ದೇಶ Archives » Page 11 of 53 » Dynamic Leader
October 23, 2024
Home Archive by category ದೇಶ (Page 11)

ದೇಶ

ದೇಶ

ನವದೆಹಲಿ: ಸಂವಿಧಾನದ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

25 ಜೂನ್ 1975 ರಂದು ಭಾರತದಲ್ಲಿ ಮೊದಲ ಬಾರಿಗೆ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಈ ಕುರಿತು ಪ್ರಧಾನಿ ಮೋದಿ ಅವರು ತಮ್ಮ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, “ಇಂದು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಎಲ್ಲರನ್ನೂ ಗೌರವಿಸುವ ದಿನವಾಗಿದೆ. ಕಾಂಗ್ರೆಸ್ ಸರ್ಕಾರ ಹೇರಿದ ತುರ್ತು ಪರಿಸ್ಥಿತಿಯು ಅವರು ಭಾರತದ ಸಂವಿಧಾನವನ್ನು ಹೇಗೆ ಸಂಪೂರ್ಣವಾಗಿ ಬುಡಮೇಲು ಮಾಡಿದರು ಎಂಬುದನ್ನು ನೆನಪಿಸುತ್ತದೆ.

ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ಗೆ ನಮ್ಮ ಸಂವಿಧಾನದ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕು ಇಲ್ಲ. ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಿದವರು ಮತ್ತು ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದವರು ಇವರು. ತುರ್ತು ಪರಿಸ್ಥಿತಿ ಹೇರಲು ಕಾರಣವಾದ ಭಾವನೆ ಅವರ ಪಕ್ಷದ ಸದಸ್ಯರಲ್ಲಿ ಜೀವಂತವಾಗಿದೆ.

ಅಧಿಕಾರ ಉಳಿಸಿಕೊಳ್ಳಲು ಅಂದಿನ ಕಾಂಗ್ರೆಸ್ ಸರಕಾರ ಪ್ರಜಾಪ್ರಭುತ್ವದ ತತ್ವವನ್ನು ಕಡೆಗಣಿಸಿತು. ಕಾಂಗ್ರೆಸ್ ಪಕ್ಷಕ್ಕೆ ಮಣಿಯದವರನ್ನು ಹಿಂಸಿಸಲಾಯಿತು. ದುರ್ಬಲ ವರ್ಗಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕವಾಗಿ ಪ್ರತಿಗಾಮಿ ನೀತಿಗಳನ್ನು ಅನಾವರಣಗೊಳಿಸಲಾಯಿತು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೇಶ

ನವದೆಹಲಿ: ಎನ್‌ಡಿಎ ಸರ್ಕಾರದ ಮೊದಲ 15 ದಿನಗಳಲ್ಲಿ ನೀಟ್ ಮತ್ತು ನೆಟ್ ಪರೀಕ್ಷೆಯ ಅವ್ಯವಹಾರ, ರೈಲು ಅಪಘಾತ ಸೇರಿದಂತೆ 10 ಅಹಿತಕರ ಘಟನೆಗಳು ನಡೆದಿದ್ದು, ಸರ್ಕಾರವನ್ನು ಉಳಿಸುವತ್ತ ಪ್ರಧಾನಿ ಗಮನ ಹರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸಮ್ಮಿಶ್ರ ಸರ್ಕಾರದ ಮೊದಲ 15 ದಿನಗಳಲ್ಲಿ 10 ಅಹಿತಕರ ಘಟನೆಗಳು ನಡೆದಿವೆ ಎಂದು ತಿಳಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಅದರಲ್ಲಿ ರೈಲು ಅಪಘಾತ, ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿ, ನೀಟ್ ಅವ್ಯವಹಾರ, ನೀಟ್ ಸ್ನಾತಕೋತ್ತರ ಪರೀಕ್ಷೆ ರದ್ದತಿ, ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನೀರಿನ ಕೊರತೆ, ಶಾಖ ಅಲೆಗಳ ವಿಚಾರದಲ್ಲಿ ಸುರಕ್ಷತಾ ಕ್ರಮಗಳ ಕೊರತೆಯಿಂದ ಪ್ರಾಣಹಾನಿ, ಹಾಲು, ಬೇಳೆಕಾಳುಗಳು, ಗ್ಯಾಸ್ ಮತ್ತು ಟೋಲ್ ದರ ಹೆಚ್ಚಲ ಮುಂತಾದ ಎಲ್ಲವನ್ನೂ ಪಟ್ಟಿ ಮಾಡಿದ್ದಾರೆ.

ನರೇಂದ್ರ ಮೋದಿ ಅವರು ಮಾನಸಿಕವಾಗಿ ಕುಗ್ಗಿದಂತೆ ಕಾಣುತ್ತಿದ್ದು, ಸರ್ಕಾರವನ್ನು ಉಳಿಸುವಲ್ಲಿ ನಿರತರಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನದ ಮೇಲಿನ ಮೋದಿ ಮತ್ತು ಅವರ ಸರ್ಕಾರದ ದಾಳಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಮತ್ತು ಯಾವುದೇ ಸಂದರ್ಭದಲ್ಲಿ ಅವಕಾಶ ನೀಡುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಭಾರತದ ಪ್ರಬಲ ವಿರೋಧ ಪಕ್ಷವಾಗಿ ಜನರ ಧ್ವನಿಯಾಗುತ್ತೇವೆ ಎಂದಿರುವ ರಾಹುಲ್ ಗಾಂಧಿ, ಪ್ರಧಾನಿಯನ್ನು ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ದೇಶ

ಡಿ.ಸಿ.ಪ್ರಕಾಶ್

ನವದೆಹಲಿ: ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇಂಡಿಯಾ ಮೈತ್ರಿಕೂಟದ ಸಂಸದರು ಸಮಾರಂಭವನ್ನು ಬಹಿಷ್ಕರಿಸಿದರು.

ಕೇರಳದಿಂದ 8 ಬಾರಿ ಸಂಸದರಾಗಿರುವ ಕೋಡಿಕುನ್ನಿಲ್ ಸುರೇಶ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವ ಬದಲು 7 ಬಾರಿ ಸಂಸದರಾಗಿರುವ್ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಎಂದು ಘೋಷಿಸಿರುವುದನ್ನು ವಿರೋಧಿಸಿ ಇಂಡಿಯಾ ಮೈತ್ರಿಕೂಟದ ಸಂಸದರು ಕಾರ್ಯಕ್ರಮವನ್ನು ಬಹಿಷ್ಕರಿಸಿದರು.

ಸಂಸತ್ತಿನ 18ನೇ ಲೋಕಸಭೆ ಚುನಾವಣೆ ಇತ್ತೀಚೆಗೆ ಮುಕ್ತಾಯಗೊಂಡಿದ್ದು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ 3ನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಕಳೆದ 9 ರಂದು ಮೋದಿ ಅವರು 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರೊಂದಿಗೆ ಸಚಿವರೂ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ನಂತರ, ಜೂನ್ 24 ರಂದು ಹೊಸ ಲೋಕಸಭೆಯ ಮೊದಲ ಅಧಿವೇಶನ ಪ್ರಾರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿತ್ತು.

ಕೆಲ ದಿನಗಳ ಹಿಂದೆ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ನೇಮಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕುರಿತು ಆದೇಶ ಹೊರಡಿಸಿದರು.

ಈ ಹಿನ್ನೆಲೆಯಲ್ಲಿ, 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದು (ಸೋಮವಾರ) ಆರಂಭವಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಉಪಾಧ್ಯಕ್ಷ ಜಗದೀಪ್ ಧನಕರ್ ಮತ್ತಿತರರು ಉಪಸ್ಥಿತರಿದ್ದರು.

ಆದಾಗ್ಯೂ, ಇಂಡಿಯಾ ಮೈತ್ರಿಕೂಟದ ಸಂಸದರು ಸಮಾರಂಭವನ್ನು ಬಹಿಷ್ಕರಿಸಿದರು. ಕೇರಳದಿಂದ 8 ಬಾರಿ ಸಂಸದರಾಗಿರುವ ಕೋಡಿಕುನ್ನಿಲ್ ಸುರೇಶ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವ ಬದಲು 7 ಬಾರಿ ಸಂಸದರಾಗಿರುವ್ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಎಂದು ಘೋಷಿಸಿರುವುದನ್ನು ವಿರೋಧಿಸಿ ಇಂಡಿಯಾ ಮೈತ್ರಿಕೂಟದ ಸಂಸದರು ಕಾರ್ಯಕ್ರಮವನ್ನು ಬಹಿಷ್ಕರಿಸಿದರು.

ಲೋಕಸಭೆ ಬೆಳಗ್ಗೆ 11 ಗಂಟೆಗೆ ಸಮಾವೇಶಗೊಂಡಾಗ ಹಂಗಾಮಿ ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿಕೊಂಡ ಭರ್ತೃಹರಿ ಮಹತಾಬ್ ಪ್ರಧಾನಿ ಮೋದಿ ಮತ್ತು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಬಳಿಕ ಇತರೆ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿಕೊಂಡರು. ಒಟ್ಟು 280 ಸದಸ್ಯರು ಇಂದು ಅಧಿಕಾರ ಸ್ವೀಕರಿಸುತ್ತಿದ್ದಾರೆ. ಉಳಿದ 263 ಸದಸ್ಯರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದರ ಬೆನ್ನಲ್ಲೇ 26 ರಂದು ಲೋಕಸಭೆ ಸ್ಪೀಕರ್ ಚುನಾವಣೆ ನಡೆಯಲಿದೆ. 27 ರಂದು ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಲಿದ್ದಾರೆ.

ದೇಶ

ನವದೆಹಲಿ: ‘ಕಾಂಗ್ರೆಸ್ ಎಲ್ಲೇ ಅಧಿಕಾರದಲ್ಲಿದ್ದರೂ ಅದು ಭಾರತದ ಹಣವನ್ನು ಭಾರತೀಯರಿಗೆ ಖರ್ಚು ಮಾಡುತ್ತದೆ; ಬಂಡವಾಳಶಾಹಿಗಳಿಗೆ ಅಲ್ಲ. ಇದು ನಮ್ಮ ಭರವಸೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಹೇಳಿದ್ದಾರೆ.

ಈ ಕುರಿತು ಅವರು ತಮ್ಮ ‘ಎಕ್ಸ್’ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಹೇಳಿಕೆಯಲ್ಲಿ, ತೆಲಂಗಾಣ ರೈತ ಕುಟುಂಬಗಳಿಗೆ ಅಭಿನಂದನೆಗಳು. 2 ಲಕ್ಷದವರೆಗಿನ ಎಲ್ಲಾ ಸಾಲಗಳನ್ನು ಮನ್ನಾ ಮಾಡುವ ಮೂಲಕ, 40 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳನ್ನು ಸಾಲದಿಂದ ಮುಕ್ತಗೊಳಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಐತಿಹಾಸಿಕವಾದ ಕ್ರಮ ಕೈಗೊಂಡಿದೆ.

ರೈತರು ಏನು ಹೇಳುತ್ತಾರೋ ಅದನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತದೆ. ಇದುವೇ ನನ್ನ ಆಲೋಚನೆ ಮತ್ತು ನನ್ನ ಅಭ್ಯಾಸವಾಗಿದೆ. ರೈತರು, ಕಾರ್ಮಿಕರು ಸೇರಿದಂತೆ ದಲಿತ ಸಮುದಾಯದ ಬಲವರ್ಧನೆಗೆ ಕಾಂಗ್ರೆಸ್ ಸರಕಾರ ಮುಂದಾಗಲಿದೆ.

ತೆಲಂಗಾಣ ಸರ್ಕಾರದ ಈ ನಿರ್ಧಾರ ಅದಕ್ಕೆ ನಿದರ್ಶನ. ಕಾಂಗ್ರೆಸ್ ಎಲ್ಲೇ ಅಧಿಕಾರದಲ್ಲಿದ್ದರೂ ಅದು ಭಾರತದ ಹಣವನ್ನು ಭಾರತೀಯರಿಗೆ ಖರ್ಚು ಮಾಡುತ್ತದೆ. ಬಂಡವಾಳಶಾಹಿಗಳಿಗೆ ಅಲ್ಲ. ಇದು ನಮ್ಮ ಭರವಸೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಹೇಳಿದ್ದಾರೆ.

ದೇಶ

ನವದೆಹಲಿ: 3ನೇ ಬಾರಿಗೆ ಗೆದ್ದಿರುವ ಪ್ರಧಾನಿ ಮೋದಿ ಇಂದು (ಜೂನ್-18) ತಮ್ಮ ತವರು ಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಇಲ್ಲಿ ರಾತ್ರಿ ಗಂಗಾನದಿಯಲ್ಲಿ ವಿಶೇಷ ಆರತಿಯಲ್ಲಿ ಪಾಲ್ಗೊಳ್ಳುತ್ತಾರೆ.

ಬೆಳಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ರೈತರಿಗೆ ಸಹಾಯಧನ ನೀಡುವ ಯೋಜನೆಯನ್ನು ಉದ್ಘಾಟಿಸಲಿದ್ದು, ಕಡಿಮೆ ಆದಾಯದ ರೈತರಿಗೆ ಹಣಕಾಸಿನ ನೆರವು ನೀಡುವ ಯೋಜನೆಗಾಗಿ ಮೊದಲ ಹಂತದಲ್ಲಿ ರೂ.20 ಸಾವಿರ ಕೋಟಿ ನೀಡಲು ಅನುಮೋದನೆ ನೀಡಿದ್ದಾರೆ. ಇದರಿಂದ ದೇಶಾದ್ಯಂತ 9.25 ಕೋಟಿ ಜನರಿಗೆ ಅನುಕೂಲವಾಗಲಿದೆ.

ಇದರೊಂದಿಗೆ ತನಗೆ ಮತ ನೀಡಿದ ಜನರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.

ಕ್ರೈಂ ರಿಪೋರ್ಟ್ಸ್ ದೇಶ

ಕೊಯಮತ್ತೂರು: ‘ಸಿಮಿ’ಯನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸುವ ಕುರಿತು ಇಂದು ಮತ್ತು ನಾಳೆ (ಜೂನ್ 18 ಮತ್ತು 19) ಕುನ್ನೂರು ಮುನ್ಸಿಪಲ್ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದೆ.

ಕೊಯಮತ್ತೂರು ಪೊಲೀಸ್ ವರದಿ:
ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಸಿಮಿ) ಅನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸುವ ಬಗ್ಗೆ, ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ನೇತೃತ್ವದ, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಮಧ್ಯಸ್ಥಿಕೆ ನ್ಯಾಯಮಂಡಳಿ, ಕುನ್ನೂರು ಪುರಸಭೆ ಕಚೇರಿ ಸಭಾಂಗಣದಲ್ಲಿ ಇಂದು ಮತ್ತು ನಾಳೆ ನಡೆಯುತ್ತದೆ.

ಈ ಕುರಿತು ಸಾಕ್ಷ್ಯ ನೀಡಲು ಬಯಸುವವರು ತಮ್ಮ ಅಫಿಡವಿಟ್‌ಗಳನ್ನು (ಎರಡು ಪ್ರತಿಗಳು) ಸಲ್ಲಿಸಬಹುದು. ಬೆಳಗ್ಗೆ 10:00 ಗಂಟೆಯಿಂದ ವಿಚಾರಣೆ ನಡೆಯಲಿದ್ದು, ಯಾವುದೇ ಅಡ್ಡ ಪರೀಕ್ಷೆ ಇದ್ದರೆ, ಅದಕ್ಕಾಗಿ ನೀವು ನ್ಯಾಯಮಂಡಳಿಯಲ್ಲಿ ಖುದ್ದಾಗಿ ಹಾಜರಾಗಬಹುದು ಎಂದು ಪೊಲೀಸ್ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ದೇಶ

ಸುರೇಶ್ ಗೋಪಿ ಮಗಳ ಮದುವೆ ಗುರುವಾಯೂರು ದೇವಸ್ಥಾನದಲ್ಲಿ ಕೆಲವು ತಿಂಗಳ ಹಿಂದೆ ನಡೆದಿತ್ತು. ಅದರಲ್ಲಿ, ಪ್ರಧಾನಿ ಮೋದಿ ಭಾಗವಹಿಸಿದ್ದರು. ವಿವಾಹದ ನಂತರ, ಸುರೇಶ್ ಗೋಪಿ ಅವರು ತಮ್ಮ ಕುಟುಂಬದೊಂದಿಗೆ ಲೂರ್ದ್ ಮಾತೆಯ ದೇಗುಲಕ್ಕೆ ತೆರಳಿ ಲೂರ್ದ್ ಮಾತೆಗೆ ಚಿನ್ನದ ಕಿರೀಟವನ್ನು ಅರ್ಪಿಸಿದ್ದರು.

ಕಳೆದ ಸಂಸತ್ ಚುನಾವಣೆಯಲ್ಲಿ ಕೇರಳ ರಾಜ್ಯದಲ್ಲಿ ಗೆಲುವು ಸಾಧಿಸಿದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ. ಸುರೇಶ್ ಗೋಪಿ ಅವರು ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿಕೊಂಡ ಬೆನ್ನಲ್ಲೇ ಧನ್ಯವಾದ ಅರ್ಪಿಸುವ ಸಲುವಾಗಿ ದೇವಸ್ಥಾನಗಳಿಗೆ ತೆರಳಿ ಹರಕೆ ಸಲ್ಲಿಸುವುದರಲ್ಲಿ ಬ್ಯುಸಿಯಾಗಿದ್ದಾರೆ.

ತಾಳಿಕೋಟ ಮಹಾದೇವ ದೇಗುಲ ಸೇರಿದಂತೆ ದೇಗುಲಗಳಲ್ಲಿ ಪೂಜೆ ಸಲ್ಲಿಸಿದ ಸುರೇಶ್ ಗೋಪಿ, ತ್ರಿಶೂರಿನ ಲೂರ್ದ್ ಮಾತೆಗೆ 20 ಗ್ರಾಂ ಚಿನ್ನದ ಶಿಲುಬೆ ಮಾಲೆಯನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ. ನಂತರ ‘ಧನ್ಯವಾದದಿಂದ ಹಾಡುತ್ತೇನೆ ದೇವರೇ…’ ಗೀತೆಯನ್ನು ಹಾಡುವ ಮೂಲಕ ಲೂರ್ದ್ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸುರೇಶ್ ಗೋಪಿ, “ಯಶಸ್ವಿಯ ಕೃತಜ್ಞತೆ ಹೃದಯದಲ್ಲಿದೆ; ಇದು ವಸ್ತುಗಳಲ್ಲಿ ಇಲ್ಲ.. ಭಕ್ತಿಯ ಸಂಕೇತವೇ ಈ ಕಾಣಿಕೆ” ಎಂದು ಹೇಳಿದರು. ಸುರೇಶ್ ಗೋಪಿ ಅವರಿಗೆ ಈಗಾಗಲೇ ತ್ರಿಶೂರ್ ಲೂರ್ದ್ ಮಾತೆಯ ದೇವಸ್ಥಾನದ ಮೇಲೆ ಬದ್ಧತೆ ಮತ್ತು ನಂಬಿಕೆ ಇದೆ. ಹಿಂದೂ ದೇವಾಲಯಗಳಂತೆ, ಸುರೇಶ್ ಗೋಪಿ ಅವರು ಲೂರ್ದ್ ಮಾತೆಯ ದೇವಾಲಯಕ್ಕೂ ಪ್ರಾಮುಖ್ಯತೆಯನ್ನು ನೀಡುತ್ತಿದ್ದಾರೆ.

ಕೆಲ ತಿಂಗಳ ಹಿಂದೆ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ಸುರೇಶ್ ಗೋಪಿ ಅವರ ಮಗಳ ಮದುವೆ ನಡೆದಿತ್ತು. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ವಿವಾಹದ ನಂತರ, ಸುರೇಶ್ ಗೋಪಿ ಅವರು ತಮ್ಮ ಕುಟುಂಬದೊಂದಿಗೆ ಲೂರ್ದ್ ಮಾತೆಯ ದೇಗುಲಕ್ಕೆ ತೆರಳಿ ಲೂರ್ದ್ ಮಾತೆಗೆ ಚಿನ್ನದ ಕಿರೀಟವನ್ನು ಅರ್ಪಿಸಿದರು. ಆ ಸಮಯದಲ್ಲಿ ಅವರು ನೀಡಿದ ಚಿನ್ನದ ಕಿರೀಟದ ಬಗ್ಗೆ ವಿವಾದಗಳು ಹುಟ್ಟಿಕೊಂಡಿತು.

ಚಿನ್ನದ ಕಿರೀಟವೆಂದು ಹೇಳಿ, ತಾಮ್ರದ ಲೋಹದಲ್ಲಿ ಚಿನ್ನ ಲೇಪಿತ ಕಿರೀಟವನ್ನು ಸಿದ್ದಪಡಿಸಿ ಸುರೇಶಗೋಪಿ ನೀಡಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡಲಾಗಿತ್ತು. ಅದನ್ನು ವಿರೋಧ ಪಕ್ಷಗಳೂ ಚರ್ಚೆಯ ವಿಷಯವಾಗಿಸಿತ್ತು. ಈ ಚರ್ಚೆಗೆ ಸುರೇಶಗೋಪಿ ಕಟುವಾದ ಮಾತುಗಳಿಂದ ಪ್ರತಿಕ್ರಿಯಿಸಿದ್ದರು. ಇಂತಹ ಸನ್ನಿವೇಶದಲ್ಲೇ, ಚುನಾವಣೆ ಮುಗಿದ ನಂತರ ಸುರೇಶಗೋಪಿ ಅವರು ಲೂರ್ದ್ ಮಾತೆ ದೇವಾಲಯಕ್ಕೆ ಚಿನ್ನದ ಶಿಲುಬೆಯ ಮಾಲೆಯನ್ನು ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶಗೋಪಿ, “ತ್ರಿಶೂರ್‌ನಲ್ಲಿ ನನಗೆ ಈ ವಿಜಯವನ್ನು ನೀಡಿದ ಎಲ್ಲಾ ದೇವರುಗಳಿಗೆ ಹಾಗೂ ಲೂರ್ದು ಮಾತೆಗೆ ನಮಸ್ಕಾರ. ಈ ಗೆಲುವು ದೊಡ್ಡ ಹೋರಾಟಕ್ಕೆ ದೇವರು ಕೊಟ್ಟ ಪ್ರತಿಫಲ. ತ್ರಿಶೂರಿನ ಮತದಾರರು ಪ್ರಜಾ ದೈವಗಳು. ನಾನು ಜನರನ್ನು ಆರಾಧಿಸುತ್ತೇನೆ. ಮತದಾರರ ದಿಕ್ಕು ತಪ್ಪಿಸುವ ಯತ್ನ ನಡೆದಿದೆ. ಆದರೆ ದೇವರುಗಳು ಅವರಿಗೆ ಮಾರ್ಗದರ್ಶನ ನೀಡಿದರು” ಎಂದು ಲೂರ್ದ್ ಮಾತೆಯ ಬಗ್ಗೆ ಉತ್ಸಾಹದಿಂದ ಹೇಳಿದ್ದಾರೆ.

ದೇಶ

ನವದೆಹಲಿ: ಭಾರತದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ತಿರುಚಲು ಸಾಧ್ಯವಿಲ್ಲ ಎಂದು ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಎಲೋನ್ ಮಸ್ಕ್:
ಪ್ರಶ್ನೆ: “ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ತೆಗೆಯಬೇಕು. ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಮನುಷ್ಯರು ಅಥವಾ ಎಐ ಹ್ಯಾಕ್ ಮಾಡುವ ಅಪಾಯವು ಚಿಕ್ಕದಾದರೂ ಅದು ದೊಡ್ಡದಾಗಿದೆ” ಎಂದು ‘ಎಕ್ಸ್’ ಮಾಲೀಕ ಎಲೋನ್ ಮಸ್ಕ್ ಹೇಳಿದ್ದಾರೆ.

ಉತ್ತರ:
ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ಈ ಕುರಿತು ಪ್ರತಿಕ್ರಿಯಿಸಿ, “ಸುರಕ್ಷಿತ ಡಿಜಿಟಲ್ ಯಂತ್ರಾಂಶವನ್ನು ಯಾರೂ ನಿರ್ಮಿಸಲು ಸಾಧ್ಯವಿಲ್ಲ ಎಂದು ಎಲೋನ್ ಮಸ್ಕ್ ಹೇಳಿದ್ದಾರೆ. ಆದರೆ, ಭಾರತದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ದುರ್ಬಳಕೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ರಾಜೀವ್ ಚಂದ್ರಶೇಖರ್

ಎಲೋನ್ ಮಸ್ಕ್ ಮರುಪ್ರಶ್ನೆ:
ಭಾರತದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರವನ್ನು ದುರ್ಬಳಕೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಿರುವ ಎಲೋನ್ ಮಸ್ಕ್ , “ಏನು ಬೇಕಾದರೂ ಹ್ಯಾಕ್ ಮಾಡಬಹುದು” ಎಂದು ಉತ್ತರಿಸಿದ್ದಾರೆ.

ಉತ್ತರ:
ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್, “ಎಲೆಕ್ಟ್ರಾನಿಕ್ ಸಾಧನಗಳನ್ನು ಹ್ಯಾಕ್ ಮಾಡಬಹುದಾದರೂ, ಭಾರತೀಯ ಎಲೆಕ್ಟ್ರಾನಿಕ್ ಮತಯಂತ್ರಗಳು ವಿಶ್ವಾಸಾರ್ಹವಾಗಿವೆ. ಇದನ್ನು ಬ್ಲೂಟೂತ್ ಅಥವಾ ವೈ-ಫೈ ಮೂಲಕ ಸಂಪರ್ಕಿಸಲು ಸಾಧ್ಯವಿಲ್ಲ” ಎಂದು ಪ್ರತಿಯುತ್ತರ ನೀಡಿದ್ದಾರೆ.

ಕ್ರೈಂ ರಿಪೋರ್ಟ್ಸ್ ದೇಶ

ಮಧ್ಯಪ್ರದೇಶದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದರೂ ಅಕ್ರಮ ಗೋಮಾಂಸ ದಂಧೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಇಂತಹ ಗೋಮಾಂಸ ದಂಧೆ ಮಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ದೇಶದ ಕೆಲವೆಡೆ ವಾಹನಗಳಲ್ಲಿ ಗೋವುಗಳನ್ನು (ಅಕ್ರಮವಾಗಿ) ಸಾಗಾಟ ಮಾಡುವವರನ್ನು ಗೋರಕ್ಷಕರು ಎಂದು ಹೇಳಿಕೊಳ್ಳುವ ಹಿಂದುತ್ವವಾದಿಗಳು ಹೊಡೆದು ಸಾಯಿಸಿದ ಘಟನೆಗಳು ನಡೆದಿವೆ.

ಈ ಹಿನ್ನೆಲೆಯಲ್ಲಿ, ಮಧ್ಯಪ್ರದೇಶದ ಮಾಂಡ್ಲಾ ಬಳಿಯ ಬೈನ್ವಾಹಿಯಲ್ಲಿ ಮಾಂಸಕ್ಕಾಗಿ ಅಕ್ರಮವಾಗಿ ಗೋವುಗಳನ್ನು ಸಾಕಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ತಕ್ಷಣ ಪೊಲೀಸರು ಮತ್ತು ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲಿ ಮಾಂಸಕ್ಕಾಗಿ 150 ಹಸುಗಳನ್ನು ಕಟ್ಟಲಾಗಿದ್ದು, ಅವುಗಳನ್ನು ರಕ್ಷಿಸಿದ ಅಧಿಕಾರಿಗಳು ಹಸುಗಳನ್ನು ಕಟ್ಟಿ ಹಾಕಿದ್ದವರ ಮನೆಗಳಲ್ಲಿ ತಪಾಸಣೆ ನಡೆಸಲಾಗಿ ಅವರ ಮನೆಯಲ್ಲಿ ಫ್ರಿಡ್ಜ್ ನಲ್ಲಿ ಮಾಂಸ ಇತ್ತು ಎಂದು ಹೇಳಲಾಗುತ್ತದೆ.

ಮಾಂಸವನ್ನು ವಶಪಡಿಸಿಕೊಂಡ ಅಧಿಕಾರಿಗಳು, ಅದನ್ನು ಪರೀಕ್ಷಿಸಿದಾಗ ಅದು ಹಸುವಿನ ಮಾಂಸ ಎಂದು ತಿಳಿದುಬಂದಿರುತ್ತದೆ. ಬಳಿಕ ಹಸುಗಳನ್ನು ಕಟ್ಟುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಇನ್ನೂ 10 ಮಂದಿ ತಲೆಮರೆಸಿಕೊಂಡಿದ್ದಾರೆ. ಮಾಂಸಕ್ಕಾಗಿ ಹಸುಗಳನ್ನು ಕಟ್ಟಿ ಹಾಕಿ ಮಾಂಸವನ್ನು ಮನೆಯಲ್ಲಿ ಬಚ್ಚಿಟ್ಟಿದ್ದ 11 ಮಂದಿಯ ಮನೆಗಳನ್ನು ಅಧಿಕಾರಿಗಳು ಬುಲ್ಡೋಜರ್ ಸಹಾಯದಿಂದ ಕೆಡವಿ ಹಾಕಿದ್ದಾರೆ. ಆ ಮನೆಗಳು ಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ರಜತ್, “ಆರೋಪಿಯ ಮನೆಯ ಕೊಠಡಿಯೊಂದರಲ್ಲಿ ಹಸುವಿನ ಚರ್ಮ, ಕೊಬ್ಬು, ಮೂಳೆಗಳನ್ನು ಬಚ್ಚಿಟ್ಟಿದ್ದು, ಅದನ್ನು ಪತ್ತೆ ಹಚ್ಚಿ ಜಪ್ತಿ ಮಾಡಲಾಗಿದೆ” ಎಂದು ಹೇಳಿದ್ದಾರೆ. ಎಲ್ಲಾ 11 ಆರೋಪಿಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಮಧ್ಯಪ್ರದೇಶದಲ್ಲಿ ಗೋಹತ್ಯೆಯಲ್ಲಿ ತೊಡಗುವವರಿಗೆ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಯಲ್ಲಿದೆ ಎಂಬುದು ಗಮನಾರ್ಹ.

ದೇಶ

ನವದೆಹಲಿ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ‘ಡೀಪ್‌ಪ್ಯಾಕ್’ ವಿಡಿಯೋ ಹಾಗೂ ಫೋಟೋಗಳನ್ನು ಪ್ರಕಟಿಸುವುದನ್ನು ತಡೆಯಲು ಕೇಂದ್ರ ಸರ್ಕಾರ ‘ಡಿಜಿಟಲ್ ಇಂಡಿಯಾ’ ಮಸೂದೆ ತರಲು ನಿರ್ಧರಿಸಿದೆ ಎಂದು ವರದಿಯಾಗಿದೆ.

‘ಎಐ’ ಎಂಬ ಕೃತಕ ತಂತ್ರಜ್ಞಾನದ ನೆರವಿನಿಂದ ‘ಮಾರ್ಫಿಂಗ್’ ಮಾಡಿ ಕೆಲ ಬಾಲಿವುಡ್ ನಟಿಯರ ವಿಡಿಯೋ, ಫೋಟೋಗಳನ್ನು ಕಳೆದ ವರ್ಷ ‘ಡೀಪ್‌ಪ್ಯಾಕ್’ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದು ದೇಶಾದ್ಯಂತ ಸಂಚಲನ ಮೂಡಿಸಿತ್ತು. ಇದನ್ನು ಪ್ರಧಾನಿ ಮೋದಿ ತೀವ್ರವಾಗಿ ಖಂಡಿಸಿದ್ದರು. ಒಂದು ಹಂತದಲ್ಲಿ ಪ್ರಧಾನಿ ಮೋದಿಯ ‘ಗರ್ಬಾ’ ನೃತ್ಯದ ‘ಡೀಪ್‌ಪ್ಯಾಕ್’ ವಿಡಿಯೋ ಬಿಡುಗಡೆಯಾಗಿ ದೊಡ್ಡ ಸುದ್ಧಿಯಾಗಿತ್ತು. ಇದರ ಬಗ್ಗೆಯೂ ಮೋದಿ ಕಳವಳ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ, ‘ಡೀಪ್‌ಪ್ಯಾಕ್’ ಸಮಸ್ಯೆಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ‘ಡಿಜಿಟಲ್ ಇಂಡಿಯಾ’ ಮಸೂದೆಯನ್ನು ತರಲು ಮತ್ತು ನಿಯಂತ್ರಿಸಲು ಯೋಜಿಸುತ್ತಿದೆ. ತರುವಾಯ, ಮುಂಬರುವ ಸಂಸತ್ ಅಧಿವೇಶನದಲ್ಲಿ ಸರ್ವ ಪಕ್ಷಗಳ ಒಮ್ಮತದೊಂದಿಗೆ ಮಸೂದೆಯನ್ನು ಅಂಗೀಕರಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.