• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

Karnataka Muslim Unity: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ! – ಖಾಸಿಂ ಸಾಬ್

by Dynamic Leader
19/04/2024
in ರಾಜ್ಯ
0
Karnataka Muslim Unity: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ! – ಖಾಸಿಂ ಸಾಬ್
0
SHARES
0
VIEWS
Share on FacebookShare on Twitter

ಬೆಂಗಳೂರು: ಹುಬ್ಬಳ್ಳಿಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಫಯಾಜ್‌ ಎಂಬ ಯುವಕ ನೇಹಾ ಎಂಬ ಯುವತಿಯನ್ನು ತಾನು ಓದುತ್ತಿರುವ ಕಾಲೇಜಿನ ಆವರಣದಲ್ಲಿಯೆ ಇರಿದು ಕೊಂದಿದ್ದಾನೆ. ಇಬ್ಬರೂ ಪರಿಚಿತರಿದ್ದರೂ ಹುಡುಗಿ ಮದುವೆಗೆ ಒಪ್ಪಲಿಲ್ಲ ಎಂಬುದೇ ಕೊಲೆಗೆ ಕಾರಣ ಎನ್ನಲಾಗಿದೆ ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್ ಹೇಳಿದ್ದಾರೆ.   

ಆರೋಪಿ ಹುಡುಗ ಬಂಧನವಾಗಿ ಕಾನೂನುಪ್ರಕ್ರಿಯೆ ನಡೆಯುತ್ತಿದೆ. ಈ ಕರುಳು ಕಲಕುವ ಘಟನೆ ಖಂಡನೀಯ. ಈ ಹೆಣ್ಣುಮಗಳ ಬದುಕಿನ ಈ ರೀತಿಯ ಅಂತ್ಯಕ್ಕೆ ಕಾರಣವಾದ ಆರೋಪಿಯ ಮೇಲೆ ಸೂಕ್ತ ಹಾಗೂ ಶೀಘ್ರ ಕಾನೂನು ರೀತಿಯ ಕ್ರಮಜರುಗಿಸಲು ಪೊಲೀಸ್ ಇಲಾಖೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕೊಲೆ ಆರೊಪಿಯನ್ನು ಒಂದು ಘಂಟೆಯೊಳಗೆ ಬಂಧಿಸಿದ ಹುಬ್ಬಳ್ಳಿ ಪೊಲೀಸರ ಕಾರ್ಯ ಶ್ಲಾಘನಿಯ ಎಂದು ಹೇಳಿರುವ ಖಾಸಿಂ ಸಾಬ್, ಇತ್ತೀಚೆಗೆ ಪುತ್ತೂರಿನ ಜಯಶ್ರೀ ಎಂಬ ಯುವತಿ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಉಮೇಶ್ ಎಂಬ ಯುವಕ ಈ ಹುಡುಗಿಯನ್ನು ಹತ್ಯೆ ಮಾಡಿದ್ದ. ಇಂತಹ ನೂರಾರು ಪ್ರೀತಿ ಪ್ರೇಮಗಳ ನೆಪಗಳ ಸುತ್ತ ಹತ್ಯೆಗಳು, ಆಸಿಡ್ ದಾಳಿಗಳು ನಮ್ಮ ನಡುವೆ ನಡೆಯುತ್ತಲೇ ಇವೆ.

ಈ ಕೃತ್ಯಗಳು ಅಮಾನವೀಯ ಹಾಗೂ ಶಿಕ್ಷಾರ್ಹ. ಇಂತಹ ಘಟನೆಗಳಿಗೆ ಕೋಮು ಧರ್ಮಗಳ ಬಣ್ಣ ಬಳಿಯುವ ನೀಚ ರಾಜಕೀಯ ಮಾಡದಿರಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸುತ್ತ, ಕೆಲವು ರಾಜಕೀಯ ಮುಖಂಡರು ಈ ಘಟನೆಯನ್ನು ಧರ್ಮ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವುದು ಬೇಸರದ ಸಂಗತಿ ಎಂದು ವಿಷಾದ ವ್ಯಕ್ತ ಪಡಿಸಿದ್ದಾರೆ

ಆರೋಪಿಯ ಜಾತಿ, ಧರ್ಮ, ವರ್ಗ, ಹೆಸರನ್ನು ನೋಡಿ ಅಪರಾಧವನ್ನು ಆತನ ಇಡೀ ಸಮುದಾಯದ ತಲೆಗೆ ಕಟ್ಟಿ, ಸಮಾಜದಲ್ಲಿ ಹಿಂದು ಮುಸ್ಲಿಮರ ಮಧ್ಯೆ ಭಯ ಮತ್ತು ಸಂಶಯವನ್ನುಂಟು ಮಾಡಿ ಈ ಚುನಾವಣಾ ಸಂಧರ್ಭದಲ್ಲಿ ರಾಜಕೀಯಲಾಭ ಮಾಡಿಕೊಳ್ಳಲು ಹೊರಟಿರುವ ರಾಜಕಾರಣಿಗಳ ನೀಚನಡೆ ಖಂಡನೀಯ ಎಂದು ಹೇಳಿದ್ದಾರೆ.

ನೇಹಾ ಹಂತಕ ಫಯಾಜ್ ಬೆಳಗಾವಿ ಜಿಲ್ಲೆ ಮುನವಳ್ಳಿಯವನಾಗಿದ್ದು, ಅಲ್ಲಿ ಹಿಂದೂ-ಮುಸ್ಲಿಮರು ಜಂಟಿಯಾಗಿ ಈ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸಂಕೇಶ್ವರ-ಸವದತ್ತಿ ಹೆದ್ದಾರಿಯಲ್ಲಿ ಮುಸ್ಲಿಂ ಸಮುದಾಯದ ನೂರಾರು ಮಂದಿ ನೇಹಾ ಫೊಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಈ ಅಮಾನವಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೆ ಇಂತಹ ಅಮಾನವೀಯ ನೇಹಾ ಹತ್ಯೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ  ತೀವ್ರವಾಗಿ ಖಂಡಿಸುತ್ತದೆ. ಜೊತೆಗೆ ಅಳ್ನಾವರ, ಕುಂದಗೋಳ, ಕಲಘಟಗಿ, ಹುಬ್ಬಳ್ಳಿ ಹಾಗೂ ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷರುಗಳು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾರೇ ಕಾನೂನು ಕೈಗೆತ್ತಿಕೊಂಡರೂ ಖಂಡಿಸುತ್ತೇವೆ. ಪೊಲೀಸರ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಬೆಂಗಳೂರಿನಲ್ಲಿ ನೀಡಿರುವ ಹೇಳಿಕೆ ಸ್ವಾಗತಾರ್ಹ ಎಂದು ಸರ್ಕಾರದ ನಡೆಯನ್ನು ಸ್ವಾಗತಿಸಿದ್ದಾರೆ.  

ಅಪರಾದಿಗೆ ಸೂಕ್ತ ಹಾಗೂ ಶೀಘ್ರ ಕಾನೂನು ಶಿಕ್ಷೆ ಆಗಬೇಕು ವೆಂಬುದು ನಮ್ಮ ಬೇಡಿಕೆ. ನೇಹಾ ಸಾವಿನ ದುಃಖ ಭರಿಸು ಶಕ್ತಿ ಆ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ಪ್ರಾರ್ಥನೆಯಾಗಿದೆ ಎಂದು ಕರ್ನಾಟಕ ಖಾಸಿಂ ಸಾಬ್ ಹೇಳಿದ್ದಾರೆ.  

Tags: Karnataka Muslim UnityKMUNehaNeha HiremathNeha Murder Caseಕರ್ನಾಟಕ ಮುಸ್ಲಿಂ ಯುನಿಟಿನೇಹಾನೇಹಾ ಕೊಲೆ ಪ್ರಕರಣನೇಹಾ ಹೀರೇಮಠ
Previous Post

Manipur: ಮಣಿಪುರದ ಮೊಯಿರಾಂಗ್‌ನ ಥಮನ್‌ಪೋಕ್ಪಿ ಮತಗಟ್ಟೆಯಲ್ಲಿ ಗುಂಡಿನ ದಾಳಿ!

Next Post

Israel Palestine War: 2024ರ ವಿಶ್ವದ ಅತ್ಯುತ್ತಮ ಮಾಧ್ಯಮ ಫೋಟೋ: ಮನ ಮುಟ್ಟುವ ಚಿತ್ರ!

Dynamic Leader

Next Post
Israel Palestine War: 2024ರ ವಿಶ್ವದ ಅತ್ಯುತ್ತಮ ಮಾಧ್ಯಮ ಫೋಟೋ: ಮನ ಮುಟ್ಟುವ ಚಿತ್ರ!

Israel Palestine War: 2024ರ ವಿಶ್ವದ ಅತ್ಯುತ್ತಮ ಮಾಧ್ಯಮ ಫೋಟೋ: ಮನ ಮುಟ್ಟುವ ಚಿತ್ರ!

Stay Connected test

  • 23.9k Followers
  • 99 Subscribers
  • Trending
  • Comments
  • Latest
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS