• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ರಾಜಕೀಯ ಪಕ್ಷಗಳು ನೈತಿಕ ರಾಜಕಾರಣದಿಂದ ದೂರವಾಗುತ್ತಿರುವುದು ಅಪಾಯಕಾರಿ: ವೆಲ್ಫೇರ್ ಪಾರ್ಟಿ

by Dynamic Leader
28/10/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಪ್ರಸಕ್ತ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದಾಗ ರಾಜಕೀಯ ಪಕ್ಷಗಳು ತತ್ವ ಸಿದ್ದಾಂತವನ್ನು ಸಂಪೂರ್ಣವಾಗಿ ಮರೆತು ಬಿಟ್ಟಿವೆ. ರಾಜಕೀಯದಲ್ಲಿ ನೈತಿಕತೆ ಮಾಯವಾಗುತ್ತಿದೆ. ಇದು ದೇಶದ ಭವಿಷ್ಯಕ್ಕೆ ಅತ್ಯಂತ ಅಪಾಯಕಾರಿ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಅಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಕಳವಳ ವ್ಯಕ್ತ ಪಡಿಸಿದ್ದಾರೆ.

ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪ್ರಕ್ರಿಯೆ ಅತಿಯಾಗುತ್ತದೆ ಎಂಬುದು ವಾಸ್ತವ ಸತ್ಯ. ಪ್ರಜೆಗಳು ನಮ್ಮನ್ನು ಗಮನಿಸುತ್ತಿದ್ದಾರೆ ಎಂಬ ಪ್ರಜ್ಞೆ ರಾಜಕೀಯ ಪಕ್ಷಗಳು ಮರೆತಿದ್ದಾರೆ. ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಸಿದ್ದಾಂತಗಳಿಗೆ ಯಾವುದೇ ಬೆಲೆ ಇಲ್ಲ ಎನ್ನಿಸುತ್ತಿದೆ. ಟಿಕೆಟ್ ಸಿಕ್ಕರೆ ಒಂದು ಪಕ್ಷ; ಇಲ್ಲದಿದ್ದರೆ ಇನ್ನೊಂದು ಪಕ್ಷ. ಬೆಳಿಗ್ಗೆ ಒಂದು ಪಕ್ಷ, ಸಂಜೆ ಒಂದು ಪಕ್ಷ ಎಂದು ಅಭ್ಯರ್ಥಿಗಳು ಹೀಗೆ ಜಿಗಿಯುತ್ತಾ ಹೋಗುತ್ತಾರೆ. ತತ್ವ ಸಿದ್ಧಾಂತದ ಬಗ್ಗೆ ಮಾತನಾಡುವ ಪಕ್ಷಗಳು, ಅಂತಹ ಅಭ್ಯರ್ಥಿಗಳಿಗೆ ಟಿಕೀಟ್ ನೀಡಿ ಪ್ರೋತ್ಸಾಹಿಸಿ ಇಂಥ ಅನೈತಿಕತೆಗೆ ಕುಮ್ಮಕ್ಕು ನೀಡುತ್ತಿವೆ.

ಎಲ್ಲಿದ್ದರೂ ಹೇಗಿದ್ದರೂ ಜನ ಓಟು ಹಾಕುತ್ತಾರೆ ಎಂಬ ಭಾವನೆ ಅವರಲ್ಲಿ ಅಡಕವಾಗಿವೆ. ಅಧಿಕಾರಕ್ಕಾಗಿ ಪಕ್ಷಾಂತರ ಪ್ರಕ್ರಿಯೆಯಲ್ಲಿ ಯಾವ ಪಕ್ಷವೂ ಕಡಿಮೆಯಿಲ್ಲ. ಆಪರೇಷನ್ ಕಮಲ/ಹಸ್ತ ಎಂಬ ಹೆಸರಲ್ಲಿ ನಡೆಯುವ ರಾಜಕೀಯ ಅನೈತಿಕತೆಗೂ ಇಲ್ಲಿ ಕೊರತೆಯಿಲ್ಲ. ಕುಟುಂಬ ರಾಜಕಾರಣದಲ್ಲೂ ಯಾರೂ ಕಮ್ಮಿಯಿಲ್ಲ.

ಪ್ರಿಯಾಂಕಾ ಗಾಂಧಿ ವಯನಾಡ್ ನಲ್ಲಿ ಚುನಾವಣಾ ಅಖಾಡಕ್ಕಿಳಿದಿರುವಾಗ ಅದರ ವಿರುದ್ದ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವಂಶಾಡಳಿತದ ಬಗ್ಗೆ ತೀವ್ರ ವಾಗ್ದಾಳಿ ನಡೆಸುತ್ತಾರೆ. ಆದರೆ, ಕರ್ನಾಟಕದಲ್ಲಿ ಬಿಜೆಪಿಯ ಬಸವರಾಜ್ಬೊ ಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಹಾಗೂ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಲ್ಲಿರುವುದು ಅವರ ಕಣ್ಣಿಗೆ ಕಾಣಿಸುದಿಲ್ಲ. ಇತರ ಪಕ್ಷಗಳ ಕಡೆಗೆ ಬಹಿರಂಗವಾಗಿ ಬೆರಳು ತೋರಿಸುವಾಗ ತಮ್ಮೆಡೆಗೆ ಉಳಿದ ಬೆರಳು ತೋರುತ್ತಿರುವ ಬಗ್ಗೆ ಅವರು ಚಿಂತಿಸುವುದಿಲ್ಲ. ಯಡಿಯೂರಪ್ಪ ಪುತ್ರನಿಗೆ ರಾಜ್ಯದ ಬಿಜೆಪಿ ಅಧ್ಯಕ್ಷ ಪಟ್ಟ ಒಲಿದು ಬಂದಾಗ ಇವರು ಕಣ್ಣು ಮುಚ್ಚಿ ಕುಳಿತಿದ್ದರು.

ದೇಶದಲ್ಲಿ ಜಾತ್ಯತೀತ ಪಕ್ಷ ಎಂದು ಗುರುತಿಸಲ್ಪಡುವ ಕಾಂಗ್ರೆಸ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಪುತ್ತೂರಿನಲ್ಲಿ ವಿಶ್ವಹಿಂದೂ ಪರಿಷತ್ ನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಇದರ ವಿರುದ್ದ ಕಾಂಗ್ರೆಸ್ ನಿಂದಲೂ ಅಪಸ್ವರ ಕೇಳಿ ಬರುತ್ತಿಲ್ಲ. ಶಿಸ್ತು ಕ್ರಮ, ಶೋಕಾಸ್ ನೊಟೀಸ್ ಎಚ್ಚರಿಕೆ ಯಾವುದೂ ಕಂಡು ಬರುತ್ತಿಲ್ಲ. ಪ್ರತಿಯೊಂದು ಪಕ್ಷಗಳಿಗೂ ಒಂದು ತತ್ವ ಸಿದ್ಧಾಂತ ಅನ್ನೋದು ಇರುತ್ತದೆ. ಆದರೆ, ಅದನ್ನು ಗಾಳಿಗೆ ತೂರಲಾಗುತ್ತದೆ.  ಅಧಿಕಾರ, ಹಣದ ಮುಂದೆ ಯಾವ ತತ್ವ ಸಿದ್ದಾಂತವೂ ಗಣನೆಗೆ ಬರುವುದಿಲ್ಲ.

ರಾಜಕೀಯ ಪಕ್ಷಗಳು ನೈತಿಕ ರಾಜಕಾರಣದಿಂದ ದೂರ ಸರಿಯುತ್ತಿರುವುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಅಪಾಯಕಾರಿಯಾಗಿದೆ. ಇದನ್ನು ತಡೆಗಟ್ಟಲು ಪ್ರಜ್ಞಾವಂತ ನಾಗರಿಕರು ಮುಂದೆ ಬರಬೇಕೆಂದು ಅವರು ಮನವಿ ಮಾಡಿದ್ದಾರೆ.

Tags: Family PoliticsKarnataka By PollsTaher HussianWelfare Partyಕರ್ನಾಟಕ ಉಪ ಚುನಾವಣೆಕುಟುಂಬ ರಾಜಕಾರಣತಾಹೇರ್ ಹುಸೇನ್ವೆಲ್‌ಫೇರ್ ಪಾರ್ಟಿ
Previous Post

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ; ಪ್ರವರ್ಗ 1ಕ್ಕೆ ಸೇರಿಸಲು ಸೂಕ್ತ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಆಶ್ರಯ ಸಮಿತಿ ಹೆಸರಲ್ಲಿ ಅಕ್ರಮ ಹಂಚಿಕೆ: ಕೊಳಗೇರಿ ಮಂಡಳಿಯನ್ನು ಖಂಡಿಸಿ ಪ್ರತಿಭಟನೆಗೆ ಕರೆ ನೀಡಿದ ಜನಶಕ್ತಿ ವೇದಿಕೆ.!

Dynamic Leader

Next Post

ಆಶ್ರಯ ಸಮಿತಿ ಹೆಸರಲ್ಲಿ ಅಕ್ರಮ ಹಂಚಿಕೆ: ಕೊಳಗೇರಿ ಮಂಡಳಿಯನ್ನು ಖಂಡಿಸಿ ಪ್ರತಿಭಟನೆಗೆ ಕರೆ ನೀಡಿದ ಜನಶಕ್ತಿ ವೇದಿಕೆ.!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS