• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಪೆರಿಯಾರ್ ಪ್ರತಿಮೆಯನ್ನು ಒಡೆಯುವುದಾಗಿ ಹೇಳಿದ್ದ ತಮಿಳುನಾಡು ಬಿಜೆಪಿ ನಾಯಕ ಹೆಚ್.ರಾಜಾಗೆ 6 ತಿಂಗಳ ಜೈಲು ಶಿಕ್ಷೆ!

by Dynamic Leader
02/12/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಚೆನ್ನೈ: ಪೆರಿಯಾರ್ ಪ್ರತಿಮೆಯನ್ನು ಒಡೆಯುವುದಾಗಿ ಮತ್ತು ಡಿಎಂಕೆ ಸಂಸದೆ ಕನಿಮೊಳಿ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿ ಮಾಡಿದ ಪ್ರಕರಣಗಳ ಅಡಿಯಲ್ಲಿ ತಮಿಳುನಾಡಿನ ಬಿಜೆಪಿಯ ಹಿರಿಯ ನಾಯಕ ಹೆಚ್.ರಾಜಾ ಅವರಿಗೆ 6 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲಾ ಶಿಕ್ಷೆಯನ್ನು ಅಮಾನತ್ತಿನಲ್ಲಿ ಇಡಲಾಗಿದೆ.

ತಮಿಳುನಾಡು ಬಿಜೆಪಿ ಸಮನ್ವಯ ಸಮಿತಿ ಅಧ್ಯಕ್ಷ ಹೆಚ್.ರಾಜಾ ಅವರು ಕಳೆದ 2018ರಲ್ಲಿ ತಮ್ಮ ಎಕ್ಸ್ ಸೈಟ್ (ಅಂದಿನ ಟ್ವಿಟ್ಟರ್) ಪುಟದಲ್ಲಿ ಪೆರಿಯಾರ್ ಪ್ರತಿಮೆಯನ್ನು ಒಡೆಯುವುದಾಗಿ ಪೋಸ್ಟ್ ಮಾಡಿದ್ದರು. ಮತ್ತು ಡಿಎಂಕೆ ಸಂಸದೆ ಕನಿಮೊಳಿ ವಿರುದ್ಧ ಮಾನಹಾನಿಕರ ಪೋಸ್ಟ್ ಗಳನ್ನು ಹಾಕಿದ್ದರು. ಇದರ ವಿರುದ್ಧ ಡಿಎಂಕೆ, ಕಾಂಗ್ರೆಸ್ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪರವಾಗಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಯಿತು. ಇದರಲ್ಲಿ ಈರೋಡ್ ನಗರ ಪೊಲೀಸರು, ಕರುಂಗಲ್ಪಾಳ್ಯಂ ಪೊಲೀಸ್ ಠಾಣೆಗೆ ನೀಡಿದ್ದ ದೂರಿನ ಮೇರೆಗೆ ಹೆಚ್.ರಾಜಾ ವಿರುದ್ಧ ಪ್ರಕರಣ ದಾಖಲಿಸಲಾಯಿತು.

ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೆಚ್.ರಾಜಾ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ, ಈ ಎರಡು ಪ್ರಕರಣಗಳ ತನಿಖೆಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸಂಸದರು, ಶಾಸಕರುಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿತು.

ಬಳಿಕ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಜಯವೇಲ್ ಅವರ ಮುಂದೆ ಈ ಸಂಬಂಧ ವಿಚಾರಣೆ ನಡೆಯಿತು. ಇದರಲ್ಲಿ ಪೆರಿಯಾರ್ ಪ್ರತಿಮೆಯನ್ನು ಒಡೆಯಬೇಕು ಎಂಬುದಕ್ಕೆ ಯಾವುದೇ ಪುರಾವೆಗಳನ್ನು ಸಂಗ್ರಹಿಸಲಾಗಿಲ್ಲ ಮತ್ತು ಡಿಎಂಕೆ ಸಂಸದೆ ಕನಿಮೊಳಿ ಅವರ ಮೇಲಿನ ಹೇಳಿಕೆ ರಾಜಕೀಯ ಕಾಮೆಂಟ್ ಆಗಿದ್ದು, ಅದರಲ್ಲಿ ಕನಿಮೊಳಿಯವರು ಯಾವುದೇ ದೂರನ್ನು ನೀಡದಿದ್ದರೂ ಮೂರನೇ ವ್ಯಕ್ತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುವುದರಿಂದ ಈ ಪ್ರಕರಣದಿಂದ ಬಿಡುಗಡೆ ಮಾಡಬೇಕು ಎಂದು ಹೆಚ್.ರಾಜಾ ಅವರ ಕಡೆಯಿಂದ ವಾದಿಸಿಸಲಾಯಿತು.

ಎಲ್ಲಾ ವಾದಗಳನ್ನು ದಾಖಲಿಸಿಕೊಂಡ ನ್ಯಾಯಾಧೀಶರು ಇಂದು (ಡಿ 2) ಎರಡೂ ಪ್ರಕರಣಗಳಲ್ಲಿ ತೀರ್ಪನ್ನು ನೀಡಿದರು. ಅದರಂತೆ “ಪೊಲೀಸರ ಕಡೆಯಿಂದ ಹೆಚ್.ರಾಜಾ ಅವರು ಅಪರಾಧ ಎಸಗಿರುವುದು ಸಾಬೀತಾಗಿದೆ. ಈ ಎರಡೂ ಪೋಸ್ಟ್‌ಗಳನ್ನು ಹೆಚ್.ರಾಜಾ ಅವರ ಸಾಮಾಜಿಕ ಮಾಧ್ಯಮ ಪುಟದಿಂದ ಪ್ರಕಟಿಸಲಾಗಿದೆ ಎಂದು ನ್ಯಾಯಾಲಯ ತೀರ್ಮಾನಿಸಿದೆ”  ಎಂದು ನ್ಯಾಯಾಧೀಶ ಜಿ.ಜಯವೇಲ್ ಹೇಳಿದ್ದಾರೆ. ಅಲ್ಲದೆ, ಹೆಚ್.ರಾಜಾಗೆ 6 ತಿಂಗಳ ಜೈಲು ಶಿಕ್ಷೆ ಮತ್ತು ಎರಡೂ ಪ್ರಕರಣಗಳಲ್ಲಿ ರೂ.5000 ದಂಡ ವಿಧಿಸಿ ಆದೇಶಿಸಲಾಗಿದೆ.

ಇದರ ಬೆನ್ನಲ್ಲೇ ಹೆಚ್.ರಾಜಾ ಕಡೆಯಿಂದ ತಾವು ಮೇಲ್ಮನವಿ ಸಲ್ಲಿಸಲಿದ್ದು ಸಮಯಾವಕಾಶ ನೀಡಬೇಕೆಂದು ನ್ಯಾಯಾಧೀಶರನ್ನು ಕೇಳಲಾಯಿತು. ಈ ಮನವಿಯನ್ನು ಸ್ವೀಕರಿಸಿದ ನ್ಯಾಯಾಧೀಶರು ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದರು. ಅಲ್ಲದೆ, ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಆದಾಗ್ಯೂ, ದಂಡವನ್ನು ತಕ್ಷಣವೇ ಪಾವತಿಸಲಾಯಿತು. ಈ ಒಂದು ತಿಂಗಳ ಅವಧಿಯಲ್ಲಿ ಯಾವುದೇ ಮೇಲ್ಮನವಿ ಸಲ್ಲಿಸದಿದ್ದರೆ ಶಿಕ್ಷೆ ಜಾರಿಯಾಗುತ್ತದೆ ಎಂಬುದು ಗಮನಾರ್ಹ.

Tags: defamation caseH.RajaKanimozhiPeriyarTamilunadu BJPಕನಿಮೊಳಿತಮಿಳುನಾಡು ಬಿಜೆಪಿಪೆರಿಯಾರ್ಮಾನಹಾನಿ ಪ್ರಕರಣಹೆಚ್.ರಾಜಾ
Previous Post

ಚುನಾವಣಾ ಆಯೋಗ: ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ!

Next Post

ವರ್ಷಾಂತ್ಯದೊಳಗೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಬೇಕು: ರಾಜಕೀಯ ಪಕ್ಷಗಳಿಂದ ಜಂಟಿ ಪತ್ರ!

Next Post

ವರ್ಷಾಂತ್ಯದೊಳಗೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಬೇಕು: ರಾಜಕೀಯ ಪಕ್ಷಗಳಿಂದ ಜಂಟಿ ಪತ್ರ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS