ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
2023 » Page 9 of 76 » Dynamic Leader
October 23, 2024
Home 2023 (Page 9)
ರಾಜ್ಯ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಂದು ಸಂಜೆ ಪರಿಷತ್ತಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅನಾರೋಗ್ಯದ ಕಾರಣದಿಂದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಜರಾಗುತ್ತಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದರ ಬಗ್ಗೆ ಜೆಡಿಎಸ್ ಕಛೇರಿಯಿಂದ ಹೊರಡಿಸಲಾಗಿರುವ ಮಾನ್ಯ ಮಾಜಿ ಪ್ರಧಾನಮಂತ್ರಿಗಳ ಮಾಧ್ಯಮ ಹೇಳಿಕೆಯಲ್ಲಿ,  “ಕನ್ನಡನಾಡಿನ ಹೆಮ್ಮೆಯ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಂದು ಸಂಜೆ ನನಗಾಗಿ ಪರಿಷತ್ತಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅನಾರೋಗ್ಯದ ಕಾರಣಕ್ಕೆ ಹಾಜರಾಗುತ್ತಿಲ್ಲದಿರುವುದಕ್ಕೆ ವೈಯಕ್ತಿಕವಾಗಿ ನನಗೆ ಬಹಳ ನೋವಿದೆ.

ಇದನ್ನೂ ಓದಿ: ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!

ಕೊಂಚ ಮಟ್ಟಿಗೆ ಅನಾರೋಗ್ಯ ಉಂಟಾಗಿ ದೇಹದಲ್ಲಿ ತುಸು ನಿತ್ರಾಣವಿದೆ. ವೈದ್ಯರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುವಂತೆ ಸಲಹೆ ಮಾಡಿದ್ದಾರೆ.

ಆದರೆ, ಈ ಕಾರ್ಯಕ್ರಮ ಪೂರ್ವ ನಿಗದಿಯಾಗಿರುವ ಕಾರಣಕ್ಕೆ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಎಂ.ಎನ್.ವೆಂಕಟಾಚಲಯ್ಯ ರವರು ಹಾಗೂ ಪರಿಷತ್ ಅಧ್ಯಕ್ಷರು, ನಾಡೋಜ ಡಾ.ಮಹೇಶ್ ಜೋಶಿ ಅವರು ನನ್ನ ಸ್ವಗೃಹಕ್ಕೆ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡುವುದಾಗಿ ತಿಳಿಸಿದ್ದಾರೆ. ಇವರ ಪ್ರೀತಿ, ವಿಶ್ವಾಸಕ್ಕೆ ನಾನು ಕೃತಜ್ಞನಾಗಿದ್ದೇನೆ.

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ಸ್ವೀಕರಿಸುವುದು ಮಹಾನ್ ಭಾಗ್ಯ ಎಂದೇ ನಾನು ಭಾವಿಸಿದ್ದೇನೆ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ‘ರೈತ ಸಾಂತ್ವನ ಯಾತ್ರೆ’ಯನ್ನು ವ್ಯಂಗ್ಯವಾಗಿ ಸ್ವಾಗತ ಮಾಡಿದ ಸಿದ್ದರಾಮಯ್ಯಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ!   

ರಾಜಕೀಯ

ಬೆಂಗಳೂರು: ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆನ್ನೆ ವ್ಯಂಗ್ಯವಾಗಿ ಹೇಳಿದ್ದರು. ಇದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ ಎಂದು ಹೇಳಿದ್ದಾರೆ.

‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರಕಾರ ಎಷ್ಟು ʼಗಂಭೀರ(!?)ʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್‌ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು? ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜತೆ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ! ಅಲ್ಲವೇ? ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!

ಪ್ರತಿಪಕ್ಷಗಳಾಗಿ ನಮ್ಮ ಪ್ರಯತ್ನ ನಾವು ಮಾಡುತ್ತೇವೆ, ಸರಕಾರವಾಗಿ ನಿಮ್ಮ ಸಾಧನೆ ಏನು? ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ? ಸರಕಾರದ ವತಿಯಿಂದ ಎಷ್ಟು ಪರಿಹಾರ ನೀಡಿದ್ದೀರಿ? ಅದನ್ನು ಹೇಳಬೇಕೆ ಹೊರತು, ಮಿತ್ರರ ನಡುವೆ ಹುಳಿ ಹಿಂಡುವ ಉಡಾಳತನ ತಮಗ್ಯಾಕೆ? ಎನ್ನುವುದು ನನ್ನ ವಿನಮ್ರ ಪ್ರಶ್ನೆ. ಎಂದು ಕಿಡಿಕಾರಿದ್ದಾರೆ.

236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ. ಜತೆಗೆ; 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಈ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್‌ ಮಂಡಿಸಿ ‘ವಿಶ್ವವಿಖ್ಯಾತ ವಿತ್ತತಜ್ಞ’ರಾಗಿ ಮೆರೆಯುತ್ತಿರುವವರು ನೀವು. ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ‘ಜೋಪಾನ’ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ? ಎಂದು ಚೇಡಿಸಿದ್ದಾರೆ

ಹೋಗಲಿ, ನೀವು ಈ ರಾಜ್ಯದ ಮುಖ್ಯಮಂತ್ರಿ… ದೆಹಲಿಗೆ ಹೋಗಿ ಪ್ರಧಾನಿಗಳಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಅದನ್ನೂ ಮಾಡಲಿಲ್ಲ, ಪ್ರತಿಷ್ಠೆ ನಿಮಗೆ. ಪ್ರಧಾನಿಗಳನ್ನು ಸದಾ ನಿಂದಿಸುತ್ತಾ ಕುಳಿತರೆ ಲಾಭವೇನು? ಇಲ್ಲಿ ವರ್ಗಾವಣೆ ದಂಧೆ, ಕಮೀಷನ್ ವಸೂಲಿ, ಆಪರೇಷನ್‌ ಹಸ್ತ, ಡಿನ್ನರ್‌-ಬ್ರೇಕ್‌ ಫಾಸ್ಟ್‌ ಮೀಟಿಂಗುಗಳಲ್ಲಿಯೇ ʼಭಾರೀʼ ಬ್ಯುಸಿ‌ ಆಗಿರುವ ನಿಮಗೆ ದೆಹಲಿಗೆ ಜನರ ಅಹವಾಲು ತೆಗೆದುಕೊಂಡು ಹೋಗಲು ಸಮಯವಾದರೂ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ  

ಇದನ್ನೂ ಓದಿ: ಜೆಡಿಎಸ್ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ: ಸಿದ್ದರಾಮಯ್ಯ

ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ? ಮುಖ್ಯಮಂತ್ರಿಯಾಗಿ ನೀವು ರಾಜ್ಯಕ್ಕೆ ಸಂಬಂಧಿಸಿ ಪ್ರಧಾನಿಗಳನ್ನು,‌ ಸಂಬಂಧಿಸಿದ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿ ಆಗಿದ್ದೀರಿ? ಎಷ್ಟು ಅರ್ಜಿ ಕೊಟ್ಟಿದ್ದೀರಿ? ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿನ್ನರ್‌-ಬ್ರೇಕ್‌ ಫಾಸ್ಟ್ ಮೀಟಿಂಗ್‌‌ ಮಾಡಿಕೊಂಡು ಆಪರೇಷನ್‌ ಹಸ್ತದ ಬಗ್ಗೆಯೇ ನಿಮ್ಮ ಸಚಿವರ ಬಳಿ ಅಲವತ್ತುಕೊಳ್ಳುತ್ತಿದ್ದೀರಿ. ಪಂಚರಾಜ್ಯಗಳಿಗೆ ಹಣ ಹಂಚಲು ರಾಜ್ಯವನ್ನು ದೋಚುವುದು ಹೇಗೆಂದು ಗುಟ್ಟು ಗುಟ್ಟಾಗಿ ಪಾಠ ಮಾಡುತ್ತಿದ್ದೀರಿ. ಜೆಡಿಎಸ್‌, ಬಿಜೆಪಿ ಶಾಸಕರು ಹಾಗೂ ಸೋತ ಅಭ್ಯರ್ಥಿಗಳನ್ನು ಆಪರೇಷನ್‌ ಮಾಡಲು ಗುಳ್ಳೆನರಿಗಳಂತೆ ಅವರ ಮನೆಗಳ ಮುಂದೆ ಕತ್ತಲಾದ ಮೇಲೆ ಹೊಂಚು ಹಾಕಿ ಕೂರುತ್ತಿದ್ದೀರಿ ಎಂದು ಕಟಕಿಯಾಡಿದ್ದಾರೆ.

ಕುತ್ತಿಗೆಗೆ ಗ್ಯಾರಂಟಿ ಬೋರ್ಡ್‌ ತಕಲಾಕ್ಕೊಂಡು ಹಾದಿಬೀದಿಯಲ್ಲಿ ಓಡಾಡುತ್ತಿದ್ದೀರಿ. ಐದು ತಿಂಗಳಿಗೇ ಭದ್ರತೆಯ ಗ್ಯಾರಂಟಿ ಇಲ್ಲದೆ ಬಾಲಗ್ರಹಪೀಡಿತ ನಿಮ್ಮ ಸರಕಾರ ಭಿನ್ನಮತಪೀಡಿತವಾಗಿದೆ. ಕುರ್ಚಿ ಉಳಿಸಿಕೊಳ್ಳಲು ನೀವೂ ಹೆಣಗಾಡುತ್ತಿದ್ದೀರಿ. ಹೌದಲ್ಲವೇ? ಆನ್ಸರ್ ಮಾಡಿ ಸನ್ಮಾನ್ಯ  ಸಿದ್ದರಾಮಯ್ಯನವರೇ? ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು

ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ರಾಮಮೂರ್ತಿ ನಗರ ವ್ಯಾಪ್ತಿಯ ಕುವೆಂಪು ನಗರದಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಎಂದಿನಂತೆ ಈ ವರ್ಷವೂ ಅದ್ದೂರಿಯಾಗಿ ಆಚರಿಸಲಾಯಿತು. ಅದೂ ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಈ ವಿಶೇಷ ಸಂದರ್ಭದ ಹಿನ್ನೆಲೆಯಲ್ಲಿ ಬಡಾವಣೆಯ ನಿವಾಸಿಗಳೆಲ್ಲರೂ ಒಂದೆಡೆ ಸೇರಿ ಸಂಭ್ರಮಿಸಿ, ಸಿಹಿ ಹಂಚುವ ಮೂಲಕ ಸಾಂಸ್ಕೃತಿಕವಾಗಿ ಕೊಂಡಾಡಿದ್ದು ವಿಶೇಷವೆನಿಸಿತು.

ಕನ್ನಡ ಧ್ವಜದ ಸುತ್ತಲೂ ಮಕ್ಕಳೆಲ್ಲರೂ ನಿಂತು ದೇಶ ಭಕ್ತಿ ಗೀತೆಗಳನ್ನು ಮತ್ತು ನಾಡ ಗೀತೆಗಳನ್ನು ಮಧುರವಾದ ಧ್ವನಿಯಲ್ಲಿ ಹಾಡಿದ್ದು ಮನಸೆಳೆಯಿತು. ಕುವೆಂಪುನಗರ ಹೌಸ್ ಓನರ್ಸ್ ವೆಲ್ಫೇರ್ ಅಸೋಸಿಯೇಷನ್ ವತಿಯೊಂದ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರುಗಳು ಮತ್ತು ಬಡಾವಣೆಯ ನಿವಾಸಿಗಳೆಲ್ಲರೂ ಭಾಗವಹಿಸಿದ್ದರು.

ಇದನ್ನೂ ಓದಿ: ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!

ದೇಶ ರಾಜಕೀಯ

ಪಾಟ್ನಾ: 1871ರಲ್ಲಿ ಬ್ರಿಟಿಷ್ ಆಳ್ವಿಕೆಯಲ್ಲಿ ಭಾರತದಲ್ಲಿ ಜನಗಣತಿ ನಡೆಸಲಾಯಿತು. ತರುವಾಯ, 1881ರಲ್ಲಿ, ಭಾರತದಲ್ಲಿ ಮೊದಲ ಜಾತಿವಾರು ಜನಗಣತಿಯನ್ನು ನಡೆಸಲಾಯಿತು. ಅದರ ನಂತರ ಅಂತಿಮವಾಗಿ 1931ರಲ್ಲಿ ಜಾತಿವಾರು ಜನಗಣತಿಯನ್ನು ನಡೆಸಲಾಯಿತು. ಸ್ವಾತಂತ್ರ್ಯದ ನಂತರ 1951 ರಲ್ಲಿ ದೇಶವು ತನ್ನ ಮೊದಲ ಜನಗಣತಿಯನ್ನು ನಡೆಸಿತು. ಆದರೆ, ಅದರಲ್ಲಿ ಜಾತಿವಾರು ವಿವರಗಳನ್ನು ತೆಗೆದುಕೊಂಡಿಲ್ಲ.

1931ರ ಜಾತಿವಾರು ಜನಗಣತಿಯ ಪ್ರಕಾರ ಜಾತಿವಾರು ಮೀಸಲಾತಿಯನ್ನು ವರ್ಗೀಕರಿಸಲಾಯಿತು. ಅದು ಇದುವರೆಗೂ ಆಚರಣೆಯಲ್ಲಿದೆ. ಭಾರತದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ 2011ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಷ್ಟ್ರವ್ಯಾಪಿ ಜನಗಣತಿ ನಡೆಸಿ ಪೂರ್ಣಗೊಳಿಸಲಾಯಿತು.

ಆದರೆ, 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಅದನ್ನು ಪ್ರಕಟಿಸಲಿಲ್ಲ. ಈ ಹಿನ್ನಲೆಯಲ್ಲಿ, ಜಾತಿವಾರು ಜನಗಣತಿ ನಡೆಸಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. ಆದರೆ, ಬಿಜೆಪಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿದೆ.

ಏತನ್ಮಧ್ಯೆ, ಜೆಡಿಯು-ಕಾಂಗ್ರೆಸ್-ಆರ್.ಜೆ.ಡಿ ಮೈತ್ರಿ ಸರ್ಕಾರ ಆಡಳಿತವಿರುವ ಬಿಹಾರ ರಾಜ್ಯದಲ್ಲಿ ಕಳೆದ ತಿಂಗಳು ಜಾತಿವಾರು ಜನಗಣತಿ ಬಿಡುಗಡೆ ಮಾಡಲಾಯಿತು. ಇದರ ಬೆನ್ನಲ್ಲೇ ವಿವಿಧ ರಾಜ್ಯಗಳಲ್ಲಿ ಜಾತಿವಾರು ಜನಗಣತಿ ನಡೆಸುವುದಾಗಿ ಘೋಷಿಸಲಾಗಿದೆ. ಈ ಸಮೀಕ್ಷೆಯಿಂದ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢದಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ಮಾತನಾಡುವ ವೇಳೆ, “ಜಾತಿವಾರು ಗಣತಿಯನ್ನು ಬಿಜೆಪಿ ಎಂದಿಗೂ ವಿರೋಧಿಸಿಲ್ಲ “ಎಂದರು. “ಬಿಹಾರದಲ್ಲಿ ನಡೆದ ಜಾತಿವಾರು ಜನಗಣತಿಯಲ್ಲಿ ಯಾದವ ಮತ್ತು ಮುಸ್ಲಿಂ ಸಮುದಾಯದವರ ಸಂಖ್ಯೆ ಹೆಚ್ಚಾಗಿದ್ದು, ಇತರೆ ಸಮುದಾಯಗಳ ಸಂಖ್ಯೆ ಕಡಿಮೆಯಾಗಿದೆ” ಎಂದೂ ಆರೋಪಿಸಿದ್ದಾರೆ.

ಈ ಹಿನ್ನಲೆಯಲ್ಲಿ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಅಮಿತ್ ಶಾ ಅವರ ಆರೋಪವನ್ನು ಖಂಡಿಸಿದ್ದಾರೆ. ಮತ್ತು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಪೋಸ್ಟ್ ನಲ್ಲಿ “ಸುಳ್ಳು ಮತ್ತು ಗೊಂದಲವನ್ನು ಹರಡುವ ಬದಲು, ದಯವಿಟ್ಟು ಇದಕ್ಕೆ ಉತ್ತರಿಸಿ ಅಮಿತ್ ಶಾ ಜೀ” ಎಂದು ಹೇಳಿ 5 ಪ್ರಶ್ನೆಗಳು ಕೇಳಿದ್ದಾರೆ.

1. ಬಿಹಾರದ ಜಾತಿವಾರು ಜನಗಣತಿ ದತ್ತಾಂಶ ತಪ್ಪಾಗಿದ್ದರೆ, ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಲ್ಲಿ ಜಾತಿವಾರು ಜನಗಣತಿ ನಡೆಸಿ ಅದರ ಅಂಕಿ ಸಂಖ್ಯೆ ಮಾಹಿತಿಯನ್ನು ಏಕೆ ಪ್ರಕಟಿಸಲಿಲ್ಲ?

2. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಿಜೆಪಿ ಜಾತಿವಾರು ಜನಗಣತಿಯನ್ನು ಏಕೆ ನಡೆಸಲಿಲ್ಲ?

3. ಕೇಂದ್ರ ಸರ್ಕಾರದಲ್ಲಿ ಎಷ್ಟು ಕ್ಯಾಬಿನೆಟ್ ಮಂತ್ರಿಗಳು 𝐎𝐁𝐂 / 𝐒𝐂 / 𝐒𝐓 ವರ್ಗಕ್ಕೆ ಸೇರಿದ್ದಾರೆ ಮತ್ತು ಎಷ್ಟು ಮಂದಿ 𝐎𝐁𝐂 / 𝐒𝐂 / 𝐒𝐓 ವರ್ಗಕ್ಕೆ ಸೇರಿದವರಲ್ಲ; ಪಟ್ಟಿಯನ್ನು ಪ್ರಕಟಿಸಿ. ಹೀಗಿದ್ದರೂ ಅವರಿಗೆ ಏಕೆ ಅಮುಖ್ಯ ಇಲಾಖೆಗಳನ್ನು ನೀಡಲಾಗಿದೆ.

4. 𝐎𝐁𝐂 / 𝐒𝐂 / 𝐒𝐓 ಬಣದಿಂದ ಎಷ್ಟು ಬಿಜೆಪಿ ಮುಖ್ಯಮಂತ್ರಿಗಳಿದ್ದಾರೆ? ಹಿಂದುಳಿದ ಮತ್ತು ಹಿಂದುಳಿದವರಲ್ಲದ ಮುಖ್ಯಮಂತ್ರಿಗಳ ಹೋಲಿಕೆ ಮಾಡಿ ಶೇಕಡಾವಾರು ಪ್ರಮಾಣವನ್ನು ತಿಳಿಸಿ.

5. ಕೇಂದ್ರ ಕ್ಯಾಬಿನೆಟ್ ಮಂತ್ರಿಗಳಲ್ಲಿ ಬಿಹಾರದಿಂದ ಎಷ್ಟು ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ಮಂತ್ರಿಗಳು ಇದ್ದಾರೆ? ಶೂನ್ಯವೇ 𝟎 ?

ಈ ಪ್ರಶ್ನೆಗಳಿಗೆ ಉತ್ತರಿಸುವುದರಿಂದ ನಿಮ್ಮನ್ನೂ ಸೇರಿಸಿ 8𝟓% ಹಿಂದುಳಿದ ಮತ್ತು ದಲಿತ ಹಿಂದೂಗಳ ಕಣ್ಣು ತೆರೆಯುತ್ತದೆ.” ಎಂದು ಉಲ್ಲೇಖಿಸಿದ್ದಾರೆ.

ವಿದೇಶ

ಮಾಸ್ಕೋ: ಬಲ್ಗೇರಿಯಾ ದೇಶಕ್ಕೆ ಸೇರಿದವರು ಬಾಬಾ ವಂಗಾ. ಉತ್ತರ ಮ್ಯಾಸಿಡೋನಿಯಾದಲ್ಲಿ 1911ರಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಲ್ಲೇ ತೀವ್ರ ಚಂಡಮಾರುತದಲ್ಲಿ ಸಿಕ್ಕಿಬಿದ್ದ ಅವರು ತನ್ನ ದೃಷ್ಟಿಯನ್ನು ಕಳೆದುಕೊಂಡಿದ್ದರು. ಅದರಿಂದ ಅವರು ಭವಿಷ್ಯವನ್ನು ಊಹಿಸುವ ಶಕ್ತಿಯನ್ನು ಪಡೆದುಕೊಂಡಿದ್ದರು ಎಂದು ಹೇಳಲಾಗುತ್ತದೆ. ಅವರು 1996ರಲ್ಲಿ ನಿಧನರಾದರು.

ಪ್ರಪಂಚದ ವಿದ್ಯಮಾನಗಳ ಬಗ್ಗೆ ಅವರು ಭವಿಷ್ಯ ನುಡಿದ ಶೇಕಡಾ 85ರಷ್ಟು ನಿಜವಾಗಿದೆ ಎಂದು ಹೇಳಲಾಗುತ್ತದೆ. ವಿಶೇಷವಾಗಿ ಚೆರ್ನೋಬಿಲ್ ಪರಮಾಣು ರಿಯಾಕ್ಟರ್ ಅಪಘಾತ, ಇಂಗ್ಲೆಂಡ್‌ನ ರಾಜಕುಮಾರಿ ಡಯಾನಾ ಸಾವು, ಸೋವಿಯತ್ ಒಕ್ಕೂಟದ ವಿಸರ್ಜನೆ ಮತ್ತು ಅಮೆರಿಕ ಅವಳಿ ಗೋಪುರಗಳ ಮೇಲಿನ ದಾಳಿಗಳು ನಿಜವಾಗಿವೆ.

ಈ ಹಿನ್ನಲೆಯಲ್ಲಿ, ಮುಂಬರುವ 2024ರಲ್ಲಿ ಅವರು ಏಳು ಭವಿಷ್ಯವಾಣಿಗಳನ್ನು ನುಡಿದಿದ್ದಾರೆ ಎಂದು ಸುದ್ದಿ ಸಂಸ್ಥೆ ಡೈಲಿ ಸ್ಟಾರ್ ವರದಿ ಮಾಡಿದೆ. ಅವುಗಳನ್ನು ಈ ಕೆಳಗಿನಂತೆ ನೋಡೋಣ.

2024ರಲ್ಲಿ ಭೂಕಂಪ, ಅಗ್ನಿ ಮತ್ತು ಪ್ರವಾಹದಂತಹ ಅನೇಕ ನೈಸರ್ಗಿಕ ವಿಕೋಪಗಳು ಸಂಭವಿಸುತ್ತವೆ. ಕ್ಯಾನ್ಸರ್‌ಗೆ ಮದ್ದು ಕಂಡು ಹಿಡಿಯಲಾಗುವುದು. ಕ್ವಾಂಟಮ್ ಕಂಪ್ಯೂಟರ್‌ಗಳ ಅಭಿವೃದ್ಧಿಯಲ್ಲಿ ಗಮನಾರ್ಹ ಪ್ರಗತಿಗಳು ಸಂಭವಿಸುತ್ತವೆ. ರಷ್ಯಾದ ಅಧ್ಯಕ್ಷ ಪುಟಿನ್ ತನ್ನ ದೇಶದವನೊಬ್ಬನಿಂದ ಹತ್ಯೆಯಾಗುತ್ತಾರೆ.

ಯುರೋಪಿನಲ್ಲಿ ಭಯೋತ್ಪಾದಕರ ದಾಳಿ ಹೆಚ್ಚಾಗಿರುತ್ತದೆ. ಮತ್ತು ಒಂದು “ಪ್ರಮುಖ ದೇಶ” ಮುಂದಿನ ವರ್ಷ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಗಳು ಮತ್ತು ದಾಳಿಗಳನ್ನು ನಡೆಸುತ್ತದೆ. ದೊಡ್ಡ ಆರ್ಥಿಕ ಬಿಕ್ಕಟ್ಟು ಉಂಟಾಗಲಿದೆ. ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ನಿಗೂಢ ಕಾಯಿಲೆಯಿಂದ ಬಳಲಲಿದ್ದಾರೆ.

ಸೈಬರ್ ದಾಳಿಗಳು ಹೆಚ್ಚಾಗುತ್ತವೆ. ಹ್ಯಾಕರ್‌ಗಳು ಹೆಚ್ಚು ಅತ್ಯಾಧುನಿಕರಾಗುತ್ತಾರೆ ಮತ್ತು ಪವರ್ ಗ್ರಿಡ್‌ಗಳು ಹಾಗೂ ನೀರಿನ ಸಂಸ್ಕರಣಾ ಘಟಕಗಳಂತಹ ನಿರ್ಣಾಯಕ ಮೂಲಸೌಕರ್ಯಗಳನ್ನು ಗುರಿಯಾಗಿಸುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಬಾಬಾ ವಂಗಾ ಅವರ ಭವಿಷ್ಯವಾಣಿಗಳು ಪ್ರತಿ ವರ್ಷವೂ ಸಾಮಾಜಿಕ ಮಾಧ್ಯಮದಲ್ಲಿ ಮುಖ್ಯಾಂಶಗಳಾಗಿ ಹರಿದಾಡುತ್ತವೆ ಎಂಬುದು ಗಮನಾರ್ಹ.

ದೇಶ ರಾಜಕೀಯ

ಸಿಯೋನಿ: ಮಧ್ಯಪ್ರದೇಶದ ಸಿಯೋನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವಿಲ್ಲ ಎಂದು ಹೇಳಿದ್ದಾರೆ.

“ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ನಮ್ಮ ದೇಶದ ಜನರನ್ನು ಉಳಿಸಲು ನಾವು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿದ್ದೇವೆ. ಮತ್ತು ಬಡವರು ಆಹಾರದ ಕೊರತೆಯಿಂದ ಬಳಲದಂತೆ ನಾವು ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ. ಅದಕ್ಕಾಗಿಯೇ ನಾವು ಜನರಿಗೆ ಉಚಿತ ಪಡಿತರ ವಸ್ತುಗಳನ್ನು ನೀಡಿದವು.

ಗರೀಬ್ ಕಲ್ಯಾಣ್ ಯೋಜನೆಯಡಿ ಉಚಿತ ಆಹಾರ ಧಾನ್ಯಗಳ ವಿತರಣೆಯು ಡಿಸೆಂಬರ್‌ನಲ್ಲಿ ಕೊನೆಗೊಳ್ಳಲಿದೆ. ಆದರೆ ಬಡವರ ನೋವನ್ನು ಅರಿತು ಡಿಸೆಂಬರ್ ನಂತರ ಮುಂದಿನ ಐದು ವರ್ಷಗಳ ಕಾಲ ಒದಗಿಸಲು ನಿರ್ಧರಿಸಿದ್ದೇವೆ.

ನಾನು ಬಡತನದಿಂದ ಎದ್ದು ಬಂದಿದ್ದೇನೆ. ಬಡತನ ಎಂದರೆ ಏನು ಎಂಬುದನ್ನು ಪುಸ್ತಕಗಳಲ್ಲಿ ಓದುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಆದಿವಾಸಿಗಳ ಕಲ್ಯಾಣದ ಬಗ್ಗೆ ಕಾಳಜಿ ಇಲ್ಲ. ಸ್ವಾತಂತ್ರ್ಯಾ ನಂತರ 60 ವರ್ಷಗಳ ಕಾಲ ಕಾಂಗ್ರೆಸ್ ಆಡಳಿತದಲ್ಲಿ ಆದಿವಾಸಿಗಳಿಗೆ ಯಾವುದೇ ಒಳಿತಾಗಲಿಲ್ಲ.

2014ರ ಮೊದಲು ಕಾಂಗ್ರೆಸ್ ಆಡಳಿತದಲ್ಲಿ ಪ್ರತಿ ಯೋಜನೆಯಲ್ಲಿ ಹಲವು ಲಕ್ಷ ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ. ಈಗ ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಇಲ್ಲ. ಬಡವರ ಹಕ್ಕುಗಳಿಗಾಗಿ ನಾವು ಉಳಿಸಿದ ಹಣವನ್ನು ಈಗ ಬಡವರಿಗಾಗಿ ಖರ್ಚು ಮಾಡಲಾಗುತ್ತಿದೆ. ಇದುವೇ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ನಡುವಿನ ದೊಡ್ಡ ವ್ಯತ್ಯಾಸವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಇದಕ್ಕೂ ಮುನ್ನ ಛತ್ತೀಸ್‌ಗಢದ ಬಮಲೇಶ್ವರಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು. ಅವರನ್ನು ದೇವಸ್ಥಾನದ ಆಡಳಿತ ಮಂಡಳಿಯವರು ಸ್ವಾಗತಿಸಿದರು.

ರಾಜಕೀಯ

ಬೆಂಗಳೂರು: ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಬಿಜೆಪಿ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ಹೇಳಿದ್ದಾರೆ.

ಹೊಸ ಬೆಳವಣಿಗೆಯಲ್ಲಿ ಸನ್ಮಾನ್ಯ ಹೆಚ್.ಡಿ.ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊತೆ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ.33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ ರೂ.17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಬಿಜೆಪಿ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ ಎಂದು ಕಿಡಿಕಾರಿದ್ದಾರೆ.

ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದು ವ್ಯಂಗ್ಯವಾಡಿದ್ದಾರೆ.

ದೇಶ

ಖಲಿಸ್ತಾನ್ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್ ಬಿಡುಗಡೆ ಮಾಡಿರುವ ಹೊಸ ವಿಡಿಯೋದಲ್ಲಿ, “ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವವರು ಅಪಾಯಕ್ಕೆ ಸಿಲುಕಲಿದ್ದಾರೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸದಂತೆ ನಾವು ಸಿಖ್ಖರನ್ನು ವಿನಂತಿಸುತ್ತೇವೆ. ಅಂದು ಅಂತಾರಾಷ್ಟ್ರೀಯ ದಿಗ್ಬಂಧನ ನಡೆಯಲಿದೆ. ನೀವು ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದರೆ ನಿಮ್ಮ ಜೀವಕ್ಕೆ ಅಪಾಯವಿದೆ” ಎಂದು ಅವರು ಹೇಳಿದ್ದಾರೆ.

ನವೆಂಬರ್ 19 ರಂದು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಚ್ಚಲಾಗುವುದು ಮತ್ತು ಅದರ ಹೆಸರನ್ನು ಬದಲಾಯಿಸಲಾಗುವುದು ಎಂದೂ ಅವರು ಹೇಳಿದ್ದಾರೆ. ನವೆಂಬರ್ 19 ರಂದು ಭಾರತದಲ್ಲಿ ಐ.ಸಿ.ಸಿ ನಡೆಸಲಿರುವ ವಿಶ್ವಕಪ್ 2023 ಕ್ರಿಕೆಟ್ ಸರಣಿಯ ಅಂತಿಮ ಪಂದ್ಯ ನಡೆಯಲಿದೆ ಎಂಬುದು ಗಮನಾರ್ಹ.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಕಳೆದ ಅಕ್ಟೋಬರ್ 17 ರಂದು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಹಲಸೂರು ಪೊಲೀಸರು ಇಬ್ಬರ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆಯ ವೇಳೆ ಅವರುಗಳು ನೀಡಿದ ಮಾಹಿತಿಯ ಮೇರೆಗೆ 5 ಲಕ್ಷ 50 ಸಾವಿರ ರೂಪಯಿಗಳ ಮೌಲ್ಯದ 3 ದ್ವಿಚಕ್ರ ವಾಹನ, ಲೆನೋವಾ ಲ್ಯಾಪ್ ಟಾಪ್, ವಿವಿಧ ಕಂಪನಿಯ 9 ಮೊಬೈಲ್ ಫೋನ್ ಗಳು ಹಾಗೂ ಒಂದು ಸ್ಮಾರ್ಟ್ ವಾಚನ್ನು ವಶಪಡಿಸಿಕೊಳ್ಳಲಾಯಿತು.

ವಶಕ್ಕೆ ಪಡೆದ ವ್ಯಕ್ತಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಹಲಸೂರು ಪೊಲೀಸ್ ಠಾಣೆಯಲ್ಲಿ ಒಟ್ಟು ಮೂರು ಪ್ರಕರಣಗಳು, ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಮತ್ತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು.

ದಸ್ತಗಿರಿ ಮಾಡಿದ ಇಬ್ಬರ ಪೈಕಿ ಒಬ್ಬ ವ್ಯಕ್ತಿ ಈ ಹಿಂದೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ, ಪುಲಿಕೇಶಿನಗರ, ಭಾರತಿನಗರ, ಹೆಬ್ಬಾಳ, ಕೆ.ಆರ್.ಪುರಂ, ಹೆಣ್ಣೂರು, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರಾಬರಿ ಪ್ರಕರಣ ಸೇರಿದಂತೆ ಒಟ್ಟು 10 ಪ್ರಕರಣಗಳು ದಾಖಲಾಗಿದ್ದು ಕಂಡುಬಂದಿರುತ್ತದೆ.

ಈ ಕಾರ್ಯಚರಣೆಯನ್ನು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಿ.ದೇವರಾಜ್ ರವರ ಮಾರ್ಗದರ್ಶನದಲ್ಲಿ ಹಲಸೂರು ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಬಿ.ರಾಮಚಂದ್ರ ರವರ ನೇತೃತ್ವದಲ್ಲಿ ಹಲಸೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಕೆ.ಸಂತೋಷ್ ಹಾಗೂ ಸಿಬ್ಬಂಧಿ ವರ್ಗದವರು ಈ ಪ್ರಕರಣ ಬೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.  

ವಿದೇಶ

ಹಮಾಸ್‌ನ ಹಿರಿಯ ಅಧಿಕಾರಿ ಅಲಿ ಬರಾಕಾ ಮಾತನಾಡಿ, ಸೋವಿಯತ್ ರಷ್ಯಾದಂತೆ ಅಮೆರಿಕವೂ ಮುಂದೊಂದು ದಿನ ಕುಸಿಯಲಿದೆ. ಇಸ್ರೇಲ್-ಹಮಾಸ್ ಯುದ್ಧದಲ್ಲಿ ಅಮೆರಿಕ ಇಸ್ರೇಲ್ ಅನ್ನು ಬೆಂಬಲಿಸುತ್ತಿದೆ. ಇದರಿಂದ ಪ್ಯಾಲೆಸ್ತೀನ್ ನಲ್ಲಿ ಇಸ್ರೇಲ್ ಸೇನೆ ಕ್ರೂರ ದಾಳಿ ನಡೆಸುತ್ತಿದೆ.

ಈ ಹಿನ್ನಲೆಯಲ್ಲಿ, ಹಮಾಸ್ ಸಂಘಟನೆಯ ಹಿರಿಯ ಅಧಿಕಾರಿ ಅಲಿ ಬರಾಕಾ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ, ‘ಸೋವಿಯತ್ ರಷ್ಯಾದಂತೆ ಅಮೆರಿಕ ಒಡೆಯುತ್ತದೆ. ಅಮೆರಿಕದ ಶತ್ರು ರಾಷ್ಟ್ರಗಳೆಲ್ಲ ಒಂದಾಗಲು ಸಮಾಲೋಚನೆ ನಡೆಸಲಾಗುತ್ತಿದೆ. ಅವರೆಲ್ಲರೂ ಒಟ್ಟಾಗಿ ಯುದ್ಧಕ್ಕೆ ಮುಂದಾದರೆ ಅಮೆರಿಕಕ್ಕೆ ಭಾರಿ ನಷ್ಟವಾಗುತ್ತದೆ.

ಅಮೇರಿಕ ಪ್ರಬಲ ರಾಷ್ಟ್ರವಾಗಿ ಇರುವುದಿಲ್ಲ. ಅಮೆರಿಕದ ಮೇಲೆ ದಾಳಿ ಮಾಡಿದ್ದಕ್ಕಾಗಿ ನಾನು ಉತ್ತರ ಕೊರಿಯಾವನ್ನು ಶ್ಲಾಘಿಸುತ್ತೇನೆ. ಅಮೆರಿಕದ ಮೇಲೆ ದಾಳಿ ಮಾಡುವ ವಿಶ್ವದ ಏಕೈಕ ವ್ಯಕ್ತಿ ಎಂದರೆ ಅದು ಉತ್ತರ ಕೊರಿಯಾದ ನಾಯಕ ಮಾತ್ರ. ಅಮೆರಿಕ ಮೇಲೆ ದಾಳಿ ಮಾಡುವ ಸಾಮರ್ಥ್ಯವನ್ನು ಉತ್ತರ ಕೊರಿಯಾ ಹೊಂದಿರುವುದರಿಂದ, ಉತ್ತರ ಕೊರಿಯಾ ಕೂಡ ನಮ್ಮ ಮೈತ್ರಿಗೆ ಸೇರಬಹುದು.

ಹಮಾಸ್ ನಿಯೋಗ ಇತ್ತೀಚೆಗೆ ರಷ್ಯಾದ ಮಾಸ್ಕೋಗೆ ಭೇಟಿ ನೀಡಿತ್ತು; ಅದೇ ರೀತಿ ಚೀನಾಕ್ಕೆ ಹೋಗುತ್ತದೆ. ಇರಾನ್‌ಗೆ ಅಮೆರಿಕದ ಮೇಲೆ ದಾಳಿ ಮಾಡುವ ಸಾಮರ್ಥ್ಯ ಇಲ್ಲ. ಈ ಯುದ್ಧದಲ್ಲಿ ಇರಾನ್ ಮಧ್ಯಪ್ರವೇಶಿಸಿದರೆ, ಅದು ಜಿಯೋನಿಸ್ಟ್ ಸಂಘಟನೆ ಮತ್ತು ಅಮೆರಿಕದ ನೆಲೆಗಳ ಮೇಲೆ ದಾಳಿ ಮಾಡುತ್ತದೆ. ಆದರೆ ಇರಾನ್ ಬಳಿ ಸಾಕಷ್ಟು ಶಸ್ತ್ರಾಸ್ತ್ರಗಳಿಲ್ಲ.’ ಎಂದು ಹೇಳಿದರು.