• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಹಳೆ ಪಿಂಚಣಿ ಯೋಜನೆ: ರಾಜ್ಯ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ! ಹೆಚ್.ಡಿ.ಕುಮಾರಸ್ವಾಮಿ

by Dynamic Leader
25/01/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ರಾಜ್ಯ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು, ಸರಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರಕಾರವು 1-4-2006ಕ್ಕೂ ಮೊದಲು ಅಧಿಸೂಚನೆಯಾಗಿ ನೇಮಕಗೊಂಡವರಿಗೆ OPS ಕೊಟ್ಟಿದೆ. ನಂತರ ಎಲ್ಲಾ ರಾಜ್ಯಗಳು ಈ ಆದೇಶ ಜಾರಿ ಮಾಡುತ್ತಿವೆ. ಕರ್ನಾಟಕದಲ್ಲೂ ಆಗಿದೆ ಅಷ್ಟೇ. ಇದರಲ್ಲಿ ಸರಕಾರದ ಘನಂದಾರಿ ಸಾಧನೆ ಏನೂ ಇಲ್ಲ ಎಂದು ಹೇಳಿದ್ದಾರೆ.

ಮೇ ತಿಂಗಳಲ್ಲಿಯೇ OPS ಜಾರಿ ಮಾಡುವ ಭರವಸೆ ನೀಡಿದ್ದರು ಸಿದ್ದರಾಮಯ್ಯ. 2023 ಮೇ 20 ರಂದು ಪ್ರಮಾಣ ಸ್ವೀಕರಿಸಿದ ಅವರು, ಸರಕಾರ ಬಂದ ಎರಡೇ ದಿನಕ್ಕೆ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದಿತ್ತು. ಅವರು ಚುನಾವಣಾ ಫಸಲು ತೆಗೆಯಲು ಹತ್ತು ತಿಂಗಳು ಹೊಂಚು ಹಾಕಿ ಕೂತರು. ಇದು ಚುನಾವಣೆ ಗಿಮಿಕ್ ಅಷ್ಟೇ, ಅನುಮಾನವೇ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಗೊಂಡ 13,000 ನೌಕರರು ಹಳೆ ಪಿಂಚಣಿ ವ್ಯಾಪ್ತಿಗೆ ಬರುತ್ತಾರೆ ಎಂದು ಈ ಆದೇಶ ಹೇಳುತ್ತದೆ. ಈ ಗ್ಯಾರಂಟಿ ಸರಕಾರಕ್ಕೆ ಈ ನಿರ್ಧಾರ ತೆಗೆದುಕೊಳ್ಳುವುದಕ್ಕೆ 10 ತಿಂಗಳೇ ಬೇಕಾಯಿತು! ಮಾತೆತ್ತಿದರೆ ಮೋದಿ ಅವರನ್ನು ನಿಂದಿಸುವ ಸಿದ್ದರಾಮಯ್ಯ ಅವರದ್ದು ಕೆಲಸದಲ್ಲಿ ಆಮೆವೇಗ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಹೇಳಿದ್ದಾರೆ.

ಎರಡು ನಾಲಿಗೆಯ ಕಾಂಗ್ರೆಸ್ ನವರು ನುಡಿದಂತೆ ನಡೆದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಾರೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎಷ್ಟು ನೌಕರರಿಗೆ OPS ನೀಡುವುದಾಗಿ ಭರವಸೆ ನೀಡಿತ್ತು? ಆದರೆ, ಸರಕಾರದ ಆದೇಶದಿಂದ 13,000 ನೌಕರರಿಗೆ ಮಾತ್ರ OPS ಭಾಗ್ಯ ಕೊಡುತ್ತಿದೆ. ಉಳಿದವರು ಅಭಾಗ್ಯವಂತರೇ? ಹೋಗಲಿ, OPSಗೆ ಅರ್ಹ ನೌಕರರು ಎಷ್ಟಿದ್ದಾರೆ? ಸರಕಾರಕ್ಕೆ ಮಾಹಿತಿ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

ಹೇಳುವುದು ಒಂದು, ಮಾಡುವುದು ಇನ್ನೊಂದು ಎನ್ನುವ ತನ್ನ ಪರಂಪರಾಗತ ವರ್ತನೆಯನ್ನು ಕಾಂಗ್ರೆಸ್ ಇನ್ನಾದರೂ ಬದಲಿಸಿಕೊಳ್ಳಬೇಕು. ಪ್ರಣಾಳಿಕೆ ಮತ್ತು ಬಜೆಟ್ ನಲ್ಲಿ ಭರವಸೆ ನೀಡಿದಂತೆ ಸರಕಾರಿ ನೌಕರರಿಗೆ OPS ಕೊಡಲೇಬೇಕು. ಅದನ್ನು ಬಿಟ್ಟು ನೌಕರರ ಕಣ್ಣಿಗೆ ಮಣ್ಣೆರಚುವುದು ಸರಿಯಲ್ಲ. ನೌಕರರ ಬದುಕನ್ನು ಚುನಾವಣೆ ಸರಕನ್ನಾಗಿ ಮಾಡಿಕೊಳ್ಳುವುದು ಹೇಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: H.D.KumaraswamyOld Pension SchemeOPSSiddaramaiahಸಿದ್ದರಾಮಯ್ಯಹಳೆ ಪಿಂಚಣಿ ಯೋಜನೆಹೆಚ್.ಡಿ.ಕುಮಾರಸ್ವಾಮಿ
Previous Post

ಮತದಾನ ಹಕ್ಕು ಮತ್ತು ಮೀಸಲಾತಿ ಇವೆರಡೂ ನಮ್ಮ ಕಣ್ಣುಗಳಿದ್ದಂತೆ; ಅದನ್ನು ಯಾವತ್ತೂ ಕಳೆದುಕೊಳ್ಳಬಾರದು: ಡಿ.ಸಿ.ಪ್ರಕಾಶ್

Next Post

ಜಗದೀಶ್ ಶೆಟ್ಟರ್ ಆತ್ಮಗೌರವ ಕಳೆದುಕೊಂಡು BJPಗೆ ಮರಳಿ ಹೋಗುವ ದುಸ್ಥಿತಿ ಬರಬಾರದಿತ್ತು: ದಿನೇಶ್ ಗುಂಡೂರಾವ್

Next Post

ಜಗದೀಶ್ ಶೆಟ್ಟರ್ ಆತ್ಮಗೌರವ ಕಳೆದುಕೊಂಡು BJPಗೆ ಮರಳಿ ಹೋಗುವ ದುಸ್ಥಿತಿ ಬರಬಾರದಿತ್ತು: ದಿನೇಶ್ ಗುಂಡೂರಾವ್

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS