• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಟ್ರೇಲರ್‌ನಲ್ಲೇ ಮೋಡಿ ಮಾಡಿದ “ಬ್ಯಾಚುಲರ್ ಪಾರ್ಟಿ”

by Dynamic Leader
17/01/2024
in ಸಿನಿಮಾ
0
0
SHARES
0
VIEWS
Share on FacebookShare on Twitter

• ಅರುಣ್ ಜಿ     

ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ ಜನವರಿ 26 ರಂದು ತೆರೆ ಕಾಣಲಿದೆ!

ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ಅಭಿಜಿತ್ ಮಹೇಶ್ ನಿರ್ದೇಶನದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಬ್ಯಾಚುಲರ್ ಪಾರ್ಟಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಪಂಚಿಂಗ್ ಡೈಲಾಗ್‌ಗಳ ಮೂಲಕ ಟ್ರೇಲರ್ ಎಲ್ಲರನ್ನೂ ಮೋಡಿ ಮಾಡುತ್ತಿದೆ‌. ಟ್ರೇಲರ್ ಬಿಡುಗಡೆಯ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಾನು ಕಿರುಚಿತ್ರ ಮಾಡುತ್ತಿದ್ದ ಸಮಯದಲ್ಲಿ ನನಗೆ ಅಭಿಜಿತ್ ಮಹೇಶ್ ಪರಿಚಯವಾದರು. “ಕಿರಿಕ ಪಾರ್ಟಿ”, “ಅವನೇ ಶ್ರೀಮನ್ನಾರಾಯಣ” ಚಿತ್ರಗಳಲ್ಲಿ ಒನ್ ಲೈನ್ ಪಂಚಿಂಗ್ ಡೈಲಾಗ್‌ಗಳು ಅಭಿಜಿತ್ ಅವರ ಕೊಡುಗೆ. ಅಂತಹ ಅದ್ಭುತ ಪ್ರತಿಭೆ ಅವರು. ಆಗಿನಿಂದಲೂ ನಾನು ಅಭಿಜಿತ್ ಅವರಿಗೆ ನಿರ್ದೇಶನ ಮಾಡಲು ಹೇಳುತ್ತಿದ್ದೆ. ಈಗ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇನ್ನೂ ದಿಗಂತ್ ಹಾಗೂ ಯೋಗಿ ಇಬ್ಬರು ಅದ್ಭುತ ಕಲಾವಿದರು. ನಾನು ಅವರಿಬ್ಬರ ಚಿತ್ರಗಳನ್ನು ನೋಡಿ ಬಹಳ ಇಷ್ಟಪಟ್ಟಿದ್ದೇನೆ. ಈ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸಿದ್ದಾರೆ. ಒಟ್ಟಾರೆ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇದೇ ಜನವರಿ 26 ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕ ರಕ್ಷಿತ್ ಶೆಟ್ಟಿ.

ಲಾಕ್ ಡೌನ್ ಸಮಯದಲ್ಲಿ ಈ ಸಿನಿಮಾದ ಕಥೆ ಹುಟ್ಟಿದ್ದು ಎಂದು ಮಾತನಾಡಿದ ನಿರ್ದೇಶಕ ಅಭಿಜಿತ್ ಮಹೇಶ್, ಇದೊಂದು ಪಕ್ಕಾ ಎಂಟರ್ ಟೈನರ್ ಸಿನಿಮಾ. ಪ್ರೇಕ್ಷಕರು ಕೊಡುವ ದುಡ್ಡಿಗೆ ಖಂಡಿತ ಮೋಸ ಆಗುವುದಿಲ್ಲ. ನಿರ್ದೇಶನ ಮಾಡಲು ಅವಕಾಶ ನೀಡಿದ ರಕ್ಷಿತ್ ಶೆಟ್ಟಿ ಅವರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಎಂದರು.

ನನ್ನ ಪಾತ್ರ ರಿಷಭ್ ಶೆಟ್ಟಿ ಅವರು ಮಾಡಬೇಕಿತ್ತು. ಅವರು “ಕಾಂತಾರ”ದಲ್ಲಿ ಬ್ಯುಸಿಯಾದ ಕಾರಣ ನಾನು ಈ ಚಿತ್ರದಲ್ಲಿ ನಟಿಸಿದ್ದೇನೆ. ಪಾತ್ರ ತುಂಬಾ ಚೆನ್ನಾಗಿದೆ. ನಾನು ಹಾಗೂ ದಿಗಂತ್ ಹದಿನೈದು ವರ್ಷಗಳ ಸ್ನೇಹಿತರು. ಆದರೆ ಒಂದು ಚಿತ್ರದಲ್ಲೂ ಒಟ್ಟಿಗೆ ನಟಿಸಿರಲಿಲ್ಲ. ಈ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸಿರುವುದು ಖುಷಿಯಾಗಿದೆ ಎಂದರು ಲೂಸ್ ಮಾದ ಯೋಗಿ.

ಪರಂವಃ ಸ್ಟುಡಿಯೋಸ್‌ನಲ್ಲಿ ನನ್ನದು ಇದು ಎರಡನೇ ಚಿತ್ರ. ಯೋಗಿ ಹಾಗೂ ನಾನು ಒಟ್ಟಿಗೆ ನಟಿಸಿರುವ ಮೊದಲ ಚಿತ್ರ. ಅಭಿಜಿತ್ ಮಹೇಶ್ ಅವರ ನಿರ್ದೇಶನದಲ್ಲಿ ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. ಚಿತ್ರೀಕರಣದ ಸಮಯ ತುಂಬಾ ಸಂತಸಮಯವಾಗಿತ್ತು ಎಂದರು ದಿಗಂತ್.

ಈ ಚಿತ್ರಕ್ಕೆ ಬೆಂಗಳೂರು ಅಷ್ಟೇ ಅಲ್ಲದೆ, ಥೈಲ್ಯಾಂಡ್, ಬ್ಯಾಂಕಾಕ್‌ನಲ್ಲೂ ಹೆಚ್ಚಿನ ಚಿತ್ರೀಕರಣವಾಗಿದೆ. ನಾನು, ಯೋಗಿ ಹಾಗೂ ದಿಗಂತ್ ಅಲ್ಲಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದೆವು. ಇಬ್ಬರು ಒಳ್ಳೆಯ ನಟರು. ಅಭಿಜಿತ್ ಅವರು ಪ್ರತಿಭಾವಂತ ನಿರ್ದೇಶಕ. ಎಲ್ಲರೂ “ಬ್ಯಾಚುಲರ್ ಪಾರ್ಟಿ” ನೋಡಿ; ಪ್ರೋತ್ಸಾಹ ನೀಡಿ ಎಂದು ನಟ ಅಚ್ಯುತ ಕುಮಾರ್ ತಿಳಿಸಿದರು.

ಸಂಗೀತ ನಿರ್ದೇಶಕ ಅರ್ಜುನ್ ರಾಮ್, ಛಾಯಾಗ್ರಾಹಕ ಅರವಿಂದ್ ಕಶ್ಯಪ್, ಕಾಸ್ಟ್ಯೂಮ್ ಡಿಸೈನರ್ ಅರುಂಧತಿ ಹಾಗೂ ಪರಂವಃ ಸಂಸ್ಥೆಯ ಸಿಇಓ ಶ್ರೀನಿ ಶೆಟ್ಟಿ “ಬ್ಯಾಚುಲರ್ ಪಾರ್ಟಿ” ಚಿತ್ರದ ಕುರಿತು ಮಾತನಾಡಿದರು.

Tags: Abhijit MaheshAchyuth KumarBachelor PartyDiganthLoose Mada YogeshRakshit Shettyಅಚ್ಯುತಕುಮಾರ್ಅಭಿಜಿತ್ ಮಹೇಶ್ದಿಗಂತ್ಬ್ಯಾಚುಲರ್ ಪಾರ್ಟಿರಕ್ಷಿತ್ ಶೆಟ್ಟಿಲೂಸ್ ಮಾದ ಯೋಗಿ
Previous Post

ವಿಭಿನ್ನ ಕಥಾಹಂದರ ಹೊಂದಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರಕ್ಕೆ ಮನು ಮಡೆನೂರ್ ನಾಯಕ!

Next Post

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65ರಷ್ಟು ಸೀಟುಗಳನ್ನು ಹಂಚಿಕೆ ಮಾಡಲು ಕ್ರಮ: ಸಿದ್ದರಾಮಯ್ಯ

Next Post

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65ರಷ್ಟು ಸೀಟುಗಳನ್ನು ಹಂಚಿಕೆ ಮಾಡಲು ಕ್ರಮ: ಸಿದ್ದರಾಮಯ್ಯ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS