• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಇತರೆ ಸುದ್ಧಿಗಳು

ಮೋದಿ ನಾಪತ್ತೆ: ಪೋಸ್ಟರ್ ಅಂಟಿಸಿದ ಮಣಿಪುರದ ಜನ!

by Dynamic Leader
05/05/2024
in ಇತರೆ ಸುದ್ಧಿಗಳು
0
0
SHARES
1
VIEWS
Share on FacebookShare on Twitter

ಮಣಿಪುರಕ್ಕೆ ಒಮ್ಮೆಯೂ ಭೇಟಿ ನೀಡದ ಮೋದಿ, ಮಣಿಪುರ ಗಲಭೆ ಆರಂಭವಾಗಿ ಮೊನ್ನೆಗೆ (03.05.2024) ಒಂದು ವರ್ಷ ಪೂರೈಸಿದೆ.

ನಾವು ದೇಶವನ್ನು ಮುಂದೆ ಕೊಂಡೊಯ್ಯುತ್ತಿದ್ದೇವೆ, ಮಹಿಳಾ ಸಬಲೀಕರಣಕ್ಕೆ ಪ್ರಾಮುಖ್ಯತೆ ನೀಡುತ್ತಿದ್ದೇವೆ ಎಂದು ತೋರ್ಪಡಿಸಿಕೊಳ್ಳುತ್ತಿರುವ ಮೋದಿ, ವಾಸ್ತವವಾಗಿ ಅದರ ಒಂದು ಭಾಗವನ್ನೂ ಮಾಡಲಿಲ್ಲ ಎಂಬುದು ಮಣಿಪುರ ಘಟನೆ ಬಹಿರಂಗಪಡಿಸಿದೆ.

ಕಳೆದ ವರ್ಷ ಮೇ 3 ರಂದು ಪ್ರಾರಂಭವಾದ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷದಲ್ಲಿ ಇದುವರೆಗೆ 230ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 60,000ಕ್ಕೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದು ನಿರಾಶ್ರಿತರಾಗಿದ್ದಾರೆ. ಸುಮಾರು 4000 ಮನೆಗಳು ಸುಟ್ಟು ಕರಕಲಾಗಿವೆ.

ಗಲಭೆ ಆರಂಭವಾಗಿ ಒಂದು ವರ್ಷ ಕಳೆದರೂ ಇನ್ನೂ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಅದಕ್ಕೆ ಮಣಿಪುರದ ಆಡಳಿತಾರೂಢ ಬಿಜೆಪಿ ಮತ್ತು ಒಕ್ಕೂಟ ಬಿಜೆಪಿ ಸರ್ಕಾರವು ಹಲವು ರೀತಿಯಲ್ಲಿ ಕಾರಣವಾಗಿವೆ. ಮಣಿಪುರಕ್ಕೆ ಮೋದಿ ಭೇಟಿ ಮಾಡದಿರುವುದು ಕೂಡ ಕಾರಣವೆ.

ದೇಶದ ಪ್ರಧಾನಿಯಾಗಿರುವ ವ್ಯಕ್ತಿ, ದೇಶದ ಅಭಿವೃದ್ಧಿಯ ವಿಚಾರದಲ್ಲಿ ಎಷ್ಟು ಹೆಮ್ಮೆಪಡುತ್ತಾರೋ ಅದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ, ದೇಶದಲ್ಲಿ ಉಂಟಾಗಬಹುದಾದ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನಹರಿಸುವುದು ಕೂಡ ಅಷ್ಟೇ ಅಗತ್ಯವಾಗಿದೆ.

ಆದರೆ ಭಾರತದ ಪ್ರಧಾನಿ, ಬೇರೆ ಬೇರೆ ದೇಶಗಳಿಗೆ ಪ್ರವಾಸ ಮಾಡುವುದು, ಚುನಾವಣೆಗೆ ಮತ ಸಂಗ್ರಹಿಸಲು ಊರಿಂದ ಊರಿಗೆ ಅಲೆದಾಡುವುದು, ವಿರೋಧಪಕ್ಷಗಳನ್ನು ಹಿಯ್ಯಾಳಿಸಿ ದ್ವೇಷ ಭಾಷಣ ಮಾಡುವುದರಲ್ಲೇ ಹೆಚ್ಚು ಗಮನ ಹರಿಸುತ್ತಿದ್ದಾರೆ.

ಮಣಿಪುರ ಗಲಭೆ ಆರಂಭವಾದಾಗಿನಿಂದ ಮೋದಿ ಅಧಿಕೃತ ಪ್ರವಾಸಗಳಲ್ಲಿ ಭಾರತದ ವಿವಿಧ ರಾಜ್ಯಗಳಿಗೆ 162 ಬಾರಿ ಭೇಟಿ ನೀಡಿದ್ದಾರೆ. ಆದಾಗ್ಯೂ, ಆ 162ರಲ್ಲಿ ಮಣಿಪುರಕ್ಕೆ ಒಂದು ಬಾರಿಯೂ ಮೀಸಲಿಡಲು ಅವರಿಂದ ಸಾದ್ಯವಾಗಿಲ್ಲ. ಆದರೆ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಈ ವರ್ಷ 8 ಬಾರಿ, ಮೋದಿ ತವರು ಗುಜರಾತ್ ಗೆ 10 ಬಾರಿ ಹಾಗೂ ಸಂಸತ್ತಿನಲ್ಲಿ ಅತಿ ಹೆಚ್ಚು ಲೋಕಸಭಾ ಸದಸ್ಯರನ್ನು ಹೊಂದಿರುವ ಉತ್ತರ ಪ್ರದೇಶಕ್ಕೆ 17 ಬಾರಿ ಭೇಟಿ ನೀಡಿದ್ದಾರೆ.

ಇವುಗಳಲ್ಲದೆ ಮೋದಿಯವರು ಭಾರತ ಬಿಟ್ಟು 14 ಬಾರಿ ವಿದೇಶ ಪ್ರವಾಸ ಮಾಡಿದ್ದಾರೆ. ಒಮ್ಮೆ ಅವರು ದೇವಾಲಯದ ಉದ್ಘಾಟನೆಗೆಂದು ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಹೋಗಿದ್ದರು. ಇದರಿಂದ ಜನರ ಬಗ್ಗೆ ಯೋಚಿಸದ ಮೋದಿಯವರ ಕಾರ್ಯವೈಖರಿಯಿಂದ ಕಂಗೆಟ್ಟಿರುವ ಮಣಿಪುರದ ಜನತೆ ಮೋದಿ ನಾಪತ್ತೆ ಎಂಬ ಪೋಸ್ಟರ್‌ಗಳನ್ನು ಅಂಟಿಸುವ ಮಟ್ಟಕ್ಕೆ ಹೋಗಿದ್ದಾರೆ.

ಆ ಪೋಸ್ಟರ್‌ನಲ್ಲಿ, ಹೆಸರು: ನರೇಂದ್ರ ಮೋದಿ; ಎತ್ತರ: 5 ಅಡಿ 6 ಇಂಚು; ಎದೆ: 56 ಇಂಚು; ದೃಷ್ಟಿಹೀನರು; ಕಿವುಡು, ಕಳೆದ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ಕುರಿತು ನೆಟ್ಟಿಗರು, ಪೋಸ್ಟರ್‌ನಲ್ಲಿರುವ ಮಾಹಿತಿ ಹಾಸ್ಯಾಸ್ಪದವಾಗಿದ್ದರೂ, ಅದರಲ್ಲಿ ಉಲ್ಲೇಖಿಸಿರುವಂತೆ ಪ್ರಧಾನಿ ಮೋದಿಯವರ ನಡೆ ಅತ್ಯಂತ ಖಂಡನೀಯ ಎಂದು ಹೇಳುತ್ತಿದ್ದಾರೆ.

Tags: ManipurManipur ElectionManipur ViolenceModi Missingಪೋಸ್ಟರ್ಮಣಿಪುರಮಣಿಪುರ ಗಲಭೆಮಣಿಪುರ ಹಿಂಸಾಚಾರಮೋದಿ ನಾಪತ್ತೆಸಂಸತ್ ಚುನಾವಣೆ 2024
Previous Post

ಅಮಿತ್ ಶಾ ವಿರುದ್ಧ ವೆಲ್ಫೇರ್ ಪಾರ್ಟಿಯಿಂದ ಚುನಾವಣಾ ಆಯೋಗಕ್ಕೆ ದೂರು!

Next Post

ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ಮೋದಿಯವರಿಗೆ ಜನ ತಕ್ಕ ಪಾಠ ಕಲಿಸಬೇಕು: ಸಿದ್ದರಾಮಯ್ಯ

Dynamic Leader

Next Post

ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ಮೋದಿಯವರಿಗೆ ಜನ ತಕ್ಕ ಪಾಠ ಕಲಿಸಬೇಕು: ಸಿದ್ದರಾಮಯ್ಯ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS