ಉದ್ಯೋಗ Archives » Page 2 of 2 » Dynamic Leader
October 23, 2024
Home Archive by category ಉದ್ಯೋಗ (Page 2)

ಉದ್ಯೋಗ

ಉದ್ಯೋಗ

ಬೆಂಗಳೂರು: ಕರ್ನಾಟಕ ಸರ್ಕಾರವು ನಮ್ಮ ಯುವಕರಿಗೆ ಉದ್ಯೋಗ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಇದೇ ಫೆಬ್ರವರಿ 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಯುವ ಸಮೃದ್ಧಿ’ ಮೆಗಾ ಉದ್ಯೋಗ ಮೇಳವನ್ನು ಆಯೋಜಿಸಿದ್ದು ನಾಡಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಈ ಉದ್ಯೋಗ ಮೇಲಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಹಾಗೂ ಐಟಿ/ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ‘ಯುವ ಸಮೃದ್ಧಿ’ ಮೆಗಾ ಉದ್ಯೋಗ ಮೇಳದ ಕುರಿತು ವಿವರ ಹಂಚಿಕೊಂಡರು.

ಈ ಉದ್ಯೋಗ ಮೇಳದಲ್ಲಿ ರಾಷ್ಟೀಯ, ಅಂತಾರಾಷ್ಟ್ರೀಯ ಮಟ್ಟದ ಸುಮಾರು 500ಕ್ಕೂ ಅಧಿಕ ಕಂಪನಿಗಳು ಭಾಗವಹಿಸುತ್ತಿದ್ದು ಒಂದು ಲಕ್ಷಕ್ಕೂ ಅಧಿಕ ಉದ್ಯೋಗಗಳು ಲಭ್ಯವಿದೆ ಎಂದು ಹೇಳಿದರು.

ಈಗಾಗಲೇ ಆನ್ಲೈನ್ ಮೂಲಕ ರಾಜ್ಯದ 31 ಸಾವಿರಕ್ಕೂ ಅಧಿಕ ಯುವಕರು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ನೋಂದಾಯಿಸಿಕೊಂಡಿದ್ದಾರೆ. ಅವರ ಅನುಕೂಲಕ್ಕಾಗಿ 600ಕ್ಕೂ ಅಧಿಕ ಸ್ಟಾಲ್ ಗಳನ್ನು ಹಾಕಲಾಗಿದ್ದು ವಿವಿಧ ಭಾಗಗಳಿಂದ ಆಗಮಿಸುವ ಯುವಕರಿಗಾಗಿ ಉಚಿತ ಬಸ್ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂಬ ಮಾಹಿತಿಯನ್ನು ಒದಗಿಸಿದರು.

ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಡಿಪ್ಲೊಮೊ, ಐಟಿಐ, ಎಂಜಿನಿಯರಿಂಗ್ ಸೇರಿದಂತೆ ಯಾವುದೇ ವಿದ್ಯಾರ್ಹತೆ ಹೊಂದಿದವರಿಗೂ ಇಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು ನಾಡಿನ ಯುವಜನತೆ ಈ ಉದ್ಯೋಗಮೇಳದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಇದೊಂದು ಅತ್ಯುತ್ತಮ ವೇದಿಕೆಯಾಗಿದೆ ಎಂದು ಹೇಳಿದರು.

ಉದ್ಯೋಗ ರಾಜ್ಯ

ಬೆಂಗಳೂರು: ‘2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ? ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? ನಿಜ ಹೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು?’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.

‘ನರೇಂದ್ರ ಮೋದಿಯವರೇ, ನಿಮ್ಮದೇ ಬಿಜೆಪಿ ಸರ್ಕಾರದ ಸಚಿವ ಸಂಪುಟದ ಜಿತೇಂದರ್ ಸಿಂಗ್ ಅವರು 2022ರ ಜುಲೈ ನಲ್ಲಿ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “2014-15 ಮತ್ತು 2021-22ರ ಅವಧಿಯ ನಡುವೆ ಕೇವಲ 7 ಲಕ್ಷ ಹೊಸ ಉದ್ಯೋಗಗಳು ಮಾತ್ರ ಸೃಷ್ಟಿಯಾಗಿತ್ತು ಎಂದು ಹೇಳಿದ್ದರು. ಅಂತಿಮ ಸತ್ಯ ಇದೇ ಇರಬಹುದಾ?’ ಎಂದು ಕೇಳಿದ್ದಾರೆ.

‘ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಈಗ ತರಾತುರಿಯಿಂದ ಉದ್ಯೋಗ ಮೇಳಗಳನ್ನು ಆಯೋಜಿಸಲು ಕಾರಣ ಯುವಜನರ ಮೇಲಿನ ಕಾಳಜಿಯೇ? ಇಲ್ಲವೇ ಉದ್ಯೋಗ ಇಲ್ಲದೆ ರೊಚ್ಚಿಗೆದ್ದಿರುವ ನಿರುದ್ಯೋಗಿ ಯುವಜನರ ಆಕ್ರೋಶವೇ?

ಪ್ರಧಾನಿಯವರೇ, ಈಗ ನಿಮ್ಮದೇ ಬಿಜೆಪಿ ಸರ್ಕಾರದ ಅಧಿಕೃತ ಅಂಕಿಅಂಶಗಳನ್ನು ಮುಂದಿಟ್ಟುಕೊಂಡು ಮಾತಾಡೋಣ. 2017-18ರ ಎನ್.ಎಸ್.ಎಸ್.ಒ ವರದಿಯ ಪ್ರಕಾರ ಕಳೆದ 45 ವರ್ಷಗಳಲ್ಲೇ ದೇಶದ ನಿರುದ್ಯೋಗ ಪ್ರಮಾಣ ಅತಿ ಗರಿಷ್ಠ ಮಟ್ಟಕ್ಕೆ, ಅಂದರೆ 6.1 ಗೆ ತಲುಪಿದೆ. 2011-12ರಲ್ಲಿ ಈ ಪ್ರಮಾಣ ಶೇ 2.2 ಆಗಿತ್ತು.

ನೆನಪಿರಲಿ, ಕೋವಿಡ್ ಕಾಲದಲ್ಲಿ ನಿರುದ್ಯೋಗದ ಪ್ರಮಾಣ ಜಗತ್ತಿನಾದ್ಯಂತ ಹೆಚ್ಚಾಗಿದ್ದು ನಿಜ. ಆದರೆ ನಮ್ಮಲ್ಲಿ ಇದು 2014-15ರಿಂದಲೇ ಇದು ಪ್ರಾರಂಭವಾಗಿತ್ತು. 2016ರಲ್ಲಿ ನಡೆದ ನೋಟು ಅಮಾನ್ಯೀಕರಣದಿಂದ ಕೈಗಾರಿಕೆಗಳೆಲ್ಲ ಮುಚ್ಚಿಹೋಗಿ ನಿರುದ್ಯೋಗ ಪ್ರಮಾಣ ಮಿತಿ ಮೀರತೊಡಗಿದ್ದನ್ನು ಹಲವಾರು ಆರ್ಥಿಕ ತಜ್ಞರೇ ವಿವರಿಸಿ ಹೇಳಿದ್ದಾರೆ. ಈ ಕಾರಣಕ್ಕಾಗಿಯೇ, 2017-18ರ ಎನ್.ಎಸ್.ಎಸ್.ಒ ಸರ್ವೇಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲು ವಿಳಂಬ ಮಾಡಿತ್ತೇ?

ವಿಶ್ವಬ್ಯಾಂಕ್ 2022ರಲ್ಲಿ ನೀಡಿದ್ದ ವರದಿ ಪ್ರಕಾರ ನಿರುದ್ಯೋಗದ ಪ್ರಮಾಣ ಪಾಕಿಸ್ತಾನದಲ್ಲಿ ಶೇ.11.3ರಷ್ಟಿದ್ದರೆ, ಬಾಂಗ್ಲಾದೇಶದಲ್ಲಿ 12.9 ರಷ್ಟಿತ್ತು. ಭೂತಾನ್ ನಲ್ಲಿ ಶೇ. 14.4 ರಷ್ಟಿದ್ದರೆ, ಚೀನಾದಲ್ಲಿ 13.2 ರಷ್ಟಿತ್ತು. ಆದರೆ, ಅದೇ ಅವಧಿಯಲ್ಲಿ ನಮ್ಮ ಭಾರತದಲ್ಲಿ ನಿರುದ್ಯೋಗ ದರ ಶೇ 23.22 ರಷ್ಟಿತ್ತು. ಇತ್ತೀಚೆಗೆ ಅಂತಾರಾಷ್ಟ್ರೀಯ ಲೇಬರ್ ಆರ್ಗನೈಸೆಷನ್ ಬಿಡುಗಡೆ ಮಾಡಿರುವ ಪಟ್ಟಿ ಪ್ರಕಾರ ನಿರುದ್ಯೋಗದ ಪ್ರಮಾಣದಲ್ಲಿ ನಮ್ಮ ದೇಶ, ನೆರೆಯ ದೇಶಗಳಾದ ಮ್ಯಾನ್ಮರ್, ಬಾಂಗ್ಲಾ, ಮಾರಿಷಸ್ ಗಿಂತಲೂ ಕೆಳಗಿನ ಸ್ಥಾನದಲ್ಲಿರುವುದು ನಿಜವಲ್ಲವೇ ನರೇಂದ್ರ ಮೋದಿ ಅವರೇ?’ ಎಂದು ವ್ಯಂಗ್ಯವಾಡಿದ್ದಾರೆ.

‘ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್‌ ಎಕನಾಮಿ ವರದಿ ಪ್ರಕಾರ ದೇಶದ ನಿರುದ್ಯೋಗ ಪ್ರಮಾಣ 2014ರಲ್ಲಿ 5.44% ಇದ್ದದ್ದು 2023ರ ಅಕ್ಟೋಬರ್‌ನಲ್ಲಿ 10.05% ತಲುಪಿದೆ. ಇನ್ನು ವಯಸ್ಸಿನ ಆಧಾರದಲ್ಲಿ ನೋಡೋದಾದ್ರೆ 20 ರಿಂದ 24ರ ವಯೋಮಾನ – 43.65% ನಿರುದ್ಯೋಗಿಗಳಿದ್ದರೆ; 25 ರಿಂದ 29 ವಯೋಮಾನದವರಲ್ಲಿ -14.33%; 30 ರಿಂದ 34 ವಯೋಮಾನದವರಲ್ಲಿ -2.49% ನಿರುದ್ಯೋಗಿಗಳಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರವೇ ಪ್ರತಿ ಮೂರು ತಿಂಗಳಿಗೊಮ್ಮೆ ಪೀರಿಯಾಡಿಕ್ ಲೇಬರ್ ಫೋರ್ಸ್ ಸರ್ವೇ (ಪಿಎಲ್ಎಫ್ ಎಸ್) ಪ್ರಕಾರ 2019 ರಿಂದ 2022 ರವರೆಗಿನ ಅವಧಿಯಲ್ಲಿ ದೇಶದ ನಿರುದ್ಯೋಗ ಪ್ರಮಾಣ 22.9% ಏರಿಕೆಯಾಗಿದೆ. ಏರಿಕೆಯಾಗಿರುವುದು ಉದ್ಯೋಗಗಳ ಸಂಖ್ಯೆ ಅಲ್ಲ, ಸುಳ್ಳುಗಳ ಸಂಖ್ಯೆ ಅಷ್ಟೆ ಅಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

‘2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ! ಕರ್ನಾಟಕವೊಂದರಲ್ಲೇ 2021ರಲ್ಲಿ 1,129 ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರಿಗೆಲ್ಲಿಯ ರೋಜಗಾರ್ ಮೇಳ ನರೇಂದ್ರ ಮೋದಿ ಅವರೇ?

ಉದ್ಯೋಗ ಅರಸಿ, ದೇಶದಿಂದ ವಿದೇಶಕ್ಕೆ ವಲಸೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಫ್ರಾನ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದ ವಿಮಾನದಲ್ಲಿ 66 ಮಂದಿ ಗುಜರಾತಿಗಳಿದ್ದರು. ತಮ್ಮನ್ನು ಗುಜರಾತಿನಿಂದ ಅಮೆರಿಕಾಗೆ ಅಕ್ರಮವಾಗಿ ಕರೆದೊಯ್ಯಲು ಏಜೆಂಟ್ ಗಳಿಗೆ ತಲಾ 60-80 ಲಕ್ಷ ರೂಪಾಯಿಗಳನ್ನು ನೀಡಿದ್ದರು ಎಂಬ ಅಂಶ ವಿಚಾರಣೆಯಲ್ಲಿ ಬಹಿರಂಗವಾಗಿತ್ತು.

2018 ರಿಂದ 2019ರ ವರೆಗೆ 8,027 ಮಂದಿ, 2019 ರಿಂದ 2020ರ ವರೆಗೆ 19,883 ಮಂದಿ, 2020 ರಿಂದ 2021ರ ವರೆಗೆ 30,662 ಮಂದಿ, 2021 ರಿಂದ 2022ರ ವರೆಗೆ 63,927 ಮಂದಿ ಭಾರತೀಯರು ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ. ಈ ಅಕ್ರಮ ವಲಸಿಗರ ಪೈಕಿ ಬಹುಪಾಲು ಜನರು ಗುಜರಾತ್ ಮತ್ತು ಪಂಜಾಬ್ ರಾಜ್ಯಗಳಿಗೆ ಸೇರಿದವರು ಎಂಬುದು ಗಮನಿಸಬೇಕಾದ ಅಂಶ ಅಲ್ಲವೇ?

ಇದು ಹೊಸ ಉದ್ಯೋಗಗಳ ಸೃಷ್ಟಿಯ ಕಥೆಯಾದರೆ, ಇರುವ ಸರ್ಕಾರಿ ಉದ್ಯೋಗಗಳ ಭರ್ತಿಯಲ್ಲೂ ತೀರಾ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಬಿಜೆಪಿ ಆಡಳಿತದಲ್ಲಿ ವಿವಿಧ ಇಲಾಖೆಯ 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಸಣ್ಣಪುಟ್ಟ ಹುದ್ದೆಗಳಿಗೂ ಸ್ನಾತಕೋತ್ತರ ಪದವೀಧರ, ಬಿಇ, ಎಂಬಿಬಿಎಸ್ ಪದವಿ ಪಡೆದವರು ಅರ್ಜಿ ಸಲ್ಲಿಸುವ ವಿದ್ಯಮಾನ ಇತ್ತೀಚೆಗೆ ಸಾಮಾನ್ಯವಾಗುತ್ತಿದೆ. ದೇಶದ ಯುವಜನರು ನಿರುದ್ಯೋಗದ ದಳ್ಳುರಿಯಲ್ಲಿ ಬೇಯ್ತಾ ಇದ್ದಾರೆ. ಕಳೆದ ವರ್ಷಾಂತ್ಯದಲ್ಲಿ ಸಂಸತ್ತಿನ ಭದ್ರತೆಯನ್ನು ಬೇಧಿಸಿ, ಒಳನುಸುಳಿ ಹೊಗೆಬಾಂಬ್ ಸಿಡಿಸುವ ಮಟ್ಟಿಗೆ ಹತಾಶರಾಗಿದ್ದ ಯುವಕರು ಕೂಡಾ ನಿರುದ್ಯೋಗಕ್ಕೆ ಬಲಿಯಾದವರಲ್ಲವೇ  ನರೇಂದ್ರ ಮೋದಿ ಅವರೇ?

‘ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉದ್ಯೋಗ ಭರ್ತಿಗಾಗಿ ಸರ್ಕಾರಗಳು ನಿರ್ದಿಷ್ಟ ನೇಮಕಾತಿ ಪ್ರಕ್ರಿಯೆ ನಡೆಸುತ್ತವೆ. ಇದಕ್ಕಾಗಿಯೇ ಯುಪಿಎಸ್‌ಸಿ, ಎಸ್ಎಸ್‌ಸಿ, ಲೋಕಸೇವಾ ಆಯೋಗಗಳಗಳಿವೆ. ಹೀಗಿರುವಾಗ ಸಾಕ್ಷಾತ್ ಪ್ರಧಾನಿಯವರೇ ವೀಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳ ವಿತರಿಸುತ್ತಿರುವುದು ಯಾವ ಉದ್ಯೋಗಗಳಿಗೆ? ರೋಜ್ ಗಾರ್ ಮೇಳದಲ್ಲಿ ನೀಡಲಾಗುತ್ತಿರುವ ಉದ್ಯೋಗಗಳು ಯಾವುದು? ಇವುಗಳು ಖಾಯಂ ಉದ್ಯೋಗವೇ?ತಾತ್ಕಾಲಿಕವೇ? ಅರೆಕಾಲಿಕವೇ? ಪೂರ್ಣಕಾಲಿಕವೇ? ಈ ಉದ್ಯೋಗಗಳನ್ನು ನೀಡುವಾಗ ಮೀಸಲಾತಿಯನ್ನು ಅನುಸರಿಸಲಾಗಿದೆಯೇ? ಅರ್ಹತೆಗಷ್ಟೇ ಪ್ರಾಮುಖ್ಯ ನೀಡಲಾಗಿದೆಯೇ? ರಾಜಕೀಯ ಒಲವು-ನಿಲುವುಗಳನ್ನು ಪರಿಗಣಿಸಲಾಗಿತ್ತೇ? ಪ್ರಧಾನಿಗಳೇ ಈ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ’ ಎಂದು ಕಿಡಿಕಾರಿದ್ದಾರೆ.  

ಉದ್ಯೋಗ ವಿದೇಶ

ತಮಿಳುನಾಡಿನಲ್ಲಿ ‘ಸರ್ವ-ಜಾತಿ ಪುರೋಹಿತರು’ ಯೋಜನೆಯಡಿ ಅರ್ಚಕರಾಗಲು ಮೂವರು ಮಹಿಳೆಯರು ಕೋರ್ಸ್ ಪೂರ್ಣಗೊಳಿಸಿದ್ದಾರೆ.

ತಮಿಳುನಾಡು ಸರ್ಕಾರವು ಎಲ್ಲಾ ಸಮುದಾಯಗಳ ಪುರೋಹಿತರಿಗೆ ತರಬೇತಿ ನೀಡುವ ‘ಅರ್ಚಕರ್ ಪಯಿರ್ಚಿ ಪಲ್ಲಿ’ (ಪುರೋಹಿತರ ತರಬೇತಿ ಶಾಲೆಗಳು) ನಡೆಸುತ್ತದೆ. ಇದೇ ಮೊದಲ ಬಾರಿಗೆ ಮಹಿಳೆಯರು ದಾಖಲಾಗಿದ್ದು ಮತ್ತು ಕೋರ್ಸ್ ಪೂರ್ಣಗೊಳಿಸಿದ್ದಾರೆ.

ಇದರ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಮ್ಮ ಎಕ್ಸ್ ಸೈಟ್‌ನಲ್ಲಿ, (ಹಿಂದೆ ಟ್ವಿಟರ್) “ಮಹಿಳೆ ವಿಮಾನವನ್ನು ಚಲಿಸಿದರೂ, ಬಾಹ್ಯಾಕಾಶಕ್ಕೆ ಹೋಗಿ ಬಂದಿದ್ದರೂ, ದೇವಾಲಯದ ಗರ್ಭಗುಡಿಗಳು ಅವರು ಪ್ರವೇಶಿಸಲು ಸಾಧ್ಯವಾಗದ ಸ್ಥಳಗಳಾಗಿದ್ದವು. ಸ್ತ್ರೀ ದೇವತೆಗಳ ದೇವಾಲಯಗಳ ವಿಷಯವೂ ಇದೇ ಆಗಿತ್ತು.

ಆದರೆ, ಇನ್ನು ಮುಂದೆ ಹಾಗಾಗುವುದಿಲ್ಲ! ಎಲ್ಲ ಜಾತಿಯವರೂ ಅರ್ಚಕರಾಗಬಹುದು ಎಂಬ ಪೆರಿಯಾರ್ ಅವರ ಎದೆಗೆ ಚುಚ್ಚಿದ ಮುಳ್ಳನ್ನು ನಮ್ಮ ದ್ರಾವಿಡ ಮಾದರಿಯ ಆಡಳಿತ ತೆಗೆದುಹಾಕಿದಾಗ, ಗರ್ಭಿಣಿಯರೂ ಗರ್ಭಗುಡಿಯೊಳಗೆ…. ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪೋಸ್ಟ್ ಮಾಡಿದ್ದಾರೆ.

ಉದ್ಯೋಗ

ಭಾರತೀಯ ಅಂಚೆ ಇಲಾಖೆಯು 30,041 ಗ್ರಾಮೀಣ ಪೋಸ್ಟಲ್ ಸ್ಟಾಫ್ (GRAMIN DAK SEVAKS -GDS) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಒಂದರಲ್ಲೇ 1,714 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಯಾವುದೇ ಲಿಖಿತ ಪರೀಕ್ಷೆ ಮತ್ತು ಸಂದರ್ಶನವಿಲ್ಲದೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಈ ಹುದ್ದೆಯನ್ನು ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಉದ್ಯೋಗದ ವಿವರಗಳು:
ಉದ್ಯೋಗದ ಹೆಸರು: ಗ್ರಾಮೀಣ ಪೋಸ್ಟಲ್ ಉದ್ಯೋಗಿ (GRAMIN DAK SEVAKS -GDS) Notification No.17-67/2023-GDS.

ಖಾಲಿ ಹುದ್ದೆಗಳು: 1714 (ಕರ್ನಾಟಕ ಮಾತ್ರ) ದೇಶಾದ್ಯಂತ 30,041 ಹುದ್ದೆಗಳು.

ಪಾವತಿ ಮತ್ತು ಭತ್ಯೆ: ಶಾಖೆ ಪೋಸ್ಟ್ ಮಾಸ್ಟರ್ (BPM – Branch Postmaster BPM) – ರೂ.12,000 ರಿಂದ 29,380 ವರೆಗೆ. ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್ / ಅಂಚೆ ಸಿಬ್ಬಂದಿ (ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್ – ABPM / Dak ಸೇವಕ್) – ರೂ.10,000 ರಿಂದ 24,470 ವರೆಗೆ

ಶಿಕ್ಷಣ ಅರ್ಹತೆ: ಕನಿಷ್ಠ 10ನೇ ತರಗತಿ ಅಥವಾ ಅದಕ್ಕೆ ಸಮನಾದ ವ್ಯಾಸಂಗದಲ್ಲಿ ಉತ್ತೀರ್ಣರಾಗಿರಬೇಕು. ಇದರಲ್ಲಿ ಇಂಗ್ಲಿಷ್ ಮತ್ತು ಗಣಿತ ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಸ್ಥಳೀಯ ಭಾಷೆಯ ಜ್ಞಾನವನ್ನು ಹೊಂದಿರಬೇಕು. ಅದೇ ರೀತಿ, ಸೈಕಲ್ ಓಡಿಸಲು ತಿಳಿದಿರುವುದು ಅತ್ಯಗತ್ಯ.

ಇದು ಕೇಂದ್ರ ಸರ್ಕಾರದ ಕೆಲಸವೇ?: ಹೌದು. ಆದಾಗ್ಯೂ, ಈ ಹುದ್ದೆಗಳನ್ನು ಅಂಚೆಯೇತರ ಸೇವಾ ಸಂಸ್ಥೆ (Extra Departmental system in the Department of Posts) ಮೂಲಕ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳ ನೇಮಕಾತಿ ಮತ್ತು ಭತ್ಯೆಗಳನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದರೂ, ಅಂಚೆ ಇಲಾಖೆಯಲ್ಲಿ ಪೂರ್ಣಾವಧಿಯ ನೌಕರರ ವೇತನ ಶ್ರೇಣಿಯು ಇವರಿಗೆ ಅನ್ವಯಿಸುವುದಿಲ್ಲ. (Gramin Dak Sevaks are holders of civil posts but they are outside the regular civil service)

ವಯಸ್ಸಿನ ಮಿತಿ: ಕನಿಷ್ಠ ವಯಸ್ಸು-18 (ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕದೊಳಗೆ ಪೂರ್ಣಗೊಂಡಿರಬೇಕು) ಗರಿಷ್ಠ ವಯಸ್ಸು-40 (ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ ಪೂರ್ಣಗೊಂಡಿರಬೇಕು) ಪರಿಶಿಷ್ಟ ಜಾತಿಗಳು (5 ವರ್ಷಗಳು), ಪರಿಶಿಷ್ಟ ಪಂಗಡಗಳು (5 ವರ್ಷಗಳು) ಮತ್ತು OBC ಗಳು (3 ವರ್ಷಗಳು), ವಿಕಲಚೇತನರಿಗೆ (10 ವರ್ಷಗಳು) ನಿಗದಿತ ವಯಸ್ಸಿನ ಮಿತಿಗಿಂತ ಹೆಚ್ಚಿನ ವಯಸ್ಸಿನ ರಿಯಾಯಿತಿಯನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ: ಎಲ್ಲಾ ವರ್ಗದ ಮಹಿಳೆಯರು, ಪರಿಶಿಷ್ಟ ಜಾತಿಗಳು / ಪರಿಶಿಷ್ಟ ಪಂಗಡಗಳು / ವಿಕಲಚೇತನರು / ಟ್ರಾನ್ಸ್ ವುಮನ್ ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ. ಇತರೆ ವರ್ಗದವರು ಅರ್ಜಿ ಶುಲ್ಕವಾಗಿ ರೂ.100 ಪಾವತಿಸಬೇಕು.

Indian Post Gramin Dak Sevas (GDS) ಅರ್ಜಿ ಸಲ್ಲಿಸುವುದು ಹೇಗೆ?:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆನ್‌ಲೈನ್ ಮೂಲಕ ಮಾತ್ರ ಇರುತ್ತದೆ. ಅಧಿಕೃತ ವೆಬ್‌ಸೈಟ್ indiapostgdsonline.cept.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಮೊದಲು ತಾವು ಅರ್ಜಿ ಸಲ್ಲಿಸಲು ಬಯಸುವ ಪೋಸ್ಟಲ್ ವೃತ್ತವನ್ನು ಆಯ್ಕೆ ಮಾಡಿಕೊಳ್ಳಬೇಕು. ಒಂದಕ್ಕಿಂತ ಹೆಚ್ಚು ವೃತ್ತಗಳಲ್ಲಿ ಖಾಲಿ ಇರುವ ಹುದ್ದೆಗಳಿಗೂ ನೀವು ಅರ್ಜಿ ಸಲ್ಲಿಸಬಹುದು.

ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಲು ಲಿಂಕ್ ಅನ್ನು ಕ್ಲಿಕ್ ಮಾಡಿ.

ಆನ್‌ಲೈನ್ ಅರ್ಜಿ ನಮೂನೆಯಲ್ಲಿ, ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಯ ಪ್ರಮಾಣಪತ್ರ, ಬಣ್ಣದ ಪಾಸ್‌ಪೋರ್ಟ್ ಛಾಯಾಚಿತ್ರ ಮತ್ತು ಇತರ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಕೊನೆಯ ದಿನಾಂಕ 23.08.2023.

ಉದ್ಯೋಗ ಕ್ರೈಂ ರಿಪೋರ್ಟ್ಸ್

DRDOನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, 35 ಜನರಿಂದ 82 ಲಕ್ಷ ರೂಪಾಯಿಗಳನ್ನು ಪಡೆದು, ನಕಲಿ ದಾಖಲೆಗಳನ್ನು ಸೃಷ್ಟಿಸಿ, ವಂಚಿಸಿರುವ DRDO ಉದ್ಯೋಗಿಗಳಾದ 1) ಮಾಲಕೊಂಡಯ್ಯ 2) ಪಿ.ಎಸ್.ನಂಜಮ್ಮ  3) ಸತ್ಯನಾರಾಯಣ, 4) ಡಿ.ಜಿ.ರಾವ್, 5) ಸಲೀಂ 6) ಮಾಲಕೊಂಡಯ್ಯನ ಪತ್ನಿ ರಮಣಮ್ಮ ಮತ್ತು ಇತರರ ವಿರುದ್ದ ಟಿ.ಸಿ.ಪಾಳ್ಯ ಮುಖ್ಯ ರಸ್ತೆಯಲ್ಲಿರುವ ಪಿ ಅಂಡ್ ಟಿ ಕಾಲೋನಿ ನಿವಾಸಿ ಷಣ್ಮುಗಂ ಅವರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

MEG ಸೆಂಟರ್‌ನಲ್ಲಿ ಕೆಲಸ ಮಾಡಿ 2019ರಲ್ಲಿ ನಿವೃತ್ತಿ ಹೊಂದಿರುವ ಷಣ್ಮುಗಂ ಅವರನ್ನು ಕೆಲಸದ ವಿಚಾರದಲ್ಲಿ ಪರಿಚಯ ಮಾಡಿಕೊಂದಿದ್ದ ಮಾಲಕೊಂಡಯ್ಯ, “DRDOನಲ್ಲಿ 1200 ಹುದ್ದೆಗಳಿಗೆ  ಅರ್ಜಿ ಕರೆದಿದ್ದಾರೆ; ಯಾರಾದರು ಅಭ್ಯರ್ಥಿಗಳು (Candidate) ಇದ್ದರೆ ಹೇಳು; ನೇರವಾಗಿ ನೇಮಕಾತಿ (Appointment) ಕೊಡಿಸುತ್ತೇನೆ; ಪ್ರತಿ ವ್ಯಕ್ತಿಗೆ 2 ಲಕ್ಷ ರೂಪಾಯಿ ಆಗುತ್ತೆ ಎಂದು ಹೇಳಿದ್ದಾರೆ. ಇದನ್ನು ನಿಜವೆಂದು ನಂಬಿದ ಷಣ್ಮುಗಂ, ಬೆಂಗಳೂರು ಮತ್ತು ತಮಿಳುನಾಡಿನಿಂದ ಸುಮಾರು 35 ಜನರನ್ನು ಮಾಲಕೊಂಡಯ್ಯ ಅವರಿಗೆ ಹಂತ ಹಂತವಾಗಿ ಪರಿಚಯ ಮಾಡಿಕೊಟ್ಟಿದ್ದಾರೆ. ಮಾಲಕೊಂಡಯ್ಯ ಅವರು, ಸದರಿ 35 ಜನರಿಗೆ ಕೆಲಸ ಕೊಡಿಸುವ ಬರವಸೆ ನೀಡಿ, ಬಣ್ಣದ ಮಾತುಗಳನ್ನು ಹಾಡಿ, ಅವರಿಂದ 82 ಲಕ್ಷ ರೂಪಾಯಿಗಳನ್ನು ಪಡೆದುಕೊಂಡಿದ್ದಾರೆ.

ಹಣಕೊಟ್ಟವರಿಗೆ ಅನುಮಾನ ಬರಬಾರದು ಎಂಬುದಕ್ಕಾಗಿ, DRDOನಲ್ಲಿ ಅಕೌಂಟ್ ಆಫೀಸರ್ ಆಗಿರುವ ಪಿ.ಎಸ್.ನಂಜಮ್ಮ ಅವರನ್ನು ಬಳಸಿಕೊಂಡು, ದಾಖಲೆಗಳನ್ನು ದೃಢೀಕರಿಸಿ ಎಲ್ಲರಿಗೂ ನೀಡುತ್ತಿದ್ದರು. ಕೇಳಿದರೆ, “ಅಪಾಯಿಂಟ್ಮೆಂಟ್ ಎಲ್ಲವೂ ಆನ್‌ಲೈನ್‌ನಲ್ಲಿ ನಡೆಯುತ್ತಿದೆ. ನೀವು ಹಣ ಕೊಟ್ಟಿರುವುದರಿಂದ ನಿಮಗೆ ನೇರವಾಗಿ ಕೆಲಸ ಸಿಗಲಿದೆ. ನೇರವಾಗಿ ಕೆಲಸ ಸಿಗಬೇಕಾದರೆ ಒಳಗಿರುವ ಅಧಿಕಾರಿಗಳು ‘ಇವರು ನನಗೆ ಪರಿಚಯವಿದ್ದಾರೆ; ಇವರ ನಡವಳಿಕೆ ಚನ್ನಾಗಿದೆ’ ಎಂದು ಹೇಳಿ ದಾಖಲೆಯನ್ನು ದೃಢೀಕರಿಸಿ ಕೊಡಬೇಕು. ಆಗ ನಿಮಗೆ ಕೆಲಸ ಸಿಗುತ್ತದೆ” ಎಂದು ಹೇಳಿದ್ದಾರೆ.

ನಂತರ, ದಾಖಲೆಗಳ ಪರಿಶೀಲನೆಯೆಂಬ ಹೊಸ ನಾಟಕವನ್ನು ಶುರು ಮಾಡಿದ್ದಾರೆ. ಅದಕ್ಕಾಗಿ, ನ್ಯೂ ತಿಪ್ಪಸಂದ್ರ ಬಳಿ ಮಾಲಕೊಂಡಯ್ಯ ಅವರ ಸಂಬಂಧಿ ನಾಗೇಂದ್ರ ನಡೆಸುವ ಪಿಜಿಯ ಬಳಿಗೆ ಎಲ್ಲರನ್ನು ಕರೆಸಿಕೊಂಡು, ಅಲ್ಲಿಗೆ ನಕಲಿ DRDO ಅಧಿಕಾರಿಗಳನ್ನು ಕರೆಸಿ, ಇವರೆಲ್ಲರು DRDO ಅಧಿಕಾರಿಗಳೆಂದು ನಂಬಿಸಿ, ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

ನಂತರ ಹಣ ನೀಡಿ, ಕೆಲಸಕ್ಕಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಅನುಮಾನ ಬರಬಾರದು ಎಂಬುದಕ್ಕಾಗಿ, ಮುಂದೆ ನಿಂತು ಹಣ ಪಡೆದುಕೊಟ್ಟ ಷಣ್ಮುಗಂ, ಕಮಲಕಣ್ಣನ್, ಶಂಕರ್, ಗಣೇಶ್, ರಾಮ್ ಪ್ರಸಾದ್ ಮತ್ತು ನಾಗರಾಜ್ ಮುಂತಾದವರನ್ನು DRDO ಕಛೇರಿಯ ಒಳಗೆ ಕರೆಸಿಕೊಂಡು, ಅಲ್ಲಿ ಮಾಲಕೊಂಡಯ್ಯನೊಂದಿಗೆ ಶಾಮೀಲಾಗಿರುವ ಡಿ.ಜಿ.ರಾವ್, ಸಲೀಂ ಮುಂತಾದ ಇನ್ನೂ ಕೆಲವು ಆಫೀಸರ್‌ಗಳೊಂದಿಗೆ ಮಾತನಾಡಿಸಿ ನಂಬಿಸುವ ನಾಟಕ ಮಾಡಿದ್ದಾರೆ.

ಅಧಿಕಾರಿಗಳು ಮಾಲಕೊಂಡಯ್ಯ ಹೇಳಿ ಕೊಟ್ಟಂತೆ ‘ಇನ್ನು ಹತ್ತು ದಿನಗಳಲ್ಲಿ ನಿಮ್ಮ ಕೆಲಸ ಆಗಿ ಬಿಡುತ್ತದೆ’, ‘ಲಿಸ್ಟ್ ಆಗಿದೆ’, ‘ಇನ್ನು ಸಹಿ ಆಗಿಲ್ಲ’ ಎಂದು ಭರವಸೆಯ ಮಾತುಗಳನ್ನು ಹೇಳಿ ಕಳುಹಿಸಿದ್ದಾರೆ. ‘DRDO ಅಧಿಕಾರಿಗಳಿಗೆ ಹಣ ಕೊಟ್ಟಿದ್ದೇನೆ; ಅವರೆಲ್ಲರು ನಮ್ಮ ಕೆಲಸ ಮಾಡಿಕೊಡುತ್ತಾರೆ’ ಎಂದು ದೂರುದಾರ ಷಣ್ಮುಗಂ ಬಳಿ ಮಾಲಕೊಂಡಯ್ಯ ಹೇಳಿಕೊಂಡಿದ್ದಾರೆ.    

ಕೆಲಸ ಕೊಡುವ ವಿಚಾರವನ್ನು ಹೀಗೆ ಎಳೆಯುತ್ತಾ ಹೋಗುವ ಮಾಲಕೊಂಡಯ್ಯ, ಒತ್ತಡ ಹೆಚ್ಚಾದಾಗ ‘ಜಾಬ್ ಲಿಸ್ಟ್’ ಕೊಡಿಸುವ ಕಾರ್ಯವನ್ನು ಮಾಡಿದ್ದಾರೆ. ಹಣ ಕೊಟ್ಟ ಎಲ್ಲರಿಗೂ DRDO ಟೆಕ್ನಿಕಲ್ ಆಫೀಸರ್ ಸತ್ಯನಾರಾಯಣ ಮತ್ತು ಅಕೌಂಟ್ ಆಫೀಸರ್ ಪಿ.ಎಸ್.ನಂಜಮ್ಮ ಮೂಲಕ ನಕಲಿ ಜಾಬ್ ಲಿಸ್ಟ್ ತಯಾರಿಸಿ ಎಲ್ಲರಿಗೂ ಹಂಚಿಕೆ ಮಾಡಿದ್ದಾರೆ.

ಆದರೆ, ಹಣಕೊಟ್ಟವರಿಗೆ ಈ ಜಾಬ್ ಲಿಸ್ಟ್, ದಾಖಲೆ ದೃಢೀಕರಣ ಎಲ್ಲವೂ ನಾಟಕ, ನಮ್ಮಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆ, ಮಾಲಕೊಂಡಯ್ಯ ಕೆಲವರಿಗೆ ಚೆಕ್ ನೀಡಿದ್ದಾರೆ. ಇನ್ನು ಕೆಲವರಿಗೆ ಹಣ ಕೊಡಲು ಸಮಯ ಕೇಳಿ, ಹಣ ಕೊಟ್ಟವರನ್ನು ತಿಂಗಳು ಗಟ್ಟಲೆ ಕಛೇರಿಯ ಬಳಿ ತಿರುಗಾಡುವಂತೆ ಮಾಡಿದ್ದಾರೆ. ಕೊಟ್ಟಿದ್ದ ಚೆಕ್ ಯಾವುದರಲ್ಲೂ ಹಣವಿಲ್ಲ. ಎಲ್ಲವೂ ಬೋನ್ಸ್ ಆಗಿದೆ.

ಮೊಬೈಲಿಗೆ ಕರೆ ಮಾಡಿದರೆ ಪಿಕ್ ಮಾಡುವುದಿಲ್ಲ, ಕಛೇರಿ ಬಳಿಯೂ ಸಿಗುವುದಿಲ್ಲ. ಮನೆ ವಿಳಾಸ ಹುಡುಕಿಕೊಂಡು ಹೋದರೆ, ಮಾಲಕೊಂಡಯ್ಯ ಹೆಂಡತಿ ರಮಣಮ್ಮನನ್ನು ಬಿಟ್ಟು ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ಬಯ್ಯುವಂತೆ ಮತ್ತು ಅಮಾನುಷ್ಯವಾಗಿ ವರ್ತಿಸುವಂತೆ ಮಾಡಿದ್ದಾರೆ. ಇದರಿಂದ ಬೇಸತ್ತ ಷಣ್ಮುಗಂ ತಾಳಲಾರದೆ, ತಿಳಿದವರ ಬಳಿ, ಮಗ-ಮಗಳ ಬಳಿ, ಬಡ್ಡಿಗೆ ಎಂದು ಇದುವರೆಗೆ ಸುಮಾರು 25 ಲಕ್ಷ ರೂಪಾಯಿಗಳನ್ನು ಸಾಲ ಮಾಡಿ ಎಲ್ಲರಿಗೂ ಸ್ವಲ್ಪ ಸ್ವಲ್ಪ ಹಂಚಿದ್ದಾರೆ.

ಈ ರೀತಿ ಕೆಲಸ ಕೊಡಿಸುವುದಾಗಿ ನಂಬಿಸಿ, 35 ಜನರಿಂದ ರೂ.82 ಲಕ್ಷ ಹಣವನ್ನು ಪಡೆದು, ವಂಚನೆ ಮಾಡಿರುವ ಮಾಲಕೊಂಡಯ್ಯ, ಕಾಲ ಕಳೆದಂತೆ ಹಣಕೊಟ್ಟವರ ಬಳಿ “ನನಗೂ ಈ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ… ಎಲ್ಲರ ಹಣ ಷಣ್ಮುಗಂ ಬಳಿ ಇದೆ… ಆತನ ಬಳಿಯೇ ಹಣ ಪಡೆದುಕೊಳ್ಳಿ… ಏನಿದ್ದರೂ ಆತನ ಬಳಿಯೇ ಮಾತನಾಡಿಕೊಳ್ಳಿ… ನನಗೆ ಯಾರೂ ಪೋನ್ ಮಾಡಬೇಡಿ” ಎಂದು ಹೇಳಿ, ಈ ವಿಚಾರದಿಂದ ದೂರ ಸರಿದುಕೊಂಡಿದ್ದಾರೆ.

ಕೇಳಿದರೆ, “ಕೆಲವರಿಗೆ ಹಣ ಕೊಟ್ಟಂತೆ ಬಾಕಿ ಉಳಿದವರಿಗೂ ನೀನೆ ಹಣ ಕೊಡು; ನಿಮ್ಮ ಜಮೀನು ಮಾರಿ ಕೊಡು ಎಂದು ದುರಹಂಕಾರದಿಂದ ಮಾತನಾಡಿದ್ದಾರೆ. “ನಾನು ಯಾವುದೇ ಹಣ ತಿಂದಿಲ್ಲ… ನೀನು ಏನು ಬೇಕಾದರು ಮಾಡಿಕೊ… ನನಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ… ನನಗೆ ಇನ್ನು ಮುಂದೆ ಪೋನ್ ಮಾಡಬೇಡ” ಎಂದು ಹೇಳಿ ಷಣ್ಮುಗಂ ಅವರನ್ನು ಗದರಿಸಿ ಸಂಪರ್ಕವನ್ನು ಕಡಿತ ಮಾಡಿಕೊಂಡಿದ್ದಾರೆ. ಮೋಸಹೋದ ಜನರು ಅನ್ಯ ಮಾರ್ಗವಿಲ್ಲದೆ, ಈಗ ಷಣ್ಮುಗಂ ಅವರಿಗೆ ದಿನನಿತ್ಯ ಪೋನ್ ಮಾಡಿ, ಹಣ ಕೊಡುವಂತೆ ತೊಂದರೆ ನೀಡುತ್ತಿದ್ದಾರೆ.

ಕೆಲಸ ಕೊಡಿಸುವುದಾಗಿ ನಂಬಿಸಿ, ಜನರನ್ನು ಕರೆದುಕೊಂಡು ಬರುವಂತೆ ಮಾಡಿದ ಮಾಲಕೊಂಡಯ್ಯ, ಅವರಿಂದ ಹಣ ಪಡೆದು, ಅವರು ನೀಡುವ ದಾಖಲೆಗಳನ್ನು DRDOನಲ್ಲಿ ಅಕೌಂಟ್ ಆಫೀಸರ್ ಆಗಿ ಕೆಲಸ ಮಾಡುವ ಪಿ.ಎಸ್.ನಂಜಮ್ಮ ಮತ್ತು ಇತರರಿಂದ ದೃಢೀಕರಿಸಿ ಕೊಟ್ಟು, ನಿಮಗೆ ನೇರವಾಗಿ ನೇಮಕಾತಿ ಕೊಡುತ್ತೇನೆಂದು ಎಲ್ಲರನ್ನೂ ನಂಬಿಸಿದ್ದಾರೆ. 28 ಹುಡುಗರನ್ನು ಪಿಜಿಯಲ್ಲಿ ಕೂರಿಸಿ, ದಾಖಲೆಗಳ ಪರಿಶೀಲನೆ ಎಂದು ನಾಟಕವಾಡಿ ನಂತರ, DRDOನಲ್ಲಿ ಟೆಕ್ನಿಕಲ್ ಆಫೀಸರ್ ಆಗಿರುವ ಸತ್ಯನಾರಾಯಣ ಮತ್ತು ಅಕೌಂಟ್ ಆಫೀಸರ್ ಪಿ.ಎಸ್.ನಂಜಮ್ಮ ಜೊತೆ ಸೇರಿಕೋಂಡು Job List ಎಂಬ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಎಲ್ಲರಿಗೂ ಹಂಚಿದ್ದಾರೆ.

ಇವರು ಬರೀ ಷಣ್ಮುಗಂ ಕಡೆಯಿರುವ 35 ಜನರಿಗೆ ಮಾತ್ರ ಏಮಾರಿಸಿಲ್ಲ. ಇವರಿಂದ ಏಮಾರಿದವರು ನೂರಾರು ಜನರಿದ್ದಾರೆ. ಇವರೆಲ್ಲ ನೆಪ ಮಾತ್ರಕ್ಕೆ DRDOನಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಮಾಡುತ್ತಿರುವುದೆಲ್ಲ DRDO ಹೆಸರಿನಲ್ಲಿ ನಕಲಿ ನೇಮಕಾತಿ ದಂಧೆ. ಡಿ ಗ್ರೂಪ್ ನೌಕರನಾದ ಮಾಲಕೊಂಡಯ್ಯನಿಗೆ ಒಳಗಿರುವ ಆಫೀಸರ್‌ಗಳು ಬೆನ್ನೆಲುಬಾಗಿ ನಿಂತು ನಕಲಿ ದಾಖಲೆಗಳನ್ನು ತಯಾರಿಸಿ ಕೊಡುತ್ತಿರುವುದು ಷಣ್ಮುಗಂ ನೀಡಿರುವ ದೂರಿನಿಂದ ಬಹಿರಂಗವಾಗಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆ ಪ್ರಗತಿಯಲ್ಲಿದೆ.         

ಉದ್ಯೋಗ

“ಮನೆಯಿಂದಲೇ ಕೆಲಸ ಮಾಡುವವರು ಕೂಡಲೇ ಕಚೇರಿಗೆ ಮರಳಬೇಕು. ಈ ಪ್ರವೃತ್ತಿಯು ಕೆಲಸದ ಸ್ಥಳದಲ್ಲಿ ವೃತ್ತಿ ಮಾಡುವ ಉದ್ಯೋಗಿಗಳನ್ನು ಅವಮಾನಗೊಳಿಸುತ್ತದೆ” ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಹೇಳಿದ್ದಾರೆ.

ಕೋವಿಡ್ ಹರಡುವಿಕೆಯಿಂದಾಗಿ ಮನೆಯಿಂದಲೇ ಕೆಲಸ ಮಾಡುವ ಅಭ್ಯಾಸವು ಬಹಳ ಜನಪ್ರಿಯವಾಯಿತು. ಈಗ ಅನೇಕ ಕಂಪನಿಗಳು ಈಗ ತಮ್ಮ ಉದ್ಯೋಗಿಗಳನ್ನು ಕೆಲಸ ಮಾಡಲು ಕಚೇರಿಗೆ ಹಿಂತಿರುಗುವಂತೆ ಕೇಳುತ್ತಿವೆ. ಟೆಸ್ಲಾ ಉದ್ಯೋಗಿಗಳು ಕಡ್ಡಾಯವಾಗಿ ಕಚೇರಿಗೆ ಮರಳಲುವಂತೆ ಕಳೆದ ಬೇಸಿಗೆಯಲ್ಲೇ ಮಸ್ಕ್ ಅವರು ತಮ್ಮ ಉದ್ಯೋಗಿಗಳಿಗೆ ಎಚ್ಚರಿಕೆಯನ್ನು ನೀಡಿದ್ದರು. ನೌಕರರು ವಾರದಲ್ಲಿ ಕನಿಷ್ಠ 40 ಗಂಟೆಗಳ ಕಾಲ ಕಚೇರಿಯಲ್ಲಿ ಕಳೆಯಬೇಕು ಎಂದು ಆದೇಶಿಸಿದ್ದರು.

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು ಟೆಸ್ಲಾ ಸಿಇಒ ಎಲಾನ್ ಮಸ್ಕ್ CNBC ದೂರದರ್ಶನಕ್ಕೆ ನೀಡಿದ ಸಂದರ್ಶನದಲ್ಲಿ, “ಲ್ಯಾಪ್‌ಟಾಪ್‌ನೊಂದಿಗೆ ಮನೆಯಿಂದಲೇ ಕೆಲಸ ಮಾಡುವುದರಿಂದ ಉತ್ಪಾದಕತೆ ಕಡಿಮೆಯಾಗುತ್ತದೆ. ಮತ್ತು ಆಯ್ಕೆ ಮಾಡಲು ಅವಕಾಶವಿಲ್ಲದ ಕೆಲಸಗಾರರು ಇತರ ಉದ್ಯೋಗಿಗಳಿಗೆ ತಪ್ಪು ಸಂಕೇತವನ್ನು ಕಳುಹಿಸುತ್ತದೆ.

ಜನರು ಕಾರುಗಳನ್ನು ಉತ್ಪಾದಿಸುತ್ತಾರೆ. ಕಾರನ್ನು ಸರ್ವೀಸ್ ಮಾಡುತ್ತಾರೆ. ಮನೆಗಳನ್ನು ಕಟ್ಟುತ್ತಾರೆ. ಹಳೆಯ ಮನೆಯನ್ನು ನವೀಕರಿಸುತ್ತಾರೆ. ಅಡುಗೆ ಮಾಡುತ್ತಾರೆ. ಜನರು ತಮಗೆ ಬೇಕಾದ ಎಲ್ಲವನ್ನೂ ತಯಾರಿಸಿಕೊಳ್ಳುತ್ತಾರೆ. ಅವರೆಲ್ಲ ಕೆಲಸಕ್ಕೆ ಹೋಗಬೇಕು. ನೀವು ಹೋಗಬೇಕಾಗಿಲ್ಲ ಎಂದು ಭಾವಿಸುವುದು ಗೊಂದಲವನ್ನು ಸೃಷ್ಟಿಸುತ್ತದೆ. ಲ್ಯಾಪ್‌ಟಾಪ್ ತರಗತಿ ಎಂದರೆ ಹುಚ್ಚು ಪ್ರಪಂಚದಲ್ಲಿ ಬದುಕಿದಂತೆ ಎಂದು ಅವರು ಹೇಳಿದ್ದಾರೆ.

ಉದ್ಯೋಗ

ಕೆಲಸದ ವಿವರ:
1) ತಾಂತ್ರಿಕ ಅಧಿಕಾರಿ/ಸಿ: (Technical Officer/C:) 181 ಪೋಸ್ಟ್‌ಗಳು. ವೇತನ: ರೂ.56,000. ವಯಸ್ಸು: 18 ರಿಂದ 35 ರ ನಡುವೆ. ಅರ್ಹತೆ: ಯಾವುದೇ ವಿಜ್ಞಾನ ವಿಭಾಗದಲ್ಲಿ M.Sc ಅಥವಾ B.E./B.Tech.

2) ಸೈಂಟಿಫಿಕ್ ಅಸಿಸ್ಟೆಂಟ್/ಬಿ: (Scientific Assistant/B:) 7 ಸೀಟುಗಳು. ವೇತನ: ರೂ.35,400. ವಯಸ್ಸು: 18 ರಿಂದ 30 ರ ನಡುವೆ. ವಿದ್ಯಾರ್ಹತೆ: ಸಂಬಂಧಿತ ವಿಷಯದಲ್ಲಿ B.Sc,

3) ತಂತ್ರಜ್ಞ/ಬಿ: (Technician/B:) 24 ಸೀಟುಗಳು. ವೇತನ: 21,700 ರೂ. ವಯಸ್ಸು: 18 ರಿಂದ 25 ರ ನಡುವೆ. ಅರ್ಹತೆ: ಬಾಯ್ಲರ್ ಅಟೆಂಡೆಂಟ್ ಪ್ರಮಾಣ ಪತ್ರದೊಂದಿಗೆ 10 ನೇ ತರಗತಿ ಪಾಸ್.

4) ಸ್ಟೈಪೆಂಡಿಯರಿ ಟ್ರೈನಿ (ವರ್ಗ-I): (Stipendiary Trainee (Category-I):) 1216 ಸೀಟುಗಳು. ವೇತನ: ರೂ.24,000-26,000. ವಯಸ್ಸು: 19 ರಿಂದ 24 ರ ನಡುವೆ. ವಿದ್ಯಾರ್ಹತೆ: ವಿಜ್ಞಾನದಲ್ಲಿ ಬಿಎಸ್ಸಿ ಮತ್ತು ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ.

5) ಸ್ಟೈಪೆಂಡಿಯರಿ ಟ್ರೈನಿ (ವರ್ಗ-II): (Stipendiary Trainee (Category-II):) 2946 ಸೀಟುಗಳು. ವೇತನ: ರೂ.20,000-22,000. ವಯಸ್ಸು: 18 ರಿಂದ 22 ರ ನಡುವೆ. ಅರ್ಹತೆ: ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಜೊತೆಗೆ 10 ನೇ ತರಗತಿ ಪಾಸ್. ಪ್ಲಾಂಟ್ ಆಪರೇಟರ್ / ಲ್ಯಾಬ್ ಟೆಕ್ನಿಷಿಯನ್ / ಡೆಂಟಲ್ ಟೆಕ್ನಿಷಿಯನ್ ಹುದ್ದೆಗಳಿಗೆ ಗಣಿತದಲ್ಲಿ ಪ್ಲಸ್ 2 ತೇರ್ಗಡೆಯಾಗಿರಬೇಕು.

ಅರ್ಜಿ ಶುಲ್ಕ: ಟೆಕ್ನಿಕಲ್ ಆಫೀಸರ್ ಹುದ್ದೆಗೆ ರೂ.500, ಸೈಂಟಿಫಿಕ್ ಅಸಿಸ್ಟೆಂಟ್‌ಗೆ ರೂ.150/-, ಟೆಕ್ನಿಷಿಯನ್/ಬಿ ಹುದ್ದೆಗೆ ರೂ.100/-, ಸ್ಟೈಪೆಂಡಿಯರಿ ಟ್ರೈನಿ (ಪ್ರವರ್ಗ-1) ಹುದ್ದೆಗೆ ರೂ.150/-, ಸ್ಟೈಪೆಂಡಿಯರಿ ಟ್ರೇನಿ (ವರ್ಗ- 2) ಪೋಸ್ಟ್ ರೂ.100/-. ಇದನ್ನು ಆನ್‌ಲೈನ್‌ನಲ್ಲಿ ಪಾವತಿಸಬೇಕು. SC/ST/PWD/ಮಹಿಳೆಯರಿಗೆ ಯಾವುದೇ ಶುಲ್ಕವಿಲ್ಲ.

ಆನ್‌ಲೈನ್ ಲಿಖಿತ ಪರೀಕ್ಷೆ, ಸಾಮರ್ಥ್ಯ ಪರೀಕ್ಷೆ ಮತ್ತು ನೇರ ಸಂದರ್ಶನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಕೆಲಸಕ್ಕೆ ಆಯ್ಕೆ ಮಾಡಲಾಗುತ್ತದೆ. ಇಲಾಖೆವಾರು ಹುದ್ದೆಗಳನ್ನು ವೆಬ್‌ಸೈಟ್‌ನಲ್ಲಿ ಕಾಣಬಹುದು. www.barconlineexam.com ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22.05.2023.

ಉದ್ಯೋಗ

ಕೆಲಸದ ವಿವರ:

1) Junior Engineer (Civil).
ಜೂನಿಯರ್ ಇಂಜಿನಿಯರ್ (ಸಿವಿಲ್). 13 ಸ್ಥಾನಗಳು (ಸಾಮಾನ್ಯ-6, OBC-4, SC-1, ST-1, ಆರ್ಥಿಕವಾಗಿ ಹಿಂದುಳಿದ-1). ವಯಸ್ಸು: 18 ರಿಂದ 27 ರ ನಡುವೆ. ವೇತನ: ರೂ.35,400 – 1,12,400.

2) Junior Accounts Officer:
ಜೂನಿಯರ್ ಅಕೌಂಟ್ಸ್ ಆಫೀಸರ್: 1 ಪೋಸ್ಟ್ (ಸಾಮಾನ್ಯ). ವಯಸ್ಸು: 21 ರಿಂದ 30 ರ ನಡುವೆ. ವೇತನ: ರೂ.35,400 – 1,12,400.

3) Draftsman Grade III:
ಡ್ರಾಫ್ಟ್ಸ್‌ಮನ್ ಗ್ರೇಡ್ III: 6 ಸೀಟುಗಳು (ಸಾಮಾನ್ಯ-2, OBC-1, SC-1, ST-1, ಆರ್ಥಿಕವಾಗಿ ಹಿಂದುಳಿದ-1). ವಯಸ್ಸು: 18 ರಿಂದ 27 ರ ನಡುವೆ. ವೇತನ: ರೂ.25,500-81,100.

4) Upper Division Clerk:
ಅಪ್ಪರ್ ಡಿವಿಷನ್ ಕ್ಲರ್ಕ್: 7 ಹುದ್ದೆಗಳು (ಸಾಮಾನ್ಯ-4, OBC-2, SC-1). ವಯಸ್ಸು: 18 ರಿಂದ 27 ರ ನಡುವೆ. ವೇತನ: ರೂ.25,500-81,100.

5) Stenographer Grade II:
ಸ್ಟೆನೋಗ್ರಾಫರ್ ಗ್ರೇಡ್ II: 9 ಹುದ್ದೆಗಳು (ಸಾಮಾನ್ಯ-2, OBC-3, SC-2, ಆರ್ಥಿಕವಾಗಿ ಹಿಂದುಳಿದ-2) ವಯಸ್ಸು: 18 ರಿಂದ 27 ರ ನಡುವೆ. ವೇತನ: ರೂ.25,500-81,100.

6) Lower Division Clerk:
ಲೋವರ್ ಡಿವಿಷನ್ ಕ್ಲರ್ಕ್: 4 ಹುದ್ದೆಗಳು (ಸಾಮಾನ್ಯ-1, SC-1, ಆರ್ಥಿಕವಾಗಿ ಹಿಂದುಳಿದ-1, ಅಂಗವಿಕಲರು-1). ವಯಸ್ಸು: 18 ರಿಂದ 27 ರ ನಡುವೆ. ವೇತನ: ರೂ.19,900-63,200. ಮೀಸಲಾತಿ ವರ್ಗಕ್ಕೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ, ಪರೀಕ್ಷಾ ವಿಧಾನ, ಶುಲ್ಕ, ಆನ್‌ಲೈನಲ್ಲಿ ಅರ್ಜಿ ಸಲ್ಲಿಸುವ ವಿಧಾನದಂತಹ ವಿವರಗಳಿಗಾಗಿ www.nwda.gov.in ಗೆ ಭೇಟಿ ನೀಡಿ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18.4.2023.