ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
January 2024 » Page 4 of 8 » Dynamic Leader
October 23, 2024
Home 2024 January (Page 4)
ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ಹೇಳಿದರು.

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.

ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ರಾಯಣ್ಣ ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಸಿನಿಮಾ

ಅರುಣ್ ಜಿ     

ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ ಜನವರಿ 26 ರಂದು ತೆರೆ ಕಾಣಲಿದೆ!

ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ಅಭಿಜಿತ್ ಮಹೇಶ್ ನಿರ್ದೇಶನದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಬ್ಯಾಚುಲರ್ ಪಾರ್ಟಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಪಂಚಿಂಗ್ ಡೈಲಾಗ್‌ಗಳ ಮೂಲಕ ಟ್ರೇಲರ್ ಎಲ್ಲರನ್ನೂ ಮೋಡಿ ಮಾಡುತ್ತಿದೆ‌. ಟ್ರೇಲರ್ ಬಿಡುಗಡೆಯ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಾನು ಕಿರುಚಿತ್ರ ಮಾಡುತ್ತಿದ್ದ ಸಮಯದಲ್ಲಿ ನನಗೆ ಅಭಿಜಿತ್ ಮಹೇಶ್ ಪರಿಚಯವಾದರು. “ಕಿರಿಕ ಪಾರ್ಟಿ”, “ಅವನೇ ಶ್ರೀಮನ್ನಾರಾಯಣ” ಚಿತ್ರಗಳಲ್ಲಿ ಒನ್ ಲೈನ್ ಪಂಚಿಂಗ್ ಡೈಲಾಗ್‌ಗಳು ಅಭಿಜಿತ್ ಅವರ ಕೊಡುಗೆ. ಅಂತಹ ಅದ್ಭುತ ಪ್ರತಿಭೆ ಅವರು. ಆಗಿನಿಂದಲೂ ನಾನು ಅಭಿಜಿತ್ ಅವರಿಗೆ ನಿರ್ದೇಶನ ಮಾಡಲು ಹೇಳುತ್ತಿದ್ದೆ. ಈಗ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇನ್ನೂ ದಿಗಂತ್ ಹಾಗೂ ಯೋಗಿ ಇಬ್ಬರು ಅದ್ಭುತ ಕಲಾವಿದರು. ನಾನು ಅವರಿಬ್ಬರ ಚಿತ್ರಗಳನ್ನು ನೋಡಿ ಬಹಳ ಇಷ್ಟಪಟ್ಟಿದ್ದೇನೆ. ಈ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸಿದ್ದಾರೆ. ಒಟ್ಟಾರೆ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇದೇ ಜನವರಿ 26 ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕ ರಕ್ಷಿತ್ ಶೆಟ್ಟಿ.

ಲಾಕ್ ಡೌನ್ ಸಮಯದಲ್ಲಿ ಈ ಸಿನಿಮಾದ ಕಥೆ ಹುಟ್ಟಿದ್ದು ಎಂದು ಮಾತನಾಡಿದ ನಿರ್ದೇಶಕ ಅಭಿಜಿತ್ ಮಹೇಶ್, ಇದೊಂದು ಪಕ್ಕಾ ಎಂಟರ್ ಟೈನರ್ ಸಿನಿಮಾ. ಪ್ರೇಕ್ಷಕರು ಕೊಡುವ ದುಡ್ಡಿಗೆ ಖಂಡಿತ ಮೋಸ ಆಗುವುದಿಲ್ಲ. ನಿರ್ದೇಶನ ಮಾಡಲು ಅವಕಾಶ ನೀಡಿದ ರಕ್ಷಿತ್ ಶೆಟ್ಟಿ ಅವರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಎಂದರು.

ನನ್ನ ಪಾತ್ರ ರಿಷಭ್ ಶೆಟ್ಟಿ ಅವರು ಮಾಡಬೇಕಿತ್ತು. ಅವರು “ಕಾಂತಾರ”ದಲ್ಲಿ ಬ್ಯುಸಿಯಾದ ಕಾರಣ ನಾನು ಈ ಚಿತ್ರದಲ್ಲಿ ನಟಿಸಿದ್ದೇನೆ. ಪಾತ್ರ ತುಂಬಾ ಚೆನ್ನಾಗಿದೆ. ನಾನು ಹಾಗೂ ದಿಗಂತ್ ಹದಿನೈದು ವರ್ಷಗಳ ಸ್ನೇಹಿತರು. ಆದರೆ ಒಂದು ಚಿತ್ರದಲ್ಲೂ ಒಟ್ಟಿಗೆ ನಟಿಸಿರಲಿಲ್ಲ. ಈ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸಿರುವುದು ಖುಷಿಯಾಗಿದೆ ಎಂದರು ಲೂಸ್ ಮಾದ ಯೋಗಿ.

ಪರಂವಃ ಸ್ಟುಡಿಯೋಸ್‌ನಲ್ಲಿ ನನ್ನದು ಇದು ಎರಡನೇ ಚಿತ್ರ. ಯೋಗಿ ಹಾಗೂ ನಾನು ಒಟ್ಟಿಗೆ ನಟಿಸಿರುವ ಮೊದಲ ಚಿತ್ರ. ಅಭಿಜಿತ್ ಮಹೇಶ್ ಅವರ ನಿರ್ದೇಶನದಲ್ಲಿ ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. ಚಿತ್ರೀಕರಣದ ಸಮಯ ತುಂಬಾ ಸಂತಸಮಯವಾಗಿತ್ತು ಎಂದರು ದಿಗಂತ್.

ಈ ಚಿತ್ರಕ್ಕೆ ಬೆಂಗಳೂರು ಅಷ್ಟೇ ಅಲ್ಲದೆ, ಥೈಲ್ಯಾಂಡ್, ಬ್ಯಾಂಕಾಕ್‌ನಲ್ಲೂ ಹೆಚ್ಚಿನ ಚಿತ್ರೀಕರಣವಾಗಿದೆ. ನಾನು, ಯೋಗಿ ಹಾಗೂ ದಿಗಂತ್ ಅಲ್ಲಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದೆವು. ಇಬ್ಬರು ಒಳ್ಳೆಯ ನಟರು. ಅಭಿಜಿತ್ ಅವರು ಪ್ರತಿಭಾವಂತ ನಿರ್ದೇಶಕ. ಎಲ್ಲರೂ “ಬ್ಯಾಚುಲರ್ ಪಾರ್ಟಿ” ನೋಡಿ; ಪ್ರೋತ್ಸಾಹ ನೀಡಿ ಎಂದು ನಟ ಅಚ್ಯುತ ಕುಮಾರ್ ತಿಳಿಸಿದರು.

ಸಂಗೀತ ನಿರ್ದೇಶಕ ಅರ್ಜುನ್ ರಾಮ್, ಛಾಯಾಗ್ರಾಹಕ ಅರವಿಂದ್ ಕಶ್ಯಪ್, ಕಾಸ್ಟ್ಯೂಮ್ ಡಿಸೈನರ್ ಅರುಂಧತಿ ಹಾಗೂ ಪರಂವಃ ಸಂಸ್ಥೆಯ ಸಿಇಓ ಶ್ರೀನಿ ಶೆಟ್ಟಿ “ಬ್ಯಾಚುಲರ್ ಪಾರ್ಟಿ” ಚಿತ್ರದ ಕುರಿತು ಮಾತನಾಡಿದರು.

ಸಿನಿಮಾ

ಅರುಣ್ ಜಿ  

ಸಂಕ್ರಾಂತಿ ಹಬ್ಬದಂದು ಆರಂಭವಾದ ಈ ಚಿತ್ರಕ್ಕೆ ಯೋಗರಾಜ್ ಭಟ್ಟರ ಶಿಷ್ಯ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶನ.

ಮಕರ ಸಂಕ್ರಾಂತಿ ಪರ್ವದಿನದಂದು ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಯೋಗರಾಜ್ ಭಟ್, ವಿದ್ಯಾ ಹಾಗೂ ಸಂತೋಷ್ ಕುಮಾರ ಅವರು ನಿರ್ಮಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಮುಹೂರ್ತ ಸಮಾರಂಭ ಜೆ.ಪಿ.ನಗರದ ಶ್ರೀ ವಿನಾಯಕ ಸತ್ಯ ಗಣಪತಿ ಶಿರಡಿ ಸಾಯಿಬಾಬ ದೇವಸ್ಥಾನದಲ್ಲಿ ನೆರವೇರಿತು. ಯೋಗರಾಜ್ ಭಟ್ ಅವರ ಜೊತೆ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದಲ್ಲಿ  “ಕಾಮಿಡಿ ಕಿಲಾಡಿಗಳು” ಸೀಸನ್ 2 ವಿಜೇತ ಮನು ಮಡೆನೂರ್ ನಾಯಕನಾಗಿ ನಟಿಸುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್ ಈ ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು.

“ಕುಲದಲ್ಲಿ ಕೀಳ್ಯಾವುದೋ” ಅಚ್ಚ ಕನ್ನಡದ ಶೀರ್ಷಿಕೆ ಎಂದು ಮಾತು ಆರಂಭಿಸಿದ ಯೋಗರಾಜ್ ಭಟ್,  ಈಗಲೂ ಎಲ್ಲಾ ಆರ್ಕೆಸ್ಟ್ರಾಗಳಲ್ಲಿ ಹೇಳುವ ಕೊನೆಯ ಮಂಗಳಗೀತೆಯೂ ಹೌದು. ಈ ಶೀರ್ಷಿಕೆ ನಾಲ್ಕು ವರ್ಷಗಳಿಂದ ನನ್ನ ಹತ್ತಿರವಿತ್ತು. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿರುವ ಯೋಗಿ ಗೌಡ ಮತ್ತು ನಿರ್ದೇಶನ ಮಾಡುತ್ತಿರುವ ಶ್ರೇಯಸ್ ಈ ಚಿತ್ರದ ಕಥೆ ಬಗ್ಗೆ ಹೇಳಿದಾಗ ಈ ಶೀರ್ಷಿಕೆ  ಇಡಲು ಹೇಳಿದೆ. ಅವರು ಒಪ್ಪಿದರು. ನಾನು, ಸಂತೋಷ್ ಕುಮಾರ್ ಹಾಗೂ ವಿದ್ಯಾ ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಮನು ಮಡೆನೂರ್ ನಾಯಕನಾಗಿ, ಸೋನಾಲ್ ಮೊಂತೆರೊ ನಾಯಕಿಯಾಗಿ, ದಿಗಂತ್, ರಂಗಾಯಣ ರಘು, ಶರತ್ ಲೋಹಿತಾಶ್ವ, ಮೌನ ಗುಡ್ಡೆಮನೆ ಪ್ರಮುಖ ಪಾತ್ರಧಾರಿಗಳಾಗಿ ನಟಿಸುತ್ತಿದ್ದಾರೆ. ಮನೋಮೂರ್ತಿ ಅವರ ಸಂಗೀತ ನಿರ್ದೇಶನ ಹಾಗೂ ನಿರಂಜನ್ ಬಾಬು ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ ಎಂದರು.

ಇದು 1970ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಮೊದಲು ಮನು ಮಡೆನೂರ್ ಅವರಿಗೆ ಕಾಮಿಡಿ ಜಾನರ್ ನ ಕಥೆ ಮಾಡುವುದು ಅಂದುಕೊಂಡಿದ್ದೆ. ಮನು ಅವರನ್ನು ಈಗಾಗಲೇ ಕಾಮಿಡಿ ಮೂಲಕವೇ ಜನರು ಗುರುತಿಸಿದ್ದಾರೆ. ಹಾಗಾಗಿ ಆ ಜಾನರ್ ಬೇಡ. ಬೇರೆ ಜಾನರ್ ನ ಕಥೆ ಮಾಡೋಣ ಅಂದುಕೊಂಡು ಈ ಕಥೆ ಸಿದ್ದಮಾಡಿಕೊಂಡಿದ್ದೇನೆ. ಚಿತ್ರದ ಕಥೆ ಸಿದ್ದವಾಯಿತು. ಕ್ಲೈಮ್ಯಾಕ್ಸ್ ಬಗ್ಗೆ ಯೋಚಿಸುತ್ತಿದ್ದೆ. ಗುರುಗಳಾದ ಯೋಗರಾಜ್ ಭಟ್ ಅವರು ಅದ್ಭುತ ಕ್ಲೈಮ್ಯಾಕ್ಸ್ ನೀಡಿದ್ದಾರೆ ಎಂದರು ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಯೋಗಿ ಗೌಡ.

ನನಗೆ ಮಧ್ಯರಾತ್ರಿ ಸಮಯದಲ್ಲಿ ಯೋಗರಾಜ್ ಸಿನಿಮಾಸ್ ನಿಂದ ಕರೆಮಾಡಿ ನೀವೇ ಈ ಚಿತ್ರವನ್ನು ನಿರ್ದೇಶನ ಮಾಡಬೇಕೆಂದು ಹೇಳಿದಾಗ ಆಶ್ಚರ್ಯವಾಯಿತು. ಅವರು ನಂಬಿ ಕೊಟ್ಟಿರುವ ಕಾರ್ಯವನ್ನು ಶ್ರದ್ಧೆಯಿಂದ ಮಾಡುವುದಾಗಿ ನಿರ್ದೇಶಕ ಶ್ರೇಯಸ್ ರಾಜ್ ಶೆಟ್ಟಿ ಹೇಳಿದರು.

ನಾನು ಈ ಮಟ್ಟಕ್ಕೆ ಏರಲು ಕಾರಣ “ಕಾಮಿಡಿ ಕಿಲಾಡಿಗಳು” ಕಾರ್ಯಕ್ರಮ. ಈ ಸಂದರ್ಭದಲ್ಲಿ ನಾನು ಜಗ್ಗೇಶ್, ರಕ್ಷಿತ ಹಾಗೂ ಯೋಗರಾಜ್ ಭಟ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ಇನ್ನು ನನ್ನ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವ ಯೋಗರಾಜ್ ಭಟ್, ಸಂತೋಷ್ ಕುಮಾರ್ ಹಾಗೂ ವಿದ್ಯಾ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ ಎಂದು ನಾಯಕ ಮನು ಮಡೆನೂರ್ ತಿಳಿಸಿದರು.

ನಾಯಕಿ ಸೋನಾಲ್ ಮೊಂತೆರೊ, ದಿಗಂತ್, ರಂಗಾಯಣ ರಘು, ಶರತ್ ಲೋಹಿತಾಶ್ವ, ಮೌನ ಗುಡ್ಡೆಮನೆ, ಸಂಗೀತ ನಿರ್ದೇಶಕ ಮನೋಮೂರ್ತಿ, ನಿರ್ಮಾಣ ಸಾರಥ್ಯ ಹೊತ್ತಿರುವ ರೇಣುಕಾ ಯೋಗರಾಜ್ ಭಟ್ ಈ ಚಿತ್ರದ ಬಗ್ಗೆ ಮಾತನಾಡಿದರು.

ಯೋಗರಾಜ್ ಭಟ್ ಅವರ ಜೊತೆ ಸಿನಿಮಾ‌ ನಿರ್ಮಿಸುತ್ತಿರುವುದಕ್ಕೆ ನಿರ್ಮಾಪಕರಾದ ಸಂತೋಷ್ ಕುಮಾರ್ ಹಾಗೂ ವಿದ್ಯಾ ಸಂತೋಷ ವ್ಯಕ್ತಪಡಿಸಿದರು.

ದೇಶ

ವಾಷಿಂಗ್ಟನ್:

ಗ್ಲೋಬಲ್ ಫೈರ್‌ಪವರ್ ಸಂಸ್ಥೆಯು ವಿಶ್ವದ ಅತ್ಯಂತ ಶಕ್ತಿಶಾಲಿ ಮಿಲಿಟರಿ ಹೊಂದಿರುವ ದೇಶಗಳ ವಾರ್ಷಿಕ ಪಟ್ಟಿಯನ್ನು ಪ್ರಕಟಿಸುತ್ತದೆ.

ಪಡೆಗಳ ಸಂಖ್ಯೆ, ಮಿಲಿಟರಿ ಉಪಕರಣಗಳು, ಆರ್ಥಿಕ ಸ್ಥಿರತೆ ಮತ್ತು ಭೌಗೋಳಿಕ ಸ್ಥಳ ಸೇರಿದಂತೆ 60ಕ್ಕೂ ಹೆಚ್ಚು ಅಂಶಗಳ ಆಧಾರದ ಮೇಲೆ 2024ರ ಜಾಗತಿಕವಾಗಿ ಮಿಲಿಟರಿ ಸಾಮರ್ಥ್ಯ ಹೊಂದಿರುವ ದೇಶಗಳ ಶ್ರೇಯಾಂಕವನ್ನು ಪ್ರಕಟಿಸಿದೆ. ಅಮೆರಿಕ ವಿಶ್ವದ ಅತ್ಯಂತ ಶಕ್ತಿಶಾಲಿ ಮಿಲಿಟರಿಯನ್ನು ಹೊಂದಿದೆ. 2ನೇ ಸ್ಥಾನದಲ್ಲಿ ರಷ್ಯಾ ಮತ್ತು 3ನೇ ಸ್ಥಾನದಲ್ಲಿ ಚೀನಾ ಇದೆ.

ಈ ಶ್ರೇಯಾಂಕದಲ್ಲಿ ಭಾರತ 4ನೇ ಸ್ಥಾನದಲ್ಲಿದೆ. ದಕ್ಷಿಣ ಕೊರಿಯಾ, ಇಂಗ್ಲೆಂಡ್, ಜಪಾನ್, ಟರ್ಕಿ, ಪಾಕಿಸ್ತಾನ ಮತ್ತು ಇಟಲಿ ಕ್ರಮವಾಗಿ 5 ರಿಂದ 10ನೇ ಸ್ಥಾನದಲ್ಲಿವೆ. ವಿಶ್ವದ ಅತ್ಯಂತ ಕಡಿಮೆ ಶಕ್ತಿಶಾಲಿ ಮಿಲಿಟರಿ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭೂತಾನ್ ಮೊದಲ ಸ್ಥಾನದಲ್ಲಿದೆ.

ಮೊಲ್ಡೊವಾ, ಸುರಿನಾಮ್, ಸೊಮಾಲಿಯಾ, ಬೆನಿನ್, ಲೈಬೀರಿಯಾ, ಬೆಲೀಜ್, ಸಿಯೆರಾ ಲಿಯೋನ್, ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್ ಮತ್ತು ಐಸ್ಲ್ಯಾಂಡ್ ಕ್ರಮವಾಗಿ 2 ರಿಂದ 10ನೇ ಸ್ಥಾನದಲ್ಲಿವೆ. ಗ್ಲೋಬಲ್ ಫೈರ್‌ಪವರ್ ಸಂಸ್ಥೆಯು ಪ್ರಕಟಿಸಿರುವ ಪಟ್ಟಿಯಲ್ಲಿ 145 ದೇಶಗಳ ಮಿಲಿಟರಿ ಬಲವನ್ನು ಅಂದಾಜಿಸಲಾಗಿದೆ.

ದೇಶ

ಕೋಲ್ಕತ್ತಾ: ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ನಡುವೆ ಜನವರಿ 22 ರಂದು ಕೋಲ್ಕತ್ತಾದಲ್ಲಿ ಎಲ್ಲಾ ಧರ್ಮಗಳ ಜನರೊಂದಿಗೆ ‘ಸಾಮರಸ್ಯಕ್ಕಾಗಿ ರ‍್ಯಾಲಿ’ಯನ್ನು ಮುನ್ನಡೆಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಘೋಷಿಸಿದ್ದಾರೆ.

ಇಂದು ಪಶ್ಚಿಮ ಬಂಗಾಳದ ರಾಜ್ಯ ಕಾರ್ಯಾಲಯದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಜನವರಿ 22 ರಂದು ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇನೆ. ನಂತರ ಎಲ್ಲ ಧರ್ಮದವರೊಂದಿಗೆ ‘ಸಾಮರಸ್ಯ ರ‍್ಯಾಲಿಯಲ್ಲಿ ಪಾಲ್ಗೊಳ್ಳುತ್ತೇನೆ. ಇದಕ್ಕೂ ಬೇರೆ ಯಾವುದೇ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಆಡಳಿತಾರೂಢ ಟಿಎಂಸಿಯ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕಾಳಿಘಾಟ್ ದೇವಸ್ಥಾನದಲ್ಲಿ ಕಾಳಿ ದೇವಿಗೆ ಪೂಜೆ ಸಲ್ಲಿಸಿದ ನಂತರ ದಕ್ಷಿಣ ಕೋಲ್ಕತ್ತಾದ ಹಜ್ರಾ ಕ್ರಾಸಿಂಗ್‌ನಿಂದ ಮೆರವಣಿಗೆಯನ್ನು ಪ್ರಾರಂಭಿಸುತ್ತಾರೆ ಎಂದು ತಿಳಿದು ಬಂದಿದೆ. ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭ ನಡೆಯುವ ಅದೇ ದಿನ ಕೋಲ್ಕತ್ತಾದಲ್ಲಿ ‘ಸಾಮರಸ್ಯ ರ‍್ಯಾಲಿ’ ಆಯೋಜಿಸಿರುವುದು ಗಮನಾರ್ಹ.

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ನಡೆದ ನೈತಿಕ ಪೋಲಿಸ್ ಗಿರಿ ಹಾಗೂ ಸಾಮೂಹಿಕ ಅತ್ಯಾಚಾರ ಖಂಡನೀಯ. ಮನದಲ್ಲಿ ಕೋಮು ವಿಷ ತುಂಬಿಕೊಂಡು ಸಂವಿಧಾನ ತತ್ವಕ್ಕೇ ಅಪಚಾರಗೈದು ಕಾನೂನನ್ನು ಕೈಗೆತ್ತಿಕೊಳ್ಳುವ ಇಂತಹ ಪ್ರಕ್ರಿಯೆಯನ್ನು ಸರಕಾರ ಮಟ್ಟ ಹಾಕಲೇಬೇಕು ಎಂದು ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

“ಭವಿಷ್ಯದಲ್ಲಿ ಇದು ತುಂಬಾ ಅಪಾಯಕಾರಿ. ಕಾನೂನಿನ ಬಗ್ಗೆ ಜನರಿಗೆ ಭಯ ಹೊರಟು ಹೋಗಿರುವುದೇ ಇಂತಹ ಪ್ರಕ್ರಿಯೆಗೆ ಕಾರಣವಾಗಿದೆ. ಸಾಮೂಹಿಕ ಅತ್ಯಾಚಾರ ಗೈದ ಪ್ರಕರಣ ಸಾಮಾನ್ಯವಲ್ಲ. ‘ಇದುವರೆಗೆ ಬಂದಿತರಾದವರ ಪೈಕಿ ಇಬ್ಬರು ಆ ಪ್ರಕರಣದಲ್ಲಿ ಭಾಗಿಯಾದವರಲ್ಲ; ನನಗೆ ಆ ಇಬ್ಬರ ಫೋಟೋ ಮಾತ್ರ ತೋರಿಸಿದ್ದು ಅವರೀರ್ವರೂ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ’ ಎಂಬ ಸಂತ್ರಸ್ತೆಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದ್ದಾರೆ.

“ಈ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿ ಯಾವುದೇ ರಾಜಕೀಯ ಮಾಡದೆ ಪ್ರಾಮಾಣಿಕವಾಗಿ ತನಿಖೆ ನಡೆಸಿ ಸಂತ್ರಸ್ತೆಗೆ ನ್ಯಾಯ ದೊರಕಿಸಿ ಕೊಡಬೇಕಾದುದು ಸರ್ಕಾರದ ಕರ್ತವ್ಯವಾಗಿದೆ. ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಪ್ರಯತ್ನಿಸುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪವೂ ಗಮನಾರ್ಹ ಎಂದು ಹೇಳಿದ್ದಾರೆ.

ಸಿನಿಮಾ

ಅರುಣ್ ಜಿ

ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ರುದ್ರಶಿವ ನಿರ್ದೇಶನದ ‘ಶಭ್ಬಾಷ್’ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ.

ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ಈ ಮುಹೂರ್ತ ಸಮಾರಂಭ ಅರ್ಥವತ್ತಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ‘ಶಭ್ಬಾಷ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡಾ ಅನಾವರಣಗೊಂಡಿದೆ. ಹೀಗೆ ಮುಹೂರ್ತ ಸಮಾರಂಭ ಸಾಂಘವಾಗಿ ನೆರವೇರಿದ ನಂತರ ಚಿತ್ರತಂಡ ಸುದ್ದಿಗೋಷ್ಟಿಯ ಮೂಲಕ ಮಾಧ್ಯಮದವರನ್ನು ಮುಖಾಮುಖಿಯಾಗಿದೆ.

ಈ ಸಂದರ್ಭದಲ್ಲಿ ‘ಶಭ್ಬಾಷ್’ ಕುರಿತಾದ ಒಂದಷ್ಟು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಪ್ರಧಾನವಾಗಿ ಈ ಹಂತದಲ್ಲಿ ನಿರ್ದೇಶಕ ರುದ್ರಶಿವ ಶೀರ್ಷಿಕೆಯ ಒಳಾರ್ಥವನ್ನು ಸಮರ್ಥವಾಗಿ ತೆರೆದಿಡುವ ಪ್ರಯತ್ನ ಮಾಡಿದ್ದಾರೆ. ಸಾಮಾನ್ಯವಾಗಿ ಮಹತ್ತರವಾದುದನ್ನು ಸಾಧಿಸಿದಾಗ, ಮೆಚ್ಚುವಂತೆ ನಡೆದುಕೊಂಡಾಗ ಶಭ್ಬಾಷ್ ಗಿರಿಯ ಮೂಲಕ ಮೆಚ್ಚಿಕೊಳ್ಳಲಾಗುತ್ತೆ. ಹಾಗಾದರೆ, ಈ ಸಿನಿಮಾ ನಾಯಕ ಶಭ್ಬಾಷ್ ಅನ್ನಿಸಿಕೊಳ್ಳುವಂಥಾ ಯಾವ ಕೆಲಸ ಮಾಡುತ್ತಾನೆ? ಯಾವ ಥರದ ಕಥೆ ಇದರ ಸುತ್ತ ಚಲಿಸುತ್ತದೆಂಬುದು ಈ ಸಿನಿಮಾ ಜೀವಾಳ. ಅಂದಹಾಗೆ, ‘ಹೊಡಿರೋ ಸೆಲ್ಯೂಟ್’ ಎಂಬ ಅಡಿ ಬರಹ ಹೊಂದಿರುವ ಶಭ್ಬಾಷ್, ಆಕ್ಷನ್ ಡ್ರಾಮಾ ಜಾನರಿನ ಸಿನಿಮಾ.

‘ಶಭ್ಬಾಷ್’ ಮೂಲಕ ರುದ್ರಶಿವ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಏಸ್ 22 (ACE 22) ಬ್ಯಾನರಿನಡಿಯಲ್ಲಿ ಪವೀಂದ್ರ ಮುತ್ತಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ದಶಕಗಳಿಗೂ ಹೆಚ್ಚು ಕಾಲ ದಿಗ್ಗಜ ನಿರ್ದೇಶಕರ ಗರಡಿಯಲ್ಲಿ ಪಳಗಿಕೊಂಡಿರುವ ರುದ್ರಶಿವ, ಒಂದೊಳ್ಳೆ ಕಥೆಯೊಂದಿಗೆ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರಂತೆ. ಶಿವಮಣಿ, ಅಯ್ಯಪ್ಪ ಶರ್ಮಾ, ಪಲ್ಲಕ್ಕಿ ರಾಧಾಕೃಷ್ಣರಂಥಾ ನಿರ್ದೇಶಕರೊಂದಿಗೆ ಕಾರ್ಯ ನಿರ್ವಹಿಸಿದ್ದ ರುದ್ರಶಿವ, ಓಂ ಸಾಯಿಪ್ರಕಾಶ್ ನಿರ್ದೇಶನದ ಗಂಗ ಎಂಬ ಚಿತ್ರದಲ್ಲಿಯೂ ಕೆಲಸ ಮಾಡಿದ್ದರು. ಈ ಮೂಲಕ ಸಾಯಿಪ್ರಕಾಶ್ ಅವರನ್ನು ಗುರುವೆಂದೇ ಪರಿಭಾವಿಸಿಕೊಂಡಿದ್ದರು. ಇದೀಗ ಓಂ ಸಾಯಿಪ್ರಕಾಶ್ ತಮ್ಮ ಶಿಷ್ಯನ ಮೊದಲ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿ ಶುಭ ಹಾರೈಸಿದ್ದಾರೆ.

ಈ ಚಿತ್ರದಲ್ಲಿ ಶರತ್ ನಾಯಕನಾಗಿ ನಟಿಸಿದ್ದಾರೆ. ನಿಸರ್ಗ ನಾಯಕಿಯಾಗಿ ಜೊತೆಯಾಗಿದ್ದಾರೆ. ಈಗಾಗಲೇ ‘ಕ’ ಮತ್ತು ‘ಮಳೆಬಿಲ್ಲು’ ಎಂಬೆರಡು ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿದ್ದ ಶರತ್, ಸುದೀರ್ಘ ಕಾಲಾವಧಿಯ ನಂತರ ‘ಶಭ್ಬಾಷ್’ ಮೂಲಕ ನಾಯಕನಾಗಿ ಮರಳುತ್ತಿದ್ದಾರೆ. ಎಲ್ಲ ತಯಾರಿಗಳನ್ನೂ ಮುಗಿಸಿಕೊಂಡಿರುವ ಚಿತ್ರತಂಡ ಇಂದಿನಿಂದಲೇ ಚಿತ್ರೀಕರಣಕ್ಕೂ ಚಾಲನೆ ನೀಡಿದೆ. ಮೊದಲ ಹಂತದಲ್ಲಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಹದಿನೈದು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಆ ನಂತರ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ವಿಶೇಷವೆಂದರೆ, ಚಿತ್ರೀಕರಣ ಶುರುವಾಗುವ ಮುನ್ನವೇ ‘ಶಭ್ಬಾಷ್’ ನ ಆರು ಹಾಡುಗಳನ್ನು ರೂಪಿಸಲಾಗಿದೆ. ಈ ಆರೂ ಹಾಡುಗಳಿಗೆ ಮ್ಯಾಡಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಆಂಜನೇಯನ ಕುರಿತಾದ ಹಾಡಿಗೆ ಶಂಕರ್ ಮಹಾದೇವನ್  ಧ್ವನಿಯಾಗಿದ್ದಾರೆ.  ರವೀಂದ್ರ ಸೊರಗಾವಿ ಹಾಗೂ ಶಮಿತಾ ಮಲ್ನಾಡ್ ಕಂಠಸಿರಿಯಲ್ಲಿ ಒಂದು ಗೀತೆ, ಇಂದೂ ನಾಗರಾಜ್ ಹಾಗೂ ವ್ಯಾಸರಾಜ್ ಕಾಂಬಿನೇಷನ್ ನಲ್ಲಿ ಒಂದು ಹಾಡು, ವಿಜಯ್ ಪ್ರಕಾಶ್ ಮತ್ತು ಅನುರಾಧ್ ಭಟ್ ಧ್ವನಿಯಲ್ಲಿ ಮತ್ತೊಂದು ಸುಮಧುರ ಗೀತೆ,  ಜೋಗಿ ಪ್ರೇಮ್, ನವೀನ್ ಸಜ್ಜು ಕೂಡ ಶಭ್ಬಾಷ್ ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರಂತೆ. ಸದ್ಯಕ್ಕೆ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಳ್ಳುವತ್ತ ಗಮನ ಹರಿಸಿರುವ ಚಿತ್ರತಂಡ, ಮುಂದಿನ ದಿನಗಳಲ್ಲಿ ಮತ್ತಷ್ಟು ರಸವತ್ತಾದ ವಿಚಾರಗಳನ್ನು ಪ್ರೇಕ್ಷಕರೊಂದಿಗೆ ಹಂಚಿಕೊಳ್ಳುವ ಉಮೇದಿನಲ್ಲಿದೆ.

ದೇಶ

“ದಲಿತ ಸಮುದಾಯವನ್ನು ತುಳಿಯುತ್ತಿರುವ ಹಿಂದುತ್ವವಾದಿಗಳು; ಹಿಂದೂಗಳನ್ನು ಗುಲಾಮರಂತೆ ನಡೆಸಿಕೊಳ್ಳುವ ಶಂಕರಾಚಾರ್ಯರುಗಳು”

ಭಾರತವು ಭಾಷೆ, ಧರ್ಮ ಮತ್ತು ಜಾತಿಯ ಆಧಾರದ ಮೇಲೆ ವಿವಿಧ ವರ್ಗಗಳಿಂದ ಮೈಗೂಡಿಸಿಕೊಂಡಿವೆ. ಆದಾಗ್ಯೂ, ಮನು ಧರ್ಮ ಮತ್ತು ಸನಾತನವು ಒಟ್ಟಾರೆಯಾಗಿ ಸಮಾಜವನ್ನು ಹುಟ್ಟಿನ ಆಧಾರದ ಮೇಲೆ ನಾಲ್ಕು ವರ್ಣಗಳಾಗಿ ವಿಂಗಡಿಸುತ್ತದೆ.

ಬ್ರಾಹ್ಮಣರು (ಬ್ರಾಹ್ಮಣರು, ತನ್ನನ್ನು ತಾನೇ ಶ್ರೇಷ್ಠ ಎಂದು ಹೇಳಿಕೊಳ್ಳುವ ಸ್ವಘೋಷಿತ ಬಲಾಢ್ಯ ಸಮಾಜ), ಕ್ಷತ್ರಿಯರು (ಆಡಳಿತಗಾರರು – ರಾಜರು), ವೈಶ್ಯರು (ವ್ಯಾಪಾರಿಗಳು) ಮತ್ತು ಶೂದ್ರರು (ಕೃಷಿಕರು; ಬ್ರಾಹ್ಮಣರ ಪ್ರಕಾರ ಗುಲಾಮ ಸಮುದಾಯ)! ನಿರ್ದಿಷ್ಟವಾಗಿ ಹೇಳುವುದಾದರೆ, ಉತ್ತರದ ರಾಜ್ಯಗಳಲ್ಲಿ ವಾಸಿಸುವ ಸನಾತನ ಅನುಯಾಯಿಗಳು ದಕ್ಷಿಣದಲ್ಲಿ ವಾಸಿಸುವ ಎಲ್ಲರನ್ನೂ ಶೂದ್ರರು ಎಂದೇ ಪರಿಗಣಿಸುತ್ತಾರೆ.

ಅಂತಹ ಮನಸ್ಥಿತಿಯ, ಆಧುನಿಕ ಕಾಲದ ಪ್ರಕಾರ, ಬಿಜೆಪಿಯ ಹಿಂದುತ್ವ ರಾಜಕಾರಣವು ದಲಿತ (ದಮನಿತ ಸಮುದಾಯ), ಬ್ರಾಹ್ಮಣೇತರ ಮತ್ತು ಬ್ರಾಹ್ಮಣ ಎಂದು ಮೂರು ವರ್ಗಗಳಾಗಿ ವಿಭಜಿಸುವ ಇಂತಹ ಮನಸ್ಥಿತಿಯನ್ನು ಬೆಳಕಿಗೆ ತರುತ್ತದೆ.

ರಾಜಕೀಯ ಲಾಭಕ್ಕಾಗಿ ದ್ರೌಪದಿ ಮುರ್ಮು ಎಂಬ ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಮಾಡಿದ ಬಿಜೆಪಿ, ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಅವರನ್ನು ಕಡೆಗಣಿಸಿತು. ಭಾರತದ ಪ್ರತಮ ಮಹಿಳಾ ಪ್ರಜೆಯೆಂಬ ಸ್ಥಾನದಲ್ಲಿರುವ ಒಬ್ಬರನ್ನು, ಪಕ್ಕಕ್ಕೆ ಇರಿಸಿ ನಡೆಸಿದ ಉದ್ಘಾಟನಾ ಸಮಾರಂಭ ಭಾರೀ ವಿವಾದಕ್ಕೀಡಾಗಿತ್ತು.

ಹಿಂದೂ ರಾಜಕಾರಣವು ಪ್ರಥಮ ಪ್ರಜೆಯನ್ನು ಮಾತ್ರವಲ್ಲದೆ ಭಾರತದ ಜನಸಂಖ್ಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಒಂದು ಜನಾಂಗವನ್ನೇ ನಿರ್ಲಕ್ಷಿಸಿ ಅವಮಾನಿಸಿದ ಇತಿಹಾಸವನ್ನು ಹೊಂದಿದೆ!

ಭಾರತ, ಜಾತ್ಯತೀತ ರಾಷ್ಟ್ರ ಎಂಬ ಮುಸಲ್ಮಾನರ ನಂಬಿಕೆಯನ್ನು ಬುಡಮೇಲು ಮಾಡುವ ರಾಮಮಂದಿರ ನಿರ್ಮಾಣದ ಪ್ರಯತ್ನಗಳು ಈಗಾಗಲೇ ದೊಡ್ಡ ವಿವಾದಗಳನ್ನು ಸೃಷ್ಟಿಸಿವೆ. ಆದರೆ, ಅದ್ಯಾವುದನ್ನೂ ಲೆಕ್ಕಿಸದೆ ರಾಮಮಂದಿರದ ಉದ್ಘಾಟನೆಯತ್ತ ತನ್ನ ರಾಜಕೀಯವನ್ನು ವೇಗವಾಗಿ ಚಲಿಸುವ ಮೂಲಕ ಹಿಂದೂ ಧರ್ಮ ಗೆಲುವನ್ನು ಸಾಧಿಸಿದೆ.

ವಿವಾದಗಳಲ್ಲೇ ಹುಟ್ಟಿ ವಿವಾದಗಳಲ್ಲೇ ಬೆಳೆಯುತ್ತಿರುವ ಬಿಜೆಪಿ, ಪ್ರಸ್ತುತ ಘೋಷಣೆ ಮಾಡಿರುವ ರಾಮ ಮಂದಿರದ ಉದ್ಘಾಟನಾ ಸಮಾರಂಭವೂ ವಿವಾದವಿಲ್ಲದೆ ಅಲ್ಲ.

ರಾಮ ಮಂದಿರದ ಉದ್ಘಾಟನೆಯ ದಿನ (ಜನವರಿ 22) ಸಮೀಪಿಸುತ್ತಿದ್ದಂತೆ, ಅನೇಕ ರಾಜಕೀಯ ಮುಖಂಡರುಗಳು ಮತ್ತು ಸಾಮಾನ್ಯ ಜನರು ಇದನ್ನು ಧಾರ್ಮಿಕ ಪ್ರಾಬಲ್ಯ ಮತ್ತು ರಾಜಕೀಯ ಘಟನೆ ಎಂದು ಖಂಡಿಸಿ ಕಾರ್ಯಕ್ರಮಕ್ಕೆ ಹಾಜರಾಗಲು ನಿರಾಕರಿಸುತ್ತಿದ್ದಾರೆ. ಹಿಂದೂ ಧರ್ಮದ ಮೂಲವೆನ್ನಲಾದ ಶಂಕರಾಚಾರ್ಯರುಗಳು ಕೂಡ ಈ ಉತ್ಸವದಲ್ಲಿ ಪಾಲ್ಗೊಳ್ಳಲು ನಿರಾಕರಿಸಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

‘ರಾಮ ಮಂದಿರವನ್ನು ಬ್ರಾಹ್ಮಣೇತರ ಮೋದಿ’ ಉದ್ಘಾಟಿಸಲಿರುವುದೇ ಶಂಕರಾಚಾರ್ಯರುಗಳ ಕೋಪಕ್ಕೆ ಕಾರಣ ಎಂಬ  ಊಹಾಪೋಹಗಳೂ ಇವೆ.

ದ್ರೌಪದಿ ಮುರ್ಮು ಅವರು ಭಾರತದ ರಾಷ್ಟ್ರಪತಿಯೇ ಆದರೂ ಬುಡಕಟ್ಟಿಗೆ ಸೇರಿದವರಾಗಿರುವುದರಿಂದ ಅವರನ್ನು ಕಡೆಗಣಿಸಲಾಯಿತು. ಅಂತೆಯೇ ಹಿಂದೂ ವಿಚಾರಗಳನ್ನು ಸಂಪೂರ್ಣವಾಗಿ ಮೈಗೂಡಿಸಿಕೊಂಡಿರುವ ಮೋದಿಯವರು ಭಾರತದ ಪ್ರಧಾನಿಯೇ ಆಗಿದ್ದರೂ ಬ್ರಾಹ್ಮಣರಲ್ಲದ ಕಾರಣಕ್ಕೆ ದೇವಸ್ಥಾನ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗುತ್ತಿವೆ.

ಆದ್ದರಿಂದ ಒಬ್ಬ ವ್ಯಕ್ತಿ ಸೈದ್ಧಾಂತಿಕ ಮಟ್ಟದಲ್ಲಿ ಸನಾತನವನ್ನು ಎತ್ತಿ ಹಿಡಿದರೂ ಹುಟ್ಟಿನಿಂದ ಬೇರೆಯಾಗಿದ್ದರೆ ಆತನನ್ನು ತುಳಿಯುವುದೇ ತಮ್ಮ ರಾಜಕೀಯ ಸಿದ್ದಾಂತ ಎಂಬುದನ್ನು ಆರ್‌ಎಸ್‌ಎಸ್ ಮತ್ತು ಬಿಜೆಪಿ ಈ ವಿವಾದದ ಮೂಲಕ ಸ್ಪಷ್ಟವಾಗಿ ನಿರೂಪಿಸಿವೆ.

ರಾಜ್ಯ

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಈಗಾಗಲೇ ಎರಡು ಬಾರಿ ರಾಜ್ಯ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ. ಪರಿಶಿಷ್ಟ ವರ್ಗಕ್ಕೆ ಸೇರಲು ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದ್ದು, ಕೇಂದ್ರ ಸರ್ಕಾರ ಈಗ ಪುನಃ ಕೇಳಿರುವ ಸ್ಪಷ್ಟೀಕರಣವನ್ನು ಕೂಡಲೇ ಮಾಹಿತಿ ತರಿಸಿ ಸ್ಪಷ್ಟೀಕರಣ ನೀಡಲಾಗುವುದು. ನಂತರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕ್ರಮ ವಹಿಸಬೇಕು. 96-97 ರಲ್ಲಿಯೇ ಶಾಸಕರಾದ ದಿವಂಗತ ನಾರಾಯಣ ರಾವ್ ಎಸ್.ಟಿ ಗೆ ಸೇರಿಸಲು ಪ್ರಯತ್ನಿಸಿದ್ದರು ಎಂದು ಹೇಳಿದರು.

ದೋಣಿ ನಡೆಸುವುದು ಹಾಗೂ ಮೀನು ಹಿಡಿಯುವ ಕಾಯಕ ಅಂಬಿಗರದ್ದು. ಕಾಯಕದಲ್ಲಿ ಮೇಲುಕೀಳು ಎಂಬುದಿಲ್ಲ. ಮನುಷ್ಯರ ನಡುವೆ ತಾರತಮ್ಯ ಇರಬಾರದು. ಕಾಯಕವನ್ನು ಆಧರಿಸಿ ಮೇಲು ಕೀಳು ಎಂದು ತಾರತಮ್ಯ ಮಾಡಿದ್ದರ ವಿರುದ್ಧ ಬಸವಾದಿ ಶರಣರು ಹೋರಾಟ ಮಾಡಿದರು. ಈ ಸಾಲಿನಲ್ಲಿ ಅಂಬಿಗರ ಚೌಡಯ್ಯ ಮೊದಲನೇ ಸಾಲಿನಲ್ಲಿ ನಿಲ್ಲುತ್ತಾರೆ. ಅದಕ್ಕೆ ಬಸವಣ್ಣನವರು ಇವರಿಗೆ ನಿಜಶರಣ ಎಂದು ಕರೆದರು ಎಂದು ಹೇಳಿದರು.

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಹಿಂದೆ ನಮ್ಮ ಅವಧಿಯಲ್ಲಿಯೇ ಮಾಡಲಾಯಿತು. ಆರ್ಥಿಕ ಶಕ್ತಿ ಇಲ್ಲದ ಸಮಾಜ ಮುಖ್ಯ ವಾಹಿನಿಗೆ ಬರಲು ಸಾಧ್ಯವಿಲ್ಲ. ಸಮಸಮಾಜದ ಕನಸು ನನಸಾಗಲು ಆರ್ಥಿಕ, ಸಾಮಾಜಿಕ ಶಕ್ತಿ ಪ್ರತಿಯೊಬ್ಬರಲ್ಲೂ ಬರಬೇಕು. ಬಸವಾದಿ ಶರಣರು ಕಾಯಕ ಮತ್ತು ದಾಸೋಹ ಎಂಬ ಎರಡು ತತ್ವಗಳನ್ನು ನೀಡಿದ್ದಾರೆ ಎಂದರು.

ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಕಾಯಕದಲ್ಲಿ ಎಲ್ಲರೂ ತೊಡಗಿ ಉತ್ಪಾದನೆಯನ್ನು ಎಲ್ಲರೂ ಹಂಚಿಕೊಳ್ಳಬೇಕು ಎನ್ನುವುದು ಇದರ ಅರ್ಥ. ಇನ್ನೊಬ್ಬರ ಗಳಿಕೆಯನ್ನು ಕುಳಿತು ಅನುಭವಿಸಬಾರದು. ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲದಿರುವುದು ಆರ್ಥಿಕ, ಸಾಮಾಜಿಕ ಚಟುವಟಿಕೆ ಇಲ್ಲದಿರುವುದರಿಂದ. ಇದಕ್ಕೆ ಚಾಲನೆ ನೀಡಬೇಕೆಂದು ಬಸವಾದಿ ಶರಣರು ಹೇಳಿದ್ದರು ಎಂದು ಹೇಳಿದರು.

ಅಂಬಿಗರ ಚೌಡಯ್ಯನವರ ಹಾದಿಯಲ್ಲಿ ನಡೆಯುವುದು ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ. ಅವರ ವಿಚಾರಗಳನ್ನು ಜನರಿಗೆ ತಿಳಿಸಲು ಜಯಂತ್ಯೋತ್ಸವವನ್ನು ಆಚರಿಸಲಾಗುತ್ತದೆ. ನಮ್ಮ ಮಕ್ಕಳು ಯಾವ ಕಾರಣದಿಂದಲೂ ವಿದ್ಯೆಯಿಂದ ವಂಚಿತರಾಗಬಾರದು. ಸಮಾಜದ ಅಸಮಾನತೆಯನ್ನು ಹೋಗಲಾಡಿಸಬೇಕು. ಪಟ್ಟಭದ್ರ ಹಿತಾಸಕ್ತಿಯ ವಿರುದ್ಧ ನಿಲ್ಲಬೇಕಾಗುತ್ತದೆ. ಬದಲಾವಣೆ ಬಯಸದ ಜನ ಆಗಲೂ ಇದ್ದರು, ಈಗಲೂ ಇದ್ದಾರೆ. ನಾನು ಹಿಂದುಳಿದ ಸಮಾಜದೊಂದಿಗೆ ಸದಾ ಇರುತ್ತೇನೆ ಎಂದು ಹೇಳಿದರು.

ಸಿನಿಮಾ

ಮಲಯಾಳಂನ ಪ್ರಮುಖ ನಟ ಮೋಹನ್ ಲಾಲ್ ಅಭಿನಯದ “ನೆರು” ಚಲನಚಿತ್ರವು ಡಿಸೆಂಬರ್ 21, 2023 ರಂದು  ಪ್ರಪಂಚದಾದ್ಯಂತ ಬಿಡುಗಡೆಯಾಯಿತು.

ಭಾರತದಲ್ಲಿ 500 ಚಿತ್ರಮಂದಿರಗಳಲ್ಲಿ ಮತ್ತು ವಿಶ್ವದಾದ್ಯಂತ 400 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 2013ರಲ್ಲಿ ಮೋಹನ್ ಲಾಲ್ ನಾಯಕನಾಗಿ ನಟಿಸಿದ್ದ “ದೃಶ್ಯಂ” ಎಂಬ ಯಶಸ್ವಿ ಚಲನಚಿತ್ರವನ್ನು ನಿರ್ದೇಶಿಸಿದ್ದ ಜೀತು ಜೋಸೆಫ್ “ನೆರು” ಸಿನಿಮಾವನ್ನು ಸಹ ನಿರ್ದೇಶಿಸಿದ್ದಾರೆ.

2021ರಲ್ಲಿ ಇದೇ ಮೈತ್ರಿಕೂಟದ “ದೃಶ್ಯಂ-2” ಬಿಡುಗಡೆಗೊಂಡು ಹಿಟ್ ಆಗಿದ್ದು ವಿಶೇಷ.

ಬಿಡುಗಡೆಯಾಗಿ ಸುಮಾರು 25 ದಿನಗಳು ಕಳೆದಿದ್ದು ವಿಶ್ವದಾದ್ಯಂತ ಚಿತ್ರದ ಕಲೆಕ್ಷನ್, ಯಶಸ್ಸಿನ ಪ್ರಮುಖ ಮೈಲಿಗಲ್ಲು ಎಂದು ಪರಿಗಣಿಸಲಾಗುವ 100 ಕೋಟಿಯನ್ನು ದಾಟಿದೆ ಎಂದು ಚಿತ್ರತಂಡ ಘೋಷಿಸಿದೆ. ಯಶಸ್ಸಿನ ಖುಷಿಯಲ್ಲಿರುವ ಮೋಹನ್ ಲಾಲ್ ಚಿತ್ರತಂಡಕ್ಕೆ ಧನ್ಯವಾದ ಹೇಳಿದ್ದಾರೆ.

ಚಿತ್ರವು IMDb ಮೂವಿ ರೇಟಿಂಗ್ ಪಾಯಿಂಟ್‌ಗಳಲ್ಲಿ 10ಕ್ಕೆ 7.8 ಅನ್ನು ರೇಟ್ ಮಾಡಿರುವುದು ಗಮನಾರ್ಹ.

ಅಂಧ ಮಹಿಳೆಯ ಮೇಲೆ ದಾಳಿ ನಡೆಸಿ, ಕಾನೂನನ್ನು ಬಗ್ಗಿಸಿ, ಶಿಕ್ಷೆಯಿಂದ ತಪ್ಪಿಸಿಕೊಂಡ ಶ್ರೀಮಂತ ಯುವಕನನ್ನು ಮತ್ತೆ ಕಾನೂನಿನ ಶಿಕ್ಷೆಗೆ ಗುರಿಪಡಿಸುವ ವಕೀಲರಾಗಿ ಮೋಹನ್ ಲಾಲ್ ಅಭಿನಯಿಸಿದ್ದಾರೆ. ಅವರ ಅತ್ಯುತ್ತಮ ನಟನೆ ವಿಶ್ವದಾದ್ಯಂತ ಅಭಿಮಾನಿಗಳನ್ನು ಸೆಳೆದಿದೆ.