ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
February 2023 » Page 6 of 7 » Dynamic Leader
October 23, 2024
Home 2023 February (Page 6)
ದೇಶ ರಾಜಕೀಯ ಸಿನಿಮಾ

ಕೇರಳ: ಪಠಾಣ್ ಚಿತ್ರ ರೂ.700 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿರುವುದನ್ನು ಎತ್ತಿ ತೋರಿಸಿರುವ ಪ್ರಕಾಶ್ ರಾಜ್, ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಹೇಳಿದವರನ್ನು ತೀವ್ರವಾಗಿ ಟೀಕಿಸಿದ್ದಾರೆ.

ನಟ ಪ್ರಕಾಶ್ ರಾಜ್ ಹಲವು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಟೀಕಿಸುತ್ತಲೇ ಬಂದಿದ್ದಾರೆ. ಈ ಕಾರಣಕ್ಕಾಗಿ, ಅವರು #JustAsking ಎಂಬ ಹ್ಯಾಶ್‌ಟ್ಯಾಗ್ ಅನ್ನು ರಚಿಸಿಕೊಂಡು ಹಲವಾರು ಟೀಕೆಗಳನ್ನು ಪ್ರಸ್ತುತಪಡಿಸುತ್ತಿದ್ದಾರೆ. ಬಾಲಿವುಡ್‌ನ ಬಾದ್‌ಶಾ ಎಂದು ಕರೆಯಲ್ಪಡುವ ಶಾರುಖ್ ಖಾನ್ ಅಭಿನಯದ `ಝೀರೋ’ ಚಿತ್ರವು 2018 ರಲ್ಲಿ ಬಿಡುಗಡೆಯಾಗಿತ್ತು. ಆ ನಂತರ ಚಿತ್ರಗಳು ಬಿಡುಗಡೆಯಾಗಿರಲಿಲ್ಲ. ಸುಮಾರು 3 ವರ್ಷಗಳ ನಂತರ ಅವರು ನಾಯಕನಾಗಿ ನಟಿಸಿರುವ ಪಠಾಣ್ ಚಿತ್ರವು ಬಿಡುಗಡೆಯಾಗಿ ಕಲೆಕ್ಷನ್ ಹಿಟ್ ಹೊಡೆಯುತ್ತಿದೆ.

ಮೊದಲು, ಚಿತ್ರದ ‘ಬೇಷರಂ ರಂಗ್’ ಹಾಡು ಬಿಡುಗಡೆಯಾಗಿತ್ತು. ಇದು ಅಭಿಮಾನಿಗಳನ್ನು ತುಂಬಾ ಪ್ರಭಾವಿಸಿತು. ಅದರೊಂದಿಗೆ ವಿವಾದವನ್ನೂ ಸೃಷ್ಟಿಸಿತು. ‘ದೀಪಿಕಾ ಪಡುಕೋಣೆ ಕೇಸರಿ ಬಿಕಿನಿಯಲ್ಲಿ ತೋರಿಸಿರುವುದು ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದೆ’ ಎಂದು ಆರೋಪಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆದವು. ಹಾಡು ಸಾಂಸ್ಕೃತಿಕವಾಗಿ ಆಕ್ಷೇಪಾರ್ಹವಾಗಿರುವುದರಿಂದ ಚಿತ್ರವನ್ನು ಬ್ಯಾನ್ ಮಾಡುವಂತೆ ‘boycott pathaan’ ಎಂಬ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್ ಆಯಿತು. ಅದರಲ್ಲೂ ‘ದೀಪಿಕಾ ಕೇಸರಿ ಬಣ್ಣದ ಬಿಕಿನಿ ಯಾಕೆ ತೊಟ್ಟರು’? ಎಂಬ ವಿವಾದವನ್ನು ಸೃಷ್ಟಿಸಲಾಯಿತು.

ಇದೇ ವೇಳೆ ಪಠಾಣ್ ಹಾಡಿನ ವಿರುದ್ಧದ ಕಾಮೆಂಟ್‌ಗಳನ್ನು ಪ್ರಕಾಶ್‌ರಾಜ್ ಖಂಡಿಸಿದರು. ಸಚಿವ ನರೋತ್ತಮ್ ಅವರ ಸಂದೇಶವನ್ನು ಹಂಚಿಕೊಂಡ ಪ್ರಕಾಶ್ ರಾಜ್, ‘ಇದು ಅಸಹ್ಯಕರವಾಗಿದೆ. ಈ ರೀತಿಯ ಬಣ್ಣ ಕುರುಡುತನವನ್ನು ಎಷ್ಟು ದಿನ ಸಹಿಸಿಕೊಳ್ಳಬೇಕು’ ಎಂದು ಪ್ರಶ್ನಿಸಿದ್ದರು.

ಅದೇ ರೀತಿ ಫುಟ್ಬಾಲ್ ವಿಶ್ವಕಪ್‌ನೊಂದಿಗೆ ದೀಪಿಕಾ ಪಡುಕೋಣೆ ಇರುವ ಫೋಟೋವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಹಾಕಿದ ನಟ ಪ್ರಕಾಶ್ ರಾಜ್, ‘ದೀಪಿಕಾ ಪಡುಕೋಣೆ ಬಗ್ಗೆ ನನಗೆ ಹೆಮ್ಮೆಯಿದೆ’ ಎಂದು ಕೇಳಿದ್ದರು. ಮತ್ತು ‘ಬೇಷರಂ ರಂಗ್’ ಹಾಡನ್ನು ಪ್ರತಿಭಟಿಸಿದ ಮತಾಂಧರು ಈಗ ವಿಶ್ವಕಪ್ ಅನ್ನು ಬಹಿಷ್ಕರಿಸುತ್ತಾರೆಯೇ ಎಂದೂ ಕೇಳಿದ್ದರು.

ಈ ಹಿನ್ನಲೆಯಲ್ಲಿ ಇದೀಗ ಮತ್ತೊಮ್ಮೆ ಪ್ರಶ್ನೆಯನ್ನು ಎತ್ತಿದ್ದಾರೆ ನಟ ಪ್ರಕಾಶ್ ರಾಜ್. ಪಠಾಣ್ ಚಿತ್ರ ರೂ.700 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿರುವುದನ್ನು ಎತ್ತಿ ತೋರಿಸಿರುವ ಅವರು ‘ಪಠಾಣ್ ಚಿತ್ರ ರೂ.700 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಆದರೆ ಈ ಚಿತ್ರವನ್ನು ವಿರೋಧಿಸಿದವರು ನರೇಂದ್ರ ಮೋದಿ ಚಿತ್ರಕ್ಕೆ 30 ಕೋಟಿ ಕೂಡ ಕಲೆಕ್ಷನ್ ಮಾಡಲು ಸಾಧ್ಯವಾಗಿಲ್ಲ.

ಇದಕ್ಕೆ ಮೊದಲು ಕಾಶ್ಮೀರ ಫೈಲ್ಸ್ ಎಂಬ ಪ್ರಚಾರ ಸಿನಿಮಾ ಮಾಡಿದರು. ಈ ಚಿತ್ರವನ್ನು ನೋಡಿದ ಅಂತರಾಷ್ಟ್ರೀಯ ಕಲಾವಿದರು ಉಗುಳಿ ಹೋಗಿದ್ದಾರೆ. ಆದರೂ ಇವರಿಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ. ‘ಕಾಶ್ಮೀರ್ ಫೈಲ್ಸ್’ ಅನ್ನು ನಿರ್ದೇಶಿಸಿದ ವಿವೇಕ್ ಅಗ್ನಿಹೋತ್ರಿ ಈ ಚಿತ್ರಕ್ಕೆ ಏಕೆ ಆಸ್ಕರ್ ನೀಡಲಿಲ್ಲ? ಎಂದು ಕೊರಗುತ್ತಿರುವುದು ವಿಚಿತ್ರವಾಗಿದೆ. ಈ ಸಿನಿಮಾಗೆ ಆಸ್ಕರ್ ಇಲ್ಲ; ಭಾಸ್ಕರ್ ಕೂಡ ಸಿಗುವುದಿಲ್ಲ’. ಎಂದು ಪ್ರಕಾಶ್ ರಾಜ್ ಹೇಳಿದಾರೆ.

ವಿದೇಶ

ಪ್ರಪಂಚದ ಅಂತ್ಯದ ಮೊದಲು ಕೊನೆಯ ಸೆಲ್ಫಿಗಳು ಹೇಗಿರುತ್ತದೆ ಎಂದು AI (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಭವಿಷ್ಯ ನುಡಿದಿರುವ ಭಯಾನಕ ಫೋಟೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ.

ವಿಜ್ಞಾನದ ಬೆಳವಣಿಗೆಯಿಂದ ಇಲ್ಲಿಯವರೆಗೆ ಪ್ರತಿಯೊಬ್ಬರ ಮನಸ್ಸಿನಲ್ಲಿರುವ ಪ್ರಮುಖ ಪ್ರಶ್ನೆಗಳೆಂದರೆ, ಈ ಜಗತ್ತು ಕೊನೆಗೊಳ್ಳುತ್ತದೆಯೇ? ಜಗತ್ತು ಕೊನೆಗೊಳ್ಳುತ್ತಿದ್ದರೆ, ಅದು ಹೇಗೆ ಸಂಭವಿಸುತ್ತದೆ? ಆಗ ನಾವೆಲ್ಲರೂ ಏನಾಗುತ್ತೇವೆ? ಇಂತಹ ಹಲವು ಪ್ರಶ್ನೆಗಳು ಸಾಮಾನ್ಯವಾಗಿ ಎಲ್ಲರ ಮನಸಲ್ಲೂ ಮೂಡುತ್ತವೆ.

ಇದಕ್ಕೆ ಪ್ರತಿಕ್ರಿಯೆಯಾಗಿ AI ಭವಿಷ್ಯ ನುಡಿದ ಕೆಲವು ಭಯಾನಕ ಫೋಟೋಗಳು ಅಂತರ್ಜಾಲದಲ್ಲಿ ಈಗ ವೈರಲ್ ಆಗುತ್ತಿವೆ.

AI (ಕೃತಕ ಬುದ್ಧಿವಂತಿಕೆ) ತಂತ್ರಜ್ಞಾನವು ಮಾನವನಿಗೆ ಸಮಾನವಾಗಿ ಯೋಚಿಸುವ ಹಂತಕ್ಕೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಮುಂದಿನ ದಿನಗಳಲ್ಲಿ AI ತಂತ್ರಜ್ಞಾನವು ಮನುಷ್ಯರನ್ನು ನಿಯಂತ್ರಿಸುವ ಸಾಧ್ಯತೆಯಿದೆ ಎಂಬ ವದಂತಿಗಳೂ ಇವೆ. ಅದಕ್ಕೆ ಉದಾರಣೆಯಾಗಿ ChatGPT ಎಂಬ AI ಪ್ರಸ್ತುತ ಪ್ರಪಂಚದಾದ್ಯಂತ ಬಹಳ ಜನಪ್ರಿಯವಾಗುತ್ತಿದೆ.

ಇಂತಹ ಕೃತಕ ಬುದ್ಧಿವಂತಿಕೆ ತಂತ್ರಜ್ಞಾನವು ಜನರನ್ನು ಅಚ್ಚರಿ ಗೊಳಿಸುತ್ತಿರುವಾಗ, ಪ್ರಪಂಚದ ಅಂತ್ಯದ ಮೊದಲು ಕೊನೆಯ ಸೆಲ್ಫಿ ತೆಗೆದುಕೊಂಡರೆ ಹೇಗಿರುತ್ತದೆ ಎಂಬ ಫೋಟೋವನ್ನು AI ರಚಿಸಿದೆ. ಆ ಫೋಟೋ ಶೂಟ್‌ಗಳನ್ನು ಒಮ್ಮೆ ನೀವೇ ನೋಡಿ.

 

ದೇಶ

ತಮಿಳುನಾಡು: ಶಿವಕಾಶಿ ಜಿಲ್ಲೆ, ಪುದುಕೊಟ್ಟೈ ಪಂಚಾಯಿತಿ, ಗಣೇಶ ದೇವಸ್ಥಾನ ಬೀದಿಯಲ್ಲಿ 60,00೦ ಲೀಟರ್ ಸಾಮರ್ಥ್ಯದ ಮೇಲ್ಮಟ್ಟದ ಜಲಾಶಯದ ಸಂಗ್ರಹಾಗಾರವಿದೆ. ಪಂಚಾಯಿತಿ ಆಡಳಿತದ ವತಿಯಿಂದ ಟ್ಯಾಂಕ್ ಶುಚಿಗೊಳಿಸಲು ನಿನ್ನೆ ಕುಡಿಯುವ ನೀರನ್ನು ಸಂಪೂರ್ಣವಾಗಿ ಹರಿಸಲಾಗಿತ್ತು. ಈ ಹಿನ್ನಲೆಯಲ್ಲಿ ಕಾರ್ಮಿಕರು ಇಂದು ಟ್ಯಾಂಕ್ ಸ್ವಚ್ಛಗೊಳಿಸಲು ಹೋದಾಗ ಟ್ಯಾಂಕ್ ಒಳಗೆ ನಾಯಿಯ ಮೃತದೇಹ ಕಂಡುಬಂದಿತು.

ಈ ಬಗ್ಗೆ ಪಂಚಾಯಿತಿ ಕೌನ್ಸಿಲ್‌ಗೆ ತಿಳಿಸಲಾಯಿತು. ಅದರಂತೆ ಪಂಚಾಯಿತಿ ಅಧ್ಯಕ್ಷೆ ಕಾಳೀಶ್ವರಿ, ಎಂ.ಪುದುಪಟ್ಟಿ ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಶಿವಕಾಶಿ ಉಪ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಬಳಿಕ ಜಲಾಶಯದೊಳಗೆ ಬಿದ್ದಿದ್ದ ನಾಯಿಯ ಮೃತದೇಹವನ್ನು ಪಶುವೈದ್ಯಾಧಿಕಾರಿಗಳು ಹೊರತೆಗೆದು ಶವ ಪರೀಕ್ಷೆಗೆ ಒಳಪಡಿಸಲಾಯಿತು. ಪಂಚಾಯಿತಿ ಅಧ್ಯಕ್ಷೆಯ ದೂರಿನ ಮೇರೆಗೆ ಎಂ.ಪುದುಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸತ್ತ ನಾಯಿಯ ಶವವನ್ನು ಕುಡಿಯುವ ತೊಟ್ಟಿಗೆ ಹಾಕಿದವರು ಯಾರು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ನೀರಿನ ಮೇಲ್ಮಟ್ಟದ ಜಲಾಶಯದ ತೊಟ್ಟಿಯಲ್ಲಿ ಕಂಡುಬಂದ ನಾಯಿಯ ಮೃತದೇಹ.

ಕೆಲವು ದಿಗಳ ಹಿಂದೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ವೇಂಗೈವಯಲ್ ಪ್ರದೇಶದ ಪರಿಶಿಷ್ಟ ನಿವಾಸಿಗಳು ವಾಸಿಸುತ್ತಿದ್ದ ಕಾಲೋನಿಯಲ್ಲಿ ಕುಡಿಯುವ ನೀರಿನ ಮೇಲ್ಮಟ್ಟದ ಜಲಾಶಯದ ತೊಟ್ಟಿಯಲ್ಲಿ ಮಾನವ ತ್ಯಾಜ್ಯ ಇರುವುದು ತಮಿಳುನಾಡಿನಾದ್ಯಂತ ಬಾರಿ ಸಂಚಲನ ಮೂಡಿಸಿತ್ತು. ಈ ಘಟನೆ ಸಂಬಂಧ ಸಿಬಿಸಿಐಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವೇಂಗೈವಯಲ್ ನಲ್ಲಿ ನಡೆದ ಅಮಾನವೀಯ ಘಟನೆಯಿಂದ ಜನ ಹೊರಬರಲು ಪ್ರಯತ್ನಿಸುತ್ತಿರುವ ಈ ಸಂದರ್ಭದಲ್ಲಿ, ಶಿವಕಾಶಿ ಬಳಿಯ ಪುದುಕೋಟೈ ಎಂಬ ಗ್ರಾಮದಲ್ಲಿ ಮೇಲ್ಮಟ್ಟದ ನೀರಿನ ತೊಟ್ಟಿಯಲ್ಲಿ ನಾಯಿಯ ಶವ ಬಿದ್ದಿರುವುದು ಜನರ ಆಘಾತಕ್ಕೆ ಕಾರಣವಾಗಿದೆ. ಸತ್ತ ನಾಯಿಯ ಶವವನ್ನು ತೊಟ್ಟಿಗೆ ಹಾಕಿದ ಅಪರಿಚಿತ ವ್ಯಕ್ತಿಗಳ ಕುರಿತು ಕಂದಾಯ ಇಲಾಖೆ ಹಾಗೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪರಿಶಿಷ್ಟರ ಕಾಲೋನಿಗಳಲ್ಲಿರುವ ನೀರಿನ ಮೇಲ್ಮಟ್ಟದ ಜಲಾಶಯ ತೊಟ್ಟಿಗಳಲ್ಲಿ ಮಾನವ ತ್ಯಾಜ್ಯ ಬೆರಸುವುದು, ಸತ್ತ ನಾಯಿಯ ಶವವನ್ನು ತೊಟ್ಟಿಗೆ ಎಸೆಯುವುದೆಲ್ಲ ಅವರ ಏಳಿಗೆಯನ್ನು ಸಹಿಸಿಕೊಳ್ಳಲಾಗದವರು ಮಾಡುವ ಹೀನ ಕೃತ್ಯವಾಗಿದೆ. ಮಾನವೀಯತೆ ಇರುವ ಯಾರೂ ಇಂತಹ ನೀಚ ಕೆಲಸಕ್ಕೆ ಕೈ ಹಾಕುವುದಿಲ್ಲ. ಜಾತಿ ತಾರತಮ್ಯ ಇಂದಿಗೂ ಜೀವಂತವಾಗಿರುವುದು ಸತ್ಯ. ಆದರೆ ಅದು ಈ ರೀತಿ ವಿಕೃತವಾಗಿರಬಾರದು. ಮಾನಸಿಕ ಕಾಯಿಲೆಯಿಂದ ನೆರಳುತ್ತಿರುವವರ ವಿಕೃತ ಮನಸ್ಥಿತಿ ಬದಲಾಗಬೇಕು.

ಕಂದಾಯ ಇಲಾಖೆ ಹಾಗೂ ಪೊಲೀಸರು ಮಾಡುತ್ತಿರುವ ತನಿಖೆ ತ್ವರಿತವಾಗಿರಬೇಕು; ಶಿಕ್ಷೆ ಕಠಿಣವಾಗಿರಬೇಕು.

ರಾಜಕೀಯ ರಾಜ್ಯ

2009 ರಿಂದ ದೇಶದಲ್ಲಿ 71 ಸಂಸದರ ಆಸ್ತಿ ಮೌಲ್ಯವು ಸರಾಸರಿ ಶೇ.286 ರಷ್ಟು ಹೆಚ್ಚಾಗಿದೆ.

ನವದೆಹಲಿ: ಫೆಡರೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪ್ರಕಟಿಸಿದ ವರದಿಯಲ್ಲಿ, 2009 ರಿಂದ 2019 ರವರೆಗೆ ಲೋಕಸಭೆಗೆ ಮರು ಆಯ್ಕೆಯಾದ 71 ಸಂಸದರ ಆಸ್ತಿ ಮೌಲ್ಯವು ಸರಾಸರಿ ಶೇ.286 ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದೆ.

ಈ ಪೈಕಿ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿಯ ರಮೇಶ ಜಿಗಜಿಣಗಿ ಅವರ ಆಸ್ತಿ ಮೌಲ್ಯವೇ ಅತಿ ಹೆಚ್ಚಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

2009ರಲ್ಲಿ ಅವರ ಒಟ್ಟು ಆಸ್ತಿ ರೂ.1.18 ಕೋಟಿ, 2014ರಲ್ಲಿ ರೂ.8.94 ಕೋಟಿ ಮತ್ತು 2019ರಲ್ಲಿ ರೂ.50.41 ಕೋಟಿಗೆ ಏರಿಕೆಯಾಗಿದೆ. ಇದು ಒಟ್ಟು ಶೇ. 4,189 ಆಗಿದೆ. ಲೋಕಸಭೆ ಚುನಾವಣೆ ವೇಳೆ ಅವರು ಸಲ್ಲಿಸಿರುವ ಅಫಿಡವಿಟ್‌ಗಳ ಮೂಲಕ ಇದು ಬೆಳಕಿಗೆ ಬಂದಿದೆ ಎಂದು ವರದಿ ತಿಳಿಸಿದೆ.

ಅವರು ಕರ್ನಾಟಕದ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ ಮತ್ತು 2016 ರಿಂದ 2019 ರವರೆಗೆ ಕೇಂದ್ರದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯದ ಜಂಟಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಬಿಜೆಪಿಯ ಮತ್ತೊಬ್ಬ ಸಂಸದ ಪಿ.ಸಿ.ಮೋಹನ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸತತವಾಗಿ 3ನೇ ಬಾರಿಗೆ ಆಯ್ಕೆಯಾಗಿರುವ ಇವರು 2009ರಲ್ಲಿ ಅವರ ಆಸ್ತಿ ರೂ.5.37 ಕೋಟಿಯಾಗಿತ್ತು. 2019ರಲ್ಲಿ 10 ವರ್ಷಗಳಲ್ಲಿ ರೂ. 75.55 ಕೋಟಿ ಹೆಚ್ಚಾಗಿದೆ ಇದು ಶೇ.1,306 ಆಗಿರುತ್ತದೆ.

ಬೆಂಗಳೂರು

ಬೆಂಗಳೂರು: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯನ್ನು (ಸಿಡಿಸಿ) ರದ್ದುಗೊಳಿಸಿ, ಕರ್ನಾಟಕ ಕ್ರೈಸ್ತರ ಅಭಿವೃದ್ಧಿ ಮಂಡಳಿ ಅಥವಾ ಅಭಿವೃದ್ಧಿ ನಿಗಮವನ್ನು ಮತ್ತು 3ಬಿ ವರ್ಗದಿಂದ ಕ್ರೈಸ್ತ ಸಮುದಾಯವನ್ನು ಪ್ರತ್ಯೇಕಿಸಿ, ಪ್ರತ್ಯೇಕವಾದ ಮೀಸಲಾತಿಯನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಘೋಷಣೆ ಮಾಡುವಂತೆ ಜನಶಕ್ತಿ ವೇದಿಕೆ ಸರ್ಕಾರವನ್ನು ಒತ್ತಾಯಿಸಿದೆ.

ಕರ್ನಾಟಕದಲ್ಲಿ ಕ್ರೈಸ್ತರ ಜನಸಂಖ್ಯೆ ಸುಮಾರು ಶೇ.4% ರಷ್ಟಿದೆ. ಸಮುದಾಯದ ಅಭಿವೃದ್ಧಿಗಾಗಿ 2010ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಸಮಿತಿ ರಚಿಸಿ, ರೂ.50 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದರು. ನಂತರ ಬಂದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ, 2013-14ರಲ್ಲಿ ರೂ.75 ಕೋಟಿ, 2014-15ರಲ್ಲಿ ರೂ.100 ಕೋಟಿ, 2015-16ರಲ್ಲಿ 125 ಕೋಟಿ, 2016-17ರಲ್ಲಿ 175 ಕೋಟಿ ರೂಪಾಯಿಗಳನ್ನು ಅನುದಾನವಾಗಿ ಬಿಡುಗಡೆ ಮಾಡಿತು.

ಸದರಿ ಅನುದಾನದಿಂದ ಚರ್ಚ್ ಹಾಗೂ ಪ್ರಾರ್ಥನಾ ಮಂದಿರಗಳ ದುರಸ್ಥಿ ಹಾಗೂ ಅಭಿವೃದ್ಧಿ, ಸಮುದಾಯ ಭವನಗಳ ನಿರ್ಮಾಣಕ್ಕೆ ಸಹಾಯಧನ, ಅನಾಥಾಶ್ರಮಗಳು, ವೃದ್ಧಾಪ್ಯ ಆಶ್ರಮಗಳು, ವಿಕಲ ಚೇತನಾ ಹಾಗೂ ನಿರಾಶ್ರಿತ ಆಶ್ರಮಗಳ ನಡೆಸುವಿಕೆಗೆ ಸಹಾಯಧನ, ಹೊರ ದೇಶಗಳಲ್ಲಿ ಸ್ನಾತಕೋತ್ತರ ಪದವಿಗಳಿಗೆ ಹಾಗೂ ಹೆಚ್ಚಿನ ವಿದ್ಯಾಬ್ಯಾಸ ಶಿಕ್ಷಣಕ್ಕೆ ಸಹಾಯಧನ ಇತ್ಯಾದಿಗಳಿಗೆ ಈ ಅನುದಾನವು ವಿನಿಯೋಗಿಸಲಾಗುತ್ತಿತ್ತು.

2018ರಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ರವರು ಕ್ರೈಸ್ತರ ಅಭಿವೃದ್ಧಿ ನಿಗಮ ಸ್ಥಾಪಿಸಿ ರೂ.200 ಕೋಟಿಯನ್ನು ಘೋಷಣೆ ಮಾಡಿ, ರೂ.75 ಕೋಟಿಯನ್ನು ಮೀಸಲಿಟ್ಟರು. ನಂತರ ಬಂದ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ನಿಗಮದ ಘೋಷಣೆಯನ್ನು ರದ್ಧುಗೊಳಿಸಿ, ‘ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ’ ಯನ್ನು ರಚಿಸಿ, ರೂ.200 ಕೋಟಿಯನ್ನು ಅನುದಾನವಾಗಿ ನೀಡಿತು, ಮತ್ತು ಅಲ್ಪಸಂಖ್ಯಾತ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆ ವತಿಯಿಂದ ದಿನಾಂಕ: 06.11.2019 ರಂದು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ದಕ್ಷಿಣ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೋಯ್ಲಸ್ ಡಿಸೋಜ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ ಆದೇಶ ಹೊರಡಿಸಿತು. ಇದರಿಂದ ಕ್ರೈಸ್ತರ ಬಹುದಿನಗಳ ಬೇಡಿಕೆಯಾದ ಕ್ರೈಸ್ತರ ಅಭಿವೃದ್ಧಿ ನಿಗಮಕ್ಕೆ ಮಣ್ಣೆರಚಿದಂತೆ ಆಯಿತು.

ರಾಜ್ಯದಲ್ಲಿ ಸುಮಾರು ಶೇ.4% ರಷ್ಟಿರುವ ಕ್ರೈಸ್ತ ಜನಾಂಗಕ್ಕೆ ಅಲ್ಪಸಂಖ್ಯಾತರ ಇಲಾಖೆಯಲ್ಲಿ ವಿವಿದ ಸೌಲಭ್ಯವನ್ನು ಪಡೆಯಲು ಕೇವಲ ಶೇ.10 ರಷ್ಟು ಅವಕಾಶವನ್ನು ನೀಡಿ, ಸರ್ಕಾರ ಸಮಾಜದ ಮೇಲೆ ಮಲತಾಯಿ ದೋರಣೆ ಮಾಡುತ್ತಿದೆ.

ರಾಜ್ಯ ಸರ್ಕಾರದ ವಿವಿದ ಇಲಾಖೆಗಳು ಕ್ರೈಸ್ತ ಸಮುದಾಯಕ್ಕೆ ಸೇರಿದ ಶೈಕ್ಷಣಿಕ ಮತ್ತು ಆರೋಗ್ಯ ಸಂಸ್ಥೆಗಳ ಕಟ್ಟಡಗಳನ್ನು ಬೇರೆ ಬೇರೆ ಕಾರ್ಯಕ್ರಮಗಳಿಗೆ ಬಳಸಿಕೊಳ್ಳೂತ್ತವೆ. ಆದರೆ, ಕ್ರೈಸ್ತ ಸಂಸ್ಥೆಗಳ ಕೆಲಸ ಕಾರ್ಯಗಳಿಗೆ ಮಾತ್ರ ಅಧಿಕರಿಗಳು ಸ್ಪಂದಿಸುವುದಿಲ್ಲ. ಇದರಿಂದ ಕ್ರೈಸ್ತರ ಕೆಲಸ ಕಾರ್ಯಗಳು ಇಲಾಖೆಯ ಮಟ್ಟದಲ್ಲಿ ಸುಗುಮವಾಗಿ ನಡೆಯುವುದ್ತಿಲ್ಲ. ಇದು ಎಲ್ಲಾ ಸರ್ಕಾರದ ಅವಧಿಯಲ್ಲೂ ಅಧಿಕಾರಿಗಳ ಮನಸ್ಥಿತಿ ಇದೇ ಆಗಿರುತ್ತದೆ.

3ಬಿ ವರ್ಗದಲ್ಲಿ ಕ್ರೈಸ್ತ ಸಮುದಾಯ ಬರುವುದರಿಂದ ಬಲಿಷ್ಠ ಸಮುದಾಯಗಳ ಜೊತೆಗೆ ಕ್ರೈಸ್ತ ಮಕ್ಕಳು ಸ್ಪರ್ದಿಸಲಾಗದೆ ಸರ್ಕಾರದ ಪ್ರಮುಖ ಹುದ್ದೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗುತ್ತಿಲ್ಲ. ಇದರಿಂದ ಸಮುದಾಯದ ಪ್ರಗತಿಗೂ ಹಿನ್ನಡೆಯಾಗುತ್ತಿದೆ. ಆದ್ದರಿಂದ 3ಬಿ ವರ್ಗದಿಂದ ಕ್ರೈಸ್ತ ಸಮುದಾಯವನ್ನು ಪ್ರತ್ಯೇಕಿಸಿ, ಪ್ರತ್ಯೇಕ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿಕೊಡಬೇಕಾಗಿದೆ.

ರಾಜ್ಯದಲ್ಲಿ ಬೇರೆ ಬೇರೆ ಸಮುದಾಯದವರಿಗೆ ಅಭಿವೃದ್ಧಿ ಮಂಡಳಿಯನ್ನು ಸರ್ಕಾರ ರಚಿಸಿಕೊಟ್ಟಿದೆ. ಕ್ರೈಸ್ತ ಸಮುದಾಯದವರು ಸಾಕಷ್ಟು ವರ್ಷಗಳಿಂದ ಈ ಬಗ್ಗೆ ಬೆಡಿಕೆ ಇಟ್ಟಿದ್ದರೂ ಇನ್ನೂ ಕ್ರೈಸ್ತ ಅಭಿವೃದ್ಧಿ ಮಂಡಳಿ ರಚಣೆ ಆಗಿಲ್ಲ. ಸರ್ಕಾರ ಕ್ರೈಸ್ತರ ಒಳ್ಳೆಯತನವನ್ನು ದುರುಪಯೋಗ ಪಡಿಸಿಕೊಳ್ಳೂತ್ತಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ರೈಸ್ತ ಸಮುದಾಯದ ಮೇಲೆ ಸರಣಿ ದಾಳಿ ನಡೆದಿದೆ. ಆದರೂ ಕ್ರೈಸ್ತರು ಸಹಿಸಿಕೊಂಡರು. ಇದರ ತನಿಖೆಗಾಗಿ ಆಯೋಗ ರಚನೆ ಮಾಡಲಾಯಿತು. ಆದರೆ, ಆಯೋಗದ ತೀರ್ಮಾನ ಏನೆಂಬುದು ಇಲ್ಲಿಯವರೆಗೆ ತಿಳಿದುಕೊಳ್ಳಲು ಆಗುತ್ತಿಲ್ಲ. ರಾಜ್ಯದ – ದೇಶದ ಅಭಿವೃದ್ಧಿಯಲ್ಲಿ ಕ್ರೈಸ್ತರ ಪಾಲೂ ಇದೆ. ಬಡವರ್ಗದ ಕ್ರೈಸ್ತರಿಗೆ ಈ ರೀತಿ ಅನ್ಯಾಯ ಮಾಡುವುದು ಸರಿಯಲ್ಲ.

ಆದ್ದರಿಂದ ಈ ಸರ್ಕಾರ ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯನ್ನು (ಸಿಡಿಸಿ) ರದ್ದುಗೊಳಿಸಿ, ಕರ್ನಾಟಕ ಕ್ರೈಸ್ತರ ಅಭಿವೃದ್ಧಿ ಮಂಡಳಿ ಅಥವಾ ಅಭಿವೃದ್ಧಿ ನಿಗಮವನ್ನು ಮತ್ತು 3ಬಿ ವರ್ಗದಿಂದ ಕ್ರೈಸ್ತ ಸಮುದಾಯವನ್ನು ಪ್ರತ್ಯೇಕಿಸಿ, ಪ್ರತ್ಯೇಕವಾದ ಮೀಸಲಾತಿಯನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಘೋಷಣೆ ಮಾಡಬೇಕೆಂದು ಜನಶಕ್ತಿ ವೇದಿಕೆ ಸರ್ಕಾರವನ್ನು ಒತ್ತಾಯಿಸಿದೆ.

ಜನಶಕ್ತಿ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಡೈನಾಮಿಕ್ ಲೀಡರ್ ಪತ್ರಿಕೆಯ ಸಂಪಾದಕ ಡಿ.ಸಿ.ಪ್ರಕಾಶ್ ನಮ್ಮೊಂದಿಗೆ ಮಾತನಾಡುತ್ತಾ: “ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕ್ರೈಸ್ತರ ಮೇಲೆ ತೋರಿಸಿದ ಅತಿಯಾದ ಪ್ರೀತಿ, ವಿಶ್ವಾಸ, ಅನುಕಂಪ ಹಾಗೂ ಕ್ರೈಸ್ತ ಸಂಘಟನೆಗಳು ನಿರಂತರವಾಗಿ ಮಾಡಿಬಂದ ಹೋರಾಟಕ್ಕೆ ಮಣಿದು 2010ರಲ್ಲಿ ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಸಮಿತಿಯನ್ನು ರಚಿಸಿ ರೂ.50 ಕೋಟಿಯನ್ನು ಅನುದಾನವಾಗಿ ಬಿಡುಗಡೆ ಮಾಡಿ, ಕ್ರೈಸ್ತರ ಏಳಿಗೆಗೆ ಮುನ್ನುಡಿ ಬರೆದರು. ಮುಂದುವರಿದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಸಂಪ್ರದಾಯವನ್ನು ಮುಂದುವರಿಸಿ ಅನುದಾನವನ್ನು ಹೆಚ್ಚು ಮಾಡುತ್ತಾ ಕ್ರೈಸ್ತರ ಬಾಳಿಗೆ ಬೆಳಕಾದರು.

ಆದರೂ ಇದು ಅತಿ ಕಡಿಮೆಯ ಅನುದಾನವಾಗಿದೆ. ಸುಮಾರು ಶೇ.4% ರಷ್ಟಿರುವ ಕ್ರೈಸ್ತ ಸಮುದಾಯಕ್ಕೆ ಇದರಿಂದ ಏನೂ ಪ್ರಯೋಜನವಾಗುವುದಿಲ್ಲ. ಆರ್ಥಿಕವಾಗಿ ಹಿಂದುಳಿದ ಬಡ ಕ್ರೈಸ್ತರು ಸ್ವಾವಲಂಬಿಗಳಾಗಬೇಕಾದರೆ, ಅವರಿಗೆ ಪ್ರತ್ಯೇಕವಾದ ನಿಗಮ ಅಥವಾ ಮಂಡಳಿ ರಚನೆಯಾದರೆ ಮಾತ್ರ ಅದು ಸಾದ್ಯವಾಗುತ್ತದೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಕ್ರೈಸ್ತ ಸಮುದಾಯ ಅಭಿವೃದ್ಧಿ ಪಡೆಯಬೇಕಾದರೆ, 3ಬಿ ವರ್ಗದಿಂದ ಕ್ರೈಸ್ತ ಸಮುದಾಯವನ್ನು ಪ್ರತ್ಯೇಕಿಸಿ, ಪ್ರತ್ಯೇಕವಾದ ಮೀಸಲಾತಿಯನ್ನು ಸರ್ಕಾರ ಘೋಷಣೆ ಮಾಡಬೇಕಾಗಿದೆ.

ಈ ಏರಡು ಪ್ರಮುಖವಾದ ಬೇಡಿಕೆಗಳನ್ನು ನಾವು ಇಂದು ಸರ್ಕಾರದ ಮುಂದಿಟ್ಟಿದ್ದೇವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಶೀರ್ವಾದ ಹಾಗೂ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ಮೇಲ್ಕಂಡ ಎರಡು ಬೇಡಿಕೆಗಳಿಗೆ ಸ್ಪಂದಿಸಿ, ಮುಂಬರುವ 2023ರ ಬಜೆಟ್ ಅಧಿವೇಶನದಲ್ಲಿ ಇದರ ಬಗ್ಗೆ ಘೋಷನೆ ಮಾಡುತ್ತಾರೆ ಎಂದು ನಂಬಿದ್ದೇವೆ” ಎಂದು ಹೇಳಿದರು.      

ದೇಶ

ಅದಾನಿ ವಿಚಾರ ಮುಜುಗರಕ್ಕೆ ಕಾರಣವಾಗುವುದರಿಂದ ಕೇಂದ್ರ ಸರ್ಕಾರ ಚರ್ಚೆಗೆ ಅವಹಾಶ ನೀಡುತ್ತಿಲ್ಲ ಎಂದು ಸಂಸದ ಶಶಿ ತರೂರ್ ಆರೋಪ ಮಾಡಿದ್ದಾರೆ.

ನವದೆಹಲಿ: ಅಮೇರಿಕ ಮೂಲದ ಹಿಂಡೆನ್‌ಬರ್ಗ್ ಮಾರ್ಕೆಟ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಇತ್ತೀಚೆಗೆ ಅದಾನಿ ಕಂಪನಿಗಳ ವಂಚನೆಯ ಆರೋಪಗಳೊಂದಿಗೆ ವರದಿಯನ್ನು ಪ್ರಕಟಿಸಿತು. ಇದು ದೇಶವನ್ನು ಆಘಾತಕ್ಕೆ ತಳ್ಳಿದೆ.

ಈ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಧ್ವನಿ ಎತ್ತುತ್ತಿವೆ. ಇದನ್ನು ಕೇಂದ್ರ ಸರ್ಕಾರ ಒಪ್ಪದ ಕಾರಣ ನಿನ್ನೆಯೂ ಸಂಸತ್ತಿನ ಉಭಯ ಸದನಗಳು ಸತತ 2ನೇ ದಿನವೂ ಕಲಾಪ ನಡೆಸಲು ಸಾಧ್ಯವಾಗದೆ ಸ್ತಬ್ಧಗೊಂಡಿತು.

ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕರಲ್ಲಿ ಒಬ್ಬರಾದ ಸಂಸದ ಶಶಿ ತರೂರ್ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ: ‘ದೇಶ ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಲು ಸಂಸತ್ತು ವೇದಿಕೆಯಾಗಿದೆ. ಈ ಮೂಲಕ ಸಂಸದರ ಕಳಕಳಿ, ಸಂಸದರು ಯಾವ ವಿಷಯದ ಮೇಲೆ ಗಮನಹರಿಸುತ್ತಿದ್ದಾರೆ ಎಂಬುದನ್ನು ದೇಶದ ಜನತೆ ತಿಳಿಯಬಹುದಾಗಿದೆ.

ಆದರೆ ದುರದೃಷ್ಟವಶಾತ್ ಕೇಂದ್ರ ಸರಕಾರಕ್ಕೆ ಇದರ ಪ್ರಯೋಜನ ಕಾನುತ್ತಿಲ್ಲ. ಅದಕ್ಕಾಗಿಯೇ ಅವರು (ಸರ್ಕಾರದಲ್ಲಿರುವವರು) ಚರ್ಚೆಗಳನ್ನು ತಡೆಯುತ್ತಾರೆ. ಇದರಿಂದಾಗಿ 2 ದಿನಗಳ ಸಂಸತ್ತನ್ನು ಕಳೆದುಕೊಂಡಿದ್ದೇವೆ.

ಅದಾನಿ ಕಂಪೆನಿಯ ವಿಷಯವು ಅತ್ಯಂತ ಮಹತ್ವದ್ದಾಗಿರುವುದರಿಂದ ಮತ್ತು ದೇಶದ ಜನರ ಮೇಲೆ ಪರಿಣಾಮ ಬೀರುವುದರಿಂದ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಚರ್ಚಿಸಲು ಬಯಸುತ್ತಿವೆ. ಇದು ಸಾಕಷ್ಟು ಪ್ರಾಮುಖ್ಯತೆಯ ವಿಷಯವಾಗಿದ್ದು, ಇದನ್ನು ಚರ್ಚಿಸಲು ಸರ್ಕಾರ ಅವಕಾಶ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯ ಮಾಡುತ್ತಿವೆ.

ದೇಶ

ಕೊಲಿಜಿಯಂ ಶಿಫಾರಸ್ಸು ಮಾಡಿದ 5 ನ್ಯಾಯಮೂರ್ತಿಗಳ ನೇಮಕ ಶೀಘ್ರ ಎಂದು ಸುಪ್ರೀಂಗೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದೆ.

ಹೊಸದಹಲಿ: ಕೊಲಿಜಿಯಂ ಶಿಫಾರಸ್ಸು ಮಾಡಿರುವ ಐವರು ನ್ಯಾಯಮೂರ್ತಿಗಳ ನೇಮಕವನ್ನು ಶೀಘ್ರವೇ ಮಾಡಲಾಗುವುದು ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೊಲಿಜಿಯಂ ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಇಬ್ಬರು ನ್ಯಾಯಮೂರ್ತಿಗಳು ಸೇರಿದಂತೆ ಐವರು ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಶಿಫಾರಸು ಮಾಡಿತ್ತು.

ನ್ಯಾಯಮೂರ್ತಿಗಳ ನೇಮಕ ವಿಳಂಬಕ್ಕೆ ಸಂಬಂಧಿಸಿದ ಪ್ರಕರಣ ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು. ನ್ಯಾಯಮೂರ್ತಿಗಳಾದ ಕೌಲ್ ಮತ್ತು ಎ.ಎಸ್.ಓಕಾ ಅವರನ್ನೊಳಗೊಂಡ ಪೀಠವು ಇದನ್ನು ಆಲಿಸಿತು.

ಆ ಸಮಯದಲ್ಲಿ ಮಾತನಾಡಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ಕೊಲಿಜಿಯಂ ಶಿಫಾರಸ್ಸು ಮಾಡಿರುವ 5 ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ಶೀಘ್ರದಲ್ಲೇ ನೇಮಕ ಮಾಡಲಾಗುವುದು ಎಂದರು.

ಇದು ಅತ್ಯಂತ ಮಹತ್ವದ ವಿಚಾರವಾಗಿದ್ದು, ಕೊಲಿಜಿಯಂ ಶಿಫಾರಸು ಮಾಡಿದ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಪೀಠ ಅಸಮಾಧಾನ ವ್ಯಕ್ತಪಡಿಸಿತು. ತುಂಬಾ ಮುಜುಗರ ತರುವಂತಹ ನಿರ್ದಾರವನ್ನು ತೆಗೆದುಕೊಳ್ಳಲು ನಮ್ಮನ್ನು ಬಲವಂತ ಮಾಡಬೇಡಿ ಎಂದೂ ಸೂಚಿಸಿತು.

ಈ ಹಿಂದೆ, ಕೊಲಿಜಿಯಂ, ಡಿಸೆಂಬರ್ 13, 2022 ರಂದು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿತ್ತಲ್, ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್, ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿವಿ ಸಂಜಯ್ ಕುಮಾರ್, ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿ ಅಶಾನುದ್ದೀನ್ ಅಮಾನುಲ್ಲಾ, ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಮನೋಜ್ ಮಿಶ್ರಾ ಮುಂತಾದ ಐವರು ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಸಿಪಾರಸು ಮಾಡಿತ್ತು.

ಈ ಐವರು ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಿದರೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 32ಕ್ಕೆ ಏರಲಿದೆ. ಸುಪ್ರೀಂ ಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಒಟ್ಟು 34 ನ್ಯಾಯಾಧೀಶರು ಇರಬೇಕು. ಪ್ರಸ್ತುತ 27 ನ್ಯಾಯಾಧೀಶರಿದ್ದಾರೆ.

ದೇಶ

ತಿರುವನಂತಪುರಂ: ಭಾರತದ ಮೊದಲ ತೃತೀಯ ಲಿಂಗಿಗಳೆಂದು ನಂಬಲಾದ ಕೇರಳದ ಸಹದ್-ಜಿಯಾ ದಂಪತಿಗಳು ಇದೀಗ ತಾವು ಪೋಷಕರಾಗಿರುವುದಾಗಿ ಘೋಷಿಸಿದ್ದಾರೆ. ಅವರ ಫೋಟೋಶೂಟ್ ಈಗ ಟ್ರೆಂಡಿಂಗ್ ಆಗಿದೆ.

ಕೋಳಿಕೋಡ್ ಉಮ್ಮಲತ್ತೂರ್‌ನ ತೃತೀಯಲಿಂಗಿಗಳಾದ ಸಹದ್-ಜಿಯಾ ಈಗ ಸಂತಸ ಮತ್ತು ಸಂಭ್ರಮದಲ್ಲಿ ಮುಳುಗಿದ್ದಾರೆ. ಇದರಲ್ಲಿ ಸಹದ್ ಹೆಣ್ಣಾಗಿ ಹುಟ್ಟಿ ಪುರುಷನಾದವನು. ಹಾಗೆಯೇ ಜಿಯಾ ಪುರುಷನಾಗಿ ಹುಟ್ಟಿ ಹೆಣ್ಣಾದವಳು.

ಈ ತೃತೀಯ ಲಿಂಗಿಗಳು ತಮ್ಮ ಮೊದಲ ಮಗುವನ್ನು ಸ್ವಾಗತಿಸುವ ನಿರೀಕ್ಷೆಯಲ್ಲಿದ್ದಾರೆ. ಅವರು ಒಂದೆರಡು ತಿಂಗಳಲ್ಲಿ ಮಗುವನ್ನು ನಿರೀಕ್ಷಿಸುತ್ತಿದ್ದಾರೆ. ಇದರೊಂದಿಗೆ ಭಾರತದಲ್ಲಿ ಮಗುವಿಗೆ ಜನ್ಮ ನೀಡಿದ ಮೊದಲ ತೃತೀಯ ಲಿಂಗಿಗಳು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ತಮಗೆ ಮಗು ಬೇಕು ಎಂದು ಮನಗಂಡ ದಂಪತಿಗಳು ಮೊದಲು ಮಗುವನ್ನು ದತ್ತು ಪಡೆಯಲು ಪ್ರಯತ್ನಿಸಿದರು. ಆದರೆ, ತೃತೀಯಲಿಂಗಿಗಳು ಎಂಬ ಕಾರಣಕ್ಕೆ ಇಬ್ಬರೂ ಕಾನೂನಾತ್ಮಕವಾಗಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಿತ್ತು.

ಸಹದ್ ಅವರು ಪುರುಷನಾಗಿದ್ದರೂ ಸಹ ಗರ್ಭಿಣಿಯಾಗಬಹುದು ಎಂಬ ವಿಷಯವನ್ನು ಅವರು ತಡವಾಗಿ ತಿಳಿದುಕೊಂಡರು. ಆದರೆ, ಈ ರೀತಿ ಮಾಡಿದರೆ ಊರು ಏನು ಹೇಳುತ್ತದೆ ಎಂದು ಯೋಚಿಸಿದ ಸಹದ್, ಈ ವಿಚಾರಕ್ಕೆ ಆರಂಭದಲ್ಲಿ ಹಿಂದೇಟು ಹಾಕಿದ್ದರು.

ಅಲ್ಲದೆ ಹೆಣ್ಣಿನಿಂದ ಪುರುಷನಾಗಿ ಈಗಾಗಲೇ ಪರಿವರ್ತನೆ ಹೊಂದಿದ್ದರಿಂದ ಇದರಲ್ಲಿ ಹಲವು ತೊಡಕುಗಳಿದ್ದವು. ಆದರೂ ಜಿಯಾಳ ಪ್ರೀತಿ ಮತ್ತು ತಾಯಿಯಾಗಬೇಕೆಂಬ ಅವಳ ತೀವ್ರ ಬಯಕೆಯು ಸಹದ್‌ನ ಮನಸ್ಸನ್ನು ಬದಲಾಯಿಸಿತು. ಇದಕ್ಕಾಗಿ ವೈದ್ಯರ ಸಲಹೆಯನ್ನು ಪಡೆದರು.

ವೈದ್ಯಕೀಯವಾಗಿ ಸಹದ್ ಮಗುವಿಗೆ ಜನ್ಮ ನೀಡಬಹುದು ಎಂಬ ಕಾರಣಕ್ಕೆ ಅವರು ಈ ಕ್ರಮ ಕೈಗೊಂಡಿದ್ದಾರೆ. ಕೋಳಿಕೋಡ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಪರೀಕ್ಷೆ ನಡೆಸಲಾಗಿದ್ದು, ಸಹದ್ ಅವರಿಗೆ ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲಾಗಿದೆ.

ಅವರಿಗೆ ಬೇರೆ ಯಾವುದೇ ವೈದ್ಯಕೀಯ ಸಮಸ್ಯೆ ಇಲ್ಲ ಎಂದು ದೃಢಪಟ್ಟ ನಂತರ ಅಗತ್ಯ ಚಿಕಿತ್ಸೆ ಆರಂಭಿಸಲಾಗಿದೆ. ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾಳಿಂದ ಸಹದ್ ಗರ್ಭಿಣಿಯಾಗಿದ್ದರು. ಲೈಂಗಿಕ ಪುನರ್ವಿತರಣೆ ಶಸ್ತ್ರಚಿಕಿತ್ಸೆಯಲ್ಲಿ ಸಹದ್ ಅವರ ಸ್ತನಗಳನ್ನು ತೆಗೆದುಹಾಕಲಾಗಿದ್ದರೂ, ಆಕೆಯ ಗರ್ಭಾಶಯ ಸೇರಿದಂತೆ ಅವಳ ಅಂಗಗಳನ್ನು ಇನ್ನೂ ತೆಗೆದುಹಾಕಿರಲಿಲ್ಲ. ಈ ಕಾರಣದಿಂದಾಗಿ ಅವಳು ಗರ್ಭಿಣಿಯಾಗಲು ಸಾಧ್ಯವಾಯಿತು. ಮಾರ್ಚ್ 4 ರಂದು ಹೆರಿಗೆ ಆಗುವ ನಿರೀಕ್ಷೆಯಿದೆ.

ಈ ನಡುವೆ 8 ತಿಂಗಳ ಗರ್ಭಿಣಿಯಾಗಿರುವ ಸಹದ್ ಜೋಡಿ ಇದೀಗ ಫೋಟೋ ಶೂಟ್ ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಚಿತ್ರಗಳು ಅಂತರ್ಜಾಲದಲ್ಲಿ ವೇಗವಾಗಿ ಹರಡುತ್ತಿವೆ. ತನಗೆ ಮಗುವಾಗದ ಕಾರಣ ಸಹದ್ ಗೆ ಮಗು ಆಗಲಿದೆ ಎಂದೂ ಜಿಯಾ ಹೇಳುತ್ತಾಳೆ.

ಮಗು ಜನಿಸಿದ ನಂತರ ಎದೆಹಾಲು ಬ್ಯಾಂಕ್‌ನಿಂದ ಖರೀದಿಸಿ ಮಗುವಿಗೆ ನೀಡಲು ನಿರ್ಧರಿಸಿದ್ದಾರೆ. ಅವರಲ್ಲಿ, ಭಾರತದ ಮೊದಲ ಮೂರನೇ ಲಿಂಗದ ಜೋಡಿ, ಜಿಯಾ ನೃತ್ಯಗಾರ್ತಿ. ಸಹದ್ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ.

ರಾಜಕೀಯ ರಾಜ್ಯ

1) ಕೇಂದ್ರದ ಟ್ರಬಲ್ ಎಂಜಿನ್ ಬಿಜೆಪಿ ಸರ್ಕಾರ ಕಳೆದ 8 ವರ್ಷಗಳಿಂದ ಪಾಲಿಸಿಕೊಂಡು ಬಂದಿರುವ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್’ (ಶ್ರೀಮಂತರ ಪೋಷಣೆ ಮತ್ತು ಬಡವರ ವಿನಾಶ) ಎಂಬ ಜನವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ 2023-2024ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.

2) ಕೇಂದ್ರ ಬಿಜೆಪಿ ಸರ್ಕಾರದ ದುರಾಡಳಿತ ಮತ್ತು ಕೊರೊನಾ ರೋಗದಿಂದಾಗಿ ದೇಶದ ಆರ್ಥಿಕ ಸ್ಥಿತಿ ಹದಗೆಟ್ಟುಹೋಗಿದೆ. ಬಹಳ ಮುಖ್ಯವಾಗಿ ದೇಶದ ಬೆನ್ನೆಲುಬು ಎಂದು ಭಾಷಣದಲ್ಲಿ ಎಲ್ಲರೂ ಕೊಂಡಾಡುವ ರೈತರ ಬದುಕು ನೆಲ ಹಿಡಿದಿದೆ.

3) ನಿರುದ್ಯೋಗದ ಪ್ರಮಾಣ ಹೆಚ್ಚಾಗಿದೆ. ಅತ್ಯಂತ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಸುಮಾರು ಶೇಕಡಾ 54ರಷ್ಟು ಉದ್ಯೋಗವನ್ನು ಸೃಷ್ಟಿಸುವ ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ನೀಡುವ ಕೃಷಿ ಕ್ಷೇತ್ರವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

4) 2022-23ರ ಬಜೆಟ್ ಗೆ ಹೋಲಿಸಿದರೆ ಈ ಬಜೆಟ್ ನಲ್ಲಿ ಕೃಷಿಕ್ಷೇತ್ರಕ್ಕೆ ರೂ.8.468.21 ಕೋಟಿ ಹಣ ಕಡಿಮೆ ನೀಡಲಾಗಿರುವುದೇ ಈ ನಿರ್ಲಕ್ಷ್ಯಕ್ಕೆ ಸಾಕ್ಷಿ. ಸಣ್ಣ ಮತ್ತು ಮಧ್ಯಮ ರೈತರನ್ನು ಕೂಡಾ ಕಡೆಗಣಿಸಲಾಗಿದೆ.

5) ಎಂಎಸ್‌ಪಿಯಲ್ಲಿನ ಅನ್ಯಾಯ, ಅವೈಜ್ಞಾನಿಕ ಬೆಳೆ ವಿಮೆ, ಸಾಲದಹೊರೆ, ನೆರೆ ಮತ್ತು ಬರಪರಿಹಾರದಲ್ಲಿನ ಕೊರತೆಗಳ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವೇ ಇಲ್ಲ. ರೈತರ ಆದಾಯವನ್ನು ದುಪ್ಪಟ್ಟು ಮಾಡಲಾಗುವುದು ಎಂಬ ಘೋಷಣೆ ಪೊಳ್ಳಾಗಿದೆ. ಕನಿಷ್ಠ ಸಣ್ಣ ಹಿಡುವಳಿದಾರ ರೈತರ ಸಾಲವನ್ನಾದಾರೂ ಮನ್ನಾ ಮಾಡಬಹುದೆಂಬ ನಿರೀಕ್ಷೆ ಸುಳ್ಳಾಗಿದೆ.

6) ರೈತರಿಗೆ ಸಾಲ ನೀಡಲು ಎರಡು ಲಕ್ಷ ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ. ರೈತರನ್ನು ಋಣಮುಕ್ತಗೊಳಿಸಬೇಕಾಗಿರುವ ಸರ್ಕಾರ ಅವರನ್ನು ಇನ್ನಷ್ಟು ಸಾಲದ ಬಲೆಗೆ ನೂಕಲು ಹೊರಟಿದೆ. ಹೊಸ ಸಾಲ ಪಡೆದು ಹಳೆಸಾಲ ತೀರಿಸಿ ಎನ್ನುವುದನ್ನು ಸರ್ಕಾರ ಹೇಳಿದೆ. ಈ ಸಾಲದ ಬಡ್ಡಿದರ ಎಷ್ಟು ಎನ್ನುವುದನ್ನು ಇನ್ನೂ ಸ್ಪಷ್ಟಪಡಿಸಿಲ್ಲ.

7) ಹತ್ತಿಬೆಳೆಯನ್ನು ಹೊರತುಪಡಿಸಿದರೆ ಬೇರೆ ಯಾವ ಬೆಳೆಗಳಿಗೂ ಬೆಳೆ ಕೇಂದ್ರಿತ ಯೋಜನೆಗಳು ಬಜೆಟ್ ನಲ್ಲಿ ಇಲ್ಲ. ತೋಟಗಾರಿಕಾ ಬೆಳೆಗಳನ್ನು ಪ್ರಸ್ತಾಪ ಮಾಡಲಾಗಿದ್ದರು ಅಲ್ಲಿಯೂ ಬೆಳೆ ಕೇಂದ್ರಿತ ಯೋಜನೆ ಇಲ್ಲ. ಉದಾಹರಣೆಗೆ ತೆಂಗು, ಅಡಿಕೆ ಇತ್ಯಾದಿ ಬೆಳೆಗಳಿಗೆ ನಿರ್ಧಿಷ್ಟ ಯೋಜನೆಗಳನ್ನು ಹೇಳಿಲ್ಲ.

8) ಭದ್ರ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಈ ಯೋಜನೆ ಪೂರ್ಣಗೊಳ್ಳಬೇಕಾದರೆ ರೂ.23,000 ಕೋಟಿ ಅವಶ್ಯಕತೆಯಿದೆ. ಕೇಂದ್ರದ ಬಿಜೆಪಿ ಸರ್ಕಾರ ನೀಡಲು ಒಪ್ಪಿರುವುದು ಯೋಜನಾ ವೆಚ್ಚದ ಕಾಲುಭಾಗ ಮಾತ್ರ.

9) ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿರುವ ಹಣದಲ್ಲಿ 40% ಕಮಿಷನ್ ಕಳೆದರೆ ಕೊನೆಗೆ ಯೋಜನೆಗೆ ಸಿಗಲಿರುವುದು ರೂ.3000 ಕೋಟಿಗಿಂತಲೂ ಕಡಿಮೆ. ನಿಗದಿ ಪಡಿಸಿರುವ ಹಣ ಕೂಡಾ ಒಂದು ವರ್ಷಕ್ಕೋ ಐದು ವರ್ಷಕ್ಕೋ ಎನ್ನುವದನ್ನೂ ಸ್ಪಷ್ಟಪಡಿಸಿಲ್ಲ.

10) ಬಹಳ ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿರುವ ಈ ಯೋಜನೆ ಅನುಷ್ಠಾನಗೊಳ್ಳಬೇಕಾದರೆ ‘ಬಿ ಸ್ಕೀಮ್’ ಗೆ ಸಂಬಂಧಿಸಿದ ವ್ಯಾಜ್ಯ ಇತ್ಯರ್ಥವಾಗಬೇಕು. ಅಲ್ಲಿಯ ವರೆಗೆ ಈ ಹಣವನ್ನು ಖರ್ಚು ಮಾಡುವ ಹಾಗಿಲ್ಲ.

11) ಕೃಷ್ಣಾ ಮೇಲ್ದಂಡೆ, ಮಹದಾಯಿ, ಮೇಕೆದಾಟು ಯೋಜನೆಗಳಿಗೆ ಪೈಸೆ ಹಣವನ್ನೂ ನೀಡಿಲ್ಲ. ಉಪನಗರ ರೈಲ್ವೆ ಮತ್ತು ಮೆಟ್ರೋ ರೈಲು ಯೋಜನೆಗೆ ಹೆಚ್ಚಿನ ಅನುದಾನ ನೀಡಬಹುದೆಂಬ ನಿರೀಕ್ಷೆ ಇತ್ತು ಅದೂ ಸುಳ್ಳಾಗಿದೆ.

12) ಆಹಾರ ಸಬ್ಸಿಡಿಯನ್ನು ಶೇಕಡಾ 31ರಷ್ಟು ಕಡಿಮೆ ಮಾಡಲಾಗಿದೆ. 2022-23ರಲ್ಲಿ ರೂ.2,87,194 ಕೋಟಿಯಷ್ಟು ಆಹಾರ ಸಬ್ಸಿಡಿ ನೀಡಲಾಗಿತ್ತು. ಈ ಬಾರಿ ಅದನ್ನು ರೂ.1,97,350 ಕೋಟಿಗೆ ಇಳಿಸಲಾಗಿದೆ.

13) ನರೇಗಾ ಯೋಜನೆಗೆ ಶೇಕಡಾ 32ರಷ್ಟು ಕಡಿಮೆ ಅನುದಾನ ನಿಗದಿಪಡಿಸಲಾಗಿದೆ. 2022-23ರಲ್ಲಿ ರೂ.89,154 ಕೋಟಿ ಗಳಷ್ಟು ನೀಡಲಾಗಿದ್ದ ಅನುದಾನವನ್ನು 2023-24ರ ಸಾಲಿನಲ್ಲಿ ರೂ.61,032 ಕೋಟಿಗೆ ಇಳಿಸಲಾಗಿದೆ.

14) ಎಲ್.ಪಿ.ಜಿ. ಸಬ್ಸಿಡಿಯನ್ನು ಶೇಕಡಾ 75ರಷ್ಟು ಕಡಿತಗೊಳಿಸಲಾಗಿದೆ. 2022-23ರಲ್ಲಿ ರೂ.9,170 ಕೋಟಿಗಳಷ್ಟಿದ್ದ ಎಲ್‌ಪಿಜಿ ಸಬ್ಸಿಡಿಯನ್ನು 2023-24ರ ಸಾಲಿಗೆ ರೂ.2,257 ಕೋಟಿಗೆ ಇಳಿಸಲಾಗಿದೆ.

15) ಪ್ರಧಾನ ಮಂತ್ರಿ ಆವಾಸ್ ಯೋಜನಾ ವೆಚ್ಚವನ್ನು ಶೇಕಡಾ 66ರಷ್ಟು ಹೆಚ್ಚಿಸಲಾಗಿದೆ. ಪ್ರತಿಮನೆ ನಿರ್ಮಾಣ ವೆಚ್ಚವನ್ನು ರೂ.48,000 ರೂಪಾಯಿಗಳಿಂದ ರೂ.79,590 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಈ ಹೆಚ್ಚಳ ಬಡ ಕುಟುಂಬಗಳಿಗೆ ನೆರವಾಗುವುದಕ್ಕೋ? ಗುತ್ತಿಗೆದಾರರಿಗೆ ಲಾಭ ಮಾಡಿಕೊಡಲಿಕ್ಕೋ?

16) ಕೇಂದ್ರ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರವೇ ಶೇಕಡಾ 50ರಷ್ಟು ಮನೆಗಳನ್ನು ನಿರ್ಮಿಸಲಾಗಿಲ್ಲ. ಬಹಳ ಮುಖ್ಯವಾಗಿ ನಗರ ಪ್ರದೇಶದಲ್ಲಿರುವ ಕೊಳಗೇರಿ ನಿವಾಸಿಗಳ ವಸತಿ ಸಮಸ್ಯೆಯನ್ನು ಪರಿಹರಿಸುವ ಪ್ರಸ್ತಾಪ ಬಜೆಟ್ ನಲ್ಲಿ ಇಲ್ಲ.

17) ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿದ್ದರೂ ಅವರು ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಒಂದೆರಡು ಬಾರಿ ಕರ್ನಾಟಕದ ಹೆಸರನ್ನು ಉಲ್ಲೇಖಮಾಡಿದ ಹೊರತಾಗಿ ವಿಶೇಷ ನೆರವಿನ ಘೋಷಣೆಗಳನ್ನು ಮಾಡಿಲ್ಲ.

18) ಕೇಂದ್ರ ಬಿಜೆಪಿ ಸರ್ಕಾರದ ಅಡಿಯಾಳಿನಂತೆ ವರ್ತಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನಸೆಳೆಯಲು ಸಂಪೂರ್ಣ ವಿಫಲವಾಗಿದೆ.

19) ಸಾಮಾನ್ಯವಾಗಿ ಬಜೆಟ್ ಪೂರ್ವದಲ್ಲಿ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಸಂಸತ್ ಸದಸ್ಯರ ಜೊತೆ ಸಮಾಲೋಚನೆ ನಡೆಸಿ ರಾಜ್ಯದ ಬೇಡಿಕೆಗಳನ್ನು ಕೇಂದ್ರ ಬಿಜೆಪಿ ಸರ್ಕಾರದ ಮುಂದಿಡುವುದು ರೂಢಿ. ಆದರೆ ಈ ಬಾರಿ ಈ ಸಂಪ್ರದಾಯವನ್ನು ಮುರಿಯಲಾಗಿದೆ.

20) ರಾಜ್ಯದಿಂದ ಆರಿಸಿಹೋಗಿರುವ ರಾಜ್ಯದ 25 ಲೋಕಸಭಾ ಸದಸ್ಯರು ಮತ್ತು ಆರು ರಾಜ್ಯಸಭಾ ಸದಸ್ಯರಿದ್ದಾರೆ. ಇವರಲ್ಲಿ ಯಾರೋಬ್ಬರು ರಾಜ್ಯದ ಬೇಡಿಕೆಗಳ ಬಗ್ಗೆಯಾಗಲಿ, ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆಯಾಗಲಿ ಎಲ್ಲಿಯೂ ಸೊಲ್ಲೆತ್ತಿಲ್ಲ, ಇದರಿಂದಾಗಿ ಕೇಂದ್ರ ಸರ್ಕಾರ ಕೂಡಾ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ.

ದೇಶ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ 2023ರ ಕೇಂದ್ರ ಬಜೆಟ್‌ ಬಗ್ಗೆ ವಿರೋಧ ಪಕ್ಷಗಳ ನಾಯಕರ ಅಭಿಪ್ರಾಯವೇನು? ಅವರು ಏನು ಹೇಳುತ್ತಾರೆ? ನೋಡೋಣ!

ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರು, ಎಐಸಿಸಿ
‘ಮುಂಬರುವ 3 ಮತ್ತು 4ನೇ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರ ಈ ಬಜೆಟ್ ನೀಡಿದೆ. ಈ ಬಜೆಟ್‌ನಲ್ಲಿ ಬಡವರಿಗೆ ಏನೂ ಇಲ್ಲ. ಹಣದುಬ್ಬರ ನಿಯಂತ್ರಣಕ್ಕೆ ಯಾವುದೇ ಕ್ರಮಗಳಿಲ್ಲ. ಅದೇ ರೀತಿ ಈ ಬಜೆಟ್‌ನಲ್ಲಿ ಉದ್ಯೋಗ ಹೆಚ್ಚಳ, ಖಾಲಿ ಇರುವ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡುವ ಬಗ್ಗೆ ಅಥವಾ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ’.

ಪಿ.ಚಿದಂಬರಂ ಮಾಜಿ ಕೇಂದ್ರ ಹಣಕಾಸು ಸಚಿವರು
‘ಇದು ಅಹಿತವಾದ ಹಣಕಾಸು ಸಚಿವರಿಂದ ಓದಲ್ಪಟ್ಟ ಬಂಡವಾಳಶಾಹಿ ಬಜೆಟ್. ಬಡವರು ಮತ್ತು ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಘೋಷಿಸಲಾದ ಎಲ್ಲಾ ಸಬ್ಸಿಡಿಗಳನ್ನು ಈಗ ಕಡಿಮೆ ಮಾಡಲಾಗಿದೆ. ಕೇಂದ್ರ ಬಜೆಟ್‌ನಲ್ಲಿ ತೆರಿಗೆ ವಿನಾಯಿತಿ ಘೋಷಣೆಯಾಗಿಲ್ಲ. ಜಿಎಸ್‌ಟಿ ಆದಾಯ ತೆರಿಗೆ ರಿಯಾಯಿತಿ ಇಲ್ಲದೇ ಬಜೆಟ್ ಮಂಡನೆ ಮಾಡಲಾಗಿದೆ. ಕೊರೊನಾ ಪೀಡಿತ ಜನರಿಗೆ ಪರಿಹಾರ ನೀಡಲು ಮುಂದಾಗಲಿಲ್ಲ. ಹಣದುಬ್ಬರವನ್ನು ನಿಯಂತ್ರಿಸಲು ಅಥವಾ ಬೆಲೆ ಏರಿಕೆಯನ್ನು ಕಡಿಮೆ ಮಾಡಲು ಯಾವುದೇ ಕ್ರಮವಿಲ್ಲ. ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಪುನಶ್ಚೇತನಗೊಳಿಸಲು ಬಜೆಟ್‌ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ಬಡವರು ಎಂಬ ಪದ ಬಜೆಟ್‌ನಲ್ಲಿ ಎರಡು ಬಾರಿ ಕಾಣಿಸಿಕೊಂಡಿದೆ. ದೇಶದಲ್ಲಿ ಬಡವರು ಇದ್ದಾರೆ ಎಂಬುದು ಈಗ ಹಣಕಾಸು ಸಚಿವರಿಗೆ ಅರಿವಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆಯನ್ನು ಸರಿಪಡಿಸಲು ಯಾವುದೇ ಯೋಜನೆ ಘೋಷಿಸಿಲ್ಲ. ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲ ಕ್ಷೇತ್ರಗಳಿಗೆ ಹಣ ಹಂಚಿಕೆಯನ್ನು ಕಡಿತಗೊಳಿಸಲಾಗಿದೆ. ಸಂಕ್ಷಿಪ್ತ ಪಠ್ಯವನ್ನು ಹೊರತುಪಡಿಸಿ ಬಡ್ಡಿರಹಿತ ಸಾಲವನ್ನು ಸೂಚಿಸಲು ಅದರಲ್ಲಿ ಏನೂ ಇಲ್ಲ’.

ಪಿ.ಚಿದಂಬರಂ, ಮಾಜಿ ಕೇಂದ್ರ ಹಣಕಾಸು ಸಚಿವ

ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ
‘ಈ ಬಜೆಟ್ ದೂರದೃಷ್ಟಿಯದ್ದಲ್ಲ. ಇದೊಂದು ಅವಕಾಶವಾದಿ ಬಜೆಟ್‌. ಇದು ಜನವಿರೋಧಿ, ಬಡವರ ವಿರೋಧಿ ಬಜೆಟ್. ಈ ಬಜೆಟ್ ಒಂದು ವರ್ಗಕ್ಕೆ ಮಾತ್ರ ಲಾಭವಾಗಲಿದೆ. ದೇಶದ ನಿರುದ್ಯೋಗ ಸಮಸ್ಯೆಗೆ ಈ ಬಜೆಟ್‌ನಲ್ಲಿ ಪರಿಹಾರವಿಲ್ಲ. ಮುಂಬರುವ 2024ರ ಸಂಸತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಬಜೆಟ್ ಸಿದ್ಧಪಡಿಸಲಾಗಿದೆ’.

ಎಂ.ಕೆ.ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿ
‘ಜನರ ಹಿತವನ್ನು ಮರೆತಿರುವ ಹಣಕಾಸು ವರದಿ. 2023ನೇ ಸಾಲಿನ ಈ ಹಣಕಾಸು ವರದಿಯು ಕೇಂದ್ರ ಬಿಜೆಪಿ ಸರಕಾರದ ನಿಯಮಿತ ಹಣಕಾಸು ವರದಿಯಾಗಿದ್ದು, ವೈಯಕ್ತಿಕ ಆದಾಯ ತೆರಿಗೆ ದರ, ರೈತರ ಕಲ್ಯಾಣ ಯೋಜನೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಮೂರು ಕೃಷಿ ಕಾನೂನುಗಳ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡ ರೈತರಿಗೆ ಯಾವುದೇ ಕಲ್ಯಾಣ ಯೋಜನೆಗಳಿಲ್ಲ’.

ಕೆ.ಚಂದ್ರಶೇಖರ್ ರಾವ್, ಮುಖ್ಯಮಂತ್ರಿ, ತೆಲಂಗಾಣ.

ಚಂದ್ರಶೇಖರ ರಾವ್ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ
‘ಕೇಂದ್ರ ಬಿಜೆಪಿ ಸರ್ಕಾರ ಮಂಡಿಸಿರುವ ಬಜೆಟ್ ‘ಗೋಲ್ಮಾಲ್ ಬಜೆಟ್’. ಈ ಬಜೆಟ್ ಜನಸಾಮಾನ್ಯರನ್ನು ತೀವ್ರ ಹತಾಶೆಗೆ ದೂಡಿದೆ. ರೈತರು ಮತ್ತು ಸಾಮಾನ್ಯ ಜನರೊಂದಿಗೆ, ಎಸ್‌ಸಿ/ಎಸ್‌ಟಿ, ಬಿ.ಸಿ. ಹಾಗೂ ಅಲ್ಪಸಂಖ್ಯಾತರಿಗೆ ತೀವ್ರ ನಿರಾಸೆಯನ್ನು ಮೂಡಿಸಿದೆ. ಬಡವರು, ಕಾರ್ಮಿಕರು ಮತ್ತು ನೌಕರರು ನಿರಾಶೆಗೊಂಡಿದ್ದಾರೆ. ಈ ಬಜೆಟ್ ದೇಶದ ಕೃಷಿ ಮತ್ತು ಕೈಮಗ್ಗ ಕ್ಷೇತ್ರಕ್ಕೆ ದೊಡ್ಡ ಶೂನ್ಯವಾಗಿದೆ. ಈ ಬಜೆಟ್ ಸಣ್ಣ ವ್ಯಾಪಾರಿಗಳಿಗೂ ನಿರಾಸೆ ಮೂಡಿಸಿದೆ. ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಗಳ ಅಭಿವೃದ್ಧಿಯನ್ನು ಬಜೆಟ್ ನಿರ್ಲಕ್ಷಿಸಿದೆ’.

ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿ
‘ಈ ಬಾರಿಯ ಬಜೆಟ್‌ನಲ್ಲಿ ಹಣದುಬ್ಬರಕ್ಕೆ ಪರಿಹಾರ ಸಿಕ್ಕಿಲ್ಲ. ಇದಕ್ಕೆ ವಿರುದ್ಧವಾಗಿ ಈ ಬಜೆಟ್ ಹಣದುಬ್ಬರವನ್ನು ಹೆಚ್ಚಿಸುತ್ತದೆ. ನಿರುದ್ಯೋಗ ನಿವಾರಣೆಗೆ ಯಾವುದೇ ನಿರ್ದಿಷ್ಟ ಯೋಜನೆ ಇಲ್ಲ. ಶಿಕ್ಷಣದ ಬಜೆಟ್ ಶೇ.2.64ರಿಂದ ಶೇ.2.5ಕ್ಕೆ ಇಳಿಸಿರುವುದು ದುರದೃಷ್ಟಕರ. ಆರೋಗ್ಯ ಬಜೆಟ್ ಅನ್ನು 2.2% ರಿಂದ 1.98% ಕ್ಕೆ ಇಳಿಸುವುದು ಸಹ ಹಾನಿಕಾರಕವಾಗಿದೆ’.