ರ ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು, ಮಾತನಾಡಿದರು. ಇದೇ ಸಂದರ್ಭದಲ್ಲಿ ಆದಿಮ ನಡೆದು ಬಂದ ಹಾದಿಯನ್ನು ದಾಖಲಿಸಿರುವ ನೆನಪಿನ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.

ನಮ್ಮ ಸಂವಿಧಾನ ಉಳಿದು, ಪ್ರಜಾಪ್ರಭುತ್ವ ಗಟ್ಟಿಯಾದರೆ ಮಾತ್ರ ದುಡಿಯುವವರಿಗೆ ಬದುಕಿನ ಅವಕಾಶಗಳು ದಕ್ಕುತ್ತವೆ. ಇದನ್ನು ಜನ ಸಮುದಾಯ ಅರ್ಥ ಮಾಡಿಕೊಳ್ಳಬೇಕು. ಆದಿಮ ಸಾಂಸ್ಕೃತಿಕ ಚಳವಳಿ ಮೂಲಕ ಬದಲಾವಣೆಯ ಕೇಂದ್ರ ಆಗುತ್ತದೆ ಎಂಬ ಭಾವನೆ ನನ್ನದು. ಸಮ ಸಮಾಜ ಮತ್ತು ಮಾನವೀಯತೆಯ ಸಮಾಜವನ್ನು ಗಟ್ಟಿಗೊಳಿಸಬೇಕಾದ ಸಂದರ್ಭ ಇದಾಗಿದೆ ಎಂದು ಹೇಳಿದರು.

ಅಸಮಾನತೆ ದೈವ ಸೃಷ್ಟಿ ಅಲ್ಲ. ಮನುಷ್ಯ ಸೃಷ್ಟಿ. ಸಮಾಜದಲ್ಲಿ ಯಾರಿಗೆ ಅವಕಾಶಗಳು ಸಿಕ್ಕಿತೋ ಅವರು ಬಹುಜನರನ್ನು ಅವಕಾಶ ವಂಚಿತರನ್ನಾಗಿ ಮಾಡಿದರು. ಇದರಿಂದ ಅಸಮಾನತೆ ಸೃಷ್ಟಿಯಾಯಿತು. ಅಕ್ಷರ ಸಂಸ್ಕೃತಿಯಿಂದ ವಂಚಿತರಾದವರು ಅಸಮಾನತೆಗೆ ತುತ್ತಾದರು ಎಂದು ಹೇಳಿದರು.

ಅಸಮಾನತೆಗೆ ತುತ್ತಾದವರು ಪ್ರಜಾತಂತ್ರದ ಸೌಧವನ್ನು ದ್ವಂಸ ಮಾಡ್ತಾರೆ ಎಂದು ಅಂಬೇಡ್ಕರ್ ಅವರು ಎಚ್ಚರಿಸಿದ್ದರು. ನಮ್ಮದು ಚಲನೆ ರಹಿತ ಜಾತಿ ವ್ಯವಸ್ಥೆ. ಆದ್ದರಿಂದ ಬುದ್ದನ ಕಾಲದಿಂದಲೂ ಜಾತಿ ವ್ಯವಸ್ಥೆ ವಿರುದ್ಧ ಪ್ರಜ್ಞೆ ಮೂಡಿಸಿದರೂ ಇನ್ನೂ ಜಾತಿ ವ್ಯವಸ್ಥೆ ಗಟ್ಟಿಯಾಗುತ್ತಲೇ ಇದೆ ಎಂದು ಅಸಮಾನತೆ ವ್ಯಕ್ತಪಡಿಸಿದರು.

ಪಟ್ಟಭದ್ರರು ಬಹಳ ಕೆಟ್ಟ ವ್ಯವಸ್ಥೆಯನ್ನು ರೂಪಿಸಿದ್ದಾರೆ. ಬಸವಾದಿ ಶರಣರು 800 ವರ್ಷಗಳ ಹಿಂದೆಯೇ “ಇವ ನಮ್ಮವ ಇವ ನಮ್ಮವ” ಎಂದು ಕರೆದರೂ ಇವತ್ತಿಗೂ “ಇವನಾರವ ಇವನಾರವ” ಎನ್ನುವ ವ್ಯವಸ್ಥೆಯೇ ಮುಂದುವರೆದಿದೆ. ಸ್ವಾರ್ಥರು, ಅಧಿಕಾರಕ್ಕೆ ಅಂಟಿಕೊಳ್ಳುವವರು ಪಟ್ಟಭದ್ರರ ವ್ಯವಸ್ಥೆ ಜತೆಗೆ ರಾಜಿ ಮಾಡಿಕೊಳ್ಳುತ್ತಾರೆ. ಇದರಿಂದ ಸಮಾಜ ಸಾಕಷ್ಟು ನೋವು ತಿನ್ನುತ್ತದೆ. ಕಟ್ಟ ಕಡೆಯ ಮನುಷ್ಯನಿಗೆ ದಕ್ಕಬೇಕಾದ ಪಾಲನ್ನು ದಕ್ಕದಂತೆ ಮಾಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಯಕ ಮಾಡುವವರು ಅವಕಾಶಗಳಿಂದ ವಂಚಿತರಾಗುತ್ತಾರೆ. ಯಾರು ಕಾಯಕ ಜೀವಿಗಳಲ್ಲವೋ ಅವರು ಸಂಪತ್ತನ್ನು ಅನುಭವಿಸುತ್ತಿದ್ದಾರೆ. ಉತ್ಪಾದನಾ ಪ್ರಕ್ರಿಯೆಯಲ್ಲಿ ಎಲ್ಲರೂ ಭಾಗಿ ಆಗಬೇಕು. ಉತ್ಪಾದನೆಯನ್ನು ಸಮವಾಗಿ ಹಂಚಿಕೆ ಮಾಡಿಕೊಳ್ಳಬೇಕು. ಆಗ ಮಾತ್ರ ಶೋಷಣೆ ಮುಕ್ತ ಸಮಾಜ ಸೃಷ್ಟಿಯಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಶೋಷಿತರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಭರವಸೆಯ ಮಾತಗಳನ್ನು ಹೇಳಿದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ನಂಜೇಗೌಡರು, ಕೊತ್ತನೂರು ಮಂಜುನಾಥ್, ಅನಿಲ್ ಕುಮಾರ್, ಮಾಜಿ ಸಭಾಪತಿ ಸುದರ್ಶನ್, ಮಾಜಿ ಸಚಿವರಾದ ಶ್ರೀನಿವಾಸ ಗೌಡ ಮತ್ತು ಆದಿಮ ಸಾಂಸ್ಕೃತಿಕ ಸಂಘಟನೆಯ ಪದಾಧಿಕಾರಿಗಳು, ಪೋಷಕರು ಮತ್ತು ದಲಿತ ಚಳವಳಿಯ ಹೋರಾಟಗಾರರು ಉಪಸ್ಥಿತರಿದ್ದರು.

Tags: Adima Cultural CenterHunnime HaaduSiddaramaiahಆದಿಮ‌ ಸಾಂಸ್ಕೃತಿಕ ಕೇಂದ್ರಸಿದ್ದರಾಮಯ್ಯಹುಣ್ಣಿಮೆ ಹಾಡು
Previous Post

ವೆಲ್‌ಫೇರ್ ಪಾರ್ಟಿ: ಸ್ತ್ರೀ ವಿರೋಧಿ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಚೋದಕ ಹೇಳಿಕೆ ಖಂಡನೀಯ: ಸಬೀಹಾ ಪಟೇಲ್

Next Post

“ವೈಕಂ ಚಳುವಳಿ” ಶತಮಾನೋತ್ಸವ ಆಚರಣೆ: ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್-ಪಿಣರಾಯಿ ವಿಜಯನ್ ಭಾಗಿ!

Dynamic Leader

Next Post

"ವೈಕಂ ಚಳುವಳಿ" ಶತಮಾನೋತ್ಸವ ಆಚರಣೆ: ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್-ಪಿಣರಾಯಿ ವಿಜಯನ್ ಭಾಗಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS