• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಭಾರತವನ್ನು ಏಕಸ್ವಾಮ್ಯ ಮತ್ತು ನಿರಂಕುಶ ದೇಶವನ್ನಾಗಿ ಮಾಡಲು ಬಿಜೆಪಿ ಪ್ರಯತ್ನ: ಡಿ.ಸಿ.ಪ್ರಕಾಶ್

by Dynamic Leader
29/11/2024
in ದೇಶ
0
0
SHARES
0
VIEWS
Share on FacebookShare on Twitter

“ಅಲ್ಪಸಂಖ್ಯಾತರಾದ 3 ಪರ್ಸೆಂಟ್ ಬ್ರಾಹ್ಮಣರಿಗೆ ಈಗಾಗಲೇ “ಮನುಸ್ಮೃತಿ’ ಎಂಬ ಧರ್ಮ ಸಂವಿಧಾವಿದೆ; ಅದನ್ನು ಇಂಪ್ಲಿಮೆಂಟ್ ಮಾಡಕ್ಕೆ ನಿಮ್ಮದೇ ಆದ ಸಂಘ-ಸರ್ಕಾರವಿದೆ. ಮತ್ತೊಂದು ಸಂವಿಧಾನ ನಿಮಗೆ ಏಕೆ ಬೇಕು? ಮೊದಲು ಅದನ್ನು ತ್ಯಜಿಸಿ ಸಹ ಮನುಷ್ಯರಾಗಿ” – ಡಿ.ಸಿ.ಪ್ರಕಾಶ್

ಭಾರತ ಸಂವಿಧಾನದ 75ನೇ ವರ್ಷಾಚರಣೆಯ ಸಂದರ್ಭದಲ್ಲಿ ಸಂವಿಧಾನವನ್ನು ತಿರುಚುವ ಕಾರ್ಯಗಳು ಒಂದೆಡೆ  ನಡೆಯುತ್ತಲೇ ಇವೆ. ಈಗ ಬಿಜೆಪಿಯಲ್ಲಿರುವ ಸುಬ್ರಮಣಿಯನ್ ಸ್ವಾಮಿ, ವಕೀಲ ಅಶ್ವಿನಿ ಉಪಾಧ್ಯಾಯ, ವಿಷ್ಣು ಶಂಕರ್ ಜೈನ್ ಮತ್ತು ಬಲರಾಮ್ ಸಿಂಗ್ ಅವರು ಭಾರತದ ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದರು. ಇದನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಪಿ.ವಿ.ಸಂಜಯ್ ಕುಮಾರ್ ಪೀಠವು ಇದೇ ನವಂಬರ್ 25 ರಂದು “ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತು ತನ್ನ ಅಧಿಕಾರವನ್ನು ಸರಿಯಾಗಿ ಚಲಾಯಿಸಿದೆ” ಎಂದು ದೃಢಪಡಿಸಿದೆ. ಇದಕ್ಕಿಂತ ದೊಡ್ಡ ಪೀಠಕ್ಕೆ ತೆಗೆದುಕೊಂಡು ಹೋಗಿ ಚರ್ಚೆಯನ್ನು ಎಳೆಯಲು ಜಾತ್ಯತೀತ ವಿರೋಧಿಗಳು ಬಯಸಿದ್ದರು. ಆದರೆ, ಸುಪ್ರೀಂ ಕೋರ್ಟ್ ಅದಕ್ಕೆ ಅವಕಾಶ ನೀಡಲಿಲ್ಲ. ಈ ಅರ್ಜಿಗಳನ್ನು ಆರಂಭಿಕ ಹಂತದಲ್ಲೇ ವಜಾಗೊಳಿಸಿತು.

ಭಾರತದ ಸಂವಿಧಾನವು ಭಾರತ ದೇಶವನ್ನು ‘ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯ’ ಎಂದು ವ್ಯಾಖ್ಯಾನಿಸುತ್ತದೆ.

ಸಂವಿಧಾನದ 42ನೇ ತಿದ್ದುಪಡಿಯು ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಸೇರಿಸಿದೆ. ಇದನ್ನು ತೆಗೆಯಬೇಕು ಎಂಬುದು ಅವರು ವಾದ. ಸಂವಿಧಾನವನ್ನು 100ಕ್ಕೂ ಹೆಚ್ಚು ಬಾರಿ ತಿದ್ದುಪಡಿ ಮಾಡಲಾಗಿದೆ ಅದೆಲ್ಲವನ್ನೂ ತೆಗೆದುಹಾಕಲು ಅವರು ಹೇಳುತ್ತಾರೆಯೇ?

“ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಪಾಶ್ಚಾತ್ಯ ಪರಿಕಲ್ಪನೆಗಳಾಗಿ ಪರಿಗಣಿಸಬೇಕಾಗಿಲ್ಲ” ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಜಾತ್ಯತೀತ ಎನ್ನುವುದು ಪಾಶ್ಚಿಮಾತ್ಯ ಪರಿಕಲ್ಪನೆ ಎಂದು ಇಲ್ಲಿರುವವರು ಹೇಳುತ್ತಾ ತಿರುಗುತ್ತಿದ್ದಾರೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅದನ್ನು ಸೇರಿಸಲಾಗಿತ್ತು ಎಂಬ ವಾದವನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.

“ದಿನಾಂಕ: 2-11-1976 ರಂದು ಸಂಸತ್ತು ಸಂವಿಧಾನದ 42ನೇ ತಿದ್ದುಪಡಿಯ ಮೂಲಕ ಜಾತ್ಯತೀತ ಮತ್ತು ಸಮಾಜವಾದ ಪದಗಳನ್ನು ಸೇರಿಸಿತ್ತು. ಅದರ ನಂತರ ಜನತಾ ಸರ್ಕಾರ ಬಂದಿತು. ಜನತಾ ಸರ್ಕಾರ ಇದನ್ನು ಸಂಸತ್ತಿನಲ್ಲೇ ಒಪ್ಪಿಕೊಂಡಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆ ಜನತಾ ಪಕ್ಷದಲ್ಲಿ ಸುಬ್ರಮಣಿಯನ್ ಸ್ವಾಮಿ ಕೂಡ ಇದ್ದರು.

“ಭಾರತದ ಸಂವಿಧಾನದ 368ನೇ ವಿಧಿಯು ನಂತರದ ದಿನಾಂಕದಿಂದ ಜಾರಿಗೆ ಬರುವಂತೆ ಸಂವಿಧಾನದ ಯಾವುದೇ ವಿಭಾಗವನ್ನು ತಿದ್ದುಪಡಿ ಮಾಡಲು ಸಂಸತ್ತಿಗೆ ಅಧಿಕಾರ ನೀಡುವುದರಿಂದ, ಇದು ಪೀಠಿಕೆಯ ತಿದ್ದುಪಡಿಗೂ ಅನ್ವಯಿಸುತ್ತದೆ” ಎಂದು ತೀರ್ಪು ಹೇಳಿದೆ.

“ಭಾರತದಲ್ಲಿ ‘ಸಮಾಜವಾದ’ ಎಂದರೆ ಸಮಾನತೆಯ ಸರ್ಕಾರವನ್ನೇ ಸೂಚಿಸುತ್ತದೆ ಮತ್ತು ಅದು ಎಲ್ಲರಿಗೂ ಸಮಾನ ಅವಕಾಶವನ್ನು ಒದಗಿಸುವ ಕಲ್ಯಾಣ ರಾಜ್ಯವನ್ನೂ ಸೂಚಿಸುತ್ತದೆ. ಇದು ‘ನಿರಂಕುಶ’ ಸಿದ್ಧಾಂತವಲ್ಲ” ಎಂಬುದನ್ನೂ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. “ಸಮಾಜವಾದ ಎಂಬ ಪದವು ಇಲ್ಲಿ ಖಾಸಗಿ ವಲಯದ ಅಭಿವೃದ್ಧಿಯನ್ನು ಎಂದಿಗೂ ನಿಲ್ಲಿಸಲಿಲ್ಲ; ಖಾಸಗಿಯವರಿಂದಲೂ ನಮಗೆಲ್ಲ ಲಾಭವಾಗಿದೆ” ಎಂದು ನ್ಯಾಯಮೂರ್ತಿಗಳು ವಿವರಿಸಿದ್ದಾರೆ.

ಈ ತೀರ್ಪಿನ ಮುಖ್ಯ ಅಂಶವೆಂದರೆ ಸಮಾಜವಾದ ಮತ್ತು ಜಾತ್ಯತೀತ ಪದಗಳು ಕೇವಲ ಪೀಠಿಕೆಯಲ್ಲಿ ಮಾತ್ರವಲ್ಲದೆ ಸಂವಿಧಾನದ ವಿವಿಧ ಭಾಗಗಳಲ್ಲಿಯೂ ಇವೆ ಎಂದು ಹೇಳಿರುವುದು.

“ಸಂವಿಧಾನದ ಪೀಠಿಕೆಯಲ್ಲಿ ಸಮಾನತೆ, ಭ್ರಾತೃತ್ವ, ಸ್ವಾತಂತ್ರ್ಯ ಮತ್ತು ನ್ಯಾಯ ಎಂಬ ಪದಗಳು ಜಾತ್ಯತೀತತೆಯನ್ನೇ ಅರ್ಥೈಸುತ್ತವೆ” ಎಂದು ಕಡ್ಡಿ ಮುರಿದಂತೆ ಸುಪ್ರೀಂ ಕೋರ್ಟ್ ತಮ್ಮ ತೀರ್ಪಿನಲ್ಲಿ ಹೇಳಿದೆ.

“ಪ್ರತಿಯೊಬ್ಬ ಪ್ರಜೆಯೂ ತನ್ನ ಇಚ್ಛೆಯ ಧರ್ಮವನ್ನು ಪ್ರತಿಪಾದಿಸುವ ಮತ್ತು ಪ್ರಚಾರ ಮಾಡುವ ಮೂಲಭೂತ ಹಕ್ಕನ್ನು ಹೊಂದಿದ್ದಾನೆ ಎಂದು ಹೇಳುವ ಸಂವಿಧಾನದ 25ನೇ ವಿಧಿಯ ಅರ್ಥವೂ ಕೂಡ ಜಾತ್ಯತೀತತೆ ಎಂಬುದೇ ಅಗಿದೆ” ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. “ನಾವು ಸಂವಿಧಾನವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಜಾತ್ಯತೀತತೆಯ ಮುಖ್ಯ ಪರಿಕಲ್ಪನೆಯು ಅನೇಕ ಸ್ಥಳಗಳಲ್ಲಿ ಕಂಡುಬರುತ್ತದೆ” ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳು ಹೇಳಿದ್ದಾರೆ.

“ಸಮಾಜವಾದ ಮತ್ತು ಜಾತ್ಯತೀತ ಇವೆರಡೂ ಪೀಠಿಕೆಯಲ್ಲಿ ಮಾತ್ರವಲ್ಲದೆ ಭಾರತೀಯ ಸಂವಿಧಾನದ ಮುಖ್ಯ ತತ್ವಗಳಾಗಿವೆ” ಎಂದು ಸುಪ್ರೀಂ ಕೋರ್ಟ್ ಹೇಳಿರುವುದನ್ನು ಒಪ್ಪಿಕೊಂಡು ಕಾರ್ಯನಿರ್ವಹಿಸಬೇಕು. ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು ಪ್ರಕರಣವನ್ನು ಮಾತ್ರವಲ್ಲ; ಧಾರ್ಮಿಕ ಪಕ್ಷಪಾತ ಎಂಬ ಪರಿಕಲ್ಪನೆಯನ್ನು ಕೂಡ.

ಮೇಲ್ಕಂಡ ಸುಪ್ರೀಂ ಕೋರ್ಟ್ ತೀರ್ಪನ್ನು ಅರಗಿಸಿಕೊಳ್ಳಲಾಗದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು, “ನಮ್ಮನ್ನು (ಬ್ರಾಹ್ಮಣರನ್ನು) ಗೌರವಿಸುವ ಸಂವಿದಾನ ಬರಬೇಕು” ಎಂದು ಹೇಳಿದ್ದೂ ಅಲ್ಲದೇ ರಾಜ್ಯಪಾಲರನ್ನು ಭೇಟಿಯಾಗಿ ಮನವಿಯನ್ನೂ ಸಲ್ಲಿಸಿದ್ದಾರೆ. ಅಲ್ಪಸಂಖ್ಯಾತರಾದ 3 ಪರ್ಸೆಂಟ್ ಬ್ರಾಹ್ಮಣರಿಗೆ ಈಗಾಗಲೇ “ಮನುಸ್ಮೃತಿ’ ಎಂಬ ಸಂವಿಧಾವಿದೆ; ಅದನ್ನು ಇಂಪ್ಲಿಮೆಂಟ್ ಮಾಡಕ್ಕೆ ನಿಮ್ಮದೇ ಆದ ಸಂಘ-ಸರ್ಕಾರವಿದೆ. ಮತ್ತೊಂದು ಸಂವಿಧಾನ ನಿಮಗೆ ಏಕೆ ಬೇಕು? ಮೊದಲು ಅದನ್ನು ತ್ಯಜಿಸಿ ಸಹ ಮನುಷ್ಯರಾಗಿ.

ಬ್ರಾಹ್ಮಣರ ಪ್ರತಿನಿಧಿಗಳಾದ ಸುಬ್ರಮಣಿಯನ್ ಸ್ವಾಮಿ, ವಕೀಲ ಅಶ್ವಿನಿ ಉಪಾಧ್ಯಾಯ, ವಿಷ್ಣು ಶಂಕರ್ ಜೈನ್ ಮತ್ತು ಬಲರಾಮ್ ಸಿಂಗ್ ಮುಂತಾದವರು ಪ್ರಕರಣ ದಾಖಲಿಸಿ ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದಕ್ಕಾಗಿ ಬೇಸರಪಟ್ಟು ವಿಶ್ವಪ್ರಸನ್ನ ತೀರ್ಥರು “ನಮ್ಮನ್ನು ಗೌರವಿಸುವ ಸಂವಿದಾನ ಬರಬೇಕು” ಎಂದು ಹೇಳಿರಬಹುದು ಎಂದು ನಾವು ಭಾವಿಸಿ ಕೊಳ್ಳೋಣ!

ಈ ಗದ್ದಲದ ನಡುವೆ, “ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡುವ ಕಾನೂನು ಜಾರಿಗೆ ತರಬೇಕು” ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮಿಗಳ ಹೇಳಿಕೆ ಆಘಾತವನ್ನು ಉಂಟು ಮಾಡಿದೆ. ಇದರಿಂದ ಸ್ವಾಮಿಗಳು ಎಲ್ಲರ ವಿಮರ್ಶೆಗೆ ಒಳಗಾಗಿದ್ದಾರೆ. ನಂತರ, “ಬಾಯಿ ತಪ್ಪಿ ಹೇಳಿದ ಹೇಳಿಕೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅದೇನೇ ಹಾಗಿರಲಿ, ಸ್ವಾಮಿಗಳ ಈ ರೀತಿಯ ಮಾತುಗಳನ್ನು ಒಪ್ಪಲಾಗದು.

ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, ಆ ಮೀಸಲಾತಿಯನ್ನು ಒಕ್ಕಲಿಗ ಹಾಗೂ ಲಿಂಗಾಯಿತ ಸಮುದಾಯಕ್ಕೆ ತಲಾ ಶೇ.2ರಷ್ಟು ಹಂಚಿಕೆ ಮಾಡಿತ್ತು. ನಂತರ ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಇದು ಕೂಡ ಸ್ವಾಮಿಜೀಗಳ ಕೋಪಕ್ಕೆ ಕಾರಣವಾಗಿರಬಹುದು. ಅದು ಏನೇ ಇದ್ದರೂ, ಸರ್ಕಾರವು ಸಂವಿಧಾನ ವಿರೋಧಿಗಳಿಂದ ಬಹುಸಂಖ್ಯಾತರನ್ನು ರಕ್ಷಿಸುವುದರೊಂದಿಗೆ ಮೀಸಲಾತಿ ವಿಚಾರದಲ್ಲಿ ಆದಷ್ಟು ಬೇಗ ಎಲ್ಲರೂ ಒಪ್ಪುವಂತಹ ಮೀಸಲಾತಿ ನೀತಿಯನ್ನು ಪ್ರಕಟಿಸುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡಬೇಕು. ಇಲ್ಲದಿದ್ದರೆ ಸಂವಿಧಾನ ವಿರೋಧಿಗಳು ಇದನ್ನು ಬಂಡವಾಳ ಮಾಡಿಕೊಳ್ಳುತ್ತಾರೆ ಎಂಬುದನ್ನು ಯಾರೂ ಮರೆಯಬಾರದು.

Tags: 2b Reservation2ಬಿ ಮೀಸಲಾತಿIndian ConstitutionKumara ChandrashekaranathaMuslim ReservationNew ConstitutionSecularSocialismSubramanian SwamyVishwaprasanna Teerthaಒಕ್ಕಲಿಗ ಮಠಕುಮಾರ ಚಂದ್ರಶೇಖರನಾಥ ಸ್ವಾಮೀಜಿಜಾತ್ಯತೀತಭಾರತೀಯ ಸಂವಿಧಾನಮನುಸ್ಮೃತಿಮುಸ್ಲಿಂ ಮೀಸಲಾತಿವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಸಮಾಜವಾದಸುಬ್ರಮಣಿಯನ್ ಸ್ವಾಮಿಹೊಸ ಸಂವಿಧಾನ
Previous Post

ಪ್ರಧಾನಿ ಭದ್ರತೆಗೆ ಮಹಿಳಾ ಕಮಾಂಡೋ?: ಫೋಟೋ ವೈರಲ್

Next Post

ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,000 ಕೋಟಿ ಘೋಷಿಸಿ ಒಂದು ಪೈಸೆಯನ್ನೂ ಕೊಡಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,000 ಕೋಟಿ ಘೋಷಿಸಿ ಒಂದು ಪೈಸೆಯನ್ನೂ ಕೊಡಲಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
edit post
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
edit post
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
edit post
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025

Recent News

edit post
ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
edit post
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
edit post
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
edit post
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS