• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

POCSO: ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಹೈಕೋರ್ಟ್ ಜೂನ್ 17 ರವರೆಗೆ ತಡೆ!

by Dynamic Leader
14/06/2024
in ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ‘ಪೋಕ್ಸೊ’ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಇದೇ 17 ರವರೆಗೆ ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಅದೇ ಸಮಯದಲ್ಲಿ ಜೂನ್ 17 ರಂದು (ಸೋಮವಾರ) ತಪ್ಪದೇ ವಿಚಾರಣೆಗೆ ಹಾಜರಾಗಬೇಕು ಎಂದೂ ಆದೇಶ ಹೊರಡಿಸಿದೆ. 82 ವರ್ಷದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮನೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿದೆ. ಫೆ.2ರಂದು ಸದಾಶಿವ ನಗರದ ನಿವಾಸಿ ಮಮತಾ (55) ಎಂಬ ಮಹಿಳೆ ತನ್ನ 17 ವರ್ಷದ ಮಗಳೊಂದಿಗೆ ಯಡಿಯೂರಪ್ಪನ ಮನೆಗೆ ತೆರಳಿದ್ದರು.

ಈ ಹಿನ್ನೆಲೆಯಲ್ಲಿ, ಸಹಾಯ ಕೇಳಲು ಹೋದ ನನ್ನ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಾ.14 ರಂದು ಸದಾಶಿವನಗರ ಪೊಲೀಸರಿಗೆ ಮಮತಾ ದೂರು ನೀಡಿದ್ದರು. ಯಡಿಯೂರಪ್ಪ ವಿರುದ್ಧ ‘ಪೋಕ್ಸೊ’ ಪ್ರಕರಣ ದಾಖಲಾದವು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತು.

ಮೊದಲ ಹಂತದ ತನಿಖೆಯಲ್ಲಿ ದೂರುದಾರರಾದ ಮಹಿಳೆ ಮಾನಸಿಕ ಅಸ್ವಸ್ಥರಾಗಿದ್ದು, ಈಗಾಗಲೇ 53 ಸೆಲೆಬ್ರಿಟಿಗಳ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿತು. ಏತನ್ಮಧ್ಯೆ ದೂರುದಾರರಾದ ಮಮತಾ ಕ್ಯಾನ್ಸರ್‌ಗೆ ತುತ್ತಾಗಿ ಮೇ 27 ರಂದು ಮೃತಪಟ್ಟರು. ತರುವಾಯ ಪ್ರಕರಣ ಮುಗಿಯುವ ನಿರೀಕ್ಷೆ ಇತ್ತು.

ಅಲ್ಲದೆ, ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಯಡಿಯೂರಪ್ಪ ಅವರು ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದರು. ಇದನ್ನು ತಿಳಿದ ಮಮತಾ ಸಹೋದರ, ಪ್ರಕರಣ ದಾಖಲಿಸಿ ಹಲವು ದಿನಗಳು ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.

ಮೊನ್ನೆ (ಜೂನ್ 12) ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಸಮನ್ಸ್ ನೀಡಿತ್ತು. ಆದರೇ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿರಲಿಲ್ಲ. ಸಿಐಡಿ ಅಧಿಕಾರಿಗಳಿಗೆ ಪತ್ರ ಬರೆದು ತಾವು ದೆಹಲಿಯಲ್ಲಿದ್ದು ಮೂರು ದಿನಗಳ ಕಾಲಾವಕಾಶ ನೀಡುವಂತೆ ಕೋರಿದ್ದರು.

ಈ ಹಿನ್ನೆಲೆಯಲ್ಲಿ, ಯಡಿಯೂರಪ್ಪನವರ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಹೊರಡಿಸುವಂತೆ ನಿನ್ನೆ ಬೆಂಗಳೂರಿನ 51ನೇ ಸಿಟಿ ಸಿವಿಲ್ ಮತ್ತು ಪೋಕ್ಸೋ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದನ್ನು ಆಲಿಸಿದ ನ್ಯಾಯಾಲಯ ಯಡಿಯೂರಪ್ಪ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತು.

ಈ ಮಧ್ಯೆ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಿತು. ಆಗ ಯಡಿಯೂರಪ್ಪ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಹಾಗೂ ಇದೇ 17ರ ವರೆಗೆ ಬಂಧಿಸಬಾರದೆಂದು ಕೋರ್ಟ್ ಆದೇಶ ನೀಡಿದೆ. ಅಲ್ಲದೇ ಇದೇ 17 ರಂದು ಪೊಲೀಸರ ಮುಂದೆ ಹಾಜರಾಗುವಂತೆಯೂ ಯಡಿಯೂರಪ್ಪ ಅವರಿಗೆ ಆದೇಶ ನೀಡಲಾಗಿದೆ.

Tags: B.S.YediyurappaPOCSOಪೋಕ್ಸೊಬಿ.ಎಸ್.ಯಡಿಯೂರಪ್ಪಮಧ್ಯಂತರ ಜಾಮೀನುಸಿಐಡಿ ತನಿಖೆ
Previous Post

ಕೇರಳದಲ್ಲಿ ಸಮಾಲೋಚನೆ ನಡೆಸಲು ಬಿಜೆಪಿ-ಆರ್‌ಎಸ್‌ಎಸ್‌ ನಿರ್ಧಾರ!

Next Post

ಖ್ಯಾತ ಲೇಖಕಿ ಅರುಂಧತಿ ರಾಯ್ ವಿರುದ್ಧ UAPA ಅಡಿಯಲ್ಲಿ ಪ್ರಕರಣದ ವಿಚಾರಣೆಗೆ ಅನುಮೋಧನೆ!

Next Post

ಖ್ಯಾತ ಲೇಖಕಿ ಅರುಂಧತಿ ರಾಯ್ ವಿರುದ್ಧ UAPA ಅಡಿಯಲ್ಲಿ ಪ್ರಕರಣದ ವಿಚಾರಣೆಗೆ ಅನುಮೋಧನೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ರಾಜಕೀಯ ಕಚ್ಚಾಟಗಳಿಗೆ ನ್ಯಾಯಾಲಯಗಳನ್ನು ಬಳಸಿಕೊಳ್ಳಬೇಡಿ: ಬಿಜೆಪಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ!

08/09/2025

ರಷ್ಯಾದೊಂದಿಗೆ ವ್ಯವಹಾರ ನಡೆಸುವ ದೇಶಗಳಿಗೆ ತೆರಿಗೆ ವಿಧಿಸುವುದು ಒಳ್ಳೆಯ ಯೋಚನೆ – ಝೆಲೆನ್ಸ್ಕಿ

08/09/2025

SCO: ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಶಾಂಘೈ ಸಹಕಾರ ಸಂಘಟನೆಯ ದೇಶಗಳು!

01/09/2025

ಜಗದೀಪ್ ಧನಕರ್ ಅವರ ಸರ್ಕಾರಿ ನಿವಾಸವನ್ನು ಖಾಲಿ ಮಾಡಲು ಕೇಂದ್ರ ಸರ್ಕಾರ ಆದೇಶ!

31/08/2025

Recent News

ರಾಜಕೀಯ ಕಚ್ಚಾಟಗಳಿಗೆ ನ್ಯಾಯಾಲಯಗಳನ್ನು ಬಳಸಿಕೊಳ್ಳಬೇಡಿ: ಬಿಜೆಪಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ!

08/09/2025

ರಷ್ಯಾದೊಂದಿಗೆ ವ್ಯವಹಾರ ನಡೆಸುವ ದೇಶಗಳಿಗೆ ತೆರಿಗೆ ವಿಧಿಸುವುದು ಒಳ್ಳೆಯ ಯೋಚನೆ – ಝೆಲೆನ್ಸ್ಕಿ

08/09/2025

SCO: ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಶಾಂಘೈ ಸಹಕಾರ ಸಂಘಟನೆಯ ದೇಶಗಳು!

01/09/2025

ಜಗದೀಪ್ ಧನಕರ್ ಅವರ ಸರ್ಕಾರಿ ನಿವಾಸವನ್ನು ಖಾಲಿ ಮಾಡಲು ಕೇಂದ್ರ ಸರ್ಕಾರ ಆದೇಶ!

31/08/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ರಾಜಕೀಯ ಕಚ್ಚಾಟಗಳಿಗೆ ನ್ಯಾಯಾಲಯಗಳನ್ನು ಬಳಸಿಕೊಳ್ಳಬೇಡಿ: ಬಿಜೆಪಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ!

08/09/2025

ರಷ್ಯಾದೊಂದಿಗೆ ವ್ಯವಹಾರ ನಡೆಸುವ ದೇಶಗಳಿಗೆ ತೆರಿಗೆ ವಿಧಿಸುವುದು ಒಳ್ಳೆಯ ಯೋಚನೆ – ಝೆಲೆನ್ಸ್ಕಿ

08/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS