• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

10 ವರ್ಷ ಜೈಲು ಶಿಕ್ಷೆ, ರೂ.7 ಲಕ್ಷ ದಂಡ: ಉತ್ತರ ರಾಜ್ಯಗಳಲ್ಲಿ ಪ್ರತಿಭಟನೆ: ಸಂಧಾನಕ್ಕೆ ಕೇಂದ್ರ ಸರ್ಕಾರ ನಿರ್ಧಾರ!

by Dynamic Leader
02/01/2024
in ದೇಶ
0
0
SHARES
0
VIEWS
Share on FacebookShare on Twitter

ನವದೆಹಲಿ: ಯಾರಿಗಾದರೂ ಡಿಕ್ಕಿ ಹೊಡೆದು ಅಪಘಾತ ಮಾಡಿ ಓಡಿ ಹೋಗುವ ಚಾಲಕರಿಗೆ 10 ವರ್ಷ ಜೈಲು ಶಿಕ್ಷೆ ಅಥವಾ 7 ಲಕ್ಷ ರೂಪಾಯಿ ದಂಡ ವಿಧಿಸುವ ಕಾನೂನನ್ನು ವಿರೋಧಿಸಿ ಉತ್ತರ ರಾಜ್ಯಗಳಲ್ಲಿ ಲಾರಿ, ಟಿಪ್ಪರ್, ಕಾರು, ಬಸ್ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಅಖಿಲ ಭಾರತ ಮೋಟಾರು ಸಾರಿಗೆ ಸಂಸ್ಥೆಯ ಸಂಘಟನೆಯೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ್ದ ಕ್ರಿಮಿನಲ್ ಕಾಯ್ದೆಯಲ್ಲಿ, ಲಾರಿ ಮತ್ತು ಟಿಪ್ಪರ್ ಲಾರಿ ಸೇರಿದಂತೆ ವಾಹನ ಚಾಲಕ, ಯಾರಿಗಾದರೂ ಡಿಕ್ಕಿ ಹೊಡೆದು ಅಪಘಾತ ಮಾಡಿ ಓಡಿ ಹೋದರೆ, ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು 7 ಲಕ್ಷ ರೂಪಾಯಿ ದಂಡ ವಿಧಿಸಿ ಶಿಕ್ಷೆಯನ್ನು ಕಠಿಣ ಗೊಳಿಸಿತು. ಹಿಂದಿನ ಕಾನೂನು ಗರಿಷ್ಠ 2 ಅಥವಾ 3 ವರ್ಷಗಳ ಜೈಲು ಶಿಕ್ಷೆಯನ್ನು ಹೊಂದಿತ್ತು. ಕೆಲವೇ ದಿನಗಳಲ್ಲಿ ಜಾಮೀನು ಪಡೆಯಬಹುದು. ಸದ್ಯ ಕೇಂದ್ರ ಸರ್ಕಾರ ಈ ಕಾನೂನನ್ನು ಬಿಗಿಗೊಳಿಸುತ್ತಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.

ಬಿಹಾರ, ಪಂಜಾಬ್, ಮಹಾರಾಷ್ಟ್ರ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಇಷ್ಟು ದೊಡ್ಡ ಮೊತ್ತದ ದಂಡ ಕಟ್ಟಲು ಹೇಗೆ ಸಾಧ್ಯ ಎಂದು ಲಾರಿ ಮತ್ತು ವಾಣಿಜ್ಯ ವಾಹನ ಚಾಲಕರು ಪ್ರಶ್ನಿಸುತ್ತಿದ್ದಾರೆ. ಹಲವೆಡೆ ರ‍್ಯಾಲಿ ನಡೆಸಿದ್ದಾರೆ. ಅನೇಕ ನಗರಗಳಲ್ಲಿ ಇಂಧನ ಟ್ರಕ್ ಚಾಲಕರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಇದರಿಂದ ಪೆಟ್ರೋಲ್, ಡೀಸೆಲ್ ಕೊರತೆ ಎದುರಾಗಲಿದೆ ಎಂಬ ಆತಂಕದಲ್ಲಿ ಜನರು ತಮ್ಮ ವಾಹನಗಳೊಂದಿಗೆ ಪೆಟ್ರೋಲ್ ಬಂಕ್‌ಗಳಲ್ಲಿ ಕಾಯುತ್ತಿದ್ದಾರೆ.

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಶೀಘ್ರದಲ್ಲೇ ಇಂಧನ ಖಾಲಿಯಾಗಲಿದೆ ಎಂದು ಪೆಟ್ರೋಲ್ ಪಂಪ್ ಡೀಲರ್‌ಗಳು ಎಚ್ಚರಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಶಾಲಾ ಬಸ್ ಚಾಲಕರ ಸಂಘದ ಹೇಳಿಕೆಯಲ್ಲಿ, ‘ಡೀಸೆಲ್ ಲಭ್ಯವಾಗುವವರೆಗೆ ನಾವು ಬಸ್‌ಗಳನ್ನು ಓಡಿಸುತ್ತೇವೆ; ನಂತರ ಶಾಲಾ ಬಸ್‌ಗಳು ಸಂಚರಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಪೊಲೀಸರು ಲಾಠಿ ಜಾರ್ಜ್ ಮಾಡಿಸಿ ಎಲ್ಲರನ್ನು ಚದುರಿಸಿದ್ದಾರೆ. ಥಾಣೆ ಜಿಲ್ಲೆಯಲ್ಲಿ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ಇದರಲ್ಲಿ ಪೊಲೀಸ್ ವಾಹನಕ್ಕೆ ಹಾನಿಯಾಗಿದೆ. ಓರ್ವ ಪೊಲೀಸ್ ಗಾಯಗೊಂಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಕಾರು ಚಾಲಕರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರಿಂದ ಪ್ರವಾಸೋದ್ಯಮಕ್ಕೂ ತೊಂದರೆಯಾಗಿದೆ. ಅನೇಕ ಪ್ರವಾಸಿಗರು ವಾಹನಗಳು ಸಿಗದೇ ಪರದಾಡುತ್ತಿದ್ದಾರೆ. ಹೊಸ ಕಾನೂನಿನ ವಿರುದ್ಧ ಪಾಟ್ನಾದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಟೈರ್‌ಗಳನ್ನು ಸುಟ್ಟುಹಾಕಲಾಗಿದೆ. ರಸ್ತೆ ತಡೆ ಕೂಡ ನಡೆಸಲಾಯಿತು. ಕಾನೂನಿನ ವಿರುದ್ಧ ಘೋಷಣೆ ಕೂಗಿದವರು 10 ವರ್ಷ ಜೈಲಿನಲ್ಲಿದ್ದರೆ ಕುಟುಂಬವನ್ನು ಕಾಪಾಡುವವರು ಯಾರು ಎಂದು ಪ್ರಶ್ನಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್, ಛತ್ತೀಸ್‌ಗಢದ ರಾಯ್‌ಪುರ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.

ಈ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೊರಡಿಸಿರುವ ಹೇಳಿಕೆಯಲ್ಲಿ, “ಯಾರೊಂದಿಗೂ ಸಮಾಲೋಚನೆ ಮಾಡದೆ, ಚರ್ಚೆಯಿಲ್ಲದ ಶಾಸನಗಳನ್ನು ಮಾಡುವುದು ಪ್ರಜಾಪ್ರಭುತ್ವದ ಆತ್ಮದ ಮೇಲೆ ದಾಳಿ ಮಾಡಿದಂತೆ. ಸಂಸತ್ತಿನಲ್ಲಿ 150 ಸಂಸದರನ್ನು ಅಮಾನತುಗೊಳಿಸಿ, ಭಾರತದ ಆರ್ಥಿಕತೆಯ ಬೆನ್ನೆಲುಬಾಗಿರುವ ಚಾಲಕರ ವಿರುದ್ಧ ತಂದಿರುವ ಕಾನೂನು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತವೆ.

ಕಡಿಮೆ ಆದಾಯದೊಂದಿಗೆ ದುಡಿಯುವ ಜನರನ್ನು ಕಠಿಣ ಕಾನೂನುಗಳ ಮೂಲಕ ಕಿರುಕುಳ ನೀಡುವುದು ಅವರ ಜೀವನೋಪಾಯದ ಮೇಲೆ ಪರಿಣಾಮ ಬೀರುತ್ತದೆ. ಅದನ್ನು ದುರ್ಬಳಕೆ ಮಾಡಿಕೊಂಡರೆ ಭ್ರಷ್ಟಾಚಾರ ಹೆಚ್ಚಾಗುವ ಸಾಧ್ಯತೆ ಇದೆ”  ಎಂದು ರಾಹುಲ್ ಗಾಂಧಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags: Hit and RunMotor Transport of IndiaParliament Election 2024ProtestRahul GandhiTruckersಟ್ರಕ್ಕರ್ಪ್ರತಿಭಟನೆರಾಹುಲ್ ಗಾಂಧಿಸಂಸತ್ ಚುನಾವಣೆ 2024ಹಿಟ್ ಅಂಡ್ ರನ್
Previous Post

ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆ.ಎಸ್.ಈಶ್ವರಪ್ಪ ಅರನ್ನು ಬಂಧಿಸುವಂತೆ ವೆಲ್‌ಫೇರ್ ಪಾರ್ಟಿ ಆಗ್ರಹ!

Next Post

ಭಗವಾನ್ ರಾಮ ಬಹುಜನರ ರಾಜ… ಮಾಂಸಾಹಾರಿ – ಎನ್.ಸಿ.ಪಿ. ಶಾಸಕ ಜಿತೇಂದ್ರ ಅವದ್!

Next Post

ಭಗವಾನ್ ರಾಮ ಬಹುಜನರ ರಾಜ... ಮಾಂಸಾಹಾರಿ - ಎನ್.ಸಿ.ಪಿ. ಶಾಸಕ ಜಿತೇಂದ್ರ ಅವದ್!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಟಿಬೆಟ್ ನ ಮಕ್ಕಳು ಮತ್ತು ಹುಡುಗರನ್ನು ಚೀನಾ ಆಕ್ರಮಿತ ಪ್ರದೇಶದಲ್ಲಿ ಚೀನಿಯರು ನಡೆಸುವ ಬೋರ್ಡಿಂಗ್ ಶಾಲೆಗೆ ಬಲವಂತವಾಗಿ ಸೇರಿಸಲಾಗುತ್ತಿದೆ.

ಸಂಸ್ಕೃತಿಯನ್ನು ನಾಶಮಾಡಲು ಟಿಬೆಟಿಯನ್ ಮಕ್ಕಳನ್ನು ಚೀನಾದ ಶಾಲೆಗಳಿಗೆ ಬಲವಂತವಾಗಿ ಸೇರಿಸಲಾಗುತ್ತಿದೆ!

12/07/2025
edit post
ಗುಜರಾತ್ನ ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುವ ಮಹಿಸಾಗರ್ ನದಿಗೆ ಅಡ್ಡಲಾಗಿ 900 ಮೀಟರ್ ಉದ್ದದ ಸೇತುವೆಯ ಒಂದು ಭಾಗ ಇತ್ತೀಚೆಗೆ ಕುಸಿದಿದೆ.

ಗುಜರಾತ್ ಮಾದರಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಜಿಗ್ನೇಶ್ ಮೇವಾನಿ ಆರೋಪ!

11/07/2025
edit post
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಅಪರಾಧ: ಸಿದ್ದರಾಮಯ್ಯ

10/07/2025
edit post
ನಾನು ಕ್ಷಮೆ ಕೇಳುವುದು ನಂತರದ್ದೂ, ಮೊದಲು ಪೋಕ್ಸೋ ಕೇಸಿನಲ್ಲಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ತಂದೆಯವರ ಕ್ಷಮೆ ಕೇಳಿಸಿ ಪಾಪ ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಧರ್ಮರಾಯನಂತೆ ಆಸ್ತಿ-ಅಧಿಕಾರಕ್ಕಾಗಿ ದ್ರೌಪದಿಯನ್ನೇ ಜೂಜಿನಲ್ಲಿಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಂತೂ ಇಲ್ಲ: ಬಿ.ಕೆ.ಹರಿಪ್ರಸಾದ್!

10/07/2025

Recent News

edit post
ಟಿಬೆಟ್ ನ ಮಕ್ಕಳು ಮತ್ತು ಹುಡುಗರನ್ನು ಚೀನಾ ಆಕ್ರಮಿತ ಪ್ರದೇಶದಲ್ಲಿ ಚೀನಿಯರು ನಡೆಸುವ ಬೋರ್ಡಿಂಗ್ ಶಾಲೆಗೆ ಬಲವಂತವಾಗಿ ಸೇರಿಸಲಾಗುತ್ತಿದೆ.

ಸಂಸ್ಕೃತಿಯನ್ನು ನಾಶಮಾಡಲು ಟಿಬೆಟಿಯನ್ ಮಕ್ಕಳನ್ನು ಚೀನಾದ ಶಾಲೆಗಳಿಗೆ ಬಲವಂತವಾಗಿ ಸೇರಿಸಲಾಗುತ್ತಿದೆ!

12/07/2025
edit post
ಗುಜರಾತ್ನ ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುವ ಮಹಿಸಾಗರ್ ನದಿಗೆ ಅಡ್ಡಲಾಗಿ 900 ಮೀಟರ್ ಉದ್ದದ ಸೇತುವೆಯ ಒಂದು ಭಾಗ ಇತ್ತೀಚೆಗೆ ಕುಸಿದಿದೆ.

ಗುಜರಾತ್ ಮಾದರಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಜಿಗ್ನೇಶ್ ಮೇವಾನಿ ಆರೋಪ!

11/07/2025
edit post
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಅಪರಾಧ: ಸಿದ್ದರಾಮಯ್ಯ

10/07/2025
edit post
ನಾನು ಕ್ಷಮೆ ಕೇಳುವುದು ನಂತರದ್ದೂ, ಮೊದಲು ಪೋಕ್ಸೋ ಕೇಸಿನಲ್ಲಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ತಂದೆಯವರ ಕ್ಷಮೆ ಕೇಳಿಸಿ ಪಾಪ ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಧರ್ಮರಾಯನಂತೆ ಆಸ್ತಿ-ಅಧಿಕಾರಕ್ಕಾಗಿ ದ್ರೌಪದಿಯನ್ನೇ ಜೂಜಿನಲ್ಲಿಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಂತೂ ಇಲ್ಲ: ಬಿ.ಕೆ.ಹರಿಪ್ರಸಾದ್!

10/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಟಿಬೆಟ್ ನ ಮಕ್ಕಳು ಮತ್ತು ಹುಡುಗರನ್ನು ಚೀನಾ ಆಕ್ರಮಿತ ಪ್ರದೇಶದಲ್ಲಿ ಚೀನಿಯರು ನಡೆಸುವ ಬೋರ್ಡಿಂಗ್ ಶಾಲೆಗೆ ಬಲವಂತವಾಗಿ ಸೇರಿಸಲಾಗುತ್ತಿದೆ.

ಸಂಸ್ಕೃತಿಯನ್ನು ನಾಶಮಾಡಲು ಟಿಬೆಟಿಯನ್ ಮಕ್ಕಳನ್ನು ಚೀನಾದ ಶಾಲೆಗಳಿಗೆ ಬಲವಂತವಾಗಿ ಸೇರಿಸಲಾಗುತ್ತಿದೆ!

12/07/2025
ಗುಜರಾತ್ನ ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುವ ಮಹಿಸಾಗರ್ ನದಿಗೆ ಅಡ್ಡಲಾಗಿ 900 ಮೀಟರ್ ಉದ್ದದ ಸೇತುವೆಯ ಒಂದು ಭಾಗ ಇತ್ತೀಚೆಗೆ ಕುಸಿದಿದೆ.

ಗುಜರಾತ್ ಮಾದರಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಜಿಗ್ನೇಶ್ ಮೇವಾನಿ ಆರೋಪ!

11/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS