ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
2023 » Page 14 of 76 » Dynamic Leader
October 24, 2024
Home 2023 (Page 14)
ದೇಶ

ಚೆನ್ನೈ: ದೇಶಾದ್ಯಂತ ಜಾತಿವಾರು ಜನಗಣತಿ ನಡೆಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪತ್ರ ಬರೆದಿದ್ದಾರೆ.

“ರಾಷ್ಟ್ರೀಯ ಜನಗಣತಿ ಜತೆಗೆ ಜಾತಿವಾರು ಜನಗಣತಿಯನ್ನೂ ನಡೆಸಬೇಕು. ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಉತ್ತೇಜಿಸಲು ಅಂತರ್ಗತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಜಾತಿವಾರು ಜನಗಣತಿ ಅಗತ್ಯವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪೊಲೀಸ್ ಸಂಸ್ಮರಣ ದಿನಾಚರಣೆ: ಹುತಾತ್ಮ ಪೊಲೀಸರಿಗೆ ಪುಷ್ಪ ನಮನದ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಇತ್ತೀಚಗಷ್ಟೆ ಬಿಹಾರ ರಾಜ್ಯದಲ್ಲಿ ಜಾತಿವಾರು ಜನಗಣತಿ ವರದಿಯನ್ನು ಬಿಡುಗಡೆಗೊಳಿಸಿರುವುದು ಗಮನಾರ್ಹ.  

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೊಲೀಸ್ ಸಂಸ್ಮರಣ ದಿನಾಚರಣೆಯ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಪುಷ್ಪ ನಮನದ ಗೌರವ ಸಲ್ಲಿಸಿದರು.

ಪೊಲೀಸ್ ಸಂಸ್ಮರಣ ದಿನಾಚರಣೆ (Police Remembrance Day) ಯನ್ನು ಇಂದು (ಅ.21) ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕರ್ತವ್ಯ ನಿರತರಾಗಿ ಪ್ರಾಣತ್ಯಾಗ ಮಾಡಿದವರ ನೆನಪಿಗಾಗಿ ಈ ಹುತಾತ್ಮರ ದಿನಾಚರಣೆಯನ್ನು ಪ್ರತಿ ವರ್ಷ ಆಚರಿಸಿಕೊಂಡ ಬರಲಾಗುತ್ತಿದೆ. ಇನ್ನು ರಾಜ್ಯದಲ್ಲಿ ಈ ವರ್ಷ 16 ಜನ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹುತಾತ್ಮರಾಗಿದ್ದು, ಹುತಾತ್ಮರಾದ ಅಧಿಕಾರಿ, ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ್​ ಅವರು ಗೌರವ ಸಮರ್ಪಣೆ ಸಲ್ಲಿಸಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ‘ದೇಶದಲ್ಲಿ ರಾಜ್ಯ ಪೊಲೀಸ್ ಇಲಾಖೆ ಉತ್ತಮ ಹೆಸರು ಪಡೆದಿದೆ. ಪೊಲೀಸ್ ಕಾನೂನು ಸುವ್ಯವಸ್ಥೆ ಕಾಪಾಡುವವರು. ಕೆಲಸ ಮಾಡುವಾಗ ಅನೇಕ ಅಪಾಯ ಎದುರಿಸುತ್ತಾರೆ. ಈ ವೇಳೆ ಪ್ರಾಣವನ್ನೂ ಕಳೆದುಕೊಳ್ಳುತ್ತಾರೆ. ಭಾರತದಲ್ಲಿ ಸೆಪ್ಟೆಂಬರ್ 22ರಿಂದ ಆಗಸ್ಟ್​ 23 ರವರೆಗೆ ಸುಮಾರು 189 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 16 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರೆಲ್ಲರಿಗೂ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದರು.

2400 ಪೊಲೀಸ್ ಪೆದೆಗಳ ನೇಮಕ ಮಾಡಲಾಗುತ್ತೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬಸ್ಥರಿಗಾಗಿ ಆರೋಗ್ಯ ಭಾಗ್ಯ ಯೋಜನೆ ಅಡಿ ನೂರು ಕೋಟಿ ಕೊಡಲಾಗಿದೆ. ನಿವೃತ್ತಿ ಅಧಿಕಾರಿ ಮತ್ತು ಸಿಬ್ಬಂದಿ ಅವರ ಅವಲಂಬಿತ ಪತಿ, ಪತ್ನಿಯರ ಚಿಕಿತ್ಸೆಗಾಗಿ 25ಕೋಟಿ ರಿಲೀಸ್ ಮಾಡಿದೆ. ಇನ್ನು ಕರ್ತವ್ಯ ನಿರತ ಸಾವನ್ನಪ್ಪಿದ ಪೊಲೀಸರಿಗೆ 50 ಲಕ್ಷ ಪರಿಹಾರ ಕೊಡಲಾಗುತ್ತೆ ಎಂದರು.

ಗೃಹಸಚಿವರಾದ ಡಾ. ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಜರಿದ್ದರು.

ರಾಜಕೀಯ

ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನುಕೈ ಹಿಡಿದಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ?

ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ! ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ! ಎಂದು ಕಾಂಗ್ರೆಸ್ ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕಿಡಿಕಾರಿದೆ.

ಹಿಂದಿನ ನಿಮ್ಮ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ “ಕೋಮು-ಕುಂಡ”ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕುಮಾರಸ್ವಾಮಿಯವರೇ, ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ, ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು. “ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ” ಎಂದು. ಆದರೆ ಸಿದ್ದಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜತೆ ನಿಂತಿತ್ತು.

ಕಾಂಗ್ರೆಸ್ ದಯಾಭಿಕ್ಷೆಯಿಂದ ಎರಡನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ? ಓಹ್.. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ! ಎಂದು ಹೇಳಿದೆ.

ಕುಮಾರಸ್ವಾಮಿಯವರೇ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50 ಕೋಟಿಯಂತೆ ಸರಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿ ಟಿ ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ ಅಂಗಿ ಚುಂಗು ಹಿಡಿದು ನಿಂತಿದ್ದೀರಲ್ಲಾ… ನಿಮಗೇನಾದರೂ ಆತ್ಮಗೌರವ ಇದೆಯೇ?

ಇಡೀ ರಾಜ್ಯದ ಜನಕ್ಕೆ ಅರ್ಥವಾಗಿದೆ. ಅಧಿಕಾರದ ಕನಸು ನುಚ್ಚುನೂರಾದ ನಂತರ ನೀವೆಷ್ಟು ಹತಾಶರಾಗಿದ್ದೀರಿ, ಮತಿಭ್ರಂಶರಾಗಿದ್ದೀರಿ ಎಂದು ನೀವಾಡುವ ಒಂದೊಂದು ನುಡಿಯಲ್ಲೂ ಅದರದೇ ಪ್ರತಿಫಲನ. ಪಾಪ, ನಿಮ್ಮ ಸ್ಥಿತಿ ಕಂಡು ಅಯ್ಯೋ ಅನ್ನಿಸುತ್ತದೆ. ಇದೇ ಸ್ಥಿತಿ ಮುಂದುವರೆದರೆ ಬೀದಿಯಲ್ಲಿ ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ ಎಂಬುದನ್ನು ನೆನೆದು ಭಯವೂ ಆಗುತ್ತದೆ.

ಅದು ಒತ್ತಟ್ಟಿಗಿರಲಿ, ನಿಮ್ಮನ್ನು, ನಿಮ್ಮ ಕುಟುಂಬದವರನ್ನು ದಶಕಗಳ ಕಾಲ ಪೊರೆದ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎನ್ನುವ ಮೂಲಕ ಅವರಿಗೆ ದ್ರೋಹ, ಅವಮಾನ ಮಾಡಿರುವ ನಿಮ್ಮನ್ನು ಆ ಭೈರವೇಶ್ವರನೂ ಕ್ಷಮಿಸುವುದಿಲ್ಲ. ಒಕ್ಕಲಿಗರಿಂದ ನೀವು ಬೆಳೆದಿರೇ ಹೊರತು ನಿಮ್ಮಿಂದ ಸಮುದಾಯವೇನೂ ಉದ್ಧಾರ ಆಗಿಲ್ಲ. ಎಷ್ಟೇ ಆಗಲಿ, ಒಕ್ಕಲಿಗರ ಆತ್ಮಗೌರವದ ಸಂಕೇತವಾದ ಆದಿ ಚುಂಚನಗಿರಿ ಮಠದ ಶ್ರೀ.ಬಾಲಗಂಗಾಧರನಾಥ ಸ್ವಾಮೀಜಿಗಳಿಗೇ ಸೆಡ್ಡು ಹೊಡೆದು ಮತ್ತೊಂದು ಮಠ ಕಟ್ಟಿದ ಮಹಾನುಭಾವರಲ್ಲವೇ ನೀವು..?!

ಇನ್ನೊಂದೆಡೆ ಅಲ್ಪಸಂಖ್ಯಾತರ ಅಗತ್ಯವಿಲ್ಲ, ಅವರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಅನ್ನುತ್ತೀರಿ. ಹಾಗಾದರೆ ನಿಮಗೆ ನೀವೇ ಮತ ಹಾಕಿಕೊಂಡು ಗೆದ್ದಿರಾ ಕುಮಾರಣ್ಣ..?! ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕುಮಾರಸ್ವಾಮಿಯವರೇ, ಹಿಂದೆ ನೀವು ಮಕ್ಮಲ್ ಟೋಪಿ ಹಾಕಿದ್ದೇನು? ಬಿರಿಯಾನಿ ತಿಂದಿದ್ದೇನು? ಮಸೀದಿ ಹೊಕ್ಕಿದ್ದೇನು? ಆಹಾ..! ಅದೇನು ನಾಟಕ, ಅದೇನು ಪಂಚರಂಗಿ ಆಟ? ಈಗ, ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?!

ಐಟಿ, ಇಡಿ ಕಿಂದರ ಜೋಗಿ ಅಮಿತ್ ಶಾ ಕಾಲಿಗೆ ಬಿದ್ದು ರಾಜಕೀಯ ವಿರೋಧಿಗಳಿಗೆ ಗುಂಡಿ ತೋಡುವುದರಲ್ಲಿ ಮಗ್ನರಾಗಿರುವ ಕುಮಾರಣ್ಣ ಒಂದು ವಿಷಯ ತಿಳಿದುಕೊಳ್ಳಿ. ನೀವೇ ನಿಮ್ಮ ಪಾಲಿನ ಭಸ್ಮಾಸುರ! ಸ್ವಲ್ಪ ಕಾಲ ತಡೆದು ನೋಡಿ, ನಿಮ್ಮ ಗುಂಡಿಯಲ್ಲಿ ಬಿದ್ದು ನೀವೇ ಹೆಂಗೆ ಒದ್ದಾಡುತ್ತೀರಿ ಅಂತಾ!

ಕೈಲಾಗದವರು ಮೈ ಪರಚಿಕೊಂಡರೆ ಆಗೋದು ಗಾಯ, ರಣ ಗಾಯ! ಕೈ ನಾಯಕರ ಮೇಲೆ ಬಿದ್ದರೇ ಕೈಲಾಸ ಪ್ರಾಪ್ತಿ ಆಗದು ಕುಮಾರಣ್ಣ. ನಿಮ್ಮ ಮಾತೇ ನಿಮ್ಮ ಪಾಲಿನ ಶತ್ರು! ಮಾತಾಡಿ, ಮಾತಾಡಿ ಮಂಡ್ಯ ಚುನಾವಣೆಯಲ್ಲಿ ನಿಮ್ಮ ಮಗನನ್ನು ಬಲಿ ಕೊಟ್ಟಿರಿ. ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಪಕ್ಷವನ್ನೇ ಅಡ್ಡಡ್ಡ ಉದ್ದುದ್ದ ಮಲಗಿಸಿದಿರಿ. ಈಗ ನಿಮ್ಮನ್ನು ನೀವೇ ಹಾಳು ಮಾಡಿಕೊಳ್ಳುತಿದ್ದೀರಿ..!

ನಿಯತ್ತು ಮತ್ತು ಕುಮಾರಸ್ವಾಮಿ ಎರಡೂ ವಿರುದ್ಧ ಪದಗಳು ಎಂಬುದು ಜಗಜ್ಜಾಹಿರು! ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನು “ಕೈ ಹಿಡಿದ” ಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ? ಅದೂ ಇಲ್ಲ. ಹತಾಶೆ ಆತ್ಮಸಾಕ್ಷಿಯನ್ನೇ ಕೊಂದಿದೆ!

ಹೀಗಾಗಿ ನಿಮ್ಮಂತವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ನೀವೀಗ ನಿರುದ್ಯೋಗಿ, ಪರರ ನಿಂದನೆಗೆ ಸಾಕಷ್ಟು ಸಮಯವಿದೆ. ಮಾತಾಡುತ್ತಾ ಹೋಗಿ. ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ಕೆಲಸವಿದೆ, ಜನ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಮರೆತು ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡುತ್ತಾ ಹೋದರೆ ನಿಮಗೂ ನಮಗೂ ವ್ಯತ್ಯಾಸ ಇರುವುದಿಲ್ಲ. ನೀವು ಮಾತಾಡಿ, ಮಾತಾಡುತ್ತಾ ಹೋಗಿ… ಅಲ್ ದ ಬೆಸ್ಟ್! ಎಂದು ಕರ್ನಾಟಕ ಕಾಂಗ್ರೆಸ್ ವ್ಯಂಗ್ಯವಾಡಿದೆ.

ದೇಶ

ಅಯೋಧ್ಯೆ: ವಿದೇಶಿ ದೇಣಿಗೆ ಸ್ವೀಕರಿಸಲು ಅಯೋಧ್ಯೆ ರಾಮಮಂದಿರದಲ್ಲಿರುವ ‘ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ ಎಂಬ ಟ್ರಸ್ಟ್‌ಗೆ  ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 5, 2020 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದರು. 2.7 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದ್ದು, ಕಾಮಗಾರಿಗಳು ಮುಕ್ತಾಯ ಹಂತದಲ್ಲಿವೆ. ಜನವರಿ 2024ರಲ್ಲಿ ರಾಮ ವಿಗ್ರಹಗಳ ಪ್ರತಿಷ್ಠಾಪನೆಯ ನಂತರ ದೇವಾಲಯವನ್ನು ಭಕ್ತರಿಗೆ ಔಪಚಾರಿಕವಾಗಿ ತೆರೆಯಲಾಗುವುದು ಎಂದು ವರದಿಯಾಗಿದೆ.

ಈ ಹಿನ್ನಲೆಯಲ್ಲಿ ವಿದೇಶಿ ದೇಣಿಗೆ ಸ್ವೀಕರಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಮಾತನಾಡಿರುವ ‘ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ ಪ್ರಧಾನ ಕಾರ್ಯದರ್ಶಿ ಸಂಪತ್ ರಾಯ್, “ವಿದೇಶಿ ದೇಣಿಗೆ ಸ್ವೀಕರಿಸಲು ಗೃಹ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿತ್ತು. ಇದನ್ನು ಸ್ವೀಕರಿಸಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಪ್ರತಿಷ್ಠಾನಕ್ಕೆ ವಿದೇಶಿ ನಿಧಿ ಪಡೆಯಲು ಅನುಮೋದನೆ ನೀಡಲಾಗಿದೆ” ಎಂದರು.

ದೇಶ

ಅಮೆರಿಕಾ, ಕೆನಡಾ, ದಕ್ಷಿಣ ಆಫ್ರಿಕಾ ಮತ್ತು ಫ್ರಾನ್ಸ್ ಸೇರಿದಂತೆ 30ಕ್ಕೂ ಹೆಚ್ಚು ದೇಶಗಳಲ್ಲಿ ಸಲಿಂಗ ವಿವಾಹವನ್ನು ಗುರುತಿಸಲಾಗಿದೆ.

ಭಾರತದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ವಿವಿಧ ಪ್ರಕರಣಗಳು ದಾಖಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ 5 ಸದಸ್ಯರ ಸಾಂವಿಧಾನಿಕ ಪೀಠವು ಈ ಪ್ರಕರಣಗಳ ವಿಚಾರಣೆ ನಡೆಸಿ ಇಂದು ತೀರ್ಪು ನೀಡಿದೆ. ನ್ಯಾಯಾಧೀಶರು 4 ವಿಭಿನ್ನ ತೀರ್ಪುಗಳನ್ನು ನೀಡಿದ್ದಾರೆ.

ಸಲಿಂಗ ದಂಪತಿಗಳಿಗೆ ಮದುವೆಯಾಗಲು ಯಾವುದೇ ಮೂಲಭೂತ ಹಕ್ಕು ಇಲ್ಲ ಎಂದು ಎಲ್ಲಾ ಐವರು ನ್ಯಾಯಾಧೀಶರು ಒಪ್ಪಿಕೊಂಡರು. ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವುದರ ವಿರುದ್ಧ ತೀರ್ಪು 3:2 ಆಗಿತ್ತು. ಅದೇ ಸಮಯದಲ್ಲಿ ಸಲಿಂಗ ವಿವಾಹ ಕಾನೂನನ್ನು ಜಾರಿಗೆ ತರಲು, ಸಂಸತ್ತು ನಿರ್ಧರಿಸಬೇಕು ಎಂಬುದು ಬಹುಮತದ ಅಭಿಪ್ರಾಯವಾಗಿತ್ತು.

ಸಲಿಂಗ ವಿವಾಹದ ಮಾನ್ಯತೆಯನ್ನು ಕೇಂದ್ರ ಸರ್ಕಾರವೂ ವಿರೋಧಿಸುತ್ತದೆ. ಈ ವಿಷಯದ ಬಗ್ಗೆ ಸಂಸತ್ತು ನಿರ್ಧರಿಸಬೇಕು ಎಂದೂ ಅದು ಹೇಳುತ್ತದೆ. ಭಾರತದ ಪರಿಸ್ಥಿತಿ ಹೀಗಿದೆ. ಆದರೆ, 30ಕ್ಕೂ ಹೆಚ್ಚು ದೇಶಗಳಲ್ಲಿ ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸಲಾಗಿದೆ. ಆ ದೇಶಗಳನ್ನು ನೋಡೋಣ.

ನೆದರ್‌ಲ್ಯಾಂಡ್ಸ್: 2001, ಬೆಲ್ಜಿಯಂ: 2003, ಕೆನಡಾ: 2005, ಸ್ಪೇನ್: 2005, ದಕ್ಷಿಣ ಆಫ್ರಿಕಾ: 2006, ನಾರ್ವೆ: 2009, ಸ್ವೀಡನ್: 2009, ಐಸ್ಲ್ಯಾಂಡ್: 2010, ಪೋರ್ಚುಗಲ್: 2010, ಅರ್ಜೆಂಟೀನಾ: 2010, ಡೆನ್ಮಾರ್ಕ್: 2012, ಉರುಗ್ವೆ: 2013, ನ್ಯೂಜಿಲೆಂಡ್: 2013, ಫ್ರಾನ್ಸ್: 2013, ಬ್ರೆಜಿಲ್: 2013, ಬ್ರಿಟನ್: 2014, ಲಕ್ಸೆಂಬರ್ಗ್: 2015, ಐರ್ಲೆಂಡ್: 2015, ಅಮೆರಿಕಾ: 2015, ಕೊಲಂಬಿಯಾ: 2016, ಫಿನ್ಲ್ಯಾಂಡ್: 2017, ಜರ್ಮನಿ: 2017, ಮಾಲ್ಟಾ: 2017, ಆಸ್ಟ್ರೇಲಿಯಾ: 2017, ಆಸ್ಟ್ರಿಯಾ: 2019, ತೈವಾನ್: 2019, ಈಕ್ವೆಡಾರ್: 2019, ಕೋಸ್ಟರಿಕಾ: 2020, ಸ್ವಿಜರ್ಲ್ಯಾಂಡ್: 2022, ಮೆಕ್ಸಿಕೋ: 2022, ಚಿಲಿ: 2022, ಸ್ಲೊವೇನಿಯಾ: 2022, ಕ್ಯೂಬಾ: 2022, ಅಂಡೋರಾ: 2022, ಸ್ಕಾಟ್‌ಲ್ಯಾಂಡ್: 2014, ಗ್ರೀನ್‌ಲ್ಯಾಂಡ್: 2016, ಎಸ್ಟೋನಿಯಾ: 2023 (2024 ರಿಂದ ಜಾರಿಗೆ ಬರುತ್ತದೆ).

ದೇಶ

ತಿರುವಣ್ಣಾಮಲೈ ಜಿಲ್ಲೆಯ ಸೆಂಗಮ್ ಬಳಿಯ ಪಕ್ರಿಪಾಳ್ಯಂ ಪ್ರದೇಶದಲ್ಲಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

ಈ ಭೀಕರ ಅಪಘಾತದಲ್ಲಿ ತುಮಕೂರಿನಲ್ಲಿ ನೆಲೆಸಿದ್ದ ಒಂದೇ ಕುಟುಂಬಕ್ಕೆ ಸೇರಿದ ಶ್ರೀನಿವಾಸನ್ (ವಯಸ್ಸು 60), ಮಲರ್ (55), ಮಣಿಕಂಠನ್ (40), ಹೇಮಂತ್ (35), ಸತೀಶ್ ಕುಮಾರ್ (40), ಸರ್ವೇಶ್ವರನ್ (6), ಸಿದ್ದು (3) ಅವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಅಲ್ಲದೆ, ಗಂಭೀರವಾಗಿ ಗಾಯಗೊಂಡಿರುವ ಸತೀಶ್ ಕುಮಾರ್ ಅವರ ಪತ್ನಿ ಕಾವ್ಯಾ (32) ತಿರುವಣ್ಣಾಮಲೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಎಲ್ಲಾ ದೇಹಗಳನ್ನು ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಮರಣೋತ್ತರ ಪರೀಕ್ಷೆ ಬಳಿಕ ತಮಿಳುನಾಡು ಉಪಸಭಾಪತಿ ಕೆ.ಪಿಚ್ಚಾಂಡಿ ಮೃತ ದೇಹಗಳಿಗೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಲ್ಲದೇ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ಹೇಳಿದ್ದಾರೆ.

ನಂತರ ಜಿಲ್ಲಾಧಿಕಾರಿ ಮುರುಗೇಶ್, ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕೇಯನ್, ರಾಜ್ಯ ಅಥ್ಲೆಟಿಕ್ಸ್ ಅಸೋಸಿಯೇಷನ್ ​​ಉಪಾಧ್ಯಕ್ಷ ಕಂಬನ್, ಸಂಸದ ಸಿ.ಎನ್.ಅಣ್ಣಾದೊರೈ, ಶಾಸಕರಾದ ಗಿರಿ, ನಗರಸಭೆ ಉಪಾಧ್ಯಕ್ಷೆ ರಾಜಾಂಗಮ್ ಮತ್ತಿತರರು ಗೌರವ ಸಲ್ಲಿಸಿದರು. ಬಳಿಕ 7 ಮಂದಿಯ ಮೃತದೇಹಗಳನ್ನು ಸರ್ಕಾರಿ ಗೌರವದೊಂದಿಗೆ ಪ್ರತ್ಯೇಕ ವಾಹನದಲ್ಲಿ ಸ್ವಗ್ರಾಮಕ್ಕೆ ಕಳುಹಿಸಲಾಯಿತು.

ಕ್ರೀಡೆ ದೇಶ

ಚೆನ್ನೈ: ವಿಶ್ವ ಕಪ್ ಕ್ರಿಕೆಟ್‌ನ ಬಹು ನಿರೀಕ್ಷಿತ ಭಾರತ-ಪಾಕಿಸ್ತಾನ ಲೀಗ್ ಪಂದ್ಯವು ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು.

ಭಾರತ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪಾಕಿಸ್ತಾನ ತಂಡವು 42.5 ಓವರ್‌ಗಳಲ್ಲಿ 191 ರನ್‌ಗಳಿಸಿ ಎಲ್ಲ ವಿಕೆಟ್ ಕಳೆದುಕೊಂಡಿತು. ಪಾಕಿಸ್ತಾನ ತಂಡದ ಅಬ್ದುಲ್ಲಾ ಶಫೀಕ್ ಮತ್ತು ಇಮಾಮ್ ಉಲ್ ಹಕ್ ಉತ್ತಮ ಆರಂಭ ನೀಡಿದರು. ಪಂದ್ಯದ ವೇಳೆ ಅಭಿಮಾನಿಗಳು ಹಲವು ಬಾರಿ ಜಯಶ್ರೀರಾಮ್ ಘೋಷಣೆ ಕೂಗಿದರು.

ಮತ್ತು ಪಾಕಿಸ್ತಾನದ ಪ್ರಮುಖ ಆಟಗಾರ ‘ರಿಜ್ವಾನ್’ 49 ರನ್‌ಗಳಿಗೆ ಔಟಾಗಿ ಪೆವಿಲಿಯನ್‌ಗೆ ಮರಳಿದಾಗ ‘ಜಯಶ್ರೀರಾಮ್’ ಘೋಷಣೆಗಳು ಮೊಳಗಿದವು. ಇದನ್ನು ಹಲವರು ಟೀಕಿಸಿದ್ದಾರೆ. ಆಟವನ್ನು ಆಟವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ವೀಡಿಯೋವೊಂದನ್ನು ಹಂಚಿಕೊಂಡಿರುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, “ಆತಿಥ್ಯಕ್ಕೆ ಹೆಸರುವಾಸಿಯಾದ ಭಾರತದಲ್ಲಿ ಪಾಕಿಸ್ತಾನಿ ಆಟಗಾರರ ವಿರುದ್ಧ ಘೋಷಣೆಗಳು ಸ್ವೀಕಾರಾರ್ಹವಲ್ಲ. ಕ್ರೀಡೆ ಎಂಬುದು ರಾಷ್ಟ್ರಗಳ ನಡುವೆ ಒಗ್ಗೂಡಿಸುವ ಶಕ್ತಿಯಾಗಬೇಕು.

ಕ್ರೀಡೆಗಳು ಯಾವಾಗಲೂ ನಿಜವಾದ ಸಹೋದರತ್ವವನ್ನು ಬೆಳೆಸಬೇಕು. ದ್ವೇಷ ಹರಡಲು ಕ್ರೀಡೆಯನ್ನು ಸಾಧನವಾಗಿ ಬಳಸಿಕೊಳ್ಳುತ್ತಿರುವುದು ಖಂಡನೀಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶ

ಈ ನೇಮಕಾತಿಗಳು ಜುಲೈನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸುಗಳನ್ನು ಅನುಸರಿಸುತ್ತವೆ.

ಮದ್ರಾಸ್ ಮತ್ತು ಮಣಿಪುರದ ಹೈಕೋರ್ಟ್‌ಗಳಿಗೆ ಮೂವರು ನ್ಯಾಯಾಧೀಶರ ನೇಮಕಾತಿಗೆ ಅಧಿಸೂಚನೆ ಹೊರಡಿಸುವ ಮೂಲಕ ಉನ್ನತ ನ್ಯಾಯಾಂಗದಲ್ಲಿ ವೈವಿಧ್ಯತೆ ಮತ್ತು ಪ್ರಾತಿನಿಧ್ಯವನ್ನು ಹೆಚ್ಚಿಸುವಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ನೇಮಕಗೊಂಡವರಲ್ಲಿ ಗೋಲ್ಮೆಯ್ ಗೈಫುಲ್‌ಶಿಲ್ಲು ಕಬುಯಿ ಅವರು ನ್ಯಾಯಾಂಗ ಅಧಿಕಾರಿಯಾಗಿದ್ದು, ಅವರು ಮಣಿಪುರ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗುವ ಮೂಲಕ ಅನುಸೂಚಿತ ಬುಡಕಟ್ಟಿನ ಮೊದಲ ಮಹಿಳೆ ಎಂಬ ಇತಿಹಾಸವನ್ನು ನಿರ್ಮಿಸಿದ್ದಾರೆ.

ಹೊಸದಾಗಿ ನೇಮಕಗೊಂಡ ಇತರ ಇಬ್ಬರು ನ್ಯಾಯಾಧೀಶರು ಅಂಚಿನಲ್ಲಿರುವ ಸಮುದಾಯಗಳಿಂದ ಬಂದವರು. ಎನ್.ಸೆಂಥಿಲ್‌ಕುಮಾರ್ ಮತ್ತು ಜಿ.ಅರುಲ್ ಮುರುಗನ್ ಇಬ್ಬರೂ ಮದ್ರಾಸ್ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾಗಿದ್ದಾರೆ. ಸೆಂಥಿಲ್‌ಕುಮಾರ್ ಪರಿಶಿಷ್ಟ ಜಾತಿಗೆ ಸೇರಿದವರು ಮತ್ತು ಮುರುಗನ್ ಇತರ ಹಿಂದುಳಿದ ವರ್ಗಗಳ (ಒಬಿಸಿ) ವರ್ಗಕ್ಕೆ ಸೇರಿದ್ದಾರೆ.

ಈ ನೇಮಕಾತಿಗಳು ಜುಲೈನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸುಗಳನ್ನು ಅನುಸರಿಸುತ್ತವೆ. ಕೊಲಿಜಿಯಂ ಸೆಂಥಿಲ್‌ಕುಮಾರ್ ಅವರ ವ್ಯಾಪಕವಾದ 28 ವರ್ಷಗಳ ವೃತ್ತಿಜೀವನ ಮತ್ತು ಸಾಂವಿಧಾನಿಕ, ಕ್ರಿಮಿನಲ್, ಸೇವಾ ಮತ್ತು ಸಿವಿಲ್ ಪ್ರಕರಣಗಳಲ್ಲಿ ಪರಿಣತಿಯನ್ನು ಗುರುತಿಸಿದೆ.

ಅಂತೆಯೇ, ಮುರುಗನ್ ಅವರ 24 ವರ್ಷಗಳ ಕಾನೂನು ಅಭ್ಯಾಸವನ್ನು ಗಮನಿಸಿದೆ. ವಿಶೇಷವಾಗಿ ಸಿವಿಲ್, ಕ್ರಿಮಿನಲ್ ಮತ್ತು ರಿಟ್ ಪ್ರಕರಣಗಳಲ್ಲಿ ಪರಿಣತಿಯನ್ನು ಗುರುತಿಸಿದೆ. ಉನ್ನತ ನ್ಯಾಯಾಂಗದಲ್ಲಿ OBC ಗಳಿಗೆ ಉತ್ತಮ ಪ್ರಾತಿನಿಧ್ಯವನ್ನು ಒದಗಿಸುವ ಮೂಲಕ ಅವರ ನೇಮಕಾತಿ ಮಹತ್ವವನ್ನು ಪಡೆದುಕೊಂಡಿದೆ.

ಮಣಿಪುರ ಹೈಕೋರ್ಟ್

ಈ ಬೆಳವಣಿಗೆಯು ಈ ವರ್ಷದ ಆರಂಭದಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಮಾಡಿದ ಒಂಬತ್ತು ಶಿಫಾರಸುಗಳ ಗುಂಪಿನ ಭಾಗವಾಗಿದೆ. ಅವುಗಳಲ್ಲಿ ಕೆಲವು ಜನವರಿಯಿಂದ ಬಾಕಿ ಉಳಿದಿವೆ; ಕೇಂದ್ರದ ಪ್ರಕ್ರಿಯೆಗಾಗಿ ಕಾಯುತ್ತಿವೆ. ಈ ನ್ಯಾಯಾಧೀಶರ ನೇಮಕದಲ್ಲಿನ ವಿಳಂಬವು ಸುಪ್ರೀಂ ಕೋರ್ಟ್‌ನಿಂದ ಕಳವಳ ಮತ್ತು ಪರಿಶೀಲನೆಗೆ ಪ್ರೇರೇಪಿಸಿತ್ತು. ಈ ಸಮಸ್ಯೆಯನ್ನು ಪರಿಹರಿಸುವ ತುರ್ತು ಅಗತ್ಯವನ್ನು ಒತ್ತಿಹೇಳಿತು.

2018 ರಿಂದ ನೇಮಕಗೊಂಡ 575 ಹೈಕೋರ್ಟ್ ನ್ಯಾಯಾಧೀಶರ ಪೈಕಿ 67 ಒಬಿಸಿ ವರ್ಗಕ್ಕೆ, 17 ಎಸ್‌ಸಿ ವರ್ಗಕ್ಕೆ, 9 ಎಸ್‌ಟಿ ವರ್ಗಕ್ಕೆ ಮತ್ತು 18 ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದವರು ಎಂದು ಮಾರ್ಚ್‌ನಲ್ಲಿ ಲೋಕಸಭೆಯಲ್ಲಿ ಪ್ರಸ್ತುತಪಡಿಸಿದ ಮಾಹಿತಿಯು ಬಹಿರಂಗಪಡಿಸಿದೆ. ಈ ಕ್ರಮವು ಈ ಅಂಕಿಅಂಶಗಳನ್ನು ಮತ್ತಷ್ಟು ಸಮತೋಲನಗೊಳಿಸಲು ಮತ್ತು ನ್ಯಾಯಾಂಗದೊಳಗೆ ಸಮಾನ ಪ್ರಾತಿನಿಧ್ಯವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಸುಪ್ರೀಂ ಕೋರ್ಟ್ ಪ್ರಮುಖ ವಿಚಾರಣೆಗಳ ಹಿನ್ನೆಲೆಯಲ್ಲಿ ಈ ನೇಮಕಾತಿಗಳು ಬಂದಿವೆ. ಇದು ಸಾಂವಿಧಾನಿಕ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರನ್ನು ನೇಮಿಸುವ ಮತ್ತು ವರ್ಗಾವಣೆ ಮಾಡುವ ಕೊಲಿಜಿಯಂನ ಪ್ರಸ್ತಾವನೆಗಳನ್ನು ಪ್ರಕ್ರಿಯೆಗೊಳಿಸುವಲ್ಲಿ ಸರ್ಕಾರದ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಿದೆ. ಸೆಪ್ಟೆಂಬರ್ 26 ರಂದು, ಈ ನೇಮಕಾತಿಗಳ ಪ್ರಕ್ರಿಯೆಯಲ್ಲಿನ ವಿಳಂಬದ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ಕಳವಳವನ್ನು ವ್ಯಕ್ತಪಡಿಸಿತ್ತು ಮತ್ತು ಈ ನಿಟ್ಟಿನಲ್ಲಿ ಸರ್ಕಾರದ ಕ್ರಮಗಳನ್ನು ನಿಯತಕಾಲಿಕವಾಗಿ ಮೌಲ್ಯಮಾಪನ ಮಾಡುವುದಾಗಿ ವಾಗ್ದಾನ ಮಾಡಿತ್ತು.

ಬೆಂಗಳೂರಿನ ವಕೀಲರ ಸಂಘದ ವಕೀಲ ಅಮಿತ್ ಪೈ ಮೂಲಕ ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಾಲಯವು ಪರಿಗಣಿಸಿದೆ. ಇದು ಸರ್ಕಾರದಿಂದ ಬಾಕಿ ಉಳಿದಿರುವ ನೇಮಕಾತಿಗಳು ಮತ್ತು ವಿವರಿಸಲಾಗದ ಹಿಡುವಳಿಗಳ ವಿವಿಧ ನಿದರ್ಶನಗಳನ್ನು ಎತ್ತಿ ತೋರಿಸುತ್ತದೆ.

ದೇಶ

ಗಂಗಾಜಲದ ಮೇಲೆ ಶೇ.18ರಷ್ಟು ಜಿಎಸ್‌ಟಿ ವಿಧಿಸಿರುವ ಬಿಜೆಪಿ ಸರಕಾರವನ್ನು ಕಾಂಗ್ರೆಸ್ ಪಕ್ಷ ಖಂಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಪ್ರವಾಸವಾಗಿ ಇಂದು ಉತ್ತರಾಖಂಡಕ್ಕೆ ತೆರಳಿದ್ದರು. ಅಲ್ಲಿ ಅವರು ಸಾಂಪ್ರದಾಯಿಕ ಬಿಳಿ ಬಟ್ಟೆಗಳನ್ನು ಧರಿಸಿ ಪವಿತ್ರ ಜೋಲಿಂಗ್‌ಕಾಂಗ್‌ ಪರ್ವತದ ಮುಂದೆ ಧ್ಯಾನ ಮಾಡಿದರು.

ಮತ್ತು ಗುಂಜಿ ಗ್ರಾಮಕ್ಕೆ ತೆರಳಿ ಜನರನ್ನು ಉದ್ದೇಶಿಸಿ ಮಾತನಾಡಿದರು. ಜತೆಗೆ 4,200 ಕೋಟಿ ರೂ.ಗಳ ಕಲ್ಯಾಣ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ಪ್ರಧಾನಿ ಮೋದಿ ಉತ್ತರಾಖಂಡ್ ನಲ್ಲಿದ್ದಾಗ ಗಂಗಾಜಲದ ಮೇಲೆ ಶೇ.18ರಷ್ಟು ಜಿಎಸ್‌ಟಿ ತೆರಿಗೆ ವಿಧಿಸಿರುವುದನ್ನು ಕಾಂಗ್ರೆಸ್ ಸೇರಿದಂತೆ ಪಕ್ಷಗಳು ತೀವ್ರವಾಗಿ ಖಂಡಿಸಿವೆ.

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ x ಜಾಲತಾಣದಲ್ಲಿ ಪ್ರಕಟಿಸಿರುವ ಪೋಸ್ಟ್‌ನಲ್ಲಿ, “ನೀವು ಇಂದು ಉತ್ತರಾಖಂಡದಲ್ಲಿ ಇರುವುದು ಉತ್ತಮ. ನಿಮ್ಮ ಸರ್ಕಾರ ಗಂಗಾಜಲಕ್ಕೆ 18% ಜಿಎಸ್‌ಟಿ ವಿಧಿಸಿದೆ. ಮನೆಯಿಂದ ಗಂಗಾಜಲವನ್ನು ಖರೀದಿಸುವವರಿಗೆ ಇದು ಎಂತಹ ಹೊರೆ ಎಂದು ಯೋಚಿಸಲೂ ನನಗೆ ಸಾಧ್ಯವಾಗುತ್ತಿಲ್ಲ.

ಇದು ಜನ ಸಾಮಾನ್ಯರ ಬಗ್ಗೆ ಯೋಚಿಸದ ಬಿಜೆಪಿ ಸರ್ಕಾರದ ಕಪಟತನದ ಪರಮಾವಧಿ” ಎಂದು ಟೀಕಿಸಿದ್ದಾರೆ. ಅಲ್ಲದೆ ಗಂಗಾಜಲದ ಮೇಲಿನ ಜಿಎಸ್‌ಟಿ ತೆರಿಗೆಯನ್ನು ಹಲವು ರಾಜಕೀಯ ಪಕ್ಷಗಳು ತೀವ್ರವಾಗಿ ವಿರೋಧಿಸುತ್ತಿವೆ.

ದೇಶ

ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಂಡ ಬಾಲಕಿಯನ್ನು ರೈಲಿನ ಮುಂದೆ ತಳ್ಳಿ ಹತ್ಯೆಗೆ ಯತ್ನಿಸಿದ ಅಮಾನುಷ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಬರೇಲಿಯಲ್ಲಿ ಈ ಘಟನೆ ನಡೆದಿದೆ. ಕಳೆದ 10 ರಂದು ಒಬ್ಬ ಬಾಲಕಿ ತರಬೇತಿ ಮುಗಿಸಿ ಮನೆಗೆ ಮರಳುತ್ತಿದ್ದಾಗ, ವಿಜಯ್ ಮೌರಿಯಾ ಎಂಬ ವ್ಯಕ್ತಿ ಬಾಲಕಿಯನ್ನು ಅಡ್ಡಗಟ್ಟಿ, ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂದು ಪೊಲೀಸರ ವರದಿಯಲ್ಲಿ ತಿಳಿಸಲಾಗಿದೆ. ಆತನಿಂದ ತಪ್ಪಿಸಿಕೊಂಡು ರೈಲು ಹಳಿಗಳ ಉದ್ದಕ್ಕೂ ಓಡಿ ಬಂದ ಯುವತಿಯನ್ನು ಮೌರಿಯಾ ಬೆನ್ನಟ್ಟಿ ರೈಲಿಗೆ ತಳ್ಳಿ ಕೊಲ್ಲಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಆ ಸಂದರ್ಭದಲ್ಲಿ ಹಾದುಹೋಗುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ಬಾಲಕಿಯ ಒಂದು ಕೈ ಮತ್ತು ಎರಡೂ ಕಾಲುಗಳು ತುಂಡಾಗಿವೆ. ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ಕುರಿತು ಬಾಲಕಿಯ ತಂದೆ ಪೊಲೀಸರಿಗೆ ನೀಡಿದ ದೂರಿನ ಆಧಾರದ ಮೇಲೆ, ಮೌರಿಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಆಪಾದಿತ ಸಹಚರನನ್ನು ಸಾಕ್ಷಿಯಾಗಿ ಸೇರಿಸಿಕೊಳ್ಳಲಾಗಿದೆ.

ಘಟನೆ ಕುರಿತು ದೂರು ನೀಡಿದರೂ ಪೊಲೀಸರು ಯಾವುದೇ ತನಿಖೆ ನಡೆಸಿಲ್ಲ ಎಂದು ಬಾಲಕಿಯ ತಂದೆ ಆರೋಪಿಸಿದ್ದಾರೆ. ಅದನ್ನು ಆಧರಿಸಿ ಕರ್ತವ್ಯದ ವೇಳೆ ನಿರ್ಲಕ್ಷ್ಯ ತೋರಿದ 3 ಪೊಲೀಸರನ್ನು ವಜಾಗೊಳಿಸಲಾಗಿದ್ದು, ಸಂತ್ರಸ್ತ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ ನೀಡುವಂತೆ ರಾಜ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ ಎಂದು ಜಿಲ್ಲಾಧಿಕಾರಿ ರವೀಂದ್ರಕುಮಾರ್ ತಿಳಿಸಿದ್ದಾರೆ.

ಸಂತ್ರಸ್ತ ಬಾಲಕಿಯ ಸ್ಥಿತಿಯ ತೀವ್ರತೆಯನ್ನು ಪರಿಗಣಿಸಿ, ಆಕೆಯನ್ನು ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ರವೀಂದ್ರಕುಮಾರ್ ಹೇಳಿದ್ದಾರೆ.