ಕ್ರೈಂ ರಿಪೋರ್ಟ್ಸ್ Archives » Page 5 of 5 » Dynamic Leader
October 23, 2024
Home Archive by category ಕ್ರೈಂ ರಿಪೋರ್ಟ್ಸ್ (Page 5)

ಕ್ರೈಂ ರಿಪೋರ್ಟ್ಸ್

ಕ್ರೈಂ ರಿಪೋರ್ಟ್ಸ್

ಗೃಹ ಬಳಕೆ ಸಿಲಿಂಡರ್‌ಗಳನ್ನು ಅನಧಿಕೃತ್ವಾಗಿ ದಾಸ್ತಾನು ಮಾಡಿಕೊಂಡು; ವಾಣಿಜ್ಯ ಬಳಕೆ ಸಿಲಿಂಡರ್‌ಗಳಿಗೆ ಅಕ್ರಮವಾಗಿ ರೀಫಿಲ್ಲಿಂಗ್ ಮಾಡಿ; ಮಾರಾಟ ಮಾಡಿಕೊಂಡಿದ್ದ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು: ಬೆಂಗಳೂರು ನಗರ, ಮಡಿವಾಳ ಪೊಲೀಸ್ ಠಾಣೆ ಸರಹದ್ದಿಗೆ ಸೇರಿರುವ ವಿಆರ್‌ಎಂ ಎಂಟರ್‌ಪ್ರೈಸಸ್, ಟಿವಿಎಸ್ ಶೋ ರೂಂ ಹತ್ತಿರ, ಸುಭಾಷ್ ನಗರ, ಮಡಿವಾಳ, ಬೆಂಗಳೂರು ವಿಳಾಸದ ಶಾಪ್‌ನಲ್ಲಿ ಗೃಹಬಳಕೆ ಸಿಲಿಂಡರ್‌ಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿಕೊಂಡು, ಇವುಗಳಿಂದ ವಾಣಿಜ್ಯ ಬಳಕೆ ಸಿಲಿಂಡರ್‌ಗಳು ಮತ್ತು ಸಣ್ಣ ಸಣ್ಣ ಸಿಲಿಂಡರ್‌ಗಳಿಗೆ ರೀಫಿಲ್ಲಿಂಗ್ ರಾಡ್‌ಗಳ ಮೂಲಕ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಿ ಮಾರಾಟ ಮಾಡಿಕೊಂಡು ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತೊಡಗಿದ್ದ ಅಕ್ರಮ ಜಾಲವೊಂದನ್ನು ಸಿಸಿಬಿ ಪೊಲೀಸರು ಪತ್ತೆಮಾಡಿದ್ದಾರೆ.

ಇದರ ಬಗ್ಗೆ ಬಾತ್ಮೀದಾರರಿಂದ ಮಾಹಿತಿ ಪಡೆದು, ಮಾಹಿತಿ ಖಚಿತ ಪಡಿಸಿಕೊಂಡು ಸದರಿ ಶಾಪ್ ಮೇಲೆ ದಾಳಿ ಮಾಡಿ ಆರೋಪಿ ಕಡೆಯಿಂದ ಸುಮಾರು, 2 ಲಕ್ಷ ರೂ ಬೆಲೆಬಾಳುವ ಸರ್ಕಾರಿ ಸ್ವಾಮ್ಯದ ಭಾರತ್, ಇಂಡೇನ್ ಹಾಗೂ ಖಾಸಗಿ ಸ್ವಾಮ್ಯದ ಜ್ಯೋತಿ, ಎಂವಿಆರ್ ಕಂಪೆನಿಯ ದೊಡ್ಡ ಸಿಲಿಂಡರ್‌ಗಳು 47, ಸಣ್ಣ ಸಿಲಿಂಡರ್‌ಗಳು 49 ಒಟ್ಟು 96 ಸಿಲಿಂಡರ್‌ಗಳು ಒಂದು ರಾಡ್, ಒಂದು ಅಳತೆ ಯಂತ್ರ ಇವುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ. ಶಾಪ್‌ನ ಮಾಲೀಕನಾದ ಆರೋಪಿ ಧನರಾಜ್ ತಲೆ ಮರೆಸಿ ಕೊಂಡಿರುತ್ತಾನೆ.

ಈ ಸಂಬಂಧ ಆರೋಪಿಯ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ. ಈ ಕಾರ್ಯಚರಣೆಯನ್ನು ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿ / ಸಿಬ್ಬಂಧಿಯವರುಗಳು ಯಶಶ್ವಿಯಾಗಿ ಕೈಗೊಂಡಿರುತ್ತಾರೆ.

    

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಸಿಸಿಬಿ ಕಾರ್ಯಚರಣೆ, ತಮಿಳುನಾಡು ಮೂಲದ ಇಬ್ಬರು ಬಂಧನ. ಕೋಟ್ಯಾಂತರ ಬೆಲೆಬಾಳುವ 6.5 ಕೆಜಿ ತೂಕದ ನಿಷೇಧಿತ ಅಂಬರ್ ಗ್ರೀಸ್ ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ದಿನಾಂಕ: 30-05-2023 ರಂದು ತಮಿಳುನಾಡು ರಾಜ್ಯದಿಂದ ಬೆಂಗಳೂರಿಗೆ ಬಂದು, ಕಾನೂನು ಬಾಹೀರವಾಗಿ ಸುಮಾರು 6.5 ಕೆಜಿ ತೂಕದ ನಿಷೇಧಿತ ಅಂಬರ್ ಗ್ರೀಸ್ ವಸ್ತುವನ್ನು, ಕೋಟ್ಯಾಂತರ ರೂಪಾಯಿ ಬೆಲೆಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ ಸಿಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಇಬ್ಬರು ಆಸಾಮಿಗಳನ್ನು ಬಂಧಿಸಿ ಕೋಟ್ಯಾಂತರ ಮೌಲ್ಯದ ನಿಷೇಧಿತ ಅಂಬರ್ ಗ್ರೀಸ್ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಈ ಆರೋಪಿಗಳ ವಿರುದ್ಧ ಬೆಂಗಳೂರು ನಗರ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಸಿಸಿಬಿ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಲಗ್ಗೆರೆ, ಚೌಡೇಶ್ವರಿ ನಗರ ನಿವಾಸಿಯಾದ ಕಾಂಗ್ರೆಸ್ ಕಾರ್ಯಕರ್ತ ಮತ್ತಿ ರವಿ ಎಂಬಾತನು ಸ್ನೇಹಿತನಾದ ಕೃಷ್ಣಮೂರ್ತಿಯ ಹುಟ್ಟು ಹಬ್ಬಕ್ಕೆಂದು ದಿನಾಂಕ: 24-04-2023 ರಂದು ಸಂಜೆ ಸುಮಾರು 07-45 ಗಂಟೆಯ ಸಮಯಕ್ಕೆ ಹೋಗಿ ಮನೆಗೆ ವಾಪಸ್ಸು ಬಂದಿದ್ದ. ರವಿ ಮನೆಗೆ ಬಂದನಂತರ ಮಂಜು ಎಂಬುವವನು ರವಿಗೆ ಪದೇ ಪದೇ ಕಾಲ್ ಮಾಡುತ್ತಲೇ ಇದ್ದು, ಸದರಿ ಕರೆಯನ್ನು ಸ್ವೀಕರಿಸಿ, 50 ಅಡಿ ರಸ್ತೆಯ ಹತ್ತಿರ ಬರುತ್ತೇನೆಂದು ಹೇಳಿ ಮನೆಯಿಂದ ಹೊರಟು ಹೋಗಿದ್ದ.

ದಿನಾಂಕ: 25-04-2023 ರಂದು ರಾತ್ರಿ ಸುಮಾರು 10-00 ಗಂಟೆಯ ಸಮಯದಲ್ಲಿ ರವಿಯ ಸ್ನೇಹಿತ ನರಸಿಂಹ ರವಿಯ ಮನೆಯ ಬಳಿ ಬಂದು, ‘ರವಿಗೆ ಮಂಜು ಮತ್ತು ಆತನ ಸ್ನೇಹಿತರು ಹೊಡೆದಿರುತ್ತಾರೆ, ಆತನನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಸೇರಿಸಲಾಗಿರುತ್ತದೆ’ ಎಂದು ಆತನ ಪತ್ನಿ ಪುಷ್ಪ ಬಳಿ ತಿಳಿಸಿದ್ದಾನೆ. ಪುಷ್ಪ ಅವರು ನೀಡಿದ ದೂರಿನ ಮೇರೆಗೆ ನಂದಿನಿ ಲೇಔಟ್ ಪೊಲೀಸ್ ಠಾಣಾ ಮೊ.ಸಂ.154/2023 ಕಲಂ 302 ಐಪಿಸಿ ಮತ್ತು ಕಲಂ 3(2), (ವಿ), ಎಸ್.ಸಿ/ಎಸ್.ಟಿ ಆಕ್ಟ್ ರೀತ್ಯ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ 1) ಕೆ.ಮಂಜುನಾಥ್ @ ಮಂಜು, 2) ನಾಗರಾಜ್ @ ಸ್ಪಾಟ ನಾಗ, 3) ಬಿ.ಸಿ.ಗೋಪಾಲ್ @ ಗೋಪಿ, 4) ಕಿರಣ್ ಕುಮಾರ್ ಎನ್, 5) ಮಣಿಕಂಠನ್ ಕೆ @ಮಣಿ, 6) ಕಾರ್ತಿಕ್ ಎಸ್, 7) ಬಾಬು @ ಹಾಸಿಗೆ ಬಾಬು ಮುಂತಾದ ಒಟ್ಟು 7 ಜನರನ್ನು ನಂದಿನಿ ಲೇಔಟ್ ಪೊಲೀಸ್ ಅಧಿಕಾರಿಗಳು ದಸ್ತಗಿರಿ ಮಾಡಿದ್ದಾರೆ.

ಮೃತ ರವಿ

ಕಳೆದ ಯುಗಾದಿ ಹಬ್ಬದಲ್ಲಿ ಮೃತ ರವಿ ಜೂಜಾಟದಲ್ಲಿ ಹಣವನ್ನು ಗೆದ್ದಿದ್ದು, ಎ1, ಎ2 ಅರೋಪಿಗಳು ಸೋತ ಹಣವನ್ನು ಕೊಡುವಂತೆ ಮೃತ ರವಿಗೆ ಕೇಳಿದ್ದು, ಮೃತ ರವಿ ಹಣ ಕೊಡದಿದ್ದರಿಂದ, ಎ1, ಎ2 ಆರೋಪಿಗಳು ಬಲವಂತವಾಗಿ ರವಿಯಿಂದ ಸ್ವಲ್ಪ ಹಣವನ್ನು ಪಡೆದುಕೊಂಡಿರುತ್ತಾರೆ. ನಂತರದ ದಿನಗಳಲ್ಲಿ ಮೃತ ರವಿ ತನ್ನ ಹಣವನ್ನು ವಾಪಸ್ಸು ಕೊಡುವಂತೆ ಎ1, ಎ2 ಅರೋಪಿಗಳಿಗೆ ಅಗಾಗೆ ಕೇಳುತ್ತಿದ್ದರಿಂದ ಸದರಿ ಅರೋಪಿಗಳು, ದ್ವೇಷ ಸಾಧಿಸಿಕೊಂಡು ಚೌಡೇಶ್ವರಿ ನಗರ, ಹಳ್ಳಿರುಚಿ ಸಸ್ಯಹಾರಿ ಹೋಟೆಲ್ ಮುಂಭಾಗ ಖಾಲಿ ಜಾಗದ ಬಳಿ ಮೃತ ರವಿಯನ್ನು ಕರೆಯಿಸಿಕೊಂಡು, ಗುಂಪು ಕಟ್ಟಿಕೊಂಡು, ಡ್ರ‍್ಯಾಗರ್‌ನಿಂದ ಬಲವಾಗಿ ಹೊಡೆದು, ಸೈಜು ಕಲ್ಲಿನಿಂದ ದೇಹದ ಮೇಲೆ ಇತರೆ ಭಾಗಗಳಿಗೆ ಹೊಡೆದು ಕೊಲೆ ಮಾಡಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಶಿವ ಪ್ರಕಾಶ್ ದೇವರಾಜು, ಐಪಿಎಸ್., ಬೆಂಗಳೂರು ಉತ್ತರ ವಿಭಾಗ ರವರ ಮಾರ್ಗದರ್ಶನದಲ್ಲಿ ಪ್ರವೀಣ್ ಎಂ. ಸಹಾಯಕ ಪೊಲೀಸ್ ಆಯುಕ್ತರು, ಮಲ್ಲೇಶ್ವರಂ ಉಪ-ವಿಭಾಗ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ನಲವಾಗಲು ಮಂಜುನಾಥ್ ಹಾಗೂ ನಂದಿನಿ ಪೊಲೀಸ್ ಠಾಣೆಯ ನೇತೃವದಲ್ಲಿ ಪಿಎಸ್ಐಗಳಾದ ಭೀಮಾಶಂಕರ್ ಗುಮತೆ, ವಿನೋಧ ರಾಥೋಡ್, ಕೃಷ್ಣಪ್ಪ ಮಾಚನಹಳ್ಳಿ, ಚಂದನ್ ಕುಮಾರ್ ಮತ್ತು ಠಾಣೆಯ ಪೊಲೀಸ್ ಸಿಬ್ಬಂದಿಗಳು ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.  

ಕ್ರೈಂ ರಿಪೋರ್ಟ್ಸ್

ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತಾಧಿಗಳು ಮುಗಿ ಬೀಳುತ್ತಿದ್ದಾರೆ. ದರ್ಶನ ಪಡೆದು ಸುಸ್ತಾಗಿ ಬರುವ ಭಕ್ತಾಧಿಗಳು, ಲಡ್ಡು ಕೌಂಟರ್ ಗಳಲ್ಲಿ ಬಹಳ ಹೊತ್ತು ಕಾದು ಲಾಡನ್ನು ಪಡೆಯಬೇಕಾದ ಪರಿಸ್ಥಿತಿಯಿದೆ. ಇದನ್ನು ಬಳಸಿಕೊಂಡು ಹೆಚ್ಚುವರಿ ಬೆಲೆಗೆ ಲಾಡುಗಳನ್ನು ಹೊರಗೆ ಮಾರಾಟ ಮಾಡಲಾಗುತ್ತಿದೆ.

ಲಡ್ಡು ತಯಾರಿಸುವ ಘಟಕದಿಂದ ಟ್ರೇಗಳಲ್ಲಿ ಲಡ್ಡುಗಳನ್ನು ಜೋಡಿಸಿ, ಕನ್ವೇಯರ್ ಬೆಲ್ಟ್ ಮೂಲಕ ಪ್ರಸಾದ ಮಾರಾಟ ಕೌಂಟರ್‌ ಬಳಿ ಸಾಗಿಸಲಾಗುತ್ತದೆ. ಅಲ್ಲಿಂದ ಟ್ರಾಲಿಗಳನ್ನು ಬಳಸಿ ಪ್ರಸಾದ ಕೌಂಟರ್‌ಗಳಿಗೆ ಲಡ್ಡುಗಳನ್ನು ತೆಗೆದುಕೊಂಡು ಹೋಗುತ್ತಾರೆ.

ಈ ಕೆಲಸಕ್ಕೆ ನಿಯೋಜನೆಗೊಂಡಿರುವ ನೌಕರರು, ಮಾರ್ಗ ಮಧ್ಯೆ ಲಡ್ಡುಗಳನ್ನು ಕದ್ದು, ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಗೌಪ್ಯ ಮಾಹಿತಿಯು ದೇವಸ್ತಾನದ ವಿಜಿಲೆನ್ಸ್ ಅಧಿಕಾರಿಗಳಿಗೆ ಲಭಿಸಿತು. ಮಾಹಿತಿ ಮೇರೆಗೆ ದೇವಸ್ಥಾನದ ವಿಜಿಲೆನ್ಸ್ ಅಧಿಕಾರಿಗಳು ಲಡ್ಡು ಸಾಗಾಟದ ಮೇಲೆ ನಿಗಾ ವಹಿಸಿದ್ದರು.

ಆ ವೇಳೆ ದೇವಸ್ಥಾನದ ಐವರು ನೌಕರರು 15 ಟ್ರೇಗಳಲ್ಲಿ ಇಟ್ಟಿದ್ದ 750 ಲಾಡುಗಳನ್ನು ಕದ್ದು, ತೆಗೆದುಕೊಂಡು ಹೋಗುವುದನ್ನು ಕಂಡ ವಿಜಿಲೆನ್ಸ್ ಅಧಿಕಾರಿಗಳು ಅವರನ್ನು ಸುತ್ತುವರಿದು ಹಿಡಿದರು. ಅದಲ್ಲದೇ ಈ ಲಾಡು ಖದೀಮರು ಇದುವರೆಗೂ 35 ಸಾವಿರ ಲಡ್ಡುಗಳನ್ನು ಕದ್ದು ಹೆಚ್ಚುವರಿ ಬೆಲೆಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.

ದೇವಸ್ಥಾನದ 5 ಜನ ನೌಕರರನ್ನು ಬಂಧಿಸಿರುವ ವಿಜಿಲೆನ್ಸ್ ಅಧಿಕಾರಿಗಳು, ಈ ಘಟನೆಯಲ್ಲಿ ಇನ್ನು ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣೆ ಸರಹದ್ದಿನ ಅಕ್ಕಿ ಪೇಟೆ ಮುಖ್ಯ ರಸ್ತೆಯಲ್ಲಿರುವ ಪವನ್ ಪ್ಲಾಜಾ ಕಾಂಪ್ಲೆಕ್ಸ್ ನ ಪಧ್ಮಶ್ರೀ ಫಾರ್ಮ ಅಂಗಡಿಯಲ್ಲಿ, ಯಾವುದೇ ದಾಖಲೆಗಳಿಲ್ಲದೇ ಅಕ್ರಮವಾಗಿ ಹಣ ದಾಸ್ತಾನು ಮಾಡಿಕೊಂಡಿರುವ ಬಗ್ಗೆ ಸಿಸಿಬಿ ವಿಶೇಷ ವಿಚಾರಣಾ ದಳದ ಅಧಿಕಾರಿಗಳು ಖಚಿತವಾದ ಮಾಹಿತಿಯನ್ನು ಸಂಗ್ರಹಿಸಿ, ಪ್ರಸ್ತುತ ಕರ್ನಾಟಕ ವಿಧಾನ ಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮವಾಗಿ ಹಣ ದಾಸ್ತಾನು ಮಾಡಿಕೊಂಡಿರುವ ಸ್ಥಳದ ಮೇಲೆ ದಾಳಿ ಮಾಡಿ, ಅವರನ್ನು ವಶಕ್ಕೆ ಪಡೆಯಲು ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ವಿಶೇಷ ಚುನಾವಣಾ ಅಧಿಕಾರಿಗಳೊಂದಿಗೆ ಸೇರಿ ಜಂಟಿ ಕಾರ್ಯಚರಣೆ ನಡೆಸಿ ಅಕ್ರಮವಾಗಿ ಹಣ ದಾಸ್ತಾನು ಮಾಡಿಕೊಂಡಿದ್ದ ಪಧ್ಮಶ್ರೀ ಫಾರ್ಮ ಮೇಲೆ ದಾಳಿ ಮಾಡಿ ಮೂರು ಜನ ಆಸಾಮಿಗಳನ್ನು ಹಾಗೂ ಅವರ ವಸದಲ್ಲಿದ್ದ ಸುಮಾರು 1 ಕೋಟಿ 90 ಲಕ್ಷ ರೂಗಳ ನಗದು ಹಣವನ್ನು ವಸಪಡಿಸಿಕೊಳ್ಳಲಾಗಿದೆ.

ಇವರುಗಳ ವಿರುದ್ಧ ಕ್ರಮ ಜರುಗಿಸಲು ಸ್ಥಳಕ್ಕೆ ಅದಾಯ ತೆರಿಗೆ ಅಧಿಕಾರಿಗಳನ್ನು ಬರಮಾಡಿಕೊಂಡು ಆಸಾಮಿಗಳನ್ನು ಮತ್ತು ವಸಪಡಿಸಿಕೊಂಡಿದ್ದ ಹಣವನ್ನು ಅವರ ಬಳಿ ನೀಡಿದ್ದು, ಆದಾಯ ತೆರಿಗೆ ಇಲಾಖೆಯಲ್ಲಿ ತನಿಖೆ ಮುಂದುವರಿದಿದೆ. ಈ ಕಾರ್ಯಚರಣೆಯನ್ನು ಬೆಂಗಳೂರು ನಗರ ಸಿಸಿಬಿ ವಿಶೇಷ ವಿಚಾರಣಾ ದಳದ ಅಧಿಕಾರಿ ಮತ್ತು ಸಿಬ್ಬಂಧಿಗಳು ಕೈಗೊಂಡಿರುತ್ತಾರೆ.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಅಂತರಾಷ್ಟ್ರೀಯ, ಅಂತರರಾಜ್ಯ ಹಾಗೂ ಸ್ಥಳೀಯ ಡ್ರಗ್ ಪೆಡ್ಲರ್‌ಗಳ ಜಾಲವನ್ನು ಭೇದಿಸಿ, ಸುಮಾರು 7 ಕೋಟಿ 6 ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ganja

ಬೆಂಗಳೂರು ನಗರ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳವು, ಡ್ರಗ್ ಪೆಡ್ಲರ್‌ಗಳ ವಿರುದ್ಧ ಕಾರ್ಯಚರಣೆಯನ್ನು ಮುಂದುವರಿಸಿ, ಕಳೆದ ಒಂದು ತಿಂಗಳಿನಿಂದ ಸಂಗ್ರಹಿಸಲಾದ ಮಾಹಿತಿಗಳ ಆಧಾರದ ಮೇಲೆ ನೈಜೀರಿಯಾದ ಇಬ್ಬರು, ಐವರಿಕೋಸ್ಟ್ ದೇಶದ ಒಬ್ಬರು, ಕೇರಳದ 12 ಜನ, ಪಶ್ಚಿಮ ಬಂಗಾಳದ ಒಬ್ಬ, ಆಂದ್ರ ಪ್ರದೇಶದ ಒಬ್ಬ ಮತ್ತು ಬೆಂಗಳೂರಿನ ಇಬ್ಬರು ವ್ಯಕ್ತಿಗಳು ಸೇರಿದಂತೆ ಒಟ್ಟು 19 ಜನ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ, ಅಂದಾಜು 7,06,00,000/- ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 6kg Hashish Oil, 51.89kg Ganja, 140grm MDMA Crystal, 236 Ecstasy Pills, 34 LSD strips, 23grm Cocaine, 17 Mobile Phone, 1 Car, 1 Bike ಅನ್ನು ವಸಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

Wilson Garden PS Cr. No.100/2023 u/s 8(c), 20 (ii) (B) 27-A, 29 NDPS Act

ಬಂಧಿತ ಆರೋಪಿಗಳು, ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿ ಮಾಡಿ, ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ, ವಿದ್ಯಾರ್ಥಿಗಳಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುತ್ತಾರೆ.

Ashok Nagar Cr. No.76/2023 u/s 8(c), 22(b)(c), 23, 27-A, 29 NDPS Act

ಬಂಧಿತ ಆರೋಪಿಗಳ ವಿರುದ್ಧ ಬೆಂಗಳೂರಿನ ವಿಲ್ಸನ್ ಗಾರ್ಡನ್, ಬೇಗೂರು, ಅಶೋಕ್ ನಗರ, ಬಾಣಸವಾಡಿ, ಸಿದ್ದಾಪುರ, ಪುಲಿಕೇಶಿನಗರ, ಹೆಣ್ಣೂರು, ಕೆ.ಆರ್.ಪುರ, ಯಲಹಂಕ ಹಾಗೂ ಆರ್.ಟಿ.ನಗರ ಠಾಣೆಗಳಲ್ಲಿ NDPS ಕಾಯ್ದೆ-1985 ರೀತ್ಯಾ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Begur PS Cr. No.84/2023 u/s 8(c) 22(c) NDPS Act

ಈ ಕಾರ್ಯಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಸಿಬ್ಬಂಧಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.

ಕ್ರೈಂ ರಿಪೋರ್ಟ್ಸ್ ದೇಶ

ದೆಹಲಿ: ದೆಹಲಿಯಲ್ಲಿ ಕಳ್ಳನೊಬ್ಬ ಪೊಲೀಸ್ ಕಾನ್‌ಸ್ಟೆಬಲ್‌ ಗೆ 12 ಬಾರಿ ಇರಿದಿರುವ ಘಟನೆ ಸಂಚಲನವನ್ನು ಮೂಡಿಸಿದೆ.

ರಾಜಸ್ಥಾನದ ಸಿಕರ್ ಪ್ರದೇಶದವರಾದ ಶಂಬು ದಯಾಳನಿಗೆ ಒಬ್ಬ ಮಗ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಈತ ದೆಹಲಿಯ ಪೊಲೀಸ್ ಠಾಣೆಯೊಂದರಲ್ಲಿ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು. ಜನವರಿ 4ರಂದು ಆ ಪ್ರದೇಶದ ಕೊಳೆಗೇರಿಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ‘ಅನೀಶ್ ಎಂಬುವನು ತನ್ನ ಪತಿಯ ಫೋನನ್ನು ಕಿತ್ತುಕೊಂಡು ನಮಗೆ ಬೆದರಿಕೆ ಹಾಕಿದ್ದಾನೆ’ ಎಂದು ದೂರ ನೀಡಿದ್ದರು.

ದೂರನ್ನು ಸ್ವೀಕರಿಸಿದ ಪೊಲೀಸ್ ಅಧಿಕಾರಿ, ಕಾನ್ ಸ್ಟೇಬಲ್ ಶಂಬು ದಯಾಳ್ ಅವರನ್ನು ದುರುದಾರ ಮಹಿಳೆಯೊಂದಿಗೆ ಕಳುಹಿಸಿ ಅನೀಶನನ್ನು ಬಂಧಿಸುವಂತೆ ಸೂಚಿಸಿದ್ದರು. ಸಂತ್ರಸ್ತೆಯ ಜೊತೆಗಿದ್ದ ಶಂಬು ದಯಾಳ್ ಸ್ಥಳಕ್ಕೆ ಆಗಮಿಸಿದ್ದು, ಮಹಿಳೆ ಅನೀಶನನ್ನು ಗುರುತಿಸಿದ್ದಾಳೆ. ಪೊಲೀಸ್ ಪೇದೆ ಅನೀಶ್‌ನನ್ನು ಹಿಡಿದು ಬೆದರಿಸಿ ಕದ್ದ ಫೋನನ್ನು ವಶಪಡಿಸಿಕೊಂಡಿದ್ದಾರೆ. ಮತ್ತು ಆತನನ್ನು ಬಂಧಿಸಿ ಪಶ್ಚಿಮ ದೆಹಲಿಯ ಮಾಯಾಪುರಿ ಮಾರುಕಟ್ಟೆಯ ಮೂಲಕ ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಆಗ ಕಳ್ಳ ಅನೀಶ್ ತನ್ನ ಶರ್ಟ್ ನಲ್ಲಿ ಬಚ್ಚಿಟ್ಟಿದ್ದ ಚಾಕುವನ್ನು ತೆಗೆದು ಶಂಬು ದಯಾಳ್ ಗೆ ಇರಿಯಲು ಆರಂಭಿಸಿದ್ದಾನೆ. ಅಲ್ಲಿ ನೆರೆದಿದ್ದ ಜನರ ಮಧ್ಯೆಯೇ ಅನೀಶ್ 12 ಬಾರಿ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಕಾನ್‌ಸ್ಟೆಬಲ್‌ಗೆ ಎದೆ ಮತ್ತು ಹೊಟ್ಟೆಯಲ್ಲಿ ಗಂಭೀರ ಗಾಯಗಳಾಗಿವೆ.

ಈ ವೇಳೆ ಸ್ಥಳದಲ್ಲಿದ್ದ ಮತ್ತೊಬ್ಬ ಪೊಲೀಸ್ ಅನೀಶನನ್ನು ಹಿಡಿದು ಬಂಧಿಸಿದ್ದಾರೆ. ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದ ಶಂಬು ದಯಾಳ್ ಚಿಕಿತ್ಸೆ ಫಲಕಾರಿಯಾಗದೆ ಕಳೆದ ಭಾನುವಾರ ಮೃತಪಟ್ಟಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಕಾನ್ ಸ್ಟೇಬಲ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.