ರಾಜಕೀಯ Archives » Page 10 of 47 » Dynamic Leader
October 23, 2024
Home Archive by category ರಾಜಕೀಯ (Page 10)

ರಾಜಕೀಯ

ರಾಜಕೀಯ

ನವದೆಹಲಿ: “ಬಿಜೆಪಿ ಗೆದ್ದರೆ ಮಮತಾ ಬ್ಯಾನರ್ಜಿ, ಸ್ಟಾಲಿನ್, ಉದ್ಧವ್ ಠಾಕ್ರೆ, ಪಿಣರಾಯಿ ವಿಜಯನ್ ಸೇರಿದಂತೆ ಎಲ್ಲ ವಿಪಕ್ಷ ನಾಯಕರೂ ಜೈಲು ಪಾಲಾಗಲಿದ್ದಾರೆ” ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಆರೋಪಿಸಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ, ಜೈಲಿನಿಂದ ಬಿಡುಗಡೆಗೊಂಡ ಕೇಜ್ರಿವಾಲ್ ಇಂದು (ಮೇ 11) ದೆಹಲಿಯ ಕನ್ನಾಟ್ ಪ್ರದೇಶದ ಹನುಮಾನ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದರು.

ಇದಾದ ಬಳಿಕ ಸುದ್ದಿಗಾರರನ್ನು ಭೇಟಿ ಮಾಡಿದ ಕೇಜ್ರಿವಾಲ್, “ನಾನು ನೇರವಾಗಿ ಸೆರೆಮನೆಯಿಂದ ನಿಮ್ಮ ಬಳಿಗೆ ಬಂದಿದ್ದೇನೆ. 50 ದಿನಗಳ ನಂತರ ನಿಮ್ಮೊಂದಿಗೆ ಇರುವುದು ಸಂತೋಷವಾಗಿದೆ. ಸ್ವಲ್ಪ ಸಮಯದ ಹಿಂದೆ ನಾನು, ನನ್ನ ಪತ್ನಿ ಮತ್ತು ಪಂಜಾಬ್ ಮುಖ್ಯಮಂತ್ರಿಯೊಂದಿಗೆ ಹನುಮಾನ್ ದೇವಸ್ಥಾನಕ್ಕೆ ಹೋಗಿದ್ದೆ. ಪಕ್ಷಕ್ಕೆ ಮತ್ತು ನಮಗೆ ಹನುಮಂತನ ಆಶೀರ್ವಾದವಿದೆ. ಅವರ ಕೃಪೆಯಿಂದ ನಾನು ನಿಮ್ಮ ಮುಂದೆ ಇದ್ದೇನೆ.

ಆಮ್ ಆದ್ಮಿ ಪಕ್ಷ ಎರಡು ರಾಜ್ಯಗಳಲ್ಲಿ ಆಡಳಿತ ನಡೆಸಬಲ್ಲ ಚಿಕ್ಕ ಪಕ್ಷವಾಗಿದೆ. ಆದರೆ ಪ್ರಧಾನಿಯವರು ನಮ್ಮ ಪಕ್ಷವನ್ನು ನಾಶಮಾಡುವ ಯಾವ ಅವಕಾಶವನ್ನೂ ಕಳೆದುಕೊಂಡಿಲ್ಲ. ನಮ್ಮ ನಾಲ್ವರು ನಾಯಕರನ್ನು ಸತತವಾಗಿ ಜೈಲಿಗೆ ಕಳುಹಿಸಿದ್ದಾರೆ. ದೊಡ್ಡ ಪಕ್ಷದ ನಾಲ್ವರು ಹಿರಿಯ ನಾಯಕರು ಜೈಲಿಗೆ ಹೋದರೆ ಆ ಪಕ್ಷವು ನಾಶವಾಗಿಬಿಡುತ್ತದೆ. ಪ್ರಧಾನಿ ನಮ್ಮನ್ನು ನಾಶಮಾಡಲು ಬಯಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷ ದೇಶಕ್ಕೆ ಉತ್ತಮ ಭವಿಷ್ಯ ನೀಡಲಿದೆ ಎಂದು ಅವರು ನಂಬಿದ್ದಾರೆ.

ಕಳೆದ 75 ವರ್ಷಗಳಲ್ಲಿ ಯಾವ ಪಕ್ಷವೂ ನಮ್ಮಂತಹ ಶೋಷಣೆಯನ್ನು ಎದುರಿಸಿಲ್ಲ. ಭ್ರಷ್ಟಾಚಾರದ ವಿರುದ್ಧ ಹೋರಾಡುವುದಾಗಿ ಪ್ರಧಾನಿ ಹೇಳುತ್ತಿದ್ದಾರೆ. ಆದರೆ ಕಳ್ಳರೆಲ್ಲರೂ ಅವರ ಪಕ್ಷದಲ್ಲೇ ಇದ್ದಾರೆ. ಬಿಜೆಪಿ ಗೆದ್ದರೆ ಮಮತಾ ಬ್ಯಾನರ್ಜಿ, ಸ್ಟಾಲಿನ್, ಉದ್ಧವ್ ಠಾಕ್ರೆ, ಪಿಣರಾಯಿ ವಿಜಯನ್ ಸೇರಿದಂತೆ ಎಲ್ಲ ಪ್ರತಿಪಕ್ಷ ನಾಯಕರೂ ಜೈಲು ಪಾಲಾಗಲಿದ್ದಾರೆ.

ಪ್ರಧಾನಿಯವರು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಬಯಸಿದರೆ, ಅವರು ನನ್ನಿಂದ ಪಾಠ ತೆಗೆದುಕೊಳ್ಳಬೇಕು. ದೆಹಲಿಯಲ್ಲಿ ಸರ್ಕಾರವನ್ನು ಸ್ಥಾಪಿಸಿದ ನಂತರ, ನಾನು ನನ್ನ ಮಂತ್ರಿಗಳಲ್ಲಿ ಒಬ್ಬರನ್ನು ಜೈಲಿಗೆ ಕಳುಹಿಸಿದೆ. ಪಂಜಾಬ್‌ನಲ್ಲಿ ಒಬ್ಬ ಸಚಿವರನ್ನು ಜೈಲಿಗೆ ಕಳುಹಿಸಿಕೊಡಲಾಯಿತು.

ಇದು ಭ್ರಷ್ಟಾಚಾರದ ವಿರುದ್ಧದ ಹೋರಾಟವಲ್ಲ; ನನ್ನನ್ನು ಬಂಧಿಸುವ ಮೂಲಕ ಒಂದು ಸಂದೇಶವನ್ನು ರವಾಣಿಸುತ್ತಿದ್ದಾರೆ. ನನ್ನನ್ನು ಬಂಧಿಸುವ ಮೂಲಕ ಯಾವುದೇ ನಾಯಕನನ್ನು ಬಂಧಿಸಬಹುದು ಎನ್ನುತ್ತಾರೆ. ಅವರ ಈ ಹೋರಾಟಕ್ಕೆ ‘ಒಂದು ದೇಶ, ಒಂದು ನಾಯಕ’ ಎಂದು ಹೆಸರಿಸಿದ್ದಾರೆ” ಎಂದು ಅವರು ಹೇಳಿದರು.

ರಾಜಕೀಯ

ಡಿ.ಸಿ.ಪ್ರಕಾಶ್

ಇಸ್ಲಾಂ ವಿರೋಧದ ನಂತರ ಬಿಜೆಪಿ ವರ್ಣ ಆಧಾರಿತ ರಾಜಕಾರಣವನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡಿದೆ!

ಮುಸ್ಲಿಮರು ಮತ್ತು ಅಲ್ಪಸಂಖ್ಯಾತರನ್ನು ದಮನ ಮಾಡಿ, ವಿಭಜನೆಯನ್ನು ಸೃಷ್ಟಿಸಿ ಆ ಮೂಲಕ ಬಹುಸಂಖ್ಯಾತ ಸಮುದಾಯದ ಮತಗಳನ್ನು ಸೆಳೆಯುವುದು ಆರ್.ಎಸ್.ಎಸ್ ಸಿದ್ಧಾಂತದ ಬಿಜೆಪಿಯ ಉದ್ದೇಶವಾಗಿದೆ. ಹೀಗಾಗಿ ಜಾತಿ ತಾರತಮ್ಯ ಮತ್ತು ಧರ್ಮದ ಆಧಾರದ ಮೇಲೆ ತಾರತಮ್ಯದ ಬಗ್ಗೆ ಮಾತನಾಡುವುದು ಬಿಜೆಪಿಯ ಮೂಲ ರಚನೆಯಾಗಿದೆ.

ಆದರೂ ಇಂತಹ ಚಟುವಟಿಕೆಗಳು ಇಲ್ಲಿಯವರೆಗೆ ಗುಟ್ಟಾಗಿ ನಡೆಯುತ್ತಿದ್ದವು. ಆದರೆ ತನ್ನ 10 ವರ್ಷಗಳ ಆಡಳಿತದಲ್ಲಿ ಹಲವು ವೈಫಲ್ಯಗಳನ್ನು ಕಂಡ ಮೋದಿ ಸರಕಾರ, ಈ ಬಾರಿ ಖಂಡಿತವಾಗಿಯೂ ಸೋಲಲಿದೆ ಎಂದು ಅರಿವಾಗಿ, ನಿರಂತರ ದ್ವೇಷ ಅಭಿಯಾನಗಳನ್ನು ಮುನ್ನಡೆಸುತ್ತಿದೆ. ಈ ನಿಟ್ಟಿನಲ್ಲಿ, ಮೋದಿ ಈಗ ಮುಸ್ಲಿಮರನ್ನು ಹಿಂದಿನ ವರ್ಷಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಹಿರಂಗವಾಗಿ ಟೀಕಿಸುತ್ತಿದ್ದಾರೆ.

ಬಿಜೆಪಿ ನಾಯಕರು, ಮುಸ್ಲಿಮರು ಎಂದರೇ ಶತ್ರುಗಳು ಎಂಬಂತಹ ವರ್ತನೆಯನ್ನು ಬಿತ್ತುತ್ತಿದ್ದಾರೆ. ಇದರಿಂದಾಗಿ ಮುಸ್ಲಿಮರ ಅಸ್ತಿತ್ವವೇ ಪ್ರಶ್ನಾರ್ಹವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿಯವರು, ಮುಸ್ಲಿಮರ ಮೇಲೆ ದ್ವೇಷ ಸಾಧಿಸಿದರೆ ಸಾಕಾಗದು, ಜನಾಂಗೀಯ ದ್ವೇಷವನ್ನು ಬಿತ್ತಿದರೆ ಮಾತ್ರ ಮತಗಳು ಹೆಚ್ಚಾಗುತ್ತವೆ ಎಂದು ಭಾವಿಸಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

ಇತ್ತೀಚೆಗಷ್ಟೇ ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಮೋದಿ ಅವರು, ‘ಕಾಂಗ್ರೆಸ್ ಪಕ್ಷವು, ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಬಣ್ಣದ ಕಾರಣಕ್ಕಾಗಿಯೇ ಮತ ಹಾಕಲಿಲ್ಲ’ ಎಂಬ ಹೊಸ ಸುಳ್ಳನ್ನು ಉಗುಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ, ‘ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಸೂಚಿಸಿದಂತೆಯೇ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಕೂಡ ಮತ್ತೊಂದು ಅಭ್ಯರ್ಥಿಯನ್ನು ಕಣಕ್ಕಿಳಿಸಿ ಬೆಂಬಲಿಸಿದವು, ಅದಕ್ಕೂ ಬಣ್ಣಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ, ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಏಕೆ ಆಹ್ವಾನಿಸಲಿಲ್ಲ? ಅವರ ಬಣ್ಣದ ಕಾರಣದಿಂದಲೇ ಎಂಬ ಪ್ರಶ್ನೆಗಳು ಮೋದಿಯತ್ತ ಹರಿದಾಡುತ್ತಿವೆ. ಇಂತಹ ಪ್ರಕ್ರಿಯೆಗಳು ನಡೆಯುತ್ತಿದ್ದರೂ ಚುನಾವಣಾ ಆಯೋಗ ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಿರುವುದು ಟೀಕೆಗೆ ಗುರಿಯಾಗಿದೆ.

ರಾಜಕೀಯ

ಬಿಜೆಪಿಯ ಸೋಲು ಅನಿವಾರ್ಯ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ದೃಢವಾಗಿ ಹೇಳಿದ್ದಾರೆ.!

18ನೇ ಲೋಕಸಭೆ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು, ಮೊದಲ 3 ಹಂತದ ಚುನಾವಣೆ ಪೂರ್ಣಗೊಂಡಿದೆ. ಈ ಲೋಕಸಭೆ ಚುನಾವಣೆಯಲ್ಲಿ 10 ವರ್ಷಗಳ ಫ್ಯಾಸಿಸ್ಟ್ ಬಿಜೆಪಿ ಆಡಳಿತವನ್ನು ಕಿತ್ತೊಗೆಯುವ ಏಕೈಕ ಉದ್ದೇಶದೊಂದಿಗೆ ವಿರೋಧ ಪಕ್ಷಗಳು ಒಗ್ಗೂಡಿ ಇಂಡಿಯಾ ಮೈತ್ರಿಕೂಟವನ್ನು ರಚಿಸಿಕೊಂಡು ಚುನಾವಣೆಯನ್ನು ಎದುರಿಸುತ್ತಿದೆ.

ಇಂಡಿಯಾ ಮೈತ್ರಿಕೂಟ ರಚನೆಯಾದಂದಿನಿಂದ ಬಿಜೆಪಿಯ ಸೋಲು ಆರಂಭವಾಗಿದೆ. ಇದೀಗ ಪೂರ್ಣಗೊಂಡಿರುವ ಮೂರು ಹಂತದ ಚುನಾವಣಾ ಸಮೀಕ್ಷೆಗಳು ಬಿಜೆಪಿಯ ಸೋಲನ್ನು ಖಚಿತಪಡಿಸಿವೆ ಎಂದು ಇಂಡಿಯಾ ಮೈತ್ರಿಕೂಟದ ನಾಯಕರು ಹೇಳುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ, ಬಿಜೆಪಿ ಸೋಲು ಅನಿವಾರ್ಯ ಎಂದಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಅದಕ್ಕಾದ ಕಾರಣಗಳನ್ನು ಪಟ್ಟಿ ಮಾಡಿ ತಮ್ಮ ‘ಎಕ್ಸ್’ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟಿಸಿದ್ದಾರೆ. ಅದರಲ್ಲಿ ಹಣದುಬ್ಬರ, ನಿರುದ್ಯೋಗ ಮತ್ತು ಭ್ರಷ್ಟಾಚಾರದಿಂದಾಗಿ ಬಿಜೆಪಿ ಜನಬೆಂಬಲವನ್ನು ಕಳೆದುಕೊಂಡಿದೆ. ಸಾಮಾಜಿಕ ನ್ಯಾಯದ ವಿರುದ್ಧ ನಿರಂತರವಾಗಿ ಮಾತನಾಡುತ್ತಿರುವುದರಿಂದ ಬಿಜೆಪಿ ಪರಿಶಿಷ್ಟ ಜಾತಿ/ಪಂಗಡಗಳು, ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ವರ್ಗದ ತನ್ನದೇ ಪಕ್ಷದ ಕಾರ್ಯಕರ್ತರ ಬೆಂಬಲವನ್ನು ಕಳೆದುಕೊಂಡಿದೆ.

ರೈತರ ಕಲ್ಯಾಣಕ್ಕೆ ವಿರುದ್ಧವಾದ ಕೃಷಿ ಕಾನೂನುಗಳನ್ನು ಜಾರಿಗೆ ತಂದ ನಂತರ ಬಿಜೆಪಿ ರೈತರ ಬೆಂಬಲವನ್ನು ಕಳೆದುಕೊಂಡಿದೆ. ಇರುವ ವೃತ್ತಿಗಳನ್ನು ಹಾಳು ಮಾಡಿ ಭವಿಷ್ಯವನ್ನು ಪ್ರಶ್ನಿಸುತ್ತಿರುವ ಬಿಜೆಪಿ, ಯುವಕರ ಬೆಂಬಲ ಕಳೆದುಕೊಂಡಿದೆ.

ಮಹಿಳೆಯರಿಗೆ ಆಗುತ್ತಿರುವ ಅನ್ಯಾಯದಿಂದ ಬಿಜೆಪಿ ಮಹಿಳೆಯರ ಬೆಂಬಲ ಕಳೆದುಕೊಂಡಿದೆ. ಸ್ಪರ್ದೆಯಲ್ಲಿ ಸೋಲಲು ಹೊರಟಿರುವ ಕುದುರೆಗೆ ನಾವೇಕೆ ಉಣಬಡಿಸಬೇಕು ಎಂದಿರುವ ಉದ್ಯಮಿಗಳ ಬೆಂಬಲವನ್ನು ಬಿಜೆಪಿ ಕಳೆದುಕೊಂಡಿದೆ. ಸೋಲನ್ನು ಎದುರಿಸುತ್ತಿರುವವರಿಗೆ ನಾವೇಕೆ ಬೆಂಬಲಿಸಬೇಕು ಎಂದಿರುವ ಮಾದ್ಯಮಗಳ ಬೆಂಬಲವನ್ನು ಬಿಜೆಪಿ ಕಳೆದುಕೊಂಡಿದೆ. ಇದರಿಂದ ಅನಿವಾರ್ಯ ಸೋಲಿನತ್ತ ಮುಖ ಮಾಡಿರುವ ಬಿಜೆಪಿ ಏನು ಮಾಡಬೇಕೆಂದು ತೋಚದೇ ತಮ್ಮ ದೋಣಿಗಳಲ್ಲೇ ರಂಧ್ರಗಳನ್ನು ಕೊರೆಯುತ್ತಿದ್ದಾರೆ ” ಎಂದು ಹೇಳಿದ್ದಾರೆ.  

ರಾಜಕೀಯ

ಜೂನ್ 4 ರಂದು ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯಲಾಗುವುದು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತೀವ್ರವಾಗಿ ಟೀಕಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಶಿವಸೇನೆ ಇಬ್ಭಾಗವಾದ ನಂತರ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ತಮ್ಮ ಪ್ರಭಾವವನ್ನು ಸಾಬೀತುಪಡಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಇದಕ್ಕಾಗಿ ಶರದ್ ಪವಾರ್ ಅವರ ರಾಷ್ಟ್ರವಾದಿ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಧುಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉದ್ಧವ್ ಠಾಕ್ರೆ, “ಕಳೆದ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ನನ್ನ ಜೊತೆಗಿದ್ದರು. ಅವರು ಕಳೆದ 10 ವರ್ಷಗಳಲ್ಲಿ ಏನು ಮಾಡಿದ್ದಾರೆ ಎಂಬುದನ್ನು ಪ್ರತಿ ಕ್ಷೇತ್ರವೂ ಗಮನಿಸುತ್ತಿದೆ. ಎರಡು ಬಾರಿ ಗೆದ್ದ ನಂತರ ಧುಲೆ ಕ್ಷೇತ್ರವನ್ನು ತಮ್ಮ ವೈಯಕ್ತಿಕ ಆಸ್ತಿ ಎಂದು ಭಾವಿಸಿಕೊಂಡಿದ್ದಾರೆ.

ಕಳೆದ ಬಾರಿ ಮಹಾರಾಷ್ಟ್ರ ನಿಮಗೆ (ಮೋದಿ) 40 ಸೀಟು ಕೊಟ್ಟು ದೆಹಲಿಗೆ ಕಳುಹಿಸಿತ್ತು. ಆದರೆ ಈ ಬಾರಿ ನೀವು ದೆಹಲಿಗೆ ಹೋಗಲು ಮಹಾರಾಷ್ಟ್ರ ನಿಮಗೆ ಸಹಾಯ ಮಾಡುವುದಿಲ್ಲ. ಜೂನ್ 4ರಂದು ಬಿಜೆಪಿಗೆ ಜನ ಕಸದ ತೊಟ್ಟಿ ತೋರಿಸಲಿದ್ದಾರೆ. ಜೂನ್ 5 ರಂದು ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಓಡಿ ಹೋದ ರೇವಣ್ಣ ಪರ ಮೋದಿ ಮತ ಯಾಚಿಸುತ್ತಾರೆ. ನಾವು ಅಧಿಕಾರಕ್ಕೆ ಬಂದ ಮೇಲೆ ಅವರನ್ನು ಬಂಧಿಸುತ್ತೇವೆ. ಮೋದಿ ಸರ್ಕಾರ ಮಹಾರಾಷ್ಟ್ರದಿಂದ ಕಿತ್ತುಕೊಂಡಿರುವ ಆಸ್ತಿಗಳನ್ನು ಮಹಾರಾಷ್ಟ್ರಕ್ಕೆ ವಾಪಸ್ ತರುತ್ತೇವೆ” ಎಂದರು.

ರಾಜಕೀಯ

ಇಂಡಿಯಾ ಮೈತ್ರಿಕೂಟ ಗೆದ್ದರೆ ಪ್ರಧಾನಿ ಮೋದಿ ತಂದಿದ್ದ ‘ಅಗ್ನಿವೀರ್’ ಯೋಜನೆ ರದ್ದುಪಡಿಸಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ!

ರಾಂಚಿ: ಜಾರ್ಖಂಡ್‌ನ ಕುಮ್ಲಾದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಿ ಮಾತನಾಡಿದರು.

ಇಂಡಿಯಾ ಮೈತ್ರಿಕೂಟ ಗೆದ್ದರೆ ಪ್ರಧಾನಿ ಮೋದಿ ತಂದಿದ್ದ ‘ಅಗ್ನಿವೀರ್’ ಯೋಜನೆ ರದ್ದಾಗಲಿದೆ. ಭಾರತೀಯ ಸೇನೆಯು ಆ ಯೋಜನೆಯನ್ನು ರೂಪಿಸಲಿಲ್ಲ. ನಾವು ಹುತಾತ್ಮರ ನಡುವೆ ವ್ಯತ್ಯಾಸವನ್ನು ಬಯಸುವುದಿಲ್ಲ. ರಾಷ್ಟ್ರಕ್ಕಾಗಿ ತ್ಯಾಗ ಮಾಡುವವರಿಗೆ ಹುತಾತ್ಮರ ಸ್ಥಾನಮಾನ ನೀಡಬೇಕು ಮತ್ತು ಪಿಂಚಣಿ ಸಿಗಬೇಕು.

ಬಿಜೆಪಿ ಸರ್ಕಾರವು ಐದು ತೆರಿಗೆ ಪದರಗಳೊಂದಿಗೆ ತಪ್ಪು GST ಯೋಜನೆಯನ್ನು ಜಾರಿಗೊಳಿಸಿತು. ನಾವು ಅದನ್ನು ಸರಿಪಡಿಸಿ ಕನಿಷ್ಠ ಒಂದು ತೆರಿಗೆ ಪದರವನ್ನು ರಚಿಸುತ್ತೇವೆ. ಬಡವರ ಮೇಲಿನ ತೆರಿಗೆ ಹೊರೆಯನ್ನು ಕಡಿಮೆ ಮಾಡುತ್ತೇವೆ.

ಬುಡಕಟ್ಟು ಜನರಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದ್ರೋಹ ಬಗೆದಿದೆ. ಕೇಂದ್ರ ಬಿಜೆಪಿ ಸರ್ಕಾರ ನೂತನ ಸಂಸತ್ ಭವನ ಉದ್ಘಾಟನೆ ಮತ್ತು ಅಯೋಧ್ಯೆ ರಾಮಮಂದಿರ ಕುಂಬಾಭಿಷೇಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೇ ಅವರನ್ನು ಅವಮಾನಿಸಲಾಯಿತು.

ದೇಶದ ಸಾರ್ವಜನಿಕ ವಲಯದ ಕಂಪನಿಗಳು, ರೈಲ್ವೆ ಇತ್ಯಾದಿಗಳನ್ನು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸಲು ಬಿಜೆಪಿ ಬಹಳ ತೀವ್ರವಾಗಿದೆ” ಎಂದು ಹೇಳಿದರು.

ರಾಜಕೀಯ

ಈ ವಿಡಿಯೋ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮಾತ್ರವಲ್ಲ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಅಪರಾಧವೂ ಆಗಿದೆ!

ಕರ್ನಾಟಕ ಬಿಜೆಪಿಯ ಅಧಿಕೃತ ಎಕ್ಸ್ ಪೇಜ್ ನಲ್ಲಿ ಅನಿಮೇಟೆಡ್ ವಿಡಿಯೋವೊಂದನ್ನು ಹಾಕಲಾಗಿದೆ. ಆ ಅನಿಮೇಟೆಡ್ ವಿಡಿಯೋದಲ್ಲಿ, SC, ST ಮತ್ತು ಹಿಂದುಳಿದ ವರ್ಗಗಳನ್ನು (OBC) ಒಂದು ಬುಟ್ಟಿಯಲ್ಲಿ “ಮೊಟ್ಟೆ”ಯಂತೆ ಚಿತ್ರಿಸಲಾಗಿದೆ. ಇದು ಮೀಸಲಾತಿಯನ್ನು ಸೂಚಿಸುತ್ತದೆ. ಈ ಮೀಸಲಾತಿ ಬುಟ್ಟಿಗೆ ರಾಹುಲ್ ಗಾಂಧಿ ಮುಸ್ಲಿಂ ಸಮುದಾಯದ ಮತ್ತೊಂದು ದೊಡ್ಡ ಸೈಜಿನ “ಮೊಟ್ಟೆ”ಯನ್ನು ತಂದು ಹಾಕುತ್ತಾರೆ. ಕಾಂಗ್ರೆಸ್ ನಾಯಕರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗಿಂತ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಅನುದಾನವನ್ನು ನೀಡುತ್ತಿದ್ದು, ಮತ್ತು ಅವರ ಮೀಸಲಾತಿ ಕೋಟಾವನ್ನು ಸಹ ಮುಸ್ಲಿಮರಿಗೆ ನೀಡುತ್ತಿದ್ದಾರೆ ಎಂಬಂತೆ ಬಿಂಬಿಸಲಾಗಿದೆ.

ಕರ್ನಾಟಕ ಬಿಜೆಪಿಯು ತಮ್ಮ ಅಧಿಕೃತ ಎಕ್ಸ್ ಪೇಜ್ ನಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಮತ್ತು ಧಾರ್ಮಿಕ ಸಂಘರ್ಷವನ್ನು ಸೃಷ್ಟಿಸುವ ಸಲುವಾಗಿ, ಅನಿಮೇಟೆಡ್ ವಿಡಿಯೋವನ್ನು ಪ್ರಕಟಿಸಿದ್ದಕ್ಕಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಸಾಮಾಜಿಕ ಮಾಧ್ಯಮ ಉಸ್ತುವಾರಿ ಅಮಿತ್ ಮಾಳವೀಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತು.

ಈ ವಿಡಿಯೋ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮಾತ್ರವಲ್ಲದೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಅಪರಾಧವೂ ಆಗಿದೆ ಎಂದೂ ಕಾಂಗ್ರೆಸ್ ಪಕ್ಷ ಪ್ರತಿಪಾದಿಸಿತು. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಸಾಮಾಜಿಕ ಜಾಲತಾಣ ಉಸ್ತುವಾರಿ ಅಮಿತ್ ಮಾಳವೀಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮತೀಯ ಘರ್ಷಣೆ ಹಾಗೂ ದ್ವೇಷ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿನ್ನಲೆಯಲ್ಲಿ, ಕರ್ನಾಟಕ ಬಿಜೆಪಿಯ ಎಕ್ಸ್ ಪೇಜ್ ನಲ್ಲಿ ಮುಸ್ಲಿಮರ ಬಗ್ಗೆ ಪ್ರಕಟಿಸಿರುವ ಅನಿಮೇಟೆಡ್ ವಿಡಿಯೋವನ್ನು ತಕ್ಷಣ ತೆಗೆದು ಹಾಕುವಂತೆ ಚುನಾವಣಾ ಆಯೋಗ ಎಕ್ಸ್ ಜಾಲತಾಣ ಕಂಪನಿಗೆ ಸೂಚಿಸಿದೆ.

ರಾಜಕೀಯ

ನವದೆಹಲಿ: ಜೂನ್ 4ರ ನಂತರ ಮೋದಿ ಮಾಜಿ ಪ್ರಧಾನಿಯಾಗಲಿದ್ದಾರೆ. ಜನರು ಅವರನ್ನು ಅಧಿಕಾರದಿಂದ ಹೊರಹಾಕುತ್ತಾರೆ ಎಂಬುದು ಅವರಿಗೂ (ಮೋದಿ) ತಿಳಿದಿದೆ. 1984 ರಿಂದ ನಾವು ಗೆಲ್ಲದ ಕ್ಷೇತ್ರದಲ್ಲೂ ಬಿಜೆಪಿ ಹೆಣಗಾಡುತ್ತಿದೆ ಎಂದು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಈ ಸಂಬಂಧ ಜೈರಾಮ್ ರಮೇಶ್ ಅವರು ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ, ಲೋಕಸಭೆ ಚುನಾವಣೆಯ ಮೊದಲ ಹಂತದ ನಂತರ, ಇಂಡಿಯಾ ಮೈತ್ರಿಕೂಟವು ಬಹುಮತದ ಸ್ಥಾನಗಳನ್ನು ಪಡೆಯುತ್ತದೆ ಎಂಬುದು ಸ್ಪಷ್ಟವಾಯಿತು. ಇಂದು ನಡೆಯುತ್ತಿರುವ 3ನೇ ಹಂತದ ಚುನಾವಣೆಯ ನಂತರವೂ ಇದೇ ಪರಿಸ್ಥಿತಿ ಇರಲಿದೆ.

1984ರ ನಂತರ ನಾವು ಗುಜರಾತ್‌ನ ಸೂರತ್‌ ಕ್ಷೇತ್ರದಿಂದ ಗೆದ್ದಿಲ್ಲ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆದರಿಕೆ ಹಾಕಿ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರವನ್ನೂ ಹಿಂಪಡೆಯಲಾಗಿದೆ. 1984 ರಿಂದ ನಾವು ಗೆಲ್ಲದಿದ್ದರೂ ಅವರು ಗೆಲ್ಲಲು ಹೆಣಗಾಡುತ್ತಿದ್ದಾರೆ; ಅದಕ್ಕೆ ಈ ಅಡ್ಡದಾರಿಯನ್ನು ಆಯ್ಕೆಮಾಡಿಕೊಂಡರು. ಇದುವೇ ಅಲ್ಲಿನ ವಾಸ್ಥವಾಂಶ.

ಜೂನ್ 4ರ ನಂತರ ಮೋದಿ ಮಾಜಿ ಪ್ರಧಾನಿಯಾಗಲಿದ್ದಾರೆ. ಜನರು ಅವರನ್ನು ಅಧಿಕಾರದಿಂದ ಹೊರಹಾಕುತ್ತಾರೆ ಎಂಬುದು ಅವರಿಗೂ (ಮೋದಿ) ತಿಳಿದಿದೆ. ಜೂನ್ 4ರ ನಂತರ ಅವರು ಪ್ರಧಾನಿಯಾಗುವುದಿಲ್ಲವಾದ್ದರಿಂದ, ಈಗ ಅವರು ಆರಾಮವಾಗಿ ಕಚೇರಿಯಲ್ಲಿ ಕುಳಿತುಕೊಳ್ಳಲಿ ಎಂದು ಅವರು ಹೇಳಿದ್ದಾರೆ.

ರಾಜಕೀಯ

ರಾಯ್‌ ಬರೇಲಿ (ಯುಪಿ): ದೇಶದ್ರೋಹಿ (Traitors) ಎಂದು ಕರೆಯುವ ಸರ್ಕಾರ ದೇಶದಲ್ಲಿ ಸ್ಥಾಪನೆಯಾಗುತ್ತದೆ ಎಂದು ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರು ಊಹಿಸಿರಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಬೇಸರ ವ್ಯಕ್ತಪಡಿಸಿದರು.

ಪ್ರಚಾರದ ಹಾದಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷೆಯ ಬಗ್ಗೆಯೂ ಅವರು ವಾಗ್ದಾಳಿ ನಡೆಸಿದರು.

ರಾಯ್ ಬರೇಲಿ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ”ಮಹಾತ್ಮ ಗಾಂಧಿ, ಪಂಡಿತ್ ಜವಾಹರಲಾಲ್ ನೆಹರು ಮುಂತಾದವರು ಜನರ ಹಕ್ಕುಗಳನ್ನು ಬಲಪಡಿಸಲು ಚಳುವಳಿಗಳನ್ನು ಕೈಗೊಂಡರು. ಅವರನ್ನು ದೇಶದ್ರೋಹಿಗಳೆಂದು ಕರೆದು (ಜನರಿಗೆ) ‘ನೀವು ನಮಗೆ 400 ಸ್ಥಾನಗಳನ್ನು ನೀಡಿದರೆ, ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ’ ಎಂದು ಹೇಳುವ ಸರ್ಕಾರ ಬರುತ್ತದೆ ಎಂದು ಅವರು ಎಂದಿಗೂ ಊಹಿಸಿರಲಿಲ್ಲ” ಎಂದು ಹೇಳಿದರು.

ರಾಜಕೀಯ

ಅಹಮದಾಬಾದ್: ಗಾಂಧಿ ನಗರ ಕ್ಷೇತ್ರದ ವ್ಯಾಪ್ತಿಯ ರಾನಿಬ್ ಪ್ರದೇಶದ ನಿಶಾನ್ ಹೈಸ್ಕೂಲ್ ಮತಗಟ್ಟೆಯಲ್ಲಿ ಪ್ರಧಾನಿ ಮೋದಿ ಮತ ಚಲಾಯಿಸಿದರು. ಮತದಾನದ ನಂತರ ಅವರು ನೀಡಿದ ಸಂದರ್ಶನದಲ್ಲಿ, “ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಜನರು ಯಾವುದೇ ತೊಂದರೆಯಿಲ್ಲದೆ ಅತ್ಯಂತ ಸುಲಭವಾಗಿ ಮತ ಚಲಾಯಿಸಿದರು. ಹಿಂಸಾಚಾರವಿಲ್ಲದೆ ಅತ್ಯುತ್ತಮ ವ್ಯವಸ್ಥೆ ಮಾಡಿರುವ ಚುನಾವಣಾ ಆಯೋಗಕ್ಕೆ ನನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ” ಎಂದರು

ಲೋಕಸಭೆ ಚುನಾವಣೆಯ 3ನೇ ಹಂತದ ಮತದಾನ ಇಂದು (ಮೇ 07) 12 ರಾಜ್ಯಗಳ 94 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಪ್ರಧಾನಿ ಮೋದಿ ತಮ್ಮ ತವರು ರಾಜ್ಯ ಗುಜರಾತ್‌ನ ಅಹಮದಾಬಾದ್‌ನ ಗಾಂಧಿ ನಗರ ಕ್ಷೇತ್ರದ ರಾಣಿಬ್ ಪ್ರದೇಶದ ಬಳಿಯ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಾಗತಿಸಿದರು. ಮಕ್ಕಳು ಪೇಂಟಿಂಗ್‌ಗಳನ್ನು ಪ್ರಧಾನಿ ಮೋದಿ ಅವರಿಗೆ ತೋರಿಸಿದಾಗ ಅವರು ಅದಕ್ಕೆ ಸಹಿ ಹಾಕಿದರು. ಅನೇಕ ಜನರು ಪ್ರಧಾನಿಗೆ ಹಸ್ತಲಾಘವ ಮಾಡಿದರು. ಅನೇಕ ಮಕ್ಕಳನ್ನು ಕೈಗೆ ತೆಗೆದುಕೊಂಡ ಪ್ರಧಾನಿ ಮೋದಿ ಮಕ್ಕಳನ್ನು ಮುದ್ದಾಡಿದರು.

ಪ್ರಧಾನಿ ಮೋದಿ ಅವರನ್ನು ನೋಡಲು ಮಕ್ಕಳು ಸೇರಿದಂತೆ ಜನಸಾಗರವೇ ನೆರೆದಿತ್ತು. ಜನ ಪ್ರಧಾನಿ ಮೋದಿಯವರೊಂದಿಗೆ ಮೊಬೈಲ್‌ನಲ್ಲಿ ಸೆಲ್ಫಿ ತೆಗೆಸಿಕೊಂಡರು. ಪ್ರಜಾಸತ್ತಾತ್ಮಕ ಕರ್ತವ್ಯ ನಿರ್ವಹಿಸಿದ ಪ್ರಧಾನಿ ಮೋದಿ ಮತಗಟ್ಟೆಯ ಬಳಿ ಜನರ ಮಧ್ಯೆ ನಿಂತು ಮತ ಚಲಾಯಿಸಿದ ಬೆರಳನ್ನು ಎತ್ತಿ ತೋರಿಸಿದರು.

ಮತದಾನ ಕೇಂದ್ರದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, “ಇಂದು ಮೂರನೇ ಹಂತದ ಮತದಾನ. ಚುನಾವಣೆ ವೇಳೆ ಯಾವುದೇ ಹಿಂಸಾಚಾರದ ಘಟನೆಗಳು ವರದಿಯಾಗಿಲ್ಲ. ಇದೊಂದು ಹಿಂಸಾಚಾರ ಮುಕ್ತ ಚುನಾವಣೆ. ಉತ್ತಮ ಕೆಲಸ ಮಾಡಿದ್ದಕ್ಕಾಗಿ ಚುನಾವಣಾ ಆಯೋಗಕ್ಕೆ ನನ್ನ ನಮನಗಳು. ಪ್ರಜಾಪ್ರಭುತ್ವವನ್ನು ಜನರ ಹಬ್ಬದಂತೆ ಆಚರಿಸಬೇಕು. ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಜನರು ಯಾವುದೇ ತೊಂದರೆಯಿಲ್ಲದೆ ಅತ್ಯಂತ ಸುಲಭವಾಗಿ ಮತ ಚಲಾಯಿಸಿದರು. ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಜನರು ಸಾಕಷ್ಟು ನೀರು ಕುಡಿಯಬೇಕು. ಎಲ್ಲರೂ ತಪ್ಪದೇ ಬಂದು ಮತದಾನ ಮಾಡಬೇಕು” ಎಂದು ಅವರು ಹೇಳಿದರು.

ರಾಜಕೀಯ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಎಸ್‌ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್’’ ಎಂದು ಬಿಜೆಪಿ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ ಎಂದಿದ್ದಾರೆ.

ಎಸ್‌ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್‌ಐಟಿ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿ(ಎಸ್) ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು.

ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ ಎಂದು ಹೇಳಿದ್ದಾರೆ.