• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ವಿಭಿನ್ನ ಕಥಾಹಂದರ ಹೊಂದಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರಕ್ಕೆ ಮನು ಮಡೆನೂರ್ ನಾಯಕ!

by Dynamic Leader
17/01/2024
in ಸಿನಿಮಾ
0
0
SHARES
0
VIEWS
Share on FacebookShare on Twitter

• ಅರುಣ್ ಜಿ  

ಸಂಕ್ರಾಂತಿ ಹಬ್ಬದಂದು ಆರಂಭವಾದ ಈ ಚಿತ್ರಕ್ಕೆ ಯೋಗರಾಜ್ ಭಟ್ಟರ ಶಿಷ್ಯ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶನ.

ಮಕರ ಸಂಕ್ರಾಂತಿ ಪರ್ವದಿನದಂದು ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಯೋಗರಾಜ್ ಭಟ್, ವಿದ್ಯಾ ಹಾಗೂ ಸಂತೋಷ್ ಕುಮಾರ ಅವರು ನಿರ್ಮಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಮುಹೂರ್ತ ಸಮಾರಂಭ ಜೆ.ಪಿ.ನಗರದ ಶ್ರೀ ವಿನಾಯಕ ಸತ್ಯ ಗಣಪತಿ ಶಿರಡಿ ಸಾಯಿಬಾಬ ದೇವಸ್ಥಾನದಲ್ಲಿ ನೆರವೇರಿತು. ಯೋಗರಾಜ್ ಭಟ್ ಅವರ ಜೊತೆ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದಲ್ಲಿ  “ಕಾಮಿಡಿ ಕಿಲಾಡಿಗಳು” ಸೀಸನ್ 2 ವಿಜೇತ ಮನು ಮಡೆನೂರ್ ನಾಯಕನಾಗಿ ನಟಿಸುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್ ಈ ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.

“ಕುಲದಲ್ಲಿ ಕೀಳ್ಯಾವುದೋ” ಅಚ್ಚ ಕನ್ನಡದ ಶೀರ್ಷಿಕೆ ಎಂದು ಮಾತು ಆರಂಭಿಸಿದ ಯೋಗರಾಜ್ ಭಟ್,  ಈಗಲೂ ಎಲ್ಲಾ ಆರ್ಕೆಸ್ಟ್ರಾಗಳಲ್ಲಿ ಹೇಳುವ ಕೊನೆಯ ಮಂಗಳಗೀತೆಯೂ ಹೌದು. ಈ ಶೀರ್ಷಿಕೆ ನಾಲ್ಕು ವರ್ಷಗಳಿಂದ ನನ್ನ ಹತ್ತಿರವಿತ್ತು. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿರುವ ಯೋಗಿ ಗೌಡ ಮತ್ತು ನಿರ್ದೇಶನ ಮಾಡುತ್ತಿರುವ ಶ್ರೇಯಸ್ ಈ ಚಿತ್ರದ ಕಥೆ ಬಗ್ಗೆ ಹೇಳಿದಾಗ ಈ ಶೀರ್ಷಿಕೆ  ಇಡಲು ಹೇಳಿದೆ. ಅವರು ಒಪ್ಪಿದರು. ನಾನು, ಸಂತೋಷ್ ಕುಮಾರ್ ಹಾಗೂ ವಿದ್ಯಾ ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಮನು ಮಡೆನೂರ್ ನಾಯಕನಾಗಿ, ಸೋನಾಲ್ ಮೊಂತೆರೊ ನಾಯಕಿಯಾಗಿ, ದಿಗಂತ್, ರಂಗಾಯಣ ರಘು, ಶರತ್ ಲೋಹಿತಾಶ್ವ, ಮೌನ ಗುಡ್ಡೆಮನೆ ಪ್ರಮುಖ ಪಾತ್ರಧಾರಿಗಳಾಗಿ ನಟಿಸುತ್ತಿದ್ದಾರೆ. ಮನೋಮೂರ್ತಿ ಅವರ ಸಂಗೀತ ನಿರ್ದೇಶನ ಹಾಗೂ ನಿರಂಜನ್ ಬಾಬು ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ ಎಂದರು.

ಇದು 1970ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಮೊದಲು ಮನು ಮಡೆನೂರ್ ಅವರಿಗೆ ಕಾಮಿಡಿ ಜಾನರ್ ನ ಕಥೆ ಮಾಡುವುದು ಅಂದುಕೊಂಡಿದ್ದೆ. ಮನು ಅವರನ್ನು ಈಗಾಗಲೇ ಕಾಮಿಡಿ ಮೂಲಕವೇ ಜನರು ಗುರುತಿಸಿದ್ದಾರೆ. ಹಾಗಾಗಿ ಆ ಜಾನರ್ ಬೇಡ. ಬೇರೆ ಜಾನರ್ ನ ಕಥೆ ಮಾಡೋಣ ಅಂದುಕೊಂಡು ಈ ಕಥೆ ಸಿದ್ದಮಾಡಿಕೊಂಡಿದ್ದೇನೆ. ಚಿತ್ರದ ಕಥೆ ಸಿದ್ದವಾಯಿತು. ಕ್ಲೈಮ್ಯಾಕ್ಸ್ ಬಗ್ಗೆ ಯೋಚಿಸುತ್ತಿದ್ದೆ. ಗುರುಗಳಾದ ಯೋಗರಾಜ್ ಭಟ್ ಅವರು ಅದ್ಭುತ ಕ್ಲೈಮ್ಯಾಕ್ಸ್ ನೀಡಿದ್ದಾರೆ ಎಂದರು ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಯೋಗಿ ಗೌಡ.

ನನಗೆ ಮಧ್ಯರಾತ್ರಿ ಸಮಯದಲ್ಲಿ ಯೋಗರಾಜ್ ಸಿನಿಮಾಸ್ ನಿಂದ ಕರೆಮಾಡಿ ನೀವೇ ಈ ಚಿತ್ರವನ್ನು ನಿರ್ದೇಶನ ಮಾಡಬೇಕೆಂದು ಹೇಳಿದಾಗ ಆಶ್ಚರ್ಯವಾಯಿತು. ಅವರು ನಂಬಿ ಕೊಟ್ಟಿರುವ ಕಾರ್ಯವನ್ನು ಶ್ರದ್ಧೆಯಿಂದ ಮಾಡುವುದಾಗಿ ನಿರ್ದೇಶಕ ಶ್ರೇಯಸ್ ರಾಜ್ ಶೆಟ್ಟಿ ಹೇಳಿದರು.

ನಾನು ಈ ಮಟ್ಟಕ್ಕೆ ಏರಲು ಕಾರಣ “ಕಾಮಿಡಿ ಕಿಲಾಡಿಗಳು” ಕಾರ್ಯಕ್ರಮ. ಈ ಸಂದರ್ಭದಲ್ಲಿ ನಾನು ಜಗ್ಗೇಶ್, ರಕ್ಷಿತ ಹಾಗೂ ಯೋಗರಾಜ್ ಭಟ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ಇನ್ನು ನನ್ನ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವ ಯೋಗರಾಜ್ ಭಟ್, ಸಂತೋಷ್ ಕುಮಾರ್ ಹಾಗೂ ವಿದ್ಯಾ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ ಎಂದು ನಾಯಕ ಮನು ಮಡೆನೂರ್ ತಿಳಿಸಿದರು.

ನಾಯಕಿ ಸೋನಾಲ್ ಮೊಂತೆರೊ, ದಿಗಂತ್, ರಂಗಾಯಣ ರಘು, ಶರತ್ ಲೋಹಿತಾಶ್ವ, ಮೌನ ಗುಡ್ಡೆಮನೆ, ಸಂಗೀತ ನಿರ್ದೇಶಕ ಮನೋಮೂರ್ತಿ, ನಿರ್ಮಾಣ ಸಾರಥ್ಯ ಹೊತ್ತಿರುವ ರೇಣುಕಾ ಯೋಗರಾಜ್ ಭಟ್ ಈ ಚಿತ್ರದ ಬಗ್ಗೆ ಮಾತನಾಡಿದರು.

ಯೋಗರಾಜ್ ಭಟ್ ಅವರ ಜೊತೆ ಸಿನಿಮಾ‌ ನಿರ್ಮಿಸುತ್ತಿರುವುದಕ್ಕೆ ನಿರ್ಮಾಪಕರಾದ ಸಂತೋಷ್ ಕುಮಾರ್ ಹಾಗೂ ವಿದ್ಯಾ ಸಂತೋಷ ವ್ಯಕ್ತಪಡಿಸಿದರು.

Tags: Kannada CinemaKuladalli KeelyavudoManu MadenurYogaraj Bhatಕನ್ನಡ ಸಿನಿಮಾಕುಲದಲ್ಲಿ ಕೀಳ್ಯಾವುದೋಮನು ಮಡೆನೂರ್ಯೋಗರಾಜ್ ಭಟ್
Previous Post

ಸೇನಾ ಬಲದಲ್ಲಿ ಭಾರತ ಯಾವ ಸ್ಥಾನದಲ್ಲಿದೆ ಗೊತ್ತಾ?

Next Post

ಟ್ರೇಲರ್‌ನಲ್ಲೇ ಮೋಡಿ ಮಾಡಿದ “ಬ್ಯಾಚುಲರ್ ಪಾರ್ಟಿ”

Next Post

ಟ್ರೇಲರ್‌ನಲ್ಲೇ ಮೋಡಿ ಮಾಡಿದ "ಬ್ಯಾಚುಲರ್ ಪಾರ್ಟಿ"

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಬಂಗಲೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್ನಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಕಳುಹಿಸಲಾಗಿದೆ.

ಸರ್ಕಾರಿ ಬಂಗಲೆಯನ್ನು ಖಾಲಿ ಮಾಡದ ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಪತ್ರ!

06/07/2025
ಒಂದು ಕಾಲದಲ್ಲಿ ನಕ್ಸಲ್ ಕೇಂದ್ರಗಳಾಗಿದ್ದ ಎಲ್ಲಾ ಸ್ಥಳಗಳು ಈಗ ಶೈಕ್ಷಣಿಕ ಕೇಂದ್ರಗಳಾಗುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನಕ್ಸಲ್ ಕೇಂದ್ರಗಳು ಶೈಕ್ಷಣಿಕ ಕೇಂದ್ರಗಳಾಗಿ ಮಾರ್ಪಟ್ಟಿವೆ: ರಾಜನಾಥ್ ಸಿಂಗ್ ಭಾಷಣ!

04/07/2025
ಪತಂಜಲಿ ಸಂಸ್ಥೆಯು ಡಾಬರ್ ಉತ್ಪನ್ನದ ವಿರುದ್ಧ ಜಾಹೀರಾತನ್ನು ಬಿಡುಗಡೆ ಮಾಡಿದೆ. ಈ ಜಾಹೀರಾತಿನ ವಿರುದ್ಧ ಡಾಬರ್ ಸಂಸ್ಥೆ ದೆಹಲಿ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿತು.

ದೆಹಲಿ ಹೈಕೋರ್ಟ್: ಬಾಬಾ ರಾಮದೇವ್ ಅವರ ಪತಂಜಲಿ ಜಾಹೀರಾತಿಗೆ ನಿಷೇಧ!

03/07/2025
ರೈತರ ಫಲವತ್ತಾದ ಭೂಮಿಯನ್ನು ಬಲವಂತದಿಂದ ಭೂಸ್ವಾಧೀನ ಮಾಡಿಕೊಳ್ಳುವ ಕ್ರಮವನ್ನು ಸರ್ಕಾರ ಈ ಕೂಡಲೇ ಕೈಬಿಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ಹಾಗೂ ವಕೀಲರೂ ಆದ ತಾಹೇರ್ ಹುಸೇನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭೂಮಿ ಸತ್ಯಾಗ್ರಹ: ದೇವನಹಳ್ಳಿ ರೈತ ಹೋರಾಟಕ್ಕೆ ವೆಲ್ಫೇರ್ ಪಾರ್ಟಿ ಬೆಂಬಲ!

03/07/2025

Recent News

ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಬಂಗಲೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್ನಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಕಳುಹಿಸಲಾಗಿದೆ.

ಸರ್ಕಾರಿ ಬಂಗಲೆಯನ್ನು ಖಾಲಿ ಮಾಡದ ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಪತ್ರ!

06/07/2025
ಒಂದು ಕಾಲದಲ್ಲಿ ನಕ್ಸಲ್ ಕೇಂದ್ರಗಳಾಗಿದ್ದ ಎಲ್ಲಾ ಸ್ಥಳಗಳು ಈಗ ಶೈಕ್ಷಣಿಕ ಕೇಂದ್ರಗಳಾಗುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನಕ್ಸಲ್ ಕೇಂದ್ರಗಳು ಶೈಕ್ಷಣಿಕ ಕೇಂದ್ರಗಳಾಗಿ ಮಾರ್ಪಟ್ಟಿವೆ: ರಾಜನಾಥ್ ಸಿಂಗ್ ಭಾಷಣ!

04/07/2025
ಪತಂಜಲಿ ಸಂಸ್ಥೆಯು ಡಾಬರ್ ಉತ್ಪನ್ನದ ವಿರುದ್ಧ ಜಾಹೀರಾತನ್ನು ಬಿಡುಗಡೆ ಮಾಡಿದೆ. ಈ ಜಾಹೀರಾತಿನ ವಿರುದ್ಧ ಡಾಬರ್ ಸಂಸ್ಥೆ ದೆಹಲಿ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿತು.

ದೆಹಲಿ ಹೈಕೋರ್ಟ್: ಬಾಬಾ ರಾಮದೇವ್ ಅವರ ಪತಂಜಲಿ ಜಾಹೀರಾತಿಗೆ ನಿಷೇಧ!

03/07/2025
ರೈತರ ಫಲವತ್ತಾದ ಭೂಮಿಯನ್ನು ಬಲವಂತದಿಂದ ಭೂಸ್ವಾಧೀನ ಮಾಡಿಕೊಳ್ಳುವ ಕ್ರಮವನ್ನು ಸರ್ಕಾರ ಈ ಕೂಡಲೇ ಕೈಬಿಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ಹಾಗೂ ವಕೀಲರೂ ಆದ ತಾಹೇರ್ ಹುಸೇನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭೂಮಿ ಸತ್ಯಾಗ್ರಹ: ದೇವನಹಳ್ಳಿ ರೈತ ಹೋರಾಟಕ್ಕೆ ವೆಲ್ಫೇರ್ ಪಾರ್ಟಿ ಬೆಂಬಲ!

03/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಬಂಗಲೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್ನಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಕಳುಹಿಸಲಾಗಿದೆ.

ಸರ್ಕಾರಿ ಬಂಗಲೆಯನ್ನು ಖಾಲಿ ಮಾಡದ ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಪತ್ರ!

06/07/2025
ಒಂದು ಕಾಲದಲ್ಲಿ ನಕ್ಸಲ್ ಕೇಂದ್ರಗಳಾಗಿದ್ದ ಎಲ್ಲಾ ಸ್ಥಳಗಳು ಈಗ ಶೈಕ್ಷಣಿಕ ಕೇಂದ್ರಗಳಾಗುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನಕ್ಸಲ್ ಕೇಂದ್ರಗಳು ಶೈಕ್ಷಣಿಕ ಕೇಂದ್ರಗಳಾಗಿ ಮಾರ್ಪಟ್ಟಿವೆ: ರಾಜನಾಥ್ ಸಿಂಗ್ ಭಾಷಣ!

04/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS