• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

Excellent Speech: ಹಿಂದೂ ರಾಷ್ಟ್ರಕ್ಕಾಗಿಯೇ ಸಾರ್ವಜನಿಕ ಉದ್ಧಿಮೆಗಳನ್ನು ನಾಶಪಡಿಸಲಾಗುತ್ತದೆ – ಎ.ರಾಜಾ

by Dynamic Leader
01/07/2024
in ದೇಶ
0
0
SHARES
0
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್

“ಪ್ರಪಂಚದಾದ್ಯಂತ ವೃತ್ತಿ ವಿಭಜನೆ ಇದೆ; ಕಾರ್ಮಿಕರ ವಿಭಜನೆ ಭಾರತದಲ್ಲಿ ಮಾತ್ರ ಇದೆ! ಪೆರಿಯಾರ್ ಮತ್ತು ಅಂಬೇಡ್ಕರ್ ಹೇಳುವುದು ಇದನ್ನೆ” – ಎ.ರಾಜಾ

18ನೇ ಲೋಕಸಭೆಯ ಅಧಿವೇಶನ ಜೂನ್ 24 ರಿಂದ ಆರಂಭವಾಗಿದೆ. ಮೊದಲ ಎರಡು ದಿನ ಹೊಸ ಸಂಸದರ ಪ್ರಮಾಣ ವಚನ ಸ್ವೀಕರಿಸುವ ಕಾರ್ಯ ನಡೆಯಿತು. ನಂತರ ಮೂರನೇ ದಿನ ನಡೆದ ಸ್ಪೀಕರ್ ಚುನಾವಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ಮತ್ತೆ ಗೆಲುವು ಸಾಧಿಸಿದರು. ಇದರ ಬೆನ್ನಲ್ಲೇ ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ, ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಬಿಜೆಪಿ ಆಡಳಿತದ ಅರಾಜಕತೆಯನ್ನು ಬಯಲಿಗೆಳೆದವು. ಆ ಮೂಲಕ ಡಿಎಂಕೆ ಲೋಕಸಭೆ ಸಂಸದ ಹಾಗೂ ಡಿಎಂಕೆ ಪಕ್ಷದ ಸಚೇತಕ ಎ.ರಾಜಾ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿ ಮಾತನಾಡಿದ್ದಾರೆ.

ಈ ಕುರಿತು ಮಾತನಾಡಿದ ಡಿಎಂಕೆ ಸಂಸದ ಎ.ರಾಜಾ, “ಕೇಂದ್ರ ಸರ್ಕಾರವು ತನ್ನ ಆಲೋಚನೆಗಳನ್ನು ರಾಷ್ಟ್ರಪತಿ ಮತ್ತು ಸ್ಪೀಕರ್ ಭಾಷಣಗಳ ಮೂಲಕ ಹೇರಲು ಪ್ರಯತ್ನಿಸುತ್ತದೆ. ಕೇಂದ್ರ ಸರ್ಕಾರ ಫ್ಯಾಸಿಸ್ಟ್ ತತ್ವಗಳಿಗೆ ಬದ್ಧವಾಗಿದೆ. ಬಿಜೆಪಿ ಆಡಳಿತಗಾರರಿಗೆ ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡುವ ಹಕ್ಕಿಲ್ಲ. ತಮಿಳುನಾಡಿನ ಜನರು 2ನೇ ಬಾರಿ ಫ್ಯಾಸಿಸಂ ವಿರುದ್ಧ ಮತ ಚಲಾಯಿಸಿದ್ದಾರೆ.

300ಕ್ಕೂ ಹೆಚ್ಚು ಸ್ಥಾನಗಳನ್ನು ವಶಪಡಿಸಿಕೊಳ್ಳುತ್ತೇವೆ ಎಂದು ಮೋದಿ ಹೇಳಿದರು. ಆದರೆ ಜನರು ಅದನ್ನು ತಿರಸ್ಕರಿಸಿದರು. ಕೇವಲ 240 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಸರ್ಕಾರವನ್ನು ರಾಷ್ಟ್ರಪತಿ ಭಾಷಣದ ಮೂಲಕ ಬಹುಮತದ ಸರ್ಕಾರ ಎಂದು ಕರೆಯುವುದು ಹೇಗೆ? ಬಹುಮತದ ಸರ್ಕಾರ ಎಂದು ಹೇಳುವುದೇ ದೊಡ್ದ ಸುಳ್ಳು.

ನಾವು ತಮಿಳುನಾಡಿನಿಂದ ನೀಟ್ ವಿರುದ್ಧ ನಿರ್ಣಯವನ್ನು ಕಳುಹಿಸಿದ್ದೇವೆ. ಇನ್ನೂ ಒಪ್ಪಿಕೊಂಡಿಲ್ಲ. ನೀವು ತಮಿಳುನಾಡನ್ನು ಗೌರವಿಸುವುದಿಲ್ಲ. ನೀವು ನಮ್ಮನ್ನು ಕಸದ ಬುಟ್ಟಿಯಂತೆ ಕಾಣುತ್ತೀರಿ. ಅದಕ್ಕೇ ತಮಿಳುನಾಡು 40 ಕ್ಷೇತ್ರಗಳಲ್ಲೂ ನಿಮ್ಮನ್ನು ಸೋಲಿಸಿ ತಕ್ಕ ಪಾಠ ಕಲಿಸಿದೆ!

ಪ್ರಪಂಚದಾದ್ಯಂತ ವೃತ್ತಿ ವಿಭಜನೆ ಇದೆ; ಕಾರ್ಮಿಕರ ವಿಭಜನೆ ಭಾರತದಲ್ಲಿ ಮಾತ್ರ ಇದೆ! ಪೆರಿಯಾರ್ ಮತ್ತು ಅಂಬೇಡ್ಕರ್ ಹೇಳುವುದು ಇದನ್ನೆ. ಈ ವಿಭಜನೆಯನ್ನು ನೀವು ಹಿಂದೂ ಧರ್ಮದ ಹೆಸರಿನಲ್ಲಿ ಶಾಶ್ವತಗೊಳಿಸಲು ಬಯಸುತ್ತೀರಿ!

ಸಾರ್ವಜನಿಕ ವಲಯದಲ್ಲಿ ಲಾಭವಿಲ್ಲ ಎಂದು ಎಲ್ಲವನ್ನೂ ಹಾಳು ಮಾಡುತ್ತಿದ್ದೀರಿ. ಹಿಂದುಳಿದ ಮತ್ತು ಪರಿಶಿಷ್ಟ ಜಾತಿಗಳಿಗೆ ಸರ್ಕಾರಿ ಉದ್ಯೋಗಗಳು ಸಿಗುವುದಾದರೂ ಹೇಗೆ? ಮೀಸಲಾತಿಯನ್ನು ಸೂಚ್ಯವಾಗಿ ನಾಶಮಾಡಲು ನೀವು ಇದನ್ನು ಮಾಡುತ್ತಿದ್ದೀರಿ. ಏಕೆಂದರೆ ನೀವು ಮೇಲ್ಜಾತಿಗಳಿಂದ ನಡೆಸಲ್ಪಡುವ ಹಿಂದೂ ರಾಷ್ಟ್ರವನ್ನು ನಿರ್ಮಿಸಲು ಬಯಸುತ್ತಿದ್ದೀರಿ.

ನೀಟ್ ಪರೀಕ್ಷೆಯ ಮೂಲಕ, ಬಹುಮತ (Majority), ನಿರ್ವಹಣೆ (Management) ಮತ್ತು ಪಾವತಿ (Payment) ಎಂಬ ಮೂರು ವಿಭಾಗಗಳನ್ನು ಸ್ಥಾಪಿಸಲಾಗಿದೆ. ಅದಕ್ಕಾಗಿಯೇ ನಾವು ನೀಟ್ ಪದ್ಧತಿಯನ್ನು ವಿರೋಧಿಸುತ್ತಿದ್ದೇವೆ. 8 ಕೋಟಿ ಜನರನ್ನು ಪ್ರತಿನಿಧಿಸುವ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿ ಕಳುಹಿಸಿಕೊಟ್ಟ NEET ವಿನಾಯಿತಿ ನಿರ್ಧಾರವನ್ನು ಕೇಂದ್ರ ಸರ್ಕಾರ ಕಸದ ಬುಟ್ಟಿಗೆ ಎಸದಿದೆ.

ಮೊಘಲರು ಹೊರಗಿನಿಂದ ಬಂದವರು ಎನ್ನುವುದಾದರೆ, ಆರ್ಯರು ಮಾತ್ರ ಯಾರು? ಅವರೂ ಹೊರಗಿನಿಂದ ಬಂದವರೇ. ಇದಕ್ಕಾಗಿಯೇ ಅಂಬೇಡ್ಕರ್ ಅವರು ‘ದ್ರಾವಿಡರಿಗೆ ಮಾತ್ರ ಭಾರತದ ಭೂಮಿ ಮೇಲೆ ಹಕ್ಕು ಚಲಾಯಿಸುವ ಯೋಗ್ಯತೆ ಇರುವುದು’ ಎಂದು ಹೇಳಿದ್ದರು!

ನಾನು ಪೆರಿಯಾರ್ ಅವರ ದ್ರಾವಿಡ ಮಣ್ಣಿನಿಂದ ಇಲ್ಲಿಗೆ ಬಂದಿದ್ದೇನೆ. ತಮಿಳುನಾಡಿನಲ್ಲಿ ಎಲ್ಲರೂ ಸಮಾನವಾಗಿ ಬದುಕಲು ಮತ್ತು ಉನ್ನತ ಶಿಕ್ಷಣ ಪಡೆಯಲು ಪೆರಿಯಾರ್, ಅಣ್ಣಾದುರೈ ಮತ್ತು ಕರುಣಾನಿಧಿ ಕಾರಣ. ಹಾಗಾಗಿ ದೇಶಕ್ಕೆ ದ್ರಾವಿಡ ನೀತಿಗಳು ಏಕೆ ಬೇಕು ಎಂಬುದನ್ನು ಬಿಜೆಪಿ ಅರಿತುಕೊಳ್ಳಬೇಕು.

ಅದಾನಿ ವಂಚನೆ ಪ್ರಕರಣಕ್ಕೆ ಉತ್ತರಿಸಲು ಪ್ರಧಾನಿಗೆ ಬೆನ್ನೆಲುಬು ಇಲ್ಲ. ವಿರೋಧ ಪಕ್ಷಗಳು 15 ದಿನಗಳ ಕಾಲ ಕಪ್ಪು ಅಂಗಿ ಧರಿಸಿ ಸಂಸತ್ತಿಗೆ ಬಂದು ಪ್ರತಿಭಟನೆ ನಡೆಸಿದರೂ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಕ್ರಮಗಳಿಗೆ ಪ್ರತಿಕ್ರಿಯಿಸದೆ ಇಷ್ಟು ಮೌನವಾಗಿರುವ ಸರ್ಕಾರವನ್ನು ನಾನೆಂದೂ ನೋಡಿಲ್ಲ ಎಂದು ಕಿಡಿಕಾರಿದ್ದಾರೆ.

Tags: A.RajaDMK MinisterExcellent Speechಅತ್ಯುತ್ತಮ ಭಾಷಣಎ.ರಾಜಾಡಿಎಂಕೆ ಸಂಸದದ್ರಾವಿಡನೀಟ್ ಪರೀಕ್ಷೆ
Previous Post

ಬಿಜೆಪಿಯ ಹಿಂದೂಗಳು ಹಿಂಸಾತ್ಮಕರು… ರಾಹುಲ್ ವಿವಾದಾತ್ಮಕ ಭಾಷಣದಿಂದ ಸಂಸತ್‌ನಲ್ಲಿ ಕೋಲಾಹಲ!

Next Post

ರಾಹುಲ್ ಗಾಂಧಿಯಂತೆ ವರ್ತಿಸಬೇಡಿ.. ಎನ್‌ಡಿಎ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿ ಸಲಹೆ!

Dynamic Leader

Next Post

ರಾಹುಲ್ ಗಾಂಧಿಯಂತೆ ವರ್ತಿಸಬೇಡಿ.. ಎನ್‌ಡಿಎ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿ ಸಲಹೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS