• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ವಿದೇಶ

ಬಾಂಗ್ಲಾದೇಶ ಗಲಭೆ ಹಿಂದೆ ಚೀನಾ, ಐಎಸ್‌ಐ ಕೈವಾಡ: ಭಾರತೀಯ ಗುಪ್ತಚರ ಮೂಲಗಳಿಂದ ಮಾಹಿತಿ!

by Dynamic Leader
07/08/2024
in ವಿದೇಶ
0
0
SHARES
0
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್ 

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದಂತೆಯೇ ಬಾಂಗ್ಲಾದೇಶದಲ್ಲಿ ಮುಸ್ಲಿಂ ಸಂಪ್ರದಾಯವಾದಿ ಆಡಳಿತವನ್ನು ಸ್ಥಾಪಿಸಲು ಪಾಕಿಸ್ತಾನದ ಐಎಸ್‌ಐ ಸಕ್ರಿಯವಾಗಿ ಪ್ರಯತ್ನಿಸುತ್ತಿದೆ!

ಹಿಂದೂ ಮಹಾಸಾಗರವು ವಿಶ್ವದ 3ನೇ ಅತಿದೊಡ್ಡ ಸಾಗರವಾಗಿದೆ. ಅಂತರರಾಷ್ಟ್ರೀಯ ಕಚ್ಚಾ ತೈಲ ವ್ಯಾಪಾರದಲ್ಲಿ ಶೇ.80ರಷ್ಟು ಮತ್ತು ಅಂತಾರಾಷ್ಟ್ರೀಯ ಸರಕು ವ್ಯಾಪಾರದಲ್ಲಿ ಶೇ.40ರಷ್ಟು  ಈ ಕಡಲ ಪ್ರದೇಶದ ಮೂಲಕವೇ ನಡೆಯುತ್ತದೆ. ಪ್ರಸ್ತುತ ಈ ಪ್ರದೇಶದಲ್ಲಿ ಭಾರತ ಪ್ರಾಬಲ್ಯ ಹೊಂದಿದೆ.

ಇದಕ್ಕೆ ಸವಾಲೆಸೆಯಲು ಚೀನಾ ‘ಒಂದು ರಸ್ತೆ, ಒಂದು ವಲಯ’ ಉಪಕ್ರಮದ ಅಡಿಯಲ್ಲಿ ಭಾರತದ ನೆರೆಯ ರಾಷ್ಟ್ರಗಳನ್ನು ತನ್ನ ಮಿತ್ರರಾಷ್ಟ್ರಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ. ಇದರ ಭಾಗವಾಗಿ, ಬಾಂಗ್ಲಾದೇಶದ ಬಂದರುಗಳು ಮತ್ತು ಮೂಲಸೌಕರ್ಯ ಯೋಜನೆಗಳಲ್ಲಿ ಚೀನಾ ಭಾರಿ ಹೂಡಿಕೆ ಮಾಡಿಕೊಂಡು ಬರುತ್ತಿದೆ. ಆದರೂ, ಆ ದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೇ ಆಧ್ಯತೆ ನೀಡುತ್ತಿದ್ದರು.

ಇದರಿಂದಾಗಿ ಬಾಂಗ್ಲಾದೇಶದ ವ್ಯಾಪಾರದಲ್ಲಿ ಭಾರತದ ಕೈ ಮೇಲಾಗಿದೆ. ಬಾಂಗ್ಲಾದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭಾರತೀಯ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. 19,000ಕ್ಕೂ ಹೆಚ್ಚು ಭಾರತೀಯರು ಬಾಂಗ್ಲಾದಲ್ಲಿ ಕೆಲಸ ಮಾಡುತ್ತಿದ್ದಾರೆ.

ಶೇಖ್ ಹಸೀನಾ ಇತ್ತೀಚೆಗೆ ಹೇಳಿದಂತೆ, “ಬಾಂಗ್ಲಾದೇಶದ ತೀಸ್ತಾ ನದಿ ಅಭಿವೃದ್ಧಿ ಯೋಜನೆಯನ್ನು ಕಾರ್ಯಗತಗೊಳಿಸಲು ಚೀನಾ ಉತ್ಸುಕವಾಗಿದೆ. ಆದರೆ, ಈ ಯೋಜನೆಯನ್ನು ಭಾರತಕ್ಕೆ ಹಸ್ತಾಂತರಿಸಲಾಗುವುದು” ಎಂದು ಹೇಳಿದರು.

ಸತತವಾಗಿ ಭಾರತದ ಪರವಾಗಿದ್ದ ಶೇಖ್ ಹಸೀನಾ ಆಡಳಿತವನ್ನು ಕಿತ್ತೊಗೆಯಲು ಚೀನಾ ನಿರ್ಧರಿಸಿತು. ಇದಕ್ಕಾಗಿ ಆ ದೇಶವು ಪಾಕಿಸ್ತಾನದ ಐಎಸ್‌ಐ ಜೊತೆ ರಹಸ್ಯವಾಗಿ ಕೈ ಜೋಡಿಸಿದೆ. ಬಾಂಗ್ಲಾದೇಶಕ್ಕೆ ನುಸುಳಲು ಮತ್ತು ಗಲಭೆಗಳನ್ನು ಎಬ್ಬಿಸಲು ಐಎಸ್‌ಐ ಗೂಢಚಾರರಿಗೆ ಚೀನಾ ಉದಾರವಾಗಿ ಹಣವನ್ನು ನೀಡಿದೆ ಎಂದು ವರದಿಗಳಾಗಿದೆ.

ಈ ಕುರಿತು ಹೇಳುತ್ತಿರುವ ಭಾರತೀಯ ಗುಪ್ತಚರ ಮೂಲಗಳು, ‘ಜಮಾತ್-ಎ-ಇಸ್ಲಾಮಿ ಎಂಬ ಸಂಪ್ರದಾಯವಾದಿ ಸಂಘಟನೆ ಬಾಂಗ್ಲಾದೇಶದಲ್ಲಿ ಕಾರ್ಯನಿರ್ವಹಿಸುತ್ತಿದೆ. ಅದರ ವಿದ್ಯಾರ್ಥಿ ಸಂಘಕ್ಕೆ ಸೇರಿದ ಇಸ್ಲಾಮಿ ಛತ್ರ ಶಿಬಿರ್ (Islami Chhatra Shibir) ವಿದ್ಯಾರ್ಥಿಗಳಿಗೆ ಪಾಕಿಸ್ತಾನದ ಐಎಸ್‌ಐ (ISI) ಕಳೆದ ಕೆಲವು ವರ್ಷಗಳಿಂದ ವಿಶೇಷ ತರಬೇತಿ ನೀಡುತ್ತಿದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಶಿಬಿರಗಳಲ್ಲಿ ಅವರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗುತ್ತಿದೆ.

ಐಎಸ್‌ಐ ಮೂಲಕ ತರಬೇತಿ ಪಡೆದ ಇವರು, ಬಾಂಗ್ಲಾದೇಶ ವಿದ್ಯಾರ್ಥಿ ಸಂಘದ ಪ್ರತಿಭಟನೆಯನ್ನು ಗಲಭೆಯಾಗಿ ಪರಿವರ್ತಿಸಿ ಅಪಾರ ಪ್ರಮಾಣದ ಪ್ರಾಣಹಾನಿ ಮಾಡಿದ್ದಾರೆ. ಇದಕ್ಕಾಗಿ ಚೀನಾ ಐಎಸ್‌ಐಗೆ ಭಾರಿ ಮೊತ್ತದ ಹಣ ನೀಡಿದೆ.

ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ: ಬಾಂಗ್ಲಾದೇಶದ ಪ್ರಮುಖ ವಿರೋಧ ಪಕ್ಷವಾದ ಬಿಎನ್‌ಪಿಯ (Bangladesh Nationalist Party) ನಾಯಕ ತಾರಿಕ್ ರೆಹಮಾನ್ (Tarique Rahman) ಅವರು ಬ್ರಿಟನ್ ರಾಜಧಾನಿ ಲಂಡನ್‌ನಲ್ಲಿ ವಾಸಿಸುತ್ತಿದ್ದಾರೆ. ಅವರು ಮತ್ತು ಹಿರಿಯ ಐಎಸ್‌ಐ ಮುಖ್ಯಸ್ಥ ಜಾವಿದ್ ಇತ್ತೀಚೆಗೆ ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಭೇಟಿಯಾಗಿದ್ದರು. ಆಗ ಶೇಖ್ ಹಸೀನಾ ಅವರ ಆಡಳಿತವನ್ನು ಕಿತ್ತೊಗೆಯಲು ಸಂಚು ರೂಪಿಸಲಾಗಿದೆ.

ಬಿಎನ್‌ಪಿ ಮುಖ್ಯಸ್ಥ ತಾರಿಕ್ ರೆಹಮಾನ್, ಮುಂಬೈನ ಭೂಗತ ಲೋಕ ಪಾತಕಿ ದಾವೂದ್ ಇಬ್ರಾಹಿಂ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ. ದುಬೈನಲ್ಲಿರುವ ದಾವೂದ್ ಇಬ್ರಾಹಿಂ ಆಸ್ತಿಯನ್ನು ತಾರಿಕ್ ರೆಹಮಾನ್ ಖರೀದಿಸಿದ್ದಾರೆ.

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಇತ್ತೀಚೆಗೆ 10 ಟ್ರಕ್‌ಗಳಲ್ಲಿ ಸಾಗಿಸಲಾಗಿದ್ದ ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಶಸ್ತ್ರಾಸ್ತ್ರಗಳನ್ನು ಇಸ್ಲಾಮಿ ಛತ್ರ ಶಿಬಿರ್ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳಿಗೆ ಕಳುಹಿಸಲಾಗಿತ್ತು.

ಇದರ ಹಿಂದೆ ತಾರಿಕ್ ರೆಹಮಾನ್ ಮತ್ತು ದಾವೂದ್ ಇಬ್ರಾಹಿಂ ಇದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದಂತೆಯೇ ಬಾಂಗ್ಲಾದೇಶದಲ್ಲಿ ಮುಸ್ಲಿಂ ಸಂಪ್ರದಾಯವಾದಿ ಆಡಳಿತವನ್ನು ಸ್ಥಾಪಿಸಲು ಪಾಕಿಸ್ತಾನದ ಐಎಸ್‌ಐ ಸಕ್ರಿಯವಾಗಿ ಪ್ರಯತ್ನಿಸುತ್ತಿದೆ’ ಎಂದು ಭಾರತೀಯ ಗುಪ್ತಚರ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.

Tags: Bangladesh Violenceಇಸ್ಲಾಮಿ ಛತ್ರ ಶಿಬಿರ್ಐಎಸ್‌ಐಐಎಸ್‌ಐ ಕೈವಾಡಚಿನಾಚೀನಾ-ಐಎಸ್‌ಐ ಕೈವಾಡಜಮಾತ್-ಎ-ಇಸ್ಲಾಮಿತಾಲಿಬಾನ್ ಆಡಳಿತಪಾಕಿಸ್ತಾನಬಾಂಗ್ಲಾದೇಶಬಾಂಗ್ಲಾದೇಶ ಗಲಭೆ
Previous Post

ವಕ್ಫ್ ಬೋರ್ಡ್ ಸ್ವತಂತ್ರವನ್ನು ಮೋಟಕುಗೊಳಿಸುವ ಕೇಂದ್ರ ಸರಕಾರದ ಯೋಜನೆಗೆ KMU ವಿರೋಧ!

Next Post

82 ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯಡಿಯೂರಪ್ಪಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ!

Dynamic Leader

Next Post

82 ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯಡಿಯೂರಪ್ಪಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS