ಕ್ರೈಂ ರಿಪೋರ್ಟ್ಸ್ Archives » Page 3 of 5 » Dynamic Leader
October 23, 2024
Home Archive by category ಕ್ರೈಂ ರಿಪೋರ್ಟ್ಸ್ (Page 3)

ಕ್ರೈಂ ರಿಪೋರ್ಟ್ಸ್

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ನಡೆದ ನೈತಿಕ ಪೋಲಿಸ್ ಗಿರಿ ಹಾಗೂ ಸಾಮೂಹಿಕ ಅತ್ಯಾಚಾರ ಖಂಡನೀಯ. ಮನದಲ್ಲಿ ಕೋಮು ವಿಷ ತುಂಬಿಕೊಂಡು ಸಂವಿಧಾನ ತತ್ವಕ್ಕೇ ಅಪಚಾರಗೈದು ಕಾನೂನನ್ನು ಕೈಗೆತ್ತಿಕೊಳ್ಳುವ ಇಂತಹ ಪ್ರಕ್ರಿಯೆಯನ್ನು ಸರಕಾರ ಮಟ್ಟ ಹಾಕಲೇಬೇಕು ಎಂದು ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

“ಭವಿಷ್ಯದಲ್ಲಿ ಇದು ತುಂಬಾ ಅಪಾಯಕಾರಿ. ಕಾನೂನಿನ ಬಗ್ಗೆ ಜನರಿಗೆ ಭಯ ಹೊರಟು ಹೋಗಿರುವುದೇ ಇಂತಹ ಪ್ರಕ್ರಿಯೆಗೆ ಕಾರಣವಾಗಿದೆ. ಸಾಮೂಹಿಕ ಅತ್ಯಾಚಾರ ಗೈದ ಪ್ರಕರಣ ಸಾಮಾನ್ಯವಲ್ಲ. ‘ಇದುವರೆಗೆ ಬಂದಿತರಾದವರ ಪೈಕಿ ಇಬ್ಬರು ಆ ಪ್ರಕರಣದಲ್ಲಿ ಭಾಗಿಯಾದವರಲ್ಲ; ನನಗೆ ಆ ಇಬ್ಬರ ಫೋಟೋ ಮಾತ್ರ ತೋರಿಸಿದ್ದು ಅವರೀರ್ವರೂ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ’ ಎಂಬ ಸಂತ್ರಸ್ತೆಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದ್ದಾರೆ.

“ಈ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿ ಯಾವುದೇ ರಾಜಕೀಯ ಮಾಡದೆ ಪ್ರಾಮಾಣಿಕವಾಗಿ ತನಿಖೆ ನಡೆಸಿ ಸಂತ್ರಸ್ತೆಗೆ ನ್ಯಾಯ ದೊರಕಿಸಿ ಕೊಡಬೇಕಾದುದು ಸರ್ಕಾರದ ಕರ್ತವ್ಯವಾಗಿದೆ. ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಪ್ರಯತ್ನಿಸುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪವೂ ಗಮನಾರ್ಹ ಎಂದು ಹೇಳಿದ್ದಾರೆ.

ಕ್ರೈಂ ರಿಪೋರ್ಟ್ಸ್ ದೇಶ

ತಿರುವನಂತಪುರಂ: ಕಳೆದ ಅಕ್ಟೋಬರ್ 29 ರಂದು ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೇರಿ ಪ್ರದೇಶದಲ್ಲಿ ಕ್ರಿಶ್ಚಿಯನ್ ಧರ್ಮದ ಸಭೆಯಲ್ಲಿ ದಿಢೀರ್ ಬಾಂಬ್ ಸ್ಫೋಟ ಸಂಭವಿಸಿತು. ಇದರಲ್ಲಿ 3 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಹಿನ್ನಲೆಯಲ್ಲಿ, ಸ್ಫೋಟದ ತನಿಖೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎನ್‌ಐಎ ಮತ್ತು ರಾಷ್ಟ್ರೀಯ ಭದ್ರತಾ ಪಡೆಗಳಿಗೆ ಸ್ಥಳಕ್ಕೆ ತೆರಳಿ ತನಿಖೆ ನಡೆಸುವಂತೆ ಆದೇಶಿಸಿದರು.

ಸ್ಫೋಟ ನಡೆದ ಕೆಲವು ಗಂಟೆಗಳ ನಂತರ ಡೊಮಿನಿಕ್ ಮಾರ್ಟಿನ್ ಎಂಬ ವ್ಯಕ್ತಿ, ಕ್ರಿಶ್ಚಿಯನ್ ಧರ್ಮದ ಸಭೆಯಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ಹೇಳಿಕೊಂಡು, ಸ್ಫೋಟಕ್ಕೆ ಹೊಣೆ ಹೊತ್ತು, ತ್ರಿಶೂರ್ ಜಿಲ್ಲೆಯ ಕೊಡಕ್ಕರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದರು. ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ, ಕೇರಳ ರಾಜ್ಯದ ಕಲಮಸ್ಸೇರಿಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲಯತ್ತೂರಿನ ಪ್ರವೀಣ್ ಪ್ರದೀಪ್ ಎಂಬ ಯುವಕ ಇಂದು ಮೃತಪಟ್ಟಿದ್ದಾನೆ. ಇದರೊಂದಿಗೆ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸ್ಫೋಟದಲ್ಲಿ ಗಾಯಗೊಂಡ 11 ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 6 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕ್ರೈಂ ರಿಪೋರ್ಟ್ಸ್

ಪುದುಕೋಟ್ಟೈ: ಪುದುಕೋಟ್ಟೈ ಜಿಲ್ಲೆಯ ಆಯಪಟ್ಟಿಯ ಅಣ್ಣಾನಗರದ ಪರಿಶಿಷ್ಟ ಜಾತಿಯ ಯುವಕ ಪ್ರಕಾಶ್ ಅವರು ಪಟಾಕಿ ಖರೀದಿಸಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ, ಮೋಲುಡಯಾನ್ ಪಟ್ಟಿ, ನಾಲ್ಕು ರಸ್ತೆಯ ಹತ್ತಿರ ಕೀಳ್ ತೊಂಡೈಮಾನ್ ಗ್ರಾಮದ ಕಳ್ಳರ್ ಸಮುದಾಯಕ್ಕೆ ಸೇರಿದ ಸಾರಥಿ ಮತ್ತು ಆತನ ಸಹಚರು ಸೇರಿ, ಅಡ್ಡಗಟ್ಟಿ ಪ್ರಕಾಶ್ ಅವರನ್ನು ಜಾತಿ ನಿಂದನೆ ಮಾಡಿ, ಬಿಯರ್ ಬಾಟಲಿಯಿಂದ ತಲೆಗೆ 15 ಬಾರಿ ಬರ್ಬರವಾಗಿ ಹೊಡೆದು ಕೊಲೆ ಬೆದರಿಕೆ ಹಾಕಿದ್ದಾರೆ.

ಪುದುಕೊಟ್ಟೈ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಕಾಶ್ ಅವರನ್ನು ದಾಖಲಿಸಲಾಗಿದೆ. “ನೀಲಂ ಸಾಂಸ್ಕೃತಿಕ ಕೇಂದ್ರ”ದ ಸ್ಥಳೀಯ ಮುಖಂಡ ಮುರುಗಾನಂದನ್ ಅವರು ಕಾರ್ಯಕರ್ತರೊಂದಿಗೆ ಆಸ್ಪತ್ರೆಗೆ ಖುದ್ದು ತೆರಳಿ ಸಾಂತ್ವನ ಹೇಳಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರನ್ನೂ ಸಲ್ಲಿಸಲಾಗಿದೆ.

ಈ ಕುರಿತು ಮಾತನಾಡಿರುವ ಮುರುಗಾನಂದನ್, “ರಾಷ್ಟ್ರೀಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗದ ನಿರ್ದೇಶಕರಿಗೂ ಮಾಹಿತಿ ನೀಡಿದ್ದೇವೆ. ಜಾತಿ ಮನಸ್ಥಿತಿಯ ಅಪರಾಧಿಗಳನ್ನು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಿ ನ್ಯಾಯ ಒದಗಿಸಿಕೊಡಬೇಕು.

ತಮಿಳುನಾಡಿನ ದಕ್ಷಿಣದ ಜಿಲ್ಲೆಗಳಲ್ಲಿ ಪರಿಶಿಷ್ಟ ಜನರ ಮೇಲೆ ನಿರಂತರವಾಗಿ ನಡೆಯುತ್ತಿರುವ ಜಾತಿ ಅಸ್ಪೃಶ್ಯತೆ ಹಿಂಸಾಚಾರವನ್ನು ತಡೆಯಲು ತಮಿಳುನಾಡು ಸರ್ಕಾರ ಮತ್ತು ಮುಖ್ಯಮಂತ್ರಿ ಸ್ಟಾಲಿನ್ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

ಕ್ರೈಂ ರಿಪೋರ್ಟ್ಸ್ ದೇಶ

ತಿರುವನಂತಪುರಂ: ಕೇರಳ ರಾಜ್ಯದ ಆಲುವಾ ಜಿಲ್ಲೆಯ ಮುಖ್ಖಂ ಪ್ರದೇಶದಲ್ಲಿ ವಾಸಿಸುತ್ತಿದ್ದ ಬಿಹಾರ ದಂಪತಿಯ 5 ವರ್ಷದ ಮಗಳು ಜುಲೈ 28 ರಂದು ನಾಪತ್ತೆಯಾಗಿದ್ದಳು. ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಪತ್ತೆಯಾಗಿರುವ ಬಾಲಕಿಗಾಗಿ ಹುಡುಕಾಟ ನಡೆಸಿದ್ದರು. ಅಲ್ಲದೆ, ಈ ಘಟನೆಗೆ ಸಂಬಂಧಿಸಿದಂತೆ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ಬಿಹಾರ ರಾಜ್ಯದ ವಲಸೆ ಕಾರ್ಮಿಕ ಅಸ್ಪಾಕ್ ಆಲಂ ಅವರನ್ನೂ ಪೊಲೀಸರು ವಿಚಾರಣೆ ನಡೆಸಿದ್ದರು.

ತನಿಖೆ ವೇಳೆ ಅಸ್ಪಾಕ್ ಆಲಂ ಬಾಲಕಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಬಾಲಕಿಯ ಶವವನ್ನು ಆಲುವಾ ಮಾರುಕಟ್ಟೆ ಹಿಂಭಾಗದ ಕಸದ ರಾಶಿಗೆ ಎಸೆದಿದ್ದಾನೆ. ಇದನ್ನು ಅನುಸರಿಸಿ ಪೊಲೀಸರು 20 ಗಂಟೆಗಳ ಹುಡುಕಾಟದ ಬಳಿಕ ಬಾಲಕಿಯ ಶವವನ್ನು ಹೊರತೆಗೆದಿದ್ದಾರೆ. ಈ ಘಟನೆ ದೇಶಾದ್ಯಂತ ಭಾರೀ ಆಘಾತವನ್ನುಂಟು ಮಾಡಿತ್ತು.

ಏತನ್ಮಧ್ಯೆ, 5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿ ಹತ್ಯೆಗೈದ ಅಸ್ಪಾಕ್ ಆಲಂ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ವಿಚಾರಣೆ ಎರ್ನಾಕುಲಂನ ಪೋಕ್ಸೋ ಕೋರ್ಟ್‌ನಲ್ಲಿ ನಡೆಯಿತು.

ಈ ಪ್ರಕರಣದಲ್ಲಿ, ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಸ್ಪಾಕ್ ಆಲಂ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೆ, ಆರೋಪಿ ಅಸ್ಪಾಕ್ ಆಲಂಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ನ್ಯಾಯಾಲಯವು ಆರೋಪಿ ಅಸ್ಪಾಕ್ ಆಲಂಗೆ 5 ಜೀವಾವಧಿ ಶಿಕ್ಷೆಯನ್ನೂ ವಿಧಿಸಿದೆ. ಆರೋಪಿಗಳಿಗೆ 7 ಲಕ್ಷ 70 ಸಾವಿರ ರೂಪಾಯಿ ದಂಡ ಪಾವತಿಸುವಂತೆಯೂ ನ್ಯಾಯಾಲಯ ಆದೇಶಿಸಿದೆ.

ಈ ಪ್ರಕರಣದ ವಿಚಾರಣೆ ಆರಂಭವಾಗಿ 110 ದಿನಗಳಲ್ಲಿ ಎರ್ನಾಕುಲಂ ಪೋಕ್ಸೊ ಕೋರ್ಟ್ ತೀರ್ಪು ನೀಡಿರುವುದು ಗಮನಾರ್ಹ. ಮಕ್ಕಳ ದಿನದಂದು, ಮಗುವನ್ನು ಕೊಂದ ಅಸ್ಪಾಕ್ ಆಲಂಗೆ ಪೋಕ್ಸೊ ನ್ಯಾಯಾಲಯವು ಮರಣದಂಡನೆ ವಿಧಿಸಿದ್ದನ್ನು ಅನೇಕರು ಸ್ವಾಗತಿಸಿದ್ದಾರೆ.

ಕ್ರೈಂ ರಿಪೋರ್ಟ್ಸ್ ವಿದೇಶ

ಮಾಸ್ಕೋ: ರಷ್ಯಾದ 23 ವರ್ಷದ ವೆರಾ ಪೆಖ್ತೆಲೆವಾ (Vera Pekhteleva) ಎಂಬ ಮಹಿಳೆ, ವ್ಲಾಡಿಸ್ಲಾವ್ ಕಾನ್ಯಸ್ (Vladislav Kanyus) ಜೊತೆಗಿನ ಸಂಬಂಧವನ್ನು ಮುರಿದುಕೊಂಡರು. ಅದರಿಂದ ಉಂಟಾದ ಸಮಸ್ಯೆಯಿಂದ ಕಾನ್ಯಸ್ ವೆರಾಳನ್ನು ಬರ್ಬರವಾಗಿ ಹತ್ಯೆ ಮಾಡಿದನು. ಮೂರೂವರೆ ಗಂಟೆಗಳ ಕಾಲ ಅತ್ಯಾಚಾರ ಮತ್ತು ಚಿತ್ರಹಿಂಸೆ ನೀಡಿದ ನಂತರ, ಆಕೆಯನ್ನು 111 ಬಾರಿ ಪದೇ ಪದೇ ಇರಿದು ಕಬ್ಬಿಣದ ಕೇಬಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿನು.

ವೆರಾಳ ಕಿರುಚಾಟ ಕೇಳಿದ ನೆರೆಹೊರೆಯವರು ಪೊಲೀಸರಿಗೆ 7 ಬಾರಿ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ ಪೊಲೀಸರು ಸ್ಥಳಕ್ಕೆ ತಲುಪಿದಾಗ ವೆರಾ ಶವವಾಗಿ ಪತ್ತೆಯಾಗಿದ್ದರು. ಪೊಲೀಸರು ಕಾನ್ಯಸ್ ನನ್ನು ಬಂಧಿಸಿದರು. ವಿಚಾರಣೆಯ ಕೊನೆಯಲ್ಲಿ, ಕಾನ್ಯಸ್ ಗೆ ಕನಿಷ್ಠ 17 ವರ್ಷಗಳ ಜೈಲು ಶಿಕ್ಷೆಯನ್ನು ನೀಡಲಾಯಿತು.

ಈ ಹಿನ್ನಲೆಯಲ್ಲಿ, ಅಪರಾಧಿ ಕಾನ್ಯಸ್ ಉಕ್ರೇನ್‌ನಲ್ಲಿ ಯುದ್ಧಕ್ಕೆ ಸೇರಲು ನಿರ್ಧರಿಸಿದ ಕಾರಣಕ್ಕೆ ರಷ್ಯಾದ ಅಧ್ಯಕ್ಷ ಪುಟಿನ್ ಅವನನ್ನು ಕ್ಷಮಾದಾನದ ಮೇಲೆ ಬಿಡುಗಡೆ ಮಾಡಿದ್ದಾರೆ. ಒಟ್ಟು 17 ವರ್ಷಗಳ ಶಿಕ್ಷೆಯ ಅವಧಿಯಲ್ಲಿ 1 ವರ್ಷವೂ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಆತನನ್ನು ಬಿಡುಗಡೆ ಮಾಡಲಾಗಿದೆ.

ವೆರಾ ಅವರ ತಾಯಿ ಒಕ್ಸಾನಾ, ಮಿಲಿಟರಿ ಸಮವಸ್ತ್ರದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಶಸ್ತ್ರಸಜ್ಜಿತವಾದ ಕಾನ್ಯಸ್ ಅವರ ಫೋಟೋವನ್ನು ನೋಡಿ ವಿಚಲಿತರಾದರು. ತನ್ನ ಮಗಳ ಕೊಲೆಗಾರನನ್ನು ಕ್ಷಮಿಸಿದ್ದಕ್ಕಾಗಿ ಪುಟಿನ್ ಅವರನ್ನು ದೂಷಿಸಿದರು.

“ಕ್ರೂರವಾಗಿ ಹತ್ಯೆ ಮಾಡಿದವನ ಬಳಿ ರಷ್ಯಾವನ್ನು ರಕ್ಷಿಸಲು ನೀವು ಹೇಗೆ ಆಯುಧವನ್ನು ನೀಡಬಹುದು? ಇದು ನನಗೆ ಹೊಡೆತವಾಗಿದೆ. ನನ್ನ ಮಗು ಅವಳ ಸಮಾಧಿಯಲ್ಲಿ ಕೊಳೆಯುತ್ತಿದ್ದಾಳೆ; ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ, ನನ್ನ ಜೀವನದಲ್ಲಿ ಇನ್ನು ಭರವಸೆ ಇಲ್ಲ.

ನಾನು ಬದುಕುವುದಿಲ್ಲ; ನಾನು ಜೀವಂತವಿದ್ದರೂ ಇಲ್ಲದಂತೆ ಇದ್ದೇನೆ. ಅಂತಹ ಘಟನೆ ನನ್ನನ್ನು ಸಂಪೂರ್ಣವಾಗಿ ಬೆಚ್ಚಿಬೀಳಿಸಿದೆ. ನಾನು ತುಂಬಾ ಬಲಶಾಲಿ; ಆದರೆ ನಮ್ಮ ಸರ್ಕಾರದ ಈ ಅನ್ಯಾಯ ನನ್ನನ್ನು ಜೀವನದ ಕೊನೆಯ ಹಂತಕ್ಕೆ ತಳ್ಳೀದೆ. ಮುಂದೇನು ಮಾಡಬೇಕು ಎಂದು ತಿಳಿಯದ ಸ್ಥಿತಿಯಲ್ಲಿ ಇದ್ದೇನೆ”  ಎಂದು ಅವರು ಅಳಲು ತೋಡಿಕೊಂಡರು.

ಉಕ್ರೇನ್‌ನ ಗಡಿಯಲ್ಲಿರುವ ದಕ್ಷಿಣ ರಷ್ಯಾದಲ್ಲಿರುವ ರೋಸ್ಟೋವ್‌ಗೆ ಕಾನ್ಯಸ್ ನನ್ನು ವರ್ಗಾಯಿಸಲಾಗಿದೆ ಎಂದು ಜೈಲು ಅಧಿಕಾರಿಗಳು ಬುಧವಾರ ದೃಢಪಡಿಸಿದ್ದಾರೆ ಎಂದು ಮಹಿಳಾ ಹಕ್ಕುಗಳ ಕಾರ್ಯಕರ್ತೆ ಅಲಿಯೋನಾ ಪೊಪೊವಾ (Alyona Popova) ಹೇಳಿದ್ದಾರೆ. ಮತ್ತು ಅವರು ನವೆಂಬರ್ 3 ರಂದು ಮುಖ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿಯ ಪತ್ರವನ್ನೂ ಹಂಚಿಕೊಂಡಿದ್ದಾರೆ. ಅದರಲ್ಲಿ, ಕಾನ್ಯಸ್ ಗೆ ಕ್ಷಮಾದಾನ ನೀಡಲಾಗಿದೆ ಎಂದು, ಅವರ ಶಿಕ್ಷೆಯನ್ನು ಏಪ್ರಿಲ್ 27 ರಂದು ಅಧ್ಯಕ್ಷರ ಆದೇಶದ ಮೇರೆಗೆ ತೆಗೆದುಹಾಕಲಾಗಿದೆ ಎಂದು ತಿಳಿಸಲಾಗಿತ್ತು.

ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅಧ್ಯಕ್ಷರ ನೀತಿಯನ್ನು ಬೆಂಬಲಿಸಿದ್ದಾರೆ. “ಉಕ್ರೇನ್‌ನಲ್ಲಿ ಯುದ್ಧ ಮಾಡಲು ಕಳುಹಿಸಲಾಗಿರುವ ರಷ್ಯಾದ ಕೈದಿಗಳು ಅವರ ಅಪರಾಧಗಳಿಗಾಗಿ ರಕ್ತದಿಂದ ಪ್ರಾಯಶ್ಚಿತ್ತ ಮಾಡುತ್ತಿದ್ದಾರೆ” ಎಂದು ಪೆಸ್ಕೋವ್ ಹೇಳಿದ್ದಾರೆ.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಕಳೆದ ಅಕ್ಟೋಬರ್ 17 ರಂದು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಹಲಸೂರು ಪೊಲೀಸರು ಇಬ್ಬರ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆಯ ವೇಳೆ ಅವರುಗಳು ನೀಡಿದ ಮಾಹಿತಿಯ ಮೇರೆಗೆ 5 ಲಕ್ಷ 50 ಸಾವಿರ ರೂಪಯಿಗಳ ಮೌಲ್ಯದ 3 ದ್ವಿಚಕ್ರ ವಾಹನ, ಲೆನೋವಾ ಲ್ಯಾಪ್ ಟಾಪ್, ವಿವಿಧ ಕಂಪನಿಯ 9 ಮೊಬೈಲ್ ಫೋನ್ ಗಳು ಹಾಗೂ ಒಂದು ಸ್ಮಾರ್ಟ್ ವಾಚನ್ನು ವಶಪಡಿಸಿಕೊಳ್ಳಲಾಯಿತು.

ವಶಕ್ಕೆ ಪಡೆದ ವ್ಯಕ್ತಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಹಲಸೂರು ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು, ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಮತ್ತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು.

ದಸ್ತಗಿರಿ ಮಾಡಿದ ಇಬ್ಬರ ಪೈಕಿ ಒಬ್ಬ ವ್ಯಕ್ತಿ ಈ ಹಿಂದೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ, ಪುಲಿಕೇಶಿನಗರ, ಭಾರತಿನಗರ, ಹೆಬ್ಬಾಳ, ಕೆ.ಆರ್.ಪುರಂ, ಹೆಣ್ಣೂರು, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರಾಬರಿ ಪ್ರಕರಣ ಸೇರಿದಂತೆ ಒಟ್ಟು 10 ಪ್ರಕರಣಗಳು ದಾಖಲಾಗಿದ್ದು ಕಂಡುಬಂದಿರುತ್ತದೆ.

ಈ ಕಾರ್ಯಚರಣೆಯನ್ನು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಿ.ದೇವರಾಜ್ ರವರ ಮಾರ್ಗದರ್ಶನದಲ್ಲಿ ಹಲಸೂರು ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಬಿ.ರಾಮಚಂದ್ರ ರವರ ನೇತೃತ್ವದಲ್ಲಿ ಹಲಸೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಕೆ.ಸಂತೋಷ್ ಹಾಗೂ ಸಿಬ್ಬಂಧಿ ವರ್ಗದವರು ಈ ಪ್ರಕರಣ ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.  

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ರಿವಾರ್ಡ್ 360 ಕಂಪನಿಯ ವೆಬ್‌ಸೈಟ್ ಹ್ಯಾಕ್ ಮಾಡಿ, ಕಸ್ಟಮರ್‌ಗಳಿಗೆ ನೀಡುವ ವೋಚರ್‌ಗಳನ್ನು ತನ್ನ ವಶಕ್ಕೆ ಪಡೆದುಕೊಂಡು ಕಸ್ಟಮರ್‌ಗಳು ವೋಚರನ್ನು ಬಳಕೆ ಮಾಡುವ ಮೊದಲೇ ಬಳಕೆ ಮಾಡಿ, ಇ-ಕಾಮರ್ಸ್ ಕಂಪನಿಗಳ ಮೂಲಕ ಕೋಟ್ಯಾಂತರ ರೂ ಬೆಲೆ ಬಾಳುವ ಚಿನ್ನ, ಬೆಳ್ಳಿ, ದ್ವಿಚಕ್ರ ವಾಹನಗಳು, ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ನಗದು ಹಣವನ್ನು ಆನ್‌ಲೈನ್ ಮುಖಾಂತರ ಖರೀದಿಸಿ ಚಂಚನೆ ಮಾಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸಿ.ಎ.ಎನ್ ಪೊಲೀಸ್ ಠಾಣೆಯ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಪ್ರಕರಣವನ್ನು ಭೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಮಲದ ಹೂವುಗಳಿಂದ ಕೂಡಿದ ಹೊಸ ಸಮವಸ್ತ್ರ!

ಆರೋಪಿಯಿಂದ 5.269 ಕೆಜಿ ಚಿನ್ನ, 27.250 ಕೆಜಿ ಬೆಳ್ಳಿ, ರೂ.11 ಲಕ್ಷ 13 ಸಾವಿರ ನಗದು, ವಿವಿಧ ಕಂಪನಿಯ 07 ದ್ವಿಚಕ್ರ ವಾಹನಗಳು, ಪ್ಲಿಪ್ ಕಾರ್ಟ್ ವಾಲೇಟ್ ಪ್ರೀಜ್ ಆದ ರೂ.3 ಲಕ್ಷ 50 ಸಾವಿರ ಹಣ, 2 ಲ್ಯಾಪ್ ಟಾಪ್, 03 ಮೊಬೈಲ್‌ಗಳು ಒಟ್ಟು ಅಂದಾಜು ಮೊತ್ತ 4,16,63,000/- ರೂ ಮೌಲ್ಯದ ವಸ್ತುಗಳನ್ನು ಅಮಾನತ್ತು ಮಾಡಲಾಗಿದೆ

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ವಿಶಾಲ್ ಪಾಟೀಲ್ ಎಂಬುವವನು ತಾನು ಕರ್ನಾಟಕ ಲೋಕಾಯುಕ್ತ ಡಿವೈಎಸ್‌ಪಿ ಎಂದು ಸರ್ಕಾರಿ ನೌಕರರುಗಳಿಗೆ ಕರೆ ಮಾಡಿ, ನಿಮ್ಮ ವಿರುದ್ದ ಆದಾಯಕ್ಕೂ ಮೀರಿದ ಆಸ್ತಿಗಳಿಗೆ ಸಂಬಂಧಪಟ್ಟ ಮಾಹಿತಿಗಳುಳ್ಳ ಕೇಸಿನ ಕಡತ ನನ್ನ ಬಳಿ ಇದೆ ಎಂದು ಬೆದರಿಕೆ ಹಾಕಿ, ಕೇಸನ್ನು ಮುಕ್ತಾಯ ಮಾಡಲು ಹಣ ನೀಡಬೇಕು ಇಲ್ಲದಿದ್ದರೆ, ನಿಮ್ಮ ವಿರುದ್ದ ಕರ್ನಾಟಕ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳುತ್ತೇನೆಂದು ಸುಳ್ಳು ಹೇಳಿ ಹಣಕ್ಕೆ ಒತ್ತಾಯ ಮಾಡುತ್ತಿದ್ದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾರ್ಯೋನ್ಮುಖರಾದ ವಿಧಾನಸೌಧ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆತನು ಸರ್ಕಾರಿ ನೌಕರರ ಬಳಿ ಹೋಗಿ ಹೆದರಿಸಿ, ಹಣವನ್ನು ಪಡೆದುಕೊಂಡು ಬರುತ್ತಿದ್ದಾಗಿ, ತನಿಖಾ ಸಮಯದಲ್ಲಿ ಕಂಡು ಬಂದಿರುತ್ತದೆ. ಲೋಕಾಯುಕ್ತ ಡಿವೈಎಸ್‌ಪಿ ಎಂದು ಕರೆ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯು ತಲೆ ಮಾರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿರುತ್ತದೆ.

ಇದನ್ನೂ ಓದಿ: ಜಾತಿ ತಾರತಮ್ಯದ ವಿರುದ್ಧ ಕಾನೂನು ರೂಪಿಸಿದ ಕ್ಯಾಲಿಫೋರ್ನಿಯಾ; ಕರಾಳ ದಿನವೆಂದ ಅಮೆರಿಕಾ ಹಿಂದೂ ಒಕ್ಕೂಟ!

ಈ ಯಶಸ್ವಿ ಕಾರ್ಯಚರಣೆಯನ್ನು ಶ್ರೀನಿವಾಸಗೌಡ ಆರ್, ಉಪ ಪೊಲೀಸ್ ಆಯುಕ್ತರು, ಕೇಂದ್ರ ವಿಭಾಗ, ಬೆಂಗಳೂರು ನಗರ ಅವರ ಮಾರ್ಗದರ್ಶನದಲ್ಲಿ ಸಿ.ಬಾಲಕೃಷ್ಣ, ಸಹಾಯಕ ಪೊಲೀಸ್ ಆಯುಕ್ತರು, ಕಬ್ಬನ್ ಪಾರ್ಕ್ ಉಪ ವಿಭಾಗ ರವರ ನೇತೃತ್ವದಲ್ಲಿ ಎಸ್.ಪಿ.ಕುಮಾರಸ್ವಾಮಿ, ಪೊಲೀಸ್ ಇನ್ಸ್​ಪೆಕ್ಟರ್ ಹಾಗೂ ಸಿಬ್ಬಂದಿರವರ ತಂಡ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತದೆ.

ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.

ಕ್ರೈಂ ರಿಪೋರ್ಟ್ಸ್ ದೇಶ

ಮೇಕೆ ಮತ್ತು ಪಾರಿವಾಳಗಳನ್ನು ಕದ್ದಿದ್ದಕ್ಕಾಗಿ ದಲಿತ ಮಕ್ಕಳನ್ನು ತಲೆಕೆಳಗಾಗಿ ನೇತು ಹಾಕಲಾದ ಘಟನೆ ಅಹ್ಮದ್‌ನಗರ ಜಿಲ್ಲೆಯಲ್ಲಿ ನಡೆದಿದೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

ಮುಂಬೈ: ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಗೆ ಸೇರಿದ ಶ್ರೀರಾಮಪುರ ತಾಲ್ಲೂಕಿನ ಹರೇಗಾಂವ್ ಗ್ರಾಮದಲ್ಲಿ, ಮೇಕೆ, ಪಾರಿವಾಳ ಕಳ್ಳತನ ಮಾಡಿದ್ದಾರೆ ಎಂದು ದಲಿತ ಕುಟುಂಬಕ್ಕೆ ಸೇರಿದ ಮಕ್ಕಳನ್ನು ಜೀವಂತವಾಗಿ ತಲೆಕೆಳಗಾಗಿ ನೇತುಹಾಕಿ ಥಳಿಸುತ್ತಿರುವ ಘಟನೆ ಆಘಾತವನ್ನು ಉಂಟುಮಾಡಿದೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮವು ಓದುವುದನ್ನು ತಡೆಮಾಡಿತು; ದ್ರಾವಿಡ ಮಾದರಿ ಸರ್ಕಾರ ಹಸಿವು ನೀಗಿಸಿ ಓದುವಂತೆ ಮಾಡಿದೆ!

ಅಹಮದ್‌ನಗರಕ್ಕೆ ಸೇರಿದವರಾದ ರಾಜ್ಯ ಕಂದಾಯ ಸಚಿವ ರಾಮಕೃಷ್ಣ ವಿ.ಕೆ.ಪಾಟೀಲ್ ಅವರು ಆಸ್ಪತ್ರೆಗೆ ತೆರಳಿ ಮಕ್ಕಳು ಮತ್ತು ಅವರ ಪೋಷಕರನ್ನು ಭೇಟಿ ಮಾಡಿದ್ದಾರೆ. ಮತ್ತು ಹೆಚ್ಚಿನ ತನಿಖೆಗೆ ಆದೇಶ ಮಾಡಿದ್ದರೆ. ಇದೇ ವೇಳೆ ವಂಚಿತ್ ಬಹುಜನ ಅಘಾಡಿ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಮಾತನಾಡಿ, “ಜಾತಿ ತಾರತಮ್ಯ, ಅವಮಾನ, ನಿಂದನೆ, ಹಿಂಸೆ, ದೌರ್ಜನ್ಯ ಹೊಸದಲ್ಲ. ಇದನ್ನು ಸವಾಲಾಗಿ ಸ್ವೀಕರಿಸಿ ಬದಲಾವಣೆ ತರೋಣ” ಎಂದರು.

ಇದನ್ನೂ ಓದಿ: ಗಾಂಧಿಯನ್ನು ಕೊಂದವರು ಜೈ ಭೀಮ್ ಚಿತ್ರಕ್ಕೆ ಹೇಗೆ ಪ್ರಶಸ್ತಿ ನೀಡುತ್ತಾರೆ?: ನಟ ಪ್ರಕಾಶ್ ರಾಜ್ ಪ್ರಶ್ನೆ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯ ವಕ್ತಾರ ಮಹೇಶ್ ಥಾಬೆ ಮಾತನಾಡಿ, “ದಲಿತರ ಹಕ್ಕುಗಳನ್ನು ರಕ್ಷಿಸುವಲ್ಲಿ ಸರ್ಕಾರ ವಿಫಲವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಇನ್ನು ಕೆಲವು ಪಕ್ಷಗಳು “ಇಂಡಿಯಾ” ಮೈತ್ರಿಕೂಟಕ್ಕೆ ಸೇರಲಿವೆ: ನಿತೀಶ್ ಕುಮಾರ್

ಕ್ರೈಂ ರಿಪೋರ್ಟ್ಸ್

ಅಮರಾವತಿ: ಆಂಧ್ರದಲ್ಲಿ ದೇವಾಲಯದ ಹುಂಡಿಯಲ್ಲಿ ರೂ.100 ಕೋಟಿಯಷ್ಟು ಕಾಸೋಲೆಯನ್ನು ಪಾವತಿಸಿದ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ ಕೇವಲ ರೂ.17 ಮಾತ್ರ ಇದ್ದುದರಿಂದ ದೇವಾಲಯದ ಆಡಳಿತಾಧಿಕಾರಿಗಳು ಆಘಾತಕ್ಕೊಳಗಾಗಿದ್ದಾರೆ.

ಆಂಧ್ರಪ್ರದೇಶ ವಿಶಾಖಪಟ್ಟನ ಜಿಲ್ಲೆ ಸಿಂಹಾಚಲದಲ್ಲಿ ಶ್ರೀ.ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯವಿದೆ. ಈ ದೇವಾಲಯದಲ್ಲಿ ಪ್ರತಿ 15 ದಿನಗಳಿಗೊಮ್ಮೆ ಭಕ್ತರು ನೀಡಿದ ಕಾಣಿಕೆಯನ್ನು ಎಣಿಸಲಾಗುತ್ತದೆ. ಹೀಗಾಗಿ ದೇವಸ್ಥಾನ ನೌಕರರು ಹುಂಡಿಯಲ್ಲಿ ಬಂದಿದ್ದ ಕಾಣಿಕೆಗಳನ್ನು ಎಣಿಸುವ ಕಾರ್ಯದಲ್ಲಿ ತೊಡಗಿದ್ದಾಗ, ರಾಧಾಕೃಷ್ಣ ಅವರ ಹೆಸರಿನಲ್ಲಿ 100 ಕೋಟಿ ಬ್ಯಾಂಕ್ ಚೆಕ್ ಇದ್ದಿದ್ದನ್ನು ನೋಡಿ ಆಶ್ಚರ್ಯವಾದರು.

ದೇವಸ್ಥಾನದ ಅಧಿಕಾರಿಗಳು ಚೆಕ್ ಅನ್ನು ನಿಗದಿತ ಬ್ಯಾಂಕ್‌ಗೆ ಕಳುಹಿಸಿ ದೇವಸ್ಥಾನದ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಲು ಪ್ರಯತ್ನಿಸಿದರು. ಆದರೆ ಬ್ಯಾಂಕ್ ಅಧಿಕಾರಿಗಳು ಚೆಕ್ ನೋಡಿ ಪರಿಶೀಲಿಸಿದಾಗ ಅದು ರಾಧಾಕೃಷ್ಣ ಅವರ ಬ್ಯಾಂಕ್ ಖಾತೆಯಾಗಿದ್ದು, ಆ ಬ್ಯಾಂಕ್ ಖಾತೆಯಲ್ಲಿ ಕೇವಲ 17 ರೂಪಾಯಿಗಳು ಮಾತ್ರ ಇದ್ದವು. ಇದರಿಂದ ಆಘಾತಕ್ಕೆ ಒಳಗಾದ ದೇವಸ್ಥಾನದ ಆಡಳಿತಾಧಿಕಾರಿಗಳು ರಾಧಾಕೃಷ್ಣನ್ ಎಂಬ ಭಕ್ತ ಉದ್ದೇಶಪೂರ್ವಕವಾಗಿ ಇದನ್ನು ಮಾಡಿದ್ದರೆ ಆತನ ವಿರುದ್ದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.