ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
July 2023 » Page 3 of 7 » Dynamic Leader
October 23, 2024
Home 2023 July (Page 3)
ದೇಶ

ಡಿ.ಸಿ.ಪ್ರಕಾಶ್, ಸಂಪಾದಕರು

“ಮೋದಿಯವರೇ ಮಣಿಪುರ ಹೊತ್ತಿ ಉರಿಯುತ್ತಿದೆ; ಕೂಡಲೇ ಅಲ್ಲಿಗೆ ಹೋಗಿ” ಎಂದು ವಿರೋಧ ಪಕ್ಷಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಆದರೆ ಪ್ರಧಾನಿ ಮೋದಿಯವರು ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ತುಂಬಾ ಬ್ಯುಸಿಯಾಗಿದ್ದರು. ಒಂದು ರಾಜ್ಯ ಹಿಂಸಾಚಾರದಿಂದ ನಲುಗಿದಾಗ ಕೇಂದ್ರ ಗೃಹ ಕಾರ್ಯದರ್ಶಿ ಅಮಿತ್ ಶಾ ತಕ್ಷಣವೇ ಅಲ್ಲಿಗೆ ಹೋಗಬೇಕಿತ್ತು. ಆದರೆ, ಅವರೂ ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದರು.

“ಪ್ರಧಾನಿ.. ಮಣಿಪುರದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಹಿಂಸಾಚಾರ ನಡೆಯುತ್ತಿದೆ. ಅದರ ಬಗ್ಗೆ ಮಾತನಾಡದೆ ಬಾಯಿ ಮುಚ್ಚಿಕೊಂಡಿದ್ದೀರಾ?” ಎಂದು ವಿರೋಧ ಪಕ್ಷ ಸೇರಿದಂತೆ ಎಲ್ಲರೂ ಕಿಡಿಕಾರಿದರು. ದೆಹಲಿಯಲ್ಲಿ ಬ್ಯುಸಿಯಾಗಿದ್ದ ಪ್ರಧಾನಿಗೆ ಮಣಿಪುರದ ಹಿಂಸಾಚಾರದಿಂದ ಸಂತ್ರಸ್ತರಾದ ಜನರ ಕೂಗು ಕೇಳಿಸಲಿಲ್ಲವೇನೊ, ಹಾಗಾಗಿ ಮಣಿಪುರ ವಿಚಾರದಲ್ಲಿ ಪ್ರಧಾನಿ ಮಾತನಾಡಲೇ ಇಲ್ಲ.

ಮೇ 4 ರಂದು ಮಣಿಪುರದಲ್ಲಿ ಎರಡು ಜನಾಂಗೀಯ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಎರಡು ತಿಂಗಳಿಗೂ ಹೆಚ್ಚು ಕಾಲ ಸಮಸ್ಯೆ ಮುಂದುವರಿದಿದೆ. ಈ ಅವಧಿಯಲ್ಲಿ, ಅನೇಕ ಚರ್ಚುಗಳು ಮತ್ತು ದೇವಾಲಯಗಳನ್ನು ಸುಟ್ಟು ಬೂದಿ ಮಾಡಲಾಗಿದೆ. ಸಾವಿರಾರು ಮನೆಗಳು ಮತ್ತು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ, ಮತ್ತು ಬೆಂಕಿ ಹಚ್ಚಲಾಗಿದೆ. ಎರಡು ಕಡೆಯ ಘರ್ಷಣೆಯಲ್ಲಿ ಸುಮಾರು 150 ಜನರು ಸಾವನ್ನಪ್ಪಿದ್ದಾರೆ.

ಈ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಜಪಾನ್, ಆಸ್ಟ್ರೇಲಿಯಾ, ಪಪುವಾ ನ್ಯೂಗಿನಿಯಾ, ಅಮೆರಿಕ, ಫ್ರಾನ್ಸ್, ಯುನೈಟೆಡ್ ಅರಬ್ ಎಮಿರೇಟ್ಸ್ ಎಂದು ವಿಶ್ವದಾದ್ಯಂತ ಪ್ರವಾಸ ಮಾಡಿದ್ದಾರೆ. ಹಾಗಾಗಿ, ಮಣಿಪುರದ ಬಗ್ಗೆ ಯೋಚಿಸಲು ಅವರಿಗೆ ಸಮಯವಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಆದರೆ ಇದೀಗ ಮಣಿಪುರ ವಿಚಾರದಲ್ಲಿ ಮೌನ ಮುರಿದಿದ್ದಾರೆ.

ಮಣಿಪುರದಲ್ಲಿ ಕುಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಎಳೆದೊಯ್ದ ವಿಡಿಯೋ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇದೇ ಸಂದರ್ಭದಲ್ಲಿ ಮಣಿಪುರದ ಬಗ್ಗೆ ಪ್ರಧಾನಿ ಮೋದಿ ಮೊಟ್ಟಮೊದಲ ಬಾರಿಗೆ ಮಾತನಾಡಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ನಿನ್ನೆ (ಜುಲೈ 20) ಆರಂಭವಾಗಿದೆ. ಸಭೆ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಧಾನಿ ಮೋದಿ,

“ಮಣಿಪುರದಲ್ಲಿ ನಡೆದ ಘಟನೆಯ ಬಗ್ಗೆ ತಿಳಿದು ಆಘಾತವಾಯಿತು. ಯಾವ ಅಪರಾಧಿಯೂ ತಪ್ಪಿಸಿಕೊಳ್ಳುಲು ಬಿಡುವುದಿಲ್ಲ ಎಂದು ನಾನು ಈ ದೇಶಕ್ಕೆ ಭರವಸೆ ನೀಡುತ್ತೇನೆ. ಕಾನೂನು ತನ್ನ ಎಲ್ಲಾ ಶಕ್ತಿಯೊಂದಿಗೆ ನಿರ್ಧರಿಸುತ್ತದೆ. ಮಣಿಪುರದ ಹೆಣ್ಣುಮಕ್ಕಳಿಗೆ ನಡೆದಿರುವುದನ್ನು ನಾನು ಎಂದಿಗೂ ಕ್ಷಮಿಸುವುದಿಲ್ಲ. ಅಲ್ಲದೆ, ಮಹಿಳೆಯರ ರಕ್ಷಣೆಗೆ ಸಂಬಂಧಿಸಿದ ಕಾನೂನನ್ನು ಬಲಪಡಿಸುವಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

“38 ಪಕ್ಷಗಳೊಂದಿಗೆ ಮಾತನಾಡಲು ಸಮಯವಿದೆ. ಆದರೆ ಪ್ರಧಾನಿಗೆ ಮಣಿಪುರಕ್ಕೆ ಹೋಗಲು ಸಮಯವಿಲ್ಲ” ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. “ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಪ್ರಧಾನಿಗೆ ನಾಚಿಕೆಯಾಗಬೇಕು” ಎಂದು ಸಿಪಿಎಂ ನಾಯಕರಲ್ಲಿ ಒಬ್ಬರಾದ ಬೃಂದಾ ಕಾರಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸುಪ್ರೀಂ ಕೋರ್ಟ್ ಹಿಂಸಾಚಾರವನ್ನು ಖಂಡಿಸಿದ ನಂತರವೇ ಮೋದಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ” ಎಂದು ಸಂಸದ ಕಪಿಲ್ ಸಿಬಲ್ ಹೇಳಿದ್ದಾರೆ. ಮಣಿಪುರ ವಿಷಯ ಸಂಸತ್ತಿನಲ್ಲಿ ದಿನವಿಡೀ ಚರ್ಚೆಯಾಗಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.

ಮಣಿಪುರದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರ ಮೇಲಿನ ಕ್ರೌರ್ಯ, ಕಳೆದ ಮೇ ತಿಂಗಳಲ್ಲಿ ನಡೆದಿದ್ದು ಎನ್ನಲಾಗಿದೆ. ಆ ರಾಜ್ಯದಲ್ಲಿ ಇಂಟರ್‌ನೆಟ್ ಸೇವೆ ಸ್ಥಗಿತಗೊಂಡಿದ್ದರಿಂದ ತಕ್ಷಣ ಪತ್ತೆಯಾಗಿರಲಿಲ್ಲ. ಆ ದೌರ್ಜನ್ಯ ಬೆಳಕಿಗೆ ಬಂದ ನಂತರ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳುತ್ತಿದೆ ಅಲ್ಲಿನ ಅಧಿಕಾರ ವರ್ಗ. ಬಹುಶಃ ಅದು ಹೊರಬರದಿದ್ದರೆ, ಯಾವುದೇ ಕ್ರಮ ತೆಗೆದುಕೊಳ್ಳುತ್ತಿರಲಿಲ್ಲ. ಇಷ್ಟು ದೊಡ್ಡ ಘಟನೆ ನಡೆದಿದ್ದು, ಸರ್ಕಾರಕ್ಕೆ ಅದರ ಬಗ್ಗೆ ತಿಳಿಯದೇ ಇರಲು ಸಾಧ್ಯವೇ ಇಲ್ಲ. ಆಗ ಏಕೆ ಕ್ರಮ ಕೈಗೊಂಡಿಲ್ಲ?

ಮಣಿಪುರದಲ್ಲಿ ಅನೇಕ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದರು. ಅವರನ್ನು ಹತ್ತಿಕ್ಕಲು ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯದ ತಂತ್ರವನ್ನು ಅನುಸರಿಸಿದ್ದಾರೆ. ಗಲಭೆಗಳ ಸಮಯದಲ್ಲಿ, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವುದು ಒಂದು ಮಾದರಿ (Pattern) ಆಗಿದೆ. ಇದು ಗುಜರಾತ್ ಮತ್ತು ಮುಜಫರಾಬಾದ್‌ನಂತಹ ಎಲ್ಲೆಡೆ ನಡೆದಿದೆ.

ಮೇಲುಗೈ ಸಾಧಿಸಬಲ್ಲ ಗುಂಪು… ಅದು ಜಾತಿವಾದಿ ಗುಂಪು ಇರಬಹುದು, ಧಾರ್ಮಿಕ ಗುಂಪು ಇರಬಹುದು ಅಥವಾ ಜನಾಂಗೀಯ ಗುಂಪು ಇರಬಹುದು. ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವೆ ಸಮಸ್ಯೆಗಳು ಎದುರಾದಾಗ, ಬಹುಸಂಖ್ಯಾತರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ವಿಧಾನವನ್ನು ಅನುಸರಿಸುತ್ತಾರೆ. ಮಣಿಪುರದ ಇಬ್ಬರು ಬುಡಕಟ್ಟು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ವಿಡಿಯೋದಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಶಕ್ತಿಯನ್ನು ತೋರಿಸಲು ಪ್ರಯತ್ನಿಸಿದ್ದಾರೆ. ಅವರು ಅದನ್ನು ಅಧಿಕಾರವನ್ನು ಉಳಿಸಿಕೊಳ್ಳುವ ವಿಷಯವಾಗಿ ನೋಡುತ್ತಾರೆ.

ಮಣಿಪುರ ಘಟನೆಯನ್ನು ಪ್ರತ್ಯೇಕ ವಿಷಯವಾಗಿ ನೋಡಬಾರದು. ಮಹಿಳೆಯರ ವಿರುದ್ಧ ನಿರಂತರವಾಗಿ ನಡೆಯುತ್ತಿರುವ ಇಂತಹ ಸಮಸ್ಯೆಗಳ ಬಗ್ಗೆ ಮಾತನಾಡುವುದೇ ಇಲ್ಲ. ಮಣಿಪುರದಲ್ಲಿ ಕಳೆದ ಎರಡು ತಿಂಗಳಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ಇಂದಿನವರೆಗೂ ಚರ್ಚೆಯ ವಿಷಯವಾಗಿರಲಿಲ್ಲ. ಮಣಿಪುರದ ಆಚೆಗಿನ ಮಾಧ್ಯಮಗಳೂ ಅದಕ್ಕೆ ಪ್ರಾಮುಖ್ಯತೆ ನೀಡಲಿಲ್ಲ. ಆದರೆ ಈ ವಿಡಿಯೋ ಬಹಿರಂಗವಾದ ನಂತರ ಈ ಬಗ್ಗೆ ಮಾತನಾಡುತ್ತಿದ್ದಾರೆ. ಆದ್ದರಿಂದ, ನಾವು ನಮ್ಮ ಮೌನವನ್ನು ಪ್ರಶ್ನಿಸುವ ಸಮಯ ಎಂದು ಇದನ್ನು ನೋಡಬೇಕು.

ಮಣಿಪುರ ಹೊತ್ತಿ ಉರಿಯುತ್ತಿರುವ ಈ ಹೊತ್ತಿನಲ್ಲಿ ಪ್ರಧಾನಿ ವಿಶ್ವ ಪರ್ಯಟನೆ ಮಾಡುತ್ತಿದ್ದಾರೆ. ಅವುಕ್ಕೆಲ್ಲ ಅವರಿಗೆ ಸಮಯವಿದೆ. ವೀಡಿಯೊ ಬಿಡುಗಡೆಯಾಗಿ ದೇಶವೇ ಅಲ್ಲೋಲಕಲ್ಲೋಲವಾದ ಬಳಿಕವೇ ಮಣಿಪುರದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. “ಹೃದಯ ಭಾರವಾಗಿದೆ” ಎಂದು ಪ್ರಧಾನಿ ಹೇಳುತ್ತಾರೆ. ಅಧಿಕಾರವಿಲ್ಲದ ಸಾಮಾನ್ಯ ಜನರು ಹಾಗೆ ಹೇಳಬಹುದು. ಆದರೆ ದೇಶದ ಪ್ರಜೆಗಳ ರಕ್ಷಣೆಯ ಹೊಣೆ ಹೊತ್ತಿರುವ ಮತ್ತು ಎಲ್ಲ ಅಧಿಕಾರ ಹೊಂದಿರುವ ಪ್ರಧಾನಿ ಸಾಮಾನ್ಯರಂತೆ ಮಾತನಾಡುತ್ತಿದ್ದಾರೆ.

ಮಣಿಪುರದಲ್ಲಿ ಶಾಂತಿ ಮರಳಿದೆ ಎಂದು ಅವರು ಹೇಳುತ್ತಾರೆ. ಆದರೆ, ಮನೆಗಳಿಂದ ಹೊರಹಾಕಲ್ಪಟ್ಟ ಸುಮಾರು 50,000 ಜನರು ಇನ್ನೂ ತಮ್ಮ ಮನೆಗಳಿಗೆ ಮರಳಿಲ್ಲ. ಎರಡು ತಿಂಗಳಿಂದ ಸಮಸ್ಯೆ ನಡೆಯುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರ ಯಾವುದೇ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ. ಗೃಹ ಸಚಿವ ಅಮಿತ್ ಶಾ ಅವರು ಕಾಳಜಿ ವಹಿಸುತ್ತಿದ್ದಾರೆ ಎಂದು ಹೇಳುತ್ತಲೇ ಇದ್ದಾರೆ. ಅವರು ನಿಜವಾಗಿಯೂ ಸೂಕ್ತ ಕ್ರಮ ಕೈಗೊಂಡಿದ್ದರೆ ಹಿಂಸಾಚಾರ ನಿಯಂತ್ರಣಕ್ಕೆ ಬರುತ್ತಿತ್ತು.

ಡಬಲ್ ಇಂಜಿನ್ ಸರ್ಕಾರ (ಕೇಂದ್ರ ಮತ್ತು ರಾಜ್ಯದಲ್ಲಿ ಒಂದು ಪಕ್ಷದ ಆಡಳಿತ) ಇದ್ದರೆ ಯಾವುದೇ ಸಮಸ್ಯೆ ಇಲ್ಲ ಎಂದು ಮೋದಿ ಪ್ರಚಾರ ವೇದಿಕೆಗಳಲ್ಲಿ ಮಾತನಾಡುತ್ತಿದ್ದರು. ‘ಡಬಲ್ ಇಂಜಿನ್ ಸರ್ಕಾರ್’ ಇದ್ದರೂ ಮಣಿಪುರದಲ್ಲಿ ಏಕೆ ಇಷ್ಟೊಂದು ದೌರ್ಜನ್ಯಗಳು ನಡೆಯುತ್ತಿವೆ? ಇದಕ್ಕೆ ಪ್ರಧಾನಿ ಉತ್ತರಿಸುವರೇ?!

ದೇಶ ರಾಜ್ಯ

ನಾನು ಆಯವ್ಯಯ ಸಿದ್ಧತೆಗೆ ಕುಳಿತಾಗ ಬುದ್ಧ, ಬಸವಣ್ಣ, ಅಂಬೇಡ್ಕರ್‌, ಗಾಂಧೀಜಿ, ನೆಹರು, ಮಹಾತ್ಮ ಫುಲೆ, ಕುವೆಂಪು, ನಾರಾಯಣ ಗುರುಗಳು ಇಂತಹ ಮಹಾತ್ಮರು ನೆನಪಾಗುತ್ತಾರೆ. ಇವರೆಲ್ಲರ ಕನಸಿನ ನಾಡನ್ನು ಕಟ್ಟುವ ಆಶಯದ ಬಜೆಟ್ ರೂಪಿಸಬೇಕು ಎನ್ನುವುದು ನನ್ನ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಸಾಮಾಜಿಕ ಸ್ವಾತಂತ್ರ್ಯ ಇಲ್ಲದ ರಾಜಕೀಯ ಸ್ವಾತಂತ್ರ್ಯ ಏನು ಪ್ರಯೋಜನ? ಎಂದು ಬಾಬಾ ಸಾಹೇಬರು ಪ್ರಶ್ನಿಸಿದ್ದರು. ಅದಕ್ಕಾಗಿಯೇ ಅವರು, “ರಾಜಕೀಯ ಪ್ರಭುತ್ವದ ತಳಪಾಯ ಸಾಮಾಜಿಕ ಪ್ರಭುತ್ವದಲ್ಲಿರಬೇಕು” ಎಂದಿದ್ದರು. ಬಸವಣ್ಣ ದಾಸೋಹದ ಮಹತ್ವ ಹೇಳಿದ್ದರು. ಹೀಗೆ‌ ಈ ಎಲ್ಲಾ ಮಹಾನುಭಾವರ ಸರ್ವರನ್ನೂ ಒಳಗೊಳ್ಳುವ ಪ್ರಗತಿಯ ಮಾದರಿಯನ್ನು ನಾನು ಪಾಲಿಸಿದ್ದೇನೆ. ಸರ್ವರ ಅಭಿವೃದ್ಧಿಗೆ ಪೂರಕವಾದ ಬಜೆಟ್ ರೂಪಿಸಿದ್ದೇನೆ.

ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಯನ್ನು ಬಜೆಟ್ ನಲ್ಲಿ ಈಡೇರಿಸಿದ್ದೇವೆ. ಬಜೆಟ್ ನಲ್ಲಿ ಅಗತ್ಯ ಅನುದಾನ ಕೊಟ್ಟು ಐದು ಗ್ಯಾರಂಟಿಗಳಲ್ಲಿ ನಾಲ್ಕನ್ನು ಈಗಾಗಲೇ ಜಾರಿ ಮಾಡಿದ್ದೇವೆ. ನಾವು ಹೇಳಿದ್ದನ್ನು ಮಾಡಿದ್ದೇವೆ. ಬಿಜೆಪಿಯವರು “ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ” ಎಂದರು. ಆದರೆ ತಾವು ಹೇಳಿದಂತೆ ನಡೆದುಕೊಳ್ಳಲಿಲ್ಲ. ಹೀಗಾಗಿ ಬಿಜೆಪಿಯ ಟೊಳ್ಳುತನ, ಬೇಜವಾಬ್ದಾರಿತನ, ನಕಲಿತನ ನಾಡಿನ ಜನರೆದುರು ಬೆತ್ತಲಾಗಿದೆ. ಗುಜರಾತ್ ಮಾದರಿ ಎಂದು ಭಾಷಣ ಕೊಚ್ಚುತ್ತಿದ್ದವರು ಕರ್ನಾಟಕದ ಗ್ಯಾರಂಟಿ ಮಾದರಿಗೆ, ಕರ್ನಾಟಕದ ಅಭಿವೃದ್ಧಿ ಮಾದರಿಗೆ ಹೆದರಿದ್ದಾರೆ.

ದುಡಿಯುವ ಜನರ ಜೇಬಿನಲ್ಲಿ ಹಣ ಇರಬೇಕು, ಶ್ರಮಿಕ ಜನರ ಜೇಬಿಗೆ ಹಣ ಹಾಕಬೇಕು ಎನ್ನುವುದು ಕರ್ನಾಟಕ ಮಾದರಿ. ಜನರ ಜೇಬಿಗೆ ಕೈ ಹಾಕಿ ಕಿತ್ತುಕೊಳ್ಳಬೇಕು ಎನ್ನುವುದು ಗುಜರಾತ್ ಮಾದರಿ. ಗುಜರಾತ್ ಮಾದರಿಯಲ್ಲಿ ಪೆನ್ನು, ಪೆನ್ಸಿಲ್, ಬಿಸ್ಕೆಟ್, ಬೆಣ್ಣೆ, ಮಂಡಕ್ಕಿ ಮೇಲೂ ಟ್ಯಾಕ್ಸ್ ಹಾಕಿದರು. ಕರ್ನಾಟಕ ಮಾದರಿಯಲ್ಲಿ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 6 ರಿಂದ 8 ಸಾವಿರ ರೂಪಾಯಿ ಉಳಿತಾಯ, ಉಪಯೋಗ ಆಗುವಂತಹ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಪ್ರತೀ ದಿನ ನಾಡಿನ ಜನತೆ ನಮ್ಮ ಗ್ಯಾರಂಟಿಗಳ ಪ್ರಯೋಜನ ಪಡೆಯುತ್ತಿದ್ದಾರೆ. ಪ್ರತೀ ದಿನ ಪ್ರತೀ ಕುಟುಂಬಕ್ಕೆ ಸರ್ಕಾರದ ಸ್ಪಂದನೆ ಸಿಗುತ್ತಿದೆ. ಇದು ಬಿಜೆಪಿಯ ಹೊಟ್ಟೆಕಿಚ್ಚಿಗೆ ಕಾರಣವಾಗಿದೆ. ಅವರ ಹೊಟ್ಟೆಕಿಚ್ಚು ಅವರನ್ನೇ ಸುಡುತ್ತದೆ.

ಬಿಜೆಪಿಯವರು ವಿಶ್ವಗುರುವಿನ ಬಗ್ಗೆ ಭರ್ಜರಿ ಭಾಷಣ ಮಾಡುತ್ತಾರೆ. ಆ ವಿಶ್ವಗುರುವಿಗೆ ತಮ್ಮ ಪಕ್ಷದಲ್ಲಿ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬರೀ ಭಾಷಣದಿಂದ ನಾಡಿನ, ದೇಶದ ಜನರ ಸಂಕಷ್ಟ ಪರಿಹಾರ ಆಗುವುದಿಲ್ಲ ಎನ್ನುವ ಪಾಠವನ್ನು ವಿಶ್ವಗುರುವಿಗೆ ಜನ ಕಲಿಸಿದ್ದಾರೆ.

ಆರ್ಥಿಕತೆಯ ಚಲನಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಐದು ಗ್ಯಾರಂಟಿ ಯೋಜನೆಗಳ ಮೂಲಕ ಸಾರ್ವತ್ರಿಕ ಮೂಲ ಆದಾಯದ ಪರಿಕಲ್ಪನೆಯನ್ನು ಪರಿಚಯಿಸುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. ಇದು “ಕರ್ನಾಟಕ ಮಾದರಿ ಅಭಿವೃದ್ಧಿ”. ಜನರು ಬೆಲೆ ಏರಿಕೆ, ಇಂಧನ ಬೆಲೆ ಏರಿಕೆ, ನಿರುದ್ಯೋಗ ಮೊದಲಾದ ಸಮಸ್ಯೆಗಳಿಂದ ತತ್ತರಿಸಿದ್ದು, ಅವರ ಬದುಕು ಸುಧಾರಿಸುವ ಉದ್ದೇಶದಿಂದ ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಗ್ಯಾರಂಟಿ ಕಾರ್ಯಕ್ರಮಗಳ ಮೂಲಕ ದೇಶದಲ್ಲಿಯೇ ದೊಡ್ಡ ಮೊತ್ತ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕ, ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆಗಳ ಜಾರಿ ಸಾಧ್ಯವಿಲ್ಲ ಎಂದರು. ಆದರೆ ಈಗಾಗಲೇ 3 ಯೋಜನೆಗಳು ಜಾರಿಯಾಗಿವೆ. ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಾರಂಭವಾಗಿದೆ. ಯುವನಿಧಿ ಯೋಜನೆ ಬಹುತೇಕ ಡಿಸೆಂಬರ್‌ ತಿಂಗಳಿನಿಂದ ಪ್ರಾರಂಭವಾಗುವ ನಿರೀಕ್ಷೆ ಇದೆ.

ಎಲ್ಲ ಗ್ಯಾರೆಂಟಿ ಯೋಜನೆಗಳಿಗೆ ಆಯವ್ಯಯದಲ್ಲಿ ಅನುದಾನ ಹಂಚಿಕೆ ಮಾಡಲಾಗಿದೆ. ಅನುದಾನ ಕ್ರೋಢೀಕರಣವನ್ನೂ ಆಯವ್ಯಯದಲ್ಲಿ ವಿವರಿಸಲಾಗಿದೆ. ಈ ಕಾರ್ಯಕ್ರಮಗಳಿಗೆ ವಾರ್ಷಿಕ ಒಟ್ಟು 52,068 ಕೋಟಿ ರೂ.ಗಳು ಅಗತ್ಯವಿದೆ. 1.30 ಕೋಟಿ ಕುಟುಂಬಗಳಿಗೆ ಈ ಗ್ಯಾರಂಟಿ ಯೋಜನೆಗಳ ಸೌಲಭ್ಯ ದೊರೆಯಲಿದೆ. ಪ್ರತಿ ಕುಟುಂಬಕ್ಕೆ ತಿಂಗಳಿಗೆ 4-5 ಸಾವಿರ ರೂ. ಅಂದರೆ ವಾರ್ಷಿಕ 48,000- 60,000 ರೂ. ದೊರಕುತ್ತದೆ. ದೇಶದ ಇತಿಹಾಸದಲ್ಲಿ ಇಷ್ಟೊಂದು ದೊಡ್ಡ ಮೊತ್ತವನ್ನು ಜಾತಿ ಧರ್ಮ ನೋಡದೇ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕ. ಈ ವರ್ಷ 35,410 ಕೋಟಿಗಳನ್ನು 5 ಗ್ಯಾರೆಂಟಿಗಳಿಗೆ ಮೀಸಲಿರಿಸಿದ್ದೇವೆ.

ಡಾ.ಬಿ.ಆರ್.ಅಂಬೇಡ್ಕರ್ ಹೇಳಿದಂತೆ ಸಾಮಾಜಿಕ ಪ್ರಭುತ್ವಕ್ಕೆ ಹೆಚ್ಚು ಮಹತ್ವ ನೀಡಬೇಕು ಎಂಬ ಮಾತಿನಲ್ಲಿ ನಮಗೆ ನಂಬಿಕೆ ಇದೆ. ಹಾಗೂ ಇದಕ್ಕೆ ಬದ್ಧರಾಗಿದ್ದೇವೆ. ಬಜೆಟ್ ಸಿದ್ದಮಾಡುವಾಗ ನಮ್ಮ ಕಣ್ಣಿಗೆ ಅಂಬೇಡ್ಕರ್, ಗಾಂಧಿ, ಬುದ್ಧ, ಕುವೆಂಪು, ನಾರಾಯಣ ಗುರು ಅವರ ಆಶಯಗಳು ಕಾಣುತ್ತವೆ. ಕಟ್ಟಕಡೆಯ ವ್ಯಕ್ತಿ ಸಂತುಷ್ಟವಾಗಬೇಕು. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಭಾಗೀದಾರರಾಗಬೇಕು. ಅದರ ಫಲವನ್ನು ಎಲ್ಲರೂ ಸಮಾನರಾಗಿ ಹಂಚಿಕೊಳ್ಳಬೇಕು. ಇದನ್ನೇ ಕುವೆಂಪು ಸಮಬಾಳು, ಸಮಪಾಲು ಎಂದಿದ್ದು.

ನಾವು ಹಿಂದೆಯೂ ನುಡಿದಂತೆ ನಡೆದಿದ್ದೇವೆ. 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಈ ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ 1 ಲಕ್ಷದ 16 ಸಾವಿರ ಕೋಟಿ ರೂ.ಗಳ ಸಾಲವಾಗಿದೆ. 2018 ಮಾರ್ಚ್ ಅಂತ್ಯಕ್ಕೆ 2,45,000 ಕೋಟಿ ಸಾಲ ಇತ್ತು. 2023 ಕ್ಕೆ ಇದು 5,20,೦00 ಕೋಟಿ ರೂ.ಗೆ ಹೆಚ್ಚಾಗಿದೆ.

ನಾವು ಬಡವರ ಪರವಾಗಿದ್ದೇವೆ. ಬೆಲೆ ಏರಿಕೆ ಹಾಗೂ ನಿರುದ್ಯೋಗದಿಂದ ತತ್ತರಿಸಿರುವ ಜನರ ಜೇಬಿಗೆ ಹಣ ತುಂಬುವ ಕೆಲಸ ಮಾಡಿದ್ದೇವೆ. ಸಾರ್ವತ್ರಿಕ ಮೂಲ ಆದಾಯವನ್ನು ಎಲ್ಲಾ ಅಭಿವೃದ್ಧಿಯಾಗಿರುವ ರಾಜ್ಯಗಳು ಮಾಡುತ್ತಿವೆ. ಇದು ಕರ್ನಾಟಕ ಮಾದರಿ. ಉದ್ಯೋಗ ಸೃಷ್ಟಿಯಾಗಲು ಆರ್ಥಿಕ ಚಟುವಟಿಕೆಗಳು ಅಗತ್ಯ. ಇಲ್ಲದಿದ್ದರೆ ಹೂಡಿಕೆಗಳು ಆಗುವುದಿಲ್ಲ.

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. 32 ಸಾವಿರ ಕೋಟಿ ರೂ.ಗಳು ಒಂದು ವರ್ಷಕ್ಕೆ ಖರ್ಚಾಗುತ್ತದೆ. ಒಂದೇ ಯೋಜನೆಗೆ ಇಷ್ಟು ದೊಡ್ಡ ಮೊತ್ತವನ್ನು ವೆಚ್ಚ ಮಾಡುತ್ತಿರುವ ಮೊಲದ ರಾಜ್ಯ ಕರ್ನಾಟಕ. ಇದಕ್ಕಾಗಿ 17,500 ಕೋಟಿ ಈ ವರ್ಷ ಮೀಸಟ್ಟಿದ್ದೇವೆ. ಅನ್ನಭಾಗ್ಯಕ್ಕೆ 10,125 ಕೋಟಿ ರೂ, ಗೃಹಜ್ಯೋತಿಗೆ 13 ಸಾವಿರ ಕೋಟಿ, ಶಕ್ತಿಗೆ 2,800 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ.

2022-23ರ ಬಜೆಟ್ ಗಾತ್ರ 2,65,720 ಕೋಟಿ ಇತ್ತು, ನಮ್ಮ ಸರ್ಕಾರದ ಬಜೆಟ್ 3,27,747 ಕೋಟಿ ರೂ.ಇದೆ. ಹಿಂದಿಗಿಂತ 62,027 ಸಾವಿರ ಕೋಟಿ ಜಾಸ್ತಿಯಿದೆ. ಬೆಳವಣಿಗೆಯ ಪ್ರಮಾಣ ಶೇ.22 ಇದೆ. ರೈತರಿಗೆ 3 ಲಕ್ಷದವರೆಗೆ ಬಡ್ಡಿರಹಿತ ಸಾಲ ಮುಂಚೆ ನೀಡುತ್ತಿದ್ದೆವು. ಈಗ 5 ಲಕ್ಷದವರೆಗೆ ಮೊತ್ತವನ್ನು ಹೆಚ್ಚಿಸಲಾಗಿದೆ. 10 ಲಕ್ಷದವರೆಗೆ 3% ಬಡ್ಡಿ ಇದ್ದಿದ್ದು , ಈಗ ಅದನ್ನು 15 ಲಕ್ಷಕ್ಕೆ ಏರಿಸಲಾಗಿದೆ. ಶಾಲಾ ವಿದ್ಯಾರ್ಥಿಗಳಿಗೆ 9, 10ನೇ ತರಗತಿ ವಿದ್ಯಾರ್ಥಿಗಳಿಗೂ ಸೇರಿ ವಾರದಲ್ಲಿ 2 ದಿನ ಮೊಟ್ಟೆ ನೀಡಲಾಗುತ್ತಿದೆ.

2013-18ರ ವರೆಗೆ ನಾವು 5 ವರ್ಷದಲ್ಲಿ 14,54,663 ಮನೆಗಳನ್ನು ಕಟ್ಟಿಸಿದ್ದೆವು. ನಾವು ಹಿಂದಿನ ಸರ್ಕಾರಕ್ಕಿಂತ 6 ಲಕ್ಷ ಮನೆಗಳನ್ನು ಹೆಚ್ಚಾಗಿ ನಿರ್ಮಿಸಿದ್ದೆವು. ನಮ್ಮ ಸರ್ಕಾರದ ಅವಧಿಯಲ್ಲಿ 14,169 ಹೆದ್ದಾರಿ ಅಭಿವೃದ್ಧಿಪಡಿಸಿದ್ದೆವು. ಬಿಜೆಪಿ ಸರ್ಕಾರ 8,037 ಕಿ.ಮಿ ಮಾತ್ರ ನಿರ್ಮಿಸಿದ್ದಾರೆ. ಎಸ್ ಸಿಎಸ್ ಪಿ / ಟಿಎಸ್ ಪಿ ಕಾನೂನು ಬಂದ ನಂತರ, ನಮ್ಮ ಸರ್ಕಾರ 5 ವರ್ಷದಲ್ಲಿ 88,530 ಕೋಟಿ ಖರ್ಚು ಮಾಡಿತ್ತು. ನಮ್ಮದು ಬಡವರ ಪರವಾದ ಸರ್ಕಾರ.

ನಮ್ಮ ಬಜೆಟ್‌ ಗಾತ್ರ 2018-19ರಲ್ಲಿ 2,02,297 ಕೊಟಿ ಇತ್ತು. ಆಗ 21,691 ಕೋಟಿ ರೂ. ಎಸ್.ಸಿ/ಎಸ್.ಟಿ ಸಮುದಾಯದ ಯೋಜನೆಗಳಿಗೆ ಮೀಸಲಿಟ್ಟಿದ್ದೆವು. ಈ ಬಾರಿ ಸಹ ಶಿಕ್ಷಣ, ಸಮಾಜ ಕಲ್ಯಾಣ, ಕೃಷಿ, ವಿದ್ಯುತ್, ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಸಾಮಾಜಿಕ, ಆರ್ಥಿಕ ವಲಯಕ್ಕೆ ಕಡಿಮೆ ಮಾಡಿಲ್ಲ. ನೀರಾವರಿ, ವಸತಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ನಮ್ಮ ಸರ್ಕಾರ ಎಲ್ಲರನ್ನು ಒಳಗೊಂಡ ಅಭಿವೃದ್ದಿಯ ಧ್ಯೇಯವನ್ನು ನಂಬಿದೆ.

2023-24ನೇ ಸಾಲಿನಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಈ ಆರ್ಥಿಕ ವರ್ಷಕ್ಕೆ ಸರ್ಕಾರದ ಮುಂಗಡ ಪತ್ರವನ್ನು ಮಂಡಿಸಿದ್ದು, ಹೊಸ ಸರ್ಕಾರ ಬಂದ ಮೇಲೆ ಜನರ ಆಶೋತ್ತರಗಳಿಗೆ ಸ್ಪಂದಿಸಲು, ಸರ್ಕಾರದ ನೀತಿ ನಿಲುವುಗಳು, ಪ್ರಣಾಳಿಕೆಯ ಭರವಸೆಗಳನ್ನು ಒಳಗೊಂಡಿರುವ ಆಯವ್ಯಯ ಮಂಡಿಸುವುದು ನಮ್ಮ ಕರ್ತವ್ಯ. ಬಜೆಟ್ ಮೇಲೆ 62 ಜನ ಆಡಳಿತ ಹಾಗೂ ವಿರೋಧ ಪಕ್ಷದವರು ಸೇರಿ ಮಾತನಾಡಿದ್ದಾರೆ. ಸುಮಾರು 12 ಗಂಟೆ 52 ನಿಮಿಷಗಳ ಕಾಲ ಚರ್ಚೆಯಲ್ಲಿ ಭಾಗವಹಿಸಿದ್ದಾರೆ. ಟೀಕೆ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಅದೆರಡನ್ನೂ ಸ್ವಾಗತಿಸುತ್ತೇನೆ. ಚರ್ಚೆಯಲ್ಲಿ ಭಾಗವಹಿಸಿ ಅನಿಸಿಕೆಗಳನ್ನು ವ್ಯಕ್ತಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

ರಾಜಕೀಯ

ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ; ಅದಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಜೀವಂತ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. “2018ರಲ್ಲಿ ತಮ್ಮ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಹೊರರಾಜ್ಯಗಳ ಗಣ್ಯರಿಗೆ ಆತಿಥ್ಯ ನೀಡಲು ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿರಲಿಲ್ಲವೆ ಎಂದು ಕೆಲವರು ಪ್ರಶ್ನಿಸಿದ್ದಾರೆ.

ಸ್ವತಃ ಮುಖ್ಯಮಂತ್ರಿಗಳು, ಸಂಸದೀಯ ಸಚಿವರು, ಇನ್ನೂ ಕೆಲ ಮಂತ್ರಿಗಳು ಸದನವನ್ನೇ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಆಗ ನಾನು ಕೇವಲ ನಿಯೋಜಿತ ಮುಖ್ಯಮಂತ್ರಿ. ರಾಜಭವನದ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ವ್ಯವಸ್ಥೆ ಮಾಡಿರುತ್ತದೆ ಎಂಬುದು ಇವರಿಗೆ ತಿಳಿಯದೆ?

ಪ್ರಮಾಣವನ್ನೇ ಸ್ವೀಕರಿಸದ ನಿಯೋಜಿತ ಮುಖ್ಯಮಂತ್ರಿ ಯಾವುದಾದರೂ ಆದೇಶ ನೀಡಲು ಸಾಧ್ಯವೇ? ಇಷ್ಟಕ್ಕೂ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭಕ್ಕೂ, ಪಕ್ಷದ ಕಾರ್ಯಕ್ರಮಕ್ಕೂ ಹೋಲಿಕೆಯೇ?

ಇಷ್ಟು ಸಾಮಾನ್ಯ ತಿಳಿವಳಿಕೆ ಸ್ವತಃ ಮುಖ್ಯಮಂತ್ರಿ ಹಾಗೂ ಸಂಸದೀಯ ಸಚಿವರಿಗೆ ಇಲ್ಲ ಎಂದರೆ ಏನು ಹೇಳುವುದು? ಇಂಡಿಯಾ ಒಕ್ಕೂಟದ ಸಭೆಗೆ ಬಂದ ಹೊರರಾಜ್ಯಗಳ ನಾಯಕರಿಗೆ ಐಎಎಸ್ ಅಧಿಕಾರಿಗಳನ್ನು ಚಾಕರಿಗೆ ಬಿಟ್ಟಿದ್ದು ತಪ್ಪು ಎಂಬುದು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಗಿಳಿಪಾಠ ಒಪ್ಪಿಸುವ ಸ್ವಯಂಘೋಷಿತ ಸಂವಿಧಾನ ತಜ್ಞರಿಗೆ ಶೋಭೆಯೇ?

ಉಪ ಸಭಾಧ್ಯಕ್ಷರು ದಲಿತರೆನ್ನುವ ಟ್ರಂಪ್ ಕಾರ್ಡ್ ತೇಲಿಬಿಟ್ಟಿದೆ ಸರಕಾರ. ದಲಿತರೆನ್ನುವ ಕಾರಣಕ್ಕೆ ಉಪ ಸಭಾಧ್ಯಕ್ಷರ ಮೇಲೆ ಅನುಕಂಪದ ಹೊಳೆ ಹರಿಸುವ ಕಾಂಗ್ರೆಸ್, ಅವರಿಗೆ ಸಚಿವ ಸ್ಥಾನವನ್ನೇ ನೀಡಬಹುದಿತ್ತು. ನೀಡಲಿಲ್ಲ ಯಾಕೆ? ಶಾಸಕ ಪುಟ್ಟರಂಗಶೆಟ್ಟಿ ಅವರು ಬೇಡವೇ ಬೇಡ ಎಂದ ಹುದ್ದೆಯನ್ನು ರುದ್ರಪ್ಪ ಲಮಾಣಿ ಅವರ ತಲೆಗೆ ಕಟ್ಟಿದ್ದು ಯಾಕೆ?

ಇಂಥ ಅತಿಯಾದ ಜಾಣತನ, ಭಂಡತನ ಯಾಕೆ? ಸಂಪುಟ ರಚನೆ ವೇಳೆ ರುದ್ರಪ್ಪ ಲಮಾಣಿ ಅವರು ದಲಿತರೆನ್ನುವುದು ಕಾಂಗ್ರೆಸ್’ಗೆ ಗೊತ್ತಿರಲಿಲ್ಲವೇ? ದಲಿತ ಕಾರ್ಡ್ ಬಿಟ್ಟ ಪ್ರಿಯಾಂಕ್ ಖರ್ಗೆ ಅಥವಾ ಕೃಷ್ಣ ಭೈರೇಗೌಡರಿಗೆ ಅಷ್ಟು ದಲಿತಪ್ರೇಮ ಇದ್ದರೆ ಅವರ ಸಚಿವಗಿರಿಯನ್ನು ಲಮಾಣಿ ಅವರಿಗೇ ಬಿಟ್ಟುಕೊಟ್ಟು ಈ ಇಬ್ಬರಲ್ಲಿ ಒಬ್ಬರು ಉಪ ಸಭಾಧ್ಯಕ್ಷರಾಗಲಿ.

ಅಷ್ಟೇ ಅಲ್ಲ; ದಲಿತ ಮುಖ್ಯಮಂತ್ರಿ ಕೂಗು ಕಾಂಗ್ರೆಸ್ ಪಕ್ಷದಲ್ಲಿ ಬಹಳ ದಿನಗಳಿಂದ ಇದೆ. ಹಿಂದೆ ಖರ್ಗೆ ಅವರಿಗೆ ಸಿಎಂ ಹುದ್ದೆ ಕೈ ತಪ್ಪುವಂತೆ ಮಾಡಲಾಗಿತ್ತು. ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ. ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇನಲ್ಲ. ಅಲ್ಲವೇ? ಎಂದು ಕಿಡಿಕಾರಿದ್ದಾರೆ.

ರಾಜಕೀಯ

ಜೈನಧರ್ಮದ ಭರತನು ಅವಸರ್ಪಿನಿಯ ಮೊದಲ ಚಕ್ರವರ್ತಿ. ಅವನು ಜೈನ ಸನ್ಯಾಸಿ ಮೊದಲ ತೀರ್ಥಂಕರ ರಿಷಭನಾಥನ ಹಿರಿಯ ಮಗ. ಜೈನ ವಿಶ್ವವಿಜ್ಞಾನದ ಪ್ರಕಾರ, ಭಾರತದ ಪ್ರಾಚೀನ ಹೆಸರು ಭಾರತವರ್ಷ ಅಥವಾ ಅವನ ನಂತರ ಭರತ ಅಥವಾ ಭರತ ಭೂಮಿ. ಹಾಗಾಗಿ ಈ ದೇಶವನ್ನು ಭಾರತವೆಂದು ಕರೆಯಲಾಗುತ್ತಿದೆ.

ಭಾರತಕ್ಕೆ ಇಂಡಿಯಾ ಎಂಬ ಹೆಸರನ್ನು ಆಂಗ್ಲರು ನೀಡಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ಇಂಡಿಯಾ ಎಂಬುದುಕ್ಕೆ ಬೇರೆಯದೆ ಅರ್ಥವಿದೆ. ಪಂಚಭೂತಗಳೆಂದರೆ ಆಕಾಶ, ಭೂಮಿ, ಅಗ್ನಿ, ಜಲ ಮತ್ತು ವಾಯು. ಈ ಐದು ಮೂಲಭೂತಗಳಿಂದಾಗಿಯೇ ಜಗತ್ತು ಸೃಷ್ಟಿಯಾಗಿದೆ ಎಂದು ನಂಬಿದ ನಮ್ಮ ಪೂರ್ವಜರು ದೇವತೆಗಳ ರಾಜನಾದ ಇಂದ್ರನನ್ನು ಪೂಜಿಸುತ್ತಿದ್ದರು.

ಹಿಂದೂ ಧರ್ಮದ ಪ್ರಕಾರ, ಇಂದ್ರನು ಸ್ವರ್ಗ, ಯುದ್ಧ, ಗುಡುಗು ಮತ್ತು ಚಂಡಮಾರುತದ ದೇವರು. ಸಂಸ್ಕೃತದಲ್ಲಿ ಇಂದು ಎಂದರೆ ‘ಒಂದು ಹನಿ’ ಮತ್ತು ‘ರಾ’ ಎಂದರೆ ಹೊಂದಿರುವುದು; ಆದ್ದರಿಂದ, ಇಂದ್ರ ಎಂದರೆ ಮಳೆ ಹನಿಗಳನ್ನು ಹೊಂದಿರುವವನು ಅಂದರ್ಥವಾಗುತ್ತದೆ. ನಾವು ಜನವರಿ 14 ಮತ್ತು 15 ರಂದು ಆಚರಿಸುತ್ತಿರುವ ಮಕರ ಸಂಕ್ರಾಂತಿ ಅಥವಾ ಪೊಂಗಲ್ ಹಬ್ಬವನ್ನು ಈ ಹಿಂದೆ ನಮ್ಮ ಪೂರ್ವಜರು ಇಂದ್ರ ಹಬ್ಬ ಹೆಸರಿನಲ್ಲಿ ಆಚರಿಸುತ್ತಿದ್ದರು.

ಪ್ರಕೃತಿಯನ್ನು ಆರಾಧಿಸುವುದು ನಮ್ಮ ಸಂಪ್ರದಾಯ; ಹೀಗೆ ಪ್ರಕೃತಿಯೊಂದಿಗೆ ಬೆಸೆದುಹೋಗಿದ್ದ ನಮ್ಮನ್ನು, ಧಾರ್ಮಿಕ ಮತಾಂಧತೆಯನ್ನು ಪ್ರಚೋದಿಸಿ, ನಮ್ಮನ್ನು ವಿಭಜಿಸಿ ರಾಜಕೀಯ ಲಾಭ ಪಡೆಯುತ್ತಿದ್ದಾರೆ. ಮನೆ ದೇವರನ್ನು ಪೂಜಿಸುವುದು ಗ್ರಾಮ ದೇವತೆಗಳನ್ನು ಕೊಂಡಾಡಿ ಸಂಬ್ರಮಿಸುವುದೆಲ್ಲವೂ ಮಾಯವಾಗಿ, ಅವನು ಮುಸ್ಲಿಂ, ಇವನು ಕ್ರಿಶ್ಚಿಯನ್ ಎಂದು ನಮ್ಮವರನ್ನೆ ನಾವು ಬೇರೆಯಾಗಿ ನೋಡಿ, ಅವರಿಗೆ ಧಾರ್ಮಿಕವಾಗಿ ಕಿರುಕುಳ ನೀಡುತ್ತಿದ್ದೇವೆ.

ಸನಾತನವಾದಿಗಳು ಅಖಂಡ ಭಾರತ ಎಂದು ಹೇಳುತ್ತಾರೆ. ಮತ್ತೊಂದು ಕಡೆ ಅದನ್ನು ಹಿಂದೂ ರಾಷ್ಟ್ರವೆಂದೂ ಕರೆಯುತ್ತಾರೆ. ಹಾಗಾದರೆ, ಅವರ ದೃಷ್ಟಿಯಲ್ಲಿ ಈ ದೇಶ ಭಾರತವೂ ಹೌದು; ಇಂಡಿಯಾವೂ ಹೌದು. ಆದರೆ, ರಾಜಕೀಯಕ್ಕಾಗಿ ಇಂಡಿಯಾ ಎಂದರೆ, ಅದು ಆಂಗ್ಲರು ನೀಡಿದ ಹೆಸರು ಎಂದು ವಿರೋಧಿಸುತ್ತಿದ್ದಾರೆ.

ಈಗ ನಮ್ಮ ದೇಶದಲ್ಲಿ I.N.D.I.A ಎಂಬ ಹೊಸ ರಾಜಕೀಯ ಪರ್ವ ಶುರುವಾಗಿದೆ. ಹಳೆ UPA ಹೊಸ ಹೆಸರಿನಲ್ಲಿ ಇನ್ನಿಂಗ್ಸ್ ಪ್ರಾರಂಭಿಸಿದೆ. ಈಗ ಎಲ್ಲಾ ಕಡೆ ಇದೆ ಚರ್ಚೆ ನಡೆಯುತ್ತಿದೆ. ಇಂಡಿಯಾ VS ಭಾರತ ಎಂಬ ಹೆಸರಿನಲ್ಲಿ ನೆಟ್ಟಿಗರು ಸಾಮಾಜಿಕ ಜಾಲ ತಾಣದಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

ಐಂದ್ರಿಯ > ಇಂದ್ರಿಯ > ಇಂದ್ರ > ಇಂದು > ಇಂಡಿಯಾ ಎಂದಾಗಿ ಈಗ ಹಿಂದೂ ಆಗಿದೆ. ನನಗೆ ತಿಳಿದಮಟ್ಟಿಗೆ ಇಂಡಿಯಾ ಎಂಬುದಕ್ಕೆ ಇದುವೇ ಅರ್ಥ. ಜೈನ ಧರ್ಮದ ಭಾರತ ಎಂಬ ಹಳೆಯ ಸಂಪ್ರದಾಯಕ್ಕೂ, ಇಂಡಿಯಾ ಎಂಬ ಹತ್ತಿರದ ಸಂಬಂಧಕ್ಕೂ ಇಷ್ಟೇ ವ್ಯತ್ಯಾಸ.

ಇಂಡಿಯಾ ಎಂಬ ಹೆಸರು ಸಿಂಧೂ ನದಿಯ ಪರ್ಷಿಯನ್ ರೂಪಾಂತರ “ಇಂಡಸ್” ಎಂಬುದರಿಂದ ಬಂದಿದ್ದು ಎಂದು ಹೇಳಿದರೂ, ಇಂಡಸ್ ಎಂಬ ಹೆಸರು ಇಂದ್ರನ ಹೆಸರಿನಿಂದ ಬಂದಿದ್ದು. ಇದನ್ನೇ ಹಿಂದೂಸ್ತಾನ ಎನ್ನುತ್ತೇವೆ. ಆದ್ದರಿಂದ ಮೊದಲಿನವು ಸರಿಯಾಗಿ ಅನ್ವಯಿಸುತ್ತದೆ. ಈಗ ಹೇಳಿ ನಿಮಗೆ ಇಂಡಿಯಾ (I.N.D.I.A) ಬೇಕೆ? ಅಥವಾ ಭಾರತ ಸಾಕೆ?

ದೇಶ ರಾಜಕೀಯ

ಬೆಂಗಳೂರು: ಬಿಜೆಪಿಯನ್ನು ಸೋಲಿಸುವವರೆಗೂ ವಿರೋಧ ಪಕ್ಷಗಳ ಮೈತ್ರಿ ವಿರಮಿಸುವುದಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಭೆಯ ನಂತರ ಪ್ರತಿಪಕ್ಷ ನಾಯಕರು ಸುದ್ದಿಗಾರರನ್ನು ಭೇಟಿಯಾಗಿ ಮಾತನಾಡಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ: ಮೋದಿ ವಿರುದ್ಧ ಭಾರತವಿದೆ ಎಂಬುದನ್ನು ತೋರಿಸಲು ಮೈತ್ರಿಕೂಟಕ್ಕೆ “ಇಂಡಿಯಾ” ಎಂದು ಹೆಸರಿಡಲಾಗಿದೆ. ವಿರೋಧ ಪಕ್ಷಗಳ ಮುಂದಿನ ಸಭೆ ಮುಂಬೈನಲ್ಲಿ ನಡೆಯಲಿದೆ. ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಒಕ್ಕೂಟಕ್ಕೆ 11 ಸಂಯೋಜಕರನ್ನು ನೇಮಿಸಲಾಗುವುದು.

ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ, ನಾವು ದೇಶವನ್ನು ರಕ್ಷಿಸಲು ಒಗ್ಗಟ್ಟಾಗಿದ್ದೇವೆ. ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ಬಿಜೆಪಿಗೆ ನಡುಕ ಶುರುವಾಗಿದೆ. ವಿರೋಧ ಪಕ್ಷಗಳ ವಿರುದ್ಧ ಬಿಜೆಪಿಯು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅನ್ನು ಅಸ್ತ್ರವಾಗಿ ಬಳಸುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ನಿಶ್ಚಿತ. ಪ್ರತಿಪಕ್ಷಗಳು ಒಂದಾಗುತ್ತಿರುವುದನ್ನು ಕಂಡು ಸಣ್ಣ ಪಕ್ಷಗಳು ಒಂದಾಗುತ್ತಿವೆ. ಬಿಜೆಪಿ ಮೈತ್ರಿಕೂಟದಲ್ಲಿದೆ ಎನ್ನಲಾದ 38 ಪಕ್ಷಗಳ ಪೈಕಿ ಹಲವು ಪಕ್ಷಗಳ ಹೆಸರನ್ನು ಕೇಳಿಯೇ ಇಲ್ಲ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ: ಪ್ರತಿಪಕ್ಷಗಳ ಸಭೆ ಪ್ರಯೋಜನಕಾರಿ ಮತ್ತು ರಚನಾತ್ಮಕವಾಗಿತ್ತು. ನಮಗೆ ಸವಾಲು ಹಾಕಿದರೆ ಎನ್‌ಡಿಎ ಮೈತ್ರಿಕೂಟ ಸೋಲುತ್ತದೆ. ನಾವು ಜನಾಂಗ, ಭಾಷೆ ಮತ್ತು ಧರ್ಮವನ್ನು ಮೀರಿ ಒಗ್ಗಟ್ಟಾಗಿದ್ದೇವೆ. ಬಿಜೆಪಿಯನ್ನು ತೊಲಗಿಸಿ ದೇಶವನ್ನು ರಕ್ಷಿಸಬೇಕು. ಪ್ರತಿಪಕ್ಷಗಳ ಮೈತ್ರಿ ಗೆಲ್ಲಲಿದೆ. ಬಿಜೆಪಿಗೆ ಸೋಲು ಎದುರಾಗಲಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್: ಮೋದಿಯವರ ಭಾರತದಲ್ಲಿ ಯಾರೂ ನೆಮ್ಮದಿಯಾಗಿಲ್ಲ. ಬಿಜೆಪಿ ಎಲ್ಲಾ ಕ್ಷೇತ್ರಗಳನ್ನು ನಾಶ ಮಾಡಿದೆ. ನಮ್ಮೊಂದಿಗೆ ಇನ್ನಷ್ಟು ಪಕ್ಷಗಳು ಸೇರಲಿವೆ. ಬಿಜೆಪಿ ಆಡಳಿತದಲ್ಲಿ ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಲಾಗುತ್ತಿದೆ. ಕಳೆದ 9 ವರ್ಷಗಳಲ್ಲಿ ಮೋದಿಯವರಿಗೆ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಅವಕಾಶ ಸಿಕ್ಕಿತ್ತು. ಆದರೆ ಏನೂ ಆಗಲಿಲ್ಲ. ಬಿಜೆಪಿ ಮಣ್ಣಿನಿಂದ ಹಿಡಿದು ಆಕಾಶದವರೆಗೆ ಎಲ್ಲವನ್ನೂ ಮಾರಿದೆ.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ: ಸರ್ವಾಧಿಕಾರದ ವಿರುದ್ಧ ನಾವು ಒಂದಾಗಿದ್ದೇವೆ. ದೇಶವೇ ನಮ್ಮ ಕುಟುಂಬ. ಅದನ್ನು ರಕ್ಷಿಸಲು ನಾವು ಹೋರಾಟ ನಡೆಸುತ್ತಿದ್ದೇವೆ. ದೇಶವನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುತ್ತೇವೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ಬಿಜೆಪಿಯ ನೀತಿಗಳ ವಿರುದ್ಧ ನಮ್ಮ ಹೋರಾಟ ಇರಲಿದೆ. ದೇಶದ ಧ್ವನಿಗಾಗಿ ಈ ಹೋರಾಟ ನಡೆಯುತ್ತಿದೆ. ಬಿಜೆಪಿಯ ದುಷ್ಟ ಚಿಂತನೆ ಮತ್ತು ಸಿದ್ಧಾಂತದ ವಿರುದ್ಧ ನಾವು ಒಂದಾಗಿದ್ದೇವೆ. ಬಿಜೆಪಿಯಿಂದ ದೇಶವನ್ನು ರಕ್ಷಿಸಲು ಕ್ರಿಯಾ ಯೋಜನೆ ರೂಪಿಸಬೇಕಾಗಿದೆ. ದೇಶದಲ್ಲಿ ಒಂದೆಡೆ ಬೆಲೆ ಏರಿಕೆಯಾದರೆ ಮತ್ತೊಂದೆಡೆ ನಿರುದ್ಯೋಗ ಹೆಚ್ಚುತ್ತಿದೆ. ಈ ಹೋರಾಟ ಎರಡು ಪಕ್ಷಗಳ ನಡುವೆ ಅಲ್ಲ.

ಭಾರತದ ನೀತಿಯನ್ನು ರಕ್ಷಿಸಲು ಹೋರಾಟ. ಇತಿಹಾಸವನ್ನು ನೋಡಿದರೆ ಭಾರತದ ಇತಿಹಾಸದ ವಿರುದ್ಧ ಯಾರೂ ಹೋರಾಡಿಲ್ಲ. ಪ್ರಸ್ತುತ ಭಾರತದ ನೀತಿಗಳಿಗೂ ಮೋದಿಯವರಿಗೂ ನಡುವಿನ ಹೋರಾಟವಾಗಿದೆ. ಬಿಜೆಪಿಯನ್ನು ಸೋಲಿಸುವವರೆಗೂ ನಾವು ವಿರಮಿಸುವುದಿಲ್ಲ. ಎಂದು ಹೇಳಿದ್ದಾರೆ.

ಬಿಜೆಪಿ ವಿರುದ್ಧದ ವಿರೋಧ ಪಕ್ಷಗಳ ಮೈತ್ರಿ ಕೂಟಕ್ಕೆ ‘ಇಂಡಿಯಾ’ (Indian National Developmental Inclusive Alliance – INDIA) ಎಂದು ಹೆಸರಿಸಲಾಗಿದೆ. ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಡೆದಿದ್ದು, 26 ಪಕ್ಷಗಳು ಭಾಗವಹಿಸಿದ್ದವು. 6 ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ದೇಶ

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕರಲ್ಲಿ ಒಬ್ಬರಾಗಿದ್ದ ಉಮ್ಮನ್ ಚಾಂಡಿ (ವಯಸ್ಸು 79) ಇಂದು ಮುಂಜಾನೆ 4.25ಕ್ಕೆ ಬೆಂಗಳೂರಿನಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಉಮ್ಮನ್ ಚಾಂಡಿ ಕೇರಳ ರಾಜ್ಯದಲ್ಲಿ ಕಾಂಗ್ರೆಸ್‌ನ ಮುಖವಾಗಿದ್ದರು. ವಿದ್ಯಾರ್ಥಿ ದಿನಗಳಿಂದಲೂ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. 1970ರಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದರು. 1971 ರಿಂದ 2021 ರವರೆಗೆ 12 ಬಾರಿ ಕೇರಳ ವಿಧಾನಸಭೆಯ ಶಾಸಕರಾಗಿ ಆಯ್ಕೆಯಾಗಿದ್ದರು. ಪುದುಪಳ್ಳಿ ವಿಧಾನಸಭಾ ಕ್ಷೇತ್ರವನ್ನು ತಮ್ಮ ಭದ್ರಕೋಟೆಯನ್ನಾಗಿ ಉಳಿಸಿಕೊಂಡಿದ್ದರು.

ಉಮ್ಮನ್ ಚಾಂಡಿ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. “ಹಿರಿಯ ರಾಜಕೀಯ ಮುತ್ಸದ್ದಿ, ಕೇರಳದ ಮಾಜಿ ಮುಖ್ಯಮಂತ್ರಿ‌ ಉಮ್ಮನ್ ಚಾಂಡಿ ಅವರ ನಿಧನ ಅತೀವ ದುಃಖವುಂಟುಮಾಡಿದೆ. ಚಾಂಡಿಯವರ ನಿಧನದಿಂದ ಸಂವಿಧಾನ, ಪ್ರಜಾಪ್ರಭುತ್ವ, ದುರ್ಬಲ ಜನರ ಪರವಾದ ಗಟ್ಟಿಧ್ವನಿಯೊಂದು ಇಲ್ಲವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಚಾಂಡಿಯವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ದೇವರು ನೀಡಲೆಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ರಾಜಕೀಯ

ದೇಶದ ಹಿತವನ್ನು ಬಯಸದ, ಸದಾ ವೈಯುಕ್ತಿಕ ಹಿತಾಸಕ್ತಿಗಳ ಮೇಲಾಟದಲ್ಲಿ ತೊಡಗುವ, ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ “ಅವಕಾಶವಾದಿಗಳ ಸಭೆ ಇಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ಜಗಮೆಚ್ಚಿದ ನಾಯಕ ನರೇಂದ್ರ ಮೋದಿ ಅವರ ಮೇಲೆ ದ್ವೇಷ ಕಾರುವುದಷ್ಟೇ ಇವರ ಪ್ರಮುಖ ಅಜೆಂಡಾ ಎಂದು ಕರ್ನಾಟಕ ಬಿಜೆಪಿ ಹೇಳಿದೆ.

ಸದಾ ಅಧಿಕಾರಕ್ಕಾಗಿ ಕಚ್ಚಾಡುವ ಇವರುಗಳು ರಾಜಕಾರಣದಲ್ಲಿ ಇದುವರೆಗೂ ಬದ್ಧತೆ ಎಂಬುದನ್ನು ಒಮ್ಮೆಯೂ ಪ್ರದರ್ಶಿಸಿಲ್ಲ. ಭೃಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತಗಳು ಇವರ ಮುಖ್ಯ ಸಿದ್ದಾಂತವಾಗಿದ್ದು, ಅದನ್ನು ಸಾಧಿಸಲು ಈಗ ಒಂದಾಗುವ ನಾಟಕವಾಡುತ್ತಿದ್ದಾರೆ. ಈ ಸಭೆಯ ಆಯೋಜಕರು ಯಾರು? ಈ ಸಭೆಯ ಅಧ್ಯಕ್ಷರು ಯಾರು? ಈ ಸಭೆಯ ಸಂಯೋಜನೆ ಯಾವ ಪಕ್ಷದ್ದು? ಇದ್ಯಾವುದರ ಬಗ್ಗೆ ಸ್ವಲ್ಪವೂ ಸ್ಪಷ್ಟತೆ ಇಲ್ಲ. “ಯುನೈಟೆಡ್ ವಿ ಸ್ಟಾಂಡ್” ಎಂಬ ಈ ಕಿಟ್ಟಿ ಪಾರ್ಟಿಯ ಹೆಸರೇ ಇವರ ಮಧ್ಯೆ ಒಗ್ಗಟ್ಟು ದೂರದ ಬೆಟ್ಟ ಎಂಬುದನ್ನು ನಿರೂಪಿಸುತ್ತದೆ!

ದಶಕಗಳಿಂದ ಪಶ್ಚಿಮ ಬಂಗಾಳದಲ್ಲಿ ಪರಸ್ಪರ ಕಚ್ಚಾಡುತ್ತಿರುವ ಮಮತಾ ಬ್ಯಾನರ್ಜಿಯ ಟಿಎಂಸಿ ಹಾಗೂ ಕಮ್ಯುನಿಸ್ಟರು ಇಂದು ಒಂದೇ ಟೇಬಲ್‌ನಲ್ಲಿ ಕುಳಿತು ಒಗ್ಗಟ್ಟು ಪ್ರದರ್ಶಿಸುತ್ತಾರಂತೆ!! ಕೇರಳದಲ್ಲಿ ಅಧಿಕಾರಕ್ಕಾಗಿ ಹೊಡೆದಾಡುವ ಕಾಂಗ್ರೆಸ್ ಮತ್ತು ಕಮ್ಯುನಿಸ್ಟರು ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಕಾಮ್ರೇಡ್‌ಗಳಂತೆ!! ಪಂಜಾಬ್‌ನಲ್ಲಿ ಬಾಯಿಗೆ ಬಂದಂತೆ ಪರಸ್ಪರ ಬೈದಾಡಿಕೊಳ್ಳುವ ಆಮ್ ಆದ್ಮಿ ಪಕ್ಷದವರು ಹಾಗೂ ಕಾಂಗ್ರೆಸ್‌ನವರು, ಇಲ್ಲಿ ಮಾತ್ರ ಬಾಂಧವರಂತೆ!!

ಕನ್ನಡಿಗರ ಕುಡಿಯುವ ನೀರಿಗೆ, ಕಾವೇರಿ ಹಾಗೂ ಮೇಕೆದಾಟು ಯೋಜನೆಗಳಿಗೆ ಸದಾ ಇನ್ನಿಲ್ಲದಂತೆ ತೊಂದರೆ ಕೊಡುವ ತಮಿಳುನಾಡಿನ ಸಿಎಂ ಸ್ಟಾಲಿನ್‌ಗೆ, ಕರ್ನಾಟಕದ ಕಾಂಗ್ರೆಸ್ ಪಕ್ಷ ಚಿನ್ನತಂಬಿಯಂತೆ!! ಕನ್ನಡಿಗರಿಗೆ ಮಹಾದಾಯಿ ನದಿಯ ಒಂದು ತೊಟ್ಟು ನೀರು ಬಿಡುವುದಿಲ್ಲವೆಂದು ಗೋವಾದಲ್ಲಿ ಘೋಷಿಸಿದ್ದ ಸೋನಿಯಾ ಗಾಂಧಿಗೆ ಇಲ್ಲಿ ದೊಡ್ಡ ಕುರ್ಚಿಯಂತೆ!!

ಸೋನಿಯಾ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬಾರದೆಂದು, ಕಾಂಗ್ರೆಸ್ ಪಕ್ಷವನ್ನೇ ತುಂಡರಿಸಿ ಹೊರ ಬಂದ ಎನ್.ಸಿ.ಪಿ ಸಹ ಇಲ್ಲಿ ಅತಿಥಿಯಂತೆ!! ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಬಿಹಾರವನ್ನು ‘ಬಿಮಾರು’ಗೊಳಿಸಿದ್ದ ನಿತೀಶ್ ಕುಮಾರ್ & ಲಾಲೂ ಪ್ರಸಾದ್ ಯಾದವ್, ಇಲ್ಲಿ ಭಾಯಿ-ಭಾಯಿಗಳಂತೆ!! ಭಾರತವನ್ನು ತುಂಡರಿಸುವಂತಹ ಹೇಳಿಕೆಗಳನ್ನು ನೀಡುವ, ಪಾಕಿಸ್ಥಾನ ಪ್ರೇಮಿ ಫಾರೂಕ್ ಅಬ್ದುಲ್ಲಾಗೂ ಸಹ ಇಲ್ಲಿಗೆ ಆಹ್ವಾನವಿದೆಯಂತೆ!!

ಹಿಂದೂ ಧರ್ಮವನ್ನು ಸದಾ ಅವಹೇಳನ ಮಾಡುವ, ಹಿಂದೂಗಳನ್ನು ಅತ್ಯಂತ ಕೆಟ್ಟದಾಗಿ ನಿಂದಿಸುವ, ದ್ವೇಷಿಸುವ ತಮಿಳುನಾಡಿನ ತೋಳ್ ತಿರುಮಾವಳವನ್, ಮುಸ್ಲಿಂ ಲೀಗ್‌ಗೆ ಇಲ್ಲಿ ಪಾಲಿದೆಯಂತೆ!! ಇಂತಹವರಿಂದ ಸಧೃಡ ಭಾರತ ಹಾಗೂ ಸಶಕ್ತ ಭಾರತವನ್ನು ನಿರ್ಮಿಸಲು ಸಾಧ್ಯವೇ..? ತಿಂಡಿ ತಿನ್ನುವ ವೇಳೆ ಇರುವ ಇವರುಗಳ ಸ್ನೇಹ, ಊಟದ ವೇಳೆಗೆ ಮಾಯವಾದರೂ ಅಚ್ಚರಿ ಇಲ್ಲ. ಎಂದು ಕರ್ನಾಟಕ ಬಿಜೆಪಿ ಸರಣಿ ಟ್ವೀಟ್ ಮಾಡಿ ಆಕ್ರೂಶ ವ್ಯಕ್ತ ಪಡಿಸಿದೆ.

ಉದ್ಯೋಗ ಕ್ರೈಂ ರಿಪೋರ್ಟ್ಸ್

DRDOನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, 35 ಜನರಿಂದ 82 ಲಕ್ಷ ರೂಪಾಯಿಗಳನ್ನು ಪಡೆದು, ನಕಲಿ ದಾಖಲೆಗಳನ್ನು ಸೃಷ್ಟಿಸಿ, ವಂಚಿಸಿರುವ DRDO ಉದ್ಯೋಗಿಗಳಾದ 1) ಮಾಲಕೊಂಡಯ್ಯ 2) ಪಿ.ಎಸ್.ನಂಜಮ್ಮ  3) ಸತ್ಯನಾರಾಯಣ, 4) ಡಿ.ಜಿ.ರಾವ್, 5) ಸಲೀಂ 6) ಮಾಲಕೊಂಡಯ್ಯನ ಪತ್ನಿ ರಮಣಮ್ಮ ಮತ್ತು ಇತರರ ವಿರುದ್ದ ಟಿ.ಸಿ.ಪಾಳ್ಯ ಮುಖ್ಯ ರಸ್ತೆಯಲ್ಲಿರುವ ಪಿ ಅಂಡ್ ಟಿ ಕಾಲೋನಿ ನಿವಾಸಿ ಷಣ್ಮುಗಂ ಅವರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

MEG ಸೆಂಟರ್‌ನಲ್ಲಿ ಕೆಲಸ ಮಾಡಿ 2019ರಲ್ಲಿ ನಿವೃತ್ತಿ ಹೊಂದಿರುವ ಷಣ್ಮುಗಂ ಅವರನ್ನು ಕೆಲಸದ ವಿಚಾರದಲ್ಲಿ ಪರಿಚಯ ಮಾಡಿಕೊಂದಿದ್ದ ಮಾಲಕೊಂಡಯ್ಯ, “DRDOನಲ್ಲಿ 1200 ಹುದ್ದೆಗಳಿಗೆ  ಅರ್ಜಿ ಕರೆದಿದ್ದಾರೆ; ಯಾರಾದರು ಅಭ್ಯರ್ಥಿಗಳು (Candidate) ಇದ್ದರೆ ಹೇಳು; ನೇರವಾಗಿ ನೇಮಕಾತಿ (Appointment) ಕೊಡಿಸುತ್ತೇನೆ; ಪ್ರತಿ ವ್ಯಕ್ತಿಗೆ 2 ಲಕ್ಷ ರೂಪಾಯಿ ಆಗುತ್ತೆ ಎಂದು ಹೇಳಿದ್ದಾರೆ. ಇದನ್ನು ನಿಜವೆಂದು ನಂಬಿದ ಷಣ್ಮುಗಂ, ಬೆಂಗಳೂರು ಮತ್ತು ತಮಿಳುನಾಡಿನಿಂದ ಸುಮಾರು 35 ಜನರನ್ನು ಮಾಲಕೊಂಡಯ್ಯ ಅವರಿಗೆ ಹಂತ ಹಂತವಾಗಿ ಪರಿಚಯ ಮಾಡಿಕೊಟ್ಟಿದ್ದಾರೆ. ಮಾಲಕೊಂಡಯ್ಯ ಅವರು, ಸದರಿ 35 ಜನರಿಗೆ ಕೆಲಸ ಕೊಡಿಸುವ ಬರವಸೆ ನೀಡಿ, ಬಣ್ಣದ ಮಾತುಗಳನ್ನು ಹಾಡಿ, ಅವರಿಂದ 82 ಲಕ್ಷ ರೂಪಾಯಿಗಳನ್ನು ಪಡೆದುಕೊಂಡಿದ್ದಾರೆ.

ಹಣಕೊಟ್ಟವರಿಗೆ ಅನುಮಾನ ಬರಬಾರದು ಎಂಬುದಕ್ಕಾಗಿ, DRDOನಲ್ಲಿ ಅಕೌಂಟ್ ಆಫೀಸರ್ ಆಗಿರುವ ಪಿ.ಎಸ್.ನಂಜಮ್ಮ ಅವರನ್ನು ಬಳಸಿಕೊಂಡು, ದಾಖಲೆಗಳನ್ನು ದೃಢೀಕರಿಸಿ ಎಲ್ಲರಿಗೂ ನೀಡುತ್ತಿದ್ದರು. ಕೇಳಿದರೆ, “ಅಪಾಯಿಂಟ್ಮೆಂಟ್ ಎಲ್ಲವೂ ಆನ್‌ಲೈನ್‌ನಲ್ಲಿ ನಡೆಯುತ್ತಿದೆ. ನೀವು ಹಣ ಕೊಟ್ಟಿರುವುದರಿಂದ ನಿಮಗೆ ನೇರವಾಗಿ ಕೆಲಸ ಸಿಗಲಿದೆ. ನೇರವಾಗಿ ಕೆಲಸ ಸಿಗಬೇಕಾದರೆ ಒಳಗಿರುವ ಅಧಿಕಾರಿಗಳು ‘ಇವರು ನನಗೆ ಪರಿಚಯವಿದ್ದಾರೆ; ಇವರ ನಡವಳಿಕೆ ಚನ್ನಾಗಿದೆ’ ಎಂದು ಹೇಳಿ ದಾಖಲೆಯನ್ನು ದೃಢೀಕರಿಸಿ ಕೊಡಬೇಕು. ಆಗ ನಿಮಗೆ ಕೆಲಸ ಸಿಗುತ್ತದೆ” ಎಂದು ಹೇಳಿದ್ದಾರೆ.

ನಂತರ, ದಾಖಲೆಗಳ ಪರಿಶೀಲನೆಯೆಂಬ ಹೊಸ ನಾಟಕವನ್ನು ಶುರು ಮಾಡಿದ್ದಾರೆ. ಅದಕ್ಕಾಗಿ, ನ್ಯೂ ತಿಪ್ಪಸಂದ್ರ ಬಳಿ ಮಾಲಕೊಂಡಯ್ಯ ಅವರ ಸಂಬಂಧಿ ನಾಗೇಂದ್ರ ನಡೆಸುವ ಪಿಜಿಯ ಬಳಿಗೆ ಎಲ್ಲರನ್ನು ಕರೆಸಿಕೊಂಡು, ಅಲ್ಲಿಗೆ ನಕಲಿ DRDO ಅಧಿಕಾರಿಗಳನ್ನು ಕರೆಸಿ, ಇವರೆಲ್ಲರು DRDO ಅಧಿಕಾರಿಗಳೆಂದು ನಂಬಿಸಿ, ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

ನಂತರ ಹಣ ನೀಡಿ, ಕೆಲಸಕ್ಕಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಅನುಮಾನ ಬರಬಾರದು ಎಂಬುದಕ್ಕಾಗಿ, ಮುಂದೆ ನಿಂತು ಹಣ ಪಡೆದುಕೊಟ್ಟ ಷಣ್ಮುಗಂ, ಕಮಲಕಣ್ಣನ್, ಶಂಕರ್, ಗಣೇಶ್, ರಾಮ್ ಪ್ರಸಾದ್ ಮತ್ತು ನಾಗರಾಜ್ ಮುಂತಾದವರನ್ನು DRDO ಕಛೇರಿಯ ಒಳಗೆ ಕರೆಸಿಕೊಂಡು, ಅಲ್ಲಿ ಮಾಲಕೊಂಡಯ್ಯನೊಂದಿಗೆ ಶಾಮೀಲಾಗಿರುವ ಡಿ.ಜಿ.ರಾವ್, ಸಲೀಂ ಮುಂತಾದ ಇನ್ನೂ ಕೆಲವು ಆಫೀಸರ್‌ಗಳೊಂದಿಗೆ ಮಾತನಾಡಿಸಿ ನಂಬಿಸುವ ನಾಟಕ ಮಾಡಿದ್ದಾರೆ.

ಅಧಿಕಾರಿಗಳು ಮಾಲಕೊಂಡಯ್ಯ ಹೇಳಿ ಕೊಟ್ಟಂತೆ ‘ಇನ್ನು ಹತ್ತು ದಿನಗಳಲ್ಲಿ ನಿಮ್ಮ ಕೆಲಸ ಆಗಿ ಬಿಡುತ್ತದೆ’, ‘ಲಿಸ್ಟ್ ಆಗಿದೆ’, ‘ಇನ್ನು ಸಹಿ ಆಗಿಲ್ಲ’ ಎಂದು ಭರವಸೆಯ ಮಾತುಗಳನ್ನು ಹೇಳಿ ಕಳುಹಿಸಿದ್ದಾರೆ. ‘DRDO ಅಧಿಕಾರಿಗಳಿಗೆ ಹಣ ಕೊಟ್ಟಿದ್ದೇನೆ; ಅವರೆಲ್ಲರು ನಮ್ಮ ಕೆಲಸ ಮಾಡಿಕೊಡುತ್ತಾರೆ’ ಎಂದು ದೂರುದಾರ ಷಣ್ಮುಗಂ ಬಳಿ ಮಾಲಕೊಂಡಯ್ಯ ಹೇಳಿಕೊಂಡಿದ್ದಾರೆ.    

ಕೆಲಸ ಕೊಡುವ ವಿಚಾರವನ್ನು ಹೀಗೆ ಎಳೆಯುತ್ತಾ ಹೋಗುವ ಮಾಲಕೊಂಡಯ್ಯ, ಒತ್ತಡ ಹೆಚ್ಚಾದಾಗ ‘ಜಾಬ್ ಲಿಸ್ಟ್’ ಕೊಡಿಸುವ ಕಾರ್ಯವನ್ನು ಮಾಡಿದ್ದಾರೆ. ಹಣ ಕೊಟ್ಟ ಎಲ್ಲರಿಗೂ DRDO ಟೆಕ್ನಿಕಲ್ ಆಫೀಸರ್ ಸತ್ಯನಾರಾಯಣ ಮತ್ತು ಅಕೌಂಟ್ ಆಫೀಸರ್ ಪಿ.ಎಸ್.ನಂಜಮ್ಮ ಮೂಲಕ ನಕಲಿ ಜಾಬ್ ಲಿಸ್ಟ್ ತಯಾರಿಸಿ ಎಲ್ಲರಿಗೂ ಹಂಚಿಕೆ ಮಾಡಿದ್ದಾರೆ.

ಆದರೆ, ಹಣಕೊಟ್ಟವರಿಗೆ ಈ ಜಾಬ್ ಲಿಸ್ಟ್, ದಾಖಲೆ ದೃಢೀಕರಣ ಎಲ್ಲವೂ ನಾಟಕ, ನಮ್ಮಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆ, ಮಾಲಕೊಂಡಯ್ಯ ಕೆಲವರಿಗೆ ಚೆಕ್ ನೀಡಿದ್ದಾರೆ. ಇನ್ನು ಕೆಲವರಿಗೆ ಹಣ ಕೊಡಲು ಸಮಯ ಕೇಳಿ, ಹಣ ಕೊಟ್ಟವರನ್ನು ತಿಂಗಳು ಗಟ್ಟಲೆ ಕಛೇರಿಯ ಬಳಿ ತಿರುಗಾಡುವಂತೆ ಮಾಡಿದ್ದಾರೆ. ಕೊಟ್ಟಿದ್ದ ಚೆಕ್ ಯಾವುದರಲ್ಲೂ ಹಣವಿಲ್ಲ. ಎಲ್ಲವೂ ಬೋನ್ಸ್ ಆಗಿದೆ.

ಮೊಬೈಲಿಗೆ ಕರೆ ಮಾಡಿದರೆ ಪಿಕ್ ಮಾಡುವುದಿಲ್ಲ, ಕಛೇರಿ ಬಳಿಯೂ ಸಿಗುವುದಿಲ್ಲ. ಮನೆ ವಿಳಾಸ ಹುಡುಕಿಕೊಂಡು ಹೋದರೆ, ಮಾಲಕೊಂಡಯ್ಯ ಹೆಂಡತಿ ರಮಣಮ್ಮನನ್ನು ಬಿಟ್ಟು ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ಬಯ್ಯುವಂತೆ ಮತ್ತು ಅಮಾನುಷ್ಯವಾಗಿ ವರ್ತಿಸುವಂತೆ ಮಾಡಿದ್ದಾರೆ. ಇದರಿಂದ ಬೇಸತ್ತ ಷಣ್ಮುಗಂ ತಾಳಲಾರದೆ, ತಿಳಿದವರ ಬಳಿ, ಮಗ-ಮಗಳ ಬಳಿ, ಬಡ್ಡಿಗೆ ಎಂದು ಇದುವರೆಗೆ ಸುಮಾರು 25 ಲಕ್ಷ ರೂಪಾಯಿಗಳನ್ನು ಸಾಲ ಮಾಡಿ ಎಲ್ಲರಿಗೂ ಸ್ವಲ್ಪ ಸ್ವಲ್ಪ ಹಂಚಿದ್ದಾರೆ.

ಈ ರೀತಿ ಕೆಲಸ ಕೊಡಿಸುವುದಾಗಿ ನಂಬಿಸಿ, 35 ಜನರಿಂದ ರೂ.82 ಲಕ್ಷ ಹಣವನ್ನು ಪಡೆದು, ವಂಚನೆ ಮಾಡಿರುವ ಮಾಲಕೊಂಡಯ್ಯ, ಕಾಲ ಕಳೆದಂತೆ ಹಣಕೊಟ್ಟವರ ಬಳಿ “ನನಗೂ ಈ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ… ಎಲ್ಲರ ಹಣ ಷಣ್ಮುಗಂ ಬಳಿ ಇದೆ… ಆತನ ಬಳಿಯೇ ಹಣ ಪಡೆದುಕೊಳ್ಳಿ… ಏನಿದ್ದರೂ ಆತನ ಬಳಿಯೇ ಮಾತನಾಡಿಕೊಳ್ಳಿ… ನನಗೆ ಯಾರೂ ಪೋನ್ ಮಾಡಬೇಡಿ” ಎಂದು ಹೇಳಿ, ಈ ವಿಚಾರದಿಂದ ದೂರ ಸರಿದುಕೊಂಡಿದ್ದಾರೆ.

ಕೇಳಿದರೆ, “ಕೆಲವರಿಗೆ ಹಣ ಕೊಟ್ಟಂತೆ ಬಾಕಿ ಉಳಿದವರಿಗೂ ನೀನೆ ಹಣ ಕೊಡು; ನಿಮ್ಮ ಜಮೀನು ಮಾರಿ ಕೊಡು ಎಂದು ದುರಹಂಕಾರದಿಂದ ಮಾತನಾಡಿದ್ದಾರೆ. “ನಾನು ಯಾವುದೇ ಹಣ ತಿಂದಿಲ್ಲ… ನೀನು ಏನು ಬೇಕಾದರು ಮಾಡಿಕೊ… ನನಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ… ನನಗೆ ಇನ್ನು ಮುಂದೆ ಪೋನ್ ಮಾಡಬೇಡ” ಎಂದು ಹೇಳಿ ಷಣ್ಮುಗಂ ಅವರನ್ನು ಗದರಿಸಿ ಸಂಪರ್ಕವನ್ನು ಕಡಿತ ಮಾಡಿಕೊಂಡಿದ್ದಾರೆ. ಮೋಸಹೋದ ಜನರು ಅನ್ಯ ಮಾರ್ಗವಿಲ್ಲದೆ, ಈಗ ಷಣ್ಮುಗಂ ಅವರಿಗೆ ದಿನನಿತ್ಯ ಪೋನ್ ಮಾಡಿ, ಹಣ ಕೊಡುವಂತೆ ತೊಂದರೆ ನೀಡುತ್ತಿದ್ದಾರೆ.

ಕೆಲಸ ಕೊಡಿಸುವುದಾಗಿ ನಂಬಿಸಿ, ಜನರನ್ನು ಕರೆದುಕೊಂಡು ಬರುವಂತೆ ಮಾಡಿದ ಮಾಲಕೊಂಡಯ್ಯ, ಅವರಿಂದ ಹಣ ಪಡೆದು, ಅವರು ನೀಡುವ ದಾಖಲೆಗಳನ್ನು DRDOನಲ್ಲಿ ಅಕೌಂಟ್ ಆಫೀಸರ್ ಆಗಿ ಕೆಲಸ ಮಾಡುವ ಪಿ.ಎಸ್.ನಂಜಮ್ಮ ಮತ್ತು ಇತರರಿಂದ ದೃಢೀಕರಿಸಿ ಕೊಟ್ಟು, ನಿಮಗೆ ನೇರವಾಗಿ ನೇಮಕಾತಿ ಕೊಡುತ್ತೇನೆಂದು ಎಲ್ಲರನ್ನೂ ನಂಬಿಸಿದ್ದಾರೆ. 28 ಹುಡುಗರನ್ನು ಪಿಜಿಯಲ್ಲಿ ಕೂರಿಸಿ, ದಾಖಲೆಗಳ ಪರಿಶೀಲನೆ ಎಂದು ನಾಟಕವಾಡಿ ನಂತರ, DRDOನಲ್ಲಿ ಟೆಕ್ನಿಕಲ್ ಆಫೀಸರ್ ಆಗಿರುವ ಸತ್ಯನಾರಾಯಣ ಮತ್ತು ಅಕೌಂಟ್ ಆಫೀಸರ್ ಪಿ.ಎಸ್.ನಂಜಮ್ಮ ಜೊತೆ ಸೇರಿಕೋಂಡು Job List ಎಂಬ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಎಲ್ಲರಿಗೂ ಹಂಚಿದ್ದಾರೆ.

ಇವರು ಬರೀ ಷಣ್ಮುಗಂ ಕಡೆಯಿರುವ 35 ಜನರಿಗೆ ಮಾತ್ರ ಏಮಾರಿಸಿಲ್ಲ. ಇವರಿಂದ ಏಮಾರಿದವರು ನೂರಾರು ಜನರಿದ್ದಾರೆ. ಇವರೆಲ್ಲ ನೆಪ ಮಾತ್ರಕ್ಕೆ DRDOನಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಮಾಡುತ್ತಿರುವುದೆಲ್ಲ DRDO ಹೆಸರಿನಲ್ಲಿ ನಕಲಿ ನೇಮಕಾತಿ ದಂಧೆ. ಡಿ ಗ್ರೂಪ್ ನೌಕರನಾದ ಮಾಲಕೊಂಡಯ್ಯನಿಗೆ ಒಳಗಿರುವ ಆಫೀಸರ್‌ಗಳು ಬೆನ್ನೆಲುಬಾಗಿ ನಿಂತು ನಕಲಿ ದಾಖಲೆಗಳನ್ನು ತಯಾರಿಸಿ ಕೊಡುತ್ತಿರುವುದು ಷಣ್ಮುಗಂ ನೀಡಿರುವ ದೂರಿನಿಂದ ಬಹಿರಂಗವಾಗಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆ ಪ್ರಗತಿಯಲ್ಲಿದೆ.         

ರಾಜಕೀಯ

ನವದೆಹಲಿ: ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ; ಫೆಡರಲಿಸಂ ಅಂತ್ಯಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ನಾವು ನಿರಂತರವಾಗಿ ವಿರೋಧಿಸುತ್ತಿದ್ದೇವೆ. ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದ ದೆಹಲಿ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ವಿರೋಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಪವನ್ ಖೇರಾ ಹೇಳಿದ್ದಾರೆ. ಈ ಸುಗ್ರೀವಾಜ್ಞೆಯನ್ನು ವಿರೋಧಿಸಿದರೆ ಮಾತ್ರ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುತ್ತೇವೆ ಎಂದು ಆಮ್ ಆದ್ಮಿ ಪಕ್ಷ ಹೇಳಿರುವ ಬೆನ್ನಲ್ಲೇ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದೆ.

ದೆಹಲಿಯಲ್ಲಿ ಯಾರಿಗೆ ಅಧಿಕಾರ ಎಂಬ ಬಗ್ಗೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದಿತ್ತು. ಈ ಸುಗ್ರೀವಾಜ್ಞೆಗೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ವಿರುದ್ಧ ಕೇಜ್ರಿವಾಲ್ ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಿಗೆ ತೆರಳಿ ಬೆಂಬಲ ಸಂಗ್ರಹಿಸಿದರು. ಕಾಂಗ್ರೆಸ್ ಮಾತ್ರ ಮೌನವಾಗಿತ್ತು.

ಇದಾದ ಬಳಿಕ ಈ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವನ್ನು ಕೂಡಲೇ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲೂ ಕಾಂಗ್ರೆಸ್ ತನ್ನ ನಿಲುವು ಪ್ರಕಟಿಸದಿರುವುದನ್ನು ವಿರೋಧಿಸಿ, ಕೇಜ್ರಿವಾಲ್ ಪತ್ರಿಕಾಗೋಷ್ಠಿಯನ್ನು ಬಹಿಷ್ಕರಿಸಿದ್ದರು.

ಸುಗ್ರೀವಾಜ್ಞೆಯನ್ನು ಬೆಂಬಲಿಸಲು ಕಾಂಗ್ರೆಸ್ ನಿರಾಕರಿಸಿದರೆ, ಮುಂದಿನ ದಿನಗಳಲ್ಲಿ ಪ್ರತಿಪಕ್ಷಗಳ ಸಭೆಗಳನ್ನು ಬಹಿಷ್ಕರಿಸುವುದಾಗಿ ಕೇಜ್ರಿವಾಲ್ ಘೋಷಿಸಿದ್ದರು. ಈ ಹಿನ್ನಲೆಯಲ್ಲಿ ಈ ತುರ್ತು ಸುಗ್ರೀವಾಜ್ಞೆಗೆ ವಿರುದ್ಧ; ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ಮುಂದಾಗಿದೆ.

ಈ ನಿಟ್ಟಿನಲ್ಲಿ ದೆಹಲಿ ಸರ್ಕಾರದ ಆಡಳಿತಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ವಿರೋಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಪವನ್ ಖೇರಾ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷ ಭಾಗವಹಿಸಲಿದೆ ಎಂದು ನಾನು ಭಾವಿಸುತ್ತೇನೆ. ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ನಮ್ಮ ನಿಲುವು ಸ್ಪಷ್ಟವಾಗಿದೆ. ಆ ಸುಗ್ರೀವಾಜ್ಞೆಯನ್ನು ನಾವು ಬೆಂಬಲಿಸುವುದಿಲ್ಲ. ಎಂದು ಹೇಳಿದ್ದಾರೆ.

ರಾಜಕೀಯ

ಬಿಜೆಪಿ ಬಿ ಟೀಂ ಜೆಡಿಎಸ್ ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ  ಹೆಚ್.ಡಿ.ಕುಮಾರಸ್ವಾಮಿ ನಮ್ಮ‌ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಯಾವುದೇ ತತ್ವ ಸಿದ್ದಾಂತಗಳಿಲ್ಲ.‌ ಕೋಮುವಾದಿ ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್‌ಗೆ ಯಾವ ಸಿದ್ದಾಂತವಿದೆ? ಅದೊಂದು ಅವಕಾಶವಾದಿ ಪಕ್ಷ.‌ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ ಎನ್ನುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಜೆಡಿಎಸ್ ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006ರಲ್ಲಿ ಬಿಜೆಪಿ ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ ಕುಮಾರಸ್ವಾಮಿ ಎಳ್ಳು‌ ನೀರು ಬಿಟ್ಟಿದ್ದರು. ಆಗಲೇ ಜೆಡಿಎಸ್ ಅವನತಿ ಶುರುವಾಗಿದ್ದು. 2004ರಲ್ಲಿ 59 ಸ್ಥಾನ ಗೆದ್ದಿದ್ದ ಜೆಡಿಎಸ್ ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯತೀತ ಸಿದ್ದಾಂತವೇ ಕಾರಣ.

ಬಿಜೆಪಿಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ ಕುಮಾರಸ್ವಾಮಿ ಅವರ ಸುಳ್ಳು ಜಾತ್ಯತೀತತೆಯ ನಕಲಿ‌ ಶ್ಯಾಮನ ಅವತಾರ ಕೊನೆಯಾಗಲಿ‌. ಎಂದು ವ್ಯಂಗ್ಯವಾಡಿದ್ದಾರೆ.