• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಮುಡಾ ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಭಂಗ ಅನುಭವಿಸುವುದು ಗ್ಯಾರಂಟಿ: ಸಿದ್ದರಾಮಯ್ಯ

by Dynamic Leader
24/09/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ ಎಂದು ಇಂದು ನಡೆದ ಮಾಧ್ಯಮ ಘೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.

ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.

ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.

ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ.

ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.

ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.

ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.

ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.

ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ.

ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ಮನವಿ ಮಾಡುತ್ತೇನೆ.

ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.

ಇದೇ ಬಿಜೆಪಿ, ಜೆಡಿಎಸ್  ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ.

ಇಂದು ನನ್ನ ವಿರುದ್ಧ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್‌ಸಿಎಸ್‌ಪಿ/ಟಿಎಸ್‌‌ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.

ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು.

ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ.

ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ.

ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ. ಎಂದು ಹೇಳಿದರು.

Tags: 19 ಪಿಸಿ ಕಾಯಿದೆಆಪರೇಷನ್ ಕಮಲಕರ್ನಾಟಕ ಹೈಕೋರ್ಟ್ಕಾಂಗ್ರೆಸ್ ಹೈಕಮಾಂಡ್ಕಾನೂನು ಹೋರಾಟಬಿಜೆಪಿ ಜೆಡಿಎಸ್ ಕುತಂತ್ರಮುಡಾ ಪ್ರಕರಣರಾಜಭವನ ದುರ್ಬಳಕೆಸಿದ್ದರಾಮಯ್ಯಸುಳ್ಳು ಆರೋಪಸೆಕ್ಷನ್ 17 ಎಸೆಕ್ಷನ್ 218 ಬಿಎನ್ಎಸ್ಎಸ್
Previous Post

ಹೋರಾಟ ಮುಂದುವರೆಯಲಿದೆ, ಸರ್ಕಾರವನ್ನು ಅಸ್ಥಿರಗೊಳಿಸುವ ರಾಜ್ಯಪಾಲರ ಪ್ರಯತ್ನಕ್ಕೆ, ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೇ ಇಲ್ಲ ಎಂದ ಕಾಂಗ್ರೆಸ್!

Next Post

ತಿರುಪತಿ ಲಡ್ಡು ವಿಚಾರ: ಪವನ್ ಕಲ್ಯಾಣ್‌ಗೆ ಮತ್ತೆ ಪ್ರತಿಕ್ರಿಯಿಸಿದ ಪ್ರಕಾಶ್ ರಾಜ್!

Next Post

ತಿರುಪತಿ ಲಡ್ಡು ವಿಚಾರ: ಪವನ್ ಕಲ್ಯಾಣ್‌ಗೆ ಮತ್ತೆ ಪ್ರತಿಕ್ರಿಯಿಸಿದ ಪ್ರಕಾಶ್ ರಾಜ್!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

Recent News

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS