• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಲೇಖನ

ಹರಿಯಾಣದಲ್ಲಿ ತೀವ್ರಗೊಂಡ ರೈತರ ಪ್ರತಿಭಟಣೆ; ತಬ್ಬಿಬ್ಬಾದ ಬಿಜೆಪಿ.!

by Dynamic Leader
16/05/2024
in ಲೇಖನ
0
0
SHARES
0
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ 13 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ರಾಜ್ಯಗಳ 200ಕ್ಕೂ ಹೆಚ್ಚು ಕೃಷಿ ಸಂಘಟನೆಗಳು ಮತ್ತು ರೈತರು ದೆಹಲಿಗೆ ಮುತ್ತಿಗೆ ಹಾಕಿ ಎರಡು ಹಂತಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಹೋರಾಟ ನಡೆಸಿದ ರೈತರನ್ನು, ನೆರೆಯ ದೇಶದ ಗಡಿಯಲ್ಲಿ ಯುದ್ಧ ನಡೆಸುತ್ತಿರುವ ವಿದೇಶಿಯರ ಮೇಲೆ ದಾಳಿ ಮಾಡಿದಂತೆ, ದೆಹಲಿ ಗಡಿಯಲ್ಲಿ ಮೋದಿ ಸರ್ಕಾರವು ತನ್ನ ನಿಯಂತ್ರದಲ್ಲಿರುವ ದೆಹಲಿ ಪೊಲೀಸರು, ಅರೆಸೇನಾ ಪಡೆ ಮತ್ತು ಹರಿಯಾಣ ಬಿಜೆಪಿ ಸರ್ಕಾರದ ಪೊಲೀಸರ ಮೂಲಕ ರೈತರ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ. ಮೋದಿ ಸರ್ಕಾರದ ದಾಳಿಗೆ ಎರಡು ಹಂತದ ಹೋರಾಟಗಳಲ್ಲಿ 800ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ, “ನಮ್ಮ ಮೇಲೆ ಹಲ್ಲೆ ನಡೆಸಿ, ನಮ್ಮ ಸಹಪಾಟಿಗಳನ್ನು ಕೊಂದು ಹಾಕಿದ್ದ ನೀವುಗಳು, ನಮ್ಮ ಊರಿಗೆ ಮತ ಕೇಳಲು ಏಕೆ ಬರುತ್ತಿದ್ದೀರಿ?” ಎಂದು ಪ್ರಶ್ನಿಸಿ, ಹರಿಯಾಣ ಮತ್ತು ಪಂಜಾಬ್ ನಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸುವ ಬಿಜೆಪಿ ಸದಸ್ಯರನ್ನು ರೈತರು ಓಡಿಸುತ್ತಿದ್ದಾರೆ. ಇದರಲ್ಲಿ ಹರಿಯಾಣ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರಿಸ್ಥಿತಿ ತೀರಾ ಹೀನಾಯವಾಗಿದೆ.

ಸಿರ್ಸಾದಲ್ಲಿ ಅಶೋಕ್ ತನ್ವಾರ್, ಅಂಬಾಲಾದಲ್ಲಿ ಬಾಂಟೊ ಕಟಾರಿಯಾ, ಸೋನಿಪತ್‌ನಲ್ಲಿ ಮೋಹನ್ ಲಾಲ್ ಬಡೋಲಿ, ರೋಡಕ್‌ನಲ್ಲಿ ಅರವಿಂದ್ ಶರ್ಮಾ, ಮಹೇಂದ್ರ ಘಾಟ್‌ನಲ್ಲಿ ಧರಂಬೀರ್ ಸಿಂಗ್ ಮತ್ತು ಕುರುಕ್ಷೇತ್ರದಲ್ಲಿ ನವೀನ್ ಜಿಂದಾಲ್ ಅವರಂತಹ ಬಿಜೆಪಿ ಅಭ್ಯರ್ಥಿಗಳನ್ನು ರೈತರು ಒಟ್ಟಾಗಿ ಸೇರಿ ಓಡಿಸಿದ್ದರಿಂದ ಅವರು ತಮ್ಮ ಪ್ರಚಾರ ಮತ್ತು ರ‍್ಯಾಲಿಗಳನ್ನುರದ್ದುಗೊಳಿಸಿ ಮನೆ ಸೇರಿದ್ದಾರೆ.

ಮಾಜಿ ಮುಖ್ಯಮಂತ್ರಿ ಖಟ್ಟರ್
ಬಿಜೆಪಿಯ ಹಿರಿಯ ನಾಯಕ ಹಾಗೂ ಹರಿಯಾಣದ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಲೋಕಸಭೆ ಚುನಾವಣೆಯಲ್ಲಿ ಕರ್ನೂಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಅವರು ಪ್ರಚಾರ ಮಾಡಿದಲ್ಲೆಲ್ಲ ರೈತರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಮನೋಹರ್ ಲಾಲ್ ಖಟ್ಟರ್ ಪ್ರಚಾರ ಸಭೆಗಳನ್ನು ರದ್ದುಪಡಿಸಿ ಪಕ್ಷದ ಕಚೇರಿಗೆ ವಾಪಸ್ ತೆರಳಿದ್ದಾರೆ. ಕಳೆದ 4 ದಿನಗಳಿಂದ ಅವರು ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರಧಾನಿ ಮೋದಿ ಪ್ರಚಾರ ರದ್ದು
ಮೇ 18 ರಂದು ಹರಿಯಾಣದಲ್ಲಿ ಪ್ರಧಾನಿ ಮೋದಿ ಪ್ರಚಾರ ಆರಂಭಿಸಲಿದ್ದು, ಮೇ 25 ರಂದು 6ನೇ ಹಂತದಲ್ಲಿ ರಾಜ್ಯದ ಎಲ್ಲಾ 10 ಲೋಕಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಖಟ್ಟರ್ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳನ್ನು ರೈತರು ಓಡಿಸುತ್ತಿರುವುದರಿಂದ ಪ್ರಧಾನಿ ಮೋದಿ ಅವರ ಪ್ರಚಾರ ಸಭೆಗಳು ನಡೆಯುವುದು ಖಚಿತವಾಗಿಲ್ಲ ಎಂದು ವರದಿಯಾಗಿದೆ.

“ಇಂಡಿಯಾ” ಮೈತ್ರಿಕೂಟ 7ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ
ಹರಿಯಾಣದಲ್ಲಿ ಮೋದಿ ಮತ್ತು ಬಿಜೆಪಿ ವಿರುದ್ಧ ರೈತರು ಮತ್ತು ಸಾರ್ವಜನಿಕರು ತೀವ್ರ ಅಸಮಾಧಾನ ಹೊಂದಿದ್ದಾರೆ. ಬಿಜೆಪಿಯು ಪ್ರಚಾರಕ್ಕೆ ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ, ‘ಝೀರೋ ಗ್ರೌಂಡ್’ ಮತ್ತು ‘ಲೋಕ್ ಪೋಲ್’ ಸೇರಿದಂತೆ ಮತಗಟ್ಟೆ ಸಮೀಕ್ಷಾ ಸಂಸ್ಥೆಗಳು ಬಿಡುಗಡೆ ಮಾಡಿರುವ ಸಮೀಕ್ಷೆಗಳಲ್ಲಿ, ಒಟ್ಟು 10 ಸ್ಥಾನಗಳ ಪೈಕಿ 7ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್-ಆಮ್ ಆದ್ಮಿ ಪಕ್ಷ ಒಳಗೊಂಡ “ಇಂಡಿಯಾ” ಮೈತ್ರಿಕೂಟ ಗೆಲ್ಲುವ ಸಾಧ್ಯತೆಯಿದೆ ಎಂದು ಬಹಿರಂಗಪಡಿಸಿದೆ. ಜೆಜೆಪಿ ಪಕ್ಷದ ಬೆಂಬಲವನ್ನು ಉಳಿಸಿಕೊಂಡರೆ ಹರಿಯಾಣದಲ್ಲಿ ಬಿಜೆಪಿ “ವೈಟ್‌ವಾಶ್” ಆಗಲಿದೆ ಎಂಬುದು ಗಮನಾರ್ಹ.

SOURCE: theekkathir.in

Tags: ಅಮಿತ್ ಶಾಇಂಡಿಯಾ ಮೈತ್ರಿಕೂಟಕಾಂಗ್ರೆಸ್-ಆಮ್ ಆದ್ಮಿಚುನಾವಣೆ ಬಹಿಷ್ಕಾರಝೀರೋ ಗ್ರೌಂಡ್ಪಂಜಾಬ್ಬಿಜೆಪಿಮನೋಹರ್ ಲಾಲ್ ಖಟ್ಟರ್ಮೋದಿರೈತರುಲೋಕ್ ಪೋಲ್ವೈಟ್‌ವಾಶ್ಸಂಸತ್ ಚುನಾವಣೆ 2024ಹರಿಯಾಣ
Previous Post

ರಾಮಚರಿತಮಾನಸ್ ಮತ್ತು ಪಂಚತಂತ್ರ ಕಥೆಗಳಿಗೆ UNESCO ಮಾನ್ಯತೆ!

Next Post

ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು: ಹೆಚ್.ಡಿ.ಕುಮಾರಸ್ವಾಮಿ

Dynamic Leader

Next Post

ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು: ಹೆಚ್.ಡಿ.ಕುಮಾರಸ್ವಾಮಿ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS