ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
July 2023 » Page 2 of 7 » Dynamic Leader
October 23, 2024
Home 2023 July (Page 2)
ರಾಜಕೀಯ

ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯಸಚಿವ ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದು, ಈ ಮೂಲಕ ಒಳಮೀಸಲಾತಿಗೆ ಡಬಲ್ ಎಂಜಿನ್ ಸರ್ಕಾರ ಬದ್ಧವಾಗಿದೆ ಎಂಬ ಬಿಜೆಪಿ ಪಕ್ಷದ ಹಿಪಾಕ್ರಟಿಕ್ ನಡವಳಿಕೆ ಬಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಒಳಮೀಸಲಾತಿ ವಿಷಯದ ಕಟ್ಲೆ ಸುಪ್ರಿಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. ಸುಪ್ರೀಂಕೋರ್ಟ್ ನ ಐವರು ನ್ಯಾಯಾಧೀಶರ ಪೀಠವು ಒಳಮೀಸಲಾತಿ ವಿಷಯವನ್ನು ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾವಣೆ ಮಾಡಬೇಕೆಂದು ಮುಖ್ಯನ್ಯಾಯಮೂರ್ತಿಯನ್ನು ಕೋರಿದ್ದಾರೆ. ಇದರಿಂದಾಗಿ ಇದಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ‘ಸಬ್ ಜುಡೀಸ್’ ಆಗುತ್ತದೆ” ಎಂದು ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹರಾವ್ ಅವರ ಪ್ರಶ್ನೆಗೆ ನೀಡಿರುವ ಉತ್ತರದಲ್ಲಿ ಸಚಿವ ನಾರಾಯಣ ಸ್ವಾಮಿ ಜಾರಿಕೊಂಡಿದ್ದಾರೆ.

“ಒಳಒಳಮೀಸಲಾತಿಗಾಗಿ ಸಂವಿಧಾನದ 341ನೇ ಪರಿಚ್ಚೇದಕ್ಕೆ ತಿದ್ದುಪಡಿ ಮಾಡಬೇಕಾಗುತ್ತದೆ ಎಂದು ಈ ಉದ್ದೇಶಕ್ಕಾಗಿಯೇ ರಚಿಸಲಾಗಿರುವ ರಾಷ್ಟ್ರೀಯ ಆಯೋಗ ಶಿಫಾರಸು ಮಾಡಿತ್ತು. ಈ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿಪ್ರಾಯಗಳನ್ನು ನೀಡಲು ಕೋರಲಾಗಿತ್ತು. ಆದರೆ ಇಲ್ಲಿಯವರೆಗೆ 20 ರಾಜ್ಯ ಸರ್ಕಾರಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಮಾತ್ರ ತಮ್ಮ ಅಭಿಪ್ರಾಯವನ್ನು ತಿಳಿಸಿದೆ” ಎಂದು ಹೇಳಿದ್ದಾರೆ.

“ಈ 20 ರಾಜ್ಯಗಳಲ್ಲಿ ಏಳು ರಾಜ್ಯಗಳು ಮಾತ್ರ ಒಳಮೀಸಲಾತಿಗೆ ಒಪ್ಪಿಗೆ ಸೂಚಿಸಿದ್ದು ಉಳಿದ 13 ರಾಜ್ಯಗಳು ವಿರೋಧಿಸಿವೆ” ಎಂದು ಹೇಳುವ ಮೂಲಕ ಬಹುಸಂಖ್ಯಾತ ರಾಜ್ಯಗಳು ಒಳಮೀಸಲಾತಿಗೆ ವಿರುದ್ಧವಾಗಿವೆ ಎಂಬ ಸೂಚನೆಯನ್ನೂ ಸಚಿವ ನಾರಾಯಣಸ್ವಾಮಿ ನೀಡಿದ್ದಾರೆ. ಒಳಮೀಸಲಾತಿ ಜಾರಿಗೆ ತಮ್ಮ ಪಕ್ಷ ಬದ್ಧವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶೀಘ್ರದಲ್ಲಿಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರವಸೆ ನೀಡಿದ್ದ ಬಿಜೆಪಿ ನಾಯಕರು ಆ ಸಮಯದಲ್ಲಿ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದಾಗಲಿ, ಈ ಬಗ್ಗೆ ಕೈಗೊಳ್ಳುವ ನಿರ್ಧಾರ ಸಬ್ ಜುಡಿಸ್ ಆಗುತ್ತದೆ ಎಂದಾಗಲಿ ಯಾಕೆ ಹೇಳಿಲ್ಲ?

2020ರ ಆಗಸ್ಟ್ ತಿಂಗಳಲ್ಲಿಯೇ ಐವರು ನ್ಯಾಯಾಧೀಶರ ಪೀಠವು ಏಳು ನ್ಯಾಯಾಧೀಶರ ಪೀಠ ರಚಿಸುವಂತೆ ಕೋರಿಕೆ ಸಲ್ಲಿಸಿದ್ದರೂ ಇಲ್ಲಿಯ ವರೆಗೆ ಯಾಕೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿಲ್ಲ? ಇದೇ ವಿಷಯವನ್ನು ನಾವು ಪ್ರಶ್ನಿಸಿದಾಗ ಸಂವಿಧಾನಕ್ಕೆ ತಿದ್ದುಪಡಿ ಮಾಡದೆಯೇ ಒಳಮೀಸಲಾತಿ ಜಾರಿಗೊಳಿಸುವುದಾಗಿ ಸುಳ್ಳು ಭರವಸೆ ನೀಡಿದ್ದು ಯಾಕೆ? ಬಹಿರಂಗವಾಗಿ ದಲಿತ ಸಮುದಾಯದ ಬಗ್ಗೆ ಹುಸಿಪ್ರೀತಿ-ಕಾಳಜಿ ವ್ಯಕ್ತಪಡಿಸುವ ಬಿಜೆಪಿ ಮತ್ತು ಸಂಘ ಪರಿವಾರ, ಅಂತರಂಗದಲ್ಲಿ ಮೀಸಲಾತಿಯೂ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಉಪಕ್ರಮಗಳಿಗೆ ವಿರುದ್ಧವಾಗಿದೆ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಎಂದು ಹೇಳಿದ್ದಾರೆ.

ದೇಶ

ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಯು ಉತ್ತರ ಪ್ರದೇಶದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಬಿಜೆಪಿಯನ್ನು ಅಳಿಸಿಹಾಕಲಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, “ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಯನ್ನು ಕಂಡು ಬಿಜೆಪಿ ಆತಂಕಕ್ಕೆ ಒಳಗಾಗಿದೆ. 2014ರಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯನ್ನು 2024ರಲ್ಲಿ ಕಿತ್ತೊಗೆಯಲಾಗುವುದು. ಬಿಜೆಪಿ ಉತ್ತರ ಪ್ರದೇಶದಲ್ಲಿ ಮಾತ್ರವಲ್ಲದೆ ಇಡೀ ದೇಶದಿಂದಲೇ ಕಿತ್ತೊಗೆಯಲಾಗುವುದು. ಹೀಗಾಗಿ ಸಂವಿಧಾನವನ್ನು ಹಾಳುಗೆಡವಲು ಪ್ರಯತ್ನಿಸಿದವರು ಹೆದರುತ್ತಿದ್ದಾರೆ.

ಆರ್‌ಎಸ್‌ಎಸ್‌ ಹರಡಿದ ದ್ವೇಷ ಮತ್ತು ಬಿಜೆಪಿಯ ವೋಟ್ ಬ್ಯಾಂಕ್ ರಾಜಕಾರಣವೇ ಮಣಿಪುರದ ಇಂದಿನ ಪರಿಸ್ಥಿತಿಗೆ ಕಾರಣ. ಗುಪ್ತಚರ ಸಂಸ್ಥೆಗಳಿಗೆ ಇದೆಲ್ಲ ತಿಳಿಯದೇ ಇರಲು ಸಾಧ್ಯವಿಲ್ಲ. ಅಲ್ಲಿ ಏನು ನಡೆಯುತ್ತಿದೆ ಎಂದು ಅವರಿಗೆ ತಿಳಿದಿರಬೇಕು.

ಸರ್ಕಾರ ಇದನ್ನೆಲ್ಲ ಸುಮ್ಮನೆ ನೋಡುತ್ತಿರುವುದಾದರೆ, ಅವರು ಅಧಿಕಾರದಲ್ಲಿ ಮುಂದುವರಿಯಬಾರದು. ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಯ ಬಗ್ಗೆ ಮಾತನಾಡುವ ಮೊದಲು, ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿದ ಬಗ್ಗೆ ಬಿಜೆಪಿ ಮಾತನಾಡಬೇಕು” ಎಂದು ಹೇಳಿದ್ದಾರೆ.

ದೇಶ

ಮೋದಿಯ ಧಾರ್ಮಿಕ ಆರ್ಯ ಮಾದರಿಯನ್ನು ಸೋಲಿಸಲು ನಾಯಕರು ಮತ್ತು ಕಾರ್ಯಕರ್ತರ ಪಡೆ ಸಾಲುವುದಿಲ್ಲ; ಮೋದಿ ಮಾದರಿಯನ್ನು ಸೋಲಿಸಲು ಪೆರಿಯಾರ್ ಅವರ ದ್ರಾವಿಡ ಮಾದರಿಯೇ ಸರಿಯಾದ ಅಸ್ತ್ರ. ಎಂದು ಡಿಎಂಕೆ ಸಂಸದ ಎ.ರಾಜ ಹೇಳಿದ್ದಾರೆ.

ನೆನ್ನೆ ತಿರುಚ್ಚಿಯಲ್ಲಿ ಡಿಎಂಕೆ ತರಬೇತಿ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ರಾಜ, “ಇಂದು ಜಗತ್ತು ಭಾರತವನ್ನು ನೋಡಿ ಉಗುಳುತ್ತಿದೆ. ನಮ್ಮ ಊರಿನಲ್ಲಿ ಹಲವು ಜಾತಿ ಭೇದಗಳಿವೆ. ಬಡವ-ಶ್ರೀಮಂತ ಎಂಬ ಭೇದವಿದೆ. ಆದರೆ ಅದು ಯಾವುದೇ ಜಾತಿಯ ಮಹಿಳೆಯಾಗಿರಲಿ. ಆ ಮಹಿಳೆಯನ್ನು ಯಾರಾದರೂ ವಿವಸ್ತ್ರಗೊಳಿಸಲು ಸಾಧ್ಯವೇ? ನಾವು ಬಿಟ್ಟುಬಿಡುತ್ತೇವಾ? ಜಾತಿ ಭೇದ ನೋಡುವವರೂ ಕೂಡ, ಬೇರೆ ಜಾತಿಯ ಮಹಿಳೆಗೆ ಅನ್ಯಾಯವಾಗುತ್ತಿದ್ದರೆ ಪ್ರಶ್ನೆ ಮಾಡುತ್ತಾರೆ. ಈ ಮಣ್ಣಿನಲ್ಲಿ ಮಹಿಳೆಗೆ ಪ್ರತ್ಯೇಕ ಗೌರವವಿದೆ. ಆದರೆ ಇದು ಮೋದಿಯ ಬಳಿ ಕಾಣತ್ತಿಲ್ಲ.

ಒಂದು ಕಡೆ ಭ್ರಷ್ಟಾಚಾರ; ಒಂದು ಕಡೆ ಸರ್ವಾಧಿಕಾರ; ಇನ್ನೊಂದು ಕಡೆ ಧಾರ್ಮಿಕತೆ. ಮತೀಯತೆ ಮತ್ತು ಭ್ರಷ್ಟಾಚಾರ ಸೇರಿಕೊಂಡು ಡಿಎಂಕೆ ಪಕ್ಷವನ್ನು ನೋಡಿ, ಇದೊಂದು ಭ್ರಷ್ಟ ಪಕ್ಷ ಮತ್ತು ಕುಟುಂಬ ಆಡಳಿತ ಎಂದು ಹೇಳುತ್ತಿದೆ. ಹೌದು, ಇದು ಕುಟುಂಬ ಆಡಳಿತವೇ? ಗೋಪಾಲಪುರಂನ ಮನೆಯನ್ನು ಅಡಮಾನವಿಟ್ಟು, ಮಿಸಾದಲ್ಲಿ ಬಂಧಿತರಾಗಿ ಒಂದು ವರ್ಷಗಳಿಗೂ ಮೇಲಾಗಿ ಜೈಲಿನಲ್ಲಿದ್ದ ಕಾರ್ಯಕರ್ತರ ಕುಟುಂಬಕ್ಕೆ ಹಣ ಕಳುಹಿಸಿದ ಕುಟುಂಬದ ಯಜಮಾನನೇ ನಮ್ಮ ಕರುಣಾನಿಧಿ. ಈ ರೀತಿ ನೋಡುವುದಾದರೆ ಇದು ಕುಟುಂಬ ಆಡಳಿತವೇ? ನಮ್ಮ ಕುಟುಂಬವನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ (ಬಿಜೆಪಿ) ಇಲ್ಲ.

ಮೋದಿ ವಿರುದ್ಧ ಉತ್ತರದ ರಾಜ್ಯಗಳಲ್ಲಿ ದೊಡ್ಡ ಪಡೆಯೇ ಸೇರುತ್ತಿದೆ. ಆದರೆ ಮೋದಿ ಎಂಬ ಮತೀಯವಾದವನ್ನು ಸೋಲಿಸಲು ಈ ಪಡೆ ಸಾಲುವುದಿಲ್ಲ. ತತ್ವದ ಅಗತ್ಯವಿದೆ. ಪೆರಿಯಾರ್ ರವರ ದ್ರಾವಿಡ ತತ್ವವು ಮೋದಿಯನ್ನು ಬೀಳಿಸಬಲ್ಲ ಸರಿಯಾದ ಆಯುಧವಾಗಿದೆ. ಮೋದಿಯವರ ಆರ್ಯ ಮಾದರಿಯನ್ನು ಪೆರಿಯಾರ್ ಅವರ ದ್ರಾವಿಡ ಮಾದರಿಯಿಂದ ಮಾತ್ರ ಸೋಲಿಸಲು ಸಾಧ್ಯ” ಎಂದರು.

ರಾಜ್ಯ

ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತಿರುಮಲಕ್ಕೆ ಕರ್ನಾಟಕದಿಂದ ಆಗಮಿಸುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ನಿರ್ಮಿಸುತ್ತಿರುವ ವಸತಿಗೃಹ ಹಾಗೂ ಕಲ್ಯಾಣ ಮಂಟಪದ ಕಾಮಗಾರಿಯನ್ನು ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರಿಶೀಲನೆ ನಡೆಸಿದರು. ಇದರ ವೆಚ್ಚ ಸುಮಾರು 220 ಕೋಟಿಗಳಷ್ಟು ಆಗಲಿದ್ದು, ಇದೇ ವರ್ಷದ ಡಿಸೆಂಬರ್ ಅಂತ್ಯದೊಳಗೆ 384 ವಸತಿಗೃಹ ಹಾಗೂ ಕಲ್ಯಾಣ ಮಂಟಪದ ಕಾಮಗಾರಿ ಪೂರ್ಣವಾಗಲಿದೆ.

300 ವರ್ಷಗಳ ಹಿಂದೆ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರು ಕರ್ನಾಟಕದ ಭಕ್ತರಿಗಾಗಿ ತಿರುಮಲದಲ್ಲಿ 7 ಎಕರೆ ಭೂಮಿಯನ್ನು ಖರೀದಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ದಿನ ಜುಲೈ 26. ಈ ದಿನದ ವಿಶೇಷ ಪ್ರಯುಕ್ತ ಶ್ರೀವಾರಿ ಪಲ್ಲೋತ್ಸವ ದೇವರ ವಿಶೇಷ ಸೇವೆ ನಡೆಯುತ್ತಾ ಬಂದಿದ್ದು ಶ್ರೀವಾರಿ ಉತ್ಸವ ಮೂರ್ತಿಗೆ ವರ್ಷಕ್ಕೊಮ್ಮೆ ವಜ್ರ ವೈಡೂರ್ಯಗಳ ಅಲಂಕಾರದ ಉತ್ಸವವನ್ನು ಇದೇ ಸಂದರ್ಭದಲ್ಲಿ ನಡೆಸಲಾಯಿತು. ರಾಜ ಮಾತೆ ಶ್ರೀಮತಿ ಪ್ರಮೋದ ದೇವಿಯವರು ಈ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.

ಕರ್ನಾಟಕ ರಾಜ್ಯದ ಜನತೆಗೆ ಸುಭಿಕ್ಷತೆ, ಆರೋಗ್ಯ ದಯಪಾಲಿಸಲೆಂದು ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು. ತಿರುಮಲದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನ ಸಭೆಯನ್ನು ಇದೇ ಸಂದರ್ಭದಲ್ಲಿ ನಡೆಸಲಾಯಿತು. ಶಾಸಕರು ಹಾಗೂ ಟಿಟಿಡಿ ಸದಸ್ಯರಾದ ಎಸ್.ಆರ್.ವಿಶ್ವನಾಥ್, ಇಓ ದರ್ಣ ರೆಡ್ಡಿ, ಕೃಷ್ಣಮ್ ರಾಜು, ಮುಜರಾಯಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟೀರಿಯ ಹಾಗೂ ಮುಜರಾಯಿ ಇಲಾಖೆಯ ಆಯುಕ್ತರಾದ ಬಸವರಾಜೇಂದ್ರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ರಾಜಕೀಯ

ಉಡುಪಿ ವೀಡಿಯೊ ಪ್ರಕರಣವನ್ನು ಬಿಜೆಪಿ ಉದ್ದೇಶಪೂರ್ವಕವಾಗಿ ರಾಜಕೀಯಗೊಳಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ವೀಡಿಯೊ ಹರಿದಾಡಿಲ್ಲ. ಹರಿದಾಡುತ್ತಿರುವ ವೀಡಿಯೊ ಕೂಡ ನಕಲಿ. ಪೊಲೀಸರು ವಿದ್ಯಾರ್ಥಿನಿಯರ ಮೊಬೈಲ್ ರಿಟ್ರೀವ್ ಮಾಡಿದ್ದಾರೆ. ಅಲ್ಲಿ ಯಾವುದೇ ವೀಡಿಯೊಗಳಿಲ್ಲ. ಮತ್ಯಾಕೆ ಈ ರಾದ್ಧಾಂತ? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಪ್ರಶ್ನಿಸಿದ್ದಾರೆ.

ಬೊಮ್ಮಾಯಿ, ಸೇರಿದಂತೆ ರಾಜ್ಯ ಬಿಜೆಪಿ ನಾಯಕರು, ಉಡುಪಿ ಪ್ರಕರಣದಲ್ಲಿ ಇಲಿ ಹೋಗಿದನ್ನೇ ಹುಲಿ ಹೋದಂತೆ ಬಿಂಬಿಸುತ್ತಿದ್ದಾರೆ. ಬೊಮ್ಮಾಯಿಯವರಿಗೊಂದು ಪ್ರಶ್ನೆ. ಉಡುಪಿ ಪ್ರಕರಣದಲ್ಲಿ ಇಷ್ಟು ಬಟ್ಟೆ ಹರಿದುಕೊಳ್ಳುತ್ತಿರುವ ನೀವು, ಪ್ರತೀಕ್ ಗೌಡ ಎಂಬ ತೀರ್ಥಹಳ್ಳಿಯ ಎಬಿವಿಪಿ ಘಟಕದ ಅಧ್ಯಕ್ಷ ಹಿಂದೂ ಯುವತಿಯರ ಅಶ್ಲೀಲ ವೀಡಿಯೊ ಬಿಟ್ಟಾಗ ಎಲ್ಲಿದ್ದಿರೀ?

ಪ್ರತೀಕ್ ಗೌಡ ಎಂಬ ಎಬಿವಿಪಿ ಯವನೊಬ್ಬ ಹಿಂದೂ ಯುವತಿಯರ ಅಶ್ಲೀಲ ವೀಡಿಯೊ ಹರಿಬಿಟ್ಟಾಗ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರ ನವರಂದ್ರಗಳೂ ಬಂದ್ ಆಗಿತ್ತು. ಈಗ ಧರ್ಮರಕ್ಷಕರ ಮುಖವಾಡ ತೊಟ್ಟು ಅಖಾಡಕ್ಕಿಳಿದಿದ್ದಾರೆ‌. ಹಿಂದೂ ಯುವತಿಯರ ಅಶ್ಲೀಲ ವೀಡಿಯೊ ಹರಿಬಿಟ್ಟ ‘ಪ್ರತೀಕ್’ನ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಇವರ ಹೋರಾಟವೇ?

ಬೊಮ್ಮಾಯಿಯವರೇ, ಪೊಲೀಸರು ನಿಮ್ಮ ಆಡಳಿತದಲ್ಲಿ ರಾಜಕೀಯದ ಒತ್ತಡಕ್ಕೆ ಮಣಿದಿರಬಹುದು. ಆದರೆ ನಾವು ಪೋಲಿಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಹಿಂದೂ ಯುವತಿಯರ ಅಶ್ಲೀಲ ವೀಡಿಯೊ ಹರಿಬಿಟ್ಟ ಪ್ರತೀಕ್ ಗೌಡ ಎಂಬಾತನನ್ನು ನಮ್ಮ ಪೊಲೀಸರು ಒದ್ದು ಒಳಗಾಕ್ಕಿದ್ದಾರೆ. ಬಹುಶಃ ಧರ್ಮ ರಕ್ಷಣೆಯ ಗ್ರಾಫ್ ನಿಮಗಿಂತ ನಮ್ಮದ್ದೇ ಜಾಸ್ತಿ ಇದೆಯಲ್ಲವೇ?

ಪ್ರಾಜ್ಞರಾದ ಬೊಮ್ಮಾಯಿಯವರು ಬಿಜೆಪಿಯ ಟೂಲ್‌ಕಿಟ್‌ನ ಭಾಗವಾಗಬಾರದು. ಉಡುಪಿ ಪ್ರಕರಣ ವಯೋಸಹಜ ಚೇಷ್ಟೆ ಮತ್ತು ಹುಡುಗಾಟ ಎಂದು ಬೊಮ್ಮಾಯಿಯವರಿಗೂ ಕೂಡ ತಿಳಿದಿದೆ. ಆದರೂ ಪಾಪ ಬಿಜೆಪಿಯಲ್ಲಿ ತಮ್ಮ ಅಸ್ತಿತ್ವಕ್ಕಾಗಿ ಬೊಮ್ಮಾಯಿಯವರು ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಕುತೂಹಲವೆಂದರೆ ಸಿಎಂ ಆದವರು ವಿಪಕ್ಷ ಸ್ಥಾನ ಪಡೆಯಲು ಇಷ್ಟೆಲ್ಲಾ ಮಾಡಬೇಕೆ? ಎಂದು ಟೀಕಿಸಿದ್ದಾರೆ

ದೇಶ

ಕೊಯಮತ್ತೂರು ಜಿಲ್ಲೆಯ ಮೇಟ್ಟುಪಾಳ್ಯಂ ನಗರಸಭೆಯಲ್ಲಿ 33 ವಾರ್ಡ್‌ಗಳಿವೆ. ಅಧ್ಯಕ್ಷರಾಗಿ ಮೆಹ್ರಿಬಾ ಪರ್ವೀನ್, ಉಪಾಧ್ಯಕ್ಷರಾಗಿ ಅರುಳ್ ವಡಿವು ಇದ್ದಾರೆ. ಈ ಹಿನ್ನಲೆಯಲ್ಲಿ, ನಗರಸಭೆ ವ್ಯಾಪ್ತಿಯ 11ನೇ ವಾರ್ಡ್‌ನಲ್ಲಿ ಡಿಎಂಕೆ ನಗರ ಕಾರ್ಯದರ್ಶಿ ಮೊಹಮ್ಮದ್ ಯೂನಸ್ ಅವರ ಪತ್ನಿ ಜಮೃತ್ ಬೇಗಂ ವಾರ್ಡ್ ಸದಸ್ಯರಾಗಿ ಇದ್ದಾರೆ.

ಅವರ ವಾರ್ಡ್‌ನಲ್ಲಿ ತ್ಯಾಜ್ಯ ನೀರು ಕಾಲುವೆ ದುರಸ್ತಿ, ವಸತಿ ಪ್ರದೇಶದಲ್ಲಿ ಕಸ ಸಂಗ್ರಹ, ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಕಾಮಗಾರಿ ನಡೆಸಲು ನಗರಸಭೆ ಆಡಳಿತ ಮಂಡಳಿಗೆ ವಾರ್ಡ್ ಸದಸ್ಯೆ ಜಮೃತ್ ಬೇಗಂ ಹಲವು ಬಾರಿ ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ನಗರಸಭೆ ಅಧ್ಯಕ್ಷರು ಸೂಕ್ತ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.

ಏತನ್ಮಧ್ಯೆ, ಅವರ 11ನೇ ವಾರ್ಡ್‌ನಲ್ಲಿ 5 ದಿನಗಳಿಂದ ಕಸ ಸಂಗ್ರಹಿಸಲು ಸ್ವಚ್ಛತಾ ಕಾರ್ಯಕರ್ತರು ಬಂದಿಲ್ಲ ಎಂದು ಹೇಳಲಾಗುತ್ತಿದೆ. ಇದರಿಂದ ವಾರ್ಡ್ನ ಜನರು ಅವರ ಮನೆಗೆ ತೆರಳಿ ವಾಗ್ವಾದ ನಡೆಸಿದ್ದಾರೆ. ಇದರಿಂದ ಹತಾಶರಾದ ಜಮೃತ್ ಬೇಗಂ ಹಾಗೂ ಅವರ ಪುತ್ರರು ವಾರ್ಡ್ ವ್ಯಾಪ್ತಿಯಲ್ಲಿ ಸಂಗ್ರಹವಾದ ಕಸವನ್ನು ವಿಲೇವಾರಿ ಮಾಡುವ ಕಾರ್ಯದಲ್ಲಿ ತೊಡಗಿದರು.

ಇದೇ ವೇಳೆ ನಗರಸಭೆ ಆಡಳಿತ ಕಸ ಸಂಗ್ರಹಿಸದ ಕಾರಣ ವಾರ್ಡ್ ಸದಸ್ಯರೊಬ್ಬರು ತಮ್ಮ ಪುತ್ರರೊಂದಿಗೆ ಸೇರಿ ಕಸ ಎತ್ತುತ್ತಿರುವುದನ್ನು ಕಂಡ ಬಡಾವಣೆಯ ನಿವಾಸಿಗಳು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

A DMK councillor of the Mettupalayam Municipality collected waste from houses, allegedly after conservancy workers of the civic body failed to do their duty for five days. M.Jamruth Begum, councillor of ward no: 11 of the municipality, stepped in for conservancy work on Tuesday along with her sons.

ದೇಶ ರಾಜ್ಯ

ಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಎರಡನೇ ಸಭೆಯಲ್ಲಿ ಒಕ್ಕೂಟಕ್ಕೆ ಇಂಡಿಯಾ (I.N.D.I.A) ಎಂದು ಹೆಸರಿಡಲಾಗಿತ್ತು. ಇದು ವೈರಲ್ ಆಗಿದ್ದು, ಈಗ ದೇಶಾದ್ಯಂತ ಇಂಡಿಯಾ VS ಎನ್ ಡಿಎ ಎಂದು ರಾಜಕೀಯ ಮಾಡಲಾಗುತ್ತಿದೆ.

ಈ ಹಿನ್ನಲೆಯಲ್ಲಿ,  ವಿರೋಧ ಪಕ್ಷಗಳ ಮೈತ್ರಿಯನ್ನು ‘ಇಂಡಿಯನ್ ಮುಜಾಹಿದ್ದೀನ್, ಈಸ್ಟ್ ಇಂಡಿಯಾ ಕಂಪನಿ, ಪಿಎಫ್‌ಐ ಕೂಡ ಇಂಡಿಯಾವನ್ನು ಹೊಂದಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು, “ನಮ್ಮ ಪಾಸ್‌ಪೋರ್ಟ್ ಕೂಡ ರಿಪಬ್ಲಿಕ್ ಆಫ್ ಇಂಡಿಯಾ ಎಂದು ಬರೆಯುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ್ದಾರೆ.  

“ಮೋದಿಜಿಯವರ ಮುದ್ದಿನ ಯೋಜನೆಗಳಾದ ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, ಖೇಲೋ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಡಿಜಿಟಲ್ ಇಂಡಿಯಾ ಅವರ ಪ್ರಮುಖ ಚಿಂತಕರ ಚಾವಡಿ (ನೀತಿ ಆಯೋಗ) ಕೂಡ ಟೀಮ್ ಇಂಡಿಯಾ ಎಂದು ಕರೆಯಲ್ಪಡುತ್ತದೆ.

ಸರ್ವೋಚ್ಚ ನಾಯಕ (ನರೇಂದ್ರ ಮೋದಿ) ಇಂಡಿಯಾ ಮೈತ್ರಿಯಿಂದ ವಿಚಲಿತರಾಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ನಮಗಿರುವ ಸಮಸ್ಯೆ ಏನೆಂದರೆ, ಪ್ರಧಾನಿ ಈಶಾನ್ಯಕ್ಕಿಂತ (ಮಣಿಪುರ) ಈಸ್ಟ್ ಇಂಡಿಯಾ ಕಂಪನಿಯ ಮೇಲೆ ಹೆಚ್ಚು ಒಲವು ಹೊಂದಿದ್ದಾರೆ. ಮಣಿಪುರ ಟೂಲ್‌ಕಿಟ್‌ನ ದಿಕ್ಕು ತಪ್ಪಿಸುವ ಸಮಸ್ಯೆಗಳ ಕಿಟ್ ಅನ್ನು ಸಕ್ರಿಯಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ದೇಶ

ಡಿ.ಸಿ.ಪ್ರಕಾಶ್

ಮಣಿಪುರವನ್ನು 1949ರಲ್ಲಿ ಭಾರತಕ್ಕೆ ಸೇರಿಸಲಾಯಿತು. ಇದನ್ನು 1956ರಲ್ಲಿ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ, 1972ರಲ್ಲಿ ರಾಜ್ಯ ಸ್ಥಾನಮಾನ ನೀಡಲಾಯಿತು. ಮಣಿಪುರವು ಭೌಗೋಳಿಕವಾಗಿ ಗುಡ್ಡಗಾಡು ಪ್ರದೇಶ. ಅಲ್ಲಿ ಬಯಲು ಪ್ರದೇಶವೆಂದರೆ ಅದು ಶೇ.10ರಷ್ಟಿರುವ ಕಣಿವೆ ಭೂಮಿ ಮಾತ್ರ. ಈ ಕಣಿವೆ ಪ್ರದೇಶದಲ್ಲಿ ಬಹುಪಾಲು ಅಂದರೆ ರಾಜ್ಯದ ಜನಸಂಖ್ಯೆಯ ಶೇ.53% ರಷ್ಟು ಮಣಿಪುರಿ ಮಾತನಾಡುವ ‘ಮೈತಿ’ ಜನರು ಇಲ್ಲಿ ವಾಸಿಸುತ್ತಾರೆ. ಶೇ.90 ರಷ್ಟಿರುವ ಗುಡ್ಡಗಾಡು ಪ್ರದೇಶಗಳಲ್ಲಿ ಕುಕಿ, ನಾಗಾ ಮತ್ತು ಸೋಮಿ ಸೇರಿದಂತೆ ಬುಡಕಟ್ಟು ಗುಂಪುಗಳು ವಾಸಿಸುತ್ತವೆ. ನಿರ್ದಿಷ್ಟವಾಗಿ ಹೇಳುವುದಾದರೆ, ಕಣಿವೆಯ ಬಹುಪಾಲು ಜನರು ಹಿಂದೂಗಳು. ಗುಡ್ಡಗಾಡು ಜನಾಂಗದವರಲ್ಲಿ ಹೆಚ್ಚಿನವರು ಕ್ರಿಶ್ಚಿಯನ್ನರು.

ಈ ಎರಡು ಸಾಮಾಜಿಕ-ಜನಾಂಗೀಯ ಗುಂಪುಗಳ ನಡುವಿನ ಪ್ರಮುಖ ವ್ಯತ್ಯಾಸವೆಂದರೆ ಅವರ ಆವಾಸಸ್ಥಾನ. ಸಂವಿಧಾನದ 371-ಸಿ ಪ್ರಕಾರ, ಬುಡಕಟ್ಟು ಜನರಲ್ಲದವರು ಗುಡ್ಡಗಾಡು ಪ್ರದೇಶಗಳಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ನಿಷೇಧಿಸುತ್ತದೆ. (ಆದರೆ ಬುಡಕಟ್ಟು ಜನರು ಬಯಲು ಮತ್ತು ಕಣಿವೆಗಳಲ್ಲಿ ಭೂಮಿಯನ್ನು ಪಡೆದುಕೊಳ್ಳಬಹುದು) ಈ ಕಾರಣದಿಂದ ಕಳೆದ 2013ರಲ್ಲಿ “ನಾವು ವಾಸಿಸುವ ಬಯಲು ಭೂಮಿ ನಮಗೆ ಸಾಕಾಗುತ್ತಿಲ್ಲ. ಬರ್ಮಾ ಮತ್ತು ಬಾಂಗ್ಲಾದೇಶದ ನಿರಾಶ್ರಿತರಿಂದ ನಮ್ಮ ಆವಾಸಸ್ಥಾನಕ್ಕೆ ಬೆದರಿಕೆ ಇದೆ. ಹೀಗಾಗಿ ನಮ್ಮನ್ನೂ ಬುಡಗಟ್ಟು ಜನರೆಂದು ಘೋಷಿಸಿ” ಎಂದು ಮೈತಿ ಹಿಂದೂಗಳಿಂದ ಆಗ್ರಹಿಸಲಾಯಿತು. ಇದು ಸಮಸ್ಯೆಯ ಮೊದಲ ಅಂಶವಾಗಿದೆ.

ಹತ್ತು ವರ್ಷಗಳ ನಂತರ, ಏಪ್ರಿಲ್ 19, 2023 ರಂದು ಮಣಿಪುರ ನ್ಯಾಯಾಲಯವು ಈ ಸಂಬಂಧ ಆದೇಶವೊಂದನ್ನು ನೀಡಿತ್ತು. ಅದರಲ್ಲಿ, ಮೈತಿ ಹಿಂದೂಗಳನ್ನು ಬುಡಕಟ್ಟು ಜನಾಂಗಕ್ಕೆ ಸೇರಿಸುವ ಬಗ್ಗೆ ರಾಜ್ಯ ಸರ್ಕಾರ (ಬಿಜೆಪಿ) 4 ವಾರಗಳಲ್ಲಿ ಕೇಂದ್ರ ಸರ್ಕಾರಕ್ಕೆ (ಬಿಜೆಪಿ) ಶಿಫಾರಸುಗಳನ್ನು ನೀಡಬೇಕು ಎಂದು ಉಲ್ಲೇಖಿಸಿತ್ತು.

ಈಶಾನ್ಯ ರಾಜ್ಯಗಳಲ್ಲಿ ಆರ್.ಎಸ್.ಎಸ್. ಸಂಘಟಣೆ

ಈಗಾಗಲೇ BC, SC, EWC ಯಂತಹ ಮೀಸಲಾತಿಗಳನ್ನು ಬಯಲು ಸೀಮೆಯಲ್ಲಿ ವಾಸಿಸುವ ಮೈತಿಗಳು ಅನುಭವಿಸುತ್ತಿದ್ದಾರೆ. ರಾಜ್ಯದ 60 ವಿಧಾನಸಭಾ ಕ್ಷೇತ್ರಗಳ ಪೈಕಿ 40 ಕ್ಷೇತ್ರಗಳು ಕಣಿವೆಗಳಲ್ಲಿ ವಾಸಿಸುವ ಮೈತಿ ಹಿಂದೂಗಳ ಪಾಲಾಗಿವೆ. ಸರ್ಕಾರಿ ಇಲಾಖೆಗಳಲ್ಲಿ, ಶಿಕ್ಷಣ ಮತ್ತು ಆರ್ಥಿಕತೆಯಲ್ಲಿ ಅವರಿಗೆ ಆದ್ಯತೆ ನೀಡಲಾಗುತ್ತಿದೆ. ಈಗ ಅವರನ್ನೂ ಬುಡಕಟ್ಟು ಎಂದು ಘೋಷಿಸಿದರೆ, ಮಣಿಪುರದ ಬುಡಕಟ್ಟು ಗುಂಪುಗಳು ತಮ್ಮ ಭೂಮಿ ಮತ್ತು ಭವಿಷ್ಯವನ್ನು ಕಳೆದುಕೊಳ್ಳುತ್ತವೆ ಎಂದು ಪ್ರತಿಭಟಿಸಲು ಪ್ರಾರಂಭಿಸಿದವು.

ಇದಕ್ಕಾಗಿ ಮಣಿಪುರದ ಆಲ್ ಟ್ರೈಬಲ್ ಸ್ಟೂಡೆಂಟ್ಸ್ ಯೂನಿಯನ್ (ATSUM) ಏಪ್ರಿಲ್ 23 ರಂದು ಗುಡ್ಡಗಾಡು ಪ್ರದೇಶಗಳಲ್ಲಿ 12 ಗಂಟೆಗಳ ಮುಷ್ಕರವನ್ನು ನಡೆಸಿತು. ನಂತರ, ಮೇ 3 ರಂದು, ಮಣಿಪುರದ ರಾಜಧಾನಿ ಇಂಫಾಲ್ (ಬಯಲು ಪ್ರದೇಶ) ಸೇರಿದಂತೆ 10 ಸ್ಥಳಗಳಲ್ಲಿ ರ‍್ಯಾಲಿಯನ್ನು ಆಯೋಜಿಸಿತು. ಈ ವೇಳೆ 60 ಸಾವಿರಕ್ಕೂ ಹೆಚ್ಚು ಶಾಲಾ ಕಾಲೇಜು ವಿದ್ಯಾರ್ಥಿಗಳು ಜಮಾಯಿಸಿ ಪ್ರತಿಭಟನೆ ದಾಖಲಿಸಿದರು. ಆ ರ‍್ಯಾಲಿಯಲ್ಲಿ ಮೊದಲ ಬಾರಿಗೆ ಯೋಜಿತ ದಾಳಿ ನಡೆಸಲಾಯಿತ್ತು.

‘ಮೈತಿ ಮಹಿಳೆಯನ್ನು ಕುಕಿ ಬುಡಕಟ್ಟು ಜನಾಂಗದವರು ಲೈಂಗಿಕ ದೌರ್ಜನ್ಯ ಎಸಗಿ ಕೊಂದಿದ್ದಾರೆ’ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದು, ದಾಳಿಗೆ ಪ್ರಮುಖ ಕಾರಣವಾಯಿತು, ಆ ದ್ವೇಷ ಪ್ರಚಾರದ ಬಿಸಿ, ಸರಣಿ ಹಿಂಸೆಯ ಜ್ವಾಲೆಯನ್ನು ಹೊತ್ತಿಸಿತು. ಆ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಬಹುಪಾಲರು ಬುಡಕಟ್ಟು ಕುಕಿ ಸಮುದಾಯಕ್ಕೆ ಸೇರಿದವರಾಗಿದ್ದರು. ಇವರು ಹೆಚ್ಚಾಗಿ ವಾಸಿಸುವ ಸುರಸಂದಪುರ ಜಿಲ್ಲೆ, ರಾಜಧಾನಿ ಇಂಫಾಲದಲ್ಲೂ ಕುಕಿ ಬುಡಕಟ್ಟು ಜನಾಂಗವನ್ನು ಗುರಿಯಾಗಿಸಿಕೊಂಡು ಮೈತಿಗಳು ದಾಳಿ ನಡೆಸಿದರು.

ಆರ್.ಎಸ್.ಎಸ್. ಪಥಸಂಚಲನ ಇಂಫಾಲ್, ಮಣಿಪುರ

ಹಿಂದೂ ಧಾರ್ಮಿಕ ಚಿಹ್ನೆಗಳು ಮತ್ತು ಧ್ವಜಗಳು ಇರುವ ಮನೆಗಳನ್ನು ಹೊರತುಪಡಿಸಿ, ಉಳಿಕೆ ಇರುವ ಕುಕಿ ಮನೆಗಳ ಮೇಲೆ ದಾಳಿಯನ್ನು ತೀವ್ರಗೊಳಿಸಲಾಯಿತು. ಈ ಹಿಂಸಾಚಾರದಲ್ಲಿ ಮನೆಗಳು, ಶಾಲೆಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಒಡೆದು ಹಾಕಲಾಗಿದೆ ಮತ್ತು ಬೆಂಕಿ ಹಚ್ಚಲಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಕುಕಿ ಬುಡಕಟ್ಟು ಜನಾಂಗದವರ ಸ್ಮಾರಕಗಳು ಮತ್ತು ಪೂಜಾ ಸ್ಥಳಗಳನ್ನು ಕೆಡವಲಾಗಿದೆ. ಮೇ 3 ರಂದು ನಡೆದ ಹಿಂಸಾಚಾರದಲ್ಲಿ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಹಲವರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ.

ಆ ರಾತ್ರಿ ಮಣಿಪುರದ ಎಂಟು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಯಿತು ಮತ್ತು ಇಂಟರ್ನೆಟ್ ಸೇವೆಗಳನ್ನು ಸಹ ಕಡಿತಗೊಳಿಸಲಾಯಿತು. ಸೇನೆಯನ್ನು ಕರೆಸಿ, ಪ್ರತಿಭಟನಾಕಾರರನ್ನು ಕಂಡರೆ ಗುಂಡಿಕ್ಕುವಂತೆ ಆದೇಶವನ್ನೂ ಹೊರಡಿಸಲಾಯಿತು. ಈ ಹಿನ್ನಲೆಯಲ್ಲಿ ಮಣಿಪುರ ರಾಜ್ಯದ ಕುಸ್ತಿಪಟು ಮೇರಿ ಕೋಮ್ ಅವರು ಟ್ವೀಟ್ ಮೂಲಕ ಪ್ರಧಾನಿಯವರಿಗೆ ‘ನಮ್ಮ ರಾಜ್ಯ ಹೊತ್ತಿ ಉರಿಯುತ್ತಿದೆ’ ಎಂದು ಮನವಿ ಮಾಡಿದರು. ಆದರೆ ಅಂದು ಕರ್ನಾಟಕ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿ ಮಹೋದಯರು ಬ್ಯುಸಿಯಾಗಿದ್ದರು.

ಮಣಿಪುರದ ಎರಡು ಜನಾಂಗೀಯ ಗುಂಪುಗಳ ನಡುವೆ ಹರಡಿರುವ ಈ ದ್ವೇಷ ರಾಜಕೀಯ, ಹಿಂಸಾಚಾರ ಮತ್ತು ಗಲಭೆಗಳ ಹಿಂದೆ ನ್ಯಾಯಾಲಯದ ಆದೇಶಗಳು ಮಾತ್ರವಲ್ಲದೆ ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಸಂಪನ್ಮೂಲಗಳ ಶೋಷಣೆಯನ್ನೂ ಒಳಗೊಂಡಿದೆ. 2022ರಲ್ಲಿ ಎರಡು ಹಂತಗಳಲ್ಲಿ ನಡೆದ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 32 ಸ್ಥಾನಗಳನ್ನು ಗೆದ್ದಿತ್ತು. ಗೆದ್ದವರಲ್ಲಿ ಬಹುಪಾಲರು ಮೈತಿ ಸಮುದಾಯಕ್ಕೆ ಸೇರಿದ ಹಿಂದೂಗಳು.

ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಮೈತೇಯಿ ರಾಜಕುಮಾರ ಟಿಕೇಂದ್ರಜಿತ್, ರಾಜ ಕುಲಚಂದ್ರ ಭಾವಚಿತ್ರ.

ಸುಮಾರು 300 ವರ್ಷಗಳಷ್ಟು ಹಳೆಯದಾದ ಮೈತಿಗಳ ‘ಸನಾಮಹಿ’ ಸಂಸ್ಕೃತಿಯು ಅಲ್ಲಿನ ಹಿಂದೂ ಧರ್ಮದ ಆಚರಣೆಗಳೊಂದಿಗೆ ಹೆಣೆದುಕೊಂಡಿದೆ. ಹಾಗಾಗಿ, ಬಹುಸಂಖ್ಯಾತ ಮೈತಿ ಸಮುದಾಯದವರ ಮೇಲೆ ಕಾಳಜಿ ವಹಿಸುವುದಾಗಿ ಹೇಳಿಕೊಂಡಿರುವ ಬಿಜೆಪಿ, ಕ್ರಿಶ್ಚಿಯನ್ ಕುಕಿ ಬುಡಕಟ್ಟುಗಳ ವಿರುದ್ಧ ಮೈತಿ ಸಮುದಾಯವನ್ನು ಎತ್ತಿಕಟ್ಟಿ ರಾಜಕೀಯ ಲಾಭ ಪಡೆದುಕೊಂಡಿದೆ. ಇದಕ್ಕಾಗಿ, ಮಣಿಪುರದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಯೋಜನೆಯನ್ನು ಜಾರಿಗೆ ತರಬೇಕೆಂಬ ಮೈತಿಗಳ ಬೇಡಿಕೆಗೆ ಆದ್ಯತೆ ನೀಡಲಾಗುತ್ತಿದೆ. ಇದು ಕುಕಿ ಬುಡಕಟ್ಟುಗಳನ್ನು ಬಯಲು ಸೀಮೆಯಿಂದ ಓಡಿಸುವ ಕುತಂತ್ರವೂ ಇದರಲ್ಲಿ ಅಡಗಿದೆ.

ಒಂದೆಡೆ ಆಡಳಿತಾರೂಢ ಬಿಜೆಪಿ ಸರ್ಕಾರ ಅರಣ್ಯ ರಕ್ಷಣೆಯ ಹೆಸರಿನಲ್ಲಿ ಕುಕಿ ಬುಡಕಟ್ಟುಗಳನ್ನು ಗುಡ್ಡಗಾಡು ಪ್ರದೇಶಗಳಿಂದ ಹೊರದಬ್ಬಿ ಮನೆ, ಕಟ್ಟಡಗಳನ್ನು ನೆಲಸಮ ಮಾಡುತ್ತಿದೆ. ಮತ್ತೊಂದೆಡೆ ಗುಡ್ಡಗಾಡು ಪ್ರದೇಶದಲ್ಲಿ ಬುಡಕಟ್ಟುಗಳಲ್ಲದವರ ಅತಿಕ್ರಮಣಗಳೂ ಹೆಚ್ಚುವಂತೆ ನೋಡಿಕೊಳ್ಳುತ್ತಿವೆ. ಏತನ್ಮಧ್ಯೆ, ‘ನೆರೆಯ ದೇಶಗಳಿಂದ ಕುಕಿ ಬುಡಕಟ್ಟು ಜನಾಂಗದವರು ಮಣಿಪುರಕ್ಕೆ ನುಸುಳಿದ್ದಾರೆ ಮತ್ತು ಸ್ಥಳೀಯ ಕುಕಿ ಜನರು ಅವರನ್ನು ಬೆಂಬಲಿಸುತ್ತಿದ್ದಾರೆ’ ಎಂದು ವ್ಯವಸ್ಥಿತವಾಗಿ ದ್ವೇಷದ ಅಭಿಯಾನವನ್ನು ಮೈತೇಯಿ ಸಮುದಾಯ ಮತ್ತು ಸಂಘಪರಿವಾರದ ಕೃಪಾ ಫೋಸಿತ ಸಂಘಟನೆಗಳು ಮಾಡುತ್ತಿವೆ.

ಧಾರ್ಮಿಕ ನಿಂದನೆಗಳು ಇವುಗಳಿಂದ ಹೊರತಾಗಿಲ್ಲ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಅಸಂಖ್ಯಾತ ಕ್ರೈಸ್ತ ಚರ್ಚುಗಳನ್ನು ರಾಜ್ಯ ಸರ್ಕಾರದ ಒಡೆತನದ ಜಾಗದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಿ ಬಿಜೆಪಿ ಸರ್ಕಾರ ಕೆಡವುತ್ತಿದೆ. ಪ್ರಸ್ತುತ ಹಿಂಸಾಚಾರದಲ್ಲಿ ಕ್ಯಾಥೋಲಿಕ್ ಚರ್ಚ್, ಲುಥೆರನ್ ಚರ್ಚ್ ಮತ್ತು ಬ್ಯಾಪ್ಟಿಸ್ಟ್ ಕನ್ವೆನ್ಷನ್ ಚರ್ಚ್ ಸೇರಿದಂತೆ ನೂರಾರು ಚರ್ಚುಗಳು ಸುಟ್ಟು ಹೋಗಿವೆ ಎಂದು ವರದಿಯಾಗಿವೆ. ಇದೆಲ್ಲವೂ 1983ರಲ್ಲಿ ಅಸ್ಸಾಂನಲ್ಲಿ ನಡೆದ ಹಿಂಸಾತ್ಮಕ ನೆಲ್ಲಿ ಹತ್ಯಾಕಾಂಡದ ನಂತರದ ಘಟನೆಗಳನ್ನು ನೆನಪಿಸುತ್ತದೆ. ಈ ಕೃತ್ಯದ ಹಿಂದೆಯೂ ಆರೆಸ್ಸೆಸ್ ಸಂಘಟನೆಯ ಕೈವಾಡವಿತ್ತು ಎನ್ನುತ್ತಾರೆ ಅಸ್ಸಾಂನ ಬುಡಕಟ್ಟು ಜನರು.

ಸನಾಮಹಿ ಧರ್ಮದ ಪವಿತ್ರ ಚಿನ್ಹೆ

ಕರ್ನಾಟಕದಲ್ಲಿ ನಮಗೆ ತಿಳಿದ ಹಿಂದೂ ಸಂಘಟನೆಗಳಂತೆಯೆ ಮಣಿಪುರದಲ್ಲೂ ಅರಂಬೈ ತೆಂಗೋಲ್, ಮೈತಿ-ಲೀಪನ್ ಸೇರಿದಂತೆ ಬಿಜೆಪಿಯ ಆಶೀರ್ವಾದ ಪಡೆದ ಕೆಲವು ಹಿಂದೂ ಫ್ಯಾಸಿಸ್ಟ್ ಸಂಘಟನೆಗಳು ಈ ಹಿಂಸಾಚಾರದಲ್ಲಿ ತೊಡಗಿಕೊಂಡಿವೆ ಎಂದು ಹೇಳಲಾಗುತ್ತಿದೆ. ಆಧುನಿಕ ಬಂದೂಕುಗಳನ್ನು ಹಿಡಿದುಕೊಂಡು ದ್ವಿಚಕ್ರ ವಾಹನಗಳಲ್ಲಿ ಗುಂಪು ಗುಂಪಾಗಿ ತೆರಳಿ, ಪೊಲೀಸ್ ಠಾಣೆಗಳನ್ನು ಲೂಟಿ ಮಾಡಿ, ಕುಕಿ ಆದಿವಾಸಿಗಳ ಹಳ್ಳಿಗಳಿಗೆ ನುಗ್ಗಿ, ಅವರ ಮನೆ, ಸಾಮಾಗ್ರಿ, ಹೆಂಗಸರು ಮತ್ತು ಪುರುಷರನ್ನು ಧ್ವಂಸಗೊಳಿಸಿ ಹತ್ಯೆಯಲ್ಲಿ ತೊಡಗುತ್ತಾರೆ. ಮಣಿಪುರದ ರಾಜಪ್ರಭುತ್ವದ ಸಂಸ್ಕೃತಿಯಾದ ‘ಸನಾಮಹಿ’ ಸಾಮ್ರಾಜ್ಯವನ್ನು ಮರಳಿ ತರುವುದು ಈ ಹಿಂದೂ ಸಂಘಟನೆಗಳ ಮುಖ್ಯ ಗುರಿಯಾಗಿದೆ. ಮಣಿಪುರದ ಆರ್‌ಎಸ್ಎಸ್ ಪ್ರಧಾನ ಕಛೇರಿಯಲ್ಲಿ ಅವರ ಸನಾಮಹಿ ಧ್ವಜವೇ ಹಾರುತ್ತಿದೆ ಎಂದು ಹೇಳಲಾಗುತ್ತಿದೆ.

ಆರ್ಥಿಕವಾಗಿ, ಕುಕಿ ಬುಡಕಟ್ಟು ಜನಾಂಗದವರ ಭೂಮಿಯೇ, ಬಯಲು ಸೀಮೆಯಲ್ಲಿ ವಾಸಿಸುವ ಮೈತಿಗಳ ಗುರಿಯಾಗಿದೆ. ಬುಡಕಟ್ಟು ಜನಾಂಗದವರೆಂದು ಘೋಷಿಸಿಕೊಂಡರೆ ಗುಡ್ಡಗಾಡು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು. ಆದರೆ, ಇದು ಮೈತಿಗಳ ಒಟ್ಟಾರೆ ಮನಸ್ಥಿತಿಯಲ್ಲ. ಅದೇ ಸಮಾಜದ ಹಣವಂತ ಆಡಳಿತ ವರ್ಗದ ಬೇಡಿಕೆ. ಬಿಜೆಪಿ ಸರ್ಕಾರದ ರಾಷ್ಟ್ರೀಯ ಖಾದ್ಯ ತೈಲ ಯೋಜನೆಗಾಗಿ National Mission on Edible Oils-Oil Palm (NMEO-OP) ಈಶಾನ್ಯ ರಾಜ್ಯಗಳಲ್ಲಿ 2.5 ಲಕ್ಷ ಹೆಕ್ಟೇರ್ ಭೂಮಿ ಬೇಕು. ಅದರ ಬೃಹತ್ ಜಲ ಸಂಪನ್ಮೂಲ ಬೇಕು. ಪತಂಜಲಿ, ಗೋದ್ರೇಜ್, ರುಚಿ, ಸಂಜೀವ್ ಗೋಯೆಂಕಾ ಅವರಂತಹ ದೊಡ್ಡ ಬಂಡವಾಳಶಾಹಿಗಳು ತಮ್ಮ ತೈಲ ವ್ಯವಹಾರವು ಅಭಿವೃದ್ಧಿ ಹೊಂದಲು ಯಾವುದೇ ತೊಂದರೆಯಿಲ್ಲದೆ ಆದಿವಾಸಿಗಳ ಭೂಮಿಯನ್ನು ಪಡೆಯಬೇಕಾಗಿದೆ. ಅವರು ವಾಸಿಸುವ ಜೌಗು ಭೂಮಿಯಿಂದ ಮತ್ತು ಜಲಮೂಲಗಳಿಂದ ಅವರನ್ನು ಓಡಿಸಬೇಕು.

ಮಣಿಪುರದ ಬುಡಕಟ್ಟು ಮಹಿಳೆಯರನ್ನು ವಿವಸ್ತ್ರಗೊಳಿಸಿ, ನಡುರಸ್ತೆಯಲ್ಲಿ ಎಳೆದೊಯ್ದು ತಂದೆ, ಸಹೋದರನನ್ನು ಕೊಂದ ಕ್ರೌರ್ಯ ವಿಡಿಯೋ ಹೊರಬಿದ್ದ ಬಳಿಕ, ಎರಡೂವರೆ ತಿಂಗಳಿಂದ ಬಾಯಿ ಬಿಡದ ಪ್ರಧಾನಿ, ‘ಇದು 140 ಕೋಟಿ ಭಾರತೀಯರಿಗೆ ನಾಚಿಕೆಗೇಡಿನ ಸಂಗತಿ’ ಎಂದಿದ್ದಾರೆ.

ಹೌದು, ದಲ್ಲಾಳಿ ಬಂಡವಾಳಶಾಹಿಗಳ ಗುಲಾಮರು, ಮತಾಂಧತೆ, ವರ್ಣಭೇದ ನೀತಿಯನ್ನು ಪ್ರಚೋದಿಸುವ, ಫ್ಯಾಸಿಸ್ಟ್ ನೀತಿಗಳ ಮೂಲಕ ಜನರನ್ನು ವಿಭಜಿಸುವ, ಮಹಿಳೆಯರನ್ನು ವಿವಸ್ತ್ರಗೊಳಿಸುವ, ಹೆಣ್ಣುಮಕ್ಕಳನ್ನು ಸುಟ್ಟುಹಾಕುವ, ರೈತರನ್ನು ಸಾಯಿಸುವ, ಆದಿವಾಸಿಗಳನ್ನು ಅವರ ಭೂಮಿಯಿಂದ ಓಡಿಸುವ ದ್ವೇಷದ ಜನಸಮೂಹವನ್ನು ಅಧಿಕಾರದಲ್ಲಿ ಇಟ್ಟುಕೊಂಡಿದ್ದಕ್ಕಾಗಿ ನಾವು ನಾಚಿಕೆ ಪಡಲೇಬೇಕು.

ರಾಜಕೀಯ

ನೈಸ್ ಯೋಜನೆಗೆ ಹೆಚ್.ಡಿ.ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು. ಆದರೆ, ಅದೇ ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನ!! ಯಾಕೆ?? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ನೈಸ್ ರಸ್ತೆಯ ‘ತಿರುಚಿದ ಒಪ್ಪಂದ’ದ ಬಗ್ಗೆಯೂ ಅವರು ಹೇಳಬೇಕಿತ್ತಲ್ಲವೇ? ಬ್ರ್ಯಾಂಡ್ ಬೆಂಗಳೂರು ಟೀಮಿನ ಮುಖ್ಯಸ್ಥರ ಕರಾಮತ್ತಿನ ಬಗ್ಗೆಯೂ ಬೆಳಕು ಚೆಲ್ಲಬೇಕಲ್ಲವೇ? ಅದು ಬಿಟ್ಟು, ಸತ್ಯ ಮರೆಮಾಚಿ ಬರೀ ‘ಸಹಿ’ಯ ಬಗ್ಗೆ ನೀವು ಗೊಣಗಿದ್ದು ಯಾಕೆ? ಸದನ ಸಮಿತಿ ವರದಿಯ ಬಗ್ಗೆಯೂ ಚಕಾರ ಎತ್ತದಿರುವುದು ಯಾಕೋ? ಏನಿದು ಈ ನಿಗೂಢ ಸೋಜಿಗ??

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಉರುಫ್ ನೈಸ್ ರಸ್ತೆ ಯೋಜನೆಗೆ ರಾಜ್ಯ ಸರಕಾರದಿಂದ ನಯಾಪೈಸೆ ಕೊಡುವುದಿಲ್ಲ, ಪೂರ್ಣ ಹೂಡಿಕೆ ಹಣವನ್ನು ಕಂಪನಿಯೇ ಭರಿಸಬೇಕು, ಭೂಸ್ವಾಧೀನವೂ ಸೇರಿ ಸರಕಾರದ ಮೇಲೆ ಯಾವುದೇ ಹೊರೆ ಇರುವಂತಿಲ್ಲ. ಇದು ದೇವೇಗೌಡರ ಕಾಲದಲ್ಲಿ ಆದ ಮೂಲ ಒಪ್ಪಂದದ ಸಾರಾಂಶ. ಹಾಗಾದರೆ, ಈ ಯೋಜನೆ ‘ಸಾರ’ವಾಗಿದ್ದು ಯಾರಿಗೆ?

ಬ್ರ್ಯಾಂಡ್ ಬೆಂಗಳೂರು ಹರಿಕಾರಾಗಲು ಹೊರಟಿರುವ ನೀವು, ‘ತಿರುಚಿದ ಒಪ್ಪಂದ’ದ ಸೂತ್ರಧಾರರನ್ನೇ ಪಕ್ಕದಲ್ಲಿ ಇಟ್ಟುಕೊಂಡಿದ್ದೀರಿ. ತಿರುಚಿದ ಪರಿಣಾಮ ರಾಜ್ಯವು ಕೋರ್ಟ್ ಕಟಕಟೆಯಲ್ಲಿ ನಿಲ್ಲಬೇಕಾಯಿತು. ಸಾವಿರಾರು ಕೋಟಿ ಲೂಟಿಯಾಯಿತು. ಸರಕಾರ & ಜನರ ಸಾವಿರಾರು ಎಕರೆ ಭೂಮಿ ಭೂಗಳ್ಳರ ಪಾಲಾಯಿತು.

ಬ್ರ್ಯಾಂಡ್ ಬೆಂಗಳೂರು ಎಂದರೆ ಬುಲ್ಡೋಜ್ ಬೆಂಗಳೂರಾ? ಇಡೀ ಬೆಂಗಳೂರು ನಗರವನ್ನು ಛಿದ್ರಛಿದ್ರ ಮಾಡಿ ಪೋಗದಸ್ತಾಗಿ ಬುಲ್ಡೋಜ್ ಮಾಡಿ ಕಿಸೆ ತುಂಬಿಸಿಕೊಳ್ಳುವುದಾ? ಕರ್ನಾಟಕವನ್ನು ಕಡಲೇಪುರಿಯಂತೆ ಮುಕ್ಕಿ ತಿನ್ನುವುದಾ?

2014-2 016ರಲ್ಲಿನ ಸದನ ಸಮಿತಿ ವರದಿಯನ್ನು ತಾವು ಓದಿಲ್ಲವೇ? ಅಥವಾ ಅದನ್ನು ಕಸದ ಬುಟ್ಟಿಗೆ ಎಸೆದಿದ್ದೀರಾ? ಕೊಳ್ಳೆ ಹೊಡೆದ ಈಸ್ಟ್ ಇಂಡಿಯಾದಂಥ ಕಂಪನಿ ಜತೆ ಕೈ ಜೋಡಿಸಿದ ನಿಮಗೆ, ದೇವೇಗೌಡರ ಹೆಸರು ಹೇಳುವ ಅರ್ಹತೆ ಇದೆಯಾ? ರಾಜ್ಯದ ಅಭ್ಯುದಯಕ್ಕೆ ಬದುಕನ್ನೇ ಮೀಸಲಿಟ್ಟ ಆ ಹಿರಿಯ ಜೀವದ ಬಗ್ಗೆ ನಾಲಿಗೆ ಜಾರಿ ಬಿಡಲು ನಾಚಿಕೆ ಆಗುವುದಿಲ್ಲವೇ?

ನೈಸ್ ಕರ್ಮವನ್ನೆಲ್ಲ ಒಮ್ಮೆ ಕಣ್ಮುಚ್ಚಿ ನೆನಪು ಮಾಡಿಕೊಳ್ಳಿ. ಅಲ್ಲಿ ನೀವೆಲ್ಲಿ ನಿಲ್ಲುತ್ತಿರಿ ಎಂದು ಊಹಿಸಿಕೊಳ್ಳಿ, ಮಾಡಿದ ಪಾಪಗಳೆಲ್ಲವೂ ಸ್ಲೈಡುಗಳಂತೆ ಪ್ರತ್ಯಕ್ಷವಾಗುತ್ತವೆ. ಗಂಗೆಯಲ್ಲಿ ಸಾವಿರ ಸಲ ಮುಳುಗಿದರೂ ಅಳಿಯದ ಪಾಪವದು.ರಾಜ್ಯವನ್ನೇ ದೋಚಿದ ಖಾಸಗಿ ಕಂಪನಿಗೆ ‘ಪೊಲಿಟಿಕಲ್ ಏಜೆಂಟ್’ ಆಗುವುದಕ್ಕೆ ಅಸಹ್ಯ ಅನಿಸುವುದಿಲ್ಲವೇ?

ನೈಸ್ ಯೋಜನೆ ಯಾರಿಗೆಲ್ಲಾ ಕಾಮಧೇನು, ಕಲ್ಪವೃಕ್ಷವಾಗಿದೆ ನನಗಿಂತ ನಿಮಗೆ ಚೆನ್ನಾಗಿ ಗೊತ್ತು. ಧನಪಿಶಾಚಿ ರಾಜಕಾರಣಿಗಳು, ಮುಖ್ಯ ಕಾರ್ಯದರ್ಶಿ ಮಟ್ಟದವರೂ ಸೇರಿ ಅನೇಕ ಅಧಿಕಾರಿಗಳ ‘ಅನೈತಿಕ ಭ್ರಷ್ಟವ್ಯೂಹ’ ಕರ್ನಾಟಕವನ್ನು ಕಂಡರಿಯದ ರೀತಿಯಲ್ಲಿ ಲೂಟಿ ಮಾಡಿದೆ. ಈ ಲೂಟಿಯ ಕಥೆಯಲ್ಲಿ ನಿಮ್ಮ ಪಾತ್ರವೇನು?

ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ, ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ. ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು.ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ?

ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. ನೂರಾ ಮೂವತ್ತೈದು ಸೀಟುಗಳ ಬಹುಮತ ಸರಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರಕಾರ ನಿಮ್ಮದಲ್ಲವೇ?? ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸುವಿರಾ? ಎಂದು ಕಿಡಿಕಾರಿದ್ದಾರೆ.

ದೇಶ

ನವದೆಹಲಿ: ಕಳೆದ 5 ವರ್ಷಗಳಲ್ಲಿ ಜಾಹೀರಾತಿಗೆ 2,700 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಬಹಿರಂಗಪಡಿಸಿದೆ. ಸಂಸತ್ತಿನ ಮುಂಗಾರು ಅಧಿವೇಶನ ನಿನ್ನೆ (ಜುಲೈ 20) ಆರಂಭವಾಗಿದೆ. ಇಂದಿನ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದ ಸೈಯದ್ ನಸೀರ್ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರದ ಜಾಹೀರಾತು ವೆಚ್ಚದ ಬಗ್ಗೆ ಪ್ರಶ್ನೆ ಎತ್ತಿದರು.

ಕೇಂದ್ರ ಸರ್ಕಾರದ ಪರವಾಗಿ ನೀಡಿರುವ ಉತ್ತರದಲ್ಲಿ,  ಕಳೆದ 5 ವರ್ಷಗಳಲ್ಲಿ ಜಾಹೀರಾತಿಗಾಗಿ ರೂ.2,700 ಕೋಟಿ ವೆಚ್ಚ ಮಾಡಲಾಗಿದೆ. 2018-19ನೇ ಹಣಕಾಸು ವರ್ಷದಲ್ಲಿ ಗರಿಷ್ಠ ರೂ.1,106 ಕೋಟಿ ವೆಚ್ಚ ಮಾಡಲಾಗಿದೆ ಎಂದು ಉತ್ತರಿಸಲಾಗಿದೆ.

ಅದೇ ರೀತಿ, ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ ಸಂಸದ ಶಿವದಾಸನ್ ಅವರು ಪ್ರಧಾನಿಯವರ ವಿದೇಶಿ ಪ್ರಯಾಣ ವೆಚ್ಚದ ಬಗ್ಗೆ ಲಿಖಿತ ರೂಪದಲ್ಲಿ ಪ್ರಶ್ನೆಯನ್ನು ಕೇಳಿದ್ದರು. ಈ ಪ್ರಶ್ನೆಗೆ ಕಳೆದ 2 ವರ್ಷಗಳಲ್ಲಿ ಪ್ರಧಾನಿಯವರ 12 ವಿದೇಶ ಪ್ರವಾಸಗಳಿಗೆ 30 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಖರ್ಚು ಮಾಡಿದೆ ಎಂದು ಉತ್ತರಿಸಿದ್ದಾರೆ.