ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
April 2024 » Page 3 of 6 » Dynamic Leader
October 23, 2024
Home 2024 April (Page 3)
ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ಬಿಜೆಪಿ ಆಡಳಿತವಿರುವ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ ಮತ್ತು ಜಿಲ್ಲಾ ಮೀಸಲು ಪಡೆ ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಸುಮಾರು 29 ನಕ್ಸಲೀಯರು ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ.

ಸಂಸತ್ತಿನ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಕ್ಸಲ್ (ಮಾವೋವಾದಿ) ನಿರ್ಮೂಲನೆಗೆ ಕೇಂದ್ರ ಸರ್ಕಾರ ತೀವ್ರ ಪ್ರಯತ್ನ ನಡೆಸುತ್ತಿದೆ. ಈ ರೀತಿಯಾಗಿ, ಬಿಜೆಪಿ ಆಡಳಿತವಿರುವ ಛತ್ತೀಸ್‌ಗಢ ರಾಜ್ಯದ ಕಂಕೇರ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ ಮತ್ತು ಜಿಲ್ಲಾ ಮೀಸಲು ಪಡೆ ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಸುಮಾರು 29 ನಕ್ಸಲೀಯರು ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ.

ಗೃಹ ಸಚಿವಾಲಯದ ಪ್ರಕಾರ, ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ ನಕ್ಸಲ್ ಉಗ್ರಗಾಮಿತ್ವವನ್ನು ಶೇ.70 ರಿಂದ ಶೇ.52ಕ್ಕೆ ಇಳಿಸಲಾಗಿದೆ. ಅಲ್ಲದೆ, ಭವಿಷ್ಯದಲ್ಲಿ ನಕ್ಸಲ್ ಮುಕ್ತ ಭಾರತ ನಿರ್ಮಾಣ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಾಖಂಡಿತವಾಗಿ ಹೇಳಿದ್ದಾರೆ.

ಈ ವರ್ಷದ ಆರಂಭದಿಂದ, ಗಡಿ ಭದ್ರತಾ ಪಡೆ (BSF), ಜಿಲ್ಲಾ ಮೀಸಲು ಪಡೆ (DRG) ಮತ್ತು ಕಮಾಂಡೋ ಬೆಟಾಲಿಯನ್ (COBRA) ಸೇರಿದಂತೆ ಸಶಸ್ತ್ರ ಪಡೆಗಳು ನಕ್ಸಲ್ ಪ್ರಭಾವಿತ ಛತ್ತೀಸ್‌ಗಢ ರಾಜ್ಯದ ಅರಣ್ಯಗಳಲ್ಲಿ ನಕ್ಸಲ್ ಹುಡುಕಾಟ ಮತ್ತು ಬೇಟೆಯಲ್ಲಿ ತೊಡಗಿವೆ.

ಈ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿ ಅಂತ್ಯದಲ್ಲಿ ಛತ್ತೀಸ್‌ಗಢದ ಕಂಕೇರ್ ಅರಣ್ಯ ಪ್ರದೇಶದಲ್ಲಿ ನಕ್ಸಲರೆಂದು ಶಂಕಿಸಿ ಅಲೆದಾಡುತ್ತಿದ್ದ ಮೂವರನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದರು. ಆದರೆ, ಮೃತ ಮೂವರ ಕುಟುಂಬಗಳು ಮತ್ತು ಗ್ರಾಮಸ್ಥರು, ‘ನಾವು ಆದಿವಾಸಿಗಳು ಅರಣ್ಯವನ್ನು ಅವಲಂಬಿಸಿ ಬದುಕುತ್ತಿದ್ದೇವೆ.

ನಾವು ತೊಗಟೆ, ಎಲೆಗಳು ಮತ್ತು ಇತರ ಉತ್ಪನ್ನಗಳಿಗಾಗಿ ಕಾಡಿಗೆ ಹೋಗುತ್ತೇವೆ. ಹೀಗಾಗಿ ಎಲೆ ಸಂಗ್ರಹದ ಸೀಸನ್ ಶುರುವಾಗಿರುವುದರಿಂದ ಮೂವರೂ ಮರಗಳ ತೊಗಟೆಗಳು, ಕಾಂಡಗಳು ಸೇರಿದಂತೆ ವಸ್ತುಗಳಿಂದ ಹಗ್ಗಗಳನ್ನು ತಯಾರಿಸಲು ಕಾಡಿಗೆ ತೆರಳಿದ್ದರು. ಆದರೆ ಸರಕಾರಕ್ಕೆ ಲೆಕ್ಕ ಕೊಡಬೇಕು ಎಂಬುದಕ್ಕಾಗಿ ಮೂವರು ಅಮಾಯಕರನ್ನು ನಕ್ಸಲರು ಎಂದು ಆರೋಪಿಸಿ ಪೊಲೀಸರು ನಕಲಿ ಎನ್‌ಕೌಂಟರ್ ಮಾಡಿದ್ದಾರೆ’ ಎಂದು ಆರೋಪಿಸಿದರು.

ತರುವಾಯ, ಮಾರ್ಚ್ ಅಂತ್ಯದಲ್ಲಿ, ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಸಿಪುರಪಟ್ಟಿ ಅರಣ್ಯ ಪ್ರದೇಶದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ನಕ್ಸಲೀಯರು ಎಂದು ಶಂಕಿಸಿ ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದರು. ಈ ಕುರಿತು ಹೇಳಿಕೆ ನೀಡಿರುವ ನಕ್ಸಲ್ ಸಂಘಟನೆಯ ಕಾರ್ಯದರ್ಶಿ, ‘ಸತ್ತವರಲ್ಲಿ ಇಬ್ಬರು ಮಾತ್ರ ನಮ್ಮ ಸಂಘಟನೆಯ ಸದಸ್ಯರು. ಉಳಿದ ನಾಲ್ವರು ಗ್ರಾಮದ ನಾಗರಿಕರು.

ಜನರನ್ನು ಭೇಟಿ ಮಾಡಲು ಮತ್ತು ಅವರ ಕುಂದುಕೊರತೆಗಳನ್ನು ಆಲಿಸಲು ಗ್ರಾಮಕ್ಕೆ ಹೋದ ನಮ್ಮ ಇಬ್ಬರು ಸಂಘಟಕರು ಮತ್ತು ನಾಲ್ವರು ನಿರಾಯುಧ ನಾಗರಿಕರನ್ನು ಭದ್ರತಾ ಪಡೆಗಳು ಕರೆದೊಯ್ದು ವಿಚಾರಣೆಗೆ ಒಳಪಡಿಸಿ ನಂತರ ಅವರನ್ನು ಓಡಲುಬಿಟ್ಟು ಮನಬಂದಂತೆ ಗುಂಡಿಕ್ಕಿ ಕೊಂದಿದ್ದಾರೆ.

ಇದೊಂದು ನಕಲಿ ಎನ್‌ಕೌಂಟರ್, ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳು ಕೂಡ ಪೊಲೀಸರು ಮತ್ತು ಭದ್ರತಾ ಪಡೆಗಳು ಜೋಡಿಸಿಟ್ಟಿದ್ದು’ ಎಂದು ಅವರು ಆರೋಪಿಸಿದ್ದಾರೆ. ಇದನ್ನು ಭದ್ರತಾ ಪಡೆ ನಿರಾಕರಿಸಿದೆ. ಈ ಹಿನ್ನಲೆಯಲ್ಲಿ, ನಕ್ಸಲರ ಹತ್ಯೆಯನ್ನು ಪ್ರತಿಭಟಿಸಲು ನಕ್ಸಲೀಯರು ಏಪ್ರಿಲ್ 3 ರಂದು ಸುಕ್ಮಾ ಮತ್ತು ಬಿಜಾಪುರದಲ್ಲಿ ಒಂದುದಿನದ ಬಂದ್ ಗೆ ಕರೆ ನೀಡಿದರು.

ಆ ಬಳಿಕ ನಕ್ಸಲರ ಬೇಟೆಯನ್ನು ಮತ್ತಷ್ಟು ತೀವ್ರಗೊಳಿಸಿದ ಸರ್ಕಾರ, ಹುಡುಕಾಟವನ್ನು ಮುಂದುವರಿಸಿತು. ನಕ್ಸಲರು ಬಂದ್ ಘೋಷಿಸಿದ ದಿನವೇ, ಛತ್ತೀಸ್‌ಗಢದ ಬಿಜಾಪುರದಲ್ಲಿ 13 ನಕ್ಸಲೀಯರನ್ನು ಎನ್‌ಕೌಂಟರ್‌ ಮಾಡಲಾಯಿತು. ತದನಂತರ, ಏಪ್ರಿಲ್ 6 ರಂದು ಕಂಕೇರ್‌ನಲ್ಲಿ ಇನ್ನೂ 3 ನಕ್ಸಲೀಯರನ್ನು ಕೊಲ್ಲಲಾಯಿತು.

ಇದೇ ಹಿನ್ನಲೆಯಲ್ಲಿ, ಕಂಕೇರ್ ಜಿಲ್ಲೆಯ ಹಪಟೋಲಾ ಅರಣ್ಯದಲ್ಲಿ ಏಪ್ರಿಲ್ 16ರಂದು ಗಡಿ ಭದ್ರತಾ ಪಡೆಗಳು 15 ಮಹಿಳೆಯರು ಸೇರಿದಂತೆ ಒಟ್ಟು 29 ನಕ್ಸಲೀಯರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಅದರಲ್ಲಿ, ಸರ್ಕಾರದಿಂದ ತಲಾ ರೂ.25 ಲಕ್ಷ ಘೋಷಣೆ ಮಾಡಿದ್ದ ನಕ್ಸಲ್ ಚಳುವಳಿಯ ಪ್ರಮುಖ ನಾಯಕ ಶಂಕರ್ ರಾವ್ ಕೂಡ ಕೊಲೆಯಾಗಿದ್ದಾರೆ.

ಅವರಿಂದ ಐದು ಎಕೆ-47 ರೈಫಲ್‌ಗಳು ಮತ್ತು ಎಲ್‌ಎಂಜಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತು ಮೃತರ 18 ಶವಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ. ಅಲ್ಲದೆ, ನಕ್ಸಲರೊಂದಿಗಿನ ಈ ಕಾಳಗದಲ್ಲಿ ಮೂವರು ಭದ್ರತಾ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವರ್ಷವೊಂದರಲ್ಲೇ ಇದುವರೆಗೆ 79 ನಕ್ಸಲೀಯರು ಹತರಾಗಿದ್ದಾರೆ ಮತ್ತು ಈ ನಿರ್ದಿಷ್ಟ ದಾಳಿಯು ದೇಶದಲ್ಲೇ ಅತ್ಯಂತ ಭೀಕರ ದಾಳಿಯಾಗಿದೆ ಎಂದು ಸರ್ಕಾರ ಹೇಳಿದೆ. ಹೀಗಾಗಿ ಈ ದಾಳಿಯ ಬಗ್ಗೆ ಮಾತನಾಡಿರುವ ಛತ್ತೀಸ್‌ಗಢ ಬಿಜೆಪಿ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, “ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್ ಐತಿಹಾಸಿಕ ವಿಜಯವಾಗಿದೆ” ಎಂದು ಹೇಳಿದ್ದಾರೆ.

ಅದೇ ರೀತಿ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಅವರು “ಗಡಿ ಭದ್ರತಾ ಪಡೆಯ ಯೋಧರನ್ನು ಅಭಿನಂದಿಸುತ್ತೇನೆ. ಭವಿಷ್ಯದಲ್ಲಿ ನಕ್ಸಲ್ ಮುಕ್ತ ಛತ್ತೀಸ್‌ಗಢವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು! ಇದು ನಕ್ಸಲ್ ವಾದದ ವಿರುದ್ಧ ಛತ್ತೀಸ್‌ಗಢ ಪೊಲೀಸರು ನಡೆಸಿದ ಸರ್ಜಿಕಲ್ ಸ್ಟ್ರೈಕ್” ಎಂದು ಬಣ್ಣಿಸಿದ್ದಾರೆ.

ಹಾಗೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, “ದೇಶದಿಂದ ನಕ್ಸಲಿಸಂ ಮುಕ್ತಗೊಳಿಸಲು ಮೋದಿ ಸರಕಾರ ಬದ್ಧವಾಗಿದೆ. ಅಲ್ಲದೆ, ಛತ್ತೀಸ್‌ಗಢದ ಕಂಕೇರ್‌ನಲ್ಲಿ ಭದ್ರತಾ ಪಡೆಗಳ ಈ ಮಹಾನ್ ವಿಜಯವು ನಕ್ಸಲಿಸಂನ ಸಂಪೂರ್ಣ ನಿರ್ಮೂಲನೆಗೆ ಪ್ರಮುಖ ಹೆಜ್ಜೆಯಾಗಿದೆ!” ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ, ಛತ್ತೀಸ್‌ಗಢದ ಕಾಂಗ್ರೆಸ್‌ನ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಸಂಚಲನದ ಮಾಹಿತಿ ನೀಡಿದ್ದಾರೆ. ಅಂದರೆ “ಬಿಜೆಪಿ ಆಡಳಿತದಲ್ಲಿ ನಕಲಿ ಎನ್‌ಕೌಂಟರ್‌ಗಳು ಸರ್ವಸಾಮಾನ್ಯವಾಗಿ ನಡೆಯುತ್ತಿವೆ. ಅದರಲ್ಲೂ ಕಳೆದ ನಾಲ್ಕು ತಿಂಗಳಲ್ಲಿ ನಕಲಿ ಎನ್‌ಕೌಂಟರ್‌ಗಳ ಸಂಖ್ಯೆ ತೀವ್ರವಾಗಿ ಹೆಚ್ಚಿದೆ.

ಬಿಜೆಪಿ ಸರ್ಕಾರವು ಅನೇಕ ಮುಗ್ಧ ಬುಡಕಟ್ಟು ಗ್ರಾಮಸ್ಥರನ್ನು ‘ನಕ್ಸಲರು’ ಎಂದು ಬ್ರಾಂಡ್ ಮಾಡಿ ನಕಲಿ ಎನ್‌ಕೌಂಟರ್‌ನಲ್ಲಿ ಕೊಲ್ಲುತ್ತಿದೆ. ಅಲ್ಲದೆ, ‘ಸುಳ್ಳು ಪ್ರಕರಣ’ ದಾಖಲಿಸಿ ಬಂಧಿಸುತ್ತೇವೆ ಎಂದು ಆದಿವಾಸಿಗಳಿಗೆ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ. ಕಂಕೇರ್ ಮಾತ್ರವಲ್ಲದೆ ಕವರ್ತಾ ಜಿಲ್ಲೆಯಲ್ಲೂ ಇಂತಹ ಘಟನೆಗಳನ್ನು ಕೇಳಿ ಬರುತ್ತಿವೆ!” ಎಂದು ಹೇಳಿ ಸಂಚಲನ ಮೂಡಿಸಿದ್ದಾರೆ.

ಬೆಂಗಳೂರು

ಹೊಟ್ಟೆಯನ್ನು ಕಡಿಮೆ ಮಾಡುವುದು ಬಹಳ ಮುಖ್ಯ. ಇದು ಕಡಿಮೆಯಾಗದಿದ್ದರೆ ಮಧುಮೇಹ, ಅಧಿಕ ರಕ್ತದೊತ್ತಡ, ಬೊಜ್ಜು ಮುಂತಾದ ಹಲವು ಸಮಸ್ಯೆಗಳು ಎದುರಾಗುತ್ತವೆ.

ಪ್ರಶ್ನೆ: ನನ್ನ ವಯಸ್ಸು 46. ನಾನು ಸರಿಯಾದ ತೂಕದಲ್ಲಿದ್ದೇನೆ. ಆದರೆ, ದಿನದಿಂದ ದಿನಕ್ಕೆ ಹೊಟ್ಟೆ ದೊಡ್ಡದಾಗುತ್ತಿದೆ. ಇದಕ್ಕೆ ಕಾರಣವೇನು? ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಪರಿಹಾರವೇನು?

ಉತ್ತರ: ಉಬ್ಬಿದ ಹೊಟ್ಟೆ ಎಂಬುದು ಹೊಟ್ಟೆಯ ಸುತ್ತ ಇರುವ ಕೊಬ್ಬನ್ನು ಸೂಚಿಸುತ್ತದೆ. ಕೊಬ್ಬಿನಲ್ಲಿ ಎರಡು ವಿಧಗಳಿವೆ. ದೇಹದ ಅಂಗಾಂಗಗಳ ಸುತ್ತಲೂ ಇರುವುದು ಒಳಾಂಗಗಳ ಕೊಬ್ಬು (Visceral Fat) ಚರ್ಮದ ಅಡಿಯಲ್ಲಿ ಇರುವುದು ಸಬ್ಕ್ಯುಟೇನಿಯಸ್ (Subcutaneous Fat) ಕೊಬ್ಬು

ಅಪೌಷ್ಟಿಕ ಆಹಾರ ಪದ್ಧತಿ, ವ್ಯಾಯಾಮದ ಕೊರತೆ, ಒತ್ತಡ, ಮದ್ಯಪಾನ, ಸರಿಯಾದ ನಿದ್ರೆಯ ಕೊರತೆ ಮತ್ತು ಆನುವಂಶಿಕದಂತಹ ಅನೇಕ ಕಾರಣಗಳಿಂದ ಉಬ್ಬಿದ ಹೊಟ್ಟೆ ಉಂಟಾಗುತ್ತದೆ. ಇವುಗಳಲ್ಲಿ ಅಸಮರ್ಪಕ ಆಹಾರ ಪದ್ಧತಿಯೇ ಮುಖ್ಯ ಕಾರಣ. ನಾವು ಸೇವಿಸುವ ಆಹಾರದ ಮೂಲಕ ದೇಹಕ್ಕೆ ಸೇರುವ ಕ್ಯಾಲೊರಿಗಳು ಮತ್ತು ದೈಹಿಕ ಚಟುವಟಿಕೆಯಿಂದ ಉರಿಯುವ ಕ್ಯಾಲೊರಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕು.

ಆ ಮೂಲಕ ಸಮತೋಲಿತ ಪೌಷ್ಠಿಕ ಆಹಾರ ಸೇವಿಸಿ ಕ್ಯಾಲೊರಿ ಕರಗಿಸಲು ವ್ಯಾಯಾಮಕ್ಕೆ ಪ್ರಾಮುಖ್ಯತೆ ನೀಡುವುದು ಅವಶ್ಯಕವಾಗಿದೆ. ವಯಸ್ಸಾದಂತೆ ನಮ್ಮ ದೇಹದ ಚಯಾಪಚಯ ಕ್ರಿಯೆ ನಿಧಾನವಾಗುತ್ತದೆ. ಹೊಟ್ಟೆಯ ಕೊಬ್ಬಿಗೆ ಇದು ಕೂಡ ಒಂದು ಕಾರಣ.

ಕೆಲವರಿಗೆ ಆನುವಂಶಿಕವಾಗಿ ಹೊಟ್ಟೆಯ ಸುತ್ತಲೂ ಕೊಬ್ಬು ಸಂಗ್ರಹವಾಗುತ್ತದೆ. ಇನ್ನು ಕೆಲವರಿಗೆ ದೇಹದಾದ್ಯಂತ ಕೊಬ್ಬು ಸಂಗ್ರಹವಾಗುತ್ತದೆ. ಮಹಿಳೆಯರಿಗೆ ಸಂಬಂಧಿಸಿದಂತೆ ಋತುಬಂಧಕ್ಕೆ ಮುನ್ನ ‘ಪೆರಿಮೆನೋಪಾಸ್’ ಸಮಯದಲ್ಲೂ ಮೆನೋಪಾಸ್ ಸಮಯದಲ್ಲೂ ಬೊಜ್ಜು ಹೆಚ್ಚಾಗುತ್ತವೆ. ಆ ಋತುವಿನಲ್ಲಿ ಅವರ ದೇಹದಲ್ಲಿ ಉಂಟಾಗುವ ಹಾರ್ಮೋನ್ ಬದಲಾವಣೆಗಳೇ ಇದಕ್ಕೆ ಕಾರಣ.

ಕ್ಯಾಲೊರಿಗಳನ್ನು ಲೆಕ್ಕಿಸಿ ದೀರ್ಘಕಾಲದವರೆಗೆ ಕಡಿಮೆ ಕ್ಯಾಲೊರಿಗಳನ್ನು ಸೇವಿಸುವುದರಿಂದ, ದೇಹವು ಆಹಾರದ ಅಗತ್ಯವನ್ನು ಗ್ರಹಿಸಿಕೊಂಡು ದೇಹದಲ್ಲಿ ಹೆಚ್ಚಿನ ಕೊಬ್ಬನ್ನು ಸಂಗ್ರಹಿಸಲು ಪ್ರಾರಂಭಿಸುತ್ತದೆ. ಒಬ್ಬರ ದೇಹದಲ್ಲಿ ಹಾರ್ಮೋನ್ ಸ್ರವಿಸುವಿಕೆಯಲ್ಲಿನ ಏರುಪೇರುಗಳಿಂದಲೂ ಕೊಬ್ಬಿನ ಶೇಖರಣೆಯನ್ನು ಹೆಚ್ಚಿಸಬಹುದು.

ಹೊಟ್ಟೆಯ ಸುತ್ತ ಕೊಬ್ಬಿನ ಶೇಖರಣೆಯಲ್ಲಿ ದೈಹಿಕ ಮತ್ತು ಮಾನಸಿಕ ಒತ್ತಡವು ಕೂಡ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅನೇಕ ಜನರಿಗೆ ತಿಳಿದಿರುವುದಿಲ್ಲ. ಅಂದರೆ, ನೀವು ಒತ್ತಡಕ್ಕೆ ಒಳಗಾದಾಗ, ದೇಹವು ಕಾರ್ಟಿಸೋಲ್ ಎಂಬ ಹಾರ್ಮೋನ್ ಅನ್ನು ಹೆಚ್ಚು ಸ್ರವಿಸುತ್ತದೆ.

ಆ ಹಾರ್ಮೋನ್ ಕೊಬ್ಬನ್ನು ಸೇರಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇದು ಹಸಿವಿನ ಭಾವನೆಯನ್ನು ಪ್ರಚೋದಿಸಿ ಹೆಚ್ಚಿನ ಕ್ಯಾಲೋರಿ ಮತ್ತು ಹೆಚ್ಚಿನ ಸಕ್ಕರೆಯ ಆಹಾರವನ್ನು ಸೇವಿಸುವಂತೆ ಮಾಡುತ್ತದೆ. ಕೆಲವು ಔಷಧಿಗಳು ಕೂಡ ತೂಕ ಹೆಚ್ಚಾಗಲು ಕಾರಣವಾಗಬಹುದು. ಇದು ವಿಶೇಷವಾಗಿ ಹೊಟ್ಟೆಯ ಸುತ್ತ ಕೊಬ್ಬನ್ನು ಹೆಚ್ಚಿಸಬಹುದು.

ಹೊಟ್ಟೆಯನ್ನು ಕಡಿಮೆ ಮಾಡುವುದು ಬಹಳ ಮುಖ್ಯ. ಇದು ಕಡಿಮೆಯಾಗದಿದ್ದರೆ ಮಧುಮೇಹ, ಅಧಿಕ ರಕ್ತದೊತ್ತಡ, ಬೊಜ್ಜು ಮುಂತಾದ ಹಲವು ಸಮಸ್ಯೆಗಳು ಎದುರಾಗುತ್ತವೆ. ಆದ್ದರಿಂದ, ನಿಮ್ಮ ವಿಚಾರದಲ್ಲಿ, ಹೊಟ್ಟೆಯ ಕೊಬ್ಬಿಗೆ ಕಾರಣವೇನು ಎಂಬುದನ್ನು ನೀವು ತಿಳಿದುಕೊಂಡು ಸರಿಯಾದ ಚಿಕಿತ್ಸೆ ಮತ್ತು ಜೀವನಶೈಲಿಯ ಬದಲಾವಣೆಗಳನ್ನು ತಕ್ಷಣವೇ ಪ್ರಾರಂಭಿಸಬೇಕು.

ನಿಮಗೆ ತಿಳಿದ ಪೌಷ್ಟಿಕ ಆಹಾರ ತಜ್ಞರನ್ನು ಸಂಪರ್ಕಿಸಿದಾಗ ಅವರು ನಿಮ್ಮನ್ನು ಕೂಲಂಕಷವಾಗಿ ಪರೀಕ್ಷಿಸಿ ನಿಮಗಾಗಿ ಆಹಾರ ಯೋಜನೆ ಮತ್ತು ಜೀವನಶೈಲಿಯ ಬದಲಾವಣೆಗಳನ್ನು ಸೂಚಿಸುತ್ತಾರೆ.

ರಾಜಕೀಯ

ಕೊಯಮತ್ತೂರು: ‘ಕೊಯಮತ್ತೂರು ಲೋಕಸಭಾ ಕ್ಷೇತ್ರದ ಕೆಲವು ಪ್ರದೇಶಗಳಲ್ಲಿ ಒಂದು ಲಕ್ಷ ಮತದಾರರು ಮತ ಹೊಂದಿಲ್ಲ’ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ಕೊಯಮತ್ತೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಣ್ಣಾಮಲೈ, “ಕೊಯಮತ್ತೂರು ಲೋಕಸಭಾ ಕ್ಷೇತ್ರದ ಕೆಲವು ಪ್ರದೇಶಗಳಲ್ಲಿ ಒಂದು ಲಕ್ಷ ಮತದಾರರು ಮತ ಹೊಂದಿಲ್ಲ. ಚುನಾವಣಾ ವೀಕ್ಷಕರು, ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಬಿಜೆಪಿ ವತಿಯಿಂದ ದೂರು ನೀಡಲಾಗಿದೆ. ಆದರೂ ಈ ಒಂದು ಲಕ್ಷ ಮತಗಳಿಗೆ ಯಾರು ಹೊಣೆ. ಇದು ಡಿಎಂಕೆಯ ರಾಜಕೀಯ ಷಡ್ಯಂತ್ರ” ಎಂದು ಹೇಳಿದ್ದಾರೆ.

ಕೊಯಮತ್ತೂರು ಲೋಕಸಭಾ ಕ್ಷೇತ್ರದ ಕೆಲವು ಪ್ರದೇಶಗಳಲ್ಲಿ ಒಂದು ಲಕ್ಷ ಮತದಾರರು ಮತ ಹೊಂದಿಲ್ಲ ಎಂದು ಚುನಾವಣೆ ಮುಗಿಯುವ ಸಂದರ್ಭದಲ್ಲಿ ಹೇಳುತ್ತಿರುವುದು ತಮಿಳುನಾಡು ರಾಜಕೀಯ ವಲಯದಲ್ಲಿ ನಗೆಪಾಟಿಲಿಗೆ ಕಾರಣವಾಗಿದೆ.

ಈ ಹಿಂದೆಯೇ ಪೋಲಿಂಗ್ ಏಜೆಂಟರನ್ನು ನೇಮಕಮಾಡಿ ಯಾವ ಮತದಾರರು ಬದುಕಿದ್ದಾರೆ, ಎಷ್ಟು ಜನ ಸತ್ತಿದ್ದಾರೆ, ಎಷ್ಟು ಜನ ತಮ್ಮ ಮನೆಯನ್ನು ಬದಲಾಯಿಸಿಕೊಂಡಿದ್ದಾರೆ, ಎಷ್ಟು ಜನರು ಕ್ಷೇತ್ರಕ್ಕೆ ಹೊಸದಾಗಿ ಬಂದಿದ್ದಾರೆ ಎಂದೆಲ್ಲಾ ಸರ್ವೆ ಮಾಡಿಸಲಾಗಿದೆ. ಚುನಾವಣಾ ದಿನಾಂಕ ಘೋಷಣೆ ಮಾಡಿದ ನಂತರವೂ ಮತದಾರರನ್ನು ಸೇರಿಸಲು ಮತ್ತು ತೆಗೆದುಹಾಕಲು ಚುನಾವಣಾ ಆಯೋಗ ಸಾಕಷ್ಟು ಕಾಲಾವಕಾಶವನ್ನೂ ನೀಡಿತ್ತು? ಕೊಯಮತ್ತೂರು ಬಿಜೆಪಿ ಅದನ್ನು ಯಾಕೆ ಸದುಪಯೋಗ ಪಡಿಸಿಕೊಂಡಿಲ್ಲ? ಅಂತಿಮ ಮತದಾರರ ನೋಂದಣಿ, ಪರಿಶೀಲನೆ ಮತ್ತು ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾದಾಗ ಪಕ್ಷದ ಸದಸ್ಯರು ಏನು ಮಾಡುತ್ತಿದ್ದರು? ಆಗ ನಿಮಗೆ ಗೊತ್ತಿಲ್ಲವೇ ಒಂದು ಲಕ್ಷ ಮತದಾರರು ಮತ ಹೊಂದಿಲ್ಲದ ವಿಚಾರ? ರಾಷ್ಟ್ರೀಯ ಪಕ್ಷವಾದ ಬಿಜೆಪಿ ಇದನ್ನು ಆಗಲೇ ಯಾಕೆ ಸರಿಪಡಿಸಲಿಲ್ಲ? ಈ ವಿಚಾರದಲ್ಲಿ ಬಿಜೆಪಿ ಬಹಳ ಎಚ್ಚರಿಕೆ ವಹಿಸುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಹಾಗಾಗಿ ನೀವು ಹೇಳುತ್ತಿರುವುದು ಸುಳ್ಳು.  

ಈ ಮೂಲಕ ನೀವು ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲಲೂ ಕೂಡ ಯೋಗ್ಯರಲ್ಲ ಎಂಬುದು ಈ ಮೂಲಕ ಸ್ಪಷ್ಟವಾಗಿದೆ. ಇದು ಚುನಾವಣೆಯಲ್ಲಿ ಸ್ಪರ್ಧಿಸುವ ಒಂದು ಪಕ್ಷದ ನಾಯಕನಿಗಿರುವ ಮೂಲ ಅರ್ಹತೆಯೇ? ಚುನಾವಣೆ ಗೆಲ್ಲಲು ಏನನ್ನೂ ಮಾಡದೇ ಬರೀ ಒಂದು ಲಕ್ಷ ಮತಗಳ ಅಂತರದಿಂದೆ ಗೆಲ್ಲುತ್ತೇನೆ ಎಂದೆಲ್ಲ ಬಡಾಯಿಕೊಚ್ಚಿಕೊಂಡು ಈಗ ಒಂದು ಲಕ್ಷ ಮತದಾರರು ಮತ ಹೊಂದಿಲ್ಲ; ಮತದಾನದಿಂದ ವಂಚಿತರಾಗಿದ್ದಾರೆ ಎಂದು ಕಥೆ ಹೇಳುತ್ತಿರುವುದು ನಾಚಿಕೆಗೇಡು. ಒಂದು ವೇಳೆ ಚುನಾವಣೆ ಸೋತಾಗ ಇದನ್ನೇ ಕಾರಣವಾಗಿ ಹೇಳಲು ಈಗಲೇ ತಯಾರಿ ಮಾಡಿಕೊಂಡಂತಿದೆ.

ಮತದಾನ ಮುಗಿಯುವ ಮುನ್ನವೇ ನಿಮ್ಮ ಮೂರನೇ ಸ್ಥಾನಕ್ಕೆ ಕಾರಣವನ್ನು ಕಂಡುಕೊಂಡಿದ್ದೀರಿ. ಇದನ್ನೇ ಜೂನ್ 4 ರಂದು ಹೇಳಲು ತಯಾರಾಗಿದ್ದಿರೀ…. ನಿಮ್ಮ ಸ್ನೇಹಿತರಿಗೂ ಇದೇ ಟೆಕ್ನಿಕಲ್ ಹೇಳಿಕೊಡಿ.

ವಿದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಹಲವು ವರ್ಷಗಳಿಂದ ಸಂಘರ್ಷ ನಡೆಯುತ್ತಿವೆ. ಪ್ಯಾಲೇಸ್ಟಿನಿಯನ್ ಪ್ರಾಂತ್ಯಗಳಲ್ಲಿ ಇಸ್ರೇಲ್‌ನ ನಿರಂತರ ವಸಾಹತು ಮತ್ತು ಅಲ್-ಅಕ್ಸಾ ಮಸೀದಿ ಪ್ರದೇಶವನ್ನು ಇಸ್ರೇಲ್ ವಶಪಡಿಸಿಕೊಂಡ ಕಾರಣ ಕೋಲಾಹಲ ಉಂಟಾಯಿತು.

ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಅಕ್ಟೋಬರ್ 7 ರಂದು ಇಸ್ರೇಲ್‌ನ ಕ್ರಮಕ್ಕೆ ಪ್ರತಿಯಾಗಿ ಹಮಾಸ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿತ್ತು. ಅಲ್ಲದೆ, ಇಸ್ರೇಲ್‌ನ ಹಲವು ಭಾಗಗಳಲ್ಲಿ ಹಮಾಸ್ ದಾಳಿ ನಡೆಸಿತು.

ಈ ಘಟನೆಯಲ್ಲಿ ನೂರಾರು ಇಸ್ರೇಲಿ ನಾಗರಿಕರು ಮತ್ತು ವಿದೇಶಿಯರು ಕೊಲ್ಲಲ್ಪಟ್ಟರು. ಇದಲ್ಲದೆ, ಹಮಾಸ್‌ನಿಂದ ಅನೇಕರನ್ನು ಒತ್ತೆಯಾಳುಗಳಾಗಿ ಇರಿಸಲಾಗಿತ್ತು. ಹಮಾಸ್‌ನ ಈ ಕ್ರಮಕ್ಕೆ ಪ್ರತಿಕ್ರಿಯೆಯಾಗಿ, ಇಸ್ರೇಲಿ ಸೇನೆಯು ಕ್ಷಿಪಣಿಗಳು ಮತ್ತು ವಿಮಾನಗಳನ್ನು ಕಳುಹಿಸುವ ಮೂಲಕ ಗಾಜಾ ಪಟ್ಟಿಯ ಮೇಲೆ ದಾಳಿ ಮಾಡುತ್ತಿದೆ.

ಹಮಾಸ್ ನಿಯಂತ್ರಣದಲ್ಲಿರುವ ಗಾಜಾ ಆರೋಗ್ಯ ಸಚಿವಾಲಯವು ಈ ದಾಳಿಯಲ್ಲಿ ಇದುವರೆಗೆ 27,000 ಕ್ಕೂ ಹೆಚ್ಚು ಅಮಾಯಕ ಪ್ಯಾಲೆಸ್ತೀನ್ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ. ಅಂತೆಯೇ, ಇಸ್ರೇಲ್ ದಾಳಿಯಲ್ಲಿ ಇದುವರೆಗೆ 66,139 ಜನರು ಗಾಯಗೊಂಡಿದ್ದಾರೆ ಎಂದೂ ವರದಿಯಾಗಿದೆ. ಬಹುತೇಕ 6 ತಿಂಗಳಿಗೂ ಹೆಚ್ಚು ಕಾಲ ಯುದ್ಧ ನಡೆಯುತ್ತಿದೆ.

ಈ ಹಿನ್ನಲೆಯಲ್ಲಿ, ಪ್ಯಾಲೆಸ್ತೀನ್ ಮಹಿಳೆಯೊಬ್ಬರು ಸತ್ತ ಮಗುವಿನ ಶವವನ್ನು ತಬ್ಬಿಕೊಂಡಿರುವ ಫೋಟೋಗೆ 2024ನೇ ಸಾಲಿನ ‘ವಿಶ್ವದ ಅತ್ಯುತ್ತಮ ಮಾಧ್ಯಮ ಫೋಟೋ’ ಪ್ರಶಸ್ತಿ ಲಭಿಸಿದೆ.

ವರ್ಲ್ಡ್ ಪ್ರೆಸ್ ಫೋಟೋ ಫೌಂಡೇಶನ್ (World Press Photo Foundation) ಎಂಬ ಸಂಸ್ಥೆ ವಾರ್ಷಿಕವಾಗಿ ಅತ್ಯುತ್ತಮ ಪತ್ರಿಕಾ ಛಾಯಾಚಿತ್ರಗಳಿಗಾಗಿ ಪ್ರಶಸ್ತಿಗಳನ್ನು ನೀಡುತ್ತದೆ. ಈ ವರ್ಷ ರಾಯಿಟರ್ಸ್ ಛಾಯಾಗ್ರಾಹಕ ಮೊಹಮ್ಮದ್ ಸಲೇಂ ಪ್ರಶಸ್ತಿ ಗೆದ್ದಿದ್ದಾರೆ.

ಅಕ್ಟೋಬರ್ 2023ರಲ್ಲಿ ಇಸ್ರೇಲಿ-ಪ್ಯಾಲೆಸ್ತೀನ್ ಯುದ್ಧವು ಪ್ರಾರಂಭವಾದಾಗ ಛಾಯಾಚಿತ್ರಗಳನ್ನು ತೆಗೆಯಲು ದಕ್ಷಿಣ ಗಾಜಾದ ನಾಸರ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಆಗ ಮಹಿಳೆಯೊಬ್ಬಳು ತನ್ನ ಸತ್ತ ಮಗುವನ್ನು ತಬ್ಬಿಕೊಂಡಿರುವುದನ್ನು ನೋಡಿ ಚಿತ್ರ ತೆಗೆದಿದ್ದಾರೆ. ಈ ಚಿತ್ರ ಬಿಡುಗಡೆಯಾದ ನಂತರವೇ ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದ ಕ್ರೂರ ಮುಖ ಜಗತ್ತಿಗೆ ತಿಳಿಯಿತು.

ಈ ಯುದ್ಧದಲ್ಲಿ 99 ಪತ್ರಕರ್ತರು ಸಾವನ್ನಪ್ಪಿದ್ದಾರೆ ಎಂಬುದು ಗಮನಾರ್ಹ. 2010ರಲ್ಲಿ, ಮೊಹಮ್ಮದ್ ಸಲೇಂ ಅವರು ವಿಶ್ವದ ಅತ್ಯುತ್ತಮ ಮಾಧ್ಯಮ ಫೋಟೋ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂಬುದು ಗಮನಾರ್ಹ. “ಈ ಫೋಟೋ ತೆಗೆಯುವಾಗ ತೀವ್ರವಾಗಿ ಪ್ರಭಾವಿತನಾಗಿದ್ದೆ” ಎಂದು ಮೊಹಮ್ಮದ್ ಸಲೇಂ ಹೇಳಿದ್ದಾರೆ.

ರಾಜ್ಯ

ಬೆಂಗಳೂರು: ಹುಬ್ಬಳ್ಳಿಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಫಯಾಜ್‌ ಎಂಬ ಯುವಕ ನೇಹಾ ಎಂಬ ಯುವತಿಯನ್ನು ತಾನು ಓದುತ್ತಿರುವ ಕಾಲೇಜಿನ ಆವರಣದಲ್ಲಿಯೆ ಇರಿದು ಕೊಂದಿದ್ದಾನೆ. ಇಬ್ಬರೂ ಪರಿಚಿತರಿದ್ದರೂ ಹುಡುಗಿ ಮದುವೆಗೆ ಒಪ್ಪಲಿಲ್ಲ ಎಂಬುದೇ ಕೊಲೆಗೆ ಕಾರಣ ಎನ್ನಲಾಗಿದೆ ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್ ಹೇಳಿದ್ದಾರೆ.   

ಆರೋಪಿ ಹುಡುಗ ಬಂಧನವಾಗಿ ಕಾನೂನುಪ್ರಕ್ರಿಯೆ ನಡೆಯುತ್ತಿದೆ. ಈ ಕರುಳು ಕಲಕುವ ಘಟನೆ ಖಂಡನೀಯ. ಈ ಹೆಣ್ಣುಮಗಳ ಬದುಕಿನ ಈ ರೀತಿಯ ಅಂತ್ಯಕ್ಕೆ ಕಾರಣವಾದ ಆರೋಪಿಯ ಮೇಲೆ ಸೂಕ್ತ ಹಾಗೂ ಶೀಘ್ರ ಕಾನೂನು ರೀತಿಯ ಕ್ರಮಜರುಗಿಸಲು ಪೊಲೀಸ್ ಇಲಾಖೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕೊಲೆ ಆರೊಪಿಯನ್ನು ಒಂದು ಘಂಟೆಯೊಳಗೆ ಬಂಧಿಸಿದ ಹುಬ್ಬಳ್ಳಿ ಪೊಲೀಸರ ಕಾರ್ಯ ಶ್ಲಾಘನಿಯ ಎಂದು ಹೇಳಿರುವ ಖಾಸಿಂ ಸಾಬ್, ಇತ್ತೀಚೆಗೆ ಪುತ್ತೂರಿನ ಜಯಶ್ರೀ ಎಂಬ ಯುವತಿ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಉಮೇಶ್ ಎಂಬ ಯುವಕ ಈ ಹುಡುಗಿಯನ್ನು ಹತ್ಯೆ ಮಾಡಿದ್ದ. ಇಂತಹ ನೂರಾರು ಪ್ರೀತಿ ಪ್ರೇಮಗಳ ನೆಪಗಳ ಸುತ್ತ ಹತ್ಯೆಗಳು, ಆಸಿಡ್ ದಾಳಿಗಳು ನಮ್ಮ ನಡುವೆ ನಡೆಯುತ್ತಲೇ ಇವೆ.

ಈ ಕೃತ್ಯಗಳು ಅಮಾನವೀಯ ಹಾಗೂ ಶಿಕ್ಷಾರ್ಹ. ಇಂತಹ ಘಟನೆಗಳಿಗೆ ಕೋಮು ಧರ್ಮಗಳ ಬಣ್ಣ ಬಳಿಯುವ ನೀಚ ರಾಜಕೀಯ ಮಾಡದಿರಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸುತ್ತ, ಕೆಲವು ರಾಜಕೀಯ ಮುಖಂಡರು ಈ ಘಟನೆಯನ್ನು ಧರ್ಮ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವುದು ಬೇಸರದ ಸಂಗತಿ ಎಂದು ವಿಷಾದ ವ್ಯಕ್ತ ಪಡಿಸಿದ್ದಾರೆ

ಆರೋಪಿಯ ಜಾತಿ, ಧರ್ಮ, ವರ್ಗ, ಹೆಸರನ್ನು ನೋಡಿ ಅಪರಾಧವನ್ನು ಆತನ ಇಡೀ ಸಮುದಾಯದ ತಲೆಗೆ ಕಟ್ಟಿ, ಸಮಾಜದಲ್ಲಿ ಹಿಂದು ಮುಸ್ಲಿಮರ ಮಧ್ಯೆ ಭಯ ಮತ್ತು ಸಂಶಯವನ್ನುಂಟು ಮಾಡಿ ಈ ಚುನಾವಣಾ ಸಂಧರ್ಭದಲ್ಲಿ ರಾಜಕೀಯಲಾಭ ಮಾಡಿಕೊಳ್ಳಲು ಹೊರಟಿರುವ ರಾಜಕಾರಣಿಗಳ ನೀಚನಡೆ ಖಂಡನೀಯ ಎಂದು ಹೇಳಿದ್ದಾರೆ.

ನೇಹಾ ಹಂತಕ ಫಯಾಜ್ ಬೆಳಗಾವಿ ಜಿಲ್ಲೆ ಮುನವಳ್ಳಿಯವನಾಗಿದ್ದು, ಅಲ್ಲಿ ಹಿಂದೂ-ಮುಸ್ಲಿಮರು ಜಂಟಿಯಾಗಿ ಈ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸಂಕೇಶ್ವರ-ಸವದತ್ತಿ ಹೆದ್ದಾರಿಯಲ್ಲಿ ಮುಸ್ಲಿಂ ಸಮುದಾಯದ ನೂರಾರು ಮಂದಿ ನೇಹಾ ಫೊಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಈ ಅಮಾನವಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೆ ಇಂತಹ ಅಮಾನವೀಯ ನೇಹಾ ಹತ್ಯೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ  ತೀವ್ರವಾಗಿ ಖಂಡಿಸುತ್ತದೆ. ಜೊತೆಗೆ ಅಳ್ನಾವರ, ಕುಂದಗೋಳ, ಕಲಘಟಗಿ, ಹುಬ್ಬಳ್ಳಿ ಹಾಗೂ ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷರುಗಳು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾರೇ ಕಾನೂನು ಕೈಗೆತ್ತಿಕೊಂಡರೂ ಖಂಡಿಸುತ್ತೇವೆ. ಪೊಲೀಸರ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಬೆಂಗಳೂರಿನಲ್ಲಿ ನೀಡಿರುವ ಹೇಳಿಕೆ ಸ್ವಾಗತಾರ್ಹ ಎಂದು ಸರ್ಕಾರದ ನಡೆಯನ್ನು ಸ್ವಾಗತಿಸಿದ್ದಾರೆ.  

ಅಪರಾದಿಗೆ ಸೂಕ್ತ ಹಾಗೂ ಶೀಘ್ರ ಕಾನೂನು ಶಿಕ್ಷೆ ಆಗಬೇಕು ವೆಂಬುದು ನಮ್ಮ ಬೇಡಿಕೆ. ನೇಹಾ ಸಾವಿನ ದುಃಖ ಭರಿಸು ಶಕ್ತಿ ಆ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ಪ್ರಾರ್ಥನೆಯಾಗಿದೆ ಎಂದು ಕರ್ನಾಟಕ ಖಾಸಿಂ ಸಾಬ್ ಹೇಳಿದ್ದಾರೆ.  

ದೇಶ

ಮಣಿಪುರ,
ಮಣಿಪುರದ ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ಥಮನ್‌ಪೋಕ್ಪಿ ಎಂಬಲ್ಲಿನ ಮತದಾನ ಕೇಂದ್ರದ ಬಳಿ ದುಷ್ಕರ್ಮಿಗಳ ಗುಂಪೊಂದು ಶುಕ್ರವಾರ ಹಲವು ಸುತ್ತು ಗುಂಡು ಹಾರಿಸಿದೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಆರಂಭವಾಗುತ್ತಿದ್ದಂತೆಯೇ ತಮ್ಮ ಹಕ್ಕು ಚಲಾಯಿಸಲು ಸಾಲುಗಟ್ಟಿ ನಿಂತಿದ್ದ ಮತದಾರರಲ್ಲಿ ಈ ಗುಂಡಿನ ದಾಳಿ ಆತಂಕಕ್ಕೆ ಕಾರಣವಾಗಿದೆ. ಗುಂಡಿನ ಸದ್ದಿನ ನಡುವೆ ಜನರು ಮತಗಟ್ಟೆಯಿಂದ ಹೊರಗೆ ಓಡಿ ಬರುತ್ತಿರುವ ವಿಡಿಯೋ ವೈರಲ್ ಆಗಿದೆ.

ಒಳ ಮಣಿಪುರ ಲೋಕಸಭಾ ಕ್ಷೇತ್ರ ಮತ್ತು ಹೊರ ಮಣಿಪುರದ ಕೆಲವು ಭಾಗಗಳಲ್ಲಿ ಶುಕ್ರವಾರ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳ ನಡುವೆ ಮತದಾನ ನಡೆಯಿತು. ಇಂಫಾಲ್ ಕಣಿವೆಯಲ್ಲಿ ವಾಸಿಸುವ ಬಹುಸಂಖ್ಯಾತ ಮೈತೇಯಿ ಮತ್ತು ಕುಕಿ-ಜೋ ಬುಡಕಟ್ಟು ಸಮುದಾಯದ ನಡುವೆ ಕಳೆದ ಒಂದು ವರ್ಷದಿಂದ ಮಣಿಪುರ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿದೆ.

ಕೆಲವು ಸ್ಥಳಗಳಲ್ಲಿ ಅಶಾಂತಿಯ ದಾರಿತಪ್ಪಿ ಘಟನೆಗಳು ವರದಿಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಒಳ ಮಣಿಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತೊಂಗ್ಜು ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯರು ಮತ್ತು ಅಪರಿಚಿತ ದುಷ್ಕರ್ಮಿಗಳ ನಡುವೆ ಮಾರಾಮಾರಿ ನಡೆದಿದೆ.

ಏತನ್ಮಧ್ಯೆ, ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಲುವಾಂಗ್‌ಸಾಂಗ್‌ಬಾಮ್ ಮಮಾಂಗ್ ಲೈಕೈಯಲ್ಲಿ ಮತ ಚಲಾಯಿಸಿದರು ಮತ್ತು ರಾಜ್ಯದ ಸ್ಥಳೀಯ ಜನರನ್ನು ಉಳಿಸಲು ಮತ್ತು ಅದರ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಜನರು ತಮ್ಮ ಹಕ್ಕು ಚಲಾಯಿಸುವಂತೆ ಒತ್ತಾಯಿಸಿದರು.

“ನಾನು ಮಣಿಪುರದ ಜನರಿಗೆ ಮತ ಚಲಾಯಿಸಲು, ರಾಜ್ಯದ ಸ್ಥಳೀಯ ಜನಸಂಖ್ಯೆಯನ್ನು ಉಳಿಸಲು, ರಾಜ್ಯದ ಸಮಗ್ರತೆಯನ್ನು ರಕ್ಷಿಸಲು ಮತ್ತು ಶೀಘ್ರವಾಗಿ ಶಾಂತಿಯನ್ನು ತರಲು ಮನವಿ ಮಾಡಲು ಬಯಸುತ್ತೇನೆ” ಎಂದು ಬಿರೇನ್ ಸಿಂಗ್ ಹೇಳಿದ್ದಾರೆ.

ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ ಮತ್ತು ತನ್ನ ಮಿತ್ರಪಕ್ಷ ಎನ್‌ಪಿಎಫ್‌ಗೆ ಬೆಂಬಲ ಘೋಷಿಸಿದೆ. “ನಾವು ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಬೇಕಾಗಿದೆ. ಅದಕ್ಕೆ ನನಗೆ ಅವಕಾಶ ಸಿಕ್ಕಿದೆ. ರಾಜ್ಯದ ನನ್ನ ಸಹೋದರ ಸಹೋದರಿಯರಲ್ಲಿ ಬಿಜೆಪಿಗೆ ಮತ ನೀಡಿ ಮೋದಿಯವರನ್ನು ಬಲಪಡಿಸುವಂತೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ರಾಜಕೀಯ

ಬೆಂಗಳೂರು: ನಮ್ಮ ದೇಶ ಚುನಾವಣೆಯ ಹೊಸ್ತಿಲಿನಲ್ಲಿದೆ. ಈ ಬಾರಿ ನಡೆಯುವಂತಹ ಚುನಾವಣೆಯು ಪ್ರಜಾಪ್ರಭುತ್ವ ಭಾರತದ ಭವಿಷ್ಯವನ್ನು ನಿರ್ಣಯಿಸುವ ಚುನಾವಣೆಯಾಗಿದೆ ಎಂದು ವೆಲ್‌ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಹೇಳಿದ್ದಾರೆ.

“ಕಳೆದ ಹತ್ತು ವರ್ಷಗಳ ಆಡಳಿತ ಇಲ್ಲಿನ ಸಂವಿಧಾನದ ಆಶಯವನ್ನು ದುರ್ಬಲ ಪಡಿಸುವಂತಿದೆ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಮುಂದೆ ಏನಾದರೂ ಈ ಅಧಿಕಾರ ಮುಂದುವರಿದರೆ ಸಂವಿಧಾನವನ್ನೇ ಬದಲಾಯಿಸುವ ಸಾಧ್ಯತೆ ಇದೆ. ಅವರು ಅದನ್ನು ಹೇಳುತ್ತಲೂ ಇದ್ದಾರೆ. ಮುಂದಿನ ದಿನಗಳು ನಿಜಕ್ಕೂ ಜಾತ್ಯಾತೀತ ತತ್ವಗಳಿಗೆ ಮಾರಕವಾಗಲಿದೆ. ಕೋಮುಪ್ರಚೋದನೆ ಮಾತ್ರ ಇವರ ಬಂಡವಾಳ. ಅದನ್ನು ಬಳಸಿಕೊಂಡು ಜನರನ್ನು ದಾರಿಗೆಡಿಸುತ್ತಿದ್ದಾರೆ.

ಧಾರ್ಮಿಕ ಭಾವನೆ ಕೆರಳಿಸುವ ಭಾಷಣದ ಮುಖಾಂತರ ಮತಪೆಟ್ಟಿಗೆ ಭದ್ರ ಪಡಿಸುತ್ತಿದ್ದಾರೆ. ಕಾರ್ಪೊರೇಟ್ ದಿಗ್ಗಜರ ಕೈಗೆ ದೇಶವನ್ನು ನೀಡುತ್ತಿದ್ದಾರೆ. ರೈತರನ್ನು ಕಡೆಗಣಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ವ್ಯಾಪಕವಾಗಿ ಯುವಕರ ಆತ್ಮಹತ್ಯೆ ಪ್ರಕರಣಗಳೂ ಹೆಚ್ಚಾಗಿದೆ. ಅಡುಗೆ ಅನಿಲ ಗ್ರಹ ಬಳಕೆ ಆಹಾರ ಸಾಮಾಗ್ರಿಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿದ್ದಾರೆ. ಹೀಗೆ ದೇಶದ ಎಲ್ಲಾ ಮೂಲಭೂತ ಸಮಸ್ಯೆಗಳನ್ನೂ ಕಡೆಗಣಿಸಲಾಗುತ್ತಿದೆ. ಆದರೂ ಆಡಳಿತಾರೂಡರು ದೇಶದ ಅಭಿವೃದ್ಧಿಯ ಮಾತನಾಡುತ್ತಿದ್ದಾರೆ.

ದೇಶದ ಅಲ್ಪ ಸಂಖ್ಯಾತರಿಗೆ ಮತ್ತು ದಲಿತ, ಹಿಂದುಳಿದ ವರ್ಗಗಳಲ್ಲಿ ಅಭದ್ರತಾ ಭಾವನೆ ಹೆಚ್ಚಾಗುತ್ತಿದೆ. ಮಣಿಪುರದಲ್ಲಿ ಕ್ರೈಸ್ತರ ವಿರುದ್ಧ ನಡೆಯುತ್ತಿರುವಂತಹ ದಾಳಿಯ ಬಗ್ಗೆ ಕೇಂದ್ರ ಮೌನವಾಗಿದೆ. ಪ್ರತಿ ಪಕ್ಷಗಳ ಮೇಲೆ ಇಡಿ, ಐಟಿ ದಾಳಿಯ ಮೂಲಕ ಬೆದರಿಸಿ ಬಾಯ್ಮುಚ್ಚಿಸುವ ಶ್ರಮ ನಡೆಯುತ್ತಿವೆ. ತಮ್ಮ ಪಕ್ಷಕ್ಕೆ ಸೇರುವವರಿಗೆ ಕ್ಲೀನ್ ಚಿಟ್ ನೀಡುತ್ತಿದೆ. ಹೀಗೆ ಆಡಳಿತವು ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ. ಹೀಗಿರುವಾಗ ಪ್ರತಿಪಕ್ಷಗಳ ಒಕ್ಕೂಟದ ಅಗತ್ಯ ಈ ದೇಶಕ್ಕೆ ಅಗತ್ಯವಿದೆ.

ಈ ದೇಶವನ್ನು ಈ ಸ್ವಾರ್ಥ ಹಿತಾಸಕ್ತಿಗಳಿಂದ ಕಾಪಾಡಬೇಕಾಗಿದೆ. ಮತದಾನ ಎಂಬ ಮೂಲಭೂತ ಹಕ್ಕುಗಳನ್ನು ಚಲಾಯಿಸುವ ಸಮಯ ಕೂಡಿ ಬಂದಿದೆ. ಇದನ್ನು ಸಮರ್ಪಕವಾಗಿ ಬಳಸಬೇಕಾಗಿದೆ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರೂ ಇದರಲ್ಲಿ ಭಾಗಿಯಾಗುವಂತೆ ಮಾಡಲು ಶಕ್ತಿ ಮೀರಿ ಪ್ರಯತ್ನಿಸಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಇದರ ಅಗತ್ಯವಿದೆ. ಭಾರತ ಉತ್ತಮ ಭವಿಷ್ಯದ ದೃಷ್ಟಿಯಿಂದ ಎಲ್ಲರೂ ಇದರಲ್ಲಿ ಕೈಜೋಡಿಸಬೇಕಾಗಿದೆ” ಎಂದು ವೆಲ್‌ಫೇರ್ ಪಾರ್ಟಿಯ ತಾಹೇರ್ ಹುಸೇನ್ ಹೇಳಿದ್ದಾರೆ.

ದೇಶ

ಶ್ರೀರಾಮ ನವಮಿ ದಿನವಾದ ಇಂದು (ಏಪ್ರಿಲ್ 17) ಅಯೋಧ್ಯೆಯ ರಾಮ ಮಂದಿರದಲ್ಲಿ ಸೂರ್ಯನ ಕಿರಣಗಳು ನೇರವಾಗಿ ರಾಮನ ಹಣೆಗೆ ತಿಲಕದಂತೆ ಅಪ್ಪಳಿಸಿದ್ದು ಭಕ್ತರನ್ನು ಪುಳಕಿತಗೊಳಿಸಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಕುಂಭಾಭಿಷೇಕ ಸಮಾರಂಭ ಕಳೆದ ಜನವರಿ 22 ರಂದು ನಡೆಯಿತು. ಸಮಾರಂಭ ಮುಗಿದ ಮರುದಿನದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು. ತದನಂತರ, ಹೊರ ರಾಜ್ಯಗಳಲ್ಲದೆ ಹೊರ ಡೇಶಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ, ಶ್ರೀರಾಮನವಮಿಯ ಹಬ್ಬವಾದ ಇಂದು (ಏಪ್ರಿಲ್ 17), ಗರ್ಭಗುಡಿಯಲ್ಲಿರುವ ರಾಮನ ಪ್ರತಿಮೆಯ ಹಣೆಯ ಮೇಲೆ ಸೂರ್ಯನ ಬೆಳಕು ಬೀಳುವ ಅಪರೂಪದ ವಿದ್ಯಮಾನವು ಅಯೋಧ್ಯೆ ರಾಮಮಂದಿರದಲ್ಲಿ ಸರಿಯಾಗಿ ಮಧ್ಯಾಹ್ನ 12.16 ಕ್ಕೆ ನಡೆದಿದೆ. ಸೂರ್ಯನ ಕಿರಣಗಳು ನೇರವಾಗಿ ರಾಮನ ಹಣೆಗೆ ತಿಲಕದಂತೆ ಅಪ್ಪಳಿಸಿದ್ದು ಭಕ್ತರನ್ನು ಪುಳಕಿತಗೊಳಿಸಿದೆ.

ಈ ಘಟನೆ ಸುಮಾರು 5 ನಿಮಿಷಗಳ ಕಾಲ ನಡೆಯಿತು. ಈ ಅಪರೂಪದ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ರಾಮಮಂದಿರಕ್ಕೆ ಆಗಮಿಸಿದ್ದರು. ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿ ರಾಮನ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದರು. ಸೂರ್ಯನ ಬೆಳಕು ನೇರವಾಗಿ ರಾಮನ ಹಣೆಯ ಮೇಲೆ ಬೀಳುವ ರೀತಿಯಲ್ಲಿ ರಾಮಮಂದಿರವನ್ನು ವಿನ್ಯಾಸ ಮಾಡಿರುವುದು ಗಮನಾರ್ಹ.

ಅಯೋಧ್ಯೆಯಲ್ಲಿ ಶ್ರೀರಾಮನ ಹಣೆಯ ಮೇಲೆ ಸೂರ್ಯನ ಬೆಳಕು ಬೀಳುವ ಈ ವೀಡಿಯೋವನ್ನು ಪ್ರಧಾನಿ ಮೋದಿಯವರು ತಮ್ಮ ಹಾರಾಟದ ಸಮಯದಲ್ಲಿ ‘ಟೇಪ್’ನಲ್ಲಿ ವೀಕ್ಷಿಸಿದರು. ಈ ಫೋಟೋವನ್ನು ಪ್ರಧಾನಿ ಮೋದಿ ಎಕ್ಸ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲದೆ, “ಅಯೋಧ್ಯೆಯಲ್ಲಿ ರಾಮನ ಹಣೆಯ ಮೇಲೆ ಬೀಳುವ ಸೂರ್ಯನ ಬೆಳಕನ್ನು ನೋಡುವ ಭಾಗ್ಯ ನನಗೆ ಸಿಕ್ಕಿದೆ. ಲಕ್ಷಾಂತರ ಭಾರತೀಯರಂತೆ ನನಗೂ ಇದು ಅತ್ಯಂತ ಭಾವನಾತ್ಮಕ ಕ್ಷಣವಾಗಿದೆ. “ಈ ಸೂರ್ಯ ತಿಲಕವು ಅಭಿವೃದ್ಧಿ ಹೊಂದಿದ ಭಾರತದ ಪ್ರತಿಯೊಂದು ಸಂಕಲ್ಪವನ್ನು ತನ್ನ ದೈವಿಕ ಶಕ್ತಿಯಿಂದ ಬೆಳಗಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವಿದೇಶ

ಮ್ಯಾನ್ಮಾರ್‌,

ಆಂಗ್ ಸಾನ್ ಸೂ ಕಿ (ವಯಸ್ಸು 78) ಆಗ್ನೇಯ ಏಷ್ಯಾದ ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತದ ವಿರುದ್ಧ ಅನೇಕ ಪ್ರತಿಭಟನೆಗಳಿಗೆ ನೇತೃತ್ವ ವಹಿಸಿದವರು. ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಾದ ಇವರು 2020ರಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಪಕ್ಷದ ಪರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ನಾಯಕರಾಗಿ ಆಯ್ಕೆಯಾದರು.

ಆದರೆ ಮರುವರ್ಷವೇ ಚುನಾವಣೆಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪಿಸಿ ಅವರನ್ನು ಹುದ್ದೆಯಿಂದ ಕಿತ್ತು ಹಾಕಿ ಅಲ್ಲಿ ಮತ್ತೆ ಮಿಲಿಟರಿ ಆಡಳಿತ ತರಲಾಯಿತು. ಅದರೊಂದಿಗೆ 2½ ವರ್ಷಗಳ ಕಾಲ ಅಲ್ಲಿ ತುರ್ತು ಪರಿಸ್ಥಿತಿಯನ್ನೂ ಹೇರಲಾಯಿತು. ಏತನ್ಮಧ್ಯೆ, ಆಂಗ್ ಸಾನ್ ಸೂ ಕಿ ಸೇರಿದಂತೆ 100ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಆಂಗ್ ಸಾನ್ ಸೂ ಕಿ ವಿರುದ್ಧ ಸೇನೆಯ ವಿರುದ್ಧ ದಂಗೆ, ಭ್ರಷ್ಟಾಚಾರ ಮತ್ತು ಇತರ ಆರೋಪಗಳನ್ನು ಹೊರಿಸಲಾಗಿದೆ. ಈ ಸಂಬಂಧ ಹಲವು ಪ್ರಕರಣಗಳು ಆ ದೇಶದ ನ್ಯಾಯಾಲಯಗಳಲ್ಲಿ ಬಾಕಿ ಇವೆ. ಈ ಪೈಕಿ ಕೆಲವು ಪ್ರಕರಣಗಳಲ್ಲಿ ಇದುವರೆಗೆ 27 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಈ ಹಿನ್ನಲೆಯಲ್ಲಿ, ಆಂಗ್ ಸಾನ್ ಸೂ ಕಿ ಅವರನ್ನು ಜೈಲಿನಿಂದ ಗೃಹಬಂಧನಕ್ಕೆ ವರ್ಗಾಯಿಸಲಾಗಿದೆ ಎಂದು ಮ್ಯಾನ್ಮಾರ್ ಸೇನೆ ತಿಳಿಸಿದೆ. ಶಾಖದ ಅಲೆಯಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಜೈಲಿನಿಂದ ವರ್ಗಾವಣೆಗೊಂಡಿರುವ ಆಂಗ್ ಸಾನ್ ಸೂ ಕಿ ಎಲ್ಲಿದ್ದಾರೆ ಎಂಬುದು ತಿಳಿದುಬಂದಿಲ್ಲ.

ರಾಜಕೀಯ

ಡಿ.ಸಿ.ಪ್ರಕಾಶ್, ಸಂಪಾದಕರು

ಪ್ರಧಾನಿ ಮೋದಿಯವರು, ‘ಈ ಬಾರಿ 370 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲ್ಲಲಿದೆ’ ಎಂದು ಹೇಳಿದ ಮೇಲೆ ಬಿಜೆಪಿ ಸದಸ್ಯರು ಉತ್ಸಾಹದಿಂದ ‘ಮತ್ತೊಮ್ಮೆ ಮೋದಿ… ಮತ್ತೊಮ್ಮೆ ಮೋದಿ ‘ ಎಂಬ ಘೋಷಣೆಯನ್ನು ಎತ್ತುತ್ತಿದ್ದಾರೆ. ಆದಾಗ್ಯೂ, ಭಾರತದಾದ್ಯಂತ ನೆಲದ ವಾಸ್ತವತೆ (Ground Reality) ಹೇಗಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಮೂರನೇ ಬಾರಿ ಗೆದ್ದು ಆಡಳಿತ ಮುಂದುವರಿಸುವ ಹಠಕ್ಕೆ ಬಿದ್ದಿರುವ ಬಿಜೆಪಿ, ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ಕ್ಷೇತ್ರದಲ್ಲಿ ಗಂಭೀರತೆ ತೋರಿಸುತ್ತಿದೆ. ಒಟ್ಟು 370 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅದನ್ನು ಹೇಗಾದರೂ ಮಾಡಿ ಈಡೇರಿಸಬೇಕು ಎಂದು ಪಕ್ಷದ ಕಾರ್ಯಕರ್ತರು ಗಂಭೀರತೆ ತೋರಿಸುತ್ತಿದ್ದಾರೆ.

ಪ್ರಧಾನಿ ಮೋದಿಯವರು 370, 400 ಎಂಬ ಸಂಖ್ಯೆಗಳನ್ನು ಹೇಳಿದ ಮೇಲೆ ಬಿಜೆಪಿಯವರು ‘ಮತ್ತೊಮ್ಮೆ ಮೋದಿ… ಮತ್ತೊಮ್ಮೆ ಮೋದಿ ‘ ಎಂಬ ಘೋಷಣೆಯನ್ನು ಎಲ್ಲಡೆಯೂ ಎತ್ತುತ್ತಿದ್ದಾರೆ. ಆದಾಗ್ಯೂ, ಭಾರತದಾದ್ಯಂತ ಗ್ರೌಂಡ್ ರಿಯಾಲಿಟಿ ಹೇಗಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಕೇಂದ್ರದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚಿಸುತ್ತದೆಯೇ? ಮೋದಿ ಪ್ರಧಾನಿ ಕುರ್ಚಿ ಉಳಿಸಿಕೊಳ್ಳುತ್ತಾರೆಯೇ? ಎಂಬ ಪ್ರಶ್ನೆಗಳು ಒಂದೆಡೆಯಾದರೇ ಬಿಜೆಪಿಗೆ ಎಷ್ಟು ಸ್ಥಾನ ಸಿಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

2014 ಮತ್ತು 2019ರ ಲೋಕಸಭಾ ಚುನಾವಣೆಗಿಂತ 2024ರ ಚುನಾವಣೆ ಅಖಾಡ ಭಿನ್ನವಾಗಿದೆ. 2014ರಲ್ಲಿ ಮೋದಿ ಅಲೆ ಭಾರತವನ್ನು ಆವರಿಸಿದ್ದು ಸ್ಪಷ್ಟವಾಗಿತ್ತು. ಆದರೆ, 2019ರಲ್ಲಿ ಮೋದಿ ಪರ ಅಲೆ ಎದ್ದಂತೆ ಕಾಣಲಿಲ್ಲ. ನೋಟು ಅಮಾನ್ಯೀಕರಣ, ಜಿಎಸ್‌ಟಿ, ಎರಡು ಕೋಟಿ ಜನರಿಗೆ ಉದ್ಯೋಗದ ಭರವಸೆಗಳನ್ನು ಈಡೇರಿಸದಿರುವುದು ಮತ್ತು ರೈತರ ಆಕ್ರೋಶದ ಹಿನ್ನೆಲೆಯಲ್ಲಿ 2019ರ ಚುನಾವಣೆ ನಡೆಯಿತು. ಅದರಲ್ಲಿ ಬಿಜೆಪಿ 303 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಆ ಯಶಸ್ಸಿಗೆ ಕಾರಣ ಮೋದಿ ಅಲೆಯಲ್ಲ ಎಂಬುದು ಎಲ್ಲರ ಅಭಿಪ್ರಾಯ.

ಪುಲ್ವಾಮಾ ದಾಳಿಯಲ್ಲಿ ಅರೆಸೇನಾ ಪಡೆ ಯೋಧರ ಹತ್ಯೆಯ ಘಟನೆಯನ್ನು ಬಿಜೆಪಿ ತನ್ನ ಚುನಾವಣಾ ಗೆಲುವಿಗೆ ಬಳಸಿಕೊಂಡಿತು ಎಂದು ವಿರೋಧ ಪಕ್ಷಗಳು ಇನ್ನೂ ಟೀಕಿಸುತ್ತಿವೆ. ಆ ವಿಷಯದಲ್ಲಿ ಪುಲ್ವಾಮಾ ದಾಳಿಯ ವೇಳೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆಗಿದ್ದ ಸತ್ಯಪಾಲ್ ಮಲಿಕ್ ಮಾಡಿರುವ ಆರೋಪಗಳು ಕೂಡ ಆರೋಪಕ್ಕೆ ಪುಷ್ಟಿ ನೀಡಿವೆ.

ಹತ್ತು ವರ್ಷಗಳ ಕಾಲ ನಿರಂತರವಾಗಿ ಸರ್ಕಾರ ಅಧಿಕಾರದಲ್ಲಿದ್ದರೆ ನಾನಾ ಕಾರಣಗಳಿಂದ ಜನರಲ್ಲಿ ಆಡಳಿತ ವಿರೋಧಿ ಭಾವನೆ ಮೂಡುವುದು ಸಹಜ. ಅಲ್ಲದೆ ಕರ್ನಾಟಕ ಹೊರತುಪಡಿಸಿ ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇಲ್ಲ ಎಂದು ವಿವಿಧ ಸಮೀಕ್ಷೆಗಳು ಹೇಳುತ್ತಿವೆ.

ಈ ಹಿನ್ನಲೆಯಲ್ಲಿ, ಉತ್ತರ ಭಾರತದಲ್ಲಿ ಬಿಜೆಪಿಯ ಗೆಲುವಿನ ಮೇಲೆ ಈ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿರ್ಧಾರವಾಗಲಿದೆ. ಬಿಜೆಪಿ ಹೇಳುವಂತೆ ಉತ್ತರ ಭಾರತದಲ್ಲಿ ಮೋದಿ ಅಲೆ ಬೀಸಿದರೆ ಬಿಜೆಪಿ ಗಮನಾರ್ಹ ಸ್ಥಾನಗಳನ್ನು ಗೆಲ್ಲಲಿದೆ. ಆದರೆ, ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ಉತ್ತರದ ರಾಜ್ಯಗಳಲ್ಲಿ ಸದ್ಯದ ಗ್ರೌಂಡ್ ರಿಯಾಲಿಟಿ ನೋಡಿದರೆ ಬಿಜೆಪಿ ಹೇಳುವಷ್ಟು ಸೀಟು ಪಡೆಯಲು ತೀವ್ರ ಪೈಪೋಟಿ ಇರಲಿದೆ ಎಂದೇ ತೋರುತ್ತದೆ.

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯವಾದ ಗುಜರಾತ್‌ನಲ್ಲೇ ಪರಿಸ್ಥಿತಿಯು ಪ್ರಸ್ತುತ ಸವಾಲುಗಳನ್ನು ಎದುರಿಸುವಂತಾಗಿದೆ. ಗುಜರಾತ್‌ನಲ್ಲಿ 2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಅಲ್ಲಿನ ಎಲ್ಲಾ 26 ಕ್ಷೇತ್ರಗಳನ್ನೂ ಬಿಜೆಪಿ ಗೆದ್ದುಕೊಂಡಿತು. ಆದರೆ, ಈ ಬಾರಿ ಬಿಜೆಪಿಯ ಆಂತರಿಕ ಸಂಘರ್ಷ ಗಂಭೀರವಾಗಿ ನಡೆಯುತ್ತಿವೆ. ಹಲವು ಕ್ಷೇತ್ರಗಳಲ್ಲಿ ವರಿಷ್ಠರು ಘೋಷಿಸಿದ ಅಭ್ಯರ್ಥಿಗಳಿಗೆ ಸ್ವ ಪಕ್ಷದಿಂದಲೇ ತೀವ್ರ ವಿರೋಧ ವ್ಯಕ್ತವಾಗಿದ್ದು, ಅಭ್ಯರ್ಥಿಗಳನ್ನು ಬದಲಾಯಿಸಬೇಕಾಯಿತು.

ಗುಜರಾತ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೇಂದ್ರ ಸಚಿವ ಪರಶೋತ್ತಮ್ ರೂಪಲಾ, ರಜಪೂತ ಮಹಿಳೆಯರನ್ನು ಅವಮಾನಿಸಿ ಮಾತನಾಡಿದ್ದರು ಎಂಬ ಕಾರಣಕ್ಕೆ ಇಡೀ ರಜಪೂತ ಸಮುದಾಯವು ಬಿಜೆಪಿ ವಿರುದ್ಧ ಒಗ್ಗೂಡಿ ನಿಂತಿದೆ. ಬಿಜೆಪಿ ಕಚೇರಿ ಎದುರು ರಜಪೂತ ಸಮುದಾಯದ ಮಹಿಳೆಯರು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಘಟನೆ ಸಂಚಲನ ಮೂಡಿಸಿದೆ.

ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮತ್ತೇ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ. ಆಗಾಗ ಮೈತ್ರಿ ಬದಲಾವಣೆಯಿಂದ ನಿತೀಶ್ ಕುಮಾರ್ ಅವರನ್ನು ಎಲ್ಲರೂ ‘ಪಲ್ಟುಕುಮಾರ್’ ಎಂದು ಮೂದಲಿಸುತ್ತಿರುವ ಹಿನ್ನಲೆಯಲ್ಲಿ, ಆ ಮೈತ್ರಿಗೆ ಹೆಚ್ಚಿನ ಯಶಸ್ಸು ಸಿಗುವುದಿಲ್ಲವೆಂದು ಹೇಳಲಾಗುತ್ತಿದೆ. ತೇಜಸ್ವಿ ಯಾದವ್‌ಗೆ ಬೆಂಬಲ ಹೆಚ್ಚಾಗುತ್ತಿದ್ದಂತೆ, ಬಿಹಾರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಮಹತ್ವದ ಸ್ಥಾನಗಳನ್ನು ವಶಪಡಿಸಿಕೊಳ್ಳಲಿದೆ ಎಂಬ ವರದಿಗಳಿವೆ. ಉತ್ತರ ಪ್ರದೇಶದಲ್ಲೂ ಇದೇ ಪರಿಸ್ಥಿತಿ ಇದೆ.

ಉತ್ತರಪ್ರದೇಶದಲ್ಲಿ ಸಮಾಜವಾದಿ-ಕಾಂಗ್ರೆಸ್ ಮೈತ್ರಿಕೂಟ ಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎನ್ನುತ್ತಾರೆ ರಾಷ್ಟ್ರ ರಾಜಕಾರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ರಾಜಕೀಯ ವೀಕ್ಷಕರು. ಯುಪಿಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಕಳೆದ ಬಾರಿಗಿಂತ ಈ ಬಾರಿಯ ಚುನಾವಣೆಯಲ್ಲಿ ಸ್ವಲ್ಪ ಹೆಚ್ಚು ಸ್ಥಾನಗಳನ್ನು ಗೆದ್ದರೂ ಅದು ಬಿಜೆಪಿಗೆ ಹಿನ್ನಡೆಯಾಗಲಿದೆ.

ಪ್ರಧಾನಿ ಮೋದಿ ತಮ್ಮ ಚುನಾವಣಾ ಪ್ರಚಾರದಲ್ಲಿ ಅವರ ಸಾಧನೆಗಳನ್ನು ಪ್ರಸ್ತಾಪಿಸಿ ಮತ ಕೇಳದೇ ಕಾಂಗ್ರೆಸ್ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್ ಜೊತೆ ಹೋಲಿಕೆ ಮಾಡುತ್ತಿದ್ದು, ಉತ್ತರಾಧಿಕಾರ ರಾಜಕಾರಣದ ಬಗ್ಗೆ ಹೆಚ್ಚಾಗಿ ಮಾತನಾಡುತ್ತಿದ್ದಾರೆ. ಇದು ಕೂಡ ಅವರಿಗೆ ಹಿನ್ನಡೆಯಾಗಿದೆ. ಸದ್ಯ ಬಿಜೆಪಿ ಹೇಳಿಕೊಳ್ಳುವಂತಹ ಸಂಖ್ಯಾಬಲ ಗೆಲ್ಲಲು ಬಿಜೆಪಿ ತೀವ್ರ ಪೈಪೋಟಿ ಎದುರಿಸಬೇಕಾಗಿದೆ.