ಬೆಂಗಳೂರು Archives » Page 2 of 5 » Dynamic Leader
October 23, 2024
Home Archive by category ಬೆಂಗಳೂರು (Page 2)

ಬೆಂಗಳೂರು

ಬೆಂಗಳೂರು

ಬೆಂಗಳೂರು: ಹೈಗ್ರೌಂಡ್ಸ್ ಪೊಲೀಸ್ ಠಾಣಾ ಸರಹದ್ದಿನ ರೇಸ್ ಕೋರ್ಸ್ ರಸ್ತೆಯ ಬೆಂಗಳೂರು ಟರ್ಫ್ ಕ್ಲಬ್ ಆವರಣದಲ್ಲಿ ಯಾವುದೇ ಅಧಿಕೃತ ಪರವಾನಗಿ ಇಲ್ಲದೇ ಅಕ್ರಮ ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಕೆಲವು ವ್ಯಕ್ತಿಗಳು ಟರ್ಫ್ ಕ್ಲಬ್ ಪ್ರವಾಗಿರುವ ಲೀಗಲ್ ಬುಕ್ಕಿಗಳೆಂದು ಹೇಳಿಕೊಂಡು ಬೆಂಗಳೂರು ಟರ್ಫ್ ಕ್ಲಬ್ ಗೆ ಸಮನಾಂತರವಾಗಿ (ಪ್ಯಾರಲಲ್) ಸಾರ್ವಜನಿಕರು ಹಾಗೂ ಪಂಟರುಗಳಿಂದ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ವಂಚಿಸಿರುತ್ತಾರೆ.

ಅಕ್ರಮ ರೇಸ್ ಬೆಟ್ಟಿಂಗ್ ಎಂಬ ಜೂಜಾಟ ನಡೆಸುತ್ತಿರುವುದು ಮತ್ತು ಕೆಲವು ಪರವಾನಗಿ ಪಡೆದ ಏಜೆಂಟುಗಳು ಸರ್ಕಾರದ ಆದೇಶಗಳನ್ನು ಸ್ಟಾಲ್‌ಗಳಲ್ಲಿ ಪ್ರಕಟಿಸದೇ ಸರಿಯಾಗಿ ಲೆಕ್ಕ ನಿರ್ವಹಣೆ ಮಾಡದೇ ಗಿರಾಕಿಗಳಿಗೆ ಪಡೆದುಕೊಂಡ ಹಣಕ್ಕೆ ಯಾವುದೇ ಸೂಕ್ತ ದಾಖಲೆಗಳನ್ನು ನಿರ್ವಹಣೆ ಮಾಡದೇ ಅನಧಿಕೃತ ರೇಸ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿಕೊಂಡು ಸರ್ಕಾರಕ್ಕೆ ತೆರಿಗೆ ವಂಚಿಸಿ ಮೋಸ ಮಾಡಿರುತ್ತಾರೆ.

ಈ ಕುರಿತು ಖಚಿತ ಮಾಹಿತಿ ಸಂಗ್ರಹಿಸಿದ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿ ಹಾಗೂ ಸಿಬ್ಬಂದಿಯವರುಗಳು ದಾಳಿ ನಡೆಸಿ, ಅಕ್ರಮ ರೇಸ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಒಟ್ಟು 66 ವ್ಯಕ್ತಿಗಳನ್ನು ವಶಕ್ಕೆ ಪಡೆದು ಕೃತ್ಯಕ್ಕೆ ಬಳಸಿದ 55 ಮೊಬೈಲ್ ಗಳು, ದಾಖಲಾತಿಗಳು ಹಾಗೂ ರೂ.3,45,78,140/- (ಮೂರು ಕೋಟಿ ನಲವತ್ತೈದು ಲಕ್ಷದ ಎಪ್ಪತ್ತೆಂಟು ಸಾವಿರದ ನೂರ ನಲವತ್ತು) ಹಣ ವಶಕ್ಕೆ ಪಡೆದುಕೊಂಡಿರುತ್ತಾರೆ.

ಈ ಕಾರ್ಯಚರಣೆಯಲ್ಲಿ 09 ವ್ಯಕ್ತಿಗಳು ತಲೆ ಮರೆಸಿಕೊಂಡಿರುತ್ತಾರೆ. ಈ ಕುರಿತು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ; ತನಿಖೆ ಮುಂದುವರಿಯುತ್ತಿದೆ.  

ಬೆಂಗಳೂರು

ಬೆಂಗಳೂರು: ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದುವ ನಿಮ್ಮ ಕನಸು ಇದೀಗ ಸಾಕಾರಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಬೆಂಗಳೂರು ನಗರ ಜಿಲ್ಲೆಯಾದ್ಯಂತ ‘1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ ಅಡಿಯಲ್ಲಿ ನಿರ್ಮಿಸಿ ಪೂರ್ಣಗೊಂಡಿರುವ ಬಡಾವಣೆಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಕೂಡಲೇ ನೊಂದಾಯಿಸಿ, ಸ್ವಂತ ಸೂರು ಹೊಂದಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ‘ಎಕ್ಸ್’ ಪೇಜ್ ನಲ್ಲಿ ತಿಳಿಸಿದ್ದಾರೆ.

ಕೂಗೂರು ಸರ್ವೆ ನಂ.69, ಸಾದೇನಹಳ್ಳಿ ಸರ್ವೆ ನಂ.30, ಅಗ್ರಹಾರ ಪಾಳ್ಯ ಸರ್ವೆ ನಂ.30, ಚಿಕ್ಕನಹಳ್ಳಿ-ಕಾಮನಹಳ್ಳಿ ಸರ್ವೆ ನಂ.71 ಹಾಗೂ ಜೆ.ಭಂಗೀಪುರ ಸರ್ವೆ ನಂ.29ರಲ್ಲಿ 1 ಬಿ.ಹೆಚ್.ಕೆ ಮನೆಗಳು ಮತ್ತು ಗೂಳಿಮಂಗಲ ಸರ್ವೆ ನಂ.67ರಲ್ಲಿ 2 ಬಿ.ಹೆಚ್.ಕೆ ಮನೆಗಳು ಪೂರ್ಣಗೊಂಡಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ: https://ashraya.karnataka.gov.in/

ಬೆಂಗಳೂರು

ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ರಾಮಮೂರ್ತಿ ನಗರ ವ್ಯಾಪ್ತಿಯ ಕುವೆಂಪು ನಗರದಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಎಂದಿನಂತೆ ಈ ವರ್ಷವೂ ಅದ್ದೂರಿಯಾಗಿ ಆಚರಿಸಲಾಯಿತು. ಅದೂ ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಈ ವಿಶೇಷ ಸಂದರ್ಭದ ಹಿನ್ನೆಲೆಯಲ್ಲಿ ಬಡಾವಣೆಯ ನಿವಾಸಿಗಳೆಲ್ಲರೂ ಒಂದೆಡೆ ಸೇರಿ ಸಂಭ್ರಮಿಸಿ, ಸಿಹಿ ಹಂಚುವ ಮೂಲಕ ಸಾಂಸ್ಕೃತಿಕವಾಗಿ ಕೊಂಡಾಡಿದ್ದು ವಿಶೇಷವೆನಿಸಿತು.

ಕನ್ನಡ ಧ್ವಜದ ಸುತ್ತಲೂ ಮಕ್ಕಳೆಲ್ಲರೂ ನಿಂತು ದೇಶ ಭಕ್ತಿ ಗೀತೆಗಳನ್ನು ಮತ್ತು ನಾಡ ಗೀತೆಗಳನ್ನು ಮಧುರವಾದ ಧ್ವನಿಯಲ್ಲಿ ಹಾಡಿದ್ದು ಮನಸೆಳೆಯಿತು. ಕುವೆಂಪುನಗರ ಹೌಸ್ ಓನರ್ಸ್ ವೆಲ್ಫೇರ್ ಅಸೋಸಿಯೇಷನ್ ವತಿಯೊಂದ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರುಗಳು ಮತ್ತು ಬಡಾವಣೆಯ ನಿವಾಸಿಗಳೆಲ್ಲರೂ ಭಾಗವಹಿಸಿದ್ದರು.

ಇದನ್ನೂ ಓದಿ: ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!

ಬೆಂಗಳೂರು ರಾಜಕೀಯ

ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರದ ಶಿವನಹಳ್ಳಿಯ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ನಿಮ್ಮ ಆಸ್ತಿಗಳನ್ನ ಹೆಚ್ಚು ಮಾಡುವ ಶಕ್ತಿಯನ್ನು ಭಗವಂತ ನನಗೆ ಕೊಟ್ಟಿದ್ದಾನೆ. ಯಾರು ಸಹ ನಿಮ್ಮ ಆಸ್ತಿಗಳನ್ನು ಮಾರಿಕೊಳ್ಳಬೇಡಿ. ನಾವು ಬೆಂಗಳೂರು ಗ್ರಾಮಾಂತರ ಅಲ್ಲ… ರಾಮನಗರ ಅಲ್ಲ… ಬೆಂಗಳೂರು ನಗರದವರು ಎಂದು ಹೇಳುವ ಮೂಲಕ ಕನಕಪುರ ತಾಲೂಕನ್ನು ಬೆಂಗಳೂರು ನಗರದೊಂದಿಗೆ ಸೇರಿಸುವ ಇಂಗಿತವನ್ನು ವ್ಯಕ್ತಪಡಿಸಿದರು.

ನಿಮ್ಮ ಜೋಬಿಗೆ ನಾನು ದುಡ್ಡು ಹಾಕಲು ಆಗೋದಿಲ್ಲ. ಪ್ರತಿಯೊಬ್ಬರಿಗೂ ಮನೆ ಕೊಡಿಸಲು ಆಗೋದಿಲ್ಲ. ಆದರೆ ನಿಮ್ಮ ಆಸ್ತಿಯ ಮೌಲ್ಯವು ಒಂದು ಇದ್ದರೆ ಅದನ್ನು 10ರಷ್ಟು ಹೆಚ್ಚು ಮಾಡಬಹುದು. ಅಷ್ಟು ಶಕ್ತಿಯನ್ನು ದೇವರು ನನಗೆ ಕೊಟ್ಟಿದ್ದಾನೆ. ಆ ಕೆಲಸವನ್ನು ನಾನು ಮಾಡಿದ್ದೇನೆ. ನಿಮ್ಮ ಮಕ್ಕಳಿಗೆ, ಮೊಮ್ಮಕ್ಕಳಿಗೆ ನನ್ನಿಂದ ಏನೂ ಕೊಡಲು ಆಗೋದಿಲ್ಲ, ಆಸ್ತಿಯನ್ನು ಮಾತ್ರ ನೀಡಲು ಸಾಧ್ಯ ಎಂದರು.

ನೀವು ರಾಮನಗರದವರು ಅಲ್ಲ, ಬೆಂಗಳೂರು ಜಿಲ್ಲೆಯವರು; ಇದನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಳ್ಳಿ. ಸುಮ್ಮನೆ ನಮ್ಮನ್ನು ರಾಮನಗರ ಅಂತ ಹೇಳುವ ಮೂಲಕ ನಮ್ಮನ್ನು ಮೂಲೆ ಗುಂಪು ಮಾಡಿದ್ದಾರೆ. ಸುಮ್ಮನೆ ಯಾರೋ ಹೆಸರು ಮಾಡಿಕೊಳ್ಳಬೇಕು ಎಂಬುದಕ್ಕಾಗಿ ಇದನ್ನು ಮಾಡಿದ್ದಾರೆ. ದೇವಸ್ಥಾನದಲ್ಲಿ ನಿಂತು ಇದನ್ನು ಹೇಳುತ್ತಿದ್ದೇನೆ. ನಾನೇನು ಮಾಡಬೇಕೋ ಅದನ್ನು ಮಾಡ್ತೀನಿ, ಮುಂದಿನ ದಿನಗಳಲ್ಲಿ ಅಡಿಗಳಲ್ಲಿ ಇಲ್ಲಿ ಭೂಮಿ ವ್ಯವಹಾರ ನಡೆಯುತ್ತದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ: ತನ್ನ ನಿಲುವನ್ನು ಬದಲಿಸಿಕೊಂಡ ಚೀನಾ!

ಬೆಂಗಳೂರು

ಬೆಂಗಳೂರು: ಕೆ.ಆರ್.ಪುರಂ ವ್ಯಾಪ್ತಿಯ ಕುವೆಂಪುನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ “ಕುವೆಂಪುನಗರ ಪೀಪಲ್ಸ್ ವೆಲ್ಫೇರ್ ಅಸೋಸಿಯೇಷನ್” ವತಿಯಿಂದ ಇಂದು ಮಹಾತ್ಮ ಗಾಂಧಿಯವರ 154ನೇ ಜನ್ಮ ದಿನಾಚರನೆಯನ್ನು ಬಹಳ ವಿಭೃಂಜಣೆಯಿಂದ ಆಚರಿಸಲಾಯಿತು.

ಸಂಘದ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು ಮತ್ತು ಕುವೆಂಪುನಗರದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಗಣ್ಯರಿಂದ ಬಾಪೂಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಎಲ್ಲರಿಗೂ ಸಿಹಿ ಹಂಚಲಾಯಿತು.

ಮಹಾತ್ಮಾ ಗಾಂಧಿಯವರದ್ದು ಅಪರೂಪದ ವ್ಯಕ್ತಿತ್ವ; ಶಸ್ತ್ರಾಸ್ತ್ರಗಳ ವಿರುದ್ಧ ಹೋರಾಡಿ ಗೆದ್ದ ಅಹಿಂಸಾತ್ಮಕ ಪಾರಿವಾಳ. ಖ್ಯಾತ ವಿಜ್ಞಾನಿ ಆಲ್ಬರ್ಟ್ ಐನ್ಸ್ಟೈನ್ ಒಮ್ಮೆ ಅವರ ಬಗ್ಗೆ ಪ್ರಸ್ತಾಪಿಸುತ್ತಾ “ಇಂತಹ ಮನುಷ್ಯ ಈ ಭೂಮಿಯ ಮೇಲೆ ಬದುಕಿದ್ದರು ಎಂದು ಮುಂದಿನ ಪೀಳಿಗೆ ನಂಬುವುದು ತುಂಬಾ ಕಷ್ಟ” ಎಂದರು.

“ಉನ್ನತವಾದ ಗುರಿಯಿಟ್ಟುಕೊಂಡರೆ ಸಾಲದು; ಅದನ್ನು ಸಾಧಿಸುವ ಮಾರ್ಗವೂ ಪ್ರಾಮಾಣಿಕವಾಗಿರಬೇಕು” ಎಂದು ಹೇಳಿದ್ದು ಮಾತ್ರವಲ್ಲ ಹೇಳಿದಂತೆ ಬದುಕಿ ತೋರಿಸಿದವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು. ಅಹಿಂಸೆ ಮತ್ತು ಸತ್ಯ ಎಂದಿಗೂ ಸೋಲುವುದಿಲ್ಲ ಎಂದು ಅವರು ದೃಢವಾಗಿ ನಂಬಿದ್ದರು.

ಅನೇಕ ಗುಲಾಮಗಿರಿ ದೇಶಗಳಲ್ಲಿ ಜನರನ್ನು ಮುನ್ನಡೆಸುವ ನಾಯಕರು ಶಸ್ತ್ರಾಸ್ತ್ರಗಳನ್ನು ಹಿಡಿದು ಸ್ವಾತಂತ್ರ್ಯಕ್ಕಾಗಿ ಹೋರಾಡಿದಾಗ, ಅಹಿಂಸೆಯ ಮೂಲಕ ಬ್ರಿಟಿಷ್ ಸಾಮ್ರಾಜ್ಯಶಾಹಿ ವಿರುದ್ಧ ನಿರಾಯುಧವಾಗಿ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ಅವರು. ಅಹಿಂಸೆ, ಸತ್ಯ, ಸಮರ್ಪಣೆ, ಪರಿಶ್ರಮದಲ್ಲಿ ಕೊನೆಯವರೆಗೂ ದೃಢವಾಗಿದ್ದ ಅವರು, ಎಂದಿಗೂ ತಾನು ನಂಬಿದ ತತ್ವ ಸಿದ್ಧಾಂತಗಳೊಂದಿಗೆ ರಾಜಿ ಮಾಡಿಕೊಂಡಿಲ್ಲ ಮತ್ತು ಅವರು ಎಂದಿಗೂ ಹಿಂಸೆಯನ್ನು ಪ್ರತಿಪಾದಿಸಲಿಲ್ಲ.

ರಷ್ಯಾದ ವಿಮೋಚನೆಗಾಗಿ ಹೋರಾಡಿದ ಲೆನಿನ್, ಚೀನಾದ ವಿಮೋಚನೆಗಾಗಿ ಹೋರಾಡಿದ ಮಾವೋ (ಮಾಓ ತ್ಸೆ ತುಂಗ್) ಮುಂತಾದ ವಿಶ್ವದ ಯಾವುದೇ ದೇಶವನ್ನು ತೆಗೆದುಕೊಂಡರೂ ದೇಶಗಳು ಸ್ವಾತಂತ್ರ್ಯ ಪಡೆದಾಗ, ಆ ದೇಶದಲ್ಲಿ ಸ್ಥಾಪಿಸಲಾದ ಸರ್ಕಾರದ ನಾಯಕತ್ವವನ್ನು ಅವರೇ ವಹಿಸಿಕೊಂಡಿದ್ದರು.

ಆದರೆ ಭಾರತದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿಯವರು ಮಾತ್ರ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ, ಇತರರಿಗೆ ಆಡಳಿತದ ಜವಾಬ್ದಾರಿಯನ್ನು ವಹಿಸಿಕೊಟ್ಟು ಮೊದಲಿನಂತೆ ಸರಳ ವ್ಯಕ್ತಿಯಂತೆ ದೇಶದ ಏಕತೆಗೆ ಮತ್ತು ಪ್ರಗತಿಗೆ ಶ್ರಮಿಸಲು ಮುಂದಾದರು.

ಒಂದು ದೇಶವನ್ನು ಮುನ್ನಡೆಸುವ ನಾಯಕ ಹೇಗಿರಬೇಕು ಎಂಬುದಕ್ಕೆ ಅವರೇ ಉದಾಹರಣೆಯಾಗಿದ್ದರು. ಆದ್ದರಿಂದಲೇ ಮೋಹನ್ ದಾಸ್ ಕರಮಚಂದ ಗಾಂಧಿ “ಮಹಾತ್ಮ” ಆದರು. ಈ ಬಿರುದನ್ನು ಕವಿ ರವೀಂದ್ರನಾಥ ಟ್ಯಾಗೋರ್ ಅವರು ನೀಡಿದ್ದಾರೆ. 1909ರಲ್ಲಿ ಪ್ರಂಜಿವನ್ ಮೆಹ್ತಾ ಎಂಬ ಸ್ನೇಹಿತ ಗಾಂಧಿಗೆ ಬರೆದ ಪತ್ರದಲ್ಲಿ ಮೊದಲ ಬಾರಿಗೆ ಅವರನ್ನು “ಮಹಾತ್ಮ” ಎಂದು ಕರೆದಿದ್ದರು.

ಭಾರತ ಸ್ವತಂತ್ರವಾದಾಗ ವಿದೇಶಿ ಪತ್ರಕರ್ತರೊಬ್ಬರು ಮಹಾತ್ಮ ಗಾಂಧಿಯನ್ನು ಭೇಟಿಯಾಗಿ, “ದೇಶದ ಜನತೆಗೆ ನೀವು ಈಗ ಏನು ಹೇಳಲು ಬಯಸುತ್ತೀರಿ?” ಎಂದು ಕೇಳಿದರು. ಅದಕ್ಕೆ ಗಾಂಧಿಯವರು, “ನನ್ನ ಜೀವನವೇ ನನ್ನ ಸಂದೇಶ” ಎಂದರು.

“ನನ್ನ ಜೀವನವೇ ನನ್ನ ಸಂದೇಶ” ಎಂದು ಸಾರಿದ ಮಹಾತ್ಮ ಗಾಂಧಿಯವರ ಜನ್ಮ ದಿನಾಚರನೆಯನ್ನು ಆಚರಿಸುವುದಲ್ಲದೇ  ಅದನ್ನು ಮುಂದಿನ ತಲಮಾರಿಗೆ ಪರಿಚಯಿಸುವ ಕೆಲಸವೂ ಮಾಡುತ್ತಿರುವ ಕುವೆಂಪುನಗರ ಪೀಪಲ್ಸ್ ವೆಲ್ಫೇರ್ ಅಸೋಸಿಯೇಷನ್ ಪದಾಧಿಕಾರಿಗಳ ಮತ್ತು ಆಡಳಿತ ಮಂಡಳಿ ಸದಸ್ಯರ ಕಾರ್ಯ ಶ್ಲಾಘನೀಯ.

ಇದನ್ನೂ ಓದಿ: ಗಾಂಧಿ ಅವರ ಆಶಯದಂತೆ ಕಟ್ಟ ಕಡೆಯ ವ್ಯಕ್ತಿಗೂ ಬದುಕುವ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ! – ಸಿದ್ದರಾಮಯ್ಯ

ಬೆಂಗಳೂರು

ಡಿ.ಸಿ.ಪ್ರಕಾಶ್ ಸಂಪಾದಕರು

ಬೆಂಗಳೂರು: ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ನೀಡಿರುವ ಬಂದ್ ಕರೆ ಕಾನೂನು ಬಾಹಿರ, ಸಂವಿಧಾನ ವಿರೋಧಿ ಹಾಗೂ ಜನ ಸಾಮಾನ್ಯರ ಮೂಲಭೂತ ಹಕ್ಕುಚ್ಯುತಿ ಆಗುವುದರಿಂದ ಯಾವುದೇ ರೀತಿಯ ಬಂದ್‌ಗೆ ಅವಕಾಶವಿರುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 29 ರಂದು ವಿವಿಧ ರಾಜಕೀಯ ಪಕ್ಷಗಳು, ಕನ್ನಡ ಒಕ್ಕೂಟ ಕರ್ನಾಟಕ ರಾಜ್ಯ ಹಾಗೂ ಇತರ ಸಂಘಟನೆಗಳು ಕರ್ನಾಟಕದಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಹಾಗೂ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರದ ಆದೇಶದ ವಿರುದ್ಧ ‘ಕರ್ನಾಟಕ ಬಂದ್‌’ಗೆ ಕರೆ ನೀಡಿರುತ್ತಾರೆ.

ಯಾವುದೇ ಬಂದ್‌ಗೆ ಕರೆ ನೀಡುವುದು ಕಾನೂನು ಬಾಹಿರ, ಸಂವಿಧಾನ ವಿರೊಧಿ ಮತ್ತು ಜನ ಸಾಮಾನ್ಯರ ಮೂಲಭೂತ ಹಕ್ಕು ವಿರೊಧಿ ಎಂದು ಮಾನ್ಯ ಕೇರಳ ಹೈಕೋರ್ಟ್ ಎಐಆರ್ 1997 ಕೇರಳ 291 (ಫುಲ್ ಬೆಂಚ್)ನ ನ್ಯಾಯಾಲಯದ ತೀರ್ಪಿನಲ್ಲಿ ಘೋಷಿಸಿದ್ದು, ಈ ತೀರ್ಪನ್ನು ಮಾನ್ಯ ಸುಪ್ರೀಂ ಕೋರ್ಟ್ 1998ರಲ್ಲಿ ಸಿಪಿಐ (ಎಮ್) V/S ಭರತ್ ಕುಮಾರ್ ಪ್ರಕರಣದಲ್ಲಿ ಬಂದ್ ಕರೆ ನೀಡುವುದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂದು ಈ ಕೆಳಕಂಡಂತೆ ಆದೇಶಿಸಿರುತ್ತದೆ.

As we find that organized bodies or associations or registered political parties, by their act of calling and holding bundhs, trample upon the rights of the citizens of the country protected by the constitution, we are of the view that this court has sufficient jurisdiction to declare that the calling of “bundh” and the holding of it is unconstitutional especially since it is undoubted that the national by leading to national loss of production. We cannot also ignore the destruction of public and private property when a bundh is enforced by the political parties or other organisations. We are inclined to the view that the political parties and the organisations which call for such bundhs and enforce them are really liable to compensate the Government, the public and the private citizen for the loss suffered by them for such destruction. The state cannot shirk its responsibility of taking steps to recoup and of recouping the loss from the sponsors and organisers of such bundhs. We think that these aspects justify our intervention under Article 226 of the Constitution.

(ಯಾವುದೇ ರಾಜಕೀಯ ಪಕ್ಷಗಳು, ಯಾವುದೇ ಸಂಘಟಿಕರು ಬಂದ್ ಕರೆ ನೀಡಿದ ಸಂಧರ್ಭದಲ್ಲಿ, ಆಗುವ ಆಸ್ತಿಪಾಸ್ತಿಯ ನಷ್ಟಕ್ಕೆ ಅಂತಹ ಬಂದ್‌ಗಳ ಆಯೋಜಕರು ಮತ್ತು ಸಂಘಟಿಕರೇ ನೇರ ಹೊಣೆಗಾರರಾಗಿ ಮಾಡಿ, ನಷ್ಟವನ್ನು ಸರ್ಕಾರಕ್ಕೆ ಮರುಪಾವತಿಸಲು/ಭರಿಸಲು ಜವಾಬ್ದಾರರಾಗಿರುತ್ತಾರೆ. ಇದನ್ನು ಉಲ್ಲಂಘಿಸಿ ಬಂದ್ ಅಥವಾ ಮೆರವಣಿಗೆ ಹಮ್ಮಿಕೊಂಡಲ್ಲಿ ಕಾನೂನು ರೀತ್ಯಾ ಕ್ರಮಕ್ಕೆ ಅನುವು ಮಾಡಿಕೊಟ್ಟಂತಾಗುತ್ತದೆ).

ಬೆಂಗಳೂರು ನಗರದಲ್ಲಿ ವಿವಿಧ ಸಂಘಟಣೆಗಳು/ವ್ಯಕ್ತಿಗಳು ನಡೇಸುವ ಅನಧೀಕೃತ ಮೆರವಣಿಗೆ/ಧರಣಿಗಳಿಗೆ ಸಂಬಂಧಿಸಿದಂತೆ, ಮಾನ್ಯ ಸರ್ವೋಚ್ಚ ನ್ಯಾಯಲಯವು ರಿಟ್ ಅರ್ಜಿ ಸಂಖ್ಯೆ 1153/2017ರಲ್ಲಿ ಮಜ್ದೂರ್ ಕಿಸಾನ್ ಶಕ್ತಿ ಸಂಘಟನೆ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ನೀಡಿರುವ ನಿರ್ದೇಶನಗಳನ್ವಯ, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ದಾಖಲಿಸಿದ್ದ ರಿಟ್ ಅರ್ಜಿ ಸಂಖ್ಯೆ: 5781/2021ರ ನಿರ್ದೇಶನದಂತೆ ಮಾನ್ಯ ಪೊಲೀಸ್ ಆಯುಕ್ತರು ಬೆಂಗಳೂರು ನಗರ ರವರ Licensing and Regulation of Protests, Demonstrations and Protest Marches (Bangalore City) 2021 ಆದೇಶವನ್ನು ಬೆಂಗಳೂರು ನಗರ ವ್ಯಾಪ್ತಿಗೆ ಒಳಪಟ್ಟಂತೆ ಹೊರಡಿಸಿದ್ದು, ಘನ ಸರ್ಕಾರವು ಈ ಆದೇಶವನ್ನು ಕರ್ನಾಟಕ ರಾಜ್ಯ ಪ್ರಪತ್ರದಲ್ಲಿ ದಿನಾಂಕ: 10-01-2022 ರಂದು ಪ್ರಕಟಿಸಿರುತ್ತದೆ.

ಆದ್ದರಿಂದ ದಿನಾಂಕ: 29-09-2023 ರಂದು ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ನೀಡಿರುವ ಬಂದ್ ಕರೆ ಕಾನೂನು ಬಾಹಿರ, ಸಂವಿಧಾನ ವಿರೋಧಿ ಹಾಗೂ ಜನ ಸಾಮಾನ್ಯರ ಮೂಲಭೂತ ಹಕ್ಕುಚ್ಯುತಿ ಆಗುವುದರಿಂದ ಯಾವುದೇ ರೀತಿಯ ಬಂದ್‌ಗೆ ಅವಕಾಶವಿರುವುದಿಲ್ಲ. ಬೆಂಗಳೂರು ನಗರದಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹಮ್ಮಿಕೊಳಲು ಅವಕಾಶ ನೀಡಲು ಸಾಧ್ಯವಿರುವುದಿಲ್ಲ. ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಯವರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ಹಮ್ಮಿಕೊಳ್ಳಲು ಅವಕಾಶವಿರುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

ಬೆಂಗಳೂರು

ಬೆಂಗಳೂರು: ಬೆಂಗಳೂರು ಬಂದ್ ವೇಳೆಯಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ವಹಿವಾಟುಗಳಿಗೆ ಯಾರಿಂದಲೂ ತೊಂದರೆಯಾಗಿಲ್ಲ. ಒಟ್ಟು 771 ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಬೆಂಗಳೂರು ನಗರಾದ್ಯಂತ ಈ ದಿನ (ಸೆ.26) ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ಕೆಲವು ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದವು. ಈ ಹಿನ್ನಲೆಯಲ್ಲಿ, ನಗರಾದ್ಯಂತ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಡಲಾಗಿತ್ತು. ಎಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆದಿರುವುದಿಲ್ಲ. ವಾಹನ ಸಂಚಾರ ಮತ್ತು ಸಾರ್ವಜನಿಕ ವಹಿವಾಟುಗಳಿಗೆ ಯಾರಿಂದಲೂ ದಕ್ಕೆ ಆಗದಂತೆ ನೋಡಿಕೊಳ್ಳಲಾಗಿತ್ತು.

ಇದನ್ನೂ ಓದಿ: ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು! – ಸಿದ್ದರಾಮಯ್ಯ

ಬಂದ್ ಅಂಗವಾಗಿ ಕೆಲವು ಸಂಘಟನೆಗಳು ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಮತ್ತು ಮೆರೆವಣಿಗೆ ಮಾಡಲು ಯತ್ನಿಸಿದ್ದು, ಅವರನ್ನು ಪೊಲೀಸರು ಮುಂಜಾಗ್ರತ ಕ್ರಮವಾಗಿ ಬಂಧಿಸಿ, ನಂತರ ಬಿಡುಗಡೆ ಮಾಡಿರುತ್ತಾರೆ. ಈ ರೀತಿ ಒಟ್ಟು 771 ಪ್ರತಿಭಟನಾಕಾರರನ್ನು ಬಂಧಿಸಲಾಗಿರುತ್ತದೆ. ಆಟೋರಿಕ್ಷ ಸಂಚಾರ ಸೇರಿದಂತೆ ಸಾರಿಗೆ ವ್ಯವಸ್ಥೆ ಸಾಮಾನ್ಯವಾಗಿದ್ದು, ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್‌ಗಳು ಸಾಮಾನ್ಯವಾಗಿ ತೆರೆದಿದ್ದವು.

ಇದನ್ನೂ ಓದಿ: ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನ: ಹೆಚ್.ಡಿ.ಕುಮಾರಸ್ವಾಮಿ

ಇದೇ ಅಂಗವಾಗಿ ಸುಮಾರು ಒಂದು ಸಾವಿರ ಜನರು ಪೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡು, ಈ ಸಮಯದಲ್ಲಿ ವಿವಿಧ ಸಂಘಟನೆ ಮುಖಂಡರು ಸರ್ಕಾರದ ದೋರೆಣೆಯ ವಿರುದ್ಧ ಪ್ರತಿಭಟಿಸಿರುತ್ತಾರೆ. ನಂತರ ರಾಜ್ಯದ ಮಂತ್ರಿಗಳಾದ ಆರ್.ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿ ತೆರಳಿರುತ್ತಾರೆ. ಒಟ್ಟಾರೆ, ಜನ-ಸಾಮಾನ್ಯರಿಗೆ ಯಾವುದೇ ತೊಂದರೆ ಆಗದೇ ಬಂದ್ ಶಾಂತಿಯುತವಾಗಿ ಮುಕ್ತಾಯಗೊಂಡಿರುತ್ತದೆ” ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ ನಾನು ನಿಮಗೆ ನೀಡಿದ ಉಡುಗರೆ: ಪ್ರಧಾನಿ ಮೋದಿ

ಬೆಂಗಳೂರು

ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್‌ನಿಂದ ಯಾವುದೇ ಸಿಗ್ನಲ್ ಸ್ವೀಕರಿಸಲು ಸಾಧ್ಯವಾಗಲಿಲ್ಲ ಎಂದು ಇಸ್ರೋ ಹೇಳಿದೆ.

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರನ ದಕ್ಷಿಣ ಧ್ರುವವನ್ನು ಪರೀಕ್ಷಿಸಲು ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಜುಲೈ 14 ರಂದು ಮಧ್ಯಾಹ್ನ 2.35 ಕ್ಕೆ LVM3 M4 ರಾಕೆಟ್‌ನಲ್ಲಿ ಉಡಾವಣೆ ಮಾಡಿತು. ಇದು ಭೂಮಿಯ ಕಕ್ಷೆ, ಚಂದ್ರನ ಕಕ್ಷೆಯನ್ನು ದಾಟಿ, ಆಗಸ್ಟ್ 23 ರಂದು ಸಂಜೆ 6.04ಕ್ಕೆ ವಿಕ್ರಮ್ ಲ್ಯಾಂಡರ್ 40 ದಿನಗಳ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಿತು.

ಮುಂದಿನ 2 ಗಂಟೆಗಳ ನಂತರ ವಿಕ್ರಮ್ ಲ್ಯಾಂಡರ್‌ನಿಂದ ಪ್ರಗ್ಯಾನ್ ರೋವರ್ ಹೊರಬಂದಿತು. ಅದನ್ನು ವಿಕ್ರಮ್ ಲ್ಯಾಂಡರ್ ಮಗುವಿನಂತೆ ಮೇಲ್ವಿಚಾರಣೆ ಮಾಡುತಿತ್ತು. ರೋವರ್ ಅನ್ನು ಉಡಾವಣೆ ಮಾಡಿದ ದಿನ, ಚಂದ್ರನಲ್ಲಿ 14 ದಿನಗಳ (ಒಂದು ಚಂದ್ರನ ದಿನ) ನಂತರ ರಾತ್ರಿ ಮುಗಿದು, ಹಗಲು ಪ್ರಾರಂಭವಾದ ದಿನ. ಆ ದಿನವೇ ರೋವರ್ ತನ್ನ ಸಮೀಕ್ಷೆಯನ್ನು ಆರಂಭಿಸಿತು.

ಲ್ಯಾಂಡರ್‌ನಲ್ಲಿರುವ ‘ಲಿಪ್ಸ್’ ಎಂದು ಕರೆಯಲ್ಪಡುವ ‘ಸ್ಪೆಕ್ಟ್ರೋಸ್ಕೋಪ್ ಉಪಕರಣ’, ಚಂದ್ರನ ಮೇಲೆ ಸಲ್ಫರ್ ಇರುವಿಕೆಯನ್ನು ಅನುಮಾನಾಸ್ಪದವಾಗಿ ದೃಢಪಡಿಸಿತು. ತರುವಾಯ, ಅಲ್ಯೂಮಿನಿಯಂ, ಕ್ಯಾಲ್ಸಿಯಂ, ಕಬ್ಬಿಣ, ಕ್ರೋಮಿಯಂ, ಟೈಟಾನಿಯಂ, ಮ್ಯಾಂಗನೀಸ್, ಸಿಲಿಕಾನ್ ಮತ್ತು ಆಮ್ಲಜನಕ ಸೇರಿದಂತೆ ಖನಿಜಗಳ ಉಪಸ್ಥಿತಿಯನ್ನು ರೋವರ್ ದೃಢಪಡಿಸಿತು. ಮತ್ತು ವಿವಿಧ ಕೋನಗಳಲ್ಲಿ ಲ್ಯಾಂಡರ್ ಜೊತೆಗೆ ಸೇರಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯಲ್ಲಿ ವಿವಿಧ ಫೋಟೋಗಳನ್ನು ತೆಗೆದು, ಬೆಂಗಳೂರಿನ ನಿಯಂತ್ರಣ ಕೇಂದ್ರಕ್ಕೆ ಕಳುಹಿಸಿತು.

ಮುಂದುವರಿದು, ಚಂದ್ರನ ದಿನವು ಮುಗಿದು ಅಲ್ಲಿ ರಾತ್ರಿ ಪ್ರಾರಂಭವಾದಾಗ, ಕತ್ತಲೆಯಾದ ಚಂದ್ರನ ದಕ್ಷಿಣ ಧ್ರುವದಲ್ಲಿ ರೋವರ್ ಮತ್ತು ಲ್ಯಾಂಡರ್ ಸಮೀಕ್ಷೆಯನ್ನು ಕೈಗೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ತಿಂಗಳ ಆರಂಭದಲ್ಲಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯಲ್ಲಿ ಪ್ರಗ್ಯಾನ್ ರೋವರ್ ಅನ್ನು ನಿದ್ರಾವಸ್ಥೆಯಲ್ಲಿ ಇರಿಸಲಾಯಿತು. ಇದರ ನಂತರ, ಲ್ಯಾಂಡರ್ ಅನ್ನೂ ನಿದ್ರಿಸಲಾಯಿತು. ಈ ಹಿನ್ನಲೆಯಲ್ಲಿ, ಚಂದ್ರನಲ್ಲಿ ಮೊದಲ 14 ದಿನಗಳವರೆಗೆ ಸೂರ್ಯನ ಬೆಳಕನ್ನು ಹೊಂದಿದ್ದಾಗ, ರೋವರ್‌ನ ಬ್ಯಾಟರಿಗಳನ್ನು ಸೌರ ಫಲಕಗಳಿಂದ ಚಾರ್ಜ್ ಮಾಡಲಾಗಿರುತ್ತದೆ.

ಈ ಹಿನ್ನಲೆಯಲ್ಲಿ, ಚಂದ್ರನ ದಕ್ಷಿಣ ಧ್ರುವದಲ್ಲಿರುವ ಶಿವಶಕ್ತಿ ಬಿಂದುವಿನ ಮೇಲೆ ಸೂರ್ಯನು ಬೆಳಗಿದಾಗ, ಸ್ಲೀಪಿಂಗ್ ರೋವರ್ ಮತ್ತು ಲ್ಯಾಂಡರ್ ಉಪಕರಣಗಳ ಕಾರ್ಯಾಚರಣೆಯ ಸ್ಥಿತಿಯು ಸುಧಾರಿಸುತ್ತದೆ. 14 ದಿನಗಳ ಸುದೀರ್ಘ ಚಂದ್ರನ ರಾತ್ರಿಯಲ್ಲಿ, ಚಂದ್ರನ ಪರಿಸರವು ಸುಮಾರು 200 ಡಿಗ್ರಿ ಸೆಲ್ಸಿಯಸ್‌ನ ಘನೀಕರಿಸುವ ತಾಪಮಾನದಿಂದ ಆವೃತವಾಗಿರುತ್ತದೆ. ಅಂತಹ ತೀವ್ರ ಹವಾಮಾನದಲ್ಲಿ ತಾಂತ್ರಿಕ ಉಪಕರಣಗಳು ಕೆಲಸ ಮಾಡುವುದು ಅಸಾಧ್ಯ.

ಆದ್ದರಿಂದಲೇ ಅದನ್ನು ವಿಜ್ಞಾನಿಗಳು ನಿದ್ರಾವಸ್ಥೆಯಲ್ಲಿ ಇರಿಸಿದ್ದರು. ಈ ಹಿನ್ನಲೆಯಲ್ಲಿ ಇಂದು (ಶುಕ್ರವಾರ) ಸೂರ್ಯೋದಯ ಆರಂಭವಾದಾಗ, ನಿದ್ರಾವಸ್ಥೆಯಲ್ಲಿರುವ ಲ್ಯಾಂಡರ್ ಮತ್ತು ರೋವರ್‌ಗೆ ಮತ್ತೆ ಚಾಲನೆ ನೀಡಿ, ಸಂಶೋಧನೆಯ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪ್ರಯತ್ನ ನಡೆಯಲಿದೆ ಎಂದು ಇಸ್ರೋ ಮಾಹಿತಿ ನೀಡಿತ್ತು. ಅದರಂತೆ, ವಿಕ್ರಮ್ ಲ್ಯಾಂಡರ್ ಅನ್ನು ಮತ್ತೆ ಕಾರ್ಯಗತಗೊಳಿಸಲು ಪ್ರಯತ್ನಿಸಲಾಯಿತು. ಆದರೆ, ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್‌ನಿಂದ ಯಾವುದೇ ಸಿಗ್ನಲ್ ಸ್ವೀಕರಿಸಲು ಸಾಧ್ಯವಾಗಿಲ್ಲ ಎಂದು ಇಸ್ರೋ ಹೇಳಿದೆ. ಸಿಗ್ನಲ್ ಪಡೆಯುವ ಪ್ರಯತ್ನ ಮುಂದುವರಿಯಲಿದೆ ಎಂದೂ ಇಸ್ರೋ ತಿಳಿಸಿದೆ.

ಬೆಂಗಳೂರು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಸಿ.ಎಂ.ಶಿವಕುಮಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಬಿಬಿಎಂಪಿಯ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 45 ವರ್ಷದ ಶಿವಕುಮಾರ್ ಅವರು ಸೇರಿದಂತೆ 9 ನೌಕರರು ಗಾಯಗೊಂಡಿದ್ದರು.ಶೇ. 25 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಶಿವಕುಮಾರ್ ಅವರನ್ನು ಕಳೆದ ಕೆಲ ದಿನಗಳ ಹಿಂದೆ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಶಿವಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅಪೊಲೋ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಮೃತರಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ.ಶಿವಕುಮಾರ್ ಅವರು ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ಬಿಬಿಎಂಪಿ ಮುಖ್ಯ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಅವರು ಮೈಸೂರು ಜಿಲ್ಲೆಯ ನಂಜನಗೂಡು ಮೂಲದವರಾಗಿದ್ದು, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಬೆಂಗಳೂರು

ಬೆಂಗಳೂರು: ಸಂಚಾರ ಉತ್ತರ ವಿಭಾಗದ ವಿವಿಧ ಪೊಲೀಸ್ ಠಾಣಾ ಸರಹದ್ದಿನ ರಸ್ತೆಗಳಲ್ಲಿ, ವ್ಹಿಲೀಂಗ್ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಬಂದ ಹಿನ್ನಲೆಯಲ್ಲಿ, ಕಾರ್ಯ ಪ್ರವೃತ್ತರಾದ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಚಿನ್ ಪಿ ಘೋರ್ಪಡೆ ಹಾಗೂ ಅವರ ಅಧಿಕಾರಿ ಸಿಬ್ಬಂಧಿಯವರ ತಂಡಗಳು, ಹಲವು ರಸ್ತೆಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿಕೊಂಡು, ವ್ಹಿಲೀಂಗ್ ಮಾಡುವವರ ವಿರುದ್ಧ ಕ್ರಮ ಕೈಗೊಂಡಿರುತ್ತಾರೆ.

ವ್ಹಿಲೀಂಗ್ ಮಾಡುವವರ ವಿರುದ್ಧ ಪೀಣ್ಯ, ಚಿಕ್ಕಜಾಲ, ಹೆಬ್ಬಾಳ ಮತ್ತು ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳು ಹಾಗೂ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿರುತ್ತದೆ. ಒಟ್ಟು 6 ಪ್ರಕರಣಗಳನ್ನು ದಾಖ್ಲಿಸಿ, 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಚರಣೆಯಲ್ಲಿ ಒಟ್ಟು 6 ಆರೋಪಿತರ ಪೈಕಿ, 5 ಜನ 18 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಒಬ್ಬ ಅಪ್ರಾಪ್ತನಾಗಿರುತ್ತಾನೆ. ಆರೋಪಿಗಳ ವಾಹನಕ್ಕೆ ಸಂಬಂಧಿಸಿದ ಆರ್.ಸಿ.ಯನ್ನು ರದ್ದುಗೊಳಿಸಲು ಹಾಗೂ ಡ್ರೈವಿಂಗ್ ಲೈಸನ್ಸ್ ಅಮಾನತ್ತುಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಹಾಗೂ ಜಂಟಿ ಪೊಲೀಸ್ ಆಯುಕ್ತರು ಸಂಚಾರ ಎಂ.ಎನ್.ಅನುಚೇತ್ ರವರು ಈ ರೀತಿ ವ್ಹಿಲೀಂಗ್ ಮಾಡುವವರ ವಿರುದ್ದ ಬೆಂಗಳೂರಿನಾದ್ಯಂತ ಕಾರ್ಯಚರಣೆಯನ್ನು ಮುಂದುವರೆಸಲಾಗುವುದೆಂದು ತಿಳಿಸಿರುತ್ತಾರೆ.