• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಕ್ರೈಂ ರಿಪೋರ್ಟ್ಸ್

ಯಾದಗಿರಿಯಲ್ಲಿ ದಲಿತ ಯುವಕನ ಹತ್ಯೆ: ದಲಿತ-ಮುಸ್ಲಿಂ ಬಾಂಧವ್ಯವನ್ನು ಹಾಳುಗೆಡವಲು ಸಂಚು! – ಡಿ.ಸಿ.ಪ್ರಕಾಶ್

by Dynamic Leader
22/04/2024
in ಕ್ರೈಂ ರಿಪೋರ್ಟ್ಸ್
0
0
SHARES
0
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್ ಸಂಪಾದಕರು

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಬೆನ್ನಲ್ಲೇ ಕೋಮು ಘರ್ಷಣೆ, ಹಲ್ಲೆ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಬೆಂಗಳೂರಿನಲ್ಲಿ ರಾಮನವಮಿ ದಿನದಂದು ಜೈ ಶ್ರೀರಾಂ ಘೋಷಣೇ ಕೂಗಿದ್ದವರ ಮೇಲೆ ಹಲ್ಲೆ ಮಾಡಲಾಗಿತ್ತು. ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು. ಬಳಿಕ ನೇಹಾ ಹತ್ಯೆಯಾಗಿದೆ. ಇದೀಗ ಯಾದಗಿರಿಯಲ್ಲಿ ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಹಿ ನೆನಪು ಇನ್ನೂ ಮಾಸಿಲ್ಲ. ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದೆ. ಅದುಮಾತ್ರವಲ್ಲ, ವಿಚಾರಣೆಯನ್ನು ತ್ವರಿತಗತಿಯಲ್ಲಿ ಮುಗಿಸಿ ಆರೋಪಿಗೆ ಶಿಕ್ಷೆ ಕೊಡಿಸುವ ಸಲುವಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವುದಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಷ್ಟರಲ್ಲಾಗಲೇ, ಯಾದಗಿರಿಯ ಶಗಾಪುರಪೇಟೆ ಬಡಾವಣೆಯಲ್ಲಿ ಮುಸ್ಲಿಂ ಯುವಕನೊಬ್ಬ ದಲಿತ ಯುವಕನನ್ನು ಹತ್ಯೆ ಮಾಡಿದ್ದಾನೆ. ರಾಕೇಶ್ (22) ಕೊಲೆಯಾದ ಯುವಕ. ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಸೇರಿದಂತೆ ನಾಲ್ವರು ಕೃತ್ಯ ಎಸಗಿದ್ದಾರೆ.

ನಿನ್ನೆ ರಾತ್ರಿ ರೊಟ್ಟಿ ಕೇಂದ್ರಕ್ಕೆ ರೊಟ್ಟಿ ತರಲು ರಾಕೇಶ್ ಹೋಗಿದ್ದ. ಇದೇ ವೇಳೆ ರೊಟ್ಟಿ ಕೇಂದ್ರದ ಫಯಾಜ್ ಜೊತೆ ಜಗಳವಾಗಿದೆ. ರಾಕೇಶ್ ಮನೆಗೆ ಮರಳಿದ ನಂತರ ಮತ್ತೆ ಜಗಳವಾಗಿದ್ದು, ಈ ವೇಳೆ ರಾಕೇಶ್​ನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿರುವ ಆರೋಪ ಮಾಡಲಾಗಿದೆ.

ಮೇಲಿನ ಎರಡೂ ಪ್ರಕರಣಗಳಲ್ಲಿ, ಕೊಲೆ ಮಾಡಿದವರು ಯಾರೇ ಆಗಿದ್ದರು ಕಾನೂನಿನಡಿಯಲ್ಲಿ ಶಿಕ್ಷೆ ಆಗಲಿದೆ. ಕಾನೂನಿಗೆ ಹಿಂದೂ, ಮುಸ್ಲಿಂ, ಕ್ರೈಸ್ತ, ದಲಿತ ಎಂಬ ಭೇದಭಾವ ಇರುವುದಿಲ್ಲ. ಇದರಲ್ಲಿ ಜಾತಿ, ಧರ್ಮ ಬೆರಸುವುದೇಕೆ? ಅಮಾಯಕರ ಸಾವು ನೋವುಗಳ ಮೇಲೆ ರಾಜಕೀಯ ಲೆಕ್ಕಾಚಾರ ಮಾಡುತ್ತಿರುವ ನಾಚಿಕೆಗೆಟ್ಟ ರಾಜಕೀಯ ವ್ಯವಸ್ಥೆಯನ್ನು ಬದಿಗೊತ್ತಿ ಮಾನವೀಯತೆಗೆ ಆದ್ಯತೆ ಕೊಡಿ.

ಪ್ರತಿಭಾರಿಯೂ ಹಿಂದೂ-ಮುಸ್ಲಿಂ ಎಂದು ದ್ವೇಶಕಾರುತ್ತಿರುವ ಕೋಮು ಮನಸ್ಥಿತಿಯ ಮತಾಂಧ ಶಕ್ತಿಗಳು, ಇದೀಗ ದಲಿತ-ಮುಸ್ಲಿಂ ಎಂಬ ಹೊಸ ವರೆಸೆಯನ್ನು ಕೈಗೆತ್ತಿಕೊಂಡಿದೆ. ಪ್ರತಿಯೊಂದನ್ನೂ ಹಿಂದೂ-ಮುಸ್ಲಿಂ ಹಿನ್ನಲೆಯಿಂದಲೇ ನೋಡುವ ಕಾಮಾಲೆ ಕಣ್ಣುಗಳಿಗೆ ರಾಕೇಶ್ ಹಿಂದೂ ಯುವಕ ಎಂದು ಏಕೆ ಗೊತ್ತಾಗುತ್ತಿಲ್ಲ.

ಚುನಾವಣೆ ಸಂದರ್ಭದಲ್ಲಿ ನಡೆದಿರುವ ವೈಯಕ್ತಿಕ ಕೊಲೆಗಳನ್ನು ರಾಜಕೀಯ ಗೊಳಿಸುತ್ತಿರುವ ಮತಾಂಧ ಶಕ್ತಿಗಳು, ರಾಕೇಶ್ ಕೊಲೆಯನ್ನು ದಲಿತ-ಮುಸ್ಲಿಂ ಬಾಂಧವ್ಯವನ್ನು ಹಾಳುಗೆಡವಲು ಬಳಸುತ್ತಿದೆ ಎಂದು ಅನುಮಾನ ವ್ಯಕ್ತವಾಗುತ್ತಿದೆ. ದಲಿತರು ಮತ್ತು ಅಲ್ಪಸಂಖ್ಯಾತರು ಇಂತಹ ಕುತಂತ್ರಗಳಿಗೆ ಬಲಿಯಾಗಬಾರದು. ಅದೇ ಸಂದರ್ಭದಲ್ಲಿ, ದಲಿತ ಯುವಕ ರಾಕೇಶನ ಸಾವಿಗೆ ನ್ಯಾಯ ಸಿಗಬೇಕು; ಫಯಾಜ್ ಮತ್ತು ಇತರರಿಗೆ ಶಿಕ್ಷೆ ಆಗಲೇಬೇಕು. ಇದು ನಮ್ಮ ಒತ್ತಾಯ!

Tags: Dalit MuslimDalit Youth KilledRakesh Murder CaseYadgirದಲಿತ ಹತ್ಯೆದಲಿತ-ಮುಸ್ಲಿಂಯಾದಗಿರಿರಾಕೇಶ್ ಕೊಲೆ ಪ್ರಕರಣಸಂಸತ್ ಚುನಾವಣೆ 2024
Previous Post

ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ವಂದೇ ಭಾರತ್ ರೈಲು ಮತ್ತು ವಲಸೆ ಕಾರ್ಮಿಕರ ಗೋಳು!

Next Post

ಮೋದಿಯವರ ಹೇಳಿಕೆ ಹತಾಶೆಯ ಪ್ರತೀಕ: ವೆಲ್ಫೇರ್ ಪಾರ್ಟಿ

Next Post

ಮೋದಿಯವರ ಹೇಳಿಕೆ ಹತಾಶೆಯ ಪ್ರತೀಕ: ವೆಲ್ಫೇರ್ ಪಾರ್ಟಿ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

16/09/2025

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

16/09/2025

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

16/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS