• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಬಿಜೆಪಿಯ ಹಿಂದೂಗಳು ಹಿಂಸಾತ್ಮಕರು… ರಾಹುಲ್ ವಿವಾದಾತ್ಮಕ ಭಾಷಣದಿಂದ ಸಂಸತ್‌ನಲ್ಲಿ ಕೋಲಾಹಲ!

by Dynamic Leader
01/07/2024
in ದೇಶ
0
0
SHARES
0
VIEWS
Share on FacebookShare on Twitter

Leaders View

• ಡಿ.ಸಿ.ಪ್ರಕಾಶ್

ನವದೆಹಲಿ: “ಬಿಜೆಪಿಯ ಹಿಂದೂಗಳು ಹಿಂಸಾತ್ಮಕರು; ನಿಜವಾದ ಹಿಂದೂಗಳಲ್ಲ” ಎಂದು ಹೇಳಿದ ರಾಹುಲ್‌ ಗಾಂಧಿಗೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಸಂಸದರು ವಿರೋಧ ವ್ಯಕ್ತಪಡಿಸಿದರು. ರಾಹುಲ್ ಕ್ಷಮೆಯಾಚಿಸುವಂತೆ ಒತ್ತಾಯಿಸುತ್ತಿದ್ದಂತೆ ಲೋಕಸಭೆಯಲ್ಲಿ ಕೋಲಾಹಲ ಉಂಟಾಯಿತು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶಿವ, ಯೇಸು ಮತ್ತು ಗುರುನಾನಕ್ ಮುಂತಾದವರ ಭಾವಚಿತ್ರಗಳನ್ನು ತೋರಿಸಿ ಮಾತನಾಡಿದರು. ಸದನದ ನಿಯಮಗಳ ಪ್ರಕಾರ ಯಾವುದೇ ಧಾರ್ಮಿಕ ದೇವರ ಚಿತ್ರಗಳನ್ನು ತೋರಿಸಬಾರದು ಎಂದು ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿದರು.

ಮುಂದುವರಿದು ಮಾತನಾಡಿದ ರಾಹುಲ್ ಗಾಂಧಿ, “ಪ್ರಧಾನಿ ಮೋದಿ ಅವರು ಶಿವನೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ. ನಾವೆಲ್ಲರೂ ಹುಟ್ಟುತ್ತೇವೆ ಮತ್ತು ಸಾಯುತ್ತೇವೆ. ಆದರೆ ಪ್ರಧಾನಿ ಮೋದಿ ಜೈವಿಕವಾಗಿ ಹುಟ್ಟಿದವರಲ್ಲ. ಪ್ರಧಾನಿ ಮೋದಿ ಇಡೀ ಹಿಂದೂ ಧರ್ಮದ ಪ್ರತಿನಿಧಿಯಲ್ಲ. ಒಂದು ನಿರ್ದಿಷ್ಟ ಧರ್ಮ ಮಾತ್ರವಲ್ಲ, ನಮ್ಮಲ್ಲಿರುವ ಎಲ್ಲಾ ಧರ್ಮಗಳು ಧೈರ್ಯ ಮತ್ತು ಅಹಿಂಸೆಯ ಬಗ್ಗೆ ಮಾತನಾಡುತ್ತವೆ.

ಬಿಜೆಪಿಯ ಹಿಂದೂಗಳು ಹಿಂಸಾತ್ಮಕರು; ನಿಜವಾದ ಹಿಂದೂಗಳಲ್ಲ. ಹಿಂದೂ ಧರ್ಮವು ಭಯ, ದ್ವೇಷ ಮತ್ತು ಸುಳ್ಳಿನ ಧರ್ಮವಲ್ಲ. ಬಿಜೆಪಿಯವರು ದಿನದ 24 ಗಂಟೆಯೂ ಹಿಂಸಾಚಾರ ಮತ್ತು ದ್ವೇಷದ ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದೂ ಧರ್ಮವು ಅಹಿಂಸೆಯನ್ನು ಕಲಿಸುತ್ತದೆ; ದ್ವೇಷವನಲ್ಲ” ಎಂದು ಮಾತನಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ, “ರಾಹುಲ್ ಭಾಷಣ ಎಲ್ಲಾ ಹಿಂದೂಗಳ ಮೇಲಿನ ದಾಳಿಯಾಗಿದೆ. ರಾಹುಲ್ ಹಿಂದೂಗಳನ್ನು ಹಿಂಸಾತ್ಮಕ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ” ಎಂದು ಖಂಡಿಸಿದರು. ಲೋಕಸಭೆಯಲ್ಲಿ ಮಾತನಾಡುವಾಗ ಪ್ರಧಾನಿ ಮೋದಿಯವರು ಅಡ್ಡಿಪಡಿಸಿ ಮಾತನಾಡಿದ್ದು ಇದೇ ಮೊದಲು ಎಂಬುದು ಗಮಾರ್ಹ.

ಪ್ರಧಾನಿಯ ನಂತರ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ದೇಶದ ಕೋಟ್ಯಾಂತರ ಜನರು ತಮ್ಮನ್ನು ತಾವು ಹಿಂದೂ ಎಂದು ಹೆಮ್ಮೆಯಿಂದ ಕರೆದುಕೊಳ್ಳುತ್ತಾರೆ. ರಾಹುಲ್ ಅವರ ಭಾಷಣಕ್ಕೆ ಈ ಸದನದಲ್ಲಿ ಮಾತ್ರವಲ್ಲ ಇಡೀ ರಾಷ್ಟ್ರದ ಕ್ಷಮೆಯಾಚಿಸಬೇಕು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇಡೀ ದೇಶವನ್ನೇ ಬಂಧಿಸಿದವರು ಸುರಕ್ಷತೆಯ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ.

ಕಾಂಗ್ರೆಸ್ ಆಳ್ವಿಕೆಯಲ್ಲಿ ದೆಹಲಿಯಲ್ಲಿ ಸಾವಿರಾರು ಸಿಖ್ಖರನ್ನು ಕಗ್ಗೊಲೆ ಮಾಡಲಾಯಿತು. ಸದನವನ್ನು ಈ ರೀತಿ ನಡೆಸುವಂತಿಲ್ಲ, ರಾಹುಲ್‌ಗೆ ನಿಯಮ ಗೊತ್ತಿಲ್ಲದಿದ್ದರೆ ನಿಯಮದ ಬಗ್ಗೆ ಪಾಠ ಹೇಳಿ. ಭಾವಚಿತ್ರ ತೋರಿಸಬೇಡಿ ಎಂದು ಹೇಳಿದರೂ ಮತ್ತೆ ಮತ್ತೆ ಈ ರೀತಿ ಮಾಡುವುದನ್ನು ಒಪ್ಪುವುದಿಲ್ಲ” ಎಂದರು.

ಆಡಳಿತ ಪಕ್ಷದ ಸಂಸದರು ಭಾರತೀಯ ಸಂವಿಧಾನದವನ್ನು ಎತ್ತಿಹಿಡಿದು ರಾಹುಲ್ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದರು. ಆ ಸಮಯದಲ್ಲಿ ಶಿವನ ಚಿತ್ರವನ್ನು ಮತ್ತೊಮ್ಮೆ ತೋರಿಸಿದ ರಾಹುಲ್, ಅಯೋಧ್ಯೆ ವ್ಯಾಪ್ತಿಯ ಕ್ಷೇತ್ರವನ್ನು ಗೆದ್ದ ಸಮಾಜವಾದಿ ಪಕ್ಷದ ಸಂಸದರನ್ನು ಅಭಿನಂದಿಸಿ, “ರಾಮನ ಜನ್ಮಭೂಮಿಯಾದ ಅಯೋಧ್ಯೆಯಲ್ಲೇ ಬಿಜೆಪಿಗೆ ತಕ್ಕ ಪಾಠ ಕಲಿಸಲಾಗಿದೆ” ಎಂದರು.

ಫೈಜಾಬಾದ್ (ಅಯೋಧ್ಯೆ) ಸಮಾಜವಾದಿ ಸಂಸದ ಅವಧೇಶ್ ಪ್ರಸಾದ್

ರಾಹುಲ್ ಭಾಷಣದ ವೇಳೆ ಮಧ್ಯಂತರದಲ್ಲಿ ಮೈಕ್ ಸ್ವಿಚ್ ಆಫ್ ಆಗುತ್ತಿದ್ದಂತೆ, “ಮೈಕ್ ನಿಯಂತ್ರಣ ಯಾರ ಬಳಿ ಇದೆ? ಅಯೋಧ್ಯೆ ಹೆಸರು ಹೇಳಿದ ತಕ್ಷಣ ನನ್ನ ಮೈಕ್ ಸ್ವಿಚ್ ಆಫ್ ಮಾಡಲಾಗುತ್ತದೆ” ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಭಾಧ್ಯಕ್ಷರು, “ನೀವು ಮಾತನಾಡಲು ಎದ್ದು ನಿಂತಾಗ ನಿಮ್ಮ ಮೈಕ್ ಎಂದಿಗೂ ಆಫ್ ಆಗುವುದಿಲ್ಲ. ಹಳೆಯ ಸಂಸತ್ತಿನಲ್ಲೂ ಸರೀ, ಹೊಸ ಸಂಸತ್ತಿನಲ್ಲೂ ಸರೀ ಇದೇ ಪದ್ಧತಿಯನ್ನು ಮುಂದುವರಿಸಿಕೊಂಡು ಬಂದಿರುತ್ತೇವೆ” ಎಂದರು.

ಮುಂದುವರಿದು ಮಾತನಾಡಿದ ರಾಹುಲ್ ಗಾಂಧಿ, “ಅಯೋಧ್ಯೆ ಕ್ಷೇತ್ರದಿಂದ ಸ್ಪರ್ಧಿಸಲು ಮೋದಿ ಎರಡು ಬಾರಿ ಪ್ರಯತ್ನಿಸಿದ್ದರು. ಆದರೆ, ‘ಅಯೋಧ್ಯೆಯಲ್ಲಿ ಸ್ಪರ್ಧಿಸಬೇಡಿ, ಜನ ಸೋಲಿಸುತ್ತಾರೆ’ ಎಂದು ವಿಶ್ಲೇಷಕರು ಎಚ್ಚರಿಸಿದರು. ಪ್ರಧಾನಿ ಮೋದಿ ಅವರು ಬಿಜೆಪಿ ಸಂಸದರನ್ನು ಹೆದರಿಸುವ ರೀತಿಯಲ್ಲಿ ಇದ್ದಾರೆ.

ರಾಮಮಂದಿರ ಉದ್ಘಾಟನೆಯಾದಾಗ ಅಂಬಾನಿ ಮತ್ತು ಅದಾನಿ ಮಾತ್ರ ಅಲ್ಲಿದ್ದರು; ಸಣ್ಣ ವ್ಯಾಪಾರಿಗಳನ್ನು ಬೀದಿಗೆ ಎಸೆದರು. ಅಯೋಧ್ಯೆ ಜನರ ಭೂಮಿಯನ್ನು ಕಸಿದುಕೊಂಡರು; ಮನೆಗಳನ್ನು ಕೆಡವಲಾಯಿತು. ದೇವಸ್ಥಾನದ ಉದ್ಘಾಟನಾ ಸಮಾರಂಭಕ್ಕೆ ಸ್ಥಳೀಯರು ಯಾರುಕೂಡ ಬಂದಿರಲಿಲ್ಲ. ಹಾಗಾಗಿಯೇ ಅಯೋಧ್ಯೆಯ ಜನತೆ ಬಿಜೆಪಿಗೆ ಉತ್ತಮ ತೀರ್ಪು ನೀಡಿದ್ದಾರೆ” ಎಂದರು.

ಆಗ ಮತ್ತೊಮ್ಮೆ ಎದ್ದು ನಿಂತ ಪ್ರಧಾನಿ ಮೋದಿ, “ಸಂವಿಧಾನ ಏನು ಹೇಳುತ್ತದೋ ಅದನ್ನು ಪಾಲಿಸುತ್ತೇನೆ” ಎಂದರು. “ವಿರೋಧ ಪಕ್ಷದ ನಾಯಕನನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬುದನ್ನು ಪ್ರಜಾಪ್ರಭುತ್ವ ಮತ್ತು ಸಂವಿಧಾನ ನನಗೆ ಕಲಿಸಿದೆ. ರಾಹುಲ್‌ಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಕಲಿಸಬೇಕು” ಎಂದರು.

ಮತ್ತೇ ಎದ್ದು ನಿಂತು ಮಾತನಾಡಿದ ರಾಹುಲ್ ಗಾಂಧಿ, “ನೀಟ್ ಪರೀಕ್ಷೆ ಶ್ರೀಮಂತರ ಆಯ್ಕೆಯಾಗಿದೆ. ನೀಟ್ ಪರೀಕ್ಷೆಯ ಮೂಲಕ ವೈದ್ಯಕೀಯ ಶಿಕ್ಷಣ ವ್ಯಾಪಾರವಾಗಿದೆ. ನೀವು ಎಲ್ಲಾ ವೃತ್ತಿಪರ ಪರೀಕ್ಷೆಗಳನ್ನು ವಾಣಿಜ್ಯ ಮಾದರಿ ಪರೀಕ್ಷೆಗಳನ್ನಾಗಿ ಮಾಡಿದ್ದೀರಿ.

7 ವರ್ಷಗಳಲ್ಲಿ 70 ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಕಾಂಗ್ರೆಸ್‌ಗೆ ನಿಮ್ಮನ್ನು ಕಂಡು ಹೆದರಿಕೆಯಿಲ್ಲ. ಆದರೆ ನೀವು ಕಾಂಗ್ರೆಸ್‌ಗೆ ಹೆದರುತ್ತಿದ್ದೀರಿ. ನೀಟ್‌ ಪರೀಕ್ಷೆಯಲ್ಲಿ ಒಬ್ಬರು ‘ಟಾಪರ್’ ಆಗಬಹುದು. ಆದರೆ, ಅವರಲ್ಲಿ ಹಣವಿಲ್ಲದಿದ್ದರೆ ವೈದ್ಯಕೀಯ ಶಿಕ್ಷಣ ಓದಲು ಸಾಧ್ಯವಿಲ್ಲ.

ಇದನ್ನು ಶ್ರೀಮಂತ ಮಕ್ಕಳಿಗಾಗಿ ತರಲಾಗಿದೆ. ಈ ಪರೀಕ್ಷೆಯ ಮೂಲಕ ನೀವು ಸಾವಿರಾರು ಕೋಟಿ ಗಳಿಸಿದ್ದೀರಿ. ನೀಟ್ ಪರೀಕ್ಷೆಯ ಬಗ್ಗೆ ರಾಷ್ಟ್ರಪತಿಗಳ ಭಾಷಣದಲ್ಲಿ ಒಂದೇ ಒಂದು ಮಾತು ಇರಲಿಲ್ಲ. ನೀಟ್ ಬಗ್ಗೆ ಒಂದು ದಿನದ ಚರ್ಚೆ ನಡೆಯಬೇಕು.

ನೀಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಇಡೀ ವರ್ಷ ತಯಾರಿ ನಡೆಸುತ್ತಾರೆ. ವಿದ್ಯಾರ್ಥಿಗಳಿಗೆ, ಕುಟುಂಬಗಳು ಆರ್ಥಿಕವಾಗಿ ಮತ್ತು ಭಾವನಾತ್ಮಕವಾಗಿ ಅಗತ್ಯ ಬೆಂಬಲವನ್ನು ನೀಡುತ್ತವೆ. ಆದರೆ ಇಂದು ನೀಟ್ ಪರೀಕ್ಷೆಯನ್ನೇ ನಂಬದ ವಾತಾವರಣ ನಿರ್ಮಾಣವಾಗಿದೆ.

ಈ ಪರೀಕ್ಷೆಯನ್ನು ಶ್ರೀಮಂತ ವಿದ್ಯಾರ್ಥಿಗಳಿಗಾಗಿಯೇ ಸಿದ್ಧಪಡಿಸಲಾಗಿದೆ. ನಾನು ವಿರೋಧ ಪಕ್ಷದ ನಾಯಕನಾದ ನಂತರ ನನಗೆ ಹಿಂದೆಂದೂ ಅನಿಸದ ಸಂಗತಿಯೊಂದು ಅರಿವಾಯಿತು. ಕಾಂಗ್ರೆಸ್ ಪಕ್ಷವನ್ನು ಮಾತ್ರವಲ್ಲ, ನಾನು ಇಲ್ಲಿರುವ ಪ್ರತಿ ವಿರೋಧ ಪಕ್ಷಗಳನ್ನೂ ಪ್ರತಿನಿಧಿಸುತ್ತೇನೆ. ಪ್ರತಿಪಕ್ಷಗಳ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯವನ್ನು ನಿಯೋಜಿಸಿದಾಗಲೂ ಅವರನ್ನು ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ.

ನೀವು ಸಭಾಧ್ಯಕ್ಷರ ಆಸನದಲ್ಲಿ ಕುಳಿತಾಗ ಪ್ರಧಾನಿ ಮತ್ತು ನಾನು ಕೈಕುಲುಕಿದೆವು. ನಾನು ಕೈಕುಲುಕಿದಾಗ ನೀವು ಗಂಭೀರವಾಗಿ ಕುಳಿತು ಕೈಕುಲುಕಿದ್ದೀರಿ, ಆದರೆ ಪ್ರಧಾನಿ ಕೈಕುಲುಕಿದಾಗ ನೀವು ನಮಸ್ಕರಿಸಿ ಕೈಕುಲುಕ್ಕುತ್ತೀರಿ. ಸಭಾಧ್ಯಕ್ಷರು ಯಾರಿಗೂ ತಲೆಬಾಗಬಾರದು. ಈ ಸದನದಲ್ಲಿ ಸ್ಪೀಕರ್‌ಗಿಂತ ದೊಡ್ಡವರು ಯಾರೂ ಇಲ್ಲ” ಎಂದು ಮಾತನಾಡಿದರು.

Tags: Rahul Gandhi-Parliament-Speechಅಯೋಧ್ಯೆನೀಟ್ಬಿಜೆಪಿ ಹಿಂದೂಗಳುರಾಹುಲ್ ಗಾಂಧಿರಾಹುಲ್ ಗಾಂಧಿ ಸಂಸತ್ ಭಾಷಣವಿವಾದಾತ್ಮಕ ಭಾಷಣಸಂವಿಧಾನಹಿಂಸಾತ್ಮಕರು
Previous Post

ಮೋದಿ ಸರ್ಕಾರ ತಂದ 3 ಹೊಸ ಕ್ರಿಮಿನಲ್ ಕಾನೂನುಗಳು ನಾಳೆಯಿಂದ ಜಾರಿ!

Next Post

Excellent Speech: ಹಿಂದೂ ರಾಷ್ಟ್ರಕ್ಕಾಗಿಯೇ ಸಾರ್ವಜನಿಕ ಉದ್ಧಿಮೆಗಳನ್ನು ನಾಶಪಡಿಸಲಾಗುತ್ತದೆ – ಎ.ರಾಜಾ

Next Post

Excellent Speech: ಹಿಂದೂ ರಾಷ್ಟ್ರಕ್ಕಾಗಿಯೇ ಸಾರ್ವಜನಿಕ ಉದ್ಧಿಮೆಗಳನ್ನು ನಾಶಪಡಿಸಲಾಗುತ್ತದೆ - ಎ.ರಾಜಾ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

Recent News

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS