ರಾಜಕೀಯ Archives » Page 7 of 47 » Dynamic Leader
October 23, 2024
Home Archive by category ರಾಜಕೀಯ (Page 7)

ರಾಜಕೀಯ

ರಾಜಕೀಯ

ಡಿ.ಸಿ.ಪ್ರಕಾಶ್ 

ದೇಶಾದ್ಯಂತ 7 ಹಂತಗಳಲ್ಲಿ ನಡೆದ 18ನೇ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಏಕ ಬಹುಮತದೊಂದಿಗೆ ಸರ್ಕಾರ ರಚಿಸುವ ಶಕ್ತಿ ಕಂಡುಬಂದಿಲ್ಲ. ಆದರೂ ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಸೇರಿ ಸತತ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದೆ.ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ, ಕೇರಳದ ವಯನಾಡು ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಿದ್ದರು. ಮತದಾನ ಮುಗಿದ ನಂತರ ಅವರು ಕಾಂಗ್ರೆಸ್ ಭದ್ರಕೋಟೆಯಾದ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲೂ ನಾಮಪತ್ರ ಸಲ್ಲಿಸಿದರು.

ಇದಾದ ಬಳಿಕ, ನಡೆದ ಮತ ಎಣಿಕೆ ವೇಳೆ ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಗೆಲುವು ಸಾಧಿಸಿ ಅಚ್ಚರಿ ಮೂಡಿಸಿದರು. ವಯನಾಡಿನಲ್ಲಿ ರಾಹುಲ್ ಗಾಂಧಿ 6,47,445 ಮತಗಳನ್ನು ಪಡೆದು ಆನಿ ರಾಜಾ ಅವರನ್ನು 3,64,422 ಮತಗಳ ಅಂತರದಿಂದ ಸೋಲಿಸಿದರು. ಅದೇ ರೀತಿ ಉತ್ತರಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ 6,87,649 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿಯನ್ನು 3,90,030 ಮತಗಳ ಅಂತರದಿಂದ ಸೋಲಿಸಿದ್ದು ಗಮನಾರ್ಹ.

ಈ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿ ಸ್ಪರ್ದಿಸಿ ಗೆದ್ದ ಎರಡು ಕ್ಷೇತ್ರಗಳ ಪೈಕಿ, ಒಂದರಲ್ಲಿ ರಾಜೀನಾಮೆ ನೀಡಬೇಕಾಗಿದೆ. ಅಂದರೆ, 2 ಕ್ಷೇತ್ರಗಳಲ್ಲಿ ಸ್ಪರ್ದಿಸಿ ಗೆಲುವು ಸಾದಿಸಿದ ಒಬ್ಬ ಅಭ್ಯರ್ಥಿ, 14 ದಿನಗಳೊಳಗೆ ಯಾವುದಾದರೊಂದು ಕಡೆ ಸಂಸದ ಅಥವಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬುದು ನಿಯಮ. ಇದನ್ನು ಆಧರಿಸಿ, ಇಂದು ರಾಹುಲ್ ಗಾಂಧಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಅಲ್ಲದೇ ಆ ಕ್ಷೇತ್ರದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ಸಹೋದರಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪರ್ದಿಸಲಿದ್ದಾರೆ ಎಂದೂ ಅವರು ಹೇಳಿದ್ದಾರೆ.

2019ರಲ್ಲಿ ವಯನಾಡು ಕ್ಷೇತ್ರದಿಂದ ಆಯ್ಕೆಯಾದ ರಾಹುಲ್ ಗಾಂಧಿ ಅದೇ ವರ್ಷ ಕಾಂಗ್ರೆಸ್ ಭದ್ರಕೋಟೆಯಾದ ಅಮೇಥಿಯಲ್ಲೂ ಸ್ಪರ್ದೆಗಿಳಿದರು. ಆದರೆ, ಅಲ್ಲಿ ಸ್ಮೃತಿ ಇರಾನಿ ಎದುರು ಸೋತರು. ತರುವಾಯ, ಅವರು ವಯನಾಡ್ ಕ್ಷೇತ್ರದ ಸಂಸದರಾಗಿ ಮುಂದುವರೆದರು. ಈ ಬಾರಿಯೂ ವಯನಾಡ್‌ನಲ್ಲಿ ಸ್ಪರ್ದೆಗಿಳಿದ ಅವರು ಅಮೇಥಿಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್‌ನ ಹಿರಿಯ ನಾಯಕರ ಒತ್ತಾಯದ ಹೊರತಾಗಿಯೂ ಅವರು ಸ್ಪರ್ಧಿಸಲಿಲ್ಲ. ಏತನ್ಮಧ್ಯೆ, ಕಾಂಗ್ರೆಸ್ ಭದ್ರಕೋಟೆಯಾದ ರಾಯ್ ಬರೇಲಿಯ ಸಂಸದೆ ಸೋನಿಯಾ ಗಾಂಧಿ, ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಆ ಕ್ಷೇತ್ರದಲ್ಲಿ ರಾಹುಲ್ ಅವರನ್ನು ಕಣಕ್ಕಿಳಿಸಲಾಯಿತು. ಈಗ ಅವರು ರಾಯ್ ಬರೇಲಿಯ ಸಂಸದರಾಗಿ ಆಯ್ಕೆಯಾಗಿದ್ದಾರೆ.

ರಾಜಕೀಯಕ್ಕೆ ಬರಲು ನನಗೆ ಯಾವುದೇ ಹಿಂಜರಿಕೆ ಇಲ್ಲ – ಪ್ರಿಯಾಂಕಾ ಗಾಂಧಿ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ವಯನಾಡಿನ ಜನತೆಗೆ ನನ್ನ ಧನ್ಯವಾದಗಳು; ವಯನಾಡಿಗೆ ಭೇಟಿ ನೀಡುವುದನ್ನು ಮುಂದುವರಿಸಲಾಗುವುದು. ಕಳೆದ 5 ವರ್ಷಗಳಿಂದ ವಯನಾಡಿನ ಜನರು ನನಗೆ ನೀಡಿದ ಬೆಂಬಲ ಮತ್ತು ಪ್ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ. ನಾನು ಯಾವಾಗಲೂ ವಯನಾಡಿನ ಜನರ ಪರವಾಗಿ ನಿಲ್ಲುತ್ತೇನೆ. ಪ್ರಿಯಾಂಕಾ ಗಾಂಧಿ ಖಂಡಿತಾ ಇಲ್ಲಿ ಗೆಲ್ಲುತ್ತಾರೆ. ನಾನು ಮತ್ತು ನನ್ನ ಸಹೋದರಿ ವಯನಾಡಿನ ಜನರನ್ನು ಪ್ರತಿನಿಧಿಸಲಿದ್ದೇವೆ” ಎಂದು ಹೇಳಿದರು.

“ನಂತರ ಮಾತನಾದಿಡ ಪ್ರಿಯಾಂಕಾ ಗಾಂಧಿ “ವಯನಾಡಿನಲ್ಲಿ ಸ್ಪರ್ಧಿಸುವುದು ಬಹಳ ಖುಷಿ ತಂದಿದೆ; ಮತ ರಾಜಕೀಯಕ್ಕೆ ಬರಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ? ರಾಹುಲ್ ಗಾಂಧಿ ಚೆಕ್ ಮೇಟ್?

ರಾಜಕೀಯ

ಬೆಂಗಳೂರು: 2024ರ ಸಂಸತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ದಿಸಿ ಗೆದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾಸ್ವಾಮಿ, 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಸಿಕೊಂಡ ನರೇಂದ್ರ ಮೋದಿ ಸರ್ಕಾರದಲ್ಲಿ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೇಂದ್ರ ಸರ್ಕಾರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಅವರನ್ನು ಜೆಡಿಎಸ್ ಕಾರ್ಯಕರ್ತರು, ವಿಮಾನ ನಿಲ್ದಾಣದ ಬಳಿ ಅತ್ಯಂತ ಪ್ರೀತಿಯಿಂದ ಬರ ಮಾಡಿಕೊಂಡರು.

ಅದೇ ರೀತಿ ಕೇಂದ್ರ ಸರಕಾರದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನಕ್ಕೆ ಭೇಟಿ ನೀಡಿದ ಕುಮಾರಸ್ವಾಮಿಯನ್ನು ಪಕ್ಷದ ನಾಯಕರು, ಕಾರ್ಯಕರ್ತರು ವಿಶೇಷ ಅದರಾಭಿಮಾನದಿಂದ ಬರಮಾಡಿಕೊಂಡರು.

ಈ ಬಗ್ಗೆ ತಮ್ಮ ಎಕ್ಸ್ ಜಾಲತಾಣದಲ್ಲಿ, “ಎಲ್ಲರ ವಿಶ್ವಾಸ, ಅಭಿಮಾನಕ್ಕೆ ನಾನು ಋಣಿ. ಮುಖ್ಯವಾಗಿ ಈ ಅವಿಸ್ಮರಣೀಯ ಕ್ಷಣಗಳಿಗೆ ನೇರ ಕಾರಣರಾದ ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ, ಸಮಸ್ತ ಕನ್ನಡಿಗರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ.

ಕೇಂದ್ರ ಸರಕಾರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ರಾಜಭವನಕ್ಕೆ ತೆರಳಿ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿದರು.

ಕೇಂದ್ರ ಸಚಿವರಾದ ಮೇಲೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿಯಾದ ತಂದೆ ಹೆಚ್.ಡಿ.ದೇವೇಗೌಡರನ್ನು ಮತ್ತು ತಾಯಿಯನ್ನು ಅವರ ಸ್ವಗೃಹದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

ರಾಜಕೀಯ

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ 235 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಯ ಎನ್‌ಡಿಎ ಮೈತ್ರಿಕೂಟಕ್ಕೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ದುಃಸ್ವಪ್ನವಾಗಿ ಪರಿಣಮಿಸಿದೆ. ಸಂಸತ್ತಿನಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಾತಿನಿಧ್ಯವು ಮುಂಬರುವ ದಿನಗಳಲ್ಲಿ ಗಮನಾರ್ಹವಾದ ಪರಿಣಾಮಗಳನ್ನು ಬೀರುವ ನಿರೀಕ್ಷೆಯಿದೆ.

ಈ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆದ್ದಿದ್ದರು.

ಈ ಹಿನ್ನೆಲೆಯಲ್ಲಿ, ಒಂದು ಕ್ಷೇತ್ರದ ಸಂಸದರಾಗಿ ಮಾತ್ರ ಮುಂದುವರಿಯಬಹುದಾದ್ದರಿಂದ, ಜೂನ್ 4 ರಂದು ಚುನಾವಣಾ ಫಲಿತಾಂಶ ಪ್ರಕಟವಾದಾಗಿನಿಂದ ರಾಹುಲ್ ಗಾಂಧಿ ಯಾವ ಕ್ಷೇತ್ರವನ್ನು ತ್ಯಾಗ ಮಾಡುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಏತನ್ಮಧ್ಯೆ, ಕೇರಳಕ್ಕೆ ಬಂದಿದ್ದ ರಾಹುಲ್ ಗಾಂಧಿ ಯಾವ ಕ್ಷೇತ್ರದಲ್ಲಿ ಸಂಸದರಾಗಿ ಮುಂದುವರಿಯಬೇಕು ಎಂಬುದನ್ನು ಜನರ ಮಾತು ಕೇಳಿ ನಿರ್ಧರಿಸುವುದಾಗಿ ಹೇಳಿದ್ದರು.

ಉತ್ತರ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕಾಗಿರುವುದರಿಂದ ರಾಯ್ಬರೇಲಿ ಕ್ಷೇತ್ರದ ಸಂಸದರಾಗಿಯೇ ಮುಂದುವರಿಯಲು ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ವಯನಾಡನ್ನು ತ್ಯಜಿಸುವ ಮುಜುಗರವನ್ನು ತಪ್ಪಿಸಲು ಕಾಂಗ್ರೆಸ್ ಮಹತ್ವದ ನಿರ್ಧಾರ ಕೈಗೊಂಡಿದೆ ಎಂಬ ಮಾಹಿತಿ ಹೊರಬಿದ್ದಿದೆ. ವಯನಾಡಿನಲ್ಲಿ ಮರುಚುನಾವಣೆ ವೇಳೆ ರಾಹುಲ್ ಅವರ ತಂಗಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕಿ ಪ್ರಿಯಾಂಕಾ ಗಾಂಧಿ ಅಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ವಾರಣಾಸಿ ಕ್ಷೇತ್ರದಲ್ಲಿ ಕಳೆದ ಚುನಾವಣೆಗಿಂತ ಕಡಿಮೆ ಅಂತರದಲ್ಲಿ ಮೋದಿ ಗೆಲುವು ಸಾಧಿಸಿದ್ದನ್ನು ಟೀಕಿಸಿದ್ದ ರಾಹುಲ್ ಗಾಂಧಿ, ಪ್ರಬಲ ವಿರೋಧವಿಲ್ಲದೆಯೇ ಕಡಿಮೆ ಅಂತರದಲ್ಲಿ ಗೆದ್ದ ಮೋದಿ, ವಾರಣಾಸಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರೆ ಖಂಡಿತ ಸೋಲುತ್ತಿದ್ದರು ಎಂದು ಹೇಳಿರುವುದು ಗಮನಾರ್ಹ.

ರಾಜಕೀಯ

ಚೆನ್ನೈ: ಮೈತ್ರಿಕೂಟದ ಲಾಭಕ್ಕಾಗಿ ಮುಖ್ಯಮಂತ್ರಿ ಸ್ಟಾಲಿನ್ ಅವರು ತಮಿಳುನಾಡು ರೈತರ ಹಿತ ಕಡೆಗಣಿಸುವುದನ್ನು ಬಿಟ್ಟು ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಕೊಡಿಸಲು ಮುಂದಾಗಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ಡೆಲ್ಟಾ ಭತ್ತದ ಕೃಷಿಗಾಗಿ ಮೇಟ್ಟೂರು ಅಣೆಕಟ್ಟನ್ನು ಸಾಮಾನ್ಯವಾಗಿ ಪ್ರತಿ ವರ್ಷ ಜೂನ್ 12 ರಂದು ತೆರೆಯಲಾಗುತ್ತದೆ. ಆದರೆ, ಈ ವರ್ಷ ಮೇಟ್ಟೂರು ಅಣೆಕಟ್ಟು ತೆರೆಯುವ ಸಾಧ್ಯತೆ ಇಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಈ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮಿಳುನಾಡು ಸರ್ಕಾರವನ್ನು ಖಂಡಿಸಿದ್ದಾರೆ.

ಈ ಸಂಬಂಧ ಅಣ್ಣಾಮಲೈ ತಮ್ಮ ಎಕ್ಸ್ ಪೇಜ್ ನಲ್ಲಿ ಪ್ರಕಟಿಸಿದ ಪೋಸ್ಟ್‌ನಲ್ಲಿ, “ಕಳೆದ ವರ್ಷ ಕಾವೇರಿಯಲ್ಲಿ ಪಡೆದುಕೊಂಡ ನೀರಿನ ಪ್ರಮಾಣ ಕೇವಲ 81.4 ಟಿಎಂಸಿ ಮಾತ್ರ. ವರ್ಷಕ್ಕೆ 177.25 ಟಿಎಂಸಿ ನೀರು ಪಡೆಯಬೇಕಾದ ತಮಿಳುನಾಡಿಗೆ ಅದರಲ್ಲಿ ಅರ್ಧದಷ್ಟೂ ಸಿಗದಿರುವುದು ಡಿಎಂಕೆ ಸರಕಾರದ ಅದಕ್ಷತೆಯನ್ನು ತೋರಿಸುತ್ತದೆ.

ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ಡಿಎಂಕೆ-ಕಾಂಗ್ರೆಸ್ ಅವಕಾಶವಾದಿ ಇಂಡಿಯಾ ಮೈತ್ರಿಕೂಟದ ಲಾಭಕ್ಕಾಗಿ ತಮಿಳುನಾಡು ರೈತರ ಕಲ್ಯಾಣವನ್ನು ಸಂಪೂರ್ಣವಾಗಿ ಒತ್ತೆಯಿಟ್ಟಿದ್ದಾರೆ. ಕಾವೇರಿಯಲ್ಲಿ ಸಾಕಷ್ಟು ನೀರು ಹರಿದು ಬರದ ಕಾರಣ, ಈ ವರ್ಷ ಜೂನ್ 12ರಂದು ಕೃಷಿಗೆ ನೀರು ಬಿಡಬೇಕಿದ್ದ ಮೇಟ್ಟೂರು ಅಣೆಕಟ್ಟು ತೆರೆಯಲಿಲ್ಲ. ಇದರಿಂದ ನೀರಾವರಿಗೆ ನೀರಿಲ್ಲದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಆದರೆ ಮುಖ್ಯಮಂತ್ರಿ ಸ್ಟಾಲಿನ್‌ಗೆ ಈ ಬಗ್ಗೆ ಯಾವುದೇ ಚಿಂತೆಯಿಲ್ಲ. ತಾನೊಬ್ಬ ಡೆಲ್ಟಾ ವ್ಯಕ್ತಿ ಎಂದು ಹೇಳಿಕೊಂಡು, ಹೊಲದಲ್ಲಿ ಕಾಂಕ್ರಿಟ್ ರಸ್ತೆಗಳನ್ನು ಹಾಕಿಕೊಂಡು ಓಡಾಡುವ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ರೈತರ ನೋವು ಅರ್ಥವಾಗುವುದಾದರೂ ಹೇಗೆ?

ಮುಖ್ಯಮಂತ್ರಿ ಸ್ಟಾಲಿನ್ ಅವರು ತಮ್ಮ ಮೈತ್ರಿಯ ಲಾಭಕ್ಕಾಗಿ ತಮಿಳುನಾಡು ರೈತರ ಹಿತವನ್ನು ಕಡೆಗಣಿಸುವುದನ್ನು ಬಿಟ್ಟು ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಕೊಡಿಸಲು ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ರಾಜಕೀಯ

ದೇಶಾದ್ಯಂತ 7 ಹಂತಗಳಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ 234 ಸ್ಥಾನಗಳಲ್ಲಿ ಮತ್ತು ಬಿಜೆಪಿ ಮೈತ್ರಿಕೂಟ 292 ಸ್ಥಾನಗಳನ್ನು ಗೆದ್ದಿದೆ ಎಂದು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ.

ಆದಾಗ್ಯೂ, ಬಿಜೆಪಿ ಏಕಾಂಗಿಯಾಗಿ ಕೇವಲ 240 ಸ್ಥಾನಗಳನ್ನು ಗೆದ್ದಿದ್ದರೂ ಬಹುಮತ ಸಿಗದ ಕಾರಣ ಸಮ್ಮಿಶ್ರ ಪಕ್ಷಗಳ ಜತೆ ಸೇರಿ ಸರ್ಕಾರ ನಡೆಸುವ ತವಕದಲ್ಲಿದೆ. ಬಿಜೆಪಿ ಮೈತ್ರಿಕೂಟದಲ್ಲಿರುವ ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಯಾರಿಗೆ ಬೆಂಬಲ ನೀಡುತ್ತಾರೋ ಅವರೇ ಸರ್ಕಾರ ರಚಿಸಬಹುದು ಎಂಬ ಸ್ಥಿತಿಯಲ್ಲಿ ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಬಿಜೆಪಿ ಮೈತ್ರಿಕೂಟದಲ್ಲಿರುವ 293 ಸಂಸದರ ಪೈಕಿ ಒಬ್ಬರು ಕೂಡಾ ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಸಮುದಾಯಕ್ಕೆ ಸೇರಿದವರು ಇಲ್ಲ ಎಂಬುದು ಅಧ್ಯಯನದಿಂದ ಬಹಿರಂಗವಾಗಿದೆ. ಈ ಕುರಿತು ಪ್ರಕಟವಾದ ಅಧ್ಯಯನದಲ್ಲಿ, ಬಿಜೆಪಿ ಮೈತ್ರಿಕೂಟದಲ್ಲಿ ಶೇ.33.2ರಷ್ಟು ಸಂಸದರು ಮೇಲ್ಜಾತಿ ಸಮುದಾಯಕ್ಕೆ ಸೇರಿದವರು, ಶೇ.15.7ರಷ್ಟು ಮಧ್ಯಮ ವರ್ಗದವರು ಮತ್ತು ಶೇ.26.2ರಷ್ಟು ಮಾತ್ರ ಇತರೆ ಹಿಂದುಳಿದ ಸಮುದಾಯಗಳಿಗೆ ಸೇರಿದವರು.

ಅದೇ ಸಮಯದಲ್ಲಿ, ‘ಇಂಡಿಯಾ’ ಮೈತ್ರಿಕೂಟದಲ್ಲಿರುವ 235 ಸಂಸದರಲ್ಲಿ ಮುಸ್ಲಿಮರು ಶೇ.7.9ರಷ್ಟು, ಸಿಖ್ಖರು ಶೇ.5ರಷ್ಟು, ಮತ್ತು ಕ್ರಿಶ್ಚಿಯನ್ನರು ಶೇ.3.5% ರಷ್ಟು ಇದ್ದಾರೆ. ಇಲ್ಲಿ ಶೇ.30.7ರಷ್ಟು ಇತರೆ ಹಿಂದುಳಿದ ಸಮುದಾಯಗಳಿಗೆ ಸೇರಿದವರು, ಶೇ.2.4ರಷ್ಟು ಮೇಲ್ಜಾತಿ ಸಮುದಾಯಗಳು ಮತ್ತು ಶೇ.11.9ರಷ್ಟು ಮಧ್ಯಮ ವರ್ಗದ ಸಮುದಾಯಗಳಿಗೆ ಸೇರಿದವರು ಇದ್ದಾರೆ ಎಂದು ವಿವರಿಸಿದೆ.

ರಾಜಕೀಯ

ನವದೆಹಲಿ: ಉತ್ತರ ಪ್ರದೇಶದಲ್ಲಿ ಇತ್ತೀಚೆಗಿನ ಲೋಕಸಭೆ ಚುನಾವಣೆ ಫಲಿತಾಂಶದಿಂದ ತೃಪ್ತರಾಗಿರುವ ಕಾಂಗ್ರೆಸ್ ಪಕ್ಷವು ಜೂನ್ 11 ರಿಂದ 15 ರವರೆಗೆ ‘ಧಯವಾದ್ ಯಾತ್ರೆ’ಯನ್ನು ಘೋಷಿಸಿದೆ. ಯಾತ್ರೆಯು ರಾಜ್ಯದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳನ್ನು ತಲುಪುವ ಗುರಿಯನ್ನು ಹೊಂದಿದ್ದು, ಇದರ ಮೂಲಕ ಸಾರ್ವಜನಿಕರಿಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತದೆ ಮತ್ತು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಸಂದೇಶಗಳನ್ನು ರವಾನಿಸುವ ಮಾಹಿತಿಯನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶ ಉಸ್ತುವಾರಿ ಅವಿನಾಶ್ ಪಾಂಡೆ ಅವರು ಹಂಚಿಕೊಂಡಿದ್ದಾರೆ.

ಶುಕ್ರವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪಾಂಡೆ, ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯು ಪ್ರತಿ ಕ್ಷೇತ್ರಗಳ ಲೋಕಸಭಾ ಚುನಾವಣಾ ಫಲಿತಾಂಶಗಳನ್ನು ಪರಿಶೀಲಿಸಿದೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸಿ 6ರಲ್ಲಿ ಗೆಲುವು ಸಾಧಿಸಿದರೆ, ಮೈತ್ರಿಕೂಟ 43 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪರಿಶೀಲನಾ ಸಭೆಯಲ್ಲಿ ಮಹಿಳೆಯರ ಹಕ್ಕು ಸೇರಿದಂತೆ ಒಂಬತ್ತು ಪ್ರಸ್ತಾವನೆಗಳನ್ನು ಅಂಗೀಕರಿಸಲಾಗಿದೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಪರಿಣಾಮವನ್ನು ಪಾಂಡೆ ಎತ್ತಿ ತೋರಿಸಿದರು, ಇದು ಸಾರ್ವಜನಿಕರನ್ನು ಪ್ರತಿಧ್ವನಿಸಿದೆ ಎಂದು ಹೇಳಿದ್ದಾರೆ. ಸಂವಿಧಾನದ ಬೆದರಿಕೆಗಳ ನಡುವೆಯೂ ಉತ್ತರ ಪ್ರದೇಶದ ಜನರು ತಮ್ಮ ಜವಾಬ್ದಾರಿಗಳನ್ನು ಅದ್ಭುತವಾಗಿ ನಿರ್ವಹಿಸಿದ್ದಾರೆ ಎಂದು ಅವರು ಒತ್ತಿ ಹೇಳಿದರು. ಸೀಮಿತ ಸಂಪನ್ಮೂಲಗಳ ಹೊರತಾಗಿಯೂ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಪ್ರಚಂಡ ಪ್ರಯತ್ನವನ್ನು ಮಾಡಿದರು, ಇದರ ಪರಿಣಾಮವಾಗಿ ರಾಜ್ಯದಲ್ಲಿ ಗಮನಾರ್ಹ ಬದಲಾವಣೆಗಳು ಸಂಭವಿಸಿದವು ಎಂದು ಹೇಳಿದರು.

ರಾಜಕೀಯ

ನವದೆಹಲಿ: ಕಳೆದ 4 ರಂದು ಭಾರತದ ಸಂಸತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಇದರಲ್ಲಿ ಕೇಂದ್ರದ ಆಡಳಿತಾರೂಢ ಬಿಜೆಪಿ ಸೇರಿದಂತೆ ಯಾವುದೇ ಪಕ್ಷಕ್ಕೆ ಬಹುಮತ ಬಂದಿಲ್ಲ. ಒಟ್ಟು 543 ಸ್ಥಾನಗಳ ಪೈಕಿ 240 ಕ್ಷೇತ್ರಗಳನ್ನು ಮಾತ್ರ ವಶಪಡಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

ಅದೇ ಸಮಯದಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 292 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಸರ್ಕಾರ ರಚನೆಗೆ ಅಗತ್ಯವಿರುವ 272ಕ್ಕೂ ಹೆಚ್ಚು ಸದಸ್ಯರನ್ನು ಈ ತಂಡ ಪಡೆದಿರುವುದರಿಂದ ಮುಂದಿನ 5 ವರ್ಷ ಸಮ್ಮಿಶ್ರ ಸರ್ಕಾರ ಖಚಿತವಾಗಿದೆ.

3ನೇ ಅವಧಿಗೆ ಸರ್ಕಾರ ರಚಿಸಲು ಬಿಜೆಪಿ ಮೈತ್ರಿ ಪಕ್ಷಗಳ ಮುಖಂಡರು ಪ್ರಧಾನಿ ಮೋದಿ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಮತ್ತು ಅವರೆಲ್ಲರೂ ಪ್ರಧಾನಿ ಮೋದಿಯವರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ನಾಯಕರನ್ನಾಗಿ ಆಯ್ಕೆ ಮಾಡಲಿದ್ದಾರೆ. ಈ ಮಧ್ಯೆ ನೂತನ ಸಚಿವ ಸಂಪುಟದಲ್ಲಿ ಯಾರಿಗೆಲ್ಲ ಸಚಿವ ಸ್ಥಾನ ನೀಡಬೇಕೆಂಬ ಚರ್ಚೆ ಪಕ್ಷದ ನಾಯಕರಲ್ಲಿ ನಡೆಯುತ್ತಿದೆ.

ಈ ಒತ್ತಡದ ವಾತಾವರಣದಲ್ಲಿ ದೆಹಲಿಯ ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಬಿಜೆಪಿ ಸೇರಿದಂತೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ನೂತನ ಸಂಸದರ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಕೇಂದ್ರ ಸಚಿವರು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಮತ್ತು ಎನ್‌ಡಿಎ ಸಂಸದರು, ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದಾರೆ. ಸಭೆಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರನ್ನು ನೆರೆದಿದ್ದವರು ಅದ್ಧೂರಿಯಾಗಿ ಸ್ವಾಗತಿಸಿದರು.

ಮೋದಿ ಅವರನ್ನು ತಮ್ಮ ನಾಯಕನನ್ನಾಗಿ (ಪ್ರಧಾನಿ) ಆಯ್ಕೆ ಮಾಡಲಾಗುತ್ತದೆ. ಇದಾದ ನಂತರ, ಪ್ರಧಾನಿ ಮೋದಿ ಅವರು ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಸೇರಿದಂತೆ ಮೈತ್ರಿಕೂಟದ ಹಿರಿಯ ನಾಯಕರೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ.

ಆಗ ತನ್ನನ್ನು ಬೆಂಬಲಿಸುವ ಸಂಸದರ ಪಟ್ಟಿಯನ್ನು ಮೋದಿ ರಾಷ್ಟ್ರಪತಿಗಳಿಗೆ ನೀಡಲಿದ್ದಾರೆ. ಅದೇ ಸಂದರ್ಭದಲ್ಲಿ ಹೊಸ ಸರ್ಕಾರ ರಚಿಸುವ ಹಕ್ಕನ್ನು ಸಹ ಮಂಡಿಸಲಿದ್ದಾರೆ. ಅದನ್ನು ಅಂಗೀಕರಿಸುವ ರಾಷ್ಟ್ರಪತಿಗಳು ಹೊಸ ಸರ್ಕಾರ ರಚಿಸಲು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಿದ್ದಾರೆ. ಇದಾದ ಬಳಿಕ ಪ್ರಧಾನಿ ಮೋದಿ ನೇತೃತ್ವದ ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳಲಿದೆ.

ಬಿಜೆಪಿ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಪಕ್ಷಗಳು ಉದ್ಘಾಟನಾ ಸಮಾರಂಭದ ಸಿದ್ಧತೆಗಳನ್ನು ಸಕ್ರಿಯವಾಗಿ ಮಾಡುತ್ತಿವೆ. ದೇಶದ ಮೊದಲ ಪ್ರಧಾನಿ ನೆಹರೂ ನಂತರ ಮೋದಿ ಅವರಿಗೆ ಸತತ 3ನೇ ಬಾರಿ ಪ್ರಧಾನಿಯಾಗುವ ಅವಕಾಶ ಸಿಕ್ಕಿದೆ ಎಂದು ಬಿಜೆಪಿ ಸಂಭ್ರಮಿಸುತ್ತಿದೆ.

ರಾಜಕೀಯ

“ಇದು ನಮ್ಮ ಸ್ಫೂರ್ತಿದಾಯಕ ಧೀಮಂತರಾದ ಛತ್ರಪತಿ ಶಿವಾಜಿ ಮಹಾರಾಜರು, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವವಾಗಿದೆ!”

ಮಹಾರಾಷ್ಟ್ರದ ಸಾಂಗ್ಲಿ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ವಿಶಾಲ್ ಪಾಟೀಲ್ ಅವರು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದಾಳುತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ವಿಶಾಲ್ ಪಾಟೀಲ್ ಅವರ ಸೇರ್ಪಡೆಯಿಂದ ಕಾಂಗ್ರೆಸ್ ಸಂಸದರ ಬಲ 100ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಇಂಡಿಯಾ ಮೈತ್ರಿಕೂಟದ ಬಲ 233ಕ್ಕೆ ಏರಿಕೆಯಾಗಿದೆ.

ಪಾಟೀಲ ಅವರ ಬೆಂಬಲವನ್ನು ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮಹಾರಾಷ್ಟ್ರದ ಜನರು ವಿಶ್ವಾಸಘಾತುಕತನ, ದುರಹಂಕಾರ ಮತ್ತು ವಿಭಜನೆಯ ರಾಜಕಾರಣವನ್ನು ಸೋಲಿಸಿದರು. ಇದು ನಮ್ಮ ಸ್ಫೂರ್ತಿದಾಯಕ ಧೀಮಂತರಾದ ಛತ್ರಪತಿ ಶಿವಾಜಿ ಮಹಾರಾಜರು, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವವಾಗಿದೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಾಂಗ್ಲಿಯಿಂದ ಆಯ್ಕೆಯಾದ ಸಂಸದ ವಿಶಾಲ್ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದನ್ನು ಸ್ವಾಗತಿಸುತ್ತೇನೆ. ಸಂವಿಧಾನ ಚಿರಾಯುವಾಗಲಿ!

ರಾಜಕೀಯ

ಮುಂಬೈ: ಲೋಕಸಭೆ ಚುನಾವಣೆಯ ಸೋಲಿನಿಂದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಸೃಷ್ಟಿಸಿದೆ. ಅವರನ್ನು ಬೆಂಬಲಿಸುವ 15 ಶಾಸಕರು ಶರದ್ ಪವಾರ್ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್‌ನಿಂದ ಬೇರ್ಪಟ್ಟಿದ್ದ ಅಜಿತ್ ಪವಾರ್ ಕೆಲವು ಶಾಸಕರೊಂದಿಗೆ ಬಿಜೆಪಿ ಸೇರಿದರು. ಅದರಲ್ಲಿ ಅಜಿತ್ ಪವಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಎನ್ ಡಿಎ ಮೈತ್ರಿಕೂಟ ಸೋತಿದೆ.

ಅಜಿತ್ ಪವಾರ್ ಕಡೆಯವರು 4 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಒಂದು ಸ್ಥಾನವನ್ನು ಮಾತ್ರ ಗೆದ್ದಿದ್ದಾರೆ. ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ವಿರುದ್ಧ ಸ್ಪರ್ಧಿಸಿದ್ದ ಅಜಿತ್ ಪವಾರ್ ಪತ್ನಿ ಹೀನಾಯ ಸೋಲು ಕಂಡಿದ್ದಾರೆ. ಶರದ್ ಪವಾರ್ ಅವರ ಕಡೆಯಿಂದ 8 ಸಂಸದರು ಆಯ್ಕೆಯಾಗಿರುವುದು ಗಮನಾರ್ಹ.

ಚುನಾವಣಾ ಸೋಲಿನಿಂದಾಗಿ ಅಜಿತ್ ಪವಾರ್ ನೇತೃತ್ವದ ಪಕ್ಷದಲ್ಲಿ ಗೊಂದಲ ಉಂಟಾಗಿದೆ ಎಂದು ಅಲ್ಲಿನ ವರದಿಗಳು ತಿಳಿಸಿವೆ. 15 ಶಾಸಕರು ಶರದ್ ಪವಾರ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಅವರ ತಂಡವನ್ನು ಸೇರಲು ಬಯಸಿದ್ದಾರೆ ಎನ್ನಲಾಗಿದೆ.

ಅವರನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುವುದರ ಬಗ್ಗೆ ಶರದ್ ಪವಾರ್ ಅವರೇ ನಿರ್ಧರಿಸಬೇಕೆಂದು ಶರದ್ ಪವಾರ್ ಬೆಂಬಲಿಗ ಜಯಂತ್ ಪಾಟೀಲ್ ಹೇಳಿದ್ದಾರೆ. ಗೊಂದಲದ ನಡುವೆಯೇ ಅಜಿತ್ ಪವಾರ್ ಪಕ್ಷದ ಪ್ರಮುಖ ನಾಯಕರುಗಳು ಹಾಗೂ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ರಾಜಕೀಯ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಬಹುದು ಎಂಬ ವರದಿಗಳು ಬಂದಿವೆ. ಅದೇ ವೇಳೆ ಈ ಬಗ್ಗೆ ಅವರೇ ನಿರ್ಧರಿಸಬೇಕು ಎಂದು ಪಕ್ಷ ಹೇಳಿದೆ.

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ 234 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಮಾತ್ರ 99 ಸ್ಥಾನಗಳನ್ನು ಪಡೆದಿದೆ. ಸರ್ಕಾರ ರಚಿಸಲು ಅಗತ್ಯ ಸ್ಥಾನಗಳು ಲಭ್ಯವಾಗದ ಕಾರಣ, ವಿರೋಧ ಪಕ್ಷದ ಸಾಲಿನಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ. ಮುಂದೆ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಯಾರು ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿದೆ.

ಈ ಹಿನ್ನೆಲೆಯಲ್ಲಿ, ರಾಹುಲ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಬೇಕೆಂಬ ಆಗ್ರಹ ಕಾಂಗ್ರೆಸ್ ನಲ್ಲಿ ಕೇಳಿ ಬಂದಿದೆ. ಈ ಬಗ್ಗೆ ಹಲವು ಸಂಸದರು ಮುಕ್ತವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷವೂ ರಾಹುಲ್ ವಿರೋಧ ಪಕ್ಷದ ನಾಯಕರಾಗಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದೆ. ಅದೇ ವೇಳೆ ಈ ಬಗ್ಗೆ ಅವರೇ ನಿರ್ಧರಿಸಬೇಕು ಎಂದೂ ಹೇಳಿದೆ.

ಸದ್ಯದಲ್ಲೇ ಕಾಂಗ್ರೆಸ್ ಸಂಸದರ ಸಭೆ ನಡೆಯಲಿದೆ. ಈ ಸಭೆಯ ನಂತರ ವಿರೋಧ ಪಕ್ಷದ ನಾಯಕ ಯಾರು ಎಂಬುದು ಸ್ಪಷ್ಟವಾಗಲಿದೆ ಎಂದು ದೆಹಲಿ ಮೂಲಗಳು ತಿಳಿಸಿವೆ.