ರಾಜಕೀಯ Archives » Page 3 of 47 » Dynamic Leader
October 23, 2024
Home Archive by category ರಾಜಕೀಯ (Page 3)

ರಾಜಕೀಯ

ದೇಶ ರಾಜಕೀಯ

ನವದೆಹಲಿ: ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಪೆಟ್ರೋಲ್ ಬೆಲೆ ಏಕೆ ಕಡಿಮೆಯಾಗಿಲ್ಲ? ಎಂಬ ಪ್ರಶ್ನೆಯನ್ನು ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷ ಎತ್ತಿದೆ.

ಸಾರ್ವಜನಿಕ ವಲಯದ ತೈಲ ಕಂಪನಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಸ್ಥಿತಿಗತಿಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್‌ನ ದೇಶೀಯ ಬೆಲೆಗಳನ್ನು ಪ್ರತಿದಿನ ನಿಗದಿಪಡಿಸುತ್ತವೆ. ಕಳೆದ ಕೆಲವು ದಿನಗಳಿಂದ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಕಂಡು ಬರುತ್ತಿದ್ದರೂ ಪೆಟ್ರೋಲ್ ಡೀಸೆಲ್ ಬೆಲೆ ಯಾವುದೇ ಬದಲಾವಣೆಯಿಲ್ಲದೆ ಹೆಚ್ಚುತ್ತಲೇ ಇದೆ.

ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, “ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡದಿರುವುದು ಏಕೆ? ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಚ್ಚಾ ತೈಲ ಶೇ.32ರಷ್ಟು ಕುಸಿದಿದೆ. ಕಚ್ಚಾ ತೈಲ ಬೆಲೆಯಲ್ಲಿ 32.5% ಇಳಿಕೆಯಾಗಿದ್ದರೂ, ಬಿಜೆಪಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ನಿರಾಕರಿಸುತ್ತಿದೆ.

ಪ್ರಸ್ತುತ ಮಾರುಕಟ್ಟೆಯ ಸ್ಥಿತಿಗತಿಗಳ ಪ್ರಕಾರ, ಪೆಟ್ರೋಲ್ ಅನ್ನು ಲೀಟರ್‌ಗೆ ರೂ.48.27 ಮತ್ತು ಡೀಸೆಲ್‌ಗೆ ರೂ.69.00 ರಂತೆ ಮಾರಾಟ ಮಾಡಬೇಕು. 10 ವರ್ಷ 100 ದಿನಗಳಲ್ಲಿ ಬಿಜೆಪಿ ಸರ್ಕಾರ ಇಂಧನದ ಮೇಲೆ ತೆರಿಗೆ ವಿಧಿಸಿ ಜನರ 35 ಲಕ್ಷ ಕೋಟಿ ರೂಪಾಯಿ ಲೂಟಿ ಮಾಡಿದೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡದ ಬಿಜೆಪಿ ಸರ್ಕಾರವನ್ನು ಚುನಾವಣೆಯಲ್ಲಿ ಜನ ತಿರಸ್ಕರಿಸುತ್ತಾರೆ” ಎಂದು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಪ್ರಶ್ನೆ:
ಈ ಬಗ್ಗೆ ಮಾತನಾಡಿರುವ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್ (Derek O’Brien), “ಕಳೆದ 10 ವರ್ಷಗಳಲ್ಲಿ, ಕಚ್ಚಾ ತೈಲದ ಬೆಲೆ ತೀವ್ರವಾಗಿ ಕುಸಿದಿದ್ದರೂ, ಪೆಟ್ರೋಲ್ ಬೆಲೆ ಶೇ.30ರಷ್ಟು ಹೆಚ್ಚಾಗಿದೆ. ಇದರಿಂದ ತೈಲ ಕಂಪನಿಗಳು ಹೆಚ್ಚಿನ ಲಾಭ ಪಡೆಯುತ್ತವೆ. ಆದರೆ ಇದರ ಪ್ರಯೋಜನ ಜನಸಾಮಾನ್ಯರಿಗೆ ಸಿಗುತ್ತಿಲ್ಲ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡದಿರುವುದು ಏಕೆ?” ಎಂದು ಪ್ರಶ್ನಿಸಿದ್ದಾರೆ.

ದೇಶ ರಾಜಕೀಯ

ಪಾಟ್ನಾ: ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ ಅಧಿಕಾರಕ್ಕೆ ಬಂದ ಒಂದು ಗಂಟೆಯೊಳಗೆ ಸಂಪೂರ್ಣ ಮದ್ಯಪಾನ ನಿಷೇದವನ್ನು ರದ್ದುಗೊಳಿಸಲಾಗುವುದು ಎಂದು ಪ್ರಶಾಂತ್ ಕಿಶೋರ್ (Prashant Kishor) ಹೇಳಿದ್ದಾರೆ.

ರಾಜಕೀಯ ತಂತ್ರಗಾರ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ ತಮ್ಮ ‘ಜನ್ ಸುರಾಜ್’ (Jan Suraaj) ಸಂಘಟನೆಯನ್ನು ಹೊಸ ಪಕ್ಷವನ್ನಾಗಿ ಆರಂಭಿಸಲು ಮುಂದಾಗಿದ್ದಾರೆ. ಅಕ್ಟೋಬರ್ 2 ರಂದು ಔಪಚಾರಿಕವಾಗಿ ಪಕ್ಷ ಆರಂಭಿಸಲಿದ್ದಾರೆ. ಬಿಹಾರದಲ್ಲಿ ಪ್ರಶಾಂತ್ ಕಿಶೋರ್ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸರ್ಕಾರವನ್ನು ಹಿಡಿಯಲು ಸಜ್ಜಾಗಿದ್ದಾರೆ.

ಈ ಹಿನ್ನೆಲೆಯಲ್ಲಿ, ಇಂದು ಖಾಸಗಿ ಸುದ್ದಿ ಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಪ್ರಶಾಂತ್ ಕಿಶೋರ್, “ರಾಜ್ಯದಲ್ಲಿ ಪ್ರಸ್ತುತ ಮದ್ಯಪಾನ ನಿಷೇಧ ನಿಯಂತ್ರಣಗಳು ನಿಷ್ಪರಿಣಾಮಕಾರಿಯಾಗಿದೆ. ಅದು ಅಕ್ರಮ ಮದ್ಯವನ್ನು ಮನೆಗೆ ತಲುಪಿಸಲು ಕಾರಣವಾಗಿದೆ. ರಾಜ್ಯವು ರೂ.20,000 ಕೋಟಿ ಅಬಕಾರಿ ಆದಾಯವನ್ನು ಕಳೆದುಕೊಂಡಿದೆ. ನಾನು ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ ಒಂದು ಗಂಟೆಯೊಳಗೆ ಸಂಪೂರ್ಣ ಮದ್ಯಪಾನ ನಿಷೇಧವನ್ನು ಹಿಂತೆಗೆದುಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ದೇಶ ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಮಣಿಪುರದ ಜನರನ್ನು ಕಡೆಗಣಿಸಿದೆ ಎಂದು ಸಂಸದ ಬಿಮಲ್ ಅಕೋಯಿಜಮ್ (Bimol Akoijam) ಆರೋಪಿಸಿದ್ದಾರೆ.

ಮಣಿಪುರ ರಾಜ್ಯದಲ್ಲಿ ಒಂದು ವರ್ಷದಿಂದ ಎರಡು ಸಮುದಾಯಗಳ ನಡುವೆ ಸಂಘರ್ಷ ನಡೆಯುತ್ತಿದೆ. ಇದರಿಂದಾಗಿ ರಾಜ್ಯಾದ್ಯಂತ ಹಿಂಸಾಚಾರ ಪ್ರಕರಣಗಳು ಹೆಚ್ಚಿವೆ.

ನೂರಾರು ಮಹಿಳೆಯರು ಲೈಂಗಿಕ ಕಿರುಕುಳ ಮತ್ತು ಹತ್ಯೆಗೀಡಾಗಿದ್ದಾರೆ. ಅಮಾಯಕ ಮಕ್ಕಳನ್ನು ನಡುಬೀದಿಗೆ ತಳ್ಳಲಾಗಿದೆ. ಮತ್ತು ಸಾವಿರಾರು ಕುಟುಂಬಗಳು ನಿರಾಶ್ರಿತರಾಗಿ ಇಂದಿಗೂ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ಎರಡು ದಿನಗಳ ಹಿಂದೆ ಕೂಡ ಮಾಜಿ ಮುಖ್ಯಮಂತ್ರಿ ದಿವಂಗತ ಮೈರೆಂಬಮ್ ಕೊಯಿರೆಂಗ್ ಸಿಂಗ್ (Mairembam Koireng Singh) ಅವರ ಮನೆಯ ಮೇಲೆ ರಾಕೆಟ್ ಉಡಾಯಿಸಲಾಗಿತ್ತು. ಇದರಲ್ಲಿ 70 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಇತರ 5 ಮಂದಿ ಗಾಯಗೊಂಡಿದ್ದಾರೆ.

ಅದೇ ರೀತಿ ಜಿರಿಬಾಮ್ ಜಿಲ್ಲೆಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗಿದೆ.

ಅಲ್ಲದೆ, ಹಿಂಸಾಚಾರ ನಿಯಂತ್ರಿಸುವಲ್ಲಿ ವಿಫಲವಾಗಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸರು ಅವರ ಮೇಲೆ ಗುಂಡು ಹಾರಿಸಿ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದ್ದಾರೆ. ಆದರೂ, ವಿದ್ಯಾರ್ಥಿಗಳು ಹೋರಾಡುತ್ತಿದ್ದಾರೆ. ಪ್ರಧಾನಿ ಮೋದಿಯವರ ಬ್ಯಾನರ್‌ಗಳನ್ನು ಹರಿದು ಹಾಕಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಮಣಿಪುರ ಸಂಸದ ಬಿಮಲ್ ಅಕೋಯಿಜಮ್ (Bimol Akoijam) ಅವರು, ಕೇಂದ್ರ ಬಿಜೆಪಿ ಸರ್ಕಾರ ಮಣಿಪುರದ ಜನರನ್ನು ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಸಂದರ್ಶನ ನೀಡಿರುವ ಬಿಮಲ್ ಅಕೋಯಿಜಮ್, “ಮಣಿಪುರದಲ್ಲಿ 16 ತಿಂಗಳಿನಿಂದ ಹಿಂಸಾಚಾರ ನಡೆಯುತ್ತಿದೆ.

ಕೇಂದ್ರ ಸರ್ಕಾರ ನಮ್ಮನ್ನು ಸಂಪೂರ್ಣವಾಗಿ ಕಡೆಗಣಿಸಿದೆ. 33 ಲಕ್ಷ ಜನರಿರುವ ರಾಜ್ಯದಲ್ಲಿ 66,000 ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ. ಸೇನೆಯನ್ನು ವಾಪಸ್ ಪಡೆಯಿರಿ, ನಮ್ಮ ಭದ್ರತೆಯನ್ನು ನಾವೇ ನೋಡಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ರಾಜಕೀಯ

ಕಾಶ್ಮೀರಿ ಪಂಡಿತರು ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಸೆಪ್ಟೆಂಬರ್ 18 ರಂದು ನಡೆಯಲಿದೆ. “ಇಂಡಿಯಾ ಮೈತ್ರಿಕೂಟ”ದಲ್ಲಿ ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಮಾರ್ಕ್ಸಿಸ್ಟ್ ಕಮ್ಯುನಿಸ್ಟ್ ಪಕ್ಷ, ಪ್ಯಾಂಥರ್ ಪಕ್ಷಗಳು ಸ್ಪರ್ಧಿಸುತ್ತಿವೆ.

ಅಂತೆಯೇ ಈ ಚುನಾವಣೆಯನ್ನು ಬಿಜೆಪಿ ಮತ್ತು ಡೆಮಾಕ್ರಟಿಕ್ ಪಾರ್ಟಿ ಪ್ರತ್ಯೇಕವಾಗಿ ಎದುರಿಸುತ್ತಿವೆ. ಇದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ, ಚುನಾವಣಾ ಸಮಯದಲ್ಲಿ ಮಾತ್ರ ನಮ್ಮ ಬಗ್ಗೆ ಮಾತನಾಡುವುದೇಕೆ? ಎಂದು ಪ್ರಶ್ನಿಸಿರುವ ಕಾಶ್ಮೀರ ಪಂಡಿತರ ಸಮನ್ವಯ ಸಮಿತಿಯು ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದೆ.

ಈ ಕುರಿತು, ಮಾತನಾಡಿರುವ ಕಾಶ್ಮೀರ ಪಂಡಿತರ ಸಂಯೋಜಕರೊಬ್ಬರು, ‘ನಾವು ಹಲವಾರು ದಶಕಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸಿಗ ಸಮುದಾಯವಾಗಿದ್ದೇವೆ. ನಂತರ ಬಂದ ಸರ್ಕಾರಗಳು ಮತ್ತು ರಾಜಕೀಯ ಪಕ್ಷಗಳು ಕೂಡ ಚುನಾವಣೆ ಸಮಯದಲ್ಲಿ ಮಾತ್ರ ನಮ್ಮ ಮತ್ತು ನಮ್ಮ ಸಮಸ್ಯೆಗಳ ಬಗ್ಗೆ ಮಾತನಾಡುತ್ತವೆ.

ನಿರ್ದಿಷ್ಟವಾಗಿ ಕೆಲವು ಪಕ್ಷಗಳು ಚುನಾವಣಾ ಸಮಯದಲ್ಲಿ ಕಾಶ್ಮೀರಿ ಪಂಡಿತರಿಂದ ಲಾಭ ಪಡೆದುಕೊಳ್ಳುತ್ತವೆ. ಆದರೆ ನಮಗೆ ಯಾವುದೇ ಪ್ರಾತಿನಿಧ್ಯವನ್ನು ಕೊಡುವುದಿಲ್ಲ. ಇದರಿಂದಾಗಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ದೇಶ ರಾಜಕೀಯ

ನವದೆಹಲಿ: ಕನ್ಸಲ್ಟೆನ್ಸಿ ಹೆಸರಿನಲ್ಲಿ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ (Madhabi Puri Buch) ಅವರು ಮಹೀಂದ್ರಾ ಸೇರಿದಂತೆ ಕಂಪನಿಗಳಿಂದ 2.95 ಕೋಟಿ ರೂ.ಗಳನ್ನು ಪಡೆದಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಮಾಧವಿ ಬುಚ್ ಅವರು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾದ (SEBI) ಅಧ್ಯಕ್ಷರಾಗಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಹಲವಾರು ಆರೋಪಗಳನ್ನು ಮಾಡುತ್ತಿದೆ.

ಇಂದು ಮಾತನಾಡಿದ ಕಾಂಗ್ರೆಸ್ ವಕ್ತಾರ ಪವನ್ ಖೇರ, “ಸೆಬಿ ಮುಖ್ಯಸ್ಥೆ ಮಾಧವಿ ಅವರು 2016 ರಿಂದ 2024ರ ಅವಧಿಯಲ್ಲಿ ಮಹೀಂದ್ರಾದಿಂದ 2.95 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಅವರ ಸಲಹಾ ಸಂಸ್ಥೆ ಅಗೋರಾ ಅಡ್ವೈಸರಿ (Agora Advisory) ಮೂಲಕ ಮೊತ್ತವನ್ನು ಸ್ವೀಕರಿಸಲಾಗಿದೆ.

ಮಾಧವಿ ಈ ಕಂಪನಿ ದಿವಾಳಿಯಾಗಿದೆ ಎಂದು ಹೇಳುತ್ತಿದ್ದಾರೆ. ಅದು ತಪ್ಪು. ಆ ಕಂಪನಿ ಕಾರ್ಯನಿರ್ವಹಿಸುತ್ತಿದೆ. ಹಣಕಾಸು ಕೂಡ ಪಡೆದಿದೆ. ಅದರಲ್ಲಿ ಮಾಧವಿ ಶೇ.99ರಷ್ಟು ಪಾಲು ಹೊಂದಿದ್ದಾರೆ. ಮಹೀಂದ್ರಾ ಅಲ್ಲದೆ ಡಾ.ರೆಡ್ಡೀಸ್, ಬಿಡ್ಲೈಟ್, ಐಸಿಐಸಿಐ, ಸೆಂಬ್ಕಾರ್ಪ್, ವಿಸು ಲೀಸಿಂಗ್ ಮುಂತಾದ ಕಂಪನಿಗಳು ಮಾಧವಿಯವರ ಅಗೋರಾ ಕಂಪನಿ ಸೇವೆಯನ್ನು ಪಡೆದುಕೊಂಡಿವೆ.

ಕಳೆದ ತಿಂಗಳು, ಐಸಿಐಸಿಐ ಬ್ಯಾಂಕ್‌ನಲ್ಲಿ ಉಭಯ ಸ್ಥಾನಗಳನ್ನು ನಿರ್ವಹಿಸುವ ಮೂಲಕ 16.80 ಕೋಟಿ ರೂಪಾಯಿ ಲಾಭ ಗಳಿಸಿದ್ದರು ಎಂದು ಕಾಂಗ್ರೆಸ್ ಆರೋಪಿಸಿತ್ತು. ಬ್ಯಾಂಕಿನವರೇ ಅದನ್ನು ನಿರಾಕರಿಸಿದ್ದು, ಇಂದು ಮತ್ತೊಂದು ಹೊಸ ಆರೋಪವನ್ನು ಕಾಂಗ್ರೆಸ್ ಮಾಡಿದೆ.

ರಾಜಕೀಯ ವಿದೇಶ

ಭಾರತ ಎಲ್ಲರಿಗೂ ಸೇರಿದ್ದು ಎಂಬುದು ಬಿಜೆಪಿಗೆ ಅರ್ಥವಾಗುತ್ತಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಹೇಳಿದ್ದಾರೆ.

ಅಮೆರಿಕದಲ್ಲಿ ನೆಲಸಿರುವ ಭಾರತೀಯ ಮೂಲದವರ ನಡುವೆ ಮಾತನಾಡಿದ ರಾಹುಲ್ ಗಾಂಧಿ, “ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಕೆಲವೇ ನಿಮಿಷಗಳಲ್ಲಿ ಬಿಜೆಪಿ ಮತ್ತು ಭಾರತದ ಪ್ರಧಾನಿ ಮೋದಿ ಬಗ್ಗೆ ಜನರಲ್ಲಿ ಇದ್ದ ಭಯ ಮಾಯವಾಗಿದೆ. ಈ ಭಯದ ವಾತಾವರಣವನ್ನು ಹುಟ್ಟುಹಾಕಲು ಅವರಿಗೆ ವರ್ಷಗಳೇ ಬೇಕಾಯಿತು. ಆದರೆ ಇದು ಕೆಲವೇ ಸೆಕೆಂಡುಗಳಲ್ಲಿ ಕಣ್ಮರೆಯಾಯಿತು.

ಕೆಲವು ರಾಜ್ಯಗಳು ಇತರ ರಾಜ್ಯಗಳಿಗಿಂತ ಕೀಳು ಎಂದು ಆರ್‌ಎಸ್‌ಎಸ್ ಹೇಳುತ್ತಿದೆ. ಕೆಲವು ಭಾಷೆಗಳು ಇತರ ಭಾಷೆಗಳಿಗಿಂತ ಕೀಳು.. ಕೆಲವು ಧರ್ಮಗಳು ಇತರ ಧರ್ಮಗಳಿಗಿಂತ ಕೀಳು.. ಕೆಲವು ಸಮುದಾಯಗಳು ಇತರ ಸಮುದಾಯಗಳಿಗಿಂತ ಕೀಳು.. ಪ್ರತಿಯೊಂದು ರಾಜ್ಯವು ತನ್ನದೇ ಆದ ಇತಿಹಾಸ ಮತ್ತು ಸಂಪ್ರದಾಯವನ್ನು ಹೊಂದಿದೆ. ಮರಾಠಿ, ತಮಿಳು, ಬಂಗಾಳಿ ಮತ್ತು ಮಣಿಪುರಿ ಇವೆಲ್ಲವೂ ಕೀಳು ಭಾಷೆಗಳು ಎಂಬುದು ಆರ್‌ಎಸ್‌ಎಸ್ ಸಿದ್ಧಾಂತ.

ಭಾರತ ಎಲ್ಲರಿಗೂ ಸೇರಿದ್ದು ಎಂಬುದು ಬಿಜೆಪಿಗೆ ಅರ್ಥವಾಗುತ್ತಿಲ್ಲ. ನಮ್ಮ ಸಂವಿಧಾನವು ಭಾರತವನ್ನು ಒಕ್ಕೂಟ ಎಂದು ಒತ್ತಿಹೇಳುತ್ತದೆ. ಲೋಕಸಭೆ ಚುನಾವಣೆಗೆ 3 ತಿಂಗಳ ಮೊದಲು ನಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತ ಗೊಳಿಸಲಾಯಿತು. ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದು ಅವರು ಭಾವಿಸಿದ್ದರು. ಆದರೆ ನಾವು ಧೈರ್ಯದಿಂದ ಚುನಾವಣೆ ಎದುರಿಸಿದ್ದೇವೆ. ಎಂದು ಹೇಳಿದ್ದಾರೆ.

ದೇಶ ರಾಜಕೀಯ

ನವದೆಹಲಿ: ಜನಗಣತಿ ವಿಳಂಬಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಂಕಿಅಂಶಗಳ ಸ್ಥಾಯಿ ಸಮಿತಿ [Standing Committee on Statistics (SCoS)]ಯನ್ನು ವಿಸರ್ಜನೆ ಮಾಡಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಕಳೆದ ವರ್ಷ ಜುಲೈ 13 ರಂದು ಅರ್ಥಶಾಸ್ತ್ರಜ್ಞ ಪ್ರಣಬ್ ಸೇನ್ ನೇತೃತ್ವದ 14 ಸದಸ್ಯರ ಅಂಕಿಅಂಶಗಳ ಸ್ಥಾಯಿ ಸಮಿತಿಯನ್ನು ರಚಿಸಲಾಯಿತು.

ಈ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಮಾದರಿ ಸಮೀಕ್ಷೆಗಾಗಿ ಹೊಸದಾಗಿ ರಚಿಸಲಾದ ಸ್ಟೀರಿಂಗ್ ಸಮಿತಿಯ ಚಟುವಟಿಕೆಗಳೊಂದಿಗೆ SCoS ಸಮಿತಿಯ ಚಟುವಟಿಕೆಗಳನ್ನು ಗೊಂದಲಗೊಳಿಸಬಾರದು ಎಂದು SCoS ಸಮಿತಿಯನ್ನು ವಿಸರ್ಜಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ.

2021ರಲ್ಲಿಯೇ ಜನಗಣತಿ ನಡೆಸಬೇಕಿತ್ತು ಆದರೆ, 3 ವರ್ಷ ಕಳೆದರೂ ಸಮೀಕ್ಷೆ ವಿಳಂಬವಾಗುತ್ತಿರುವುದು ಏಕೆ ಎಂದು SCoS ಸಮಿತಿ ಸದಸ್ಯರು ಪ್ರಶ್ನಿಸುತ್ತಲೇ ಇದ್ದರು. ಇದರಿಂದಾಗಿ ಈಗ SCoS ಗುಂಪನ್ನು ವಿಸರ್ಜಿಸಲಾಗಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಖಂಡನೆ ವ್ಯಕ್ತಪಡಿಸಿವೆ.

ರಾಜಕೀಯ

ನವದೆಹಲಿ: ಲೋಕಸಭೆ ಚುನಾವಣೆಯ ಅಂತಿಮ ಹಂತ ಮುಗಿದ ತಕ್ಷಣ ಚುನಾವಣೋತ್ತರ ಸಮೀಕ್ಷೆ (Exit Poll)ಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಮಾಧ್ಯಮ ಸಂಸ್ಥೆಗಳು ಮತ್ತು ಅವರ ಸಹವರ್ತಿಗ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಪಿಐಎಲ್ ಅನ್ನು “ರಾಜಕೀಯ ಹಿತಾಸಕ್ತಿ ಮೊಕದ್ದಮೆ” ಎಂದು ಬಣ್ಣಿಸಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.

ನ್ಯಾಯಾಲಯ, ”ಈಗಾಗಲೇ ಸರ್ಕಾರ ಆಯ್ಕೆಯಾಗಿದೆ. ಚುನಾವಣೆಯ ಸಮಯದಲ್ಲಿ ಏನಾಗುತ್ತದೆ ಎಂಬ ಕಥೆಯನ್ನು ಈಗ ಮುಗಿಸಿಕೊಂಡು, ಈಗ ನಾವು ದೇಶದಲ್ಲಿ ಆಡಳಿತವನ್ನು ಪ್ರಾರಂಭಿಸೋಣ. ಚುನಾವಣಾ ಆಯೋಗ ಅದನ್ನು ನಿಭಾಯಿಸುತ್ತದೆ. ನಾವು ಚುನಾವಣಾ ಆಯೋಗವನ್ನು ನಡೆಸುವುದಿಲ್ಲ. ಇದು ರಾಜಕೀಯ ಹಿತಾಸಕ್ತಿ ಮೊಕದ್ದಮೆಯಾಗಿರುವುದು ಸ್ಪಷ್ಟ.ಹಾಗಾಗಿ  ಪ್ರಕರಣವನ್ನು ವಜಾಗೊಳಿಸಲಾಗಿದೆ” ಎಂದು ತಿಳೀಸಿದೆ.

ಜೂನ್ 1 ರಂದು ಕೊನೆಯ ಹಂತದ ಚುನಾವಣೆಯ ನಂತರ ತಕ್ಷಣವೇ ಎಕ್ಸಿಟ್ ಪೋಲ್‌ಗಳನ್ನು ಚರ್ಚಿಸುವ ಮೂಲಕ ಮಾಧ್ಯಮ ಸಂಸ್ಥೆಗಳು ಹೂಡಿಕೆದಾರರ ಮೇಲೆ ಪ್ರಭಾವ ಬೀರಿವೆ. ಇದು ಷೇರು ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಕೆಗೆ ಕಾರಣವಾಯಿತು ಎಂದು ಅರ್ಜಿದಾರರಾದ ವಕೀಲ ಬಿ.ಎಲ್.ಜೈನ್ ಆರೋಪಿಸಿದ್ದರು. ಆದಾಗ್ಯೂ, ಜೂನ್ 4 ರಂದು ನಿಜವಾದ ಫಲಿತಾಂಶಗಳು ಪ್ರಕಟವಾದಾಗ, ಮಾರುಕಟ್ಟೆಯು ಕುಸಿಯಿತು, ಇದರ ಪರಿಣಾಮವಾಗಿ ಸಾಮಾನ್ಯ ಹೂಡಿಕೆದಾರರಿಗೆ 31 ಲಕ್ಷ ಕೋಟಿ ರೂ. ನಷ್ಟವಾಗಿದೆ.

ವಕೀಲ ವರುಣ್ ಠಾಕೂರ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಎಲೆಕ್ಟ್ರಾನಿಕ್ ಮಾಧ್ಯಮಗಳ ಚುನಾವಣೋತ್ತರ ಸಮೀಕ್ಷೆಗಳು ಮತ್ತು ಚರ್ಚೆಗಳ ಪ್ರಸಾರವು ಕೆಲವು ರಾಜಕೀಯ ಪಕ್ಷಗಳ ಪರವಾಗಿ ಅಥವಾ ವಿರುದ್ಧವಾಗಿ ಪಕ್ಷಪಾತ ಮತ್ತು ಪೂರ್ವಾಗ್ರಹ ಪೀಡಿತವಾಗಿದೆ ಎಂದು ಹೇಳಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ, 1951 ಮತ್ತು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಹಲವಾರು ಮಾಧ್ಯಮ ಸಂಸ್ಥೆಗಳ ವಿರುದ್ಧ ಸಿಬಿಐ, ಇಡಿ, ಸಿಬಿಡಿಟಿ, ಸೆಬಿ ಮತ್ತು ಎಸ್‌ಎಫ್‌ಐಒ ಸೇರಿದಂತೆ ವಿವಿಧ ಏಜೆನ್ಸಿಗಳಿಂದ ತನಿಖೆಗೆ ಅದು ಕೋರಿತ್ತು.

ರಾಜಕೀಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತರೂಡ ತೃಣಮೂಲ ಕಾಂಗ್ರೆಸ್ ಪಕ್ಷದ ಮೇಲೆ ಜನರು ಹಿಂದೆಂದಿಗಿಂತಲೂ ಹೆಚ್ಚು ಅತೃಪ್ತರಾಗಿರುವುದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆಘಾತವನ್ನು ಉಂಟುಮಾಡಿದೆ.

ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಕಾರ್ಯನಿರ್ವಹಿಸುತ್ತದೆ. ಇಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದ 31 ವರ್ಷದ ಟ್ರೈನಿ ವೈದ್ಯೆಯೊಬ್ಬರನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ್ದರು.

ಮಹಿಳಾ ವೈದ್ಯೆಯ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ವೈದ್ಯರು ದೇಶಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆಯಲ್ಲಿ ಇದುವರೆಗೂ ಪರಿಹಾರ ಸಿಗದ ಕಾರಣ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ವಿರುದ್ಧ ಅಸಮಾಧಾನದ ಅಲೆ ಎದ್ದಿದೆ. ಅದೂ ಅಲ್ಲದೆ, ಈ ವಿಚಾರವಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರ ವಿವಾದಾತ್ಮಕ ಭಾಷಣಗಳು ಆಡಳಿತ ಪಕ್ಷದ ವಿರುದ್ಧ ಚಿತ್ತ ನೆಟ್ಟಿದೆ ಎನ್ನಬಹುದು.

ಏತನ್ಮಧ್ಯೆ, ಲಂಚ ನೀಡಿ ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ಮಹಿಳಾ ವೈದ್ಯರ ಕುಟುಂಬದವರು ಆರೋಪಿಸಿದ್ದು, ಜನರಲ್ಲಿ ಮತ್ತಷ್ಟು ತಳಮಳ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದ ವಿವಿಧೆಡೆ ತೃಣಮೂಲ ಕಾಂಗ್ರೆಸ್ ಪಕ್ಷ ನಡೆಸಿದ ಸಮೀಕ್ಷೆಯಲ್ಲಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಜನರಲ್ಲಿ ಅಸಮಾಧಾನ ಇರುವುದು ಬಹಿರಂಗವಾಗಿದೆ. ಕಳೆದ 2019ರ ಲೋಕಸಭೆ ಚುನಾವಣೆಯಿಂದ ಆಗಾಗ್ಗೆ ತೃಣಮೂಲ ಕಾಂಗ್ರೆಸ್ ಜನರಲ್ಲಿ ಸಮೀಕ್ಷೆ ನಡೆಸುವುದನ್ನು ರೂಢಿ ಮಾಡಿಕೊಂಡಿದೆ.

ಆ ರೀತಿಯಲ್ಲಿ, ಸದ್ಯದ ಸಮೀಕ್ಷೆ ಪಕ್ಷಕ್ಕೆ ಆಘಾತವನ್ನು ಉಂಟುಮಾಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆರ್.ಜಿ.ಕರ್ ಆಸ್ಪತ್ರೆಯ ಡೀನ್ ಸಂದೀಪ್ ಘೋಷ್ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದಕ್ಕೆ ಅವರ ಪಕ್ಷದಲ್ಲೂ ಅಸಮಾಧಾನ ಉಂಟುಮಾಡಿದೆ.

ಈ ಹಿನ್ನೆಲೆಯಲ್ಲಿ, ಮಹಿಳಾ ವೈದ್ಯೆ ಹತ್ಯೆ ಪ್ರಕರಣದಲ್ಲಿ ತನಿಖೆಗೆ ಮುಂದಾಗದೆ ಹಣ ಪಾವತಿಗೆ ಯತ್ನಿಸಿರುವುದು ಯಾರನ್ನೋ ಉಳಿಸುವ ಕೃತ್ಯ ಎನ್ನಲಾಗುತ್ತಿದೆ. ಇದರಿಂದಾಗಿ ಮಮತಾ ಬ್ಯಾನರ್ಜಿ ವಿರುದ್ಧ ಹಿಂದೆಂದೂ ಇಲ್ಲದ ಅಸಮಾಧಾನ ಜನರಲ್ಲಿ ಮೂಡಿದೆ.

ತೃಣಮೂಲದ ಮಾಜಿ ಸಚಿವರಾದ ಪಾರ್ಥ ಚಟರ್ಜಿ ಮತ್ತು ಜ್ಯೋತಿಪ್ರಿಯಾ ಮಲ್ಲಿಕ್ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಸಾಕಷ್ಟು ಚರ್ಚೆಯಾಗುತ್ತಿವೆ.

ಕೋಲ್ಕತ್ತಾ ವೈದ್ಯೆ ಹತ್ಯೆಯ ಪರಿಣಾಮ ನಗರ ಪ್ರದೇಶದಲ್ಲಿ ಮಾತ್ರವಲ್ಲದೆ ಗ್ರಾಮೀಣ ಪ್ರದೇಶದಲ್ಲೂ ಸದ್ದು ಮಾಡುತ್ತಿದೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ. ಈ ಫಲಿತಾಂಶಗಳಿಂದ ಮಮತಾ ಆಘತಕ್ಕೆ ಒಳಗಾಗಿದ್ದಾರೆ ಎಂಬ ವರದಿಗಳಿವೆ.

“ಸಂದೀಪ್ ಘೋಷ್ ಅವರಂತಹ ಆರೋಪಿಯನ್ನು ಮಮತಾ ಬ್ಯಾನರ್ಜಿ ಏಕೆ ಬೆಂಬಲಿಸುತ್ತಿದ್ದಾರೆಂದು ನಮಗೆ ಅರ್ಥವಾಗುತ್ತಿಲ್ಲ” ಎಂದು ಹೆಸರು ಹೇಳಲು ಇಚ್ಛಿಸದ ತೃಣಮೂಲ ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಅಸಮಾಧಾನ ಹೊರಹಾಕಿದ್ದಾರೆ.

ರಾಜಕೀಯ

“ಭಾರತೀಯ ಪ್ರಧಾನಿ ಮೋದಿಯವರೊಂದಿಗಿನ ಅದಾನಿಯವರ ಸ್ನೇಹದಿಂದಾಗಿಯೇ ಕೀನ್ಯಾದಲ್ಲಿ ಅದಾನಿ ವಿರುದ್ಧದ ಆಂದೋಲನ ನಡೆಯುತ್ತಿದೆ” – ಕಾಂಗ್ರೆಸ್

ಕಳೆದ ಕೆಲವು ವರ್ಷಗಳಿಂದ ಕೊರೊನಾ ಪ್ರಭಾವ, ರಷ್ಯಾ-ಉಕ್ರೇನ್ ಯುದ್ಧ ಇತ್ಯಾದಿಗಳಿಂದ ಜಾಗತಿಕವಾಗಿ ಆರ್ಥಿಕತೆಯಲ್ಲಿ ದೊಡ್ಡ ಕುಸಿತ ಕಾಣುತ್ತಿದೆ. ಇದರಿಂದಾಗಿ ವಿಶ್ವಾದ್ಯಂತ ಬಡ್ಡಿ ದರಗಳು ಹೆಚ್ಚಾಗಿದ್ದು, ಜನಸಾಮಾನ್ಯರಷ್ಟೇ ಅಲ್ಲ ಜೆಫ್ ಬೆಜೋಸ್ (Jeff Bezos), ಎಲಾನ್ ಮಸ್ಕ್ (Elon Musk), ಮಾರ್ಕ್ ಜುಕರ್ ಬರ್ಗ್ (Mark Zuckerberg) ರಂತಹ ಶ್ರೀಮಂತರ ಸಂಪತ್ತು 60 ಬಿಲಿಯನ್ ಡಾಲರ್‌ಗಳಷ್ಟು ಕುಸಿತವನ್ನು ಕಂಡಿದೆ.

ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಈ ಆರ್ಥಿಕ ಪರಿಣಾಮ ಭಾರತದಲ್ಲೂ ಪ್ರತಿಧ್ವನಿಸಿದೆ. ಭಾರತೀಯ ರೂಪಾಯಿ ಮೌಲ್ಯ ದಾಖಲೆ ಮಟ್ಟಕ್ಕೆ ಕುಸಿದಿದೆ. ಆದರೆ ಈ ಹಾನಿಯು ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿರುವ ಅದಾನಿ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಮತ್ತು ಅವರ ಆಸ್ತಿ ಮೌಲ್ಯವೂ ತೀವ್ರವಾಗಿ ಏರಿಕೆಯಾಗಿದೆ.

ಇದಕ್ಕೆ ಮುಖ್ಯ ಕಾರಣ, ಪ್ರಧಾನಿ ಮೋದಿ ಜತೆಗಿನ ಅದಾನಿ ನಿಕಟ ಒಡನಾಟವೇ ಇದಕ್ಕೆ ಕಾರಣ ಎನ್ನಲಾಗಿದೆ. ಮೋದಿಯವರ ವಿದೇಶ ಪ್ರವಾಸಗಳು ಅದಾನಿಯವರ ವ್ಯಾಪಾರ ಹಿತಾಸಕ್ತಿಗಾಗಿ ಎಂಬ ಟೀಕೆಯೂ ಇದೆ. ಈಗಾಗಲೇ ಶ್ರೀಲಂಕಾದ ವಿದ್ಯುತ್ ಯೋಜನೆಗಳನ್ನು ಅದಾನಿಗೆ ನೀಡುವಂತೆ ಭಾರತ ಸರ್ಕಾರ ಒತ್ತಡ ಹೇರಿತ್ತು ಎಂಬ ದೂರುಗಳಿವೆ.

ಈ ಹಿನ್ನೆಲೆಯಲ್ಲಿ, ಆಫ್ರಿಕಾದ ಕೀನ್ಯಾ ದೇಶದಲ್ಲೂ ಅದಾನಿ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಕೀನ್ಯಾದ ರಾಜಧಾನಿ ನೈರೋಬಿ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಳ್ಳಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೆ ಇದಕ್ಕೆ ಕಾರ್ಮಿಕರು ಹಾಗೂ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೇ ಅದಾನಿ ವಿರುದ್ಧ ಕೀನ್ಯಾದಲ್ಲಿ ಪ್ರತಿಭಟನೆ ಕೂಡ ಭುಗಿಲೆದ್ದಿದೆ. ಕೀನ್ಯಾ ಏರ್ಮೆನ್ ಅಸೋಸಿಯೇಷನ್ ಮುಷ್ಕರಕ್ಕೆ ಕರೆ ನೀಡಿದೆ. ಇದನ್ನು ಉಲ್ಲೇಖಿಸಿರುವ ಕಾಂಗ್ರೆಸ್ ಪಕ್ಷ, “ಭಾರತೀಯ ಪ್ರಧಾನಿ ಮೋದಿಯವರೊಂದಿಗಿನ ಅದಾನಿಯವರ ಸ್ನೇಹದಿಂದಾಗಿ ಕೀನ್ಯಾದಲ್ಲಿ ಅದಾನಿ ವಿರುದ್ಧದ ಆಂದೋಲನವು ಭಾರತ ಮತ್ತು ಭಾರತ ಸರ್ಕಾರದ ವಿರುದ್ಧದ ಕೋಪವಾಗಿ ಸುಲಭವಾಗಿ ಬದಲಾಗಬಹುದು”ಎಂದು ಎಚ್ಚರಿಸಿದೆ.