ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
August 2023 » Page 2 of 5 » Dynamic Leader
October 23, 2024
Home 2023 August (Page 2)
ದೇಶ

ಭಾರತದ ಪರವಾಗಿ ಚಂದ್ರನ ದಕ್ಷಿಣ ಭಾಗವನ್ನು ಅದ್ಯಯನ ಮಾಡಲು ಜುಲೈ 14 ರಂದು ಉಡಾವಣೆಯಾದ ಚಂದ್ರಯಾನ-3 ಕಳೆದ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ದಾಖಲೆ ನಿರ್ಮಿಸಿತು. ಈ ಸಾಧನೆಯನ್ನು ಭಾರತ ಮಾತ್ರವಲ್ಲದೆ ವಿಶ್ವದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಚಂದ್ರನ ದಕ್ಷಿಣ ಭಾಗದಲ್ಲಿ ಇಳಿದ ವಿಕ್ರಮ್ ಲ್ಯಾಂಡರ್‌ನಿಂದ ಪ್ರಗ್ಯಾನ್ ರೋವರ್ ಹೊರಬಂದು, ಅಧ್ಯಯನಕ್ಕಾಗಿ ತನ್ನ ಪಯಣವನ್ನು ಚಂದ್ರನ ದಕ್ಷಿಣ ಧ್ರುವದಿಂದ ಪ್ರಾರಂಭಿಸಿ ನಡೆಸುತ್ತಿದೆ.

ಲ್ಯಾಂಡರ್ ಚಂದ್ರನ ಮೇಲೆ ಇಳಿದಾಗ ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾದಲ್ಲಿ ನಡೆದ ಬ್ರಿಕ್ಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಗ್ರೀಸ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಅವರು ದೆಹಲಿಯಿಂದ ನೇರವಾಗಿ ಬೆಂಗಳೂರಿಗೆ ಬಂದಿಳಿದರು. ಇಲ್ಲಿನ ಇಸ್ರೋ ಬಾಹ್ಯಾಕಾಶ ಸಂಶೋಧನಾ ಕೇಂದ್ರದಲ್ಲಿ ಚಂದ್ರಯಾನ-3 ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಗಳನ್ನು ಭೇಟಿ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿ ಅವರೊಂದಿಗೆ ಸಂವಾದ ನಡೆಸಿದರು.

ಆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, “ಚಂದ್ರಯಾನ-3 ಯೋಜನೆಯಲ್ಲಿ ಮಹಿಳೆಯರ ಸಹಭಾಗಿತ್ವವೂ ಮುಖ್ಯವಾಗಿದೆ. ಹಾಗಾಗಿ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ಹೆಸರಿಡಲು ನಿರ್ಧರಿಸಲಾಗಿದೆ. ಈ ಶಕ್ತಿಯು ಮಹಿಳೆಯರ ಶಕ್ತಿಯನ್ನು ಪ್ರತಿನಿಧಿಸುತ್ತದೆ. ಅದೇ ರೀತಿ, 2019ರಲ್ಲಿ ಚಂದ್ರಯಾನ 2 ಚಂದ್ರನ ಮೇಲೆ ಇಳಿದ ಸ್ಥಳವನ್ನು ‘ತಿರಂಗ’ (ತ್ರಿವರ್ಣ ಧ್ವಜ) ಎಂದು ಕರೆಯಲಾಗುತ್ತದೆ.” ಎಂದರು.

ಇದನ್ನೂ ಓದಿ: ಚಂದ್ರಯಾನ-3 ಯೋಜನೆಗೆ “ಕನ್ನಡ ಚಂದ್ರಯಾನ-3” ಎಂಬ ಹೆಸರನ್ನು ಮರು ನಾಮಕರಣ ಮಾಡಲು ವಾಟಾಲ್ ನಾಗರಾಜ್ ಒತ್ತಾಯ!

104ನೇ ಮನ್ ಕೀ ಬಾತ್ (ಮನಸ್ಸಿನ ಧ್ವನಿ) ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಆಗಸ್ಟ್ 23, ಭಾರತ ಮತ್ತು ಭಾರತದ ಚಂದ್ರಯಾನ ನಿರ್ಣಯದ ಕೆಲವು ಸೂರ್ಯಗಳು ಚಂದ್ರನ ಮೇಲೂ ಉದಯಿಸುತ್ತದೆ ಎಂಬುದನ್ನು ಸಾಬೀತು ಪಡಿಸಿವೆ. ಮಿಷನ್ ಚಂದ್ರಯಾನ ಮೂಲಕ ಎಲ್ಲಾ ಹಂತಗಳಲ್ಲಿ ಭಾರತ ಗೆಲ್ಲಲು ಬಯಸಿದೆ. ಇದು ನವಭಾರತದ ಚೈತನ್ಯದ ಸಂಕೇತವಾಗಿದೆ.” ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಚಕ್ರಪಾಣಿ ಮಹಾರಾಜ್, “ಚಂದ್ರನನ್ನು ಸಂಸತ್ತು ಹಿಂದೂ ರಾಷ್ಟ್ರ (Hindu Rashtra) ಎಂದು ಘೋಷಿಸಬೇಕು” ಎಂದು ವಿನಂತಿಸಿಕೊಂಡಿರುವ ವೀಡಿಯೊ ಒಂದನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ, “ಸಂಸತ್ತು, ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಘೋಷಿಸಬೇಕು. ಅಲ್ಲದೆ, `ಶಿವಶಕ್ತಿ ಪಾಯಿಂಟ್’ ಎಂದು ಹೆಸರಿಸಲಾದ ಚಂದ್ರಯಾನ-3 ಬಂದಿಳಿದ ಸ್ಥಳವನ್ನು ಅದರ ರಾಜಧಾನಿಯನ್ನಾಗಿ ಘೋಷಿಸಬೇಕು.

ಇದರೊಂದಿಗೆ ಜಿಹಾದಿ ಮನಸ್ಥಿತಿಯ ಯಾವ ಭಯೋತ್ಪಾದಕನೂ ಅಲ್ಲಿಗೆ ಹೋಗುವಂತಿಲ್ಲ. ಹಾಗಾಗಿ ಭಾರತ ಸರ್ಕಾರವು ಅಲ್ಲಿಗೆ ಯಾವುದೇ ಭಯೋತ್ಪಾದಕರು ಹೋಗದಂತೆ ತ್ವರಿತವಾಗಿ ಕ್ರಮಕೈಗೊಳ್ಳಬೇಕು,” ಎಂದು ಹೇಳಿದ್ದಾರೆ.  

ರಾಜ್ಯ

ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಜುಲೈ 14, 2023 ರಂದು ಭಾರತದ ಆಂಧ್ರಪ್ರದೇಶದ ಶ್ರೀಹರಿಕೋಟಾ ವ್ಯಾಪ್ತಿಯಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡು ಆಗಸ್ಟ್ 23, 2023 ರಂದು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಬಳಿ ಯಶಸ್ವಿಯಾಗಿ ಇಳಿಯಿತು.

ಚಂದ್ರಯಾನ-3 ಯೋಜನೆಯಲ್ಲಿ ಪಾಲ್ಗೊಂಡಿದ್ದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಮೊನ್ನೆ ಪ್ರಧಾನಿ ನರೇಂದ್ರ ಮೊದಿಯವರು ಗ್ರೀಸ್ ದೇಶದಿಂದ ನೇರವಾಗಿ ಬೆಂಗಳೂರಿಗೆ ಬಂದಿದ್ದರು. ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಿಗಳು, “ಆಗಸ್ಟ್‌ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು” ಎಂದು ಘೋಷಿಸಿದರು. ಮತ್ತು ಪ್ರಗ್ಯಾನ್ ಇಳಿದ ಸ್ಥಳವನ್ನು “ಶಿವಶಕ್ತಿ ಪಾಯಿಂಟ್” ಎಂದು ಕರೆಯಲಾಗುವುದು ಎಂದೂ ಘೋಶಿಸಿದರು.

ಈ ಹಿನ್ನಲೆಯಲ್ಲಿ ಕನ್ನಡ ಚಳವಳಿ ವಾಟಾಲ್ ಪಕ್ಷದ ಅಧ್ಯಕ್ಷ ವಾಟಾಲ್ ನಾಗರಾಜ್ ಅವರು, ‘ಕನ್ನಡ ಚಂದ್ರಯಾನ-3’ ಎಂದು ಮರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ನೆನ್ನೆ ಮಧ್ಯಾಹ್ನ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಮಲಗಿ ಸತ್ಯಾಗ್ರಹ ನಡೆಸಿದರು.

“ಕರ್ನಾಟಕ, ಕನ್ನಡ, ಕನ್ನಡದ ನೆಲ, ಕನ್ನಡದ ಶಕ್ತಿ ಇವುಗಳಲ್ಲಿ ಚಂದ್ರಯಾನ-3ರಲ್ಲಿ ಕನ್ನಡ ಭಾಷೆ ಬರಲಿಲ್ಲ. ಎಲ್ಲಾದರೂ ಒಂದು ಕಡೆ ಕನ್ನಡ ಪದ ಬರಬೇಕಾಗಿತ್ತು. ಕನ್ನಡದ ಹೆಸರು ಇಟ್ಟಿದ್ದರೆ ಇಡೀ ಭಾರತಕ್ಕೆ ಗೌರವ ಬರುತ್ತಿತ್ತು. ಕರ್ನಾಟಕ ‘ಭಾರತ ಜನನಿಯ ತನುಜಾತೆ’ ಸಂಸ್ಕೃತ ಸ್ಲೋಕ ಹೇಳಿ ಶಿವಶಕ್ತಿ ಹೆಸರನಿಟ್ಟ ಪ್ರಧಾನಿಯವರು ಕನ್ನಡ ಶಕ್ತಿ, ಕನ್ನಡ ನಾಡು, ಕನ್ನಡ ಭೂಮಿ, ಜ್ಞಾಪಕಕ್ಕೆ ಬರಲಿಲ್ಲ.

ಇಸ್ರೋ ಇರುವುದು ಕನ್ನಡ ನಾಡಿನಲ್ಲಿ; ಕನ್ನಡ ಭೂಮಿಯಲ್ಲಿ. ಶಿವಶಕ್ತಿ ಇಟ್ಟಿದ್ದೂ ಆಯಿತು. ತಿರಂಗ ಇಟ್ಟಿದ್ದೂ ಆಯಿತು. “ಕನ್ನಡ ಚಂದ್ರಯಾನ-3” ಎಂದು ಹೆಸರಿಡಬೇಕಾಗಿತ್ತು. ಚಂದ್ರಯಾನ ಇಸ್ರೋ ಪ್ರತಿಷ್ಠೆಯ ಹೆಗ್ಗಳಿಕೆ. ಪ್ರಧಾನ ಮಂತ್ರಿಯವರು ಬಂದಾಗಲೆಲ್ಲಾ ತಪ್ಪು ತಪ್ಪಾದರೂ ಕನ್ನಡದಲ್ಲಿ ಮಾತನಾಡುತ್ತಿದ್ದರು. ಈ ದಿನ ಅವರಿಗೆ ಕನ್ನಡ ಕಾಣಲಿಲ್ಲ. ಕರ್ನಾಟಕವೂ ಕಾಣಲಿಲ್ಲ. ಇಸ್ರೋ ಇರುವುದು ಕರ್ನಾಟಕದಲ್ಲಿ ಎಂದು ಅವರು ಭಾವಿಸಲಿಲ್ಲ.

ರಾಷ್ಟ್ರಕವಿ ಕುವೆಂಪುರವರು ಕರ್ನಾಟಕವನ್ನು ಕರ್ನಾಟಕದ ಮಾತೆ ಎಂದು ಕರೆದಿದ್ದಾರೆ. ಕರ್ನಾಟಕದ ಜನತೆಗೆ ಗೌರವ ಕೊಟ್ಟು ಚಂದ್ರಯಾನಕ್ಕೆ ಕನ್ನಡದ ಹೆಸರನ್ನು ನಾಮಕರಣ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.   

ಕ್ರೈಂ ರಿಪೋರ್ಟ್ಸ್ ದೇಶ

ಮೇಕೆ ಮತ್ತು ಪಾರಿವಾಳಗಳನ್ನು ಕದ್ದಿದ್ದಕ್ಕಾಗಿ ದಲಿತ ಮಕ್ಕಳನ್ನು ತಲೆಕೆಳಗಾಗಿ ನೇತು ಹಾಕಲಾದ ಘಟನೆ ಅಹ್ಮದ್‌ನಗರ ಜಿಲ್ಲೆಯಲ್ಲಿ ನಡೆದಿದೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

ಮುಂಬೈ: ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಗೆ ಸೇರಿದ ಶ್ರೀರಾಮಪುರ ತಾಲ್ಲೂಕಿನ ಹರೇಗಾಂವ್ ಗ್ರಾಮದಲ್ಲಿ, ಮೇಕೆ, ಪಾರಿವಾಳ ಕಳ್ಳತನ ಮಾಡಿದ್ದಾರೆ ಎಂದು ದಲಿತ ಕುಟುಂಬಕ್ಕೆ ಸೇರಿದ ಮಕ್ಕಳನ್ನು ಜೀವಂತವಾಗಿ ತಲೆಕೆಳಗಾಗಿ ನೇತುಹಾಕಿ ಥಳಿಸುತ್ತಿರುವ ಘಟನೆ ಆಘಾತವನ್ನು ಉಂಟುಮಾಡಿದೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮವು ಓದುವುದನ್ನು ತಡೆಮಾಡಿತು; ದ್ರಾವಿಡ ಮಾದರಿ ಸರ್ಕಾರ ಹಸಿವು ನೀಗಿಸಿ ಓದುವಂತೆ ಮಾಡಿದೆ!

ಅಹಮದ್‌ನಗರಕ್ಕೆ ಸೇರಿದವರಾದ ರಾಜ್ಯ ಕಂದಾಯ ಸಚಿವ ರಾಮಕೃಷ್ಣ ವಿ.ಕೆ.ಪಾಟೀಲ್ ಅವರು ಆಸ್ಪತ್ರೆಗೆ ತೆರಳಿ ಮಕ್ಕಳು ಮತ್ತು ಅವರ ಪೋಷಕರನ್ನು ಭೇಟಿ ಮಾಡಿದ್ದಾರೆ. ಮತ್ತು ಹೆಚ್ಚಿನ ತನಿಖೆಗೆ ಆದೇಶ ಮಾಡಿದ್ದರೆ. ಇದೇ ವೇಳೆ ವಂಚಿತ್ ಬಹುಜನ ಅಘಾಡಿ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಮಾತನಾಡಿ, “ಜಾತಿ ತಾರತಮ್ಯ, ಅವಮಾನ, ನಿಂದನೆ, ಹಿಂಸೆ, ದೌರ್ಜನ್ಯ ಹೊಸದಲ್ಲ. ಇದನ್ನು ಸವಾಲಾಗಿ ಸ್ವೀಕರಿಸಿ ಬದಲಾವಣೆ ತರೋಣ” ಎಂದರು.

ಇದನ್ನೂ ಓದಿ: ಗಾಂಧಿಯನ್ನು ಕೊಂದವರು ಜೈ ಭೀಮ್ ಚಿತ್ರಕ್ಕೆ ಹೇಗೆ ಪ್ರಶಸ್ತಿ ನೀಡುತ್ತಾರೆ?: ನಟ ಪ್ರಕಾಶ್ ರಾಜ್ ಪ್ರಶ್ನೆ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯ ವಕ್ತಾರ ಮಹೇಶ್ ಥಾಬೆ ಮಾತನಾಡಿ, “ದಲಿತರ ಹಕ್ಕುಗಳನ್ನು ರಕ್ಷಿಸುವಲ್ಲಿ ಸರ್ಕಾರ ವಿಫಲವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಇನ್ನು ಕೆಲವು ಪಕ್ಷಗಳು “ಇಂಡಿಯಾ” ಮೈತ್ರಿಕೂಟಕ್ಕೆ ಸೇರಲಿವೆ: ನಿತೀಶ್ ಕುಮಾರ್

ದೇಶ ರಾಜಕೀಯ

ಪಾಟ್ನಾ: ಇನ್ನು ಕೆಲವು ಪಕ್ಷಗಳು “ಇಂಡಿಯಾ” ಮೈತ್ರಿಕೂಟಕ್ಕೆ ಸೇರಲಿವೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಂದಾಗುತ್ತಿವೆ. ಅದರಂತೆ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 26 ಪಕ್ಷಗಳು “ಇಂಡಿಯಾ” ಮೈತ್ರಿಕೂಟವನ್ನು ರಚಿಸಿವೆ. ಅದೇ ಸಮಯದಲ್ಲಿ, 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ಬಿಜೆಪಿ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದಲ್ಲಿ (ಎನ್‌ಡಿಎ) 38 ಪಕ್ಷಗಳನ್ನು ಒಗ್ಗೂಡಿಸಿ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಸನಾತನ ಧರ್ಮವು ಓದುವುದನ್ನು ತಡೆಮಾಡಿತು; ದ್ರಾವಿಡ ಮಾದರಿ ಸರ್ಕಾರ ಹಸಿವು ನೀಗಿಸಿ ಓದುವಂತೆ ಮಾಡಿದೆ!

ಇಂಡಿಯಾ ಮೈತ್ರಿಕೂಟದ ಮೊದಲ ಸಭೆ ಕಳೆದ ಜೂನ್‌ನಲ್ಲಿ ಪಾಟ್ನಾದಲ್ಲಿ ನಡೆದಿದ್ದು, ಎರಡನೇ ಸಭೆ ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದಿತ್ತು. ಮೈತ್ರಿಕೂಟದ ಮೂರನೇ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಇಂಡಿಯಾ ಮೈತ್ರಿಕೂಟ ಕಠಿಣ ಪೈಪೋಟಿ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಹಿನ್ನಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಇನ್ನೂ ಕೆಲವು ಪಕ್ಷಗಳು ಸೇರಲಿವೆ ಎಂದು ಹೇಳಿದ್ದಾರೆ.

ಇದರ ಬಗ್ಗೆ ಪಾಟ್ನಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್, “ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಇಂಡಿಯಾ ಮೈತ್ರಿಕೂಟದ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಿದ್ದೇವೆ. ಅಲ್ಲದೆ ಕ್ಷೇತ್ರ ಹಂಚಿಕೆ ಸೇರಿದಂತೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಕೆಲವು ರಾಜಕೀಯ ಪಕ್ಷಗಳು ನಮ್ಮ ಮೈತ್ರಿಗೆ ಸೇರಲಿವೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ನಾನು ಗರಿಷ್ಠ ಪಕ್ಷಗಳನ್ನು ಒಗ್ಗೂಡಿಸಲು ಬಯಸುತ್ತೇನೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ನನ್ನ ಮೇಲೆ ನನಗೆ ಆಸೆ ಇಲ್ಲ.” ಎಂದು ಹೇಳಿದರು.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ದ್ರಾವಿಡ ಚಳವಳಿಯ ಉಗಮಕ್ಕೆ ಕೆಲವು ವರ್ಷಗಳ ಹಿಂದೆ ಅಂದರೆ, 1912ರಲ್ಲಿ ಡಾ.ಸಿ.ನಟೇಶನಾರ್, ಅವರಂತಹ ಕೆಲವು ವಕೀಲರು ಒಟ್ಟುಗೂಡಿ, ಚೆನ್ನೈ ಕಾಲೇಜುಗಳಲ್ಲಿ ಓದುತ್ತಿದ್ದ ಬ್ರಾಹ್ಮಣೇತರ ವಿದ್ಯಾರ್ಥಿಗಳಿಗೆ ಇತರೆ ಹಾಸ್ಟೆಲ್‌ಗಳಲ್ಲಿ ಉಳಿದು ಓದುವ ಅವಕಾಶವನ್ನು ನಿರಾಕರಿಸಿದ್ದರಿಂದ ತಮ್ಮ ದುಸ್ಥಿತಿಯ ನಡುವೆಯೂ ತಾವೇ ತಿರುವಲ್ಲಿಕೇಣಿಯಲ್ಲಿ ‘ದ್ರಾವಿಡನ್ ಹಾಸ್ಟೆಲ್’ ನಡೆಸಿ ಅನೇಕರು, ತುಳಿತಕ್ಕೊಳಗಾದವರ ಶಿಕ್ಷಣಕ್ಕೆ ಸಹಾಯ ಮಾಡಿದರು.

ಜಸ್ಟೀಸ್ ಪಾರ್ಟಿಯ ಸಂಸ್ಥಾಕರು-1920

ಶೂದ್ರನಿಗೆ ಶಿಕ್ಷಣವಿಲ್ಲ ಎಂದ ಮನುಧರ್ಮ:
ಶೂದ್ರ, ಪಂಚಮ ಹಾಗೂ ಕೆಳವರ್ಗದವರಿಗೆ ಶಿಕ್ಷಣ ನೀಡಬಾರದು ಎಂಬ ಮನು ಧರ್ಮದ ನೀತಿಯನ್ನು ಪಾಲಿಸಿಕೊಂಡು ಬಂದಿತು ಇತಿಹಾಸ; ಮನು ಧರ್ಮದ ಪ್ರಕಾರ ರಾಜರ ಕಾಲದಲ್ಲೂ ಬ್ರಾಹ್ಮಣ ಮಕ್ಕಳಿಗೆ ಮಾತ್ರ ಓದಲು ಅವಕಾಶವಿತ್ತು; ಇತರರಿಗೆ ಇಲ್ಲ! ಮಧುರೈ ನಾಯಕರ ಆಳ್ವಿಕೆಯಲ್ಲಿ, ಇಟಾಲಿಯನ್ ಪಾದ್ರಿ ರಾಬರ್ಟ್ ಡಿ ನೊಬಿಲಿ ಅವರು ಅಧ್ಯಯನ ಮಾಡಿ ಹೇಳಿದಂತೆ “10 ಸಾವಿರ ಬ್ರಾಹ್ಮಣ ಮಕ್ಕಳು ಸಂಸ್ಕೃತ ಶಿಕ್ಷಣವನ್ನು ಪಡೆದಿದ್ದಾರೆ” ಎಂದು ಹೇಳಿದ್ದಾರೆ. (1610ನೇ ವರ್ಷ) ಅದನ್ನು ಹಿಮ್ಮೆಟ್ಟಿಸಿ, ತುಳಿತಕ್ಕೊಳಗಾದವರಿಗೆ ಶಿಕ್ಷಣ, ಆರೋಗ್ಯ, ವೈಚಾರಿಕತೆ ಮತ್ತು ಮಹಿಳಾ ಹಕ್ಕುಗಳನ್ನು ನೀಡಲು ಜನ್ಮ ತಾಳಿದ್ದೇ ಜಸ್ಟೀಸ್ ಪಾರ್ಟಿ ಎಂಬ ದ್ರಾವಿಡ ಹಾಗೂ ಸ್ವಾಭಿಮಾನ ಚಳುವಳಿ!

ಕೆ.ಕಾಮರಾಜ್

ಜಸ್ಟೀಸ್ ಪಾರ್ಟಿಯ ಆಹಾರ ಕಾರ್ಯಕ್ರಮ:
ಸರ್ ಪಿಟ್ಟಿ ತ್ಯಾಗರಾಯರು ಚೆನ್ನೈ ಪ್ರಾಂತ್ಯದ ಅಧ್ಯಕ್ಷರಾಗಿ (ಆಗ ಮೇಯರ್ ಹುದ್ದೆ ಇರಲಿಲ್ಲ) ಚೆನ್ನೈ ಕಾರ್ಪೊರೇಷನ್ ಶಾಲೆಗಳಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೆ ಆಹಾರ ನೀಡುವ ಯೋಜನೆಯನ್ನು ಮೊಟ್ಟ ಮೊದಲ ಬಾರಿಗೆ ಪ್ರಾರಂಭಿಸಿದರು. ಬ್ರಿಟಿಷ್ ಸರ್ಕಾರವು ಅದನ್ನು ಸ್ವಲ್ಪ ಕಾಲದವರೆಗೆ ನಡೆಸಲು ಅವಕಾಶ ಮಾಡಿಕೊಟ್ಟಿತು. ನಂತರ ಅನುದಾನ ನಿರಾಕರಿಸಿದ ಕಾರಣ ಯೋಜನೆಯನ್ನು ಅಲ್ಲಿಗೆ ನಿಲ್ಲಿಸಬೇಕಾಯಿತು; ಆಗ ಸರ್ಕಾರಕ್ಕೆ ಪೂರ್ಣ ಅಧಿಕಾರ ಇರಲಿಲ್ಲ!

ಎಂ.ಕರುಣಾನಿಧಿ

ಸ್ವಾತಂತ್ರ್ಯದ ನಂತರ ಮುಖ್ಯಮಂತ್ರಿಯಾದ ಕಾಂಗ್ರೆಸ್ ನ ಕೆ.ಕಾಮರಾಜ ಅವರು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಕಾರ್ಯಕ್ರಮವನ್ನು ಆರಂಭಿಸಿ, ಬಡಮಕ್ಕಳು ಓದುವುದನ್ನು ಮುಂದುವರಿಸುವಂತೆ ಮಾಡಿದರು! ಬಡ ಮಕ್ಕಳು, ಹಳ್ಳಿಗಳಲ್ಲಿನ ಜನರು, ತುಳಿತಕ್ಕೊಳಗಾದ ಸಮುದಾಯದ ಮಕ್ಕಳು ಮುಂದುವರಿದು ಓದಿ ಪ್ರಗತಿ ಹೊಂದಲು ಈ ಮಧ್ಯಾಹ್ನದ ಊಟದ ಕಾರ್ಯಕ್ರಮವು ಮೆಟ್ಟಿಲು (ಆಕ್ಷನ್ ಬೂಸ್ಟರ್) ಆಗಿ ಸಹಾಯ ಮಾಡಿತು! ಅವರ ನಂತರ ಮುಖ್ಯಮಂತ್ರಿಯಾದ ಡಿಎಂಕೆ ಪಕ್ಷದ ಸಿ.ಎಂ.ಅಣ್ಣಾದುರೈ ಹಾಗೂ ಎಂ.ಕರುನಾನಿಧಿ ಆ ಯೋಜನೆಯನ್ನು ಮುಂದುವರಿಸಿಕೊಂಡು ಹೋದರು.

ಎಂಜಿಆರ್

ನಂತರ ಮುಖ್ಯಮಂತ್ರಿಯಾದ ಎಂ.ಜಿ.ರಾಮಚಂದ್ರನ್ (ಎಂಜಿಆರ್) ನೇತೃತ್ವದ ಎಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದಾಗ. ಮಧ್ಯಾಹ್ನ ಊಟ ಕಾರ್ಯಕ್ರಮ ‘ಪೌಷ್ಟಿಕ ಆಹಾರ ಯೋಜನೆ’ ಎಂಬ ಹೆಸರಿನಲ್ಲಿ ಮುಂದುವರೆಯಿತು. ಆನಂತರ ಎಂ.ಕರುಣಾನಿಧಿ ನೇತೃತ್ವದ ಡಿಎಂಕೆ ಸರ್ಕಾರ ಮತ್ತೆ ಎರಡನೇ ಬಾರಿ ಅಧಿಕಾರಕ್ಕೆ ಬಂದ ಮೇಲೆ, ಎರಡು ಮೊಟ್ಟೆ ಅಥವಾ ಬಾಳೆಹಣ್ಣು ನೀಡಿ ಅದನ್ನು ನಿಜವಾಗಿಯೂ ಪೌಷ್ಟಿಕಾಂಶವನ್ನಾಗಿ ಮಾಡಿದರು. ಮತ್ತು ಮಕ್ಕಳ ಹಸಿವು ನೀಗಿಸುವ ಜೊತೆಗೆ ಮಕ್ಕಳ ಪೋಷಣೆಯನ್ನು ಬೆಂಬಲಿಸಲು ಮತ್ತು ಮಕ್ಕಳ ಯೋಗಕ್ಷೇಮಕ್ಕೆ ಸಹಾಯ ಮಾಡಲು ಅವರು ಈ ಕಾರ್ಯಕ್ರಮವನ್ನು ಮತ್ತಷ್ಟು ಪರಿಷ್ಕರಿಸಿದರು. ಮುಂದಿನ ದಿನಗಳಲ್ಲಿ ಆ ಯೋಜನೆಯನ್ನು ಜೆ.ಜಯಲಲಿತಾ ನೇತೃತ್ವದ ಎಐಎಡಿಎಂಕೆ ಸರ್ಕಾರವು ಕೂಡ ಮುಂದುವರಿಸಿತು.

ಜೆ.ಜಯಲಲಿತಾ

ಮುಂದುವರಿದು, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ದ್ರಾವಿಡ ಮಾದರಿ ಸರ್ಕಾರದ ಎರಡು ವರ್ಷಗಳ ಆಡಳಿತದಲ್ಲಿ, ಕೆಲವು ಸರ್ಕಾರಿ ಶಾಲೆಗಳಲ್ಲಿ ಮೊದಲ ಹಂತವಾಗಿ ಮಧ್ಯಾಹ್ನದ ಊಟದ ಜೊತೆಗೆ ಉಪಹಾರವನ್ನೂ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಎಂ.ಕರುಣಾನಿಧಿ ಶತಮಾನೋತ್ಸವದ ಸಂದರ್ಭದಲ್ಲಿ (25.8.2023) ರಾಜ್ಯದಾದ್ಯಂತ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಅಪರೂಪದ ಹಸಿವು ನೀಗಿಸಿ ಶಿಕ್ಷಣ (ಮಧ್ಯಾಹ್ನದ ಊಟದ ಜೊತೆಗೆ ಉಪಹಾರ) ನೀಡುವ ವಿನೂತನ ಕಾರ್ಯಕ್ರಮವನ್ನು ಎಂ.ಕರುಣಾನಿಧಿ ಅವರು ಶಿಕ್ಷಣ ಪಡೆದ ತಂಜಾವೂರಿನ ತಿರುಕ್ಕುವಲದಲ್ಲಿನ ಶಾಲೆಯಲ್ಲಿ ಪ್ರಾರಂಭಿಸಿದ್ದಾರೆ.

ಎಂ.ಕೆ.ಸ್ಟಾಲಿನ್

ಓದಿ… ಓದಿ… ಓದಿ… ಎಂದು ಈ ಹಿಂದೆ ಹೇಳಿದಾಗ ಹಳ್ಳಿಯ ಬಡ ವಿದ್ಯಾರ್ಥಿಗಳು, ಬಡತನದ ಕಾರಣಗಳಿಂದ ದನ-ಕರುಗಳನ್ನು ಮೇಯಿಸಲು ಮುಂದಾಗಿದ್ದರು. ಹಸಿವು, ಹಸಿವು ಎಂಬ ಪರಿಸ್ಥಿತಿಯನ್ನು ಬದಲಾಯಿಸಿದ ಕರ್ಮವೀರ ಕಾಮರಾಜರು ಮಧ್ಯಹ್ನದ ಊಟದ ಕಾರ್ಯಕ್ರಮವನ್ನು ತಂದು ಹಸಿವು ನೀಗಿಸಿ ಶಿಕ್ಷಣ ನೀಡುವ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಬಂದ ಸರ್ಕಾರಗಳು ಆ ಯೋಜನೆಯನ್ನು ವಿಸ್ತರಿಸಿ, ಪೌಷ್ಟಿಕ ಆಹಾರವನ್ನಾಗಿ ಪರಿವರ್ತಿಸಿತು. ಇದೀಗ ಬಂದಿರುವ ಡಿಎಂಕೆ ಸರ್ಕಾರ ವಿದ್ಯಾರ್ಥಿಗಳು ಹಸಿವಿನಿಂದ ಶಿಕ್ಷಣ ಪಡೆಯಬಾರದು ಎಂಬ ಉದ್ದೇಶದಿಂದ ಉಪಹಾರ ಸೇವಿಸಿ ತೃಪ್ತರಾಗಿ ನಂತರ ತರಗತಿಯಲ್ಲಿ ಕೂತು ಶಿಕ್ಷಣ ಪಡೆಯಲಿ ಎಂದು ತೀರ್ಮಾನಿಸಿ ಈ ಯೋಜನೆಯನ್ನು ಜಾರಿಗೆ ತಂದಿರುವುದು ಒಂದು ದೊಡ್ಡ ಶೈಕ್ಷಣಿಕ ಕ್ರಾಂತಿಯೇ ಆಗಿದೆ!

ಉಪಹಾರ ಸೇವಿಸುತ್ತಿರುವ ಶಾಲಾ ಮಕ್ಕಳು

ಆರ್ಥಿಕ ಮುಗ್ಗಟ್ಟು ಸರಕಾರದ ಗಂಟಲು ಕಟ್ಟುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಗೆ ಆದ್ಯತೆ ನೀಡಲಾಗಿದ್ದು, 17 ಲಕ್ಷ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಈ ಯೋಜನೆಯ ಮೂಲಕ ಕಾಯಕಲ್ಪ ನೀಡಲಾಗಿದೆ. ಈ ಯೋಜನೆ ರೂಪಿಸಿದ ಮಾನ್ಯ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಮೆಚ್ಚಲೇಬೇಕು. ಇದಕ್ಕಾಗಿ ಮುಖ್ಯಮಂತ್ರಿಗಳು ಪ್ರತ್ಯೇಕ ನಿಧಿಯನ್ನು ರಚಿಸಿ ಟ್ರಸ್ಟ್‌ ಮಾಡಿ, ಜನರಲ್ಲಿ ಸುಸ್ಥಿತಿಯಲ್ಲಿರುವವರು ದೇಣಿಗೆ ನೀಡುವಂತೆ ನೋಡಿಕೊಂಡು ಎಲ್ಲಾ ಶಾಲೆಗಳಲ್ಲಿ, ಖಾಸಗಿ ಶಾಲೆಗಳಲ್ಲಿಯೂ ಸಹ ಅವರ ಜವಾಬ್ದಾರಿಯಲ್ಲೇ ಮಕ್ಕಳಿಗೆ ಬೆಳಗಿನ ಉಪಾಹಾರವನ್ನು ನೀಡಬಹುದು. ಆಹಾರದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು; ಸ್ವಚ್ಛತೆ ಸೇರಿದಂತೆ!

ಅತಿಯಾದ ನಿದ್ದೆ ಮಕ್ಕಳಿಗೆ ಬಾರದ ಆಹಾರವಾಗಿದ್ದು, ಅದರಿಂದ ಹೆಚ್ಚಿನ ಪ್ರಯೋಜನವನ್ನು ಪಡೆಯಲು ತಜ್ಞರು ಯೋಜಿಸಿ ಪರಿಷ್ಕರಿಸಬೇಕು. ಸನಾತನ ಶಿಕ್ಷಣದ ಕಣ್ಣುಗಳನ್ನು ಇರಿಯುತ್ತದೆ ಮತ್ತು ಕುಲ ಶಿಕ್ಷಣವನ್ನು ಹೇರುತ್ತದೆ. ದ್ರಾವಿಡವು ಹಸಿವನ್ನು ನೀಗಿಸಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತದೆ. ಇದೇ ಎರಡರ ನಡುವಿನ ವ್ಯತ್ಯಾಸ!

ಸಿನಿಮಾ

ತಮಿಳಿನಲ್ಲಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದ ಜೈ ಭೀಮ್ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ನೀಡದಿರುವ ಬಗ್ಗೆ ಟೀಕೆಗಳ ಮಹಾಪೂರವೇ ಹರಿದು ಬರುತ್ತಿದೆ. ಕೇಂದ್ರ ಸರ್ಕಾರವು 2021ರಲ್ಲಿ ಬಿಡುಗಡೆಯಾದ ಚಲನಚಿತ್ರಗಳಿಗೆ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಿತು. ಬಿಡುಗಡೆ ಆದಾಗ ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ಕಾಶ್ಮೀರ ಪೈಲ್ಸ್ ಚಿತ್ರಕ್ಕೆ ರಾಷ್ಟ್ರೀಯ ಏಕತಾ ಪ್ರಶಸ್ತಿ ಘೋಷಿಸಲಾಗಿದೆ. ಇದು ವಿವಿಧ ವಲಯಗಳಿಂದ ಟೀಕೆಗೆ ಗುರಿಯಾಗಿದೆ.

ಬಿಜೆಪಿಯಿಂದ ಭಾರೀ ಬೆಂಬಲ ಪಡೆದ ಕಾಶ್ಮೀರ ಫೈಲ್ಸ್‌ಗೆ ಪ್ರಶಸ್ತಿ ಪ್ರದಾನ ಮಾಡಿರುವುದರಲ್ಲಿ ಅಚ್ಚರಿ ಏನೂ ಇಲ್ಲ ಎಂಬ ಅಭಿಪ್ರಾಯಗಳಿವೆ. ಅದೇ ಸಮಯದಲ್ಲಿ, ವಿಮರ್ಶಾತ್ಮಕವಾಗಿ ಮತ್ತು ಆರ್ಥಿಕವಾಗಿ ದೊಡ್ಡ ಯಶಸ್ಸನ್ನು ಗಳಿಸಿದ್ದ ಜ್ಞಾನವೇಲ್ ನಿರ್ದೇಶನದ ಮತ್ತು ಸೂರ್ಯ ನಟಿಸಿದ ತಮಿಳು ಚಲನಚಿತ್ರ ಜೈ ಭೀಮ್‌ಗೆ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡದೆ ಇರುವುದನ್ನು ಟೀಕಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ಪ್ರಕಾಶ್ ರಾಜ್, “ಗಾಂಧಿಯನ್ನು ಕೊಂದವರು, ಭಾರತದ ಸಂವಿಧಾನ ನೀಡಿದ ಅಂಬೇಡ್ಕರ್ ಅವರ ಸಮಾನತೆಯ ತತ್ವವನ್ನು ಕೊಲ್ಲಲು ಪ್ರಯತ್ನಿಸುವವರು ಜೈ ಭೀಮ್ ಚಿತ್ರಕ್ಕೆ ಹೇಗೆ ಪ್ರಶಸ್ತಿ ನೀಡುತ್ತಾರೆ” ಎಂದು ಪ್ರಶ್ನಿಸಿದ್ದಾರೆ.

ದೇಶ

ತಂಜಾವೂರು: ಅಷ್ಟ ಖನಿಜಗಳಿಂದ ಮಾಡಲಾದ 28 ಅಡಿ ಎತ್ತರದ ನಟರಾಜನ ಪ್ರತಿಮೆ ದೆಹಲಿಯ ಜಿ-20 ಸಮ್ಮೇಳ ಸಭಾಂಗಣದ ಮುಂಭಾಗದಲ್ಲಿ ಪ್ರತಿಷ್ಠಾಪಿಸಲು ತಂಜಾವೂರಿನ ಸ್ವಾಮಿಮಲೈನಿಂದ ಹೊರಟಿದೆ.

ಜಿ20 ಶೃಂಗಸಭೆ ಮುಂದಿನ ತಿಂಗಳು 9 ಮತ್ತು 10 ರಂದು ದೆಹಲಿಯ ಪ್ರಗತಿ ಮೈದಾನದಲ್ಲಿ ನಡೆಯಲಿದೆ. ಸಮ್ಮೇಳನದ ಸ್ಥಳದ ಮುಂಭಾಗದಲ್ಲಿ ಸ್ಥಾಪಿಸಲು, ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ವತಿಯಿಂದ, ಚೋಳರ ಕಾಲದ ನಟರಾಜನ ಪ್ರತಿಮೆಯನ್ನು ವಿನ್ಯಾಸಗೊಳಿಸಲು ನಿರ್ಧರಿಸಲಾಯಿತು.

ಇದನ್ನೂ ಓದಿ: ಆಂಧ್ರಪ್ರದೇಶದಲ್ಲಿ ಹುಂಡಿಯಲ್ಲಿ ರೂ.100 ಕೋಟಿ ಚೆಕ್ ಪಾವತಿಸಿದ ಭಕ್ತ; ಬ್ಯಾಂಕ್ ಮೊರೆ ಹೋದ ದೇವಸ್ಥಾನದ ಆಡಳಿತಾಧಿಕಾರಿಗಳಿಗೆ ನಿರಾಸೆ!

ಅದರ ನಂತರ, ತಂಜಾವೂರು ಜಿಲ್ಲೆಯ ಸ್ವಾಮಿಮಲೈನ ‘ಎಸ್.ದೇವಸೇನಾಪತಿ ಸ್ಥಪತಿ ಸನ್ಸ್’ ಕಂಪನಿಯ ಸ್ಥಪತಿಗಳಾದ ರಾಧಾಕೃಷ್ಣನ್, ಶ್ರೀಕಂಠನ್, ಸ್ವಾಮಿನಾಥನ್ ಮೂವರೂ ಸೇರಿ, ಪ್ರತಿಮೆಯನ್ನು ವಿನ್ಯಾಸಗೊಳಿಸುವ ಕೆಲಸ ಪ್ರಾರಂಭಿಸಿದರು. ಪ್ರತಿಮೆ ಶೇ.75ರಷ್ಟು ಸಂಪೂರ್ಣವಾದ ಸ್ಥಿತಿಯಲ್ಲಿ, ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಮುಖ್ಯಸ್ಥ ಆರ್ಥಲ್ ಪಾಂಡ್ಯಾ, ಕೇಂದ್ರ ಅಧಿಕಾರಿಗಳಾದ ಜವಾಹರ್ ಪ್ರಸಾದ್ ಮತ್ತು ಮನೋಗನ್ ದೀಕ್ಷಿತ್ ಪ್ರತಿಮೆಯನ್ನು ಪಡೆದುಕೊಂಡರು.

ನಂತರ ಪ್ರತಿಮೆಯನ್ನು ಪೊಕ್ಲೈನ್ ಯಂತ್ರದ ಮೂಲಕ ಲಾರಿಯಲ್ಲಿ ಇರಿಸಿ ಕಳುಹಿಸಿ ಕೊಡಲಾಯಿತು. ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಭಕ್ತಾದಿಗಳು ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಕಳುಹಿಸಿಕೊಟ್ಟರು. ನಟರಾಜನ ಪ್ರತಿಮೆ ಉಳುಂದೂರುಪೇಟೆ, ಸೇಲಂ, ಬೆಂಗಳೂರು, ನಾಗ್ಪುರ, ಆಗ್ರಾ ಮೂಲಕ ದೆಹಲಿಗೆ ದಿನಾಂಕ 28 ರಂದು ತಲುಪಲಿದ್ದು, ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದೂ ಹೇಳಲಾಗುತ್ತಿದೆ.

ಇದನ್ನೂ ಓದಿ: ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮ: ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರ, ಮಧ್ಯಮ ವರ್ಗದವರ ಉದ್ಧಾರ ಸಾಧ್ಯವಿಲ್ಲ! – ಸಿದ್ದರಾಮಯ್ಯ

ಇದರ ಬಗ್ಗೆ ಮಾತನಾಡಿದ ಸ್ಥಪತಿಗಳು, “ತಾಮ್ರ, ಹಿತ್ತಾಳೆ, ಚಿನ್ನ, ಬೆಳ್ಳಿ, ಕಬ್ಬಿಣ, ಪಾದರಸ ಮುಂತಾದ ಅಷ್ಟ (ಎಂಟು) ಖನಿಜಗಳಿಂದ ವಿಗ್ರಹ ನಿರ್ಮಿಸಲಾಗಿದ್ದು, ವಿಶೇಷತೆ ಪಡೆದುಕೊಂಡಿರುವ ಈ ವಿಗ್ರಹವು 28 ಅಡಿ ಎತ್ತರ, 21 ಅಡಿ ಅಗಲ ಮತ್ತು ಸುಮಾರು 25 ಸಾವಿರ ಕೆಜಿ ತೂಕದ 51 ಜ್ವಾಲೆಗಳು ತಿರುವಾಚಿಯಲ್ಲಿ ನೆಲೆಗೊಂಡಿವೆ. ರೂ.10 ಕೋಟಿ ವೆಚ್ಚದಲ್ಲಿ ವಿನ್ಯಾಸ ಮಾಡಲಾಗಿದೆ” ಎಂದು ಹೇಳಿದ್ದಾರೆ.

ರಾಜಕೀಯ ರಾಜ್ಯ

“ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಬರೀ ಅಂಬಾನಿ – ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರ, ಮಧ್ಯಮ ವರ್ಗದವರ ಉದ್ಧಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ. ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ, ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡೀ ದೇಶ ಪರಿತಪಿಸುವಂತಾಗಿದೆ. ಈ ಕಾರಣಕ್ಕೆ ನಾವು ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ.

ದೇಶಕ್ಕೆ ಬಂದಿರುವ ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ಜಾರಿ ಆಗದಿದ್ದರೆ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ? ಅಂಬಾನಿ – ಅದಾನಿಯವರ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ? ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು? ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ? ಎಂದು ಪ್ರಶ್ನಿಸಿದರೆ ಹೇಗೆ?” ಎಂದು ಪ್ರಶ್ನಿಸಿದರು.

ಮಾಜಿ ಸಚಿವರಾದ ಹೆಚ್.ಆಂಜನೇಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್ ಸೇರಿ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಆಂಧ್ರಪ್ರದೇಶದಲ್ಲಿ ಹುಂಡಿಯಲ್ಲಿ ರೂ.100 ಕೋಟಿ ಚೆಕ್ ಪಾವತಿಸಿದ ಭಕ್ತ; ಬ್ಯಾಂಕ್ ಮೊರೆ ಹೋದ ದೇವಸ್ಥಾನದ ಆಡಳಿತಾಧಿಕಾರಿಗಳಿಗೆ ನಿರಾಸೆ!

ಕ್ರೈಂ ರಿಪೋರ್ಟ್ಸ್

ಅಮರಾವತಿ: ಆಂಧ್ರದಲ್ಲಿ ದೇವಾಲಯದ ಹುಂಡಿಯಲ್ಲಿ ರೂ.100 ಕೋಟಿಯಷ್ಟು ಕಾಸೋಲೆಯನ್ನು ಪಾವತಿಸಿದ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ ಕೇವಲ ರೂ.17 ಮಾತ್ರ ಇದ್ದುದರಿಂದ ದೇವಾಲಯದ ಆಡಳಿತಾಧಿಕಾರಿಗಳು ಆಘಾತಕ್ಕೊಳಗಾಗಿದ್ದಾರೆ.

ಆಂಧ್ರಪ್ರದೇಶ ವಿಶಾಖಪಟ್ಟನ ಜಿಲ್ಲೆ ಸಿಂಹಾಚಲದಲ್ಲಿ ಶ್ರೀ.ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯವಿದೆ. ಈ ದೇವಾಲಯದಲ್ಲಿ ಪ್ರತಿ 15 ದಿನಗಳಿಗೊಮ್ಮೆ ಭಕ್ತರು ನೀಡಿದ ಕಾಣಿಕೆಯನ್ನು ಎಣಿಸಲಾಗುತ್ತದೆ. ಹೀಗಾಗಿ ದೇವಸ್ಥಾನ ನೌಕರರು ಹುಂಡಿಯಲ್ಲಿ ಬಂದಿದ್ದ ಕಾಣಿಕೆಗಳನ್ನು ಎಣಿಸುವ ಕಾರ್ಯದಲ್ಲಿ ತೊಡಗಿದ್ದಾಗ, ರಾಧಾಕೃಷ್ಣ ಅವರ ಹೆಸರಿನಲ್ಲಿ 100 ಕೋಟಿ ಬ್ಯಾಂಕ್ ಚೆಕ್ ಇದ್ದಿದ್ದನ್ನು ನೋಡಿ ಆಶ್ಚರ್ಯವಾದರು.

ದೇವಸ್ಥಾನದ ಅಧಿಕಾರಿಗಳು ಚೆಕ್ ಅನ್ನು ನಿಗದಿತ ಬ್ಯಾಂಕ್‌ಗೆ ಕಳುಹಿಸಿ ದೇವಸ್ಥಾನದ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಲು ಪ್ರಯತ್ನಿಸಿದರು. ಆದರೆ ಬ್ಯಾಂಕ್ ಅಧಿಕಾರಿಗಳು ಚೆಕ್ ನೋಡಿ ಪರಿಶೀಲಿಸಿದಾಗ ಅದು ರಾಧಾಕೃಷ್ಣ ಅವರ ಬ್ಯಾಂಕ್ ಖಾತೆಯಾಗಿದ್ದು, ಆ ಬ್ಯಾಂಕ್ ಖಾತೆಯಲ್ಲಿ ಕೇವಲ 17 ರೂಪಾಯಿಗಳು ಮಾತ್ರ ಇದ್ದವು. ಇದರಿಂದ ಆಘಾತಕ್ಕೆ ಒಳಗಾದ ದೇವಸ್ಥಾನದ ಆಡಳಿತಾಧಿಕಾರಿಗಳು ರಾಧಾಕೃಷ್ಣನ್ ಎಂಬ ಭಕ್ತ ಉದ್ದೇಶಪೂರ್ವಕವಾಗಿ ಇದನ್ನು ಮಾಡಿದ್ದರೆ ಆತನ ವಿರುದ್ದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ವಿದೇಶ

ಚಂದ್ರಯಾನ-3 ಬಾಹ್ಯಾಕಾಶ ಕಾರ್ಯಾಚರಣೆಗೆ ಅಭಿನಂದನೆಗಳು; ನಾವು ನಿಮಗಾಗಿ ಚಂದ್ರನ ಮೇಲಿದ್ದೇವೆ ಎಂದು ಗೂಗಲ್ ಬಣ್ಣಿಸಿ ಡೂಡಲ್ ಪ್ರಕಟಿಸಿದೆ!

ಇಂದಿನ ಡೂಡಲ್ ಚಂದ್ರನ ದಕ್ಷಿಣ ಧ್ರುವದಲ್ಲಿ ಮೊದಲ ಬಾರಿಗೆ ಇಳಿಯುವುದನ್ನು ಆಚರಿಸುತ್ತದೆ! ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಜುಲೈ 14, 2023 ರಂದು ಭಾರತದ ಆಂಧ್ರಪ್ರದೇಶದ ಶ್ರೀಹರಿಕೋಟಾ ವ್ಯಾಪ್ತಿಯಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡು ಆಗಸ್ಟ್ 23, 2023 ರಂದು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಬಳಿ ಯಶಸ್ವಿಯಾಗಿ ಮುಟ್ಟಿತು. ಚಂದ್ರನ ಮೇಲೆ ಇಳಿಯುವುದು ಸುಲಭದ ಮಾತಲ್ಲ. ಹಿಂದೆ, ಅಮೆರಿಕಾ, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟಗಳು ಮಾತ್ರ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಅನ್ನು ಪೂರ್ಣಗೊಳಿಸಿವೆ. ಆದರೆ ಈ ಮೊದಲು ಯಾವುದೇ ದೇಶವು ದಕ್ಷಿಣ ಧ್ರುವ ಪ್ರದೇಶಕ್ಕೆ ಬಂದಿಲ್ಲ.

ಚಂದ್ರನ ದಕ್ಷಿಣ ಧ್ರುವವು ಬಾಹ್ಯಾಕಾಶ ಪರಿಶೋಧಕರಿಗೆ ಹೆಚ್ಚಿನ ಆಸಕ್ತಿಯ ಕ್ಷೇತ್ರವಾಗಿದೆ. ಏಕೆಂದರೆ, ಅವರು ಶಾಶ್ವತವಾಗಿ ನೆರಳಿನ ಕುಳಿಗಳೊಳಗೆ ಇರುವ ಐಸ್ ನಿಕ್ಷೇಪಗಳ ಅಸ್ತಿತ್ವವನ್ನು ಶಂಕಿಸಿದ್ದಾರೆ. ಚಂದ್ರಯಾನ-3 ಈಗ ಈ ಭವಿಷ್ಯವನ್ನು ನಿಜವೆಂದು ಖಚಿತಪಡಿಸಿದೆ! ಈ ಮಂಜುಗಡ್ಡೆಯು ಭವಿಷ್ಯದ ಗಗನಯಾತ್ರಿಗಳಿಗೆ ಗಾಳಿ, ನೀರು ಮತ್ತು ಹೈಡ್ರೋಜನ್ ರಾಕೆಟ್ ಇಂಧನದಂತಹ ನಿರ್ಣಾಯಕ ಸಂಪನ್ಮೂಲಗಳ ಸಾಮರ್ಥ್ಯವನ್ನು ನೀಡುತ್ತದೆ.

ಮತ್ತು ಈ ಐತಿಹಾಸಿಕ ಸಾಧನೆಯನ್ನು ಮಾಡಿದ ನಂತರ ಚಂದ್ರಯಾನ-3 ರ ಮೊದಲ ಆಲೋಚನೆಗಳು ಯಾವುದು?: “ಭಾರತ, ನಾನು ತಲುಪುವ ದಾರಿಯನ್ನು ತಲುಪಿದ್ದೇನೆ ನೀವೂ ಸಹ!” ಭೂಮಿಗೆ ಹಿಂತಿರುಗಿ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. “ಯಶಸ್ಸು ಎಲ್ಲಾ ಮಾನವೀಯತೆಗೆ ಸೇರಿದೆ… ಇದು ಭವಿಷ್ಯದಲ್ಲಿ ಇತರ ದೇಶಗಳ ಚಂದ್ರನ ಕಾರ್ಯಾಚರಣೆಗಳಿಗೆ ಸಹಾಯ ಮಾಡುತ್ತದೆ. ಪ್ರಪಂಚದ ಎಲ್ಲಾ ದೇಶಗಳು ಚಂದ್ರ ಮತ್ತು ಅದರಾಚೆಗೆ ಎಲ್ಲರೂ ಹಾತೊರೆಯಬಹುದು ಎಂದು ನನಗೆ ವಿಶ್ವಾಸವಿದೆ. ಆಕಾಶವು ಮಿತಿಯಲ್ಲ!” ಎಂದು ಹೇಳಿದರು.

ಚಂದ್ರಯಾನ-3 ಬಾಹ್ಯಾಕಾಶ ಕಾರ್ಯಾಚರಣೆಗೆ ಅಭಿನಂದನೆಗಳು! ನಾವು ನಿಮಗಾಗಿ ಚಂದ್ರನ ಮೇಲಿದ್ದೇವೆ! ಎಂದು ಬಣ್ಣಿಸಿ ಡೂಡಲ್ ಪ್ರಕಟಿಸಿದೆ!