ರಾಜ್ಯ Archives » Page 2 of 18 » Dynamic Leader
October 16, 2024
Home Archive by category ರಾಜ್ಯ (Page 2)

ರಾಜ್ಯ

ರಾಜ್ಯ

“ಮೂಲತಃ ಬಿಜೆಪಿಯು ಯಾವಾಗಲೂ ವಕ್ಫ್ ಬೋರ್ಡ್ ವಿರುದ್ಧವಾಗಿದೆ. ಇದರ ಮುಂದುವರಿದು ಈಗ ವಕ್ಫ್ ಮಂಡಳಿಯ ಹಕ್ಕುಗಳನ್ನು ಕಿತ್ತುಕೊಳ್ಳಲು ಮೋದಿ ಸರ್ಕಾರ ಮುಂದಾಗಿದೆ. ಬಿಜೆಪಿ ವಕ್ಫ್ ಬೋರ್ಡ್ ಅನ್ನು ರದ್ದುಪಡಿಸಲು ಬಯಸುತ್ತದೆ!”- ಕರ್ನಾಟಕ ಮುಸ್ಲಿಂ ಯುನಿಟಿ

“ಭಾರತದ ವಕ್ಫ್ 1954ರ ಕಾಯ್ದೆಯಡಿ ಸಂವಿಧಾನಬದ್ದ ಮಂಡಳಿಯಾಗಿ ರಚನೆ ಗೊಂಡಿದೆ. ಅಧಿಕೃತವಾಗಿ ಭಾರತ ಸರ್ಕಾರದಿಂದ ಸ್ಥಾಪಿತವಾದ ಭಾರತೀಯ ಶಾಸನಬದ್ದ ಸಂಸ್ಥೆಯಾಗಿದೆ. ಇಂದಿನ ವಕ್ಫ್ ಮಂಡಳಿಗೆ ಒಳಪಟ್ಟ ಎಲ್ಲಾ ಆಸ್ತಿಗಳು ಹಲವಾರು ದಶಕಗಳಿಂದ ಮುಸ್ಲಿಮರು ಧಾರ್ಮಿಕ ಅಥವಾ ದತ್ತಿ ಉದ್ದೇಶಗಳಿಗಾಗಿ ಶಾಶ್ವತವಾಗಿ ನೀಡಲ್ಪಟ್ಟ ದೇಣಿಗೆಗಳು, ಅದು ಚರ ಅಥವಾ ಸ್ಥಿರ ಆಸ್ತಿಗಳು ಎಲ್ಲವೂ ಶಾಶ್ವತ ಸಮರ್ಪಣೆಗಳೇ ಆಗಿವೆ.

ಇಡೀ ಭಾರತದ ಮುಸ್ಲಿಮರಿಂದ ಪಡೆದ ಅನುದಾನದಿಂದಲೇ ವಕ್ಫ್ ಆಸ್ತಿಗಳನ್ನು ಸಂಗ್ರಹಿಸಲಾಗಿದೆಯೇ ಹೊರತು ಯಾವುದೇ ರಾಜ್ಯಗಳ ಅಥವಾ ಕೇಂದ್ರ ಸರ್ಕಾರಗಳಿಂದ ಪಡೆದ ಆಸ್ತಿಗಳಲ್ಲ. ಇಂತಹ ವಕ್ಫ್ ಮಂಡಳಿಯ ಹಕ್ಕುಗಳನ್ನು ಕಿತ್ತುಕೊಳ್ಳಲು ಮೋದಿ ಸರ್ಕಾರ ಮುಂದಾಗಿರುವುದು ಖಂಡನೀಯ” ಎಂದು ಕರ್ನಾಟಕ ಮುಸ್ಲಿಂ ಯುನಿಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

“ವಕ್ಫ್ ಮಂಡಳಿಯ ಅಧಿಕಾರ ಮತ್ತು ಅದರ ಕಾರ್ಯಚಟುವಟಿಕೆಗೆ ತಿದ್ದುಪಡಿ ತರಲು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಸೂದೆಯನ್ನು ತರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಈ ನಿಲುವು ಸಂವಿಧಾನ ವಿರೋಧಿಯಾಗಿದೆ.

ಮೂಲತಃ ಬಿಜೆಪಿಯು ಯಾವಾಗಲೂ ವಕ್ಫ್ ಬೋರ್ಡ್ ವಿರುದ್ಧವಾಗಿದೆ. ಇದರ ಮುಂದುವರಿದು ಈಗ ವಕ್ಫ್ ಮಂಡಳಿಯ ಹಕ್ಕುಗಳನ್ನು ಕಿತ್ತುಕೊಳ್ಳಲು ಮೋದಿ ಸರ್ಕಾರ ಮುಂದಾಗಿದೆ. ಬಿಜೆಪಿ ವಕ್ಫ್ ಬೋರ್ಡ್ ಅನ್ನು ರದ್ದುಪಡಿಸಲು ಬಯಸುತ್ತದೆ. ಕೇಂದ್ರ ಸರ್ಕಾರವೇ ಈ ಮಸೂದೆಯ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದೆ.

ನಮ್ಮ ದೇಶದಲ್ಲಿ 1995ರ ವಕ್ಫ್ ಕಾಯ್ದೆ ಇದ್ದು, 2013ರಲ್ಲಿ ತಿದ್ದುಪಡಿ ಮಾಡಲಾಗಿದೆ. ಇದರ ಅಡಿಯಲ್ಲಿಯೇ ವಕ್ಫ್ ಆಸ್ತಿ ನಿರ್ವಹಣೆ ಮಾಡಲಾಗುತ್ತಿದೆ.

ಯಾವುದೇ ಭೂಮಿಯನ್ನು ತನ್ನ ಸ್ವಂತ ಆಸ್ತಿ ಎಂದು ಘೋಷಿಸುವ ವಕ್ಫ್ ಮಂಡಳಿಯ ಪರಮಾಧಿಕಾರವನ್ನು ಕಡಿತಗೊಳಿಸುವುದು ಸೇರಿದಂತೆ ವಕ್ಫ್ ಕಾಯ್ದೆಯಲ್ಲಿ ಹಲವಾರು ತಿದ್ದುಪಡಿಗಳನ್ನು ತರುವ ಮಸೂದೆ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿರುವುದು ಖಂಡನೀಯ.

ಈ ಹೊಸ ಮಸೂದೆಯು ವಕ್ಫ್ ಕಾಯ್ದೆಯಲ್ಲಿ ಸುಮಾರು 40 ತಿದ್ದುಪಡಿಗಳನ್ನು ಪ್ರಸ್ತಾಪಿಸುವ ಯೋಜನೆ ಹೊಂದಿದೆ. ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಈಗಲೇ ಅನುಮೋದನೆ ನೀಡಿದೆ ಎಂದು ವರದಿಗಳು ತಿಳಿಸಿವೆ.

ಕರಡು ಮಸೂದೆಯು ಪ್ರಸ್ತಾಪಿಸಿದ ಪ್ರಮುಖ ತಿದ್ದುಪಡಿಗಳಲ್ಲಿ ವಕ್ಫ್ ಬೋರ್ಡ್‌ಗಳ ಪುನರ್‌ ರಚನೆ, ಮಂಡಳಿಗಳ ಸಂಯೋಜನೆಯನ್ನು ಬದಲಾಯಿಸುವುದು, ಮಂಡಳಿಯು ವಕ್ಫ್‌ ಆಸ್ತಿ ಎಂದು ಘೋಷಿಸುವ ಮೊದಲು ಭೂಮಿಯ ಪರಿಶೀಲನೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಕಾಯ್ದೆಯ ಕೆಲವು ಷರತ್ತುಗಳನ್ನು ರದ್ದುಗೊಳಿಸುವುದು ಸೇರಿದೆ.

ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳ ಸಂಯೋಜನೆಯನ್ನು ಬದಲಾಯಿಸುವುದು ಮತ್ತು ವಕ್ಫ್ ಕಾಯ್ದೆಯ ಸೆಕ್ಷನ್ 9 ಮತ್ತು ಸೆಕ್ಷನ್ 14ಕ್ಕೆ ತಿದ್ದುಪಡಿ ತರುವುದು ಮತ್ತು ರಾಜ್ಯ ವಕ್ಫ್ ಮಂಡಳಿಗಳು ತನ್ನದೆಂದು ಹೇಳಿಕೊಂಡಿರುವ ವಿವಾದಿತ ಭೂಮಿಯನ್ನು ಹೊಸದಾಗಿ ಪರಿಶೀಲಿಸಲು ಮಸೂದೆಯು ಪ್ರಸ್ತಾಪಿಸಿದೆ ಎಂದು ತಿಳಿದು ಬಂದಿದೆ. ಇಂತಹ ಕೇಂದ್ರ ಸರಕಾರದ ನಿಲುವುಗಳನ್ನು ಕರ್ನಾಟಕ ಮುಸ್ಲಿಂ ಯುನಿಟಿಯ ವಿರೋಧವಿದೆ ಹಾಗೂ ಬಲವಾಗಿ ಖಂಡಿಸುತ್ತದೆ.

ಪ್ರಸ್ತುತ, ದೇಶದ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 30 ವಕ್ಫ್ ಮಂಡಳಿಗಳಿವೆ. 1995ರಲ್ಲಿ ವಕ್ಫ್ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಅದಕ್ಕೆ 2013ರಲ್ಲಿ ಕೆಲ ತಿದ್ದುಪಡಿ ತರಲಾಗಿದೆ. ಇವುಗಳ ನಿರ್ದೇಶನಗಳಲ್ಲಿಯೇ ಪ್ರಸ್ತುತ ಭಾರತ ವಕ್ಫ್ ಮಂಡಳಿ ಹಾಗು ರಾಜ್ಯ ವಕ್ಫ್ ಮಂಡಳಿಗಳು ಸಕ್ರಿಯವಾಗಿವೆ. ಇಂತಹ ಸಕ್ರಿಯ ಸರ್ಕಾರಿ ವಕ್ಫ್‌ ಕಾಯ್ದೆ ಮತ್ತು ಮಂಡಳಿಗಳನ್ನು ಬಿಜೆಪಿ ಮತ್ತು ಸಂಘಪರಿವಾರ ವಿರೋಧಿಸುತ್ತಾ ಬರುತ್ತಿರುವುದು ನಾಚಿಕೆಗೇಡು.

ವಕ್ಫ್‌ ಕಾಯ್ದೆಗೆ ತಿದ್ದುಪಡಿ ತಂದು ವಕ್ಫ್ ಮಂಡಳಿಗಳ ಅಧಿಕಾರವನ್ನು ಕಡಿತಗೊಳಿಸುವುದನ್ನು ವಕ್ಫ್ ಮಂಡಳಿಗೆ ಇರುವ ಕಾನೂನಿನ ಮಾನ್ಯತೆಯನ್ನು ಹಾಳುಮಾಡುವ ತಿದ್ದುಪಡಿಗಳನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ.

ಸದ್ಯ ಭಾರತ ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತರಲು ಬಯಸಿರುವ ಸುಮಾರು ನಲವತ್ತು ತಿದ್ದುಪಡಿಗಳಿಗೆ ನಮ್ಮ ವಿರೋಧಿವಿದೆ.

ವಕ್ಫ್ ಮಂಡಳಿಗೆ ಸಂಬಂದಿಸಿದಂತೆ ಈ ತಿದ್ದುಪಡಿ ಕಾಯ್ದೆಗಳು ಜಾರಿಯಾದಲ್ಲಿ ಮುಂದಿನ ದಿನಗಳಲ್ಲಿ ಈ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಲ್ಲಿ ದೊಡ್ಡಮಟ್ಟದ ಜನಾಂದೋಲನ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು” ಎಂದು ಕರ್ನಾಟಕ ಮುಸ್ಲಿಂ ಯುನಿಟಿ (KMU)ಯ ರಾಜ್ಯಾಧ್ಯಕ್ಷರಾದ ಜಬ್ಬಾರ ಕಲಬುರ್ಗಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಖಾಸಿಂ ಸಾಬ್ ಅವರು ಪತ್ರಿಕಾ ಹೇಳಿಕೆಯ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.

ರಾಜ್ಯ

ಬೆಂಗಳೂರು: ರಾಜ್ಯದ ಒಳಗೆ ಮತ್ತು ನೆರೆಯ ರಾಜ್ಯಗಳಲ್ಲಿಯೂ ಅತಿಯಾದ ಮಳೆ ಸುರಿಯುತ್ತಿದ್ದು, ರಾಜ್ಯದ ಯಾವುದೇ ಮೂಲೆಯಲ್ಲಿ ಸಮಸ್ಯೆ ತಲೆದೋರಿದರೂ ಅದನ್ನು ಎದುರಿಸಲು ಸಕಲ ತಯಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನೂ ನೀಡಲಾಗಿದೆ. ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಸಿದ್ಧರಿರುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಬಗ್ಗೆ ಜಿಲ್ಲಾಧಿಕಾರಿಗಳು ಎಚ್ಚರವಹಿಸಬೇಕು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ್ದೇನೆ ಎಂದಿದ್ದಾರೆ.

ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡುವಂತೆಯೂ ಸೂಚಿಸಿದ್ದಾರೆ.

ರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಕೋಮುವಾದ, ಭ್ರಷ್ಟಾಚಾರದಿಂದ ಬೇಸತ್ತ ಜನರು ಕಾಂಗ್ರೆಸ್ ಪಕ್ಷಕ್ಕೆ ಭಾರೀ ಬಹುಮತ ನೀಡಿ ಅಧಿಕಾರದಲ್ಲಿ ಕೂರಿಸಿದರು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜನರನ್ನು ವಂಚಿಸಿ ಭ್ರಷ್ಟಾಚಾರದಲ್ಲಿ ಭಾಗಿಯಾದ ವರದಿಗಳು ಬಹಿರಂಗವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದು ಕೋಮುವಾದದಷ್ಟೇ ಅಪಾಯಕಾರಿ ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯ ಅಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

ಅವರು ಮಾತನಾಡುತ್ತಾ, “ಕೋಮುವಾದದಂತೆ ಭೃಷ್ಟಾಚಾರವು ರಾಜ್ಯದ ಹಿತ ದೃಷ್ಟಿಯಿಂದ ಕೊನೆಗಾಣಬೇಕಾಗಿದೆ. ಮತ ನೀಡಿ ಚುನಾಯಿಸಿದ ಜನರ ಹಿತಕ್ಕಿಂತ ಪಕ್ಷದ ಹಿತಾಸಕ್ತಿ ಮತ್ತು ಸ್ವಾರ್ಥಹಿತಾಸಕ್ತಿಯೇ ಮುಖ್ಯ ಎಂಬುದು ಎದ್ದು ಕಾಣುತ್ತಿದೆ. ಇಲ್ಲಿ ಯಾರೂ ಸುಭಗರಲ್ಲ ಎಂದು ಮಾಧ್ಯಮಗಳ ವರದಿಗಳು ಬಹಿರಂಗ ಪಡಿಸುತ್ತದೆ. ಸಮುದಾಯದ ಅಭಿವೃದ್ಧಿ ನಿಗಮಗಳು ಸೇರಿದಂತೆ ಇನ್ನಿತರ ಮಂಡಳಿಗಳಲ್ಲಿ ಕಳೆದ ವರ್ಷಗಳಲ್ಲಿಯೇ ಸುಮಾರು ನಾಲ್ಕು ನೂರು ಕೋಟಿ ರೂಪಾಯಿಗೂ ಅಧಿಕವಾದ ಮೊತ್ತವನ್ನು ಅಕ್ರಮವಾಗಿ ಅನಧಿಕೃತ ಖಾತೆಗಳಿಗೆ ಜಮೆ ಮಾಡಿ, ಫಲಾನುಭವಿಗಳಿಗೆ ಸಲ್ಲಬೇಕಾದ ಹಣವನ್ನು ದುರುಪಯೋಗ ಪಡಿಸಲಾಗಿದೆ.

ಈ ಅವಧಿಯಲ್ಲಿ, ಸಿದ್ದರಾಮಯ್ಯರ ಅವಧಿಯೂ ಸೇರಿದಂತೆ ಜಗದೀಶ್ ಶೆಟ್ಟರ್, ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಕೂಡಾ ಮುಖ್ಯ ಮಂತ್ರಿಯಾಗಿದ್ದರು. ಈ ಬಗ್ಗೆಯೂ ತನಿಖೆ ನಡೆಯಬೇಕು” ಎಂದು ಹೇಳಿದ ತಾಹೇರ್ ಹುಸೇನ್, “ಈಗ ವಿಧಾನ ಸಭೆಯಲ್ಲಿ ಭೃಷ್ಟಾಚಾರ, ಅಕ್ರಮ ತಡೆಯುವ ಮಾತನಾಡುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಂದಾಯ ಸಚಿವರಾಗಿದ್ದಾಗ ಬೆಳೆ ನಷ್ಟ ಪರಿಹಾರದಲ್ಲೂ ಅಕ್ರಮ ನಡೆದಿದೆ. ಸಂಬಂಧವೇ ಇಲ್ಲದ ಅನ್ಯ ಖಾತೆದಾರರ ಖಾತೆಗೆ ಕೋಟ್ಯಾಂತರ ರೂಪಾಯಿ ಪಾವತಿಯಾದ ಬಗ್ಗೆ ಚರ್ಚೆ ನಡೆಯುತ್ತಿದೆ. ಪರಸ್ಪರ ಸೇಡಿನ ರಾಜಕೀಯ ಮಾಡಿ ಜನರನ್ನು ವಂಚಿಸಬೇಡಿ. ವಾಲ್ಮೀಕಿ ನಿಗಮದ ಹಗರಣ ಬೆಳಕಿಗೆ ಬಂದ ಮೇಲೆ ಬಿಜೆಪಿ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಪರಿಶೀಲನೆಗೆ ಸರ್ಕಾರ ಸಿದ್ಧವಾಗಿದೆ.

ಬಿಜೆಪಿ ವಿರುದ್ಧ ಆರೋಪ ಕೇಳಿ ಬಂದಾಗ ಕೇಂದ್ರದಿಂದ ಇಡಿ ಓಡೋಡಿ ರಾಜ್ಯಕ್ಕೆ ಬಂತು. ಈ ಎರಡೂ ನಡೆಯನ್ನು ಪರಸ್ಪರ ಟೀಕಿಸುತ್ತಿದ್ದಾರೆ. ಈಗ ಇಡಿ ಯ ಮೇಲೆ ಕೇಸನ್ನೂ ದಾಖಲಿಸಲಾಗಿದೆ. ಮುಖ್ಯಮಂತ್ರಿಗಳ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರುತ್ತಿರುವ ಆರೋಪಗಳು ಕೇಳಿ ಬರುತ್ತಿವೆ. ಇದು ಸಭ್ಯ ರಾಜಕಾರಣವಲ್ಲ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇದು ಉತ್ತಮ ಬೆಳವಣಿಗೆಯಲ್ಲ. ಭ್ರಷ್ಟಾಚಾರವನ್ನು ತೊಡೆದು ಹಾಕಲು, ಅಪರಾಧಿಗಳು ಕಾನೂನಿನಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡದೆ, ಪ್ರಾಮಾಣಿಕ ರೀತಿಯ ಪ್ರಯತ್ನ ಮಾಡಿ, ರಾಜ್ಯದ ಜನರ ಅಭಿವೃದ್ದಿಯತ್ತ ಗಮನಹರಿಸಲು ಆಡಳಿತ ಮತ್ತು ವಿರೋಧಪಕ್ಷ ಗಮನ ಹರಿಸಲಿ” ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯ ಶಿಕ್ಷಣ

ಭಾಗ:2

ಕಾಂ.ನವೀನ್ ಸೂರಿಂಜೆ ಅವರೇ, ನೀವು ಅಥವಾ ಈಗಿನ ‘ಕನ್ನಡ ಅಭಿವೃದ್ಧಿ ಪ್ರಾಧಿಕಾರದ – ಮದರಸಗಳಲ್ಲಿ ಕನ್ನಡಕಲಿಕೆ’  ನಿಲುವನ್ನು ಒಪ್ಪದಿರುವ ಎಡಪಂತಿಯ ಅಥವಾ ಜಾತ್ಯತೀತ ಕಾಂಗ್ರೆಸ್ಸಿಗರ ಗಮನಕ್ಕೆ ಈ ಒಂದು ಪ್ರತಿಕ್ರಿಯೆ!

ನವೀನ್ ಸೂರಿಂಜೆಯ ಅಭಿಪ್ರಾಯ: ಮದರಸಾದಲ್ಲಿ ‘ಕನ್ನಡ ಕಲಿಕೆ’ ಎಂಬ ಸರ್ಕಾರಿ ಕಾರ್ಯಕ್ರಮ ಯೋಜನೆಯನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರ ಏಕೆ ಕೈಬಿಟ್ಟಿತ್ತು ಎಂಬುದನ್ನು ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರು ಸ್ಪಷ್ಟವಾಗಿ ಹೇಳಬೇಕಿತ್ತು.

ಖಾಸಿಂ ಸಾಬ್ ಅವರ ಪ್ರತಿಕ್ರಿಯೆ: ಕೈ ಬಿಟ್ಟಿದ್ದಕ್ಕೆ ಕಾರಣ ಹಾಳಾಗಿ ಹೋಗಲಿ. ಮದರಸಾದಲ್ಲಿ ‘ಕನ್ನಡ ಕಲಿಕೆ’ ಎಂಬ ಸರ್ಕಾರಿ ಕಾರ್ಯಕ್ರಮ ಯೋಜನೆಯನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರ ಯಾಕೆ ಕೈಗೆತ್ತಿಕೊಂಡಿತು. ಈ ಕಾನ್ಸೆಪ್ಟ್, ಪ್ಲಾನ್ ಯೋಜನೆ ಪ್ರಾಧಿಕಾರಕ್ಕೆ ಬಂದಿದ್ದಾದರು ಯಾವಾಗ? ಹೇಗೆ? ಯಾರು ಈ ಪ್ರಾಧಿಕಾರಕ್ಕೆ ಮನವಿ ಮಾಡಿದ್ದರು. ಅಲ್ಲದೆ, ಈ ಯೋಜನೆಯನ್ನು ಕೈಬಿಡುವ ಮೊದಲು ಇದರ ಕುರಿತು ಸೌಜನ್ಯಕ್ಕಾದರೂ ಒಂದಷ್ಟು ಮುಸ್ಲಿಂ ಸಮುದಾಯದ ಪ್ರತಿನಿದಿಗಳ ಜೊತೆ ಚರ್ಚೆ, ಸಂವಾದ ನಡೆಸಬಹುಗಾಗಿತ್ತು. ಇದನ್ನು ಪ್ರಾಧಿಕಾರ ಮಾಡಲಿಲ್ಲ. ಇದು ತಪ್ಪಲ್ಲವೇ?

ನಿಮ್ಮ ಅಭಿಪ್ರಾಯ: “ವಿರೋಧ ಪ್ರಕಟವಾದ್ದರಿಂದ ಆ ವಿಷಯವನ್ನು ಕೈ ಬಿಡಲಾಗಿದೆ.”

ನಮ್ಮ ಪ್ರತಿಕ್ರಿಯೆ: ಇಂತಹ ಆರ್ಥ ಪೂರ್ಣ, ಮುಸ್ಲಿಂ ಸಮುದಾಯಕ್ಕೆ ಕನಿಷ್ಠ ಈ ಒಂದು ಕ್ಷೇತ್ರದಲ್ಲಾದರೂ ನ್ಯಾಯ, ಅವಕಾಶ ಸಿಗಬಹುದಾದ ಈ  ಯೋಜನೆಯನ್ನು ಖಂಡಿತವಾಗಿಯೂ ‘ಸಾಮಾಜಿಕ ನ್ಯಾಯ’ ಬಯಸುವ ಮುಸ್ಲಿಮರು ವಿರೋಧಿಸುತ್ತಿರಲಿಲ್ಲ. ಅಂದಹಾಗೆ ನಿಜವಾಗಿಯೂ ಇದಕ್ಕೆ ವಿರೋಧ ಪ್ರಕಟವಾಯಿತ? ಇದನ್ನು ವಿರೋಧಿಸಿದ ಒಂದಷ್ಟು ಮುಸ್ಲಿಂ ಸಂಘ / ಸಂಸ್ಥೆ / ಜಮಾಮ್ / ಗುಂಪು/ ಬರಹಗಾರರ / ಬುದ್ಧಿಜೀವಿಗಳ ಹೆಸರುಗಳನ್ನು ಹೇಳಿ? ಏಕೆಂದರೆ, ನಾನು ಸಹ ಒಬ್ಬ ಕರ್ನಾಟಕದ ಮುಸ್ಲಿಂ ಸೋಶಿಯಲ್ ಆಕ್ಟಿವಿಸ್ಟ್, ನಾನು ವಿರೋಧ ಮಾಡಲಿಲ್ಲ. ನನ್ನಂತಹ ನೂರಾರು ಕನ್ನಡಿಗ ಮುಸ್ಲಿಂ ಸುಮುದಾಯ ಪ್ರತಿನಿಧಿಗಳು ಈ ಪ್ರಾಧಿಕಾರದ ನಿಲುವಿನ ಪರವಾಗಿದ್ದೆವು. ಕೊನೆಗೂ ಇಂತಹ ಒಂದು ಮುಸ್ಲಿಮರ ಸಾಮಾಜಿಕ ನ್ಯಾಯದ ಸಣ್ಣ ಮಟ್ಟದ ಆಪರ್ಚೂನಿಟಿಯನ್ನು ಪ್ರಾಧಿಕಾರ ಮಿಸ್ ಮಾಡಿದೆ.

ನಿಮ್ಮ ಅಭಿಪ್ರಾಯ: “ಇದು ಅತಿಯಾಯ್ತು. ಕನ್ನಡ ಕಲಿಯುವುದಕ್ಕೂ ಮುಸ್ಲೀಮರ ವಿರೋಧವೇ?” ಎಂಬ ಪ್ರಶ್ನೆ / ಹೊಸ ಆರೋಪವನ್ನು ಮುಸ್ಲಿಮರು ಎದುರಿಸಬೇಕಾಗುತ್ತದೆ.

ನಮ್ಮ ಪ್ರತಿಕ್ರಿಯೆ: ಇದು ಒಂದು ಭೂತ. ಇಂತಹ ನೂರಾರು ಭೂತ, ಬೊಂಬೆಗಳನ್ನು ಕರ್ನಾಟಕದ ಜಾತ್ಯತೀತ / ಜನಪರ / ಪ್ರಗತಿಪರ / ಕ್ರಾಂತಿಕಾರಿ ಸಂಘಟನೆಗಳು ಮುಸ್ಲಿಮರಿಗೆ ನೀಡಿವೆ. ಇಲ್ಲೂ ಕೂಡು ಅದೇ ಮತ್ತೆ ಪರಿವರ್ತನೆಯಾಗಿದೆ. ಇಂತಹವುಗಳು ಬೇಡ. ಇಂತಹ ನಾಡಪರ ಯೋಜನೆಗಳಿಗೂ “ಮುಸ್ಲಿಮರ ವಿರೋಧವೇ?” ಅನ್ನುವ ಕೋಮುವಾದಿಗಳ ಪ್ರಶ್ನೆಗೆ ನಿಮ್ಮ ಈ ಗುಮಾನಿ ಸರಿಯಾಗಿದೆ. ಇದರ ನಡುವೆ ಒಂದಷ್ಟು ತಾಳ್ಮೆಯಿಂದ ಜಾತ್ಯತೀತ ಮನಸ್ಥರು ಒಂದನ್ನು ಯೋಚಿಸಬೇಕಿತ್ತು. ಮುಸ್ಲಿಮರ ಸ್ವಂತ ಅಭಿಪ್ರಾಯಗಳನ್ನು ಪಡೆಯದೆ ಇದರ ಸಾದಕ – ಬಾದಕಗಳ ನಿರ್ಣಯ, ಅಂಗಿಕಾರ, ತಿರಸ್ಕಾರಗಳನ್ನು ಮಾಡುವುದು ‘ಆರೋಗ್ಯಕರ ಸಮಾಜದ ಬುದ್ದಿಜೀವಿ’ಗಳ ಲಕ್ಷಣವಲ್ಲ. ಜೊತೆಗೆ, ಇಂತಹ ‘ಹೊಸ ಆರೋಪ’ಗಳು ಅಥವಾ ‘ಹಳೆಯ ಆರೋಪ’ಗಳು ಕರ್ನಾಟಕದ ಮುಸ್ಲಿಮರಿಗೆ ಹೊಸದಲ್ಲ. ಇಂತಹ ಕಲ್ಪಿತ ವಿರೋಧಿ – ಶತೃತ್ವಗಳು ಹೊರತಾಗಿಯೂ ನಾಡಿನ ಮುಸ್ಲಿಮರು ಅಭಿವೃದ್ಧಿ, ಸಮಾನ ಪಾಲು, ಸಮಾನ ಭಾಗವಹಿಸುವಿಕೆಗಳ ಕುರಿತು ಹೆಚ್ಚು ಚಿಂತಿತರಾಗಿದ್ದಾರೆ.

ನಿಮ್ಮ ಅಭಿಪ್ರಾಯ: ಮದರಸದಲ್ಲಿ ಸರ್ಕಾರಿ ಪ್ರಾಯೋಜಿತ ಕನ್ನಡ ಕಲಿಕಾ ಕಾರ್ಯಕ್ರಮವು ಈ ಕೆಳಕಂಡ ಅಪಾಯ / ಅಪ್ರಸ್ತುತೆಗಳನ್ನು ಎದುರಿಸಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಪ್ರಾಧಿಕಾರವು ಕಾರ್ಯಕ್ರಮವನ್ನು ರದ್ದುಗೊಳಿಸಿದೆ ಎಂದು ನಾವು ಭಾವಿಸುತ್ತೇವೆ.

ನಮ್ಮ ಪ್ರತಿಕ್ರಿಯೆ: ಅಪಾಯ / ಅಪ್ರಸ್ತುತೆಗಳನ್ನು ಎದುರಿಸಬೇಕಾಗುತ್ತದೆ ಅಂತ ಹೇಳಿದ್ದೀರಿ. ಯಾರಿಗೆ ಆಪಾಯ? ಹೇಗೆ?  ಮದರಸಗಳಲ್ಲಿ ಕನ್ನಡಕಲಿಕೆಯಿಂದ ಮುಸ್ಲಿಂ ಸಮುದಾಯಕ್ಕೆ, ಈ ಮಕ್ಕಳ ಭವಿಷ್ಯದಲ್ಲಿ ಆಗಬಹುದಾದ ಬದಲಾವಣೆ, ಸಿಗಬಹುದಾದ ಅವಕಾಶಗಳ ಕುರಿತು ನಿಮಗೂ ಜೊತೆಗೆ ಪ್ರಾಧಿಕಾರದ ಅಧ್ಯಕ್ಷರ ಗಮನಕ್ಕೂ ಇಲ್ಲ ಅಂತ ಕಾಣುತ್ತೆ. ಕರ್ನಾಟಕದ ಮದರಸಗಳಲ್ಲಿ ಕನ್ನಡ ಕಲಿಸಬಾರದೆ…!? ಇದು ಸಹ ಒಂದು ರೀತಿಯ ಸರ್ಕಾರದ ಪಾಲಿದಾರಿಕೆಯಲ್ಲಿನ ವಂಚನೆಯಲ್ಲವೇ?

ಇದನ್ನೂ ಓದಿ: Part-1: ಕರ್ನಾಟಕದ ಮದರಸಗಳಲ್ಲಿ ಕನ್ನಡ ಕಲಿಸಬಾರದೆ..!? – ಖಾಸಿಂ ಸಾಬ್ ಎ.

ನವೀನ್ ಸೂರಿಂಜೆ.., ನಾನು ಇಷ್ಟು ಹೇಳಿದ ನಂತರ ನೀವು ನೀಡಿದ ಎಂಟು ಕಾರಣ – ಸಮರ್ಥನೆಗಳಿಗೆ ನಾನು ಉತ್ತರಿಸುವುದು ಅಪ್ರಸ್ತುತ ಎಂಬುದು ನನ್ನ ಭಾವನೆ. ಅಲ್ಲದೆ, ಕರ್ನಾಟಕದ ಮದರಸಗಳು ಮೊದಲು ಅಧಿಕೃತವಾಗಿ ದಾಖಲಾಗಬೇಕು(ನೋಂದಣಿ ). ಅಲ್ಲಿ ಓದಿದ ವಿದ್ಯಾರ್ಥಿಗಳ ಅಂಕ ಪಟ್ಟಿ (Marks Card) ಎಲ್ಲಾ ಸರ್ಕಾರಿ ಉದ್ಯೋಗಗಳಿಗೆ ಅನ್ವಯವಾಗಬೇಕು. ಕರ್ನಾಟಕ ಮದರಸಗಳ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ಮದರಸಗಳ ಆಧುನೀಕರಣದ ಜೊತೆಗೆ ಪಠ್ಯ ಪುಸ್ತಕಗಳನ್ನು ಸರ್ಕಾರವೇ ನಿರ್ಧರಿಸಬೇಕು ಎಂಬುದು ನನ್ನ ಅಭಿಪ್ರಾಯ.

ಮುಸ್ಲಿಂ ವಿರೋಧಿ ಕೋಮುಶಕ್ತಿಗಳು ಮದರಸ ಮೇಲೆ ಸವಾರಿ ಮಾಡುವುದು ಇದು ಮೊದಲಲ್ಲ; ಕೊನೆಯೂ ಅಲ್ಲ. ಕೋಮುವಾದಿ ಬುದ್ದಿಗೆ ತನ್ನ ಅಜೆಂಡ ಜಾರಿಗೊಳಿಸಲು ನೆಪಗಳೇ ಬೇಕಾಗಿಲ್ಲ. 2b ಮುಸ್ಲಿಂ ಒಬಿಸಿ ಮೀಸಲಾತಿಯನ್ನು ಯಾವುದೆ ಪೂರ್ವ ಯೋಜನೆ ಇಲ್ಲದೆಯೆ ಒಂದೇ ದಿನದಲ್ಲಿ ಕಿತ್ತುಕೊಂಡವರಿಗೆ ಮದರಸ ಒಂದು ಲೆಕ್ಕವಲ್ಲ. ಕೋಮುವಾದಿಗಳು ಮುಂದೊಂದುದಿನ ಇದನ್ನು ದುರ್ಬಳಕೆಮಾಡಿ ಕೊಂಡಿಯಾರು ಎಂಬ ಗುಮಾನಿಗಳಿಗೆ ಯಡೆಮಾಡಿಕೊಟ್ಟರೆ ಬಹುಶಃ ಮುಸ್ಲಿಂ ಸಮುದಾಯ ನಾಡಿನಲ್ಲಿ ಸಾಮಾಜಿಕ ನ್ಯಾಯ – ಸಮಪಾಲು ವಡೆಯುವುದು ಅಸಾಧ್ಯ. ಕೋಮುವಾದಿಗಳು ಸಹ ಇದನ್ನೇ ಬಯಸುತ್ತಿದ್ದಾರೆ, ಸರ್ಕಾರದ ನಿಗಮ / ಮಂಡಳಿ / ಪ್ರಾಧಿಕಾರಗಳು ಸಹ ಪರೋಕ್ಷವಾಗಿ ಈ ನೀತಿಗಳ ಜಾರಿಯಲ್ಲಿಯೇ ಇವೆ.

ಸಾಧ್ಯವಾದರೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ತಂಡವು ಕರ್ನಾಟಕದ ಮದರಸಗಳ ಕುರಿತು ಸಮೀಕ್ಷೆ ನಡೆಸಿ ಕನ್ನಡ ಕಲಿಕೆಯ ಅಗತ್ಯ, ಭವಿಷ್ಯದ ಉದ್ಯೋಗಗಳ ಆದ್ಯತೆ, ಸಾಧ್ಯತೆ, ಈ ಮೂಲಕ ಅವಕಾಶಗಳ ಕುರಿತು ಒಂದು ಸಮಗ್ರ ಅಧ್ಯಯನ ನಡೆಸಲಿ. ಆ ಬಳಿಕ ನಿರ್ಧಾರ ಕೈಗೊಳ್ಳಲಿ. ಅದು ಬಿಟ್ಟು ಏಕಾ-ಏಕಿ ಮದರಸಗಳಲ್ಲಿ ಕಡ್ಡಾಯ ಕನ್ನಡ ಕಲಿಕೆ ಆದೇಶ ಜಾರಿ, ಇದರ ಬೆನ್ನಲ್ಲೆ ಈ ಆದೇಶವನ್ನು ಹಿಂಪಡೆದದ್ದು, ಇಂತಹ ಊಹಾ-ಪೋಹ ಚಲ್ಲಾಟಗಳು, ಕಲ್ಪಿತ ಸತ್ಯ-ಸುಳ್ಳುಗಳ ಆಧಾರದ ಯೋಜನೆಗಳನ್ನು ಹಮ್ಮಿಕೊಳ್ಳುವುದು ಬೇಡ.

ಮೊದಲು ಸಮೀಕ್ಷೆ ನಡೆಸಿ ಅದರ ಆಧಾರದ ಮೇಲೆ ಮದರಸಗಳಲ್ಲಿ ಕನ್ನಡ ಕಲಿಕೆಯ ಅಗತ್ಯವೋ, ಬೇಡವೋ ಎಂಬುದನ್ನು ನಿರ್ಧರಿಸಬೇಕು. ಸಂಸ್ಕೃತ, ಕ್ರಿಶ್ಚಿಯನ್, ಬುದ್ಧಿಸ್ಟ್ ಇತರೆ ಧಾರ್ಮಿಕ ಶಾಲೆಗಳಲ್ಲಿ  ಕನ್ನಡವನ್ನು ಕಲಿಸಲಾಗುತ್ತಿದೆಯೇ? ಇಂಗ್ಲಿಷ್ ಮೀಡಿಯಂ ಶಾಲೆಗಳಲ್ಲಿ ಕನ್ನಡ ಕಲಿಸ್ತಾರಾ? ಎಂಬ ವಿಷಯಗಳು, ಮದರಸದಲ್ಲಿ ಕನ್ನಡ ಕಲಿಸಬಾರದು ಎಂಬುದಕ್ಕೆ ಆಧಾರವಾಗಬಾರದು. ಇಲ್ಲೆಲ್ಲಾ ಕನ್ನಡ ಕಲಿಸಲಾಗುತ್ತೋ ಇಲ್ಲವೋ ಎಂಬುದನ್ನು ನೋಡಿಕೊಂಡು ಮದರಸದಲ್ಲಿ ಕಲಿಸಬೇಕೋ ಬೇಡವೋ ಎಂಬುದನ್ನು ನಿರ್ಧರಿಸುವುದು ಸರಿಯಲ್ಲ.

ಇಂಗ್ಲಿಷ್ ಮಾಧ್ಯಮಗಳ ಹಾವಳಿಯಿಂದ ಕನ್ನಡ ಕಲಿಕೆ ದುಸ್ತರವಾಗಿರುವ ಈ ಕಾಲಘಟ್ಟದಲ್ಲಿ, ಮುಸ್ಲಿಂ ಸಮುದಾಯದ ಮಕ್ಕಳಿಗೆ ಕನ್ನಡ ದಕ್ಕುವುದರಿಂದ ಲಾಭ ಹೆಚ್ಚು. ಈ ಮಕ್ಕಳು ಇಂಗ್ಲಿಷ್ ಅಥವಾ ಉರ್ದು ಮೀಡಿಯಂ ಶಾಲೆಗೆ ಹೋದರೂ ಕನ್ನಡ ಪ್ಲಸ್ ಆಗಿ ಅವರಿಗೆ ದಕ್ಕುತ್ತದೆ. ಮದರಸದಲ್ಲಿ ಕನ್ನಡ ಕಲಿಸಬೇಡಿ ಎನ್ನುವುದಕ್ಕಿಂತ ಕನ್ನಡ ಮೀಡಿಯಂನಲ್ಲಿ ಕಲಿತವರಿಗೆ ಉದ್ಯೋಗದಲ್ಲಿ ಆದ್ಯತೆ ಸಿಗುವಂತೆ, ಮದರಸದಲ್ಲಿ ಕನ್ನಡ ಕಲಿತ ಮಕ್ಕಳಿಗೆ ಉದ್ಯೋಗಗಳಲ್ಲಿ ಆದ್ಯತೆಗಳನ್ನು ಕಲ್ಪಿಸಲು ಸಾಧ್ಯವೆ ಎಂಬ ನಿಟ್ಟಿನ ಆರೋಗ್ಯಕರ ಚಿಂತನೆ ಹೆಚ್ಚು ಉತ್ತಮ ವಾಗಬಹುದು.

ಮದರಸದಲ್ಲಿ ಕನ್ನಡ ಕಲಿಯುವುದರಿಂದ ಮುಸ್ಲಿಮರಿಗೆ ಕನ್ನಡ ಬರುವುದಿಲ್ಲ ಎಂಬ ಸಂದೇಹ ಹೋಗುತ್ತದೆ ಅಂತಲೋ ಅಥವಾ ಮುಂದೆ ಕೋಮುವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ಮದರಸಗಳ ಮೇಲೆ ಸವಾರಿ ಮಾಡಲು ಅವಕಾಶ ನೀಡಿದಂತ್ತಾಗುತ್ತದೆ ಎಂದು ಊಹಿಸಿಕೊಂಡು ಕರ್ನಾಟಕದ ಮದರಸಗಳಲ್ಲಿ ಕನ್ನಡ ಕಲಿಕೆ ವಿರೋಧಿಸುವುದು ಸೂಕ್ತವಲ್ಲ. ಅಲ್ಲದೆ ಇಂತಹ ಭಯದ ಗುಮಾನಿಗಳಿಂದ ಮುಸ್ಲಿಮರಿಗೆ ಸಿಗಬಹುದಾದ ಇಂತಹ ಕಿಂಚಿತ್ತು ಅವಕಾಶಗಳನ್ನು ಸಹ ಕಸಿದು ಕೊಳ್ಳುವುದು ಬೇಡ.

• ಖಾಸಿಂ ಸಾಬ್, ಬೆಂಗಳೂರು.

ರಾಜ್ಯ ಶಿಕ್ಷಣ

ನವೀನ್ ಸೂರಿಂಜೆ., ಕರ್ನಾಟಕದ ಮದರಸ – ಕನ್ನಡ ಕಲಿಕೆ – ಕೋಮುವ್ಯಾದಿ ನುಸುಳುವಿಕೆ ಕುರಿತು ನಿಮ್ಮ ನೀಲುವನ್ನು ಬದಲಾವಣೆ ಮಾಡಿಕೊಳ್ಳಲು, ನೀವು ಇತ್ತೀಚೆಗೆ ಪ್ರಕಟಿಸಿದ ಎರಡು ಲೇಖನಗಳ ಎರಡು ಭಾಗಗಳಿಗೆ ನನ್ನ ಪ್ರಶ್ನೆ – ಪ್ರತಿಕ್ರಿಯೆಗಳು!

 ‘ಮದರಸಗಳಲ್ಲಿ ಕನ್ನಡ ಜಾರಿ’  ಸುತ್ತೋಲೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು.

 ‘ವಿರೋಧ ಪ್ರಕಟವಾದ್ದರಿಂದ ಈ ವಿಷಯನ್ನು ಕೈ ಬಿಡಲಾಗಿದೆ’ ಕನ್ನಡ ಅಭಿವೃದ್ಧಿ ಪ್ರಾಧಿಕಾರ,  ಅಧ್ಯಕ್ಷರು, ಪುರುಷೋತ್ತಮ ಬಿಳಿಮಲೆ.

ಈ ಪ್ರಾಧಿಕಾರಕ್ಕೆ ಮನವಿಸಲ್ಲಿಸಿದ್ದು ಯಾರು? ಇದಕ್ಕೆ ವಿರೋಧವ್ಯಕ್ತ ಪಡಿಸಿದ್ದು ಯಾರು?

ನವೀನ್ ಸೂರಿಂಜೆ: ‘ಮದರಸದಲ್ಲಿ ಕನ್ನಡ ಜಾರಿ’ ಇದು ಸರ್ಕಾರವೊಂದು ಮಾಡಬೇಕಾದ ಆಧ್ಯತೆಯ ಕೆಲಸವಲ್ಲ. ಮದರಸ ಮಾತ್ರವಲ್ಲ, ಸಂಸ್ಕೃತ ವೇದ ಪಾಠ ಶಾಲೆ, ಕ್ರಿಶ್ಚಿಯನ್ನರ ಆರಾಧನೆ (Adoration) ಕೇಂದ್ರಗಳಲ್ಲೂ ಕನ್ನಡ ಕಡ್ಡಾಯ ಮಾಡುವುದು ಸರ್ಕಾರಿ ಪ್ರಾಧಿಕಾರದ ಕೆಲಸವಲ್ಲ.

ಖಾಸಿಂ ಸಾಬ್: ಮದರಸದಲ್ಲಿ, ಸಂಸ್ಕೃತ ವೇದ ಪಾಠ ಶಾಲೆ, ಕ್ರಿಶ್ಚಿಯನ್, ಬುದ್ಧಿಸ್ಟ್, ಪಾರ್ಸಿ, ಜೈನ್… ಇತರೆ ಧರ್ಮಗಳ ಆರಾಧನಾ ಧಾರ್ಮಿಕ ವಿದ್ಯಾಭ್ಯಾಸ ಕೇಂದ್ರಗಳಲ್ಲಿ ಕನ್ನಡ ಜಾರಿ ಏಕೆ ಆಗ ಬಾರದು?

ನವೀನ್ ಸೂರಿಂಜೆ: ಮುಸ್ಲೀಮರ ಮೇಲಿನ ಸಾವಿರಾರು ಆರೋಪಗಳಿಗೆ ಮದರಸ ಕಾರಣವಾಗಿರುವಂತೆ ಮುಸ್ಲೀಮರಿಗೆ ಕನ್ನಡ ಬರಲ್ಲ ಎಂಬ ಆರೋಪಕ್ಕೂ ಮದರಸಾವೇ ಕಾರಣವಾಗಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರ ಕಂಡಿದ್ದು ವಿಪರ್ಯಾಸ!

ಖಾಸಿಂ ಸಾಬ್: ಮುಸ್ಲೀಮರ ಮೇಲಿನ ಸಾವಿರಾರು ಆರೋಪಗಳಿಗೆ ಮದರಸಾ ಕಾರಣವಾಗಿದೆ ಎಂದು ಯಾವ ವರದಿಗಳು ಹೇಳಿವೆ? ಮುಸ್ಲೀಮರಿಗೆ ಕನ್ನಡ ಬರಲ್ಲ ಎಂಬ ಆರೋಪಕ್ಕೂ ಮದರಸಾವೇ ಕಾರಣವಾಗಿ… ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರ ಯಾವಾಗ ಹೇಳಿದ್ದು , ಅದನ್ನು ಅಧಿಕೃತವಾಗಿ ಹೇಳಿದ್ದು ಯಾರು, ಯಾವ ಸರ್ಕಾರ, ಯಾವ ಆಯೋಗ, ಯಾವ ಸಮಿತಿ?

ನವೀನ್ ಸೂರಿಂಜೆ: ಕನ್ನಡ ಅಭಿವೃದ್ದಿ ಪ್ರಾಧಿಕಾರದ ಪುರುಷೋತ್ತಮ ಬಿಳಿಮಲೆಯವರು ಇಂದು ಮದರಸದೊಳಗೆ ಕಾಳಜಿಯಿಂದ ನುಗ್ಗಿ ಕೆಲಸ ಮಾಡುತ್ತಾರೆ ಎಂದಿಟ್ಟುಕೊಳ್ಳೊಣಾ. ಮುಂದೆ ಬರುವ ಬಿಜೆಪಿ ಸರ್ಕಾರಕ್ಕೆ ಇದು ರಹದಾರಿ ಆಗಿರುವುದಿಲ್ಲವೇ?

ಖಾಸಿಂ ಸಾಬ್: ನಿಮ್ಮ ಈ ಗುಮಾನಿ ‘ಮುಸ್ಲಿಮರ ಕಲ್ಯಾಣದ ಕುರಿತಾದ ಮುಸ್ಲಿಂ ಏತರ ಜಾತ್ಯತೀತ ಬುದ್ದಿಜೀವಿಗಳ’ ಗುಮಾನಿಯೆ ಆಗಿದೆ. ಇಂತಹ ಬುದ್ದಿಜೀವಿಗಳ ಗುಮಾನಿಗಳಿಂದ ಮುಸ್ಲಿಂ ಸಮುದಾಯಕ್ಕೆ ಆದ ಲಾಭಕ್ಕಿಂತ ನಷ್ಟವೇ ಹೆಚ್ಚು.

ನವೀನ್ ಸೂರಿಂಜೆ: ಉತ್ತರಾಖಂಡ ಸರ್ಕಾರ ಈಗಾಗಲೇ ಮದರಸಾದಲ್ಲಿ ಶ್ರೀರಾಮ ಕತೆ ಪಾಠ ಮಾಡಲು ವಕ್ಫ್ ಇಲಾಖೆಯ ಮೂಲಕ ಚಿಂತನೆ ನಡೆಸಿದೆ ಎಂಬ ಸುದ್ದಿ ಇದೆ. ಜನವರಿ 25, 2024 ರಂದು ಸುದ್ದಿಗೋಷ್ಠಿ ನಡೆಸಿರುವ ಉತ್ತರಾಖಂಡ ವಕ್ಫ್ ಅಧ್ಯಕ್ಷ ಶಾದಾಬ್ ಅವರು “ಮದರಸ ಆಧುನೀಕರಣ ಕಾರ್ಯಕ್ರಮದ ಭಾಗವಾಗಿ ಉತ್ತರಾಖಂಡ ವಕ್ಫ್ ಮಂಡಳಿಗೆ ಸಂಯೋಜಿತವಾಗಿರುವ ಮದರಸಗಳಿಗೆ ಭಗವಾನ್ ಶ್ರೀರಾಮನ ಅಧ್ಯಯನವನ್ನು ಹೊಸ ಪಠ್ಯಕ್ರಮದಲ್ಲಿ ಪರಿಚಯಿಸಲಾಗುವುದು” ಎಂದು ತಿಳಿಸಿದ್ದಾರೆ.

ಖಾಸಿಂ ಸಾಬ್: ಅಲ್ಲಿನ ರಾಜ್ಯ ಸರಕಾರ ಶ್ರೀರಾಮ ಕತೆ, ಹನುಮಾನ್ ಚಾಲೀಸಾ, ಸಂವಿಧಾನದ ಪೂರ್ವ ಪೀಠಿಕೆ, ಅಂಬೇಡ್ಕರ್ ಅವರ ಜೀವನ ಚರಿತ್ರೆ, ಟಿಪ್ಪುವಿನ ಹುತಾತ್ಮ ಕಥೆಗಳನ್ನು ಭೋದಿಸುತ್ತಿದೆಯೇ ಎಂಬುದು ಸಮಸ್ಯೆಯಲ್ಲ. ಅಲ್ಲಿ ಕಲಿತ ಮಕ್ಕಳಿಗೆ ಅವರು ಕಲಿಯುತ್ತಿರುರ ಅರೇಬಿಕ್ ಭಾಷೆಯಲ್ಲಿ ಆದುನಿಕ, ಕಾಂಪಿಟೇಟಿವ್ ವಿದ್ಯಾಭ್ಯಾಸದ ಜೊತೆಗೆ ನೇಟಿವ್ ಅಧಿಕೃತ ನಾಡ ಭಾಷೆ ಕಲಿಸಲಾಗುತ್ತಿದೆಯೇ ಎಂಬುದು ಮುಖ್ಯವಾಗಬೇಕು.

ನವೀನ್ ಸೂರಿಂಜೆ: ಕರ್ನಾಟಕ ಸರ್ಕಾರವೂ ಭವಿಷ್ಯದಲ್ಲಿ ಇಂತದ್ದೊಂದು ಕೃತ್ಯಕ್ಕೆ ಈಗಲೇ ಅಡಿಪಾಯ ಹಾಕಿಕೊಡುತ್ತದೆಯೇ?

ಖಾಸಿಂ ಸಾಬ್: ಇಲ್ಲಿ ಮುಖ್ಯವಾಗಬೇಕಾದದ್ದು ಕರ್ನಾಟಕದಲ್ಲಿ ಕೋಮುವಾದ ತಡೆಯುವ, ಅದು ನುಸುಳಲು ಅವಕಾಶವಿರುವ ಎಲ್ಲಾ ತೊರೆಗಳನ್ನು ಮುಚ್ಚುವ ಜವಾಬ್ದಾರಿ. ಅವಕಾಶಗಳಿಗಿಂತ, ಮದರಸಗಳಲ್ಲಿ ಓದಿ ಶಿಕ್ಷಣ / ಸರ್ಟಿಫಿಕೇಟ್ ಪಡೆದ ಮಕ್ಕಳ ಭವಿಷ್ಯ ಮುಖ್ಯವಾಗಬೇಕಿದೆ.

ನವೀನ್ ಸೂರಿಂಜೆ: ಮದರಸಾದಲ್ಲಿ ಕನ್ನಡ ಶಿಕ್ಷಣ ನೀತಿಯ ಕರಡು ಪ್ರತಿಯನ್ನು ಬಿಳಿಮಲೆ ಸಿದ್ದಗೊಳಿಸಿದ್ದಾರೆ?

ಖಾಸಿಂ ಸಾಬ್: ದಯವಿಟ್ಟು ಈ ನೀತಿಯ ಕರಡು ಪ್ರತಿಯನ್ನು ಬಹಿರಂಗ ಪಡಿಸಲಿ; ಇದರ ಆಗು-ಹೋಗುಗಳ ಕುರಿತು ಸಾರ್ವಜನಿಕ ಚರ್ಚೆಯಾಗಲಿ. ಪ್ರಮುಖವಾಗಿ ಮುಸ್ಲಿಂ ಏತರ ಜಾತ್ಯತೀತ ಬುದ್ದಿಜೀವಿಗಳು ಇದರಲ್ಲಿ ಹೆಚ್ಚು ಪಾತ್ರ ವಹಿಸುವುದು ಬೇಡ. ಒಟ್ಟಾರೆ ಸಮಗ್ರ ಮುಸ್ಲಿಂ ಸಮುದಾಯದ ನಡುವೆ ಚರ್ಚೆ, ಅಭಿಪ್ರಾಯಕ್ಕೆ ಬಿಡಿ.

ನವೀನ್ ಸೂರಿಂಜೆ: ನೀತಿಯ ಕರಡು ಪ್ರತಿಯ ಮದರಸ ಧಾರ್ಮಿಕ ಶಿಕ್ಷಣದಲ್ಲಿ ಕಡ್ಡಾಯ ಕಲಿಕೆ ಎನ್ನುವುದು ಸರ್ಕಾರಿ ನೀತಿಯಾದರೆ ಮುಂದೊಂದು ದಿನ ಬಿಜೆಪಿ ಸರ್ಕಾರ ಬಂದಾಗ ‘ಮದರಸಾ ಕೇಸರಿಕರಣದ ವಿರುದ್ದ ಹೋರಾಟ’ ಎಂದು ಮುಸ್ಲಿಂ ಮಕ್ಕಳು ಹೊಸ ಸಂಘರ್ಷ ಎದುರಿಸಲು ಸಿದ್ದರಾಗಬೇಕು.

ಖಾಸಿಂ ಸಾಬ್: ಹೊಸ ಸಂಘರ್ಷ ಹುಟ್ಟುತ್ತದೆ ಎಂಬ ಕಾರಣಕ್ಕೆ ಅವಕಾಶ, ಸವಲತ್ತು, ನ್ಯಾಯಗಳನ್ನು ಕಳೆದು ಕೊಳ್ಳಲು ಸಾಧ್ಯವಿಲ್ಲ. ಹೋರಾಟ ಮಾಡೋಣ ಇದನ್ನು ಎದುರಿಸಲು ನಿಮ್ಮಂತ ಜಾತ್ಯತೀತ ವ್ಯಕ್ತಿಗಳು ಹೇಗೂ ಇರುತ್ತಿರಿ.

ನವೀನ್ ಸೂರಿಂಜೆ: ಮುಸ್ಲೀಮರಿಗೆ ಕನ್ನಡ ಬರಲ್ಲ ಎನ್ನುವುದಕ್ಕೂ ಮದರಸಕ್ಕೂ ಏನು ಸಂಬಂಧ? ಕನ್ನಡ ಬಾರದೇ ಇರುವ ಮುಸ್ಲಿಮರು ಇದ್ದಾರೆ ಎಂದರೆ ಅದಕ್ಕೆ ಕಾರಣ ಶಿಕ್ಷಣದ ಕೊರತೆಯೇ ಹೊರತು ಮದರಸಾವಲ್ಲ. ಕನ್ನಡ ಬಾರದ ತುಳುವರೂ, ಹಿಂದೂಗಳೂ, ಕ್ರಿಶ್ಚಿಯನ್ನರೂ ಅಷ್ಟೇ ಸಂಖ್ಯೆಯಲ್ಲಿ ಇದ್ದಾರೆ. ಭಯೋತ್ಪಾದನೆ, ಹವಾಲ ಹಣ, ಲವ್ ಜಿಹಾದ್, ಆಯುಧ ಸಂಗ್ರಹ, ಕೋಮುಗಲಭೆ ಹೀಗೆ ಎಲ್ಲದಕ್ಕೂ ಮದರಸ ಕಾರಣ ಎಂಬ ಆರೋಪದ ಬಳಿಕ ಈಗ ಮುಸ್ಲಿಮರಿಗೆ ಕನ್ನಡ ಬರಲ್ಲ ಎಂಬ ಆರೋಪಕ್ಕೂ ಮದರಸವೇ ಕಾರಣ ಎಂದು ಪ್ರಾಧಿಕಾರ ಘೋಷಿಸಿದಂತಿದೆ.

ಖಾಸಿಂ ಸಾಬ್: ನಿಜಕ್ಕೂ ಇದನ್ನು ಪ್ರಧಿಕಾರ ಘೋಷಣೆ ಮಾಡಿದೆಯೇ…!?

ನವೀನ್ ಸೂರಿಂಜೆ: ಧಾರ್ಮಿಕ ವಿಚಾರಗಳಲ್ಲಿ ಸರ್ಕಾರ ಅನಗತ್ಯ ಮೂಗು ತೂರಿಸಿ ರಾಡಿ ಎಬ್ಬಿಸಬಾರದು.

ಖಾಸಿಂ ಸಾಬ್: ಮದರಸ (.. ಅಥವಾ ಸಂಸ್ಕೃತ ವೇದ ಪಾಠ ಶಾಲೆ, ಕ್ರಿಶ್ಚಿಯನ್ ಧಾರ್ಮಿಕ ಪಾಠ ಶಾಲೆ) ಗಳ ಶೈಕ್ಷಣಿಕ ವ್ಯವಸ್ಥೆ, ವಿದ್ಯಾರ್ಥಿಗಳ ಭವಿಷ್ಯ, ಸ್ಕಿಲ್ ಡೆವಲಪ್ಮೆಂಟ್, ಮಾಡ್ರನ್ ಎಜುಕೇಶನ್ ಸಿಸ್ಟಮ್, ಕನ್ನಡ, ಇಂಗ್ಲಿಷ್ ಕಲಿಕೆ ಮುಂತಾದ ಮೂಲ ಭೂತ ವಿಶೇಷಗಳಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡುವುದರಲ್ಲಿ ತಪ್ಪೇನು.

ನವೀನ್ ಸೂರಿಂಜೆ: ಧಾರ್ಮಿಕ ಸಂಸ್ಥೆಗಳು ಸಂವಿಧಾನ ಬದ್ದವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂದು ಖಾತ್ರಿ ಪಡಿಸಿಕೊಳ್ಳುವುದಷ್ಟೇ ಸರ್ಕಾರದ ಕೆಲಸವೇ ಹೊರತು ಅವರ ಮೂಲಭೂತ ಹಕ್ಕುಗಳನ್ನು ಕಸಿಯುವುದಲ್ಲ.

ಖಾಸಿಂ ಸಾಬ್: ಮದರಸ ಎಂಬುದು ಒಂದು ಸಂಪೂರ್ಣ ಧಾರ್ಮಿಕ ಸಂಸ್ಥೆಯಲ್ಲ; ಅದು ಧಾರ್ಮಿಕ ಸಂಸ್ಥೆಯ ಒಂದು ಭಾಗವಾದ ಕಲಿಕಾ ಅಂಗ. ಎಜುಕೇಶನಲ್ ವಿಂಗ್ ಅಷ್ಟೇ. ಮದರಸವೇ ಮುಸ್ಲಿಮರ ಎಲ್ಲವನ್ನೂ ತೀರ್ಮಾನಿಸುವ ಕೇಂದ್ರವಲ್ಲ. ಖಾತ್ರಿ – ಗ್ಯಾರಂಟಿ ಪಡಿಸಿಕೊಳ್ಳುವುದಷ್ಟೇ ಸರ್ಕಾರದ ಕೆಲಸವೇ… ಇವುಗಳ ಪ್ರಗತಿ – ಅಭಿವೃದ್ಧಿ – ಆದುನಿಕರಣಗಳು ಬೇಡವೇ. ಇದು ಸರ್ಕಾರದ ಹೊಣೆಗಾರಿಕೆ ಅಲ್ಲವೇ?

ನವೀನ್ ಸೂರಿಂಜೆ: ಸಂಸ್ಕೃತ ವೇದ ಪಾಠ ಶಾಲೆಯನ್ನು ಬಿಟ್ಟು ಮದರಸಾವನ್ನೇ ಗುರಿ ಮಾಡಿರುವ ಹಿಂದೆ ‘ಅವರು ಲೆಫ್ಟಿಸ್ಟ್, ಕಾಂಗ್ರೆಸ್ ಆದರೂ ಮುಸ್ಲೀಮರನ್ನೂ ಬಿಟ್ಟಿಲ್ಲ ಮಾರಾಯ್ರೆ’ ಎಂದು ಅನ್ನಿಸಿಕೊಳ್ಳುವ ಇರಾದೆಗಳು ಮುಸ್ಲೀಮರನ್ನು ಭವಿಷ್ಯದಲ್ಲಿ ಅಪಾಯಕ್ಕೆ ದೂಡುತ್ತದೆ.

ಖಾಸಿಂ ಸಾಬ್: ಕರ್ನಾಟಕ ರಾಜ್ಯ ಸರ್ಕಾರದ ಈ ನಿಲುವಿನಿಂದ ರಾಜ್ಯ ಮದರಸಗಳಿಗೆ ಯಾವುದೇ ಇರಾದೆಗಳು, ಗುಮಾನಿಗಳು ಇಲ್ಲ ಮಾರಾಯ್ರೆ.

ನವೀನ್ ಸೂರಿಂಜೆ: ಮದರಸಾಗಳು ಕನ್ನಡ ಸೇರಿದಂತೆ ಯಾವ ಭಾಷೆಯನ್ನಾದರೂ ಕಲಿಸಲಿ. ಪ್ರಾಧಿಕಾರಕ್ಕೆ ಆಸಕ್ತಿ ಇದ್ದರೆ ಅಂತಹ ಮದರಸಾಗಳಿಗೆ ಅನುದಾನ, ಪ್ರೋತ್ಸಾಹ, ಪ್ರಶಸ್ತಿ ನೀಡಲಿ. ಬದಲಾಗಿ, ಸರ್ಕಾರವೇ ನೀತಿಯ ಮೂಲಕವಾಗಿ ಮದರಸ ಪ್ರವೇಶ ಮಾಡುವುದು ಮುಸ್ಲೀಮರ ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿ.

ಖಾಸಿಂ ಸಾಬ್: ಇದು ಹೇಗೆ ಮುಸ್ಲಿಮರ ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿಯೋ,..ಅರ್ಥವಾಗುತ್ತಿಲ್ಲ.

ಈ ಚರ್ಚೆಯ ಸಾರಾಂಶ: ಕರ್ನಾಟಕ ರಾಜ್ಯದಲ್ಲಿನ ಎಲ್ಲ ಮದರಸಗಳಲ್ಲಿ ಕನ್ನಡ ಕಲಿಕೆ ಜಾರಿಯಾಗಲಿ ಎಂಬುದಷ್ಟೇ ಆಗಿದೆ!

ಖಾಸಿಂ ಸಾಬ್ ಎ. ಬೆಂಗಳೂರು.

ರಾಜ್ಯ ಶಿಕ್ಷಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್‌ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಅವರಿಗೆ ಧನ್ಯವಾದಗಳು” ಎಂದು ಹೇಳಿದರು.

“ವೈಜ್ಞಾನಿಕವಾಗಿ, ವೈಚಾರಿಕವಾಗಿ ಮಕ್ಕಳು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗಲು ಸಾಧ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ” ಎಂದು ಹೇಳಿದರು.

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ರಾಜ್ಯ

ಬೆಂಗಳೂರು: ವಾಲ್ಮಿಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಕುರಿತಾದ ನಿಯಮ‌ 69ರ ಅಡಿಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.  

“ವಾಲ್ಮಿಕಿ ನಿಗಮದ ಪ್ರಕರಣದಲ್ಲಿ ಆರ್.ಅಶೋಕ್, ವಿಜಯೇಂದ್ರ ನನ್ನ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಮಾಜಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ವಿಶೇಷ ತನಿಖಾ ತಂಡವನ್ನು ಹಿಂದಕ್ಕೆ ಪಡೆಯಿರಿ ಎಂದು ಹೇಳಿದ್ದಾರೆ. ನೀವು ಗೃಹ ಮಂತ್ರಿ ಆಗಿದ್ದಾಗಲೂ ಎಸ್.ಐ.ಟಿ ಬಗ್ಗೆ ಹೀಗೆ ಹೇಳಿದ್ದೀರಾ? ಎಂಬುದನ್ನು ಅವರಲ್ಲಿ ಕೇಳಬಯಸುತ್ತೇನೆ” ಎಂದು ಹೇಳಿದರು.

“ಮೇ 26 ರಂದು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡರು. ಇವರು ತಮಿಳುನಾಡಿನ ಬೋವಿ ಸಮುದಾಯದವರು. ವಿರೋಧ ಪಕ್ಷದವರು ಸಾವಿರ ಸಾರಿ ದಲಿತ, ದಲಿತ ಎಂದು ಮಾತನಾಡಿದ್ದಾರೆ” ಎಂದರು.

“ಸಂವಿಧಾನದಲ್ಲಿ ಪರಿಶಿಷ್ಟ ಜಾತಿ/ವರ್ಗ ಎನ್ನುವ ಉಲ್ಲೇಖ ಇದೆ. ಇಬ್ಬರೂ ಸೇರಿ 24.1% ಜನಸಂಖ್ಯೆ ಇದ್ದಾರೆ. ಇವರ ಅಭಿವೃದ್ಧಿ ಆದರೆ ಮಾತ್ರ ಸಮ ಸಮಾಜದ ಆಶಯ ಈಡೇರುತ್ತದೆ. ಈ ಸಮುದಾಯಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಬರುತ್ತದೆ. ಅಸಮಾನತೆ ಇರುವವರೆಗೂ ಸಮಾನತೆ ಸಾಧ್ಯವಿಲ್ಲ. ಸಂವಿಧಾನ ಬಂದು 70 ವರ್ಷ ಆದರೂ ಸಮಾನತೆ ಸಿಕ್ಕಿಲ್ಲ. ಇದನ್ನು ಸರಿಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ವಾಲ್ಮಿಕಿ, ಬೋವಿ, ಆದಿಜಾಂಭವ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಸೇರಿ ಹಲವು ಅಭಿವೃದ್ಧಿ ನಿಗಮಗಳನ್ನು ಆರಂಭಿಸಲಾಗಿದೆ. ಈ ಎಲ್ಲಾ ನಿಗಮಗಳ ಉದ್ದೇಶ ಆಯಾ ಸಮುದಾಯಗಳನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿಸುವುದೇ ಆಗಿದೆ” ಎಂದು ಹೇಳಿದರು.

“2013ರ ಡಿಸೆಂಬರ್ ನಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆ ಜಾರಿಗೆ ಕೊಟ್ಟಿದ್ದು ನಮ್ಮ‌ ಸರ್ಕಾರ. ಬಜೆಟ್‌ನ 24.1% ಅಭಿವೃದ್ಧಿ ಹಣ ಈ ಸಮುದಾಯದ ಅಭಿವೃದ್ಧಿಗೆ ಮೀಸಲಿಡಬೇಕು ಎಂದು ಕಡ್ಡಾಯ ಮಾಡಿದ್ದು ನಾನು. ವಿಪಕ್ಷಗಳು ಬರೀ ಮೊಸಳೆ ಕಣ್ಣೀರು ಹರಿಸುತ್ತಿವೆ” ಎಂದು ಹೇಳಿದರು.

“1949ರ ನವೆಂಬರ್ 25 ರಂದು ಸಂವಿಧಾನ ಸಭೆಯಲ್ಲಿ ಮಾಡಿದ ಭಾಷಣದಲ್ಲಿ, ‘ಜನವರಿ 26-1950ಕ್ಕೆ ಸಂವಿಧಾನ ಜಾರಿಗೆ ಬರುತ್ತಿದೆ. ನಾವೆಲ್ಲರೂ ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ’ ಎಂದು ಚರಿತ್ರಾರ್ಹವಾದ ಭಾಷಣದಲ್ಲಿ ಹೇಳಿದ್ದರು. ನಾವು ಪ್ರಜಾಪ್ರಭುತ್ವ ಒಪ್ಪಿಕೊಂಡಿದ್ದೇವೆ. ಇಲ್ಲಿ ಇನ್ನೂ ಆರ್ಥಿಕವಾಗಿ, ಸಾಮಾಜಿಕವಾಗಿ ಅಸಮಾನತೆ ಉಳಿದುಕೊಂಡಿರುವುದರಿಂದ ಅದನ್ನು ನಿವಾರಣೆ ಮಾಡದಿದ್ದರೆ ಜನರೇ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆಂಬ ಎಚ್ಚರಿಕೆ ಕೊಟ್ಟಿದ್ದರು” ಎಂದು ಹೇಳಿದರು.

“ಇಡೀ ದೇಶದಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆ ತಂದವರು ನಾವು. ಪರಿಶಿಷ್ಠ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ ಈ ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ? ಇಡೀ ದೇಶದಲ್ಲಿ ನಾವು ಮಾತ್ರ ಇಂಥಾ ಪರಿಣಾಮಕಾರಿ ಕಾಯ್ದೆಯನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳಿಗಾಗಿ ಜಾರಿ ಮಾಡಿದ್ದೇವೆ.

ಗುತ್ತಿಗೆಯಲ್ಲೂ ಎಸ್.ಸಿ / ಎಸ್.ಟಿ ಸಮುದಾಯಗಳಿಗೆ ಮೀಸಲಾತಿ ಜಾರಿ ಮಾಡಿರುವುದು ನಾವು ಮಾತ್ರ. ಇಂಥದ್ದನ್ನು ಬಿಜೆಪಿಯವರು ಇದುವರೆಗೂ ಏಕೆ ಜಾರಿ ಮಾಡಿಲ್ಲ?” ಎಂದು ಪ್ರಶ್ನಿಸಿದರು.

“ಎಸ್.ಸಿ / ಎಸ್.ಟಿ ಉದ್ದಿಮೆಗಳಿಗೆ / ಉದ್ಯಮಗಳಿಗೆ ವಿಶೇಷ ಸಾಲದ ಸವಲತ್ತು , KIADB ಭೂಮಿ ವಿಚಾರದಲ್ಲಿ ಈ ಸಮುದಾಯಗಳಿಗೆ ಅನುಕೂಲ ಮಾಡಿ ಕಾನೂನು ತಂದವರು ನಾವು. ನಾವು ಎಸ್.ಸಿ / ಎಸ್.ಟಿ ಸಮುದಾಯದವರ ವಿರೋಧಿಯಾಗಿದ್ದರೆ ಇಷ್ಟೆಲ್ಲವನ್ನೂ ಜಾರಿ ಮಾಡುತ್ತಿದ್ದೆವಾ?

ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ಧರು. ವಿಪಕ್ಷಗಳಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ” ಎಂದು ಕಿಡಿಕಾರಿದರು.

ರಾಜ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗದವರು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಇಂದು ವಿಧಾನಸೌಧದಲ್ಲಿ ಭೇಟಿಯಾಗಿ ಅಭಿನoದನೆ ಸಲ್ಲಿಸಿದರು.

ಆಗಸ್ಟ್‌ 1 ರಿಂದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡುವುದಾಗಿ ನಿರ್ಧರಿಸಲಾಗಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ ವರದಿ ಜಾರಿ ಕುರಿತು ಸಂಪುಟ ಒಪ್ಪಿಗೆ ಸೂಚಿಸಿತ್ತು.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಲಾದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗದವರು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನoದನೆ ಸಲ್ಲಿಸಿದರು. ಉಪಮುಖ್ಯಮಂತ್ರಿಗಳಾದ  ಡಿ.ಕೆ.ಶಿವಕುಮಾರ್ ಹಾಗೂ ಸಂಘದ ಪದಾಧಿಕಾರಿಗಳು ಈ ವೇಳೆ ಹಾಜರಿದ್ದರು.

ರಾಜ್ಯ

ಬೆಂಗಳೂರು: “ಸರಣಿ ಭ್ರಷ್ಟಾಚಾರದ ಸರದಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕರ್ಮಕಾಂಡ ಅಗೆದಷ್ಟು ಆಳವಾಗಿದೆ; ಬಗೆದಷ್ಟು ಹೊರಬರುತ್ತಿದೆ” ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

“ಸಹಕಾರ ಇಲಾಖೆಯ ಅಪೆಕ್ಸ್ ಬ್ಯಾಂಕ್ ಗಳಲ್ಲಿ ಬಹುಕೋಟಿ ರೂಪಾಯಿ ಮೊತ್ತದ ಬೃಹತ್ ಹಗರಣ ಬೆಳಕಿಗೆ ಬಂದಿದ್ದು, ಹಗರಣದ ತನಿಖೆ ನಡೆಸುವಂತೆ ಮಾನ್ಯ ಹೈಕೋರ್ಟ್ ತಾಕೀತು ಮಾಡಿದೆ” ಎಂದು ಹೇಳಿರುವ ಆರ್.ಅಶೋಕ್,

“ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ತಮ್ಮ ಸರ್ಕಾರದಲ್ಲಿ ಹಣಗರಣವಿಲ್ಲದ ಇಲಾಖೆ ಇಲ್ಲ ಎಂಬ ನಾಚಿಕೆಗೇಡು ಪರಿಸ್ಥಿತಿ ಇದೆ. ಇನ್ನಾದರೂ ರಾಜೀನಾಮೆ ಕೊಟ್ಟು ಕರ್ನಾಟಕದ ಮರ್ಯಾದೆ ಉಳಿಸಿ” ಎಂದು ಕಿಡಿಕಾರಿದ್ದಾರೆ.

ರಾಜ್ಯ

ಕಲಬುರಗಿ:  ಕಳೆದ ಒಂದೂವರೆ ವರ್ಷದಿಂದ ಮುಚ್ಚಲ್ಪಟ್ಟಿದ್ದ ಇಂದಿರಾ ಕ್ಯಾಂಟೀನನ್ನು ಮತ್ತೆ ತೆರೆದಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಬಡವರಿಗೆ, ವಿಧ್ಯಾರ್ಥಿಗಳಿಗೆ ಕೂಲಿ ಕಾರ್ಮಿಕರಿಗೆ ಆಸ್ಪತ್ರೆಯ ಬಡರೋಗಿಗಳಿಗೆ ಆಶಾ ಕಿರಣವಾಗಿದ್ದ ಇಂದಿರಾ ಕ್ಯಾಂಟೀನ್ ಗೆ ಬೀಗ ಜಡಿದಿದ್ದು ಸ್ಥಳೀಯರಲ್ಲಿ ಬೇಸರ ತಂದಿತ್ತು.

ಇದರ ವಿರುದ್ಧವಾಗಿ ವೆಲ್ಪೇರ್ ಪಾರ್ಟಿಯು ತೀವ್ರ ಸ್ವರೂಪದ ಹೋರಾಟ ಮಾಡಿದರ ಫಲವಾಗಿ, ಸರ್ಕಾರ ಮತ್ತು ಜಿಲ್ಲಾಡಳಿತವು ಇಂದಿರಾ ಕ್ಯಾಂಟೀನನ್ನು ಪುನರಾರಂಭಗೊಳಿಸಿದೆ. ಈ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕಲಬುರಗಿ ಜಿಲ್ಲಾ ಶಾಖೆ ಕ್ರತಜ್ಞತೆ ಸಲ್ಲಿಸುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.