• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಉದ್ಯೋಗ

ಸರ್ಕಾರದ ಆಡಳಿತವನ್ನು ಆರ್‌ಎಸ್‌ಎಸ್‌ ಅಧೀನಕ್ಕೆ ಕೋಡುವ ಬಿಜೆಪಿಯ ಷಡ್ಯಂತ್ರವನ್ನು ವಿಫಲಗೊಳಿಸಬೇಕು: ವೈಕೋ

by Dynamic Leader
19/08/2024
in ಉದ್ಯೋಗ, ದೇಶ, ಶಿಕ್ಷಣ
0
0
SHARES
0
VIEWS
Share on FacebookShare on Twitter

ಚೆನ್ನೈ: ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯವನ್ನು ದುರ್ಬಲಗೊಳಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ಅಲ್ಲದೇ ಸರ್ಕಾರದ ಆಡಳಿತವನ್ನು ಆರ್‌ಎಸ್‌ಎಸ್‌ ಅಧೀನಕ್ಕೆ ನೀಡವ ಬಿಜೆಪಿ ಸರ್ಕಾರದ ಷಡ್ಯಂತ್ರವನ್ನು ವಿಫಲಗೊಳಿಸಬೇಕು” ಎಂದು ಎಂಡಿಎಂಕೆ ಪ್ರಧಾನ ಕಾರ್ಯದರ್ಶಿ ವೈಕೋ ಹೇಳಿದ್ದಾರೆ.

ಈ ಕುರಿತು, ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, “ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ, ಸಾಮಾಜಿಕ ನ್ಯಾಯವನ್ನು ದುರ್ಬಲಗೊಳಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ಸರ್ಕಾರಿ ಆಡಳಿತದಲ್ಲಿ ಆರ್‌ಎಸ್‌ಎಸ್‌ ಹಿನ್ನೆಲೆಯಿಂದ ಬಂದ ಖಾಸಗಿ ಕಂಪನಿಗಳ ಉನ್ನತ ಅಧಿಕಾರಿಗಳನ್ನು ಸರ್ಕಾರಿ ಕಾರ್ಯದರ್ಶಿಗಳಾಗಿ, ಮತ್ತು ಉನ್ನತ ಅಧಿಕಾರಿಗಳಾಗಿ ನೇಮಕ ಮಾಡಿಕೊಳ್ಳುವ ಯೋಜನೆಯನ್ನು ಜಾರಿಗೊಳಿಸುತ್ತಿದೆ.

ಖಾಸಗಿ ವಲಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು (CEO) ನೇರವಾಗಿ ಐಎಎಸ್ ಅಧಿಕಾರಿಗಳಾಗಿ ನೇಮಿಸಿಕೊಳ್ಳುವ ಯೋಜನೆಯನ್ನು 2018ರಲ್ಲಿ ಪರಿಚಯಿಸಲಾಯಿತು. ಈ ಯೋಜನೆಯಲ್ಲಿ ಇದುವರೆಗೆ 63 ಜನರನ್ನು ನೇಮಿಸಲಾಗಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇತ್ತೀಚೆಗೆ ಇದೇ ಯೋಜನೆಯಡಿಯಲ್ಲಿ ಇನ್ನೂ 45 ಜನರನ್ನು ನೇಮಿಸಿಕೊಳ್ಳಲು ಜಾಹೀರಾತನ್ನು ಬಿಡುಗಡೆ ಮಾಡಿದೆ.

ಈ ಯೋಜನೆಯು ಕಾನೂನು ಉಲ್ಲಂಘನೆ ಮಾತ್ರವಲ್ಲ, ಸಂವಿಧಾನದ ಮೇಲಿನ ಕ್ರೂರ ದಾಳಿಯೂ ಆಗಿದೆ. ಈ ಮೂಲಕ ಸರ್ಕಾರದ ಆಡಳಿತವನ್ನು ಸಂಪೂರ್ಣವಾಗಿ ಆರ್‌ಎಸ್‌ಎಸ್‌ ಅಧೀನಕ್ಕೆ ಕೊಡಲು ಸಂಚು ರೂಪಿಸುತ್ತಿರುವುದು ಅತ್ಯಂತ ಖಂಡನೀಯವಾದದ್ದು. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿನ ಪ್ರಮುಖ ಹುದ್ದೆಗಳಿಗೆ ‘ಲ್ಯಾಟರಲ್ ಎಂಟ್ರಿ’ ಮೂಲಕ ಮಾಡುತ್ತಿರುವ ನೇಮಕಾತಿಯಿಂದ SC, ST, OBC ಪಂಗಡದ ಮೀಸಲಾತಿಯನ್ನು ಕೇಂದ್ರ ಸರ್ಕಾರ ಬಹಿರಂಗವಾಗಿ ಕಿತ್ತುಕೊಳ್ಳುತ್ತಿದೆ.

ದೇಶದ ಅತ್ಯುನ್ನತ ಅಧಿಕಾರ ಸೇರಿದಂತೆ ಎಲ್ಲ ಉನ್ನತ ಹುದ್ದೆಗಳಲ್ಲಿ ಪರಿಶಿಷ್ಟ ವರ್ಗದವರಿಗೆ ಸೂಕ್ತ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಹೇಳುತ್ತಲೇ ಬಂದಿದ್ದೇನೆ. ಇದನ್ನು ಸುಧಾರಿಸುವ ಬದಲು, ‘ಲ್ಯಾಟರಲ್ ಎಂಟ್ರಿ’ ಮೂಲಕ ಪರಿಶಿಷ್ಟ ವರ್ಗದವರನ್ನು ಉನ್ನತ ಸ್ಥಾನಗಳಿಂದ ಇನ್ನಷ್ಟು ದೂರ ತಳ್ಳಲಾಗುತ್ತಿದೆ.

ಈ ಕಾರ್ಯವು UPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಪ್ರತಿಭಾವಂತ ಯುವಕರ ಹಕ್ಕುಗಳನ್ನು ಕಿತ್ತುಕೊಳ್ಳುವ ಕಾರ್ಯವಾಗಿದೆ. ಮತ್ತು ‘ಇದು ತುಳಿತಕ್ಕೊಳಗಾದವರ ಸಾಮಾಜಿಕ ನ್ಯಾಯದ ಮೇಲೆ ಕೇಂದ್ರ ಸರ್ಕಾರದ ದಾಳಿಯಾಗಿದೆ’ ಎಂದು ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿರುವುದು ಗಮನಿಸಬೇಕಾದ ಸಂಗತಿ.

“ಇಂಡಿಯಾ ಮೈತ್ರಿಕೂಟ”ದ ಪಕ್ಷಗಳು ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳು, ಒಗ್ಗಟ್ಟಿನಿಂದ ಹೋರಾಡುವ ಮೂಲಕ, ಸರ್ಕಾರದ ಆಡಳಿತವನ್ನು ಆರ್‌ಎಸ್‌ಎಸ್‌ ಅಧೀನಕ್ಕೆ ನೀಡಲು ಮುಂದಾಗುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ಷಡ್ಯಂತ್ರವನ್ನು ವಿಫಲಗೊಳಿಸಬೇಕು” ಎಂದು ಹೇಳಿದ್ದಾರೆ.

Tags: UPSCಆರ್‌ಎಸ್‌ಎಸ್‌ಇಂಡಿಯಾ ಮೈತ್ರಿಕೂಟಐಎಎಸ್ ಅಧಿಕಾರಿಬಿಜೆಪಿಬಿಜೆಪಿ ಸರ್ಕಾರಮೋದಿರಾಹುಲ್ ಗಾಂಧಿಲ್ಯಾಟರಲ್ ಎಂಟ್ರಿವೈಕೋಷಡ್ಯಂತ್ರಸರ್ಕಾರಿ ಆಡಳಿತ
Previous Post

ಪ್ರಸಿದ್ಧ ಕಂಪನಿಗಳ ಮಸಾಲಾ ಪದಾರ್ಥಗಳು ಶೇ.12% ಕಳಪೆಯಿಂದ ಕೂಡಿದೆ? ಕೇಂದ್ರ ಆಹಾರ ಸುರಕ್ಷತೆ ಸಚಿವಾಲಯ

Next Post

MUDA: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್; ಆಗಸ್ಟ್ 29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್!

Next Post

MUDA: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್; ಆಗಸ್ಟ್ 29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS