• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಆಶ್ರಯ ಸಮಿತಿ ಹೆಸರಲ್ಲಿ ಅಕ್ರಮ ಹಂಚಿಕೆ: ಕೊಳಗೇರಿ ಮಂಡಳಿಯನ್ನು ಖಂಡಿಸಿ ಪ್ರತಿಭಟನೆಗೆ ಕರೆ ನೀಡಿದ ಜನಶಕ್ತಿ ವೇದಿಕೆ.!

by Dynamic Leader
29/10/2024
in ಬೆಂಗಳೂರು
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ, ನಗರೇಶ್ವರ ನಾಗೇನಹಳ್ಳಿಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ನಿರ್ಮಿಸಿರುವ ಮನೆಗಳನ್ನು ಮಂಡಳಿಯ ಕಾಯ್ದೆ-ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಮತ್ತು ಮಾಜಿ ಸಚಿವರು ಹಾಗೂ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೈರತಿ ಬಸವರಾಜು ಅವರು ಆಶ್ರಯ ಸಮಿತಿ ಹೆಸರಿನಲ್ಲಿ ಅಕ್ರಮವಾಗಿ ಇತರ ಅನುಕೂಲಸ್ಥ ವರ್ಗದವರಿಗೆ ಹಂಚಿಕೆ ಮಾಡಲು ಮುಂಗಾಗುತ್ತಿರುವುದನ್ನು ಖಂಡಿಸಿ, ನವಂಬರ್ 4 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಜನಶಕ್ತಿ ವೇದಿಕೆ ಮತ್ತು ಜನಶಕ್ತಿ ಮಹಿಳಾ ವೇದಿಕೆ ಇತರ ಸಂಘ-ಸಂಸ್ಥೆಗಳ ಸಭಾಗಿತ್ವದಲ್ಲಿ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಂಡಿದೆ. 

ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ, ನಗರೇಶ್ವರ ನಾಗೇನಹಳ್ಳಿಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, NURM-BSUP ಯೋಜನೆಯಡಿ 208 ಮನೆಗಳನ್ನು ನಿರ್ಮಿಸಿದ್ದು, ಅದರಲ್ಲಿ 166 ಮನೆಗಳನ್ನು ಮಾತ್ರ 2004ರಲ್ಲಿ ಲಾಟರಿ ಮುಖಾಂತರ ಹಂಚಿಕೆ ಮಾಡಿತ್ತು. ಹಂಚಿಕೆಯಾಗದೆ ಖಾಲಿಯಿದ್ದ 42 ಮನೆಗಳಲ್ಲಿ, ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಸವಾಗಿದ್ದ ಕೆಲವು ಬಡಕೂಲಿ ಕಾರ್ಮಿಕರು ಅನಧೀಕೃತವಾಗಿ ಬಂದು ಸೇರಿಕೊಂಡು, ನಮ್ಮನ್ನೂ ಸಕ್ರಮಗೊಳಿಸಿ ಹಂಚಿಕೆ ಪತ್ರ ನೀಡಿ ಎಂದು ಸುಮಾರು 9 ವರ್ಷಗಳಿಂದ ಮಂಡಳಿಯೊಂದಿಗೆ ಪತ್ರ ವ್ಯವಹಾರ ನಡೆಸುತ್ತಿದ್ದಾರೆ. 42 ಅನಧೀಕೃತದಾರರನ್ನು ಸಕ್ರಮ ಗೊಳಿಸುವ ಸಲುವಾಗಿ, ಮಂಡಳಿ ಈಗಾಗಲೇ ಅನಧೀಕೃತದಾರರ ಪಟ್ಟಿಯನ್ನೂ ಸಿದ್ದಪಡಿಸಿದೆ.

ವಸತಿ ಸಚಿವ ಬಿ.ಝೆಡ್.ಜಮೀರ್ ಅಹ್ಮದ್ ಖಾನ್

ಈ ಹಿನ್ನೆಲೆಯಲ್ಲಿ, ಸದರಿ ಮನೆಗಳನ್ನು ಘೋಷಿತ ಕೊಳಗೇರಿ ನಿವಾಸಿಗಳಿಗೆ ಹಂಚಿಕೆ ಮಾಡದೆ, ಅನುಕೂಲಸ್ಥ ವರ್ಗದವರಿಗೆ ಹಂಚಿಕೆ ಮಾಡಿರುವುದರ ವಿರುದ್ಧ ಜನಶಕ್ತಿ ವೇದಿಕೆ 2015ರಲ್ಲಿ ಮಾನ್ಯ ಲೋಕಾಯುಕ್ತರಲ್ಲಿ ದೂರು ದಾಖಲಿಸಿದೆ. ಪ್ರಕರಣ ಸಂಖ್ಯೆ: ಕಂಪ್ಲೆಂಟ್/ಲೋಕ್/ಬಿಸಿಡಿ/844/2015. ಸದರಿ ಪ್ರಕರಣಲ್ಲಿ ಮಾನ್ಯ ಲೋಕಾಯುಕ್ತರು, ಫಲಾನುಭವಿಗಳ ಪಟ್ಟಿಗೆ ಅನುಮೋದನೆ ನೀಡಿದ 9 ಜನರನ್ನು ಅಪರಾಧಿಗಳೆಂದು ತೀರ್ಮಾನಿಸಿ ಎಲ್ಲರಿಗೂ ಸಮನ್ಸ್ ಜಾರಿ ಮಾಡಿದ್ದಾರೆ; ಪ್ರಕರಣ ಬಾಕಿಯಿದೆ.

ಮೇಲಿನ 208 ಮನೆಗಳ ಪೈಕಿ, ಹಂಚಿಕೆ ಪಡೆದ 166 ಫಲಾನುಭವಿಗಳಲ್ಲಿ ಬಹುಪಾಲರು ಅನುಕೂಲಸ್ಥ ವರ್ಗದವರಾಗಿರುವುದರಿಂದ ಸದರಿ ಮನೆಗಳಿಗೆ ಯಾರೂ ವಾಸಕ್ಕೆ ಬರುತ್ತಿಲ್ಲ. ರಸ್ತೆ ಅಗಲೀಕರಣದಿಂದ ಮನೆಗಳನ್ನು ಕಳೆದುಕೊಂಡವರೊಂದಿಗೆ ಸೇರಿ ಸುಮಾರು 50 ಕುಟುಂಬಗಳು ಮಾತ್ರ ಇಲ್ಲಿ ವಾಸ ಮಾಡುತ್ತಿವೆ. ಅದರಲ್ಲೂ ಕೆಲವರು ಮನೆಗಳನ್ನು ಬಾಡಿಗೆಗೆ ಬಿಟ್ಟು ಹೊರಗಿನಿಂದ ಹಣ ಪಡೆಯುತ್ತಿದ್ದಾರೆ.

ಮಾಜಿ ಸಚಿವರು ಹಾಗೂ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಬಸವರಾಜು

ಮೇಲಿನಂತೆಯೇ ಸದರಿ ಪ್ರದೇಶದಲ್ಲಿ ಮತ್ತೆ PMAY-HFA ಯೋಜನೆಯಡಿ ಕೊಳಗೇರಿ ಮಂಡಳಿ 768 ಮನೆಗಳನ್ನು ನಿರ್ಮಿಸಿದ್ದು, ಅದನ್ನು ಕೂಡ ಕ್ರಮವಾಗಿ ಕೊಳಗೇರಿ ಬಡಜನರಿಗೆ ಹಂಚಿಕೆ ಮಾಡದೆ, ಮಂಡಳಿಯ ಕಾಯ್ದೆ-ಮಾರ್ಗಸೂಚಿಗಳಿಗೆ ವಿರುದ್ಧವಾಗಿ, ಆಶ್ರಯ ಸಮಿತಿಯ ಹೆಸರಿನಲ್ಲಿ ಇತರ ಅನುಕೂಲಸ್ಥ ವರ್ಗದವರಿಗೆ ಹಂಚಿಕೆ ಮಾಡಲು ಮಂಡಳಿ ಮುಂದಾಗಿದೆ. ಈ ಸಂಬಂಧ ಮಾಜಿ ಸಚಿವರು ಹಾಗೂ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೈರತಿ ಬಸವರಾಜು, ಮಂಡಳಿಯ ಆಯುಕ್ತರಾಗಿದ್ದು ಪ್ರಸ್ತುತ ನಿವೃತ್ತಿ ಹೊಂದಿರುವ ಬಿ.ವೆಂಕಟೇಶ್ ಹಾಗೂ  ಬೇರೆಡೆಗೆ ಸ್ಥಳಾಂತರಗೊಂಡಿರುವ ನಂ.2ನೇ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಚರಣ್‌ರಾಜ್ ವಿರುದ್ಧವೂ ಲೋಕಾಯುಕ್ತರಲ್ಲಿ ದೂರು ದಾಖಲಾಗಿದೆ. ಪ್ರಕರಣ ಸಂಖ್ಯೆ: ಕಂಪ್ಲೆಂಟ್/ಲೋಕ್/ಬಿಸಿಡಿ/1267/2024. ಆದರೂ ಸದರಿ ಮನೆಗಳನ್ನು ಹಂಚಿಕೆ ಮಾಡಲು ಮಂಡಳಿ ಆತುರ ತೋರಿಸುತ್ತಿದೆ.

ಈ ಮೇಲಿನ ಎಲ್ಲಾ ಅಂಶಗಳನ್ನು ತಮ್ಮ ಅಗತ್ಯಕ್ಕೆ ತಕ್ಕಂತೆ ಬಂಡವಾಳ ಮಾಡಿಕೊಂಡಿರುವ ಸದರಿ ಪ್ರದೇಶದ ನಿವಾಸಿಯಾದ ಕೆ.ಸಿ.ಪವಿತ್ರ ಆತನ ಗಂಡ ಗಿರೀಶ್ ಹಾಗೂ ನಾರಾಯಣಪುರ ಬಿಜೆಪಿ ಮುಖಂಡ ಲೋಕೇಶ್ ಮುಂತಾದವರು ಶಾಸಕರಾದ ಬೈರತಿ ಬಸವರಾಜು ಅವರ ಹೆಸರನ್ನು ಹೇಳಿಕೊಂಡು, ಪ್ರಭಾವ ಬಳಸಿ, ಖಾಲಿ ಬಿದ್ದಿರುವ ಮನೆಗಳನೆಲ್ಲ ಮಾರಾಟ ಮಾಡುತ್ತಿದ್ದಾರೆ. ಮತ್ತು ಬಾಡಿಗೆಗೆ ಕೊಡುತ್ತಿದ್ದಾರೆ. ಇದರ ಬಗ್ಗೆ ಮಂಡಳಿಯಲ್ಲಿ ದೂರು ನೀಡಿದರೂ ಸಂಬಂಧಪಟ್ಟ ಉಪ ವಿಭಾಗದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ, ಇವರೊಂದಿಗೆ ಸೇರಿಕೊಂಡು ಇವರು ಮಾಡುತ್ತಿರುವ ಅಕ್ರಮಗಳಿಗೆ ಸಹಾಯ ಮಾಡುತ್ತಿದ್ದಾರೆ.

ನಾರಾಯಣಪುರ ಬಿಜೆಪಿ ಮುಖಂಡ ಲೋಕೇಶ್ ಹಾಗೂ ಪವಿತ್ರ ಆತನ ಗಂಡ ಗಿರೀಶ್

ಸದರಿ ಪ್ರದೇಶದಲ್ಲಿ ವಾಸವಾಗಿರುವ 42 ಅನಧೀಕೃತದಾರರ ಮೇಲೆ ದಿನನಿತ್ಯವೂ ಯಾವುದಾದರೂ ಒಂದು ಕಾರಣ ಹೇಳಿ ದಬ್ಬಾಳಿಕೆ ಮಾಡುತ್ತಾ ಅವರಲ್ಲಿನ ಕೆಲವರ ಮನೆಗಳನ್ನು ಬಲವಂತವಾಗಿ ಖಾಲಿ ಮಾಡಿಸಿ ಆ ಮನೆಗಳನ್ನೂ ಮಾರಾಟ ಮಾಡುತ್ತಿದ್ದಾರೆ. ಈ ಕುರಿತು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಇವರ ವಿರುದ್ಧ ಯಾವುದೇ ಕ್ರಮ ಜರುಗಿಸುತ್ತಿಲ್ಲ್ಲ. ನ್ಯಾಯಾಲಯಕ್ಕೆ ತೆರಳಿ PCR ಹೂಡಿ, FIR ದಾಖಲಿಸಿದರೂ ಶಾಸಕರಾದ ಬೈರತಿ ಬಸವರಾಜು ಅವರ ಪ್ರಭಾವ ಬಳಸಿ, ಬಿ ರಿಪೋರ್ಟ್ ಹಾಕಿ ಪ್ರಕರಣವನ್ನು ಹಿಂದೆಕ್ಕೆ ಪಡೆಯುತ್ತಾರೆ.

ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿದ ಸಮುದಾಯ ಭವನವನ್ನು ಸಂಘದ ಹೆಸರಿನಲ್ಲಿ ಪಡೆದುಕೊಂಡ ಪವಿತ್ರ ಆತನ ಗಂಡ ಗಿರೀಶ್ ಹಾಗೂ ನಾರಾಯಣಪುರ ಲೋಕೇಶ್ ತಮ್ಮ ಸ್ವಂತಕ್ಕೆ-ಸ್ವಾರ್ಥಕ್ಕೆ ಬಳಸಿಕೊಂಡು, ಮಾಡಬಾರದ ಅಕ್ರಮಗಳನ್ನು ಮಾಡುತ್ತಿದ್ದಾರೆ. ಸಮುದಾಯ ಭವನದ ಕೊಠಡಿಗಳನೆಲ್ಲ ಬಾಡಿಗೆಗೆ ನೀಡಿದ್ದಾರೆ. ಒಂದು ಕೊಠಡಿಯ ಕಿಟಕಿಯನ್ನು ಹೊಡೆದು, ಅದಕ್ಕೆ ದೊಡ್ಡ ಬಾಗಿಲನ್ನು ಅಳವಡಿಸಿ, ಚಿಕನ್ ಅಂಗಡಿಗೆ ಬಾಡಿಗೆ ಬಿಟ್ಟಿದ್ದಾರೆ. ಬಲವಂತವಾಗಿ ಖಾಲಿ ಮಾಡಿಸುವ ಮನೆಗಳ ಸಾಮಾನುಗಳನ್ನು ತುಂಬಿಡಲು ಸಭಾಂಗಣವನ್ನು ಗೋಡನ್ ಮಾಡಿಕೊಂಡಿದ್ದಾರೆ. ಅಂಬೇಡ್ಕರ್ ಭಾವಚಿತ್ರವಿರುವ ಜನಶಕ್ತಿ ವೇದಿಕೆಯ ನಾಮಫಲಕವನ್ನು ಬಲವಂತದಿಂದ ಕಿತ್ತು, ಒಂದು ಕೋಣೆಯಲ್ಲಿ ಕಸದ ರಾಶಿಯಂತೆ ಎಸೆದು, ಅಂಬೇಡ್ಕರ್ ಮತ್ತು ದಲಿತರಿಗೆ ಅಪಮಾನ ಮಾಡಿದ್ದಾರೆ. ಒಂದು ಮಳಿಗೆಯಲ್ಲಿ ಪವಿತ್ರ ಮತ್ತು ಆತನ ಗಂಡ ಗಿರೀಶ್ ಚಿಲ್ಲರೆ ಅಂಗಡಿ ತೆರೆದಿದ್ದಾರೆ. ಪಕ್ಕದ ಒಂದು ಮಳಿಗೆಯನ್ನು ಲೋಕೇಶ್ ಕಛೇರಿಯನ್ನಾಗಿ ಮಾಡಿಕೊಂಡು ಇಲ್ಲಿ ಅಕ್ರಮ ವ್ಯವಹಾರ ನಡೆಸುತ್ತಿದ್ದಾರೆ.

ಚಿಕನ್ ಅಂಗಡಿ

ಪವಿತ್ರ ಆತನ ಗಂಡ ಗಿರೀಶ್ ಹಾಗೂ ನಾರಾಯಣಪುರ ಲೋಕೇಶ್, ಮನೆಗಳಿಗೆ ಹಕ್ಕು ಪತ್ರ ಕೊಡಿಸುವುದಾಗಿ ಹೇಳಿ, ಪ್ರತಿ ಮನೆಗೆ 5100 ರೂ.ಗಳನ್ನು ವಸೂಲಿ ಮಾಡಿದ್ದಾರೆ. ಆದರೆ, ಯಾರಿಗೂ ಇದುವರೆಗೆ ಹಂಚಿಕೆ ಪತ್ರ ಕೊಡಿಸಲಿಲ್ಲ. ಇವರು ಸಕಾಲದಲ್ಲಿ ಸಲ್ಲಿಸಿದ್ದ ನೂರಾರು ಅರ್ಜಿಗಳನ್ನು ಮಂಡಳಿ ಈಗಾಗಲೇ ತಿರಸ್ಕರಿಸಿದೆ. ಅದೇ ರೀತಿ ನಗರೇಶ್ವರ ನಾಗೇನಹಳ್ಳಿ ಪ್ರದೇಶದಲ್ಲಿ PMAY-HFA ಯೋಜನೆಯಡಿ ಕೊಳಗೇರಿ ಮಂಡಳಿ ನಿರ್ಮಿಸಿರುವ 768 ಮನೆಗಳಲ್ಲಿ ಮನೆ ಕೊಡಿಸುವುದಾಗಿ ನಂಬಿಸಿ, ಪವಿತ್ರ ಆತನ ಗಂಡ ಗಿರೀಶ್ ಹಾಗೂ ನಾರಾಯಣಪುರ ಲೋಕೇಶ್ ಮುಂತಾದವರು ನೂರಾರು ಜನರಿಂದ ದೊಡ್ಡ ಮಟ್ಟದಲ್ಲಿ ಹಣ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ ಎಂದು ಅಪಾದಿಸಿರುವ ಜನಶಕ್ತಿ ವೇದಿಕೆ,

ಮಾಜಿ ಸಚಿವರು ಹಾಗೂ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೈರತಿ ಬಸವರಾಜು ಅವರೊಂದಿಗೆ ಸೇರಿಕೊಂಡು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಆಶ್ರಯ ಸಮಿತಿಯ ಹೆಸರಿನಲ್ಲಿ, PMAY-HFA ಯೋಜನೆಯಡಿ ನಿರ್ಮಿಸಿರುವ 768 ಕೊಳಗೇರಿ ಮನೆಗಳನ್ನು ಮಂಡಳಿಯ ಕಾಯ್ದೆ-ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಅನುಕೂಲಸ್ಥ ವರ್ಗದವರಿಗೆ ಹಂಚಿಕೆ ಮಾಡಲು, ಅಕ್ರಮವಾಗಿ ತಯಾರಿಸಿರುವ ಫಲಾನುಭವಿಗಳ ಪಟ್ಟಿಯನ್ನು ಕೈಬಿಟ್ಟು, ಸದರಿ ಮನೆಗಳನ್ನು ನಿಜವಾದ ಕೊಳಗೇರಿ ಬಡಜನರಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ಬಾಡಿಗೆಗೆ ನೀಡಿರುವ ಸಮುದಾಯ ಭವನದ ಕೊಠಡಿ

ಅದೇ ರೀತಿ, NURM-BSUP ಯೋಜನೆಯಡಿ ನಿರ್ಮಿಸಿ ಹಂಚಿಕೆ ಮಾಡಿರುವ 208 ಮನೆಗಳ ವಿಚಾರದಲ್ಲಿ ಲೋಕಾಯುಕ್ತರ ಅಂತಿಮ ಆದೇಶ ಬರುವವರೆಗೂ 166 ಫಲಾನುಭವಿಗಳಿಗೆ ಹಂಚಿಕೆ ಪತ್ರ ನೀಡುವುದನ್ನು ತಡೆಯಿಡಿಯಬೇಕೆಂಬ ಪ್ರಮುಖವಾದ ಬೇಡಿಕೆಯನ್ನೂ ಮುಂದಿಟ್ಟಿದೆ.

ಪವಿತ್ರ ಆತನ ಗಂಡ ಗಿರೀಶ್ ಹಾಗೂ ನಾರಾಯಣಪುರ ಬಿಜೆಪಿ ಮುಖಂಡ ಲೋಕೇಶ್ ಅವರು ಅಕ್ರಮವಾಗಿ ಕೂಟವನ್ನು ಸೇರಿಸಿಕೊಂಡು, ಮಾರಾಟ ಮಾಡಿರುವ ಮತ್ತು ಬಲವಂತವಾಗಿ ಖಾಲಿಮಾಡಿಸಿರುವ ಮನೆಗಳನ್ನು ಹಾಗೂ ಬಾಡಿಗೆಗೆ ಬಿಟ್ಟಿರುವ ಮನೆಗಳನ್ನು ಈ ಕೂಡಲೇ ತೆರವುಗೊಳಿಸಿ ಸಂಬಂಧಪಟ್ಟವರಿಗೆ ಮರಳಿ ನೀಡಬೇಕು. ಸಮುದಾಯ ಭವನದಲ್ಲಿರುವ ಅಂಗಡಿಗಳನ್ನು ಖಾಲಿ ಮಾಡಿಸಿ, ನಿರ್ವಹಣೆ ಮಾಡಲು ಅದನ್ನು ಅರ್ಹರಿಗೆ ನೀಡಬೇಕು. ಸಮುದಾಯ ಭವನದಲ್ಲಿ ವಾಸವಾಗಿರುವ ಎಲ್ಲರನ್ನೂ ತೆರವುಗೊಳಿಸಿ ಸಾರ್ವಜನಿಕ ಬಳಕೆಗೆ ನೀಡಬೇಕು.

ಗೋಡನ್ ಮಾಡಿಕೊಂಡಿರುವ ಸಮುದಾಯ ಭವನದ ಸಭಾಂಗಣ

ಈ ಕೂಡಲೇ ಪವಿತ್ರ ಆತನ ಗಂಡ ಗಿರೀಶ್ ಹಾಗೂ ನಾರಾಯಣಪುರ ಬಿಜೆಪಿ ಮುಖಂಡ ಲೋಕೇಶ್ ಮುಂತಾದವರನ್ನು ಸಂಘಟಿತ ಅಪರಾಧ, ಬೆದರಿಕೆ, ವಂಚನೆ, ಅತಿಕ್ರಮ ಪ್ರವೇಶ, ಸರ್ಕಾರಿ ಆಸ್ತಿಗಳಿಗೆ ಹಾನಿ ಹಾಗೂ ಎಸ್.ಸಿ/ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಿ ವಿಚಾರಣೆಗೆ ಒಳಪಡಿಸಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಮಾನ್ಯ ವಸತಿ ಸಚಿವರಾದ ಬಿ.ಝೆಡ್.ಜಮೀರ್ ಅಹ್ಮದ್ ಖಾನ್ (B.Z.Zameer Ahmed Khan) ಅವರು ಸೂಚಿಸಬೇಕೆಂದು ಒತ್ತಾಯಿಸಿ, ನವಂಬರ್ 4 ರಂದು ಬೆಳಿಗ್ಗೆ 10.೦೦ ಗಂಟೆಗೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನಾ ಧರಣಿಯನ್ನು ಹಮಿಕೊಳ್ಳಲಾಗಿದೆ.

ಸದರಿ ಪ್ರತಿಭಟನಾ ಧರಣಿಯಲ್ಲಿ, ದಲಿತ ವಿಮೋಚನಾ ಸೇನೆ (DVS) (ರಿ), ಅಖಿಲ ಭಾರತ ಮಾನವ ಹಕ್ಕುಗಳ ಸಂಸ್ಥೆ (AIHRO), ಬೆಂಗಳೂರು ಗುಡಿಸಲು ನಿವಾಸಿಗಳ ಒಕ್ಕೂಟ (BSDF), ಕರ್ನಾಟಕ ಮಹಿಳಾ ಆಟೋ ಡ್ರೈವರ್ಸ್ ಯೂನಿಯನ್ (KWADU), ಅಖಿಲ ಕರ್ನಾಟಕ ದಲಿತ ರಕ್ಷಣಾ ವೇದಿಕೆ (AKDRV) ಹಾಗೂ ಕರ್ನಾಟಕ ಶ್ರಮಿಕ ಮಹಿಳಾ ಸಂಘ (KSMS) ಮುಂತಾದ ಸಂಘಟನೆಗಳು ಭಾಗವಹಿಸಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. 

PMAY-HFA ಮನೆಗಳು
Tags: Ashraya CommitteeAshraya HousesB. Z. Zameer Ahmed KhanByrathi BasavarajaIllegal allocationKSDBProtestSlum Boardಅಕ್ರಮ ಹಂಚಿಕೆಆಶ್ರಯ ಮನೆಗಳುಆಶ್ರಯ ಸಮಿತಿಕೊಳಗೇರಿ ಮಂಡಳಿಪ್ರತಿಭಟನೆಫ್ರೀಡಂ ಪಾರ್ಕ್ಬಿ.ಝೆಡ್.ಜಮೀರ್ ಅಹ್ಮದ್ ಖಾನ್ಬೈರತಿ ಬಸವರಾಜ್ಸ್ಲಂಸ್ವಾತಂತ್ರ್ಯ ಉದ್ಯಾನವನ
Previous Post

ರಾಜಕೀಯ ಪಕ್ಷಗಳು ನೈತಿಕ ರಾಜಕಾರಣದಿಂದ ದೂರವಾಗುತ್ತಿರುವುದು ಅಪಾಯಕಾರಿ: ವೆಲ್ಫೇರ್ ಪಾರ್ಟಿ

Next Post

ಕರ್ನಾಟಕ ರಾಜ್ಯೋತ್ಸವ: ಅಭಿನಂದಿಸಿದ ಪ್ರಧಾನಿ ಮೋದಿ; ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ!

Next Post

ಕರ್ನಾಟಕ ರಾಜ್ಯೋತ್ಸವ: ಅಭಿನಂದಿಸಿದ ಪ್ರಧಾನಿ ಮೋದಿ; ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

Recent News

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS