• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

‘ಪ್ರೊಡಕ್ಷನ್ ನಂ 4’ ಬಿ.ಎಂ ಗಿರಿರಾಜ್ ನಿರ್ದೇಶನದ ನೂತನ ಚಿತ್ರಕ್ಕೆ ಬಿ.ಜೆ.ಭರತ್ ಸಾರಥ್ಯದಲ್ಲಿ ಹಾಡುಗಳ ಧ್ವನಿಮುದ್ರಣ ಆರಂಭ!

by Dynamic Leader
20/02/2024
in ಸಿನಿಮಾ
0
0
SHARES
0
VIEWS
Share on FacebookShare on Twitter

ಆರುಣ್ ಕುಮಾರ್ ಜಿ

ಬೆಂಗಳೂರು: ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ‘ಜಿ ಸಿನಿಮಾಸ್’ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ ‘ಪ್ರೊಡಕ್ಷನ್ ನಂ 4’ ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಪೂಜೆ ನಾಗರಭಾವಿಯ ಲೂಪ್ ಸ್ಟುಡಿಯೋಸ್ ನಲ್ಲಿ ನೆರವೇರಿತು. ‘ಜಟ್ಟ’, ‘ಮೈತ್ರಿ’ ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌ ಕನ್ನಡದ ಹೆಸರಾಂತ ನಿರ್ದೇಶಕ ಬಿ.ಜೆ.ಭರತ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

ಹಿಂದೆ ಸಾಂಗ್ ರೆಕಾರ್ಡಿಂಗ್ ಪೂಜೆ ಎಂದರೆ ಒಂದು ಸಡಗರ ಎಂದು ಮಾತು ಆರಂಭಿಸಿದ ನಿರ್ದೇಶಕ ಗಿರಿರಾಜ್, ಈಗ ಕೆಲವು ವರ್ಷಗಳಿಂದ ಆ ಸಂಸ್ಕೃತಿ ಮರೆತು ಹೋಗಿದೆ. ಗುರು ದೇಶಪಾಂಡೆ ಮತ್ತೆ ಸಾಂಗ್ ರೆಕಾರ್ಡಿಂಗ್ ಪೂಜೆ ಮೂಲಕ ತಮ್ಮ ನೂತನ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಇಂದು ಒಳ್ಳೆಯ ದಿವಸ ಎಂದು ಪೂಜೆ ಆರಂಭಿಸಿದ್ದೇವೆ. ಈ ಸಿನಿಮಾ ಈ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿರುತ್ತದೆ. ಮರೆಯಾಗುತ್ತಿರುವ ಸಂಸ್ಕೃತಿಯ ಮತ್ತೆ ತರುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡುತ್ತಿದ್ದೇವೆ. ಭರತ್ ಅವರ ಸಂಗೀತ ನಿರ್ದೇಶನದಲ್ಲಿ ಇಂದಿನಿಂದ ಸಾಂಗ್ ರೆಕಾರ್ಡಿಂಗ್ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದರು.

ಇದು ‘ಜಿ ಸಿನಿಮಾಸ್’ ಮೂಲಕ ನಿರ್ಮಾಣವಾಗುತ್ತಿರುವ ನಾಲ್ಕನೇಯ ಚಿತ್ರ. ನಮ್ಮ ‘ಜಿ ಅಕಾಡೆಮಿ’ ಮೂಲಕ ಸಾಕಷ್ಟು ಮಕ್ಕಳಿಗೆ ನಟನಾ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಹತ್ತು ಬ್ಯಾಚ್ ಗಳು ಯಶಸ್ವಿಯಾಗಿ ಪೂರ್ಣವಾಗಿದೆ. ಮಕ್ಕಳಿಗೆ ಬರೀ ನಟನೆ ಕಲಿಸಿಕೊಟ್ಟು ಕಳುಹಿಸಿದರೆ ಸಾಲದು. ಅವರಿಗೆ ಸೂಕ್ತ ವೇದಿಕೆ ಕೂಡ ಕಲ್ಪಿಸಿಕೊಡಬೇಕು. ಅದರಲ್ಲೂ ವಿಶೇಷವಾಗಿ ಮಧ್ಯಮವರ್ಗದ ಮಕ್ಕಳಿಗೆ. ಆ ಸಲುವಾಗಿ ನಮ್ಮ ಈ ಚಿತ್ರದಲ್ಲಿ ನಮ್ಮ ‘ಜಿ ಅಕಾಡೆಮಿ’ಯ 15ಕ್ಕೂ ಅಧಿಕ ಮಕ್ಕಳು ನಟಿಸಲಿದ್ದಾರೆ.

ಕನ್ನಡದ ಹೆಸರಾಂತ ನಟರು ಈ ಚಿತ್ರದ ನಾಯಕರಾಗಿ ಅಭಿನಯಿಸಲಿದ್ದಾರೆ. ಈ ಕುರಿತು ಹೆಚ್ಚಿನ ವಿಷಯಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುತ್ತೇವೆ. ಕನ್ನಡದಲ್ಲಿ ಕಮರ್ಷಿಯಲ್ ಹಾಗೂ ಪ್ರಶಸ್ತಿ ಚಿತ್ರಗಳು ಎಂಬ ಎರಡು ವಿಭಾಗಗಳಿದೆ. ಬೇರೆ ಕಡೆ ಆ ರೀತಿ ಇಲ್ಲ. ಒಳ್ಳೆಯ ಕಂಟೆಂಟ್ ಇರುವ ಚಿತ್ರಗಳನ್ನು ಜನರು ನೋಡುತ್ತಾರೆ. ಆಗ ಅದು ಎರಡು ವಿಭಾಗಗಳನ್ನೊಳಗೊಂಡ ಒಂದೇ ಚಿತ್ರವಾಗುತ್ತದೆ. ನಮ್ಮ ಚಿತ್ರ ಕೂಡ ಅದೇ ರೀತಿ ಇರಲಿದೆ ಎಂದು ನಿರ್ಮಾಪಕ ಗುರು ದೇಶಪಾಂಡೆ ತಿಳಿಸಿದರು.

ಇಂದಿನಿಂದ ಹಾಡುಗಳ ಧ್ವನಿಮುದ್ರಣ ಆರಂಭವಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದೆ ಎಂದರು ಸಂಗೀತ ನಿರ್ದೇಶಕ ಬಿ.ಜೆ.ಭರತ್. ಗೀತರಚನೆಕಾರ ಪುನೀತ್ ಆರ್ಯ ಹಾಗೂ ವಿತರಕ ವೆಂಕಟ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: Production No 4ಗುರು ದೇಶಪಾಂಡೆಧ್ವನಿಮುದ್ರಣಪ್ರೊಡಕ್ಷನ್ ನಂ 4ಬಿ.ಜೆ.ಭರತ್ಲೂಪ್ ಸ್ಟುಡಿಯೋಸ್
Previous Post

ಫೆಬ್ರವರಿ 23 ರಂದು ತೆರೆಗೆ ಬರಲಿದೆ “ಕಪ್ಪು ಬಿಳುಪಿನ ನಡುವೆ” ಹಾರಾರ್ ಚಿತ್ರ!

Next Post

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಯಿಂದ ಹೇಳಿಕೆ ಪಡೆಯುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ನ್ಯಾಯಾಧೀಶ!

Next Post

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಯಿಂದ ಹೇಳಿಕೆ ಪಡೆಯುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ನ್ಯಾಯಾಧೀಶ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS