• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಲೇಖನ

ವಿದೇಶಿ ಗೋಧಿಗೆ ಅನುಮತಿ, ಸ್ವದೇಶಿ ಗೋಧಿಗೆ ಸಮಾಧಿ ಇದು `ದೇವಮಾನವ’ ಮೋದಿಯ ನ್ಯಾಯ!

by Dynamic Leader
03/06/2024
in ಲೇಖನ
0
0
SHARES
0
VIEWS
Share on FacebookShare on Twitter

ಜಾಗತಿಕ ರೈತರು ಕ್ವಿಂಟಾಲ್ ಗೋಧಿಯನ್ನು 3,000 ರಿಂದ 4,000 ರೂ.ಗೆ ಮಾರಾಟ ಮಾಡುತ್ತಿರುವಾಗ, ಭಾರತೀಯ ರೈತರಿಗೆ ಸಿಗುವುದು ಕೇವಲ 2,400 ರಿಂದ 2,600 ರೂ. ಮಾತ್ರ!

“ರೈತರು ಬದುಕಬಾರದು” ಎಂಬುದಕ್ಕಾಗಿ ಭಾರತದಲ್ಲಿ ಒಬ್ಬ ವ್ಯಕ್ತಿ ದಣಿವರಿಯದೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರೆ, ಅವರು ಬೇರೆ ಯಾರೂ ಅಲ್ಲ; ಅವರೇ ನಮ್ಮ ‘ದೇವಮಾನವ’ ಭಾರತದ ಪ್ರಧಾನಿ ಮೋದಿ!

ಈ ಹಿಂದೆ, ಭಾರತದ ರೈತರ ಆದಾಯವನ್ನು ದ್ವಿಗುಣಗೊಳಿಸುತ್ತೇನೆ ಎಂದು ಹೇಳುತ್ತಲೇ ಗೋಧಿಯನ್ನು ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ನಿರ್ದಯಿ ಮಗುವೇ ಈ ದೇವಮಾನವ?

ಒಂದು ಕ್ವಿಂಟಲ್ ಗೋಧಿಯ ಅಂತಾರಾಷ್ಟ್ರೀಯ ಬೆಲೆ ರೂ.3,000 ಕ್ಕಿಂತ ಕಡಿಮೆ ಇಲ್ಲ. ಇದು ಗರಿಷ್ಠ 4,000 ರೂ.ಗೆ ಮಾರಾಟವಾಗುತ್ತದೆ. ವಿಶ್ವದಾದ್ಯಂತ ರೈತರು ಕ್ವಿಂಟಲ್ ಗೋಧಿಯನ್ನು 4,000 ರೂ.ಗೆ ಮಾರಾಟ ಮಾಡುವ ಮೂಲಕ ಲಾಭ ಗಳಿಸುತ್ತಿದ್ದಾರೆ. ಆದರೆ ಭಾರತದ ರೈತರಿಗೆ ಸಿಗುವುದು ಕೇವಲ 2,400 ರಿಂದ 2,600 ರೂ. ಮಾತ್ರ. ಭಾರತ ಸರ್ಕಾರವು ಒದಗಿಸಿದ ಕನಿಷ್ಠ ಬೆಂಬಲ ಬೆಲೆ (Minimum Support Price) ಕೇವಲ 2,275 ರೂ. ಮಾತ್ರ.

ಜಾಗತಿಕವಾಗಿ ಗೋಧಿಯ ಬೆಲೆ ಗಗನಕ್ಕೇರುತ್ತಿರುವಾಗ, ರಫ್ತು ಮಾಡಿದರೆ, ಭಾರತೀಯ ರೈತರಿಗೆ ಸ್ವಯವಾಗಿಯೇ ದುಪ್ಪಟ್ಟು ಆದಾಯ ಸಿಗುತ್ತವೆ. ಆದರೆ, ಇದನ್ನು ‘ದೇವಮಾನವ’ ಸಹಿಸಿಕೊಳ್ಳುತ್ತಿಲ್ಲ. ಕಳೆದ ಮೂರು ವರ್ಷಗಳಿಂದ ಗೋಧಿ ರಫ್ತನ್ನು ನಿಷೇಧಿಸಲಾಗಿದೆ.

‘ಉತ್ತಮ ಬೆಲೆ ಸಿಕ್ಕರೆ ರೈತರು ನಮ್ಮ ಮಾತು ಕೇಳುವುದಿಲ್ಲ. ನಿರ್ದಿಷ್ಟವಾಗಿ ಹೇಳುವುದಾದರೆ, ಬಹಳಷ್ಟು ಗೋಧಿಯನ್ನು ಉತ್ಪಾದಿಸುವವರು ಉತ್ತರದ ರೈತರು. ನಾವು ಅವರನ್ನು ಸದಾ ಸಾಲದಲ್ಲಿಟ್ಟರೆ, ಅವರು ಪ್ರಧಾನಮಂತ್ರಿಗಳ ಆರ್ಥಿಕ ನೆರವು ಯೋಜನೆಯ ಹೆಸರಿನಲ್ಲಿ ನಾವು ನೀಡುವ 6000 ರೂಪಾಯಿಗಾಗಿ ನಮ್ಮ ಪಾದಗಳನ್ನು ಕಾಯುತ್ತಾರೆ’ ಎಂದು ಮೋದಿ ಭಾವಿಸಿರಬಹುದು?

ಈ ದೇವಮಾನವರ ಯೋಜನೆಗಳ ಹೊರತಾಗಿಯೂ, ಪ್ರಕೃತಿ ಈ ವರ್ಷ ರೈತರಿಗೆ ಸ್ವಲ್ಪ ಹೆಚ್ಚುವರಿ ಬೆಲೆ ಪಡೆಯಲು ಸಹಾಯ ಮಾಡಿದೆ. ಹೆಚ್ಚಿನ ಹಾನಿ ಇಲ್ಲದೆ ಬೆಳೆದಿದೆ. ಗೋಧಿ ಆಮದಿಗೆ ಉತ್ತೇಜನ ನೀಡದಿದ್ದರೆ ಭಾರತೀಯ ರೈತರಿಗೆ ಹೆಚ್ಚಿನ ಬೆಲೆ ಸಿಗಲಿದೆ. ಆದರೆ ಮೋದಿ ರಷ್ಯಾದಿಂದ ಐದು ಮಿಲಿಯನ್ ಟನ್ ಗೋಧಿ ಆಮದು ಮಾಡಿಕೊಳ್ಳಲು ಅನುಮತಿ ನೀಡಿದ್ದಾರೆ.

ಸರಿ, ಆಮದು ಮಾಡಿಕೊಂಡು ಹೇಗಾದರೂ ತೊಲಗಲಿ ಎಂದರೂ ಭಾರತದ ಗೋಧಿ ರೈತರು ವಿಶ್ವದ ಗೋಧಿ ರೈತರೊಂದಿಗೆ ಪೈಪೋಟಿ ನಡೆಸುತ್ತಾರೆ ಎಂದು ಬಯಸಿದರೆ, ಆಮದು ಸುಂಕ ಮುಕ್ತಕ್ಕೆ ಅವಕಾಶ ನೀಡುವ ಮೂಲಕ ಮೋದಿ ಭಾರತೀಯ ರೈತರ ಹೊಟ್ಟೆಗೆ ಹೊಡೆದಿದ್ದಾರೆ.

ವಿಶ್ವ ವ್ಯಾಪಾರ ಸಂಸ್ಥೆ (WTO) ನಿಬಂಧನೆಗಳ ಪ್ರಕಾರ, ಭಾರತವು ವಿದೇಶದಿಂದ ಆಮದು ಮಾಡಿಕೊಳ್ಳುವ ಗೋಧಿಗೆ 40% ಸುಂಕವನ್ನು ವಿಧಿಸಬಹುದು. ಆದರೆ ಉದ್ಯಮಿಗಳಿಗಾಗಿ ಅವತರಿಸಿರುವ ‘ದೇವಮಾನವ’ ಹೇಗೆ ತೆರಿಗೆ ವಿಧಿಸುತ್ತಾರೆ? ಬಿಸ್ಕತ್ತು ತಯಾರಕರು ಮತ್ತು ಗೋಧಿ ಹಿಟ್ಟಿನ ಗಿರಣಿ ಮಾಲೀಕರಂತಹ ಕಾರ್ಪೊರೇಟ್ ಕಂಪನಿಗಳಿಗೆ ಲಾಭದಾಯಕವಾಗಲು ಅವರು ಗೋಧಿಯನ್ನು ಸುಂಕ ರಹಿತ ಆಮದು ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ.

ಅಂತಹ ಸುಂಕವಿಲ್ಲದೆ ವಿದೇಶಿ ಗೋಧಿ ಭಾರತದ ಮಾರುಕಟ್ಟೆಗೆ ಬರುವುದಾದರೇ ಇಲ್ಲಿ ಗೋಧಿ ಬೆಲೆ ಕ್ವಿಂಟಲ್‌ಗೆ 2000 ರೂಪಾಯಿಗಿಂತ ಕಡಿಮೆಯಾದರೂ ಆಶ್ಚರ್ಯವಿಲ್ಲ. ಇದುವೇ ಈ ‘ದೇವಮಾನವ’ ರೈತನ ಆದಾಯವನ್ನು ದ್ವಿಗುಣಗೊಳಿಸುವ ಯೋಗ್ಯತೆ.

ರೈತರಿಂದ 32 ಮಿಲಿಯನ್ ಟನ್ ಗೋಧಿಯನ್ನು ಖರೀದಿಸುವ ಬದಲು ಭಾರತ ಸರ್ಕಾರವು ಕೇವಲ 26 ಮಿಲಿಯನ್ ಟನ್ ಗೋಧಿಯನ್ನು ಮಾತ್ರ ಖರೀದಿಸಿದೆ.

ಭಾರತವು ವಿಶ್ವದಲ್ಲೇ ಎರಡನೇ ಅತಿ ದೊಡ್ಡ ಗೋಧಿ ಉತ್ಪಾದಕ ರಾಷ್ಟ್ರವಾಗಿದೆ. ಇದು 2024-25ರ ವಾರ್ಷಿಕ ಗುರಿ 112 ಮಿಲಿಯನ್ ಟನ್‌ಗಳಲ್ಲಿ ಸ್ವಲ್ಪ ಇಳಿಕೆಯಾಗಿದೆ. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನವು ಇಳುವರಿ ಮೇಲೆ ದೊಡ್ಡ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂದು ಪರಿಸರ ತಜ್ಞರು ಹೇಳುತ್ತಾರೆ. ಇತಿಹಾಸದಲ್ಲಿ ಮೊದಲ ಬಾರಿಗೆ ನವದೆಹಲಿಯಲ್ಲಿ ತಾಪಮಾನ 52.9C ಗೆ ಏರಿದರೆ, ಭವಿಷ್ಯದಲ್ಲಿ ಭಾರತವು ಇನ್ನೂ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.

ಇದೆಲ್ಲದರ ಬಗ್ಗೆ ಯಾವುದೇ ಆಲೋಚನೆಯಿಲ್ಲದೆ, ‘ದೇವಮಾನವ’ ಕನ್ಯಾಕುಮಾರಿ ವಿವೇಕಾನಂದ ಬಂಡೆಯ ಮೇಲೆ ಕುಳಿತು ಧ್ಯಾನ ಮಾಡುತ್ತಾರೆ. ಇದಕ್ಕೆ ಕಾಲವೇ ಉತ್ತರಿಸಬೇಕು.

ಅವತಾರ ಪುರುಷನಾದ ಶ್ರೀಕೃಷ್ಣನು ತಾಯಿಯ ಗರ್ಭದಲ್ಲಿ ಜನಿಸಿದವರು. ಮತ್ತೊಂದು ಅವತಾರ ಪುರುಷನಾದ ಭಗವಾನ್ ಶ್ರೀರಾಮನು ಕೂಡ ತಾಯಿಯ ಗರ್ಭದಲ್ಲಿ ಜನಿಸಿದವರು. ಆದರೆ ನಮ್ಮ ‘ದೇವಮಾನವ’ ಮೋದಿಜಿ ತನ್ನ ತಾಯಿಯ ಗರ್ಭದಿಂದ ಹುಟ್ಟಿರುವುದನ್ನು ಒಪ್ಪಿಕೊಳ್ಳಲು ನಿರಾಕರಿಸಿ ‘ನಾನು ಆಕಾಶದಿಂದ ಜಿಗಿದವನು’ ಎನ್ನುತ್ತಾರೆ.

ಹೀಗೆ ತಲೆ ಬುರುಡೆ ಒಣಗಿ ಹೋದವರಬಳಿ ಮಾತನಾಡಿ ಏನು ಪ್ರಯೋಜನ? ಜೈ ಭಾರತ್.

ಅಂಕಣಕಾರ: ದೂರನ್ ನಂಬಿ
ಮೂಲ: ವಿಕಟನ್.ಕಾಂ
ಕನ್ನಡಕ್ಕೆ: ಡಿ.ಸಿ.ಪ್ರಕಾಶ್

Tags: Indian WheatMinimum Support PriceModi GovernmentMSPWheat ExportWheat Importಎಂ.ಎಸ್.ಪಿಕನಿಷ್ಠ ಬೆಂಬಲ ಬೆಲೆಗೋಧಿ ಆಮದುಗೋಧಿ ರಫ್ತುಗೋಧಿ ರೈತರುದೇವಮಾನವಭಾರತೀಯ ಗೋಧಿಮೋದಿ
Previous Post

ಮಳೆಯ ಅಬ್ಬರಕ್ಕೆ ನಲುಗಿದ ಕೊತ್ತನೂರು, ಕೆ.ನಾರಾಯಣಪುರ, ಬೈರತಿ, ಗೆದ್ದಲಹಳ್ಳಿ ಹಾಗೂ ಸುತ್ತಮುತ್ತ ಪ್ರದೇಶಗಳು!

Next Post

“ಜನರ ತೀರ್ಪು ಸಂವಿಧಾನ ರಕ್ಷಣೆಗೆ ಸಹಕಾರಿಯಾಗಿದೆ” – ರಾಹುಲ್ ಗಾಂಧಿ!

Dynamic Leader

Next Post

"ಜನರ ತೀರ್ಪು ಸಂವಿಧಾನ ರಕ್ಷಣೆಗೆ ಸಹಕಾರಿಯಾಗಿದೆ" - ರಾಹುಲ್ ಗಾಂಧಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS