ದೇಶ Archives » Page 13 of 53 » Dynamic Leader
October 23, 2024
Home Archive by category ದೇಶ (Page 13)

ದೇಶ

ದೇಶ

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಮರು ಆಯ್ಕೆಯಾಗಿದ್ದಾರೆ. ದೆಹಲಿಯ ಹಳೆಯ ಪಾರ್ಲಿಮೆಂಟ್ ಸೆಂಟ್ರಲ್ ಹಾಲ್ ನಲ್ಲಿ ಕಾಂಗ್ರೆಸ್ ಸಂಸದರ ಸಭೆ ನಡೆಯಿತು. ಈ ಸಭೆಯಲ್ಲಿ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಅವರನ್ನು ಮರು ಆಯ್ಕೆ ಮಾಡಲು ನಿರ್ಧರಿಸಲಾಯಿತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಅವರನ್ನು ಪ್ರಸ್ತಾಪಿಸಿದರು. ಗೌರವ್ ಗೊಗೊಯ್, ತಾರಿಕ್ ಅನ್ವರ್, ಸುಧಾಕರನ್ ಈ ಪ್ರಸ್ತಾಪವನ್ನುಅನುಮೋದಿಸಿ ಮಾತನಾಡಿದರು.

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. ಒಬ್ಬ ಸ್ವತಂತ್ರ ಸದಸ್ಯರ ಬೆಂಬಲದಿಂದ ಪಕ್ಷದ ಬಲ 100ಕ್ಕೆ ಏರಿದೆ. ರಾಜಸ್ಥಾನದಲ್ಲಿ ಗೆದ್ದ ಮತ್ತೊಬ್ಬ ಸ್ವತಂತ್ರ ಅಭ್ಯರ್ಥಿ ಕೂಡ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ. ಇಂದು (ಜೂನ್ 08) ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ (CWC) ಸಭೆ ಹಾಗೂ ಸಂಸದೀಯ ಪಕ್ಷದ (CPP) ಸಭೆ ನಡೆದವು. ಈ ಸಭೆಯಲ್ಲಿ ರಾಹುಲ್ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಲು ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಲಾಯಿತು.

ಈ ಹಿನ್ನೆಲೆಯಲ್ಲಿ, ಹಳೆ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಕಾಂಗ್ರೆಸ್ ಸಂಸದರ ಸಭೆ ನಡೆಯಿತು. ಪಕ್ಷದ ನಾಯಕರಾದ ಖರ್ಗೆ, ಸೋನಿಯಾ, ರಾಹುಲ್, ಪಕ್ಷದ ರಾಜ್ಯಸಭಾ ಸಂಸದರು, ಲೋಕಸಭೆಗೆ ಆಯ್ಕೆಯಾದ ಕಾಂಗ್ರೆಸ್ ಸಂಸದರು, ಪಕ್ಷದ ಹಲವು ಪ್ರಮುಖ ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯ ಕೊನೆಯಲ್ಲಿ ಸೋನಿಯಾ ಅವರನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಮರು ಆಯ್ಕೆ ಮಾಡಲಾಯಿತು.

ದೇಶ

ಆಂಧ್ರಪ್ರದೇಶ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಪತ್ನಿ ನಾರಾ ಭುವನೇಶ್ವರಿ ಅವರ ಆಸ್ತಿ ಐದು ದಿನಗಳಲ್ಲಿ 579 ಕೋಟಿ ರೂ. ಹೆಚ್ಚಿದೆ.

18ನೇ ಲೋಕಸಭೆ ಚುನಾವಣೆ ಏಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ನಡೆದಿತ್ತು. ಇದರೊಂದಿಗೆ ಸಿಕ್ಕಿಂ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯೂ ನಡೆಯಿತು. ಆ ಮೂಲಕ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ.

ಆ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರು ಜೂನ್ 12 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಪರಿಸ್ಥಿತಿಯಲ್ಲಿ ಅವರ ಪತ್ನಿ ನಾರಾ ಭುವನೇಶ್ವರಿ ಅವರ ಆಸ್ತಿ ಕೇವಲ ಐದು ದಿನಗಳಲ್ಲಿ ಹೆಚ್ಚಾಗಿದೆ ಎಂಬ ವರದಿಗಳು ಹೊರಬಿದ್ದಿವೆ.

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಷೇರುಪೇಟೆ ಕುಸಿತದ ನಡುವೆಯೂ ನಾರಾ ಭುವನೇಶ್ವರಿಯ ಹೆರಿಟೇಜ್ ಫುಡ್ಸ್ ಷೇರುಗಳು ಏರಿಕೆ ಕಂಡಿವೆ. ಅವರು ಕಂಪನಿಯಲ್ಲಿ ಶೇಕಡಾ 24 ಕ್ಕಿಂತ ಹೆಚ್ಚು ಪಾಲನ್ನು ಹೊಂದಿದ್ದಾರೆ. ಇದರೊಂದಿಗೆ ಹೆರಿಟೇಜ್ ಫುಡ್ಸ್ ನ ನಿವ್ವಳ ಲಾಭ 5 ದಿನಗಳಲ್ಲಿ 579 ಕೋಟಿ ರೂ.ಗೆ ಏರಿಕೆಯಾಗಿದೆ.

ಚುನಾವಣೋತ್ತರ ಸಮೀಕ್ಷೆಗಳೆಲ್ಲವೂ ತೆಲುಗು ದೇಶಂ ಪಕ್ಷ ಮುಂದಿನ ಸರ್ಕಾರವನ್ನು ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಳೆದ ಮೇ 31 ರಂದು ಹೆರಿಟೇಜ್ ಫುಡ್ಸ್ ನ ಒಂದು ಷೇರಿನ ಬೆಲೆ ರೂ.402.90 ಆಗಿತ್ತು. ಆದರೆ, ಕಳೆದ ಐದು ದಿನಗಳಿಂದ ನಿರಂತರ ಏರಿಕೆ ಕಂಡು ಇಂದು ಷೇರಿನ ಬೆಲೆ ರೂ.660 ವರೆಗೆ ಹೆಚ್ಚಿದೆ.

ದೇಶ

“ನನ್ನಂತಹ ಬಡ ಮತ್ತು ಹಿಂದುಳಿದ ಕುಟುಂಬದಲ್ಲಿ ಹುಟ್ಟಿದ ವ್ಯಕ್ತಿ ಈ ದೇಶಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುವುದಾದರೇ ಅದಕ್ಕೆ ಈ ಸಂವಿಧಾನವೇ ಕಾರಣ” – ನರೇಂದ್ರ ಮೋದಿ

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಚುನಾವಣೆಯಲ್ಲಿ 292 ಸ್ಥಾನಗಳನ್ನು ಗೆದ್ದು ಅಧಿಕಾರವನ್ನು ಉಳಿಸಿಕೊಂಡಿದೆ. ತರುವಾಯ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ನಾಯಕರಾಗಿ ಪುನರಾಯ್ಕೆಯಾದ ಮೋದಿ, ತಮ್ಮನ್ನು ಬೆಂಬಲಿಸುವ ಸಂಸದರ ಪಟ್ಟಿಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚಿಸುವ ಹಕ್ಕನ್ನು ಪಡೆದರು. ಅದರಂತೆ ಜೂನ್ 9 ರಂದು ಸಂಜೆ 6 ಗಂಟೆಗೆ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ.

ಏತನ್ಮಧ್ಯೆ, ಹೊಸ ಸಂಸತ್ತಿನಲ್ಲಿ ಎನ್‌ಡಿಎ ಮೈತ್ರಿಕೂಟದ ಸಂಸದರು ಮತ್ತು ಪಕ್ಷದ ನಾಯಕರು ಭಾಗವಹಿಸಿದ ಸಭೆ ನಡೆಯಿತು. ಇದರಲ್ಲಿ ಭಾಗವಹಿಸಿದ ಮೋದಿ, ತಲೆಯ ಮೇಲೆ ಭಾರತೀಯ ಸಂವಿಧಾನದ ಪುಸ್ತಕವನ್ನು ಮುಟ್ಟಿ ನಮನ ಸಲ್ಲಿಸಿದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು.

ಈ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ಸಾಮಾಜಿಕ ಮಾಧ್ಯಮ ಪುಟದಲ್ಲಿ ಸಂವಿಧಾನ ಪುಸ್ತಕಕ್ಕೆ ನಮಸ್ಕರಿಸುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿ, “ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿದ ಉದಾತ್ತ ಮೌಲ್ಯಗಳನ್ನು ಎತ್ತಿಹಿಡಿಯಲು ನನ್ನ ಜೀವನದ ಪ್ರತಿ ಕ್ಷಣವನ್ನೂ ಮೀಸಲಿಡಲಾಗಿದೆ.

ನನ್ನಂತಹ ಬಡ ಮತ್ತು ಹಿಂದುಳಿದ ಕುಟುಂಬದಲ್ಲಿ ಹುಟ್ಟಿದ ವ್ಯಕ್ತಿ ಈ ದೇಶಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುವುದಾದರೇ ಅದಕ್ಕೆ ಈ ಸಂವಿಧಾನವೇ ಕಾರಣ. ಇದು ದೇಶದ ಕೋಟ್ಯಾಂತರ ಜನರಿಗೆ ಆತ್ಮವಿಶ್ವಾಸ, ಶಕ್ತಿ ಮತ್ತು ಘನತೆಯನ್ನು ನೀಡುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ದೇಶ

ನವದೆಹಲಿ: ಷೇರು ಮಾರುಕಟ್ಟೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದರಿಂದ ಜನ ಸಾಮಾನ್ಯರಿಗೆ 38 ಲಕ್ಷ ಕೋಟಿ ರೂ.ನಷ್ಟವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೆಹಲಿಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ, “ಷೇರು ಮಾರುಕಟ್ಟೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳನ್ನು ವ್ಯವಸ್ಥಿತವಾಗಿ ತಿರುಚಲಾಗಿದೆ. ಷೇರು ಮಾರುಕಟ್ಟೆಯಲ್ಲಿ ಲಾಭ ಗಳಿಸಲು ಸಮೀಕ್ಷೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಜೂನ್ 4ರೊಳಗೆ ಷೇರುಗಳನ್ನು ಖರೀದಿಸುವಂತೆ ಮೇ 14ರಂದು ಅಮಿತ್ ಶಾ ಹೇಳಿದ್ದಾರೆ.

38 ಲಕ್ಷ ಕೋಟಿ ನಷ್ಟ:
ನಿರ್ದಿಷ್ಟ 5 ಕೋಟಿ ಕುಟುಂಬಗಳು ಷೇರು ಮಾರುಕಟ್ಟೆಯಲ್ಲಿ ನಿರ್ದಿಷ್ಟ ಸಮಯದಲ್ಲಿ ಹೂಡಿಕೆ ಮಾಡುವಂತೆ ಅಮಿತ್ ಶಾ ಕೇಳಿದ್ದು ಏಕೆ? ಷೇರು ಮಾರುಕಟ್ಟೆ ಅಕ್ರಮಗಳ ಬಗ್ಗೆ ಸೆಬಿ ತನಿಖೆ ನಡೆಸಬೇಕು. ಷೇರು ಮಾರುಕಟ್ಟೆಯಲ್ಲಿ 38 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ಇದರಿಂದ ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಕೆಲವರು ಹಣ ಸಂಪಾದಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಾಯ ಮಾಡಿದ್ದಾರೆ. ಬಿಜೆಪಿಯ ಸಮೀಕ್ಷೆಯಿಂದ ಷೇರುಗಳು ಗಣನೀಯವಾಗಿ ಏರಿಕೆ ಕಂಡಿತ್ತು.

ನಕಲಿ ಸಮೀಕ್ಷೆಗಳು:
ದುಬಾರಿ ಬೆಲೆಯ ಲಾಭ ಪಡೆದು ಬಿಜೆಪಿ ಹಣ ಗಳಿಸಿದೆ. ನಕಲಿ ಸಮೀಕ್ಷೆ ನಡೆಸಿದವರ ವಿರುದ್ಧ ತನಿಖೆ ನಡೆಸಬೇಕು. ಚುನಾವಣಾ ಮತದಾನಕ್ಕೂ ಮುನ್ನ ಮೇ 30 ಮತ್ತು 31 ರಂದು ಷೇರುಪೇಟೆಯಲ್ಲಿ ಹೂಡಿಕೆಯ ಸಂಗ್ರಹವು ಹೆಚ್ಚಾಗಿತ್ತು. ಚುನಾವಣೆ ನಂತರ ಷೇರುಪೇಟೆ ಕುಸಿತದಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿರ್ದಿಷ್ಟ ಕೆಲವೇ ಕುಟುಂಬಗಳು ಹಣ ಗಳಿಸಲು ಸಂಚು ನಡೆದಿದೆ.

ಸಂಸದೀಯ ಜಂಟಿ ಸಮಿತಿ:
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕು. ಸೆಬಿ ತನಿಖೆಯನ್ನು ಎದುರಿಸುತ್ತಿರುವ ಮಾಧ್ಯಮ ಕಂಪನಿಯೊಂದಕ್ಕೆ ಷೇರು ಮಾರುಕಟ್ಟೆ ಕುರಿತು ಅಮಿತ್ ಶಾ ಸಂದರ್ಶನ ನೀಡಿದ್ದು ಏಕೆ? ಪ್ರಧಾನಿ ಮೋದಿ ಕೂಡ ಷೇರು ಮಾರುಕಟ್ಟೆಯ ಬಗ್ಗೆ ಮಾತನಾಡಿದ್ದಾರೆ. ಷೇರು ಮಾರುಕಟ್ಟೆ ಏರಿಕೆಯ ಬಗ್ಗೆ ಮೋದಿ ಏಕೆ ಬಹಿರಂಗವಾಗಿ ಮಾತನಾಡಬೇಕು? ಜೂನ್ 4 ರಂದು ಷೇರು ಮಾರುಕಟ್ಟೆಯಲ್ಲಿ ದೊಡ್ಡ ಬದಲಾವಣೆ ಇರುತ್ತದೆ ಎಂದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಸಲಹೆ ನೀಡಿದ್ದು ಕಾನೂನು ಬಾಹಿರ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ದೇಶ

ನವದೆಹಲಿ: “ಆಮ್ ಆದ್ಮಿ ಪಕ್ಷ ನಮಗೆ ಮುಖ್ಯವಲ್ಲ; ರಾಷ್ಟ್ರ ಮುಖ್ಯ” ಎಂದು ತಿಹಾರ್ ಜೈಲಿನಲ್ಲಿ ಶರಣಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಾ ಇದನ್ನು ಹೇಳಿದರು. ಇದಾದ ಬಳಿಕ ತಿಹಾರ್ ಜೈಲಿಗೆ ಹೋಗಿ ಶರಣಾದರು.

ದೆಹಲಿ ಮದ್ಯ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಮುಖ್ಯಮಂತ್ರಿ ಅರವಿಂದ್  ಕೇಜ್ರಿವಾಲ್ ಅವರಿಗೆ ನೀಡಲಾಗಿದ್ದ 21 ದಿನಗಳ ಮಧ್ಯಂತರ ಜಾಮೀನು ಇಂದು (ಜೂನ್ 02) ಮುಕ್ತಾಯಗೊಂಡಿದೆ. ಪರಿಣಾಮವಾಗಿ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ ಶರಣಾಗಲು ಹೊರಟರು. ಗಾಂಧಿ ಸ್ಮಾರಕಕ್ಕೆ ತೆರಳಿ ನಮನ ಸಲ್ಲಿಸಿದ ಬಳಿಕ ಪತ್ನಿ ಸಮೇತ ಕನ್ನಾಟ್ ಹನುಮಾನ್ ದೇವಸ್ಥಾನದಲ್ಲಿ ಸ್ವಾಮಿ ದರ್ಶನ ಪಡೆದರು. ನಂತರ ಅವರು ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳನ್ನು ಭೇಟಿಯಾದರು.

ತ್ಯಾಗ
ಆಗ ಮಾತನಾಡಿದ ಕೇಜ್ರಿವಾಲ್,  “ನನ್ನ ವಿರುದ್ಧ ಯಾವುದೇ ಅಪರಾಧದ ಸಾಕ್ಷ್ಯಗಳಿಲ್ಲ. ಚುನಾವಣಾ ಪ್ರಚಾರಕ್ಕೆ ಅನುಕೂಲವಾಗುವಂತೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌ಗೆ ನಾನು ಕೃತಜ್ಞನಾಗಿದ್ದೇನೆ. ಆಮ್ ಆದ್ಮಿ ಪಕ್ಷ ನಮಗೆ ಮುಖ್ಯವಲ್ಲ. ರಾಷ್ಟ್ರ ಮುಖ್ಯ. 21 ದಿನಗಳಲ್ಲಿ ಒಂದು ನಿಮಿಷವನ್ನೂ ವ್ಯರ್ಥಮಾಡಲಿಲ್ಲ. ಸರ್ವಾಧಿಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಮತ್ತೆ ಜೈಲಿಗೆ ಹೋಗುತ್ತಿದ್ದೇನೆ. ಸರ್ವಾಧಿಕಾರದ ವಿರುದ್ಧ ಹೋರಾಡುತ್ತೇನೆ. ನನ್ನ ಪ್ರತಿ ಹನಿ ರಕ್ತವನ್ನೂ ದೇಶಕ್ಕಾಗಿ ತ್ಯಾಗ ಮಾಡುತ್ತೇನೆ. ಪ್ರಧಾನಿ ಮೋದಿ ನನ್ನನ್ನು (ಕೇಜ್ರಿವಾಲ್) ನುರಿತ ಕಳ್ಳ ಎಂದು ಕರೆಯುತ್ತಾರೆ.

ಸಮೀಕ್ಷೆಗಳು
ಎಲ್ಲಾ ಸಮೀಕ್ಷೆಗಳನ್ನು ಸುಳ್ಳಾಗಿಸಿ ಇಂಡಿಯಾ ಮೈತ್ರಿ ಪಕ್ಷಗಳು ಗೆಲ್ಲುತ್ತವೆ. ಎಲ್ಲಾ ಸಮೀಕ್ಷೆಗಳು ತಪ್ಪಾಗಿವೆ. ನನ್ನ ವಿರುದ್ಧದ ಆರೋಪಗಳಿಗೆ ಜಾರಿ ಇಲಾಖೆ ಕನಿಷ್ಠ ಒಂದೇ ಒಂದು ಸಾಕ್ಷ್ಯವನ್ನಾದರೂ ನೀಡಲು ಸಾದ್ಯವೇ? ನನ್ನ ಮನೆಯಲ್ಲಿ ಶೋಧ ನಡೆಸಿದಾಗ ಜಾರಿ ಇಲಾಖೆ ಏನನ್ನೂ ವಶಪಡಿಸಿಕೊಂಡಿಲ್ಲ. ದಬ್ಬಾಳಿಕೆಯ ಸರ್ಕಾರದ ವಿರುದ್ಧ ನೀವು ಧ್ವನಿ ಎತ್ತಬೇಕು. ಮತ ಎಣಿಕೆ ಸಂದರ್ಭದಲ್ಲಿ ಕೊನೆಯವರೆಗೂ ಇದ್ದು ನಿಗಾ ಇಡಬೇಕು.” ಎಂದು ಹೇಳಿದರು.

ಇದಾದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 4.50ರ ಹೊತ್ತಿಗೆ ತಿಹಾರ್ ಜೈಲಿಗೆ ಹೋಗಿ ಶರಣಾದರು.

ದೇಶ

ಅಂದು ‘ನರೇಂದ್ರ’ನಾಥ ದತ್ತಾ… ಇಂದು ‘ನರೇಂದ್ರ’ ದಾಮೋದರ ದಾಸ್ ಮೋದಿ! ಕಾಕತಾಳೀಯವೋ ಅಥವಾ ದೇವರ ಕಾರ್ಯವೋ!? ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ನಡೆಯುತ್ತಿದೆ.

ಸ್ವಾಮಿ ವಿವೇಕಾನಂದರು 1892ರಲ್ಲಿ ಕನ್ಯಾಕುಮಾರಿ ಬಳಿ ಮೂರು ಸಮುದ್ರಗಳು ಸಂಗಮಿಸುವ ಬೆಟ್ಟದ ಮೇಲೆ ಧ್ಯಾನ ಮಾಡಿದರು. ಅವರ ಜನ್ಮನಾಮ ನರೇಂದ್ರನಾಥ ದತ್ತಾ. ಇಂದು 132 ವರ್ಷಗಳ ನಂತರ ಅದೇ ಬಂಡೆಯ ಮೇಲೆ ನರೇಂದ್ರ ದಾಮೋದರ ದಾಸ್ ಎಂಬ ಹೆಸರು ಹೊತ್ತಿರುವ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುತ್ತಿದ್ದಾರೆ.

ಅಮೆರಿಕಾದಲ್ಲಿ ನಡೆದ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಕನ್ಯಾಕುಮಾರಿಗೆ ಬಂದ ವಿವೇಕಾನಂದರು ಬಂಡೆಯ ಮೇಲೆ ಧ್ಯಾನ ಮಾಡಿ ಆಧ್ಯಾತ್ಮಿಕವಾಗಿ ಹಾಗೂ ಮಾನಸಿಕವಾಗಿ ತಮ್ಮನ್ನು ಬಲಪಡಿಸಿಕೊಂಡರು. ಬಳಿಕ ಅಮೆರಿಕಕ್ಕೆ ತೆರಳಿ ಅಲ್ಲಿನ ಚಿಕಾಗೋ ಸಮ್ಮೇಳನದಲ್ಲಿ ಹಿಂದೂ ಧರ್ಮದ ಹಿರಿಮೆಯನ್ನು ಜಗತ್ತಿಗೆ ಅರಿವು ಮೂಡಿಸಿ ಮಾತನಾಡಿದರು.

ಅದೇ ರೀತಿ ಧ್ಯಾನದ ಮೂಲಕ ಆಧ್ಯಾತ್ಮಿಕ ಮತ್ತು ಮಾನಸಿಕವಾಗಿ ಸದೃಢರಾಗುತ್ತಿರುವ ಪ್ರಧಾನಿ ಮೋದಿ, ವಿವೇಕಾನಂದರು ಧ್ಯಾನ ಮಾಡಿದ ಜಾಗದಲ್ಲಿಯೇ ಧ್ಯಾನ ಮಾಡುತ್ತಿರುವುದು ವಿಶ್ವದ ಗಮನ ಸೆಳೆದಿದೆ. ಇಬ್ಬರ ಹೆಸರೂ ನರೇಂದ್ರ ಆಗಿರುವುದು ಕಾಕತಾಳೀಯವೋ ಅಥವಾ ದೇವರ ಕಾರ್ಯವೋ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ನಡೆಯುತ್ತಿದೆ.

ದೇಶ

ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆಯಿಂದ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನ ಮಾಡುತ್ತಿದ್ದು, ಅವರು ಧ್ಯಾನ ಮಾಡುತ್ತಿರುವ ಚಿತ್ರಗಳು ಮತ್ತು ವಿಡಿಯೋ ಇದೀಗ ಹೊರಬಂದಿದೆ.

ಲೋಕಸಭೆ ಚುನಾವಣೆಯ ಅಂತಿಮ ಹಂತದ ಪ್ರಚಾರಕ್ಕೆ ಬ್ರೇಕ್ ಬಿದ್ದಿದ್ದು, ನಾಳೆ (ಜೂನ್ 1) ಅಂತಿಮ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಅವರು ನಿನ್ನೆ (30.5.2024) ಸಂಜೆಯಿಂದ ಕನ್ಯಾಕುಮಾರಿ ವಿವೇಕಾನಂದ ಮಂಟಪದಲ್ಲಿ ಧ್ಯಾನಮಗ್ನರಾಗಿದ್ದಾರೆ. ನಿನ್ನೆ ಸಂಜೆ 4.35ಕ್ಕೆ ಕನ್ಯಾಕುಮಾರಿಯ ಹೆಲಿಪ್ಯಾಡ್‌ಗೆ ಪ್ರಧಾನಿ ಮೋದಿ ಆಗಮಿಸಿದ್ದರು.

ಬಳಿಕ ಪ್ರಧಾನಿ ಮೋದಿ ನಿನ್ನೆ ಸಂಜೆ 6.45ರ ಸುಮಾರಿಗೆ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನ ಆರಂಭಿಸಿದರು. ಸುಮಾರು 45 ಗಂಟೆಗಳ ಕಾಲ ನಡೆಯಲಿರುವ ಪ್ರಧಾನಿ ಮೋದಿಯವರ ಧ್ಯಾನದ ಯಾವುದೇ ಫೋಟೋಗಳು ಬಿಡುಗಡೆಯಾಗದೆ ಇದ್ದ ಹಿನ್ನೆಲೆಯಲ್ಲಿ, ಇದೀಗ ಅದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ.

ವಿಡಿಯೋ ನೋಡಲು:
https://x.com/ANI/status/1796393810140049542

ಕೇಸರಿ ವಸ್ತ್ರ ಧರಿಸಿ, ಹಣೆಯಲ್ಲಿ ವಿಭೂತಿ, ಕುಂಕುಮ ಇಟ್ಟು, ಕೈಯಲ್ಲಿ ರುದ್ರಾಕ್ಷಿ ಮಾಲೆ ಹಿಡಿದು 2ನೇ ದಿನವಾದ ಇಂದು ವಿವೇಕಾನಂದರ ಪ್ರತಿಮೆಯ ಮುಂದೆ ಪ್ರಧಾನಿ ಮೋದಿ ಕುಳಿತು ಧ್ಯಾನ ಮಾಡುತ್ತಿದ್ದಾರೆ.

ಇದಲ್ಲದೇ ನಾಳೆ ಮಧ್ಯಾಹ್ನ 3.30ರ ವರೆಗೆ ನಡೆಯಲಿರುವ ಈ ಧ್ಯಾನದಲ್ಲಿ ಮೋದಿಯವರು ದ್ರವಾಹಾರವನ್ನೇ ಸೇವಿಸಲಿದ್ದು, ಧ್ಯಾನ ಮುಗಿಯುವವರೆಗೂ ಮೌನ ಉಪವಾಸ ಆಚರಿಸಲಿದ್ದು, ಕೊಠಡಿಯಿಂದ ಹೊರಗೆ ಬರುವುದಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

ಈ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆಯಲ್ಲಿ ಇಡೀ ಕನ್ಯಾಕುಮಾರಿಯನ್ನು ವಿಶೇಷ ಭದ್ರತಾ ಪಡೆಗಳ ನಿಯಂತ್ರಣಕ್ಕೆ ತರಲಾಗಿದೆ. ಪ್ರಧಾನಿ ಬಂದಿಳಿದ ಹೆಲಿಪ್ಯಾಡ್, ಪ್ರಧಾನಿ ಹೋಗುವ ಮಾರ್ಗಗಳು, ವಿವೇಕಾನಂದ ಸ್ಮಾರಕ ಭವನ, ಕನ್ಯಾಕುಮಾರಿ ಪ್ರವಾಸಿ ತಾಣಗಳ ಮೇಲೆ ವಿಶೇಷ ಭದ್ರತಾ ಪಡೆ ನಿಗಾ ಇರಿಸಿದೆ.

ಕನ್ಯಾಕುಮಾರಿ ಸಮುದ್ರ ಪ್ರದೇಶಗಳಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿ ಕಣ್ಗಾವಲು ಕಾರ್ಯದಲ್ಲಿ ನಿರತರಾಗಿದ್ದಾರೆ. ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭದ್ರತಾ ಕಾರ್ಯದಲ್ಲಿ ತೊಡಗಿರುವುದು ಗಮನಾರ್ಹ.

ದೇಶ

ನಾಗರಕೋಯಿಲ್: ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನ ಜೂನ್ 1 ರಂದು  ಪೂರ್ಣಗೊಳ್ಳಲಿದ್ದು, ಇಂದು (ಮೇ 30) ಅಂತಿಮ ಹಂತದ ಪ್ರಚಾರ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಅವರು 3 ದಿನಗಳ ಭೇಟಿಗಾಗಿ ಕನ್ಯಾಕುಮಾರಿಗೆ ಬಂದಿದ್ದಾರೆ.

ರಸ್ತೆ ಮಾರ್ಗವಾಗಿ ಸರ್ಕಾರಿ ಅತಿಥಿಗೃಹಕ್ಕೆ ತೆರಳಿದ ಮೋದಿ, ಸ್ವಲ್ಪ ಸಮಯ ಅಲ್ಲಿ ವಿಶ್ರಾಂತಿ ಪಡೆದರು. ನಂತರ ಅಲ್ಲಿಂದ ಭಗವತಿ ಅಮ್ಮನ್ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಭಗವತಿ ಅಮ್ಮನವರ ಭಾವಚಿತ್ರವನ್ನು ಸ್ಮರಣಿಕೆಯಾಗಿ ನೀಡಲಾಯಿತು.

ಅಲ್ಲಿಂದ ಕಡಲತೀರಕ್ಕೆ ಹೊರಟ ಮೋದಿಯವರು ವಿಶೇಷ ದೋಣಿಯ ಮೂಲಕ ವಿವೇಕಾನಂದ ಬೆಟ್ಟೆಕ್ಕೆ ತೆರಳಿದರು. ಕನ್ಯಾಕುಮಾರಿಗೆ ಆಗಮಿಸಿರುವ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ತಮಿಳುನಾಡು ಬಿಜೆಪಿ ಸದಸ್ಯರು ಯಾರೂ ಬರಬಾದೆಂದು ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.

ಪ್ರಧಾನಿಯವರ ವೈಯಕ್ತಿಕ ಧ್ಯಾನ ಕಾರ್ಯಕ್ರಮವನ್ನು ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಬಾರದೆಂದು ಹೇಳಿದೆ. ಇದೇ ವೇಳೆ ಕೇಂದ್ರದ ಮಾಜಿ ಸಚಿವ ಪೊನ್ ರಾಧಾಕೃಷ್ಣನ್ ಅತಿಥಿ ಗೃಹಕ್ಕೆ ಬಂದಿದ್ದರು. ಪೊಲೀಸರು ಅವರಿಗೆ ಅನುಮತಿ ನಿರಾಕರಿಸಿದರು. ಇದಾದ ಬಳಿಕ ಅವರು ಅಲ್ಲಿಂದ ವಾಪಸ್ ತೆರಳಿದರು.

ದೇಶ

ನವದೆಹಲಿ: ಇನ್ನು 7 ದಿನಗಳ ಕಾಲ ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ದೆಹಲಿಯ ಹೊಸ ಮದ್ಯ ನೀತಿಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಪ್ರತ್ಯೇಕವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿದೆ.

ಈ ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಆಮ್ ಆದ್ಮಿ ಲೋಕಸಭಾ ಸದಸ್ಯ ಸಂಜಯ್ ಸಿಂಗ್, ತೆಲಂಗಾಣ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರ ಪುತ್ರಿ ಮತ್ತು ಹಿರಿಯ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಿ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.

ಇದರ ಬೆನ್ನಲ್ಲೇ, ಹೊಸ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ಇಲಾಖೆಯ ಬಂಧನವನ್ನು ಅಕ್ರಮ ಎಂದು ಘೋಷಿಸುವಂತೆ ಮತ್ತು ಮಧ್ಯಂತರ ಜಾಮೀನು ಕೋರಿ ಮುಖ್ಯಮಂತ್ರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗಳನ್ನು ದೆಹಲಿ ಸಿಬಿಐ ವಿಶೇಷ ನ್ಯಾಯಾಲಯ ಮತ್ತು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು.

ಕೇಜ್ರಿವಾಲ್ ಅವರು ಮೇಲಿನ ವಿಷಯದಲ್ಲಿ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದರು ಮತ್ತು ಜಾರಿ ಇಲಾಖೆಯ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಬೇಕೆಂದು ಒತ್ತಾಯಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿತು.

ಅದಲ್ಲದೇ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ಅನುಮತಿಯನ್ನೂ ನೀಡಿತ್ತು. ಆದರೆ ಮುಖ್ಯಮಂತ್ರಿಗಳು ಸರ್ಕಾರಿ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಅಥವಾ ಸರ್ಕಾರಿ ಕಡತಗಳಿಗೆ ಸಹಿ ಹಾಕಲು ಆ ಅಧಿಕಾರವನ್ನು ಬಳಸಬಾರದು ಮತ್ತು ಎಲ್ಲಾ ಚುನಾವಣಾ ಪ್ರಚಾರಗಳು ಮುಗಿದ ನಂತರ ಅರವಿಂದ್ ಕೇಜ್ರಿವಾಲ್ ಜೂನ್ 2 ರಂದು ತಿಹಾರ್ ಜೈಲಿನಲ್ಲಿ ಶರಣಾಗಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಹಿನ್ನೆಲೆಯಲ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಧ್ಯಂತರ ಜಾಮೀನು ವಿಸ್ತರಣೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಕೇಜ್ರಿವಾಲ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಪಿಇಟಿ-ಸಿಟಿ ಸ್ಕ್ಯಾನ್ ಮಾಡಬೇಕಾಗಿರುವುದರಿಂದ ಮಧ್ಯಂತರ ಜಾಮೀನನ್ನು ಇನ್ನೂ 7 ದಿನಗಳವರೆಗೆ ವಿಸ್ತರಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದರು.

ಈ ಅರ್ಜಿಯು, ನಿನ್ನೆ ಸುಪ್ರೀಂ ಕೋರ್ಟ್‌ನ ಬೇಸಿಗೆ ರಜೆ ಕಾಲದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆಗ ಮಧ್ಯಂತರ ಜಾಮೀನು ವಿಸ್ತರಣೆಗೆ ಕೋರಿ ಕೇಜ್ರಿವಾಲ್ ಮಾಡಿದ ಮನವಿಯನ್ನು ನ್ಯಾಯಮೂರ್ತಿಗಳು ತಿರಸ್ಕರಿಸಿದರು. ಮತ್ತು ಈ ಪ್ರಕರಣದ ತೀರ್ಪು ಮುಂದೂಡಲ್ಪಟ್ಟಿರುವುದರಿಂದ ಈ ಹಂತದಲ್ಲಿ ನಾವು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ಮತ್ತು ಮುಖ್ಯ ನ್ಯಾಯಮೂರ್ತಿಗಳ ಪೀಠವು ಜಾಮೀನು ವಿಸ್ತರಣೆಯ ಬಗ್ಗೆ ನಿರ್ಧರಿಸಬಹುದು ಎಂದು ಹೇಳಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಲಾಯಿತು.

ಈ ಹಿನ್ನೆಲೆಯಲ್ಲಿ, ಇನ್ನು 7 ದಿನಗಳ ಕಾಲ ಮಧ್ಯಂತರ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೇ ವಿಶೇಷ ನ್ಯಾಯಾಲಯದಲ್ಲಿ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸುವಂತೆಯೂ ಸುಪ್ರೀಂಕೋರ್ಟ್ ಸೂಚಿಸಿದೆ. ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಜೂನ್ 2 ರಂದು ಕೇಜ್ರಿವಾಲ್ ಮತ್ತೆ ಜೈಲು ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ದೇಶ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಸಂಜೆ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಕನ್ಯಾಕುಮಾರಿಯಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ.

ಮೇ 30 ರಂದು ತಮಿಳುನಾಡಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಮೇ 31 ಮತ್ತು ಜೂನ್ 1 ರಂದು ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಬಂಡೆಯಲ್ಲಿ ಧ್ಯಾನ ಮಾಡಲಿದ್ದಾರೆ. ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಪ್ರಧಾನಿ ಮೋದಿ ಧ್ಯಾನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ 2019ರ ಸಂಸತ್ ಚುನಾವಣೆಯ ಕೊನೆಯ ಹಂತದ ಮತದಾನದ ವೇಳೆ ಪ್ರಧಾನಿ ಮೋದಿ ಹಿಮಾಲಯಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿ ಅಲ್ಲಿನ ಗುಹೆಯೊಂದಕ್ಕೆ ತೆರಳಿ ಧ್ಯಾನ ಮಾಡಿದರು. ಈ ಪ್ರಯಾಣದಲ್ಲಿ ಅವರು ಕೇದಾರನಾಥ ಶಿವ ದೇವಾಲಯದಲ್ಲಿ ಪೂಜೆಯನ್ನೂ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ, ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಸೆಲ್ವಪೆರುಂತಗೈ ಅವರು ತಮ್ಮ ಎಕ್ಸ್ ಪೇಜ್ ನಲ್ಲಿ “ಪ್ರಜಾಪ್ರತಿನಿಧಿ ಕಾಯ್ದೆಯಂತೆ ಚುನಾವಣಾ ನೀತಿ ನಿಯಮಗಳು ಜಾರಿಯಲ್ಲಿರುವ ಕಾರಣ ಮೋದಿಯವರ ಕನ್ಯಾಕುಮಾರಿ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡಬಾರದು.

ಚುನಾವಣೆಗೆ ಮುನ್ನ 48 ಗಂಟೆಗಳ ವಿರಾಮದ ವೇಳೆಯಲ್ಲಿ ಇಂತಹ ಘಟನೆಯ ಮೂಲಕ ಮಾಧ್ಯಮಗಳನ್ನು ಬಳಸಿಕೊಂಡು ರಹಸ್ಯವಾಗಿ ಪ್ರಚಾರ ಮಾಡಲು ಮೋದಿ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ. ನಾಳೆ (ಇಂದು) ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ನೀಡಬೇಕಿದೆ. ಅಗತ್ಯವಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾರೆ.