ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
August 2023 » Page 5 of 5 » Dynamic Leader
October 23, 2024
Home 2023 August (Page 5)
ದೇಶ

ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಸನಾತನ ಧರ್ಮವನ್ನು ಎತ್ತಿ ಹಿಡಿಯುವ ಸಮಯ ಬಂದಿದೆ. ಸತತ ಆಕ್ರಮಣಗಳಿಂದ ಉತ್ತರ ಭಾರತದಲ್ಲಿ ವೈದಿಕ ಸಂಸ್ಕೃತಿಗೆ ಧಕ್ಕೆಯಾಗಿದೆ ಎಂದು ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಹೇಳಿದ್ದಾರೆ.

ವೇದಗಳು ಜ್ಞಾನದ ಸಂಪತ್ತನ್ನು ಒಳಗೊಂಡಿವೆ. ಧರ್ಮದ ಜ್ಞಾನವನ್ನು ಜಗತ್ತಿಗೆ ತಿಳಿಸಬೇಕು. ಸತ್ಯವೇ ಧರ್ಮದ ಆಧಾರ. ಇಂದು ಇಡೀ ಜಗತ್ತು ವೇದಗಳ ಬಗ್ಗೆ ಯೋಚಿಸುತ್ತಿದೆ.

ನಮ್ಮ ಆಧ್ಯಾತ್ಮಿಕತೆಯನ್ನು ರಕ್ಷಿಸಲು ನಾವು ಕೆಲಸ ಮಾಡಬೇಕು. ದೇಶ ಪ್ರಗತಿಯಲ್ಲಿದೆ. ಧರ್ಮದ ಸಂರಕ್ಷಣೆ ಮತ್ತು ಪ್ರಚಾರಕ್ಕಾಗಿ ಸೇವಾ ಮನೋಭಾವವನ್ನು ರೂಢಿಸಿಕೊಳ್ಳಬೇಕು. ದೇವಾಲಯಗಳನ್ನು ರಕ್ಷಿಸುವ ಮತ್ತು ಧಾರ್ಮಿಕ ಸಂಸ್ಥೆಗಳ ಮೂಲಕ ಧರ್ಮ ಪ್ರಚಾರ ಮಾಡುವ ಅಗತ್ಯವಿದೆ. ಎಂದು ಹೇಳಿದರು.

ದೇಶ

ಕ್ರಾಂತಿ ಗೀತೆಗಳ ಸರದಾರ ಗದ್ದರ್‌ಗೆ ಹಲವು ಗಣ್ಯರ ‘ಲಾಲ್ ಸಲಾಮ್ ತೆಲುಗಿನ ಜನಪ್ರಿಯ ಜನಪದ ಗಾಯಕ, ಕ್ರಾಂತಿಗೀತೆಗಳ ಕವಿ, ಸಾಮಾಜಿಕ ಹೋರಾಟಗಾರ ಗದ್ದರ್ ಇಂದು ನಿಧನರಾಗದರು!

ಹೈದರಾಬಾದ್: ಗದ್ದರ್ ಎಂದೇ ಖ್ಯಾತ ಪಡೆದಿದ್ದ ಕ್ರಾಂತಿಕಾರಿ ಗಾಯಕ ಗುಮ್ಮಡಿ ವಿಠಲ್ ರಾವ್ (77 ವರ್ಷ) ಕಳೆದ ಕೆಲವು ದಿನಗಳಿಂದ ಶ್ವಾಸಕೋಶ ಮತ್ತು ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಅಪೋಲೋ ಸ್ಪೆಕ್ಟ್ರಾ ಆಸ್ಪತ್ರೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ನಿಧನರಾದರು. ಗದ್ದರ್ ಅವರ ಸಾವಿನ ಸುದ್ದಿಯನ್ನು ಅವರ ಮಗ ಸೂರ್ಯಂ ಖಚಿತಪಡಿಸಿದ್ದಾರೆ.

ತೀವ್ರ ಹೃದ್ರೋಗದಿಂದ ಬಳಲುತ್ತಿದ್ದ ಅವರು ಜುಲೈ 20 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 3 ರಂದು ಅವರಿಗೆ ಬೈಪಾಸ್ ಸರ್ಜರಿ ಮಾಡಲಾಗಿತ್ತು ಮತ್ತು ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿತ್ತು.ಆದಾಗ್ಯೂ, ಅವರು ಶ್ವಾಸಕೋಶ ಮತ್ತು ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಹೇಳಿದೆ.

1948 ರಲ್ಲಿ ಜನಿಸಿದ ಗುಮ್ಮಡಿ ವಿಠ್ಠಲ್ ರಾವ್ ಅವರು, 2010 ರವರೆಗೆ ನಕ್ಸಲೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ನಂತರ ಅವರು ತೆಲಂಗಾಣ ಚಳವಳಿಗೆ ಸೇರ್ಪಡೆಗೊಂಡರು. ತೆಲಂಗಾಣದಲ್ಲಿ ಹಿಂದುಳಿದ ಜಾತಿಗಳು ಮತ್ತು ದಲಿತರ ಹಕ್ಕುಗಳಿಗಾಗಿ ಗದ್ದರ್ ಹೋರಾಟ ಮಾಡಿದ್ದರು. ತಮ್ಮ ಹಾಡುಗಳ ಮೂಲಕವೇ ಅಪಾರ ಅಭಿಮಾನಿಗಳನ್ನು ಪಡೆದು, ಹೆಚ್ಚಿನ ಜನಮನ್ನಣೆ ಗಳಿಸಿದ್ದರು.

ರಾಜಕೀಯ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಹೆಚ್.ಡಿ.ಕುಮಾರಸ್ವಾಮಿ ಅವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಕುಮಾರಸ್ವಾಮಿ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ? ಎಂದು ಕಿಡಿಕಾರಿದ್ದಾರೆ.

“ಕುಮಾರಸ್ವಾಮಿ ಅವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. ಕುಮಾರಸ್ವಾಮಿಯವರು ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು?

ಕುಮಾರಸ್ವಾಮಿಯವರು ಚುನಾವಣೆಗೂ ಮುನ್ನ ‘ಕಿಂಗ್ ಮೇಕರ್’ ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ ಕುಮಾರಸ್ವಾಮಿ ‘ಕಿಂಗ್ ಮೇಕರ್’ ಕನಸನ್ನು ನುಚ್ಚುನೂರು ಮಾಡಿದರು. ಕನಸು ಭಗ್ನಗೊಂಡ HDK, ಭಗ್ನಪ್ರೇಮಿಯಂತೆ ವ್ಯಗ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ.

ಉದ್ಯೋಗ

ಭಾರತೀಯ ಅಂಚೆ ಇಲಾಖೆಯು 30,041 ಗ್ರಾಮೀಣ ಪೋಸ್ಟಲ್ ಸ್ಟಾಫ್ (GRAMIN DAK SEVAKS -GDS) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಒಂದರಲ್ಲೇ 1,714 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಯಾವುದೇ ಲಿಖಿತ ಪರೀಕ್ಷೆ ಮತ್ತು ಸಂದರ್ಶನವಿಲ್ಲದೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಈ ಹುದ್ದೆಯನ್ನು ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಉದ್ಯೋಗದ ವಿವರಗಳು:
ಉದ್ಯೋಗದ ಹೆಸರು: ಗ್ರಾಮೀಣ ಪೋಸ್ಟಲ್ ಉದ್ಯೋಗಿ (GRAMIN DAK SEVAKS -GDS) Notification No.17-67/2023-GDS.

ಖಾಲಿ ಹುದ್ದೆಗಳು: 1714 (ಕರ್ನಾಟಕ ಮಾತ್ರ) ದೇಶಾದ್ಯಂತ 30,041 ಹುದ್ದೆಗಳು.

ಪಾವತಿ ಮತ್ತು ಭತ್ಯೆ: ಶಾಖೆ ಪೋಸ್ಟ್ ಮಾಸ್ಟರ್ (BPM – Branch Postmaster BPM) – ರೂ.12,000 ರಿಂದ 29,380 ವರೆಗೆ. ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್ / ಅಂಚೆ ಸಿಬ್ಬಂದಿ (ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್ – ABPM / Dak ಸೇವಕ್) – ರೂ.10,000 ರಿಂದ 24,470 ವರೆಗೆ

ಶಿಕ್ಷಣ ಅರ್ಹತೆ: ಕನಿಷ್ಠ 10ನೇ ತರಗತಿ ಅಥವಾ ಅದಕ್ಕೆ ಸಮನಾದ ವ್ಯಾಸಂಗದಲ್ಲಿ ಉತ್ತೀರ್ಣರಾಗಿರಬೇಕು. ಇದರಲ್ಲಿ ಇಂಗ್ಲಿಷ್ ಮತ್ತು ಗಣಿತ ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಸ್ಥಳೀಯ ಭಾಷೆಯ ಜ್ಞಾನವನ್ನು ಹೊಂದಿರಬೇಕು. ಅದೇ ರೀತಿ, ಸೈಕಲ್ ಓಡಿಸಲು ತಿಳಿದಿರುವುದು ಅತ್ಯಗತ್ಯ.

ಇದು ಕೇಂದ್ರ ಸರ್ಕಾರದ ಕೆಲಸವೇ?: ಹೌದು. ಆದಾಗ್ಯೂ, ಈ ಹುದ್ದೆಗಳನ್ನು ಅಂಚೆಯೇತರ ಸೇವಾ ಸಂಸ್ಥೆ (Extra Departmental system in the Department of Posts) ಮೂಲಕ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳ ನೇಮಕಾತಿ ಮತ್ತು ಭತ್ಯೆಗಳನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದರೂ, ಅಂಚೆ ಇಲಾಖೆಯಲ್ಲಿ ಪೂರ್ಣಾವಧಿಯ ನೌಕರರ ವೇತನ ಶ್ರೇಣಿಯು ಇವರಿಗೆ ಅನ್ವಯಿಸುವುದಿಲ್ಲ. (Gramin Dak Sevaks are holders of civil posts but they are outside the regular civil service)

ವಯಸ್ಸಿನ ಮಿತಿ: ಕನಿಷ್ಠ ವಯಸ್ಸು-18 (ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕದೊಳಗೆ ಪೂರ್ಣಗೊಂಡಿರಬೇಕು) ಗರಿಷ್ಠ ವಯಸ್ಸು-40 (ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ ಪೂರ್ಣಗೊಂಡಿರಬೇಕು) ಪರಿಶಿಷ್ಟ ಜಾತಿಗಳು (5 ವರ್ಷಗಳು), ಪರಿಶಿಷ್ಟ ಪಂಗಡಗಳು (5 ವರ್ಷಗಳು) ಮತ್ತು OBC ಗಳು (3 ವರ್ಷಗಳು), ವಿಕಲಚೇತನರಿಗೆ (10 ವರ್ಷಗಳು) ನಿಗದಿತ ವಯಸ್ಸಿನ ಮಿತಿಗಿಂತ ಹೆಚ್ಚಿನ ವಯಸ್ಸಿನ ರಿಯಾಯಿತಿಯನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ: ಎಲ್ಲಾ ವರ್ಗದ ಮಹಿಳೆಯರು, ಪರಿಶಿಷ್ಟ ಜಾತಿಗಳು / ಪರಿಶಿಷ್ಟ ಪಂಗಡಗಳು / ವಿಕಲಚೇತನರು / ಟ್ರಾನ್ಸ್ ವುಮನ್ ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ. ಇತರೆ ವರ್ಗದವರು ಅರ್ಜಿ ಶುಲ್ಕವಾಗಿ ರೂ.100 ಪಾವತಿಸಬೇಕು.

Indian Post Gramin Dak Sevas (GDS) ಅರ್ಜಿ ಸಲ್ಲಿಸುವುದು ಹೇಗೆ?:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆನ್‌ಲೈನ್ ಮೂಲಕ ಮಾತ್ರ ಇರುತ್ತದೆ. ಅಧಿಕೃತ ವೆಬ್‌ಸೈಟ್ indiapostgdsonline.cept.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಮೊದಲು ತಾವು ಅರ್ಜಿ ಸಲ್ಲಿಸಲು ಬಯಸುವ ಪೋಸ್ಟಲ್ ವೃತ್ತವನ್ನು ಆಯ್ಕೆ ಮಾಡಿಕೊಳ್ಳಬೇಕು. ಒಂದಕ್ಕಿಂತ ಹೆಚ್ಚು ವೃತ್ತಗಳಲ್ಲಿ ಖಾಲಿ ಇರುವ ಹುದ್ದೆಗಳಿಗೂ ನೀವು ಅರ್ಜಿ ಸಲ್ಲಿಸಬಹುದು.

ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಲು ಲಿಂಕ್ ಅನ್ನು ಕ್ಲಿಕ್ ಮಾಡಿ.

ಆನ್‌ಲೈನ್ ಅರ್ಜಿ ನಮೂನೆಯಲ್ಲಿ, ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಯ ಪ್ರಮಾಣಪತ್ರ, ಬಣ್ಣದ ಪಾಸ್‌ಪೋರ್ಟ್ ಛಾಯಾಚಿತ್ರ ಮತ್ತು ಇತರ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಕೊನೆಯ ದಿನಾಂಕ 23.08.2023.

ರಾಜಕೀಯ

ಮಳೆ ನಿಂತರೂ ಹನಿ ನಿಲ್ಲದು ಎಂಬ ಗಾದೆಯಂತೆ ಬಿಜೆಪಿಯ ನಾಲ್ಕು ವರ್ಷದ ಭ್ರಷ್ಟ ಆಡಳಿತದ ಅವ್ಯವಸ್ಥೆಯು ಫಲ ಈಗಲೂ ಜನರ ಜೀವ ಹಿಂಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಸರ್ಕಾರ ಬಂದು ಎರಡು ತಿಂಗಳಾಗಿದೆ; ಭ್ರಷ್ಟ ಬಿಜೆಪಿ ಮಾಡಿದ್ದ ಅವ್ಯವಸ್ಥೆಯನ್ನು ಸರಿಪಡಿಸುವ ಕೆಲಸ ಜಾರಿಯಲ್ಲಿದೆ. ಜಲಜೀವನ್ ಮಿಷನ್‌ನಲ್ಲಿ ಪ್ರತಿ ಮನೆಗೂ ನೀರು ಕೊಟ್ಟೇ ಬಿಟ್ಟಿದ್ದೇವೆ ಎಂದು ಪ್ರಚಾರ ಮಾಡಿದ್ದ ಬಿಜೆಪಿ, ಈಗ ತಮ್ಮ ಸುಳ್ಳನ್ನು ತಾವೇ ಬಯಲು ಮಾಡುತ್ತಿದ್ದಾರೆ. ಈ ಫ್ಯಾಕ್ಟ್ ಚೆಕ್ ಕೆಲಸವನ್ನು ಬಿಜೆಪಿ ಹೀಗೆಯೇ ಮುಂದುವರೆಸಲಿ!

ಜಲಜೀವನ್ ಮಿಷನ್ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲು 55%, ಕೇಂದ್ರದ ಪಾಲು 45%, ಬಿಜೆಪಿಯ ಭ್ರಷ್ಟಾಚಾರದ ಪಾಲು 40%, ಮೋದಿಯವರಿಗೆ ಕ್ರೆಡಿಟ್ ಮಾತ್ರ 100%. ಬಿಜೆಪಿ ಅವಧಿಯಲ್ಲಿ ಜಲಜೀವನ್ ಮಿಷನ್ ಎನ್ನುವುದು “ಭ್ರಷ್ಟಾಚಾರದ ಮಿಷನ್” ಆಗಿತ್ತು, ಇದರ ಪರಿಣಾಮವನ್ನೇ ಇಂದಿಗೂ ರಾಜ್ಯದ ಜನತೆ ಎದುರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಭ್ರಷ್ಟಾಚಾರದ ಆರೋಪದಲ್ಲಿ ರಾಜೀನಾಮೆ ನೀಡಿದ್ದರು; ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 40% ಕಮಿಷನ್‌ಗೆ ಗುತ್ತಿಗೆದಾರರೊಬ್ಬರು ಜೀವವನ್ನೇ ಬಿಡಬೇಕಾಯ್ತು. ನನ್ನ ಇಲಾಖೆಗೆ ಇಷ್ಟು ಘಾಡವಾಗಿ ಅಂಟಿರುವ ಕೊಳೆಯನ್ನು ಸ್ವಚ್ಛ ಮಾಡುತ್ತಿದ್ದೇನೆ.

ಬಿಜೆಪಿ ಅವಧಿಯಲ್ಲಿ ಪರ ರಾಜ್ಯಗಳತ್ತ ಮುಖ ಮಾಡಿದ್ದ ಉದ್ಯಮಗಳನ್ನು, ಹೂಡಿಕೆಗಳನ್ನು ಕರ್ನಾಟಕದತ್ತ ಕರೆತರುತ್ತಿದ್ದೇವೆ. ಉದ್ಯೋಗ ಸೃಷ್ಟಿಗೆ ಪೂರಕ ವಾತಾವರಣ ನಿರ್ಮಿಸುತ್ತಿದ್ದೇವೆ. ಅಜಾನ್, ಹಲಾಲ್, ಹಿಜಾಬ್ ಎಂಬ ಪ್ರಚೋದನೆಗೆ ಕನ್ನಡಿಗರು ಸಂಪೂರ್ಣ ತಿರಸ್ಕಾರದ ಉಡುಗೊರೆ ಕೊಟ್ಟಿದ್ದಾರೆ. ಬಿಜೆಪಿ ಮುಕ್ತ ದಕ್ಷಿಣ ಭಾರತವಾಗಿದೆ; ಆದರೂ, ಬುದ್ದಿ ಕಲಿಯದೆ ಸುಳ್ಳಿನ ಸೌಧ ಕಟ್ಟವುದನ್ನು ಮುಂದುವರೆಸಿದ ಬಿಜೆಪಿಯನ್ನು ದೇಶದ ಜನ ತಿರಸ್ಕರಿಸುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

ಒಂದು ರಾಷ್ಟ್ರೀಯ ಪಕ್ಷವಾಗಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದ್ದು ಬಿಜೆಪಿ ರಾಜಕೀಯ ದಿವಾಳಿತನ. ಮೇಲ್ಮನೆ, ಕೆಳಮನೆಗಳಲ್ಲಿ ವಿರೋಧ ಪಕ್ಷದ ನಾಯಕನ ಕುರ್ಚಿ ಖಾಲಿ ಇದೆ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿ ಮೊದಲು ತಮ್ಮ ರಾಜಕೀಯ ದಾರಿದ್ರ್ಯವನ್ನು ನಿವಾರಣೆ ಮಾಡಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

ದೇಶ ರಾಜಕೀಯ

ಮಣಿಪುರದ ಜನರ ಸಂಕಷ್ಟವನ್ನು ನಿವಾರಿಸಲು, ರಾಜ್ಯದಲ್ಲಿ ಸಹಜಸ್ಥಿತಿಯನ್ನು ಮರುಸ್ಥಾಪಿಸಲು ಸಹಾಯ ಮಾಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂಡಿಯಾ ಮೈತ್ರಿಕೂಟದ ನಾಯಕರು ಖುದ್ದು ಭೇಟಿಯಾಗಿ ಒತ್ತಾಯಿಸಿದ್ದಾರೆ.

ಈ ಕುರಿತು ಇಂಡಿಯಾ ಮೈತ್ರಿಕೂಟ ಪ್ರಕಟಿಸಿರುವ ಹೇಳಿಕೆಯಲ್ಲಿ, “ಕಳೆದ ಕೆಲವು ವಾರಗಳಿಂದ ಮಣಿಪುರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೊ ದೇಶವನ್ನೇ ಬೆಚ್ಚಿ ಬೀಳಿಸಿದೆ. ರಾಜ್ಯ ಸರಕಾರ ಮತ್ತು ಪೊಲೀಸರು ಕೂಡಲೇ ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ. ಆರೋಪಿಗಳನ್ನು ಬಂಧಿಸುವಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲ ವಿಳಂಬವಾಗುತ್ತಿರುವುದು ಸಮಸ್ಯೆಯ ತೀವ್ರತೆಯನ್ನು ಹೆಚ್ಚಿಸಿದೆ. ಈ ಒಂದು ಘಟನೆಯು ಮಹಿಳೆಯರ ಮೇಲೆ ಅನೇಕ ದೌರ್ಜನ್ಯಗಳು ನಡೆದಿವೆ ಎಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ: ಮೋದಿಯವರು ಮೌನವಾಗುವ ಮತ್ತು ಮಾತನಾಡುವ ಸಂದರ್ಭಗಳು ಯಾವುದು?

ಜುಲೈ 29 ಮತ್ತು 30 ರಂದು ಎರಡು ದಿನಗಳ ಕಾಲ ಇಂಡಿಯಾ ಮೈತ್ರಿಕೂಟದ ಸಂಸದರ ಗುಂಪು ಮಣಿಪುರಕ್ಕೆ ಭೇಟಿ ನೀಡಿತ್ತು.ಇವರು ರಾಜ್ಯದ ದುಸ್ಥಿತಿ ಬಗ್ಗೆ ವರದಿಯನ್ನೂ ನೀಡಿದ್ದಾರೆ. ರಾಜ್ಯದ ರಾಜ್ಯಪಾಲರನ್ನೂ ಭೇಟಿಯಾಗಿ ದೌರ್ಜನ್ಯವನ್ನು ವಿವರಿಸಿದ್ದಾರೆ. ಈ ಹಿಂಸಾಚಾರದ ಪರಿಣಾಮ ಮಣಿಪುರದಲ್ಲಿ ಅನಾಹುತಕ್ಕೆ ಕಾರಣವಾಗಿದೆ. 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಾಜ್ಯದಿಂದ 60 ಸಾವಿರಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಚುರಾಚಂದ್‌ಪುರ, ಮೊಯಿರಾಂಗ್ ಮತ್ತು ಇಂಫಾಲ್‌ನಲ್ಲಿ ಸ್ಥಾಪಿಸಲಾದ ಪರಿಹಾರ ಶಿಬಿರಗಳಲ್ಲಿರುವ ಜನರು ಆಹಾರ ಪೂರೈಕೆಯ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಅವರಲ್ಲಿ ಭಯವಿದೆ; ಅವರು ಅಸುರಕ್ಷಿತ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಈ ಹಿಂಸಾಚಾರದ ಗಂಭೀರತೆಯನ್ನು ಚರ್ಚಿಸಬೇಕು ಮತ್ತು ಪ್ರಧಾನಿ ವಿವರಣೆ ನೀಡಬೇಕು ಎಂದು ಇಂಡಿಯಾ ಮೈತ್ರಿಕೂಟ ಸಂಸತ್ತಿನಲ್ಲಿ ಒತ್ತಾಯಿಸುತ್ತಿದೆ. ಆದರೆ ಸಂಸತ್ತಿನಲ್ಲಿ ನಿರಂತರವಾಗಿ ಜನರ ಧ್ವನಿಯನ್ನು ಹತ್ತಿಕ್ಕಲಾಗುತ್ತದೆ.

ಇದನ್ನೂ ಓದಿ: ಆ್ಯಂಟಿ ಕಮ್ಯುನಲ್ ವಿಂಗ್‌ಗೆ ಶಕ್ತಿ ತುಂಬಿ ಸಕ್ರಿಯಗೊಳಿಸಿ; ಕರ್ನಾಟಕ ಮುಸ್ಲಿಮ್ ಯೂನಿಟಿಯ ಖಾಸಿಂ ಸಾಬ್ ಆಗ್ರಹ!

ಇನ್ನು ತಡಮಾಡದೆ ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಮರುಸ್ಥಾಪಿಸಲು ನಿಮ್ಮ ಮಧ್ಯಸ್ಥಿಕೆ ನಮಗೆ ಅಗತ್ಯವಿದೆ. ಮಣಿಪುರವನ್ನು ಉದ್ದೇಶಿಸಿ ಮಾತನಾಡುವಂತೆ ಪ್ರಧಾನಿ ಮೇಲೆ ಒತ್ತಡ ಹೇರಬೇಕು. ಮಣಿಪುರದ ಜನರ ನೋವನ್ನು ನಿವಾರಿಸಲು ಮತ್ತು ರಾಜ್ಯದಲ್ಲಿ ಸಹಜತೆಯನ್ನು ಮರುಸ್ಥಾಪಿಸಲು ನಿಮ್ಮ ಬೆಂಬಲ ಮತ್ತು ಮಧ್ಯಸ್ಥಿಕೆ ನಿರ್ಣಾಯಕವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಧರ್ಮವನ್ನು ಪಾಲಿಸುವವರು ಮಾತ್ರ ಅದನ್ನು ಬೋಧಿಸಲು ಸಾಧ್ಯ: ಮಣಿಪುರ ಮುಖ್ಯಮಂತ್ರಿ ರಾಜೀನಾಮೆಗೆ ಪಿ.ಚಿದಂಬರಂ ಒತ್ತಾಯ!

ರಾಜಕೀಯ

ಪ್ರಧಾನಿ ನರೇಂದ್ರ ಮೋದಿಯವರು ಮೌನವಾಗುವ ಮತ್ತು ಮಾತನಾಡುವ ಸಂದರ್ಭಗಳು ಯಾವುದು ಎಂಬುದರ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಟ್ಟಿಮಾಡಿ ಟ್ವೀಟ್ ಮಾಡಿದ್ದಾರೆ. ಅದು ಯಾವುದೆಂದು ನೋಡೋಣ.

ಮೋದಿಯವರು ಮೌನವಾಗುವ ಸಂದರ್ಭಗಳು: ಗಲಭೆಗಳಾದಾಗ, ಸಾಮೂಹಿಕ ನರಮೇಧಗಳಾಗುವಾಗ, ಮಹಿಳೆಯರ ನಗ್ನ ಮೆರೆವಣಿಗೆಯಾಗುವಾಗ, ಬೆಲೆಯೇರಿಕೆಯಾದಾಗ, PMCares ಫಂಡ್ ಬಗ್ಗೆ ಕೇಳಿದಾಗ, 2 ಕೋಟಿ ಉದ್ಯೋಗದ ಬಗ್ಗೆ ಕೇಳಿದಾಗ, ಕಪ್ಪುಹಣದ ಬಗ್ಗೆ ಕೇಳಿದಾಗ, ಟೆಲಿಪ್ರಾಂಪ್ಟರ್ ಕೈ ಕೊಟ್ಟಾಗ ಈ ಸಂದರ್ಭಗಳಲ್ಲಿ ಮೋದಿ ಕಠೋರ ಮೌನ ತಪಸ್ವಿಗಳಾಗುತ್ತಾರೆ.

ಇದನ್ನೂ ಓದಿ: ರಾಜಧರ್ಮವನ್ನು ಪಾಲಿಸುವವರು ಮಾತ್ರ ಅದನ್ನು ಬೋಧಿಸಲು ಸಾಧ್ಯ: ಮಣಿಪುರ ಮುಖ್ಯಮಂತ್ರಿ ರಾಜೀನಾಮೆಗೆ ಪಿ.ಚಿದಂಬರಂ ಒತ್ತಾಯ!

ಮೋದಿಯವರು ಮಾತನಾಡುವ ಸಂದರ್ಭಗಳು: ಚುನಾವಣೆ ಬಂದಾಗ,  ಪ್ರಚಾರಕ್ಕೆ ಕರೆದಾಗ, ಮನ್ ಕಿ ಬಾತ್ ಕಾರ್ಯಕ್ರಮವಿದ್ದಾಗ, ಎದುರಿಗೆ ಪ್ರಶ್ನೆ ಮಾಡದ ಪತ್ರಕರ್ತರಿಲ್ಲದಿದ್ದಾಗ, ಜೀ ಹುಜೂರ್ ಎಂದು ಅಡ್ಡಡ್ಡ ಬೀಳುವ ತಮ್ಮ‌ ಪಕ್ಷದ ನಾಯಕರು ಎದುರಿರುವಾಗ ಈ ಸಂದರ್ಭಗಳಲ್ಲಿ ‌ಮೋದಿಯವರು ನಿರಂತರವಾಗಿ, ನಿರರ್ಗಳವಾಗಿ, ಮಾತಾಡುತ್ತಲೇ ಇರುತ್ತಾರೆ.

ಇದನ್ನೂ ಓದಿ: ಆ್ಯಂಟಿ ಕಮ್ಯುನಲ್ ವಿಂಗ್‌ಗೆ ಶಕ್ತಿ ತುಂಬಿ ಸಕ್ರಿಯಗೊಳಿಸಿ; ಕರ್ನಾಟಕ ಮುಸ್ಲಿಮ್ ಯೂನಿಟಿಯ ಖಾಸಿಂ ಸಾಬ್ ಆಗ್ರಹ!

ಮೋದಿಯವರು ಮೌನವಾಗಿರುವುದು ಬುದ್ಧಿವಂತರ ಲಕ್ಷಣ ಎಂಬುದನ್ನು ಬಲವಾಗಿ ನಂಬಿದ್ದಾರೆ. ಆದರೆ ಕೆಲವೊಮ್ಮೆ ಕೆಲವು ವಿಚಾರಗಳ ಸಮರ್ಥನೆಗೆ ಪದಗಳು ಸಿಗದಿರುವ ಅಜ್ಞಾನವೂ ಮೌನಕ್ಕೆ ಕಾರಣವಾಗುತ್ತದೆ. ಮಣಿಪುರ ಗಲಭೆಗೆ ಸಂಬಂಧಪಟ್ಟಂತೆ ಮೋದಿಯವರ ಮೌನವನ್ನು ಬುದ್ಧಿವಂತರ ಲಕ್ಷಣವೆನ್ನಬೇಕೋ ಅಥವಾ ಸಮರ್ಥಿಸಿಕೊಳ್ಳಲು ಆಗದ ಅಜ್ಞಾನವೆನ್ನಬೇಕೋ? ಎಂದು ಹೇಳಿದ್ದಾರೆ.

ದೇಶ

ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಲೈಂಗಿಕ ದೌರ್ಜನ್ಯದಿಂದಾಗಿ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಬೇಕು ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಸಂಸದ ಪಿ.ಚಿದಂಬರಂ ಹೇಳಿದ್ದಾರೆ.

ಮಣಿಪುರದ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಕಳೆದ 2 ತಿಂಗಳಿಂದ ಸಂಘರ್ಷ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ, ಇತ್ತೀಚೆಗೆ ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ, ಅತ್ಯಾಚಾರ ನಡೆಸಿದ ವಿಡಿಯೋವೊಂದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಮಣಿಪುರದ ಪರಿಸ್ಥಿತಿಯನ್ನು ಖಂಡಿಸಿದೆ. ಪ್ರಧಾನಿ ವಿವರಣೆಗೆ ಆಗ್ರಹಿಸಿ ಪ್ರತಿಪಕ್ಷಗಳು ಸಂಸತ್ತಿನ ಕಲಾಪವನ್ನು ಸ್ಥಗಿತಗೊಳಿಸಿವೆ.

ಈ ಹಿನ್ನಲೆಯಲ್ಲಿ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಬೇಕು ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಸಂಸದ ಪಿ.ಚಿದಂಬರಂ ಹೇಳಿದ್ದಾರೆ. ಈ ಕುರಿತು ತಮ್ಮ ಟ್ವಿಟರ್ ಪೋಸ್ಟ್‌ನಲ್ಲಿ, ಮಣಿಪುರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನ ಆರೋಪಗಳು ದೆಹಲಿಯ PMO (ಪ್ರಧಾನಿ ಕಚೇರಿ) ಮತ್ತು ಇಂಫಾಲ್‌ನಲ್ಲಿರುವ CMO (ಮುಖ್ಯಮಂತ್ರಿ ಕಚೇರಿ) ತಲುಪಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ?

ಇದನ್ನೂ ಓದಿ: ಆ್ಯಂಟಿ ಕಮ್ಯುನಲ್ ವಿಂಗ್‌ಗೆ ಶಕ್ತಿ ತುಂಬಿ ಸಕ್ರಿಯಗೊಳಿಸಿ; ಕರ್ನಾಟಕ ಮುಸ್ಲಿಮ್ ಯೂನಿಟಿಯ ಖಾಸಿಂ ಸಾಬ್ ಆಗ್ರಹ!

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೆ ಸಾಂವಿಧಾನಿಕ ತತ್ವಗಳ ಬಗ್ಗೆ ತಿಳುವಳಿಕೆ ಇದ್ದರೆ ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ರಾಜಧರ್ಮವನ್ನು ಪಾಲಿಸುವವರು ಮಾತ್ರ  ಅದನ್ನು ಬೋಧಿಸಲು ಸಾಧ್ಯ. ಅವಮಾನಕ್ಕೊಳಗಾದ ಮಹಿಳೆಯರ ಬಳಿ “ಕೀ ಇಲ್ಲ” ಎಂದು ಹೇಳಿದ ಪೊಲೀಸ್ ಜೀಪ್ ಡ್ರೈವರ್ ನಂತಾಗಿದೆ ಕೇಂದ್ರ ಸರ್ಕಾರ!

ಕೇಂದ್ರ ಸರ್ಕಾರವು ಸಾಂವಿಧಾನಿಕ ಜವಾಬ್ದಾರಿಯ ಯಂತ್ರವನ್ನು ಆಫ್ ಮಾಡಿ ಕೀಲಿಯನ್ನು ಎಸೆದಿದೆ (ಲೇಖನ 355 ಮತ್ತು 356) ಎಂದು ಪಿ.ಚಿದಂಬರಂ ಪೋಸ್ಟ್ ಮಾಡಿದ್ದಾರೆ.

ರಾಜ್ಯ

ಮೊನ್ನೆ ಪೊಲೀಸರ ಮೇಲೆ ಹಲ್ಲೆ; ಈಗ ಪತ್ರಕರ್ತರ ಮೇಲೆ ಗೂಂಡಾಗಿರಿ. ಈ ಅಮಾನವೀಯ, ಸಂವಿಧಾನ ವಿರೋಧಿ ಕಾನೂನು ಬಾಹಿರ ಘಟನೆಗಳು ನಡೆದದ್ದು ಮುಸ್ಲಿಮ್ ಎಂಬ ಗುಮಾನಿಯ (… ಮುಸ್ಲಿಮ್ ಆಗಿದ್ದರೆ..!? ) ಮೇಲೆ ಮಾತ್ರ. ಕೋಮುವಾದಿ(ವ್ಯಾದಿ)ಗಳ ಅನೈತಿಕ ಪೋಲಿಸ್‌ ಗಿರಿಯನ್ನು ತಡೆಯುವ ನಿಟ್ಟಿನಲ್ಲಿ, ರಾಜ್ಯ ಗೃಹ ಇಲಾಖೆಯು, ಆ್ಯಂಟಿ ಕಮ್ಯೂನಲ್ ವಿಂಗನ್ನು ರಚನೆ ಮಾಡಿತ್ತು. ಇದು ಕೇವಲ ಹೇಳಿಕೆಗೆ ಮಾತ್ರ ಸೀಮಿತವಾದಂತಿದೆ ಎಂದು ಕರ್ನಾಟಕ ಮುಸ್ಲಿಮ್ ಯೂನಿಟಿಯ ರಾಜ್ಯಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ, ಕೋಮುವಾದಿಗಳ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿ ಪ್ರಕರಣಗಳು ಎಗ್ಗಿಲ್ಲದೆ ಮಿತಿಮೀರಿ ನಡೆಯುತ್ತಿದ್ದವು. ಇದಕ್ಕೆ ಸಹಕಾರಿ ಎಂಬಂತೆ ಕೆಲ ಅಧಿಕಾರಿಗಳು ಸಹ ಸಾತ್ ನೀಡುತ್ತಿದ್ದದ್ದು ಬಹಿರಂಗಗೊಂಡಿದೆ. ಇಂತಹ ಕಾನೂನು ಬಾಹಿರ ಕೃತ್ಯಗಳ ಕಡಿವಾಣಕ್ಕೆ, ಕಾಂಗ್ರೆಸ್ ಪಕ್ಷ, ತಾನು ಆಡಳಿತಕ್ಕೆ ಬಂದರೆ ಇಂತಹ ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕುವುದಾಗಿ ಆಶ್ವಾಸನೆ ನೀಡಿತ್ತು.

ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಈ ರೀತಿಯ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ, ಆಂಟಿ ಕಮ್ಯುನಲ್ ವಿಂಗ್ ಅನ್ನು ರಚಿಸಿತು. ಆದರೆ, ಈ ವಿಂಗ್‌ನ ಕಾರ್ಯವೈಖರಿ ಮತ್ತು ಪರಿಣಾಮಗಳು ಮಾತ್ರ ಈವರೆಗೆ ಶೂನ್ಯವೆ ಆಗಿದೆ. ಇತ್ತೀಚಿಗೆ ಖಾಸಗಿ ಸುದ್ದಿ ವಾಹಿನಿಯ ಅಧಿಕೃತ ವರದಿಗಾರರಾದ ಅಭಿಜಿತ್ ಅವರ ಮೇಲೆ, ಗೂಂಡಾಗಿರಿ ನಡೆಸಿರುವ ಕೋಮುವಾದಿಗಳ ವಿರುದ್ಧ, ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಖಾಸಿಂ ಸಾಬ್ ಆಗ್ರಹಿಸಿದ್ದಾರೆ.

ಈ ವಿಂಗ್ ಜಾರಿಗೆ ಬಂದ ನಂತರವೂ ಅನೈತಿಕ ಪೊಲೀಸ್ ಗಿರಿ ಪ್ರಕರಣಗಳಲ್ಲಿ ಯಾವುದೇ ಇಳಿಕೆಯಾಗಿಲ್ಲ ಎಂಬ ಸತ್ಯವು ಇದರ ಸೀಮಿತತೆ ಮತ್ತು ನಿಸ್ಕ್ರಿಯತೆಯನ್ನು ಸೂಚಿಸುತ್ತದೆ. ಮುರುಡೇಶ್ವರ ಬೀಚ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ, ಬೆಂಗಳೂರಿನಲ್ಲಿ ಬಿಎಂಟಿಸಿಯ ಮುಸ್ಲಿಮ್ ನಿರ್ವಾಹಕರ ಟೋಪಿಯನ್ನು ಬಲವಂತವಾಗಿ ತೆಗೆಸಿದ್ದು ಸೇರಿದಂತೆ, ಕೋಮುವಾದಿ ಪುಂಡಾಟಗಳು ಮೊದಲಿನಂತೆಯೇ ಮುಂದುವರಿದಿವೆ.

ನೈತಿಕ ಪೊಲೀಸ್ ಗಿರಿ ಮಾಡಿದರೆ, ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಮತ್ತು ಜಿಲ್ಲೆಗೆ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಉದ್ದೇಶಪೂರ್ವಕವಾಗಿ ಈ ರೀತಿಯ ಕೃತ್ಯಗಳನ್ನು ಮಾಡುತ್ತಿದ್ದಾರೆ.

ಇಂತಹ ದಬ್ಬಾಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ಈ ಸ್ಪಷ್ಟನೆಗಳು ಸ್ವಾಗತಾರ್ಹವೆ. ಆದರೆ, ಈ ವಿಂಗ್ ಅನ್ನು ಶಕ್ತ ಸಕ್ರಿಯಗೊಳಿಸಲು ಸರ್ಕಾರ ಕೈಗೊಂಡ ಕ್ರಮಗಳೇನು ಎಂಬುದು ಪ್ರಶ್ನೆ.

ಕೂಡಲೇ ಈ ವಿಂಗ್ ಅನ್ನು ಸಕ್ರಿಯಗೊಳಿಸುವ ಕುರಿತು ಮತ್ತಷ್ಟು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳಬೇಕು; ಕೋಮು ಗೂಂಡಾಗಿರಿಗಳನ್ನು ನಿಲ್ಲಿಸಬೇಕು ಎಂದು ಖಾಸಿಂ ಸಾಬ್ ಸರ್ಕಾರವನ್ನು ಆಗ್ರಹಿಸಿದ್ದಾರೆ.