• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಕ್ರೀಡೆ

ದುಬೈನ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಸಿಸಿಎಲ್ ವೈಭವ: ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗಿ? ಫುಲ್ ಡಿಟೇಲ್ಸ್

by Dynamic Leader
03/02/2024
in ಕ್ರೀಡೆ, ಸಿನಿಮಾ
0
0
SHARES
0
VIEWS
Share on FacebookShare on Twitter

• ಅರುಣ್ ಜಿ

ಸಿಸಿಎಲ್‌ಗೆ ಕಿಕ್ ಸ್ಟಾರ್ಟ್… ದುಬೈನಲ್ಲಿ ಪ್ರೋಮೋ ರಿಲೀಸ್.. ಯಾವೆಲ್ಲಾ  ಸೂಪರ್ ಸ್ಟಾರ್ಸ್ ಭಾಗಿ..?

ದುಬೈ ನೆಲದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ಗೆ ಚಾಲನೆ… ಸಿಸಿಎಲ್ ಪಂದ್ಯಾವಳಿ ಯಾವಾಗಿಂದ ಶುರು? ಎಷ್ಟು ತಂಡಗಳು? ಎಲ್ಲಿ ಪಂದ್ಯ? ಇಲ್ಲಿದೆ ಕಂಪ್ಲೀಟ್ ವಿವರ

ಫೆಬ್ರವರಿ 23 ರಿಂದ ಶುರುವಾಗ್ತಿದೆ ಸಿಸಿಎಲ್-10; ದುಬೈನಲ್ಲಿ ಪ್ರೋಮೋ‌ ರಿಲೀಸ್!

ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ಗೆ ದಿನಗಣನೆ ಆರಂಭವಾಗಿದ್ದು, ದೇಶದ ಸ್ಟಾರ್ ನಟರು ಇದೇ ಫೆಬ್ರವರಿ 23 ರಿಂದ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ.

ಅದರ ಭಾಗವಾಗಿ ನಿನ್ನೆ (feb.2) ದುಬೈನಲ್ಲಿ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಸಿಸಿಎಲ್‌ಗೆ ಚಾಲನೆ ನೀಡಲಾಗಿದೆ. ಬುರ್ಜ್ ಖಲೀಫಾದಲ್ಲಿ ಕಟ್ಟಡದ ಮೇಲೆ ಸಿಸಿಎಲ್ ಪ್ರೋಮೋ ಝಲಕ್ ಪ್ರದರ್ಶಿಸಲಾಯಿತು. ಈ ದೃಶ್ಯವನ್ನು ಕಣ್ತುಂಬಿಕೊಂಡ ಸ್ಟಾರ್ಸ್ ರೋಮಾಂಚನಗೊಂಡರು.

ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡದಿಂದ  ಕಿಚ್ಚ ಸುದೀಪ್, ಹಿಂದಿಯಿಂದ ಸೊಹೈಲ್ ಖಾನ್, ತಮಿಳು ಚಿತ್ರರಂಗದಿಂದ ಆರ್ಯ ಮತ್ತು ಜೀವಾ, ತೆಲುಗಿನಿಂದ ತಮನ್ ಮತ್ತು ಸುಧೀರ್ ಬಾಬು, ಬಂಗಾಳಿಯಿಂದ ಜಿಸ್ಸು ಸೇನ್‌ ಗುಪ್ತಾ, ಪಂಜಾಬಿಯಿಂದ ಬುನ್ನು ಧಿಲ್ಲೋನ್ ಮತ್ತು ಸೋನು ಸೂದ್, ಮಲಯಾಳಂನಿಂದ ಇಂದ್ರಜಿತ್ ಸುಕುಮಾರನ್ ಮತ್ತು ಉನ್ನಿ ಮುಕುಂದನ್ ಸೇರಿದಂತೆ CCL ನ ಎಲ್ಲಾ 8 ತಂಡಗಳ ನಾಯಕರು ಹಾಗೂ ಸೂಪರ್ ಸ್ಟಾರ್ಸ್ ಭಾಗಿಯಾಗಿದ್ದರು.

ಸಿಸಿಎಲ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆಗಿರುವ ವಿಷ್ಣುವರ್ಧನ್ ಇಂದೂರಿ ಮಾತನಾಡಿ, “ಸಿಸಿಎಲ್ ಮನರಂಜನಾತ್ಮಕ ಕ್ರೀಡೆಯಾಗಿದ್ದು, ಎಲ್ಲಾ ಸ್ಟಾರ್ ಅವರ ಬ್ಯುಸಿ ಶೆಡ್ಯುಲ್ಡ್ ನಡುವೆ ಕ್ರಿಕೆಟ್ ನಲ್ಲಿ ಭಾಗಿಯಾಗಿಯಾಗುತ್ತಾರೆ” ಎಂದರು.

ಕಿಚ್ಚ ಸುದೀಪ್ ಮಾತಾನಾಡಿ, “ನಾನು ಈ ಹಿಂದೆ ಸಿನಿಮಾಗಾಗಿ ಬುರ್ಜ್ ಖಲೀಫ್‌ದಲ್ಲಿದ್ದೆ. ಆದರೆ ಈಗ ಕ್ರಿಕೆಟ್‌ಗಾಗಿ ಇಲ್ಲಿರುವುದು ವಿಶೇಷ ಹಾಗೂ ಮರೆಯಲಾಗದ ಸಂಗತಿ ಎಂದರು.

ಫೆಬ್ರವರಿ 23 ರಿಂದ ಆರಂಭವಾಗುವ ಸಿಸಿಎಲ್‌ನ 10ನೇ ಸೀಸನ್ ಮಾರ್ಚ್ 17 ರವರೆಗೆ ನಡೆಯಲ್ಲಿದೆ. ಲೀಗ್ ಸುತ್ತು ಮಾರ್ಚ್ 10 ರವರೆಗೆ ನಡೆಯಲಿದ್ದು, ಈ ಸುತ್ತಿನಲ್ಲಿ 16 ಪಂದ್ಯಗಳು ನಡೆಯಲಿವೆ. ಆ ಬಳಿಕ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಯುನೈಟೆಡ್ ಅರಬ್ ಎಮಿರೇಟ್ಸ್ (United Arab Emirates) ಶಾರ್ಜಾದಲ್ಲಿ ನಡೆಯಲ್ಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಹೀರೋಸ್ ಮತ್ತು ಕೇರಳ ಸ್ಟ್ರೈಕರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಭಾರತದ ಜನಪ್ರಿಯ ಒಟಿಟಿ ವೇದಿಕೆಯಾಗಿರುವ ಜಿಯೊಸಿನಿಮಾ, ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಜೊತೆಗೆ ಸಹಭಾಗಿತ್ವವನ್ನು ಘೋಷಿಸಿದೆ. ಇದರ ಭಾಗವಾಗಿ, ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ ಹತ್ತನೇ ಸೀಸನ್ ಅನ್ನು ಜಿಯೊಸಿನಿಮಾ ಎಕ್ಸ್ ಕ್ಲೂಸಿವ್ ಆಗಿ ನೇರಪ್ರಸಾರ ಮಾಡಲಿದೆ. ಕ್ರೀಡೆ ಮತ್ತು ಮನರಂಜನೆಗಳನ್ನು ಒಂದುಗೂಡಿಸಿ ಭಾರತದಲ್ಲಿ ರೂಪಿಸಿರುವ ಏಕಮಾತ್ರ ಪ್ರಯತ್ನ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಇದಾಗಿದೆ.

ಭಾರತದ ಎಂಟು ಚಲನಚಿತ್ರೋದ್ಯಮಗಳ ಸೂಪರ್ಸ್ಟಾರ್ಗಳನ್ನು ಒಳಗೊಂಡಿರುವ ಒಟ್ಟು ಎಂಟು ತಂಡಗಳು ಯುಎಇ ಸೇರಿದಂತೆ ಭಾರತದ ಐದು ಸ್ಥಳಗಳಲ್ಲಿ 24 ದಿನಗಳ ಕಾಲ ಕ್ರಿಕೆಟ್ ಅಂಗಳದಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಮೇಲೆ ಹೇಳಿದಂತೆ ಯುಎಇಯ ಶಾರ್ಜಾದಲ್ಲಿ ಲೀಗ್ನ ಮೂರು ಪಂದ್ಯಗಳು ನಡೆಯಲ್ಲಿದ್ದು, ಆ ನಂತರ ಲೀಗ್ ಭಾರತಕ್ಕೆ ಕಾಲಿಡಲಿದೆ. ಭಾರತದ ಐದು ನಗರಗಳಾದ ಹೈದರಾಬಾದ್, ಬೆಂಗಳೂರು, ಚಂಡೀಗಢ, ತಿರುವನಂತಪುರ ಮತ್ತು ವೈಜಾಗ್ನಲ್ಲಿ ಉಳಿದ ಪಂದ್ಯಗಳು ನಡೆಯಲ್ಲಿವೆ. ವಾರಾಂತ್ಯದಲ್ಲಿ ಅಂದರೆ ಶನಿವಾರ ಹಾಗೂ ಭಾನುವಾರ ಡಬಲ್ ಹೆಡರ್ ಪಂದ್ಯಗಳಿರಲಿವೆ. ಅಂದರೆ ದಿನಕ್ಕೆ ಎರಡು ಪಂದ್ಯಗಳು ನಡೆಯಲ್ಲಿವೆ.

ತಂಡಗಳು ಯಾವುವು?

  • ಮುಂಬೈ ಹೀರೋಸ್
  • ಕೇರಳ ಸ್ಟ್ರೈಕರ್ಸ್
  • ತೆಲುಗು ವಾರಿಯರ್ಸ್
  • ಭೋಜ್ಪುರಿ ದಬಾಂಗ್ಸ್
  • ಕರ್ನಾಟಕ ಬುಲ್ಡೋಜರ್ಸ್
  • ಬೆಂಗಾಲ್ ಟೈಗರ್ಸ್
  • ಚೆನ್ನೈ ರೈನೋಸ್
  • ಪಂಜಾಬ್ ದಿ ಶೇರ್

‘ಮುಂಬೈ ಹೀರೋಸ್’ ತಂಡಕ್ಕೆ ನಟ ಸಲ್ಮಾನ್ ಖಾನ್ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದು, ರಿತೇಶ್ ದೇಶಮುಖ್ ಕ್ಯಾಪ್ಟನ್ ಆಗಿದ್ದಾರೆ. ಸೋಹೈಲ್ ಖಾನ್ ಅವರು ಈ ತಂಡದ ಮಾಲೀಕ. ‘ತೆಲುಗು ವಾರಿಯರ್ಸ್’ ಟೀಮ್ಗೆ ವೆಂಕಟೇಶ್ ಅವರು ಬ್ರ್ಯಾಂಡ್ ಅಂಬಾಸಿಡರ್. ಆ ತಂಡಕ್ಕೆ ಅಖಿಲ್ ಅಕ್ಕಿನೇನಿ ನಾಯಕನಾಗಿದ್ದಾರೆ. ‘ಕರ್ನಾಟಕ ಬುಲ್ಡೋಜರ್ಸ್’ ಟೀಮ್ಗೆ ಕಿಚ್ಚ ಸುದೀಪ್ ಕ್ಯಾಪ್ಟನ್ ಆಗಿದ್ದಾರೆ. ಮೋಹನ್‌ಲಾಲ್ ಸಹ-ಮಾಲೀಕರಾಗಿರುವ ‘ಕೇರಳ ಸ್ಟ್ರೈಕರ್ಸ್’ ತಂಡವನ್ನು ಕ್ಯಾಪ್ಟನ್ ಇಂದ್ರಜಿತ್ ಮುನ್ನಡೆಸಲಿದ್ದಾರೆ. ‘ಭೋಜಪುರಿ ದಬಾಂಗ್ಸ್’ ಟೀಮ್ಗೆ ಮನೋಜ್ ತಿವಾರಿ ನಾಯಕ. ಸೋನು ಸೂದ್ ಅವರು ‘ಪಂಜಾಬ್ ದೆ ಶೇರ್’ ತಂಡಕ್ಕೆ ನಾಯಕರಾಗಿದ್ದಾರೆ. ಬೋನಿ ಕಪೂರ್ ಒಡೆತನದ ‘ಬೆಂಗಾಲ್ ಟೈಗರ್ಸ್’ ಟೀಮ್ಗೆ ಜಿಸ್ಸು ಸೇನ್ಗುಪ್ತ ಕ್ಯಾಪ್ಟನ್ ಆಗಿದ್ದಾರೆ.

Tags: CCLCCL-10Celebrity Cricket LeagueKarnataka BulldozersKiccha Sudeepಕರ್ನಾಟಕ ಬುಲ್ಡೋಜರ್ಸ್ಕಿಚ್ಚ ಸುದೀಪ್ಸಿಸಿಎಲ್ಸಿಸಿಎಲ್-10ಸೆಲೆಬ್ರಿಟಿ ಕ್ರಿಕೆಟ್ ಲೀಗ್
Previous Post

17ನೇ ಶತಮಾನದ ಚಿತ್ರಕಲೆಯಿಂದ ಅಧಿಕಾರ ಕಳೆದುಕೊಂಡ ಇಟಲಿ ಸಚಿವ ವಿಟ್ಟೋರಿಯೊ ಸ್ಗಾರ್ಬಿ!

Next Post

ಇಸ್ಲಾಮಿಕ್ ಪದ್ಧತಿ ವಿರುದ್ಧ ಮದುವೆ: ಇಮ್ರಾನ್ ಖಾನ್ ಮತ್ತು ಪತ್ನಿ ಬುಶ್ರಾ ಬೀಬಿಗೆ 7 ವರ್ಷಗಳ ಜೈಲು ಶಿಕ್ಷೆ!

Dynamic Leader

Next Post

ಇಸ್ಲಾಮಿಕ್ ಪದ್ಧತಿ ವಿರುದ್ಧ ಮದುವೆ: ಇಮ್ರಾನ್ ಖಾನ್ ಮತ್ತು ಪತ್ನಿ ಬುಶ್ರಾ ಬೀಬಿಗೆ 7 ವರ್ಷಗಳ ಜೈಲು ಶಿಕ್ಷೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS