• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಜನಸ್ಪಂದನ ಕಾರ್ಯಕ್ರಮ-2: ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಮೂರು ತಿಂಗಳೊಳಗೆ ವಿಲೇವಾರಿ ಮಾಡಲಾಗುವುದು!

by Dynamic Leader
08/02/2024
in ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಸಾವಿರಾರು ಸಂಖ್ಯೆಯಲ್ಲಿ ಜನರು ತಮ್ಮ ಅಹವಾಲುಗಳನ್ನು ಹೊತ್ತು ಜನಸ್ಪಂದನಕ್ಕೆ ಆಗಮಿಸಿದ್ದಾರೆ. ಇಂದು ಇಡೀ ದಿನ ಇವರೆಲ್ಲರ ಸಮಸ್ಯೆಗಳಿಗೆ ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯೊಳಗೆ ಪರಿಹಾರ ಒದಗಿಸುವ ಮೂಲಕ ಕಣ್ಣೀರು ಒರೆಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಹೇಳಿದರು.

ಕಳೆದ ಬಾರಿಯ ಜನಸ್ಪಂದನದ ಅಭೂತಪೂರ್ವ ಯಶಸ್ಸು ಈ ಬಾರಿ ನಿರೀಕ್ಷೆಗೂ ಮೀರಿದಷ್ಟು ಜನರನ್ನು ಕರೆತಂದಿದೆ. ಎಲ್ಲರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುತ್ತೇವೆ, ಆಗಮಿಸಿರುವ ಬಂಧುಗಳು ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದೆ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ.98ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ. ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ಹೇಳಿದರು.

ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ಹೇಳಿದರು.

ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ‘ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ’ ಎಂದಿದ್ದರು. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ, ಅಸಮಾನತೆ ನಿವಾರಿಸುವ ಕಾರ್ಯಕ್ರಮ ಎಂದು ವಿರೋಧ ಪಕ್ಷಗಳನ್ನು ಕುಟುಕಿದರು.

ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು, ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ-ಬದಲಾವಣೆ ತರಲು ಜನಸ್ಪಂದನ ಅಗತ್ಯವಾಗಿದೆ ಎಂದು ಹೇಳಿದರು.

Tags: JanaspandanaJanaspandana-2Karnataka GovernmentSiddaramaiahVidhana Soudhaಕರ್ನಾಟಕ ಸರ್ಕಾರಜನಸ್ಪಂದನಜನಸ್ಪಂದನ-2ವಿಧಾನಸೌಧಸಿದ್ದರಾಮಯ್ಯ
Previous Post

10 ವರ್ಷಗಳ ಬಿಜೆಪಿ ಆಡಳಿತದ ಬಗ್ಗೆ “ಕಪ್ಪು ಪತ್ರ” ಹೊರಡಿಸಲು ಕಾಂಗ್ರೆಸ್ ನಿರ್ಧಾರ!

Next Post

ರಾಯಚೂರಿನಲ್ಲಿ ಪ್ರತಿಷ್ಠಿತ ಏಮ್ಸ್ (AIIMS ) ಸಂಸ್ಥೆಯನ್ನು ಸ್ಥಾಪಿಸುವ ಕುರಿತು ಕೇಂದ್ರ ಸಚಿವರಿಗೆ ಎರಡನೇ ಬಾರಿ ಮನವಿ!

Next Post

ರಾಯಚೂರಿನಲ್ಲಿ ಪ್ರತಿಷ್ಠಿತ ಏಮ್ಸ್ (AIIMS ) ಸಂಸ್ಥೆಯನ್ನು ಸ್ಥಾಪಿಸುವ ಕುರಿತು ಕೇಂದ್ರ ಸಚಿವರಿಗೆ ಎರಡನೇ ಬಾರಿ ಮನವಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS