ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಅದಾನಿ Archives » Page 2 of 2 » Dynamic Leader
October 19, 2024
Home Posts tagged ಅದಾನಿ (Page 2)
ದೇಶ

ಅಮೆರಿಕ ಮೂಲದ ಹಿಂಡೆನ್ ಬರ್ಗ್ ಸಂಶೋಧನಾ ಸಂಸ್ಥೆ ಕಳೆದ ಜನವರಿಯಲ್ಲಿ ವರದಿಯೊಂದನ್ನು ಪ್ರಕಟಿಸಿ, ‘ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹಕ್ಕೆ ಸೇರಿದ 7 ಕಂಪನಿಗಳು ತಮ್ಮ ಆರ್ಥಿಕ ಸ್ಥಿತಿಯನ್ನು ಅವಾಸ್ತವಿಕವಾಗಿ ತೋರಿಸಿ ಷೇರು ಮಾರುಕಟ್ಟೆಯನ್ನು ವಂಚಿಸಿ ಲಾಭ ಮಾಡಿಕೊಳ್ಳುತ್ತಿವೆ’ ಎಂಬ ವರದಿಯನ್ನು ಬಿಡುಗಡೆಗೊಳಿಸಿ ದೇಶಾದ್ಯಂತ ಬಾರಿ ಸಂಚಲನವನ್ನು ಉಂಟು ಮಾಡಿತು. ವಿದೇಶಗಳಲ್ಲಿ ನಕಲಿ ಕಂಪನಿಗಳನ್ನು ಸೃಷ್ಟಿಸಿ ಅಕ್ರಮ ಹಣದ ವಹಿವಾಟು ನಡೆಸುತ್ತಿದ್ದಾರೆ ಎಂದೂ ತನಿಖಾ ವರದಿಯಲ್ಲಿ ಆರೋಪ ಮಾಡಿತ್ತು. ಹಿಂಡೆನ್‌ಬರ್ಗ್ ವರದಿಯಿಂದ ಅದಾನಿ ಗ್ರೂಪ್‌ನ ಷೇರುಗಳನ್ನು ಕುಸಿಯುವಂತೆ ಮಾಡಿತು. ಅದಾನಿ ಗ್ರೂಪ್‌ನಲ್ಲಿನ ಹೂಡಿಕೆಯಿಂದ ಸಾರ್ವಜನಿಕ ವಲಯದ ಉದ್ಯಮಗಳು ಭಾರೀ ನಷ್ಟವನ್ನು ಅನುಭವಿಸಿದವು.

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಈ ವಿಷಯವನ್ನು ಪ್ರಸ್ತಾಪಿಸಿ ಸಂಸತ್ತನ್ನು ಸ್ತಬ್ಧಗೊಳಿಸುತ್ತಿವೆ. ಅದಾನಿ ಸಮೂಹದ ಹಗರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿಗೆ ಆದೇಶಿಸಬೇಕು ಎಂದು ಒತ್ತಾಯಿಸುತ್ತಲೇ ಇದೆ. ಸುಪ್ರೀಂ ಕೋರ್ಟ್‌ನಲ್ಲೂ ಪ್ರಕರಣ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆ ಶೀಘ್ರದಲ್ಲೇ ಮತ್ತೊಂದು ಬಾಂಬ್ ಸಿಡಿಸುವುದಾಗಿ (ವರದಿಯನ್ನು ಪ್ರಕಟಿಸುವುದಾಗಿ) ಇಂದು ಘೋಷಿಸಿದೆ. ಈ ಘೋಷಣೆಯಿಂದ ಮತ್ತೆ ಸಂಚಲನ ಮೂಡಿಸಿದೆ. ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆಯ ವರದಿ ಭಾರತೀಯ ಕಂಪನಿಗಳ ಬಗ್ಗೆಯೇ ಅಥವಾ ಅಮೆರಿಕ ಬ್ಯಾಂಕುಗಳ ಬಗ್ಗೆಯೇ? ಎಂದು ಕುತೂಹಲ ಮೂಡಿಸಿದೆ. ಕಾದು ನೋಡೋಣ!

Hindenburg Research Promises Another Bombshell Report:
On March 23, Hindenburg Research, an investment research firm, announced that it will soon be releasing a new report. This announcement comes two months after the firm published a report claiming that India’s Adani Group had engaged in a stock manipulation and accounting fraud scheme over several decades.

ದೇಶ

ಡಿ.ಸಿ.ಪ್ರಕಾಶ್, ಸಂಪಾದಕರು

ಭಾರತದ ಆರ್ಥಿಕ ಬೆಳವಣಿಗೆ ಕುಸಿತದ ಹಾದಿಯಲ್ಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಮಾಜಿ ಗವರ್ನರ್ ರಘುರಾಮ್ ರಾಜನ್ ಎಚ್ಚರಿಕೆ ನೀಡಿದ್ದಾರೆ. ಅವರು ಪಿಟಿಐಗೆ ನೀಡಿರುವ ಇಮೇಲ್ ಸಂದರ್ಶನದಲ್ಲಿ, ‘ದೇಶದಲ್ಲಿ ಖಾಸಗಿ ಹೂಡಿಕೆಯ ಕೊರತೆ; ಹೆಚ್ಚುತ್ತಿರುವ ಬಡ್ಡಿದರಗಳು; ಅಂತಾರಾಷ್ಟ್ರೀಯ ಆರ್ಥಿಕ ಹಿಂಜರಿತದಿಂದಾಗಿ, ಭಾರತವು 1950 ರಿಂದ 1980ರ ಅವಧಿಯಲ್ಲಿದ್ದ ಅತ್ಯಂತ ಕಡಿಮೆ (ಶೇ.4 ಕ್ಕಿಂತ ಕಡಿಮೆ) ಆರ್ಥಿಕ ಬೆಳವಣಿಗೆ ದರಕ್ಕೆ ತಳ್ಳಲ್ಪಡುವ ಅಪಾಯದಲ್ಲಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕ ಬೆಳವಣಿಗೆ ದರ ಶೇ.4.4ಕ್ಕೆ ಇಳಿಕೆಯಾಗಿದೆ. ಕಳೆದ ಕೆಲವು ತ್ರೈಮಾಸಿಕಗಳಲ್ಲಿ, ಆರ್ಥಿಕ ಅಂಕಿಅಂಶಗಳು ಕೇವಲ ಕುಸಿತವನ್ನೇ ತೋರಿಸುತ್ತಿದೆ. ಖಾಸಗಿ ವಲಯವು ಹೊಸ ಹೂಡಿಕೆಯಲ್ಲಿ ಆಸಕ್ತಿ ತೋರಿಸುತ್ತಿಲ್ಲ.

ಇದರ ಮಧ್ಯೆ ಆರ್‌ಬಿಐ ಕೂಡ ನಿರಂತರವಾಗಿ ಬಡ್ಡಿ ದರವನ್ನು ಏರಿಸುತ್ತಿದೆ. ಈ ವರ್ಷದ ಅಂತ್ಯದ ವೇಳೆಗೆ ಜಾಗತಿಕ ಆರ್ಥಿಕತೆಯು ಆರ್ಥಿಕ ಹಿಂಜರಿತವನ್ನು ಪ್ರವೇಶಿಸುವ ನಿರೀಕ್ಷೆಯಿದೆ. ಇದರ ಮಧ್ಯೆ ಭಾರತದ ಆರ್ಥಿಕ ಬೆಳವಣಿಗೆಯ ಹಾದಿಯಲ್ಲಿ ಚೇತರಿಕೆ ಕಾಣುವುದು ಅಸಾಧ್ಯವೆಂಬುದು ನನ್ನ ಅಭಿಪ್ರಾಯವಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರ ಎಷ್ಟಿರುತ್ತದೆ ಎಂಬುದು ಈಗಿರುವ ದೊಡ್ಡ ಪ್ರಶ್ನೆಯಾಗಿದೆ. ಕೇಂದ್ರ ಸರ್ಕಾರವು ಉದ್ಯೋಗಗಳನ್ನು ಸೃಷ್ಟಿಸಲು ಉತ್ಪಾದನಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಕಾರ್ಯಕ್ರಮದಲ್ಲಿ ಸಾಕಷ್ಟು ಹಣವನ್ನು ಹೂಡಿಕೆ ಮಾಡುತ್ತಿದೆ. ಆದರೆ ಉದ್ಯೋಗ ಸೃಷ್ಟಿಸಲು ಎಷ್ಟು ಹಣಕಾಸಿನ ಹೂಡಿಕೆ ಬೇಕು ಎಂಬುದು ಇಲ್ಲಿ ಮುಖ್ಯವಾಗುತ್ತದೆ. ಹೂಡಿಕೆಗೆ ಸೂಕ್ತವಾದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಈ ಯೋಜನೆಯಲ್ಲಿ ಕಡಿಮೆಯಿದೆ. ಆದ್ದರಿಂದ, ಇದು ನಿರೀಕ್ಷಿತ ಫಲಿತಾಂಶವನ್ನು ನೀಡುವುದಿಲ್ಲ.

ಸರ್ಕಾರದ ವಕ್ತಾರರು ಭಾರತದಿಂದ ಮೊಬೈಲ್ ಫೋನ್ ರಫ್ತು ಹೆಚ್ಚಳವನ್ನು ಯೋಜನೆಯ ಯಶಸ್ಸಿನ ಉದಾಹರಣೆಯಾಗಿ ಉಲ್ಲೇಖಿಸಬಹುದು. ಆದರೆ ಪ್ರತಿ ಹ್ಯಾಂಡ್‌ಸೆಟ್‌ಗೂ ಭಾರತವು ತಯಾರಕರಿಗೆ ವಿಭಿನ್ನ ರೀತಿಯಲ್ಲಿ ಸಬ್ಸಿಡಿ ನೀಡುತ್ತಿದೆ ಎಂಬುದನ್ನು ನೆನಪಿಸಿಕೊಳ್ಳಬೇಕು. ಪ್ರಪಂಚದಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ ದೇಶಗಳೆಲ್ಲ ಈಗ ಸೇವಾ ವಲಯವನ್ನು ಅವಲಂಬಿಸಿವೆ. ಇದರಲ್ಲಿ ಸಾರಿಗೆ, ಪ್ರವಾಸೋದ್ಯಮ, ಚಿಲ್ಲರೆ ವ್ಯಾಪಾರ, ವಸತಿ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ಮಧ್ಯಂತರ ಕೌಶಲ್ಯ ಹೊಂದಿರುವವರಿಗೆ ಹೆಚ್ಚಿನ ಉದ್ಯೋಗಗಳು ಲಭ್ಯವಿರುತ್ತವೆ. ಅದಾನಿ-ಹಿಂಡೆನ್‌ಬರ್ಗ್ ನಂತಹ ಪ್ರಕರಣಗಳು ಸರ್ಕಾರ ಮತ್ತು ಉದ್ಯಮದ ನಡುವಿನ ಪರೋಕ್ಷ ಸಂಬಂಧವನ್ನು ಕೊನೆಗೊಳಿಸಲು ಸಹಾಯ ಮಾಡಬಹುದು. ಆದರೆ ಈ ವಿಚಾರದಲ್ಲಿ ವಿದೇಶದಿಂದ ನಕಲಿ ಕಂಪನಿಗಳ ಮೂಲಕ ಹೂಡಿಕೆ ಮಾಡಿರುವ ಆರೋಪದ ಬಗ್ಗೆ ಸೆಬಿ ತನಿಖೆ ನಡೆಸದಿರುವುದು ಅಚ್ಚರಿಯನ್ನು ಮೂಡಿಸಿದೆ’. ಎಂದು ಹೇಳಿದ್ದಾರೆ.

Amid the Adani row, former Reserve Bank of India (RBI) Governor Raghuram Rajan asked why markets regulator SEBI did not get to the bottom of the issues that were raised by US-based short-seller Hindenburg research. He also questioned why SEBI didn’t get in touch with the agency if it needed help from probing agencies.

“Why has SEBI not yet got to the bottom of the ownership of those Mauritius funds which have been holding and trading Adani stock? Does it need help from the investigative agencies?” news agency PTI quoted Rajan as asking.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು.

ಅದಾನಿ ಸಮೂಹದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆಯು ಇತ್ತೀಚಗೆ ವರದಿಯೊಂದನ್ನು ಪ್ರಕಟಿಸಿತು. ಆ ವರದಿಯಲ್ಲಿ, ‘ಭಾರತೀಯ ಸಂಸ್ಥೆಯಾದ ಅದಾನಿ ಸಮೂಹವು ಕಳಪೆಯಾಗಿ ಷೇರು ನಿರ್ವಹಣೆ ಮಾಡಿರುವುದಕ್ಕೆ ಹಾಗೂ ಖಾತೆಯಲ್ಲಿ ವಂಚನೆ ಮಾಡಿರುವುದಕ್ಕೆ ಅಗತ್ಯವಾದ ಆದಾರಗಳನ್ನು ಸಂಗ್ರಹಿಸಿ, ನಮ್ಮ ಎರಡು ವರ್ಷಗಳ ತನಿಖೆಯ ಫಲಿತಾಂಶಗಳನ್ನು ನಾವು ಪ್ರಸ್ತುತಪಡಿಸುತ್ತಿದ್ದೇವೆ. ಅದಾನಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷ ಗೌತಮ್ ಅದಾನಿ ಕಳೆದ ಮೂರು ವರ್ಷಗಳಲ್ಲಿ 100 ಬಿಲಿಯನ್ ನಿವ್ವಳ ಮೌಲ್ಯವನ್ನು ಸಂಗ್ರಹಿಸಿದ್ದಾರೆ.

ಅದಾನಿ ಸಮೂಹದ ಮಾಜಿ ಹಿರಿಯ ಅಧಿಕಾರಿಗಳು ಸೇರಿದಂತೆ ಡಜನ್‌ಗಟ್ಟಲೆ ಜನರೊಂದಿಗೆ ಮಾತನಾಡುವ ಮೂಲಕ ಸಾವಿರಾರು ದಾಖಲೆಗಳನ್ನು ಪರಿಶೀಲಿಸಲಾಗಿದೆ. ಮತ್ತು ಸುಮಾರು ಅರ್ಧ ಡಜನ್ ದೇಶಗಳಿಗೆ ನೇರವಾಗಿ ಭೇಟಿ ನೀಡಿ, ಇದರ ಬಗ್ಗೆ ಸುಧೀರ್ಘವಾಗಿ ಅಧ್ಯಯನ ನಡಸಲಾಗಿದೆ’ ಎಂದು ಹೇಳಿತು.

ಅದಾನಿ ಸಮೂಹವು ಇದ್ನನ್ನು ನಿರಾಕರಿಸಿತು. ಮತ್ತೊಂದೆಡೆ, ಈ ವಿಚಾರದಲ್ಲಿ ಸೂಕ್ತ ತನಿಖೆ ನಡೆಯಬೇಕೆಂದು ಒತ್ತಾಯ ಮಾಡುತ್ತಿರುವ ವಿರೋಧ ಪಕ್ಷಗಳು, ಇದರಲ್ಲಿ ಬಿಜೆಪಿ ಹಾಗೂ ಪ್ರಧಾನಿ ಮೋದಿಗೆ ಸಂಬಂಧವಿದೆ ಎಂದೂ ಆರೋಪಿಸಿತು. ಇದರಿಂದಾಗಿ ಸಂಸತ್ತಿನ ಕಲಾಪಗಳು ನಡೆಯದೆ ಹಲವಾರು ಬಾರಿ ಮುಂದೂಡಲ್ಪಟ್ಟಿತು.

ಈ ನಡುವೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಈ ಕುರಿತು ನೀಡಿರುವ ಹೇಳಿಕೆಯಲ್ಲಿ, ‘ಪ್ರಧಾನಿ ನರೇಂದ್ರ ಮೋದಿಯವರು ಅದಾನಿ ಸಮೂಹದ ಎಲ್ಲಾ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು. ಆ ನಂತರ ಆ ಆಸ್ತಿಗಳನ್ನು ಹರಾಜು ಮಾಡಿ, ಆ ಹಣದಿಂದ ಅದಾನಿ ಸಮೂಹದಲ್ಲಿ ಹಣ ಕಳೆದುಕೊಂಡವರಿಗೆ ಸಹಾಯ ಮಾಡಬೇಕು. ಕಾಂಗ್ರೆಸ್ ಪಕ್ಷಕ್ಕೂ ಅದಾನಿಗೂ ಸಂಬಂಧವೇ ಇಲ್ಲ ಎಂಬಂತೆ ಕೆಲವರು ಮಾತನಾಡುತ್ತಿದ್ದಾರೆ. ಆದರೆ ಅನೇಕ ಕಾಂಗ್ರೆಸ್ಸಿಗರು ಅದಾನಿ ಸಂಪರ್ಕದಲ್ಲಿದ್ದಾರೆ ಎಂಬುದು ನನಗೆ ಗೊತ್ತು. ನನಗೆ ಕಾಂಗ್ರೆಸ್ ಬಗ್ಗೆ ಕಾಳಜಿ ಇಲ್ಲ. ಬಿಜೆಪಿಯ ಪ್ರಾಮಾಣಿಕತೆ ನೆಲೆಯೂರಬೇಕೆಂದು ನಾನು ಬಯಸುತ್ತೇನೆ’ ಎಂದು ತಿಳಿಸಿಳಿದ್ದಾರೆ.

ಸುಬ್ರಮಣಿಯನ್ ಸ್ವಾಮಿ ಅವರಿಗೆ ಸಂಸದ ಸ್ಥಾನ ನೀಡದ ಬಿಜೆಪಿ ಹಾಗೂ ಪ್ರಧಾನಿ ಮೋದಿಯ ವಿರುದ್ಧ ಅಸಮಾಧಾನವಿದೆ. ಆದ್ದರಿಂದ ಅದಾನಿ ವಿಚಾರವನ್ನು ಮೋದಿಯ ತಲೆಗೆ ಕಟ್ಟುತ್ತಿದ್ದಾರೆ. ಎಂದು ಕೆಲವು ಹಿರಿಯ ನಾಯಕರು ಹೇಳುತ್ತಿದ್ದಾರೆ. ಇವರಿಗೆ ನಿಜವಾಗಿಯೂ ಅದಾನಿ ಸಮೂಹದ ಎಲ್ಲಾ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು ಆ ಆಸ್ತಿಗಳನ್ನು ಹರಾಜು ಹಾಕಿ, ಆ ಹಣದಿಂದ ಅದಾನಿ ಸಮೂಹದಲ್ಲಿ ಹಣ ಕಳೆದುಕೊಂಡವರಿಗೆ ಸಹಾಯ ಮಾಡಬೇಕು ಎಂಬ ಮನಸ್ಸಿದ್ದರೆ, ತಾಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ವಿರುದ್ಧ ಪ್ರಕರಣ ದಾಖಲುಮಾಡಿದಂತೆ ಅದಾನಿಯ ವಿರುದ್ಧವೂ ಪ್ರಕರಣ ದಾಖಲು ಮಾಡಬೇಕು. ಆಗ ನಿಜವಾದ ಅಪರಾಧಿ ಯಾರೆಂದು ಜಗತ್ತಿಗೆ ಗೊತ್ತಾಗುತ್ತದೆ. ಮತ್ತು ಸುಬ್ರಮಣಿಯನ್ ಸ್ವಾಮಿಯ ಉದ್ದೇಶವೂ ಈಡೇರುತ್ತದೆ. ಅದನ್ನು ಬಿಟ್ಟು ‘ಪ್ರಧಾನಿ ನರೇಂದ್ರ ಮೋದಿಯವರು ಅದಾನಿ ಸಮೂಹದ ಎಲ್ಲಾ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು ಎಂದು ಹೇಳುವ ಸುಬ್ರಮಣಿಯನ್ ಸ್ವಾಮಿಯ ನಡೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯನ್ನು ಈ ಪ್ರಕರಣದಿಂದ ರಕ್ಷಣೆ ಮಾಡಲಿಕ್ಕಾಗಿಯೆ? ಅಥವಾ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸುವುದಕ್ಕಾಗಿಯೆ? ಎಂದು ಅನುಮಾನ ಮೂಡುತ್ತದೆ.

ಹಿಂಡೆನ್‌ಬರ್ಗ್ ವರದಿಯನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಇದೀಗ ಪ್ರಕಟಿಸಿದೆ. ಸೆಬಿ ಕೂಡ ತನಿಖೆಗೆ ಕರೆ ನೀಡಿದೆ. ಆದ್ದರಿಂದ ಈ ಬಗ್ಗೆ ಸಂಪೂರ್ಣ ತನಿಖೆ ನಡೆಯಬೇಕು ಎಂಬುದೇ ನಮ್ಮ ಅಭಿಪ್ರಾಯವಾಗಿದೆ.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಬೆಂಗಳೂರು: ‘ಅದಾನಿ ಗ್ರೂಪ್ ಕಂಪೆನಿಗಳು ಅಕ್ರಮಗಳಲ್ಲಿ ತೊಡಗಿವೆ’ ಎಂದು ಹಿಂಡೆನ್‌ಬರ್ಗ್ ವರದಿ ಮಾಡಿದ ನಂತರ ಅದಾನಿ ಎಂಟರ್‌ಪ್ರೈಸಸ್ ಷೇರುಗಳು ತೀವ್ರ ಕುಸಿತವನ್ನು ಅನುಭವಿಸಿದವು. ಇದು ಭಾರತದ ಆರ್ಥಿಕತೆಯ ಮೇಲೆ ದೊಡ್ಡ ರೀತಿಯಲ್ಲಿ ಪರಿಣಾಮವನ್ನು ಬೀರುತ್ತದೆ ಎಂದು ವಿರೋಧ ಪಕ್ಷಗಳು ಹಾಗೂ ಆರ್ಥಿಕ ತಜ್ಞ್ಯರೆಲ್ಲ ಕಳವಳ ವ್ಯಕ್ತ ಪಡಿಸುತ್ತಿದ್ದಾರೆ. ವಿರೋಧಪಕ್ಷಗಳ ಒಕ್ಕೊರಳಿನ ಒತ್ತಾಯದಿಂದ ಸಂಸತ್ ನಲ್ಲಿ ಕಲಾಪಗಳು ನಡೆಯದೆ ಹಲವಾರು ಬಾರಿ ಮುಂದೂಡಲ್ಪಟ್ಟವು.

ಈ ಹಿನ್ನಲೆಯಲ್ಲಿ ಫೆಬ್ರವರಿ 8 ರಂದು ಸುಮಾರು 9 ಗಂಟೆಗಳ ಕಾಲ ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅದಾನಿಯ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸದೆ, ನೆಹರು ಕುಟುಂಬವನ್ನು ತರಾಟೆಗೆ ತೆಗೆದುಕೊಂಡರು. ‘ನೆಹರೂ ವಂಶಸ್ಥರೇಕೆ ಅವರ ಉಪನಾಮ ಬಳಸಲ್ಲ’ ಎಂಬುದನ್ನು ಒಂದು ವಿಷಯವಾಗಿ ಮುನ್ನಲೆಗೆ ತಂದು, ಬಿಜೆಪಿ ಸದಸ್ಯರನ್ನು ನಗೆಗಡಲಲ್ಲಿ ತೇಲಿಸಲು ಲೇವಡಿ, ಹಾಸ್ಯ ಚಟಾಕಿ ಹಾರಿಸುತ್ತಾ ಕಾಲ ಕಳೆದರು. ದೇಶವಿರುವ ಪರಿಸ್ಥಿತಿಯಲ್ಲಿ ಮೋದಿಗೆ ಹಾಷ್ಯತನ ಬೇಕೆ? ಎಂಬುದನ್ನು ಜನ  ಕೇಳುತ್ತಿದ್ದಾರೆ. ಭಾರತೀಯ ಪದ್ಧತಿಯಂತೆ – ಪ್ರಪಂಚದ ಪದ್ಧತಿಯಂತೆ ಗಂಡು ಮಕ್ಕಳ ಕುಟುಂಬದ ಹೆಸರೇ ಮುಂದುವರಿಯುತ್ತದೆ. ನೆಹರೂಗೆ ಮಗನಿರಲಿಲ್ಲ. ಇಂದಿರಾ ಒಬ್ಬಳೇ ಮಗಳು. ಆದ್ದರಿಂದ ಅವರ ಪತಿ ಫಿರೋಜ್ ಗಾಂಧಿಯ ಹೆಸರನ್ನು ಉಪನಾಮವಾಗಿ ಬಳಸುತ್ತಿದ್ದಾರೆ. ಇದು ಪ್ರಧಾನಿಗೆ ಗೊತ್ತಿಲ್ಲವೇ?

2014ರಲ್ಲಿ ಅದಾನಿ ಪುತ್ರನ ವಿವಾಹವಾಗಿತ್ತು. ಈ ಮದುವೆಗೆ ಜಗತ್ತಿನಾದ್ಯಂತ ಕ್ಲಾಸ್ ಒನ್ ಶ್ರೀಮಂತರೆಲ್ಲ ಬಂದು ಹೋದರು. ಆದರೆ, ನರೇಂದ್ರ ಮೋದಿಯವರು ಮಾತ್ರ ಮೂರು ದಿನಗಳು ಅಲ್ಲಿಯೇ ಉಳಿದು, ಅದಾನಿ ಪುತ್ರನ ವಿವಾಹದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಆದರೆ, ಮೋದಿ ಅವರ ತಾಯಿ ಇತ್ತೀಚೆಗೆ ನಿಧನರಾದಾಗ, ಅವರು ಕೆಲವೇ ಗಂಟೆಗಳಲ್ಲಿ ಅವರ ಅಂತಿಮ ವಿಧಿಗಳನ್ನು ಪೂರ್ಣಗೊಳಿಸಿ ಹೊರನಡೆದರು. ಪ್ರದಾನಿ ಮೋದಿಗೆ ತಾಯಿಗಿಂತ ದೇಶ ಸೇವೆಯೇ ದೊಡ್ಡದು ಎಂಬಂತೆ ಅಂದು ಬಿಂಬಿಸಲಾಯಿತು. ಆದರೆ, ಮೋದಿಗೆ ತನ್ನ ತಾಯಿಗಿಂತ, ಈ ದೇಶದ ಸೇವೆಗಿಂತ; ಅದಾನಿ ಪುತ್ರನ ವಿವಾಹವೇ ಅಂದು ಮುಖ್ಯವಾಗಿತ್ತು ಎಂಬುದನ್ನು ಇನ್ನು ಯಾರೂ ಮರೆತಿಲ್ಲ.    

‘ಮೂವತ್ತು ವರ್ಷಗಳಿಂದ ಕುಟುಂಬದೊಂದಿಗೆ ಇರಲಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಹೇಳಿದ್ದರು. ಹಾಗಾದರೆ, ಇಷ್ಟು ವರ್ಷ ಅಮ್ಮನನ್ನು ಸಾಕುತ್ತಿದ್ದ ಅಣ್ಣನೂ ಸೇರಿದಂತೆ ಜೊತೆಯಲ್ಲಿ ಹುಟ್ಟಿದವರು ಬಂದು ಶಾಸ್ತ್ರೋಕ್ತವಾಗಿ ನಡೆದುಕೊಂಡಿರಬೇಕು ಅಲ್ಲವೇ? ಆದರೆ, ಅಂದು ನಾವು ಮೋದಿಯನ್ನು ಮಾತ್ರ ನೋಡುತ್ತಿದ್ದೆವು. ಪ್ರಧಾನಿಯ ತಾಯಿಯ ಸಾವನ್ನು ಹಾಗೂ ಪ್ರಧಾನಿಯನ್ನು ಲೈವ್ ಟೆಲಿಕಾಸ್ಟ್ ಮಾಡಿ, ತಮ್ಮ ಟಿ.ಆರ್.ಪಿ.ಯನ್ನು ಹೆಚ್ಚಿಸಿಕೊಂಡ ಮಾದ್ಯಮಗಳು, ಪ್ರಧಾನಿ ನರೇಂದ್ರ ಮೋದಿಗೆ ತಾಯಿಗಿಂತ ಈ ದೇಶ ಸೇವೆಯೇ ದೊಡ್ಡದು ಎಂಬಂತೆ ಬಿಂಬಿಸಿದವು. 

ಸಂಸತ್ತಿನಲ್ಲಿ ಮಾತನಾಡಿದ ರಾಹುಲ್ ಗಾಂಧಿಯವರು, ನೀವು (ಮೋದಿ) ಇಸ್ರೇಲ್, ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕೆ ಭೇಟಿ ನೀಡಿದಾಗ ಅದಾನಿ ವ್ಯವಹಾರವನ್ನು ಪಡೆಯುತ್ತಾರೆ. ಹಾಗಾದರೆ ನಿಮ್ಮ ಮತ್ತು ಅದಾನಿ ನಡುವೆ ಏನಿದೆ? ಎಂಬುದನ್ನು ಈ ದೇಶಕ್ಕೆ ತಿಳಿಸಿಕೊಡಿ ಎಂದು ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಪ್ರಶ್ನೆ ಮಾಡುತ್ತಾರೆ. ಸಂಸದ ರಾಹುಲ್ ಗಾಂಧಿಯ ಈ ಗುರುತರವಾದ ಪ್ರಶ್ನೆಗೆ (ಆರೋಪಕ್ಕೆ) ಮೋದಿಯವರು ತಕ್ಕ ಉತ್ತರ ನೀಡುತ್ತಾರೆ ಎಂದು ಈ ದೇಶವೇ ಎದುರು ನೋಡುತ್ತಿರುವಾಗ, ಸಂಸತ್ತಿನಲ್ಲಿ ಸುಮಾರು ಒಂಬತ್ತು ಗಂಟೆಗಳ ಕಾಲ ಭಾಷಣ ಮಾಡಿದ ಮೋದಿ, ವಿರೋಧ ಪಕ್ಷಗಳನ್ನು ಲೇವಡಿಯಿಂದ, ಹಾಸ್ಯ ಹಾಗೂ ಉಡಾಫೆಯ ಮಾತುಗಳಿಂದ ತಿವಿದು, ವಿರೋಧ ಪಕ್ಷಗಳ ಗುರುತರವಾದ ಆರೋಪಗಳನ್ನು ದಿಕ್ಕು ತಪ್ಪಿಸಿ, ಪ್ರಶ್ನೆ ಮಾಡಿದವರನ್ನೇ ಅಪರಾಧಿಯನ್ನಾಗಿಸುವ ಪ್ರಯತ್ನವನ್ನು ಮಾಡಿದರು.

‘ದೇಶಭಕ್ತಿಯೇ ಕಿಡಿಗೇಡಿಗಳ ಕೊನೆಯ ಆಶ್ರಯ ತಾಣ’ ಎಂಬ ಸ್ಯಾಮ್ಯುಯೆಲ್ ಜಾನ್ಸನ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು, ಮೋದಿ ಸರ್ಕಾರ ಅಧಿಕಾರ ವರ್ಗದೊಂದಿಗೆ ಕೈಜೋಡಿಸಿ, ತನ್ನ ತಪ್ಪುಗಳನ್ನು ಯಾರೂ ಪ್ರಶ್ನಿಸದಂತೆ ಮುಚ್ಚಿಹಾಕಲು, ತನ್ನ ಅಕ್ರಮಗಳನ್ನು ಸಮರ್ಥಿಸಿಕೊಳ್ಳಲು ಮುಂದಾಗಿದೆ. ದೇಶಭಕ್ತಿ, ರಾಷ್ಟ್ರೀಯ ಭದ್ರತೆ ಹಾಗೂ ರಾಷ್ಟ್ರದ ಅಭಿವೃದ್ಧಿಯ ಸುಳ್ಳು ವಿಚಾರಗಳನ್ನು ಮುಂದಿಡುವುದು ಈಗ ಅವರಿಗೆ ವಾಡಿಕೆಯಾಗಿದೆ.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ನವದೆಹಲಿ: ಸತತ ಮೂರು ದಿನಗಳ ಕಾಲ ಸಂಸತ್ತಿನ ಉಭಯ ಸದನಗಳನ್ನು ಅಮಾನತುಗೊಳಿಸಿದ ನಂತರ ಇಂದು (ಮಂಗಳವಾರ) ಬೆಳಗ್ಗೆ 11 ಗಂಟೆಗೆ ಮತ್ತೆ ಪ್ರಾರಂಭಗೊಂಡಿತು. ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕಲಾಪ ಆರಂಭಿಸುತ್ತಿದ್ದಂತೆ ಪ್ರತಿಪಕ್ಷಗಳು ‘ಅದಾನಿ ಗ್ರೂಪ್’ ವಿಷಯವನ್ನು ಪ್ರಸ್ತಾಪಿಸಲು ಯತ್ನಿಸಿದವು.

ಇದಕ್ಕೆ ಪ್ರಶ್ನೋತ್ತರ ಸಮಯವನ್ನು ಬಳಸಿಕೊಳ್ಳುವಂತೆ ಸ್ಪೀಕರ್ ಓಂ ಬಿರ್ಲಾ ಸೂಚಿಸಿದರೂ ವಿರೋಧ ಪಕ್ಷಗಳು ತಮ್ಮ ಬೇಡಿಕೆಯನ್ನು ಮುಂದುವರೆಸಿದವು. ಹೀಗಾಗಿ ಕಲಾಪವನ್ನು ಮಧ್ಯಾಹ್ನ 12ಕ್ಕೆ ಮುಂದೂಡಲಾಯಿತು. ಒಂದು ಗಂಟೆ ಕಾಲ ಮುಂದೂಡಿದ ಕಲಾಪವು ಮತ್ತೆ ಪುನರಾರಂಭವಾದಾಗ, ಬಿಜೆಪಿ ಲೋಕಸಭಾ ಸದಸ್ಯ ಸಿ.ಪಿ.ಜೋಶಿ ರಾಷ್ಟ್ರಪತಿ ಭಾಷಣಕ್ಕೆ ಧನ್ಯವಾದ ಅರ್ಪಿಸುವ ನಿರ್ಣಯವನ್ನು ಮಂಡಿಸಿದರು. ಇದಕ್ಕೂ ಮುನ್ನ ಲೋಕಸಭೆ ಸದಸ್ಯರು ಟರ್ಕಿ-ಸಿರಿಯಾ ಭೂಕಂಪದ ಸಂತ್ರಸ್ತರಿಗೆ ಸಂತಾಪ ಸೂಚಿಸಿದರು.

ಲೋಕಸಭೆಯಲ್ಲಿ ಸಿ.ಪಿ.ಜೋಶಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದವನ್ನು ಓದುತ್ತಿದ್ದಂತೆಯೇ ಪ್ರತಿಪಕ್ಷಗಳ ಸದಸ್ಯರು ಸಂಸತ್ತಿನ ಮಧ್ಯಭಾಗಕ್ಕೆ ಬಂದು ಘೋಷಣೆಗಳನ್ನು ಕೂಗಿದರು. ಸ್ಪೀಕರ್ ಓಂ ಬಿರ್ಲಾ ಅವರು ಮತ್ತೆ ಸದನವನ್ನು ಮಧ್ಯಾಹ್ನ 1.30ಕ್ಕೆ ಮುಂದೂಡಿದರು.

ಇದಾದ ಬಳಿಕ ಆರಂಭವಾದ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾತನಾಡಿ, ‘ಭಾರತೀಯ ಏಕತಾ ಯಾತ್ರೆಯ (ಭಾರತ್ ಜೋಡೋ ಯಾತ್ರೆ) ಸಮಯದಲ್ಲಿ ನಾವು ದೇಶಾದ್ಯಂತ ಜನರ ಧ್ವನಿಯನ್ನು ಕೇಳಿದ್ದೇವೆ. ಯಾತ್ರೆಯ ಆರಂಭದಲ್ಲಿ ಸ್ವಲ್ಪ ಕಷ್ಟವಾಗಿತ್ತು. ಯಾತ್ರೆಯ ವೇಳೆ ಮಕ್ಕಳು, ಮಹಿಳೆಯರು ಹಾಗೂ ವೃದ್ಧರ ಕುಂದುಕೊರತೆಗಳನ್ನು ಆಲಿಸಿದೆವು.

ಏಕತಾ ಯಾತ್ರೆಯ ಸಂದರ್ಭದಲ್ಲಿ ಸಾವಿರಾರು ರೈತರು ತಮ್ಮ ಅಹವಾಲುಗಳನ್ನು ಹೇಳಿಕೊಂಡರು. ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು. ಆದಿವಾಸಿಗಳು ಮಸೂದೆಯ ಬಗ್ಗೆ ಪ್ರಶ್ನೆ ಮಾಡಿದರು.

ಲೋಕಸಭೆ

ಸೇನೆಯ ಮೇಲೆ ಅಗ್ನಿವೀರ್ ಯೋಜನೆ ಹೇರಲಾಗುತ್ತಿದೆ ಹಾಗೂ ಅನೇಕರನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದೂ ಹೇಳಿದರು. ಕೆಲಸ ಸಿಗದವರಿಗೆ ಅದಕ್ಕಾದ ಕಾರಣವನ್ನು ವಿವರಿಸಬೇಕಿತ್ತು. ಜನರಿಗೆ ಶಸ್ತ್ರಾಸ್ತ್ರ ತರಬೇತಿಯನ್ನು ನೀಡಿ ನಂತರ ಸಮುದಾಯಕ್ಕೆ ಹಿಂತಿರುಗುವಂತೆ ಹೇಳಲಾಗುತ್ತಿದೆ ಇದು ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ನಿವೃತ್ತ ಅಧಿಕಾರಿಗಳು ಹೇಳುತ್ತಾರೆ.

ಜನರು ಅಗ್ನಿವೀರ್ ಯೋಜನೆ ಬಗ್ಗೆಯೂ ಮಾತನಾಡಿದ್ದಾರೆ. ಭಾರತೀಯ ಯುವಕರು, 4 ವರ್ಷಗಳ ನಂತರ ತಮ್ಮನ್ನು ಹೊರಹೋಗುವಂತೆ ಕೇಳಿಕೊಂಡ ಬಗ್ಗೆ ನಮಗೆ ತಿಳಿಸಿದರು. ಅಗ್ನಿವೀರ್ ಯೋಜನೆ ಆರ್‌ಎಸ್‌ಎಸ್ ಹಾಗೂ ಗೃಹ ಸಚಿವಾಲಯದಿಂದ ಬಂದಿದೆಯೇ ಹೊರತು ಸೇನೆಯಿಂದಲ್ಲ. ಅದು ಎನ್ಎಸ್ಎ ಅಜಿತ್ ದೋವಲ್ ಮುಖಾಂತರ ಸೇನೆಯ ಮೇಲೆ ಬಲವಂತವಾಗಿ ಹೇರಿದ್ದಾರೆ ಎಂದು ನಿವೃತ್ತ ಅಧಿಕಾರಿಗಳು ಹೇಳುತ್ತಿದ್ದಾರೆ.

ಅಧ್ಯಕ್ಷರ ಭಾಷಣದಲ್ಲಿ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಉಲ್ಲೇಖಗಳಿಲ್ಲ.

ತಮಿಳುನಾಡು, ಕೇರಳದಿಂದ ಹಿಮಾಚಲ ಪ್ರದೇಶದವರೆಗೆ ಎಲ್ಲೆಲ್ಲೂ ‘ಅಧಾನಿ’ ಎಂಬ ಒಂದೇ ಹೆಸರನ್ನು ಪದೆ ಪದೇ ಕೇಳುತ್ತಿದ್ದೇವೆ. ಅದು ‘ಅದಾನಿ’, ‘ಅದಾನಿ’, ‘ಅದಾನಿ’ ಎಂಬುದಾಗಿದೆ. ‘ಅದಾನಿ ಮಾಡದ ವ್ಯವಹಾರಗಳು ಇಲ್ಲ; ಅದರಲ್ಲಿ ಅವರು ಎಂದಿಗೂ ವಿಫಲರಾಗಿಲ್ಲ’. ಇದು ಹೇಗೆ ಎಂದು ಜನ ನನ್ನನ್ನು ಕೇಳುತ್ತಿದ್ದಾರೆ. ಪ್ರಧಾನಿಗೂ ಅದಾನಿಗೂ ಏನು ಸಂಬಂಧ? ಪ್ರತಿ ವೃತ್ತಿಯಲ್ಲೂ ಅವರು ಹೇಗೆ ಯಶಸ್ವಿಯಾಗುತ್ತಾರೆ.

ಅದಾನಿ ಈಗ 8-10 ಕ್ಷೇತ್ರಗಳಲ್ಲಿದ್ದಾರೆ. ಅವರು 2014 ರಿಂದ 2022 ರವರೆಗೆ 8 ಬಿಲಿಯನ್ ಡಾಲರ್‌ಗಳಿಂದ 140 ಬಿಲಿಯನ್ ಡಾಲರ್‌ಗೆ ಹೋಗಿದ್ದು ಹೇಗೆ ಎಂದು ಯುವಕರು ನಮ್ಮನ್ನು ಪ್ರಶ್ನಿಸುತ್ತಾರೆ.

ಕಾಶ್ಮೀರ, ಹಿಮಾಚಲ ಪ್ರದೇಶದಿಂದ ಹಿಡಿದು ಬಂದರುಗಳು, ವಿಮಾನ ನಿಲ್ದಾಣಗಳು ಮತ್ತು ನಾವು ನಡೆಯುವ ರಸ್ತೆಗಳ ವರೆಗೆ ಎಲ್ಲದರಲ್ಲೂ ಅದಾನಿಯೇ ಇದ್ದಾರೆ’ ಎಂದು ಅವರು ಹೇಳಿದರು.

ದೇಶ

ನವದೆಹಲಿ: ಭಾರತದ ದೊಡ್ಡ ಉದ್ಯಮಿ ಅದಾನಿಯ ಕಂಪೆನಿಗಳು ಷೇರುಪೇಟೆಯಲ್ಲಿ ವಂಚನೆ ಎಸಗಿವೆ ಎಂದು ಅಮೆರಿಕ ಮೂಲದ ಹಿಂಡೆನ್‌ಬರ್ಗ್ ಕಂಪನಿ ಪ್ರಕಟಿಸಿರುವ ವರದಿಯಿಂದ ಭಾರತದಲ್ಲಿ ಭಾರೀ ಸಂಚಲನವನ್ನು ಮೂಡಿಸಿದೆ. ಈ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಲು ವಿರೋಧ ಪಕ್ಷಗಳು ಉಭಯ ಸದನಗಳಲ್ಲಿ ಗದ್ದಲ ಎಬ್ಬಿಸುತ್ತಿದೆ.

ಈ ಹಿನ್ನಲೆಯಲ್ಲಿ ಅದಾನಿ ಗ್ರೂಪ್ ವಿಚಾರವಾಗಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಇಂದು ಒಪ್ಪಿಗೆ ನೀಡಿದೆ. ಈ ಮಧ್ಯೆ ಹಿಂಡೆನ್‌ಬರ್ಗ್ ಸಂಸ್ಥಾಪಕ ನಾಥನ್ ಆಂಡರ್ಸನ್ ಅವರನ್ನು ತನಿಖೆಗೆ ಕೋರಿ PIL ಸಲ್ಲಿಸಲಾಯಿತು. ಅರ್ಜಿಯನ್ನು ಫೆಬ್ರವರಿ 10 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಅದಾನಿ ಕುರಿತು ಅಮೆರಿಕ ಮೂಲದ ಹಿಂಡೆನ್‌ಬರ್ಗ್ 413 ಪುಟಗಳ ವರದಿಯನ್ನು ಪ್ರಕಟಿಸಿದೆ. ವರದಿಯನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಿಂದ ಕೂಲಂಕಷವಾಗಿ ಪರಿಶೀಲಿಸಲು ಕೇಳಲಾಗಿದೆ.

ದೇಶ

ಅದಾನಿ ವಿಚಾರ ಮುಜುಗರಕ್ಕೆ ಕಾರಣವಾಗುವುದರಿಂದ ಕೇಂದ್ರ ಸರ್ಕಾರ ಚರ್ಚೆಗೆ ಅವಹಾಶ ನೀಡುತ್ತಿಲ್ಲ ಎಂದು ಸಂಸದ ಶಶಿ ತರೂರ್ ಆರೋಪ ಮಾಡಿದ್ದಾರೆ.

ನವದೆಹಲಿ: ಅಮೇರಿಕ ಮೂಲದ ಹಿಂಡೆನ್‌ಬರ್ಗ್ ಮಾರ್ಕೆಟ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಇತ್ತೀಚೆಗೆ ಅದಾನಿ ಕಂಪನಿಗಳ ವಂಚನೆಯ ಆರೋಪಗಳೊಂದಿಗೆ ವರದಿಯನ್ನು ಪ್ರಕಟಿಸಿತು. ಇದು ದೇಶವನ್ನು ಆಘಾತಕ್ಕೆ ತಳ್ಳಿದೆ.

ಈ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಧ್ವನಿ ಎತ್ತುತ್ತಿವೆ. ಇದನ್ನು ಕೇಂದ್ರ ಸರ್ಕಾರ ಒಪ್ಪದ ಕಾರಣ ನಿನ್ನೆಯೂ ಸಂಸತ್ತಿನ ಉಭಯ ಸದನಗಳು ಸತತ 2ನೇ ದಿನವೂ ಕಲಾಪ ನಡೆಸಲು ಸಾಧ್ಯವಾಗದೆ ಸ್ತಬ್ಧಗೊಂಡಿತು.

ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕರಲ್ಲಿ ಒಬ್ಬರಾದ ಸಂಸದ ಶಶಿ ತರೂರ್ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ: ‘ದೇಶ ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಲು ಸಂಸತ್ತು ವೇದಿಕೆಯಾಗಿದೆ. ಈ ಮೂಲಕ ಸಂಸದರ ಕಳಕಳಿ, ಸಂಸದರು ಯಾವ ವಿಷಯದ ಮೇಲೆ ಗಮನಹರಿಸುತ್ತಿದ್ದಾರೆ ಎಂಬುದನ್ನು ದೇಶದ ಜನತೆ ತಿಳಿಯಬಹುದಾಗಿದೆ.

ಆದರೆ ದುರದೃಷ್ಟವಶಾತ್ ಕೇಂದ್ರ ಸರಕಾರಕ್ಕೆ ಇದರ ಪ್ರಯೋಜನ ಕಾನುತ್ತಿಲ್ಲ. ಅದಕ್ಕಾಗಿಯೇ ಅವರು (ಸರ್ಕಾರದಲ್ಲಿರುವವರು) ಚರ್ಚೆಗಳನ್ನು ತಡೆಯುತ್ತಾರೆ. ಇದರಿಂದಾಗಿ 2 ದಿನಗಳ ಸಂಸತ್ತನ್ನು ಕಳೆದುಕೊಂಡಿದ್ದೇವೆ.

ಅದಾನಿ ಕಂಪೆನಿಯ ವಿಷಯವು ಅತ್ಯಂತ ಮಹತ್ವದ್ದಾಗಿರುವುದರಿಂದ ಮತ್ತು ದೇಶದ ಜನರ ಮೇಲೆ ಪರಿಣಾಮ ಬೀರುವುದರಿಂದ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಚರ್ಚಿಸಲು ಬಯಸುತ್ತಿವೆ. ಇದು ಸಾಕಷ್ಟು ಪ್ರಾಮುಖ್ಯತೆಯ ವಿಷಯವಾಗಿದ್ದು, ಇದನ್ನು ಚರ್ಚಿಸಲು ಸರ್ಕಾರ ಅವಕಾಶ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯ ಮಾಡುತ್ತಿವೆ.

ಬೆಂಗಳೂರು

ಬೆಂಗಳೂರು: ಅದಾನಿ ಸಮೂಹದ ನಿವ್ವಳ ಮೌಲ್ಯವು ಕಳೆದ ಕೆಲವು ವರ್ಷಗಳಿಂದ ದೈತ್ಯಾಕಾರವಾಗಿ ಬೆಳೆದಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದಾನಿ ಆಸ್ತಿ ಮೌಲ್ಯ ಗಣನೀಯವಾಗಿ ಏರಿಕೆಯಾಗಿದೆ ಎಂದು ಹಲವರು ಆರೋಪಿಸುತ್ತಿದ್ದಾರೆ. ಆದಾಗ್ಯೂ, ಅದಾನಿ ಗ್ರೂಪ್‌ನ ಆಸ್ತಿ ಹೆಚ್ಚಿದ ನಂತರ ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದರು. ಕಳೆದ ಕೆಲವು ದಿನಗಳಿಂದ ಅದಾನಿ ಗ್ರೂಪ್ ಷೇರುಗಳು ಕುಸಿತ ಕಂಡಿದ್ದು, ಅಲ್ಪ ಅಂತರದಿಂದ ಎರಡನೇ ಸ್ಥಾನದಲ್ಲಿದ್ದ ಅದಾನಿ ಗ್ರೂಪ್ ಈಗ ಮೂರನೇ ಸ್ಥಾನಕ್ಕೆ ಬಂದಿಳಿದಿದೆ.

ಈ ಹಿನ್ನಲೆಯಲ್ಲಿ ಅಮೆರಿಕದ ಪ್ರಸಿದ್ಧ ಸಂಶೋಧನಾ ಸಂಸ್ಥೆಯಾದ ಹಿಂಡೆನ್‌ಬರ್ಗ್ (Hindenburg) 106 ಪುಟಗಳ ವರದಿಯನ್ನು ಪ್ರಕಟಿಸಿ, ‘ಭಾರತದ ಅದಾನಿ ಗ್ರೂಪ್ ಷೇರು ಮಾರುಕಟ್ಟೆಯಲ್ಲಿ ಹಲವಾರು ವಂಚನೆಗಳನ್ನು ಮಾಡಿದೆ ಮತ್ತು ಸಮೂಹವು ಭಾರಿ ಸಾಲದಲ್ಲಿದೆ’ ಎಂದು ಆರೋಪಿಸಿತು. ವರದಿ ಬಿಡುಗಡೆಯಾದ ನಂತರ ಅದಾನಿ ಸಮೂಹದ ಷೇರುಗಳು ತೀವ್ರ ಕುಸಿತ ಕಂಡಿತು. ಜನವರಿ 25 ರಂದು ಮಾತ್ರ ಅದಾನಿ ಸಮೂಹವು ಒಂದು ಲಕ್ಷ ಕೋಟಿ ಮಾರುಕಟ್ಟೆ ಬಂಡವಾಳವನ್ನು ಕಳೆದುಕೊಂಡಿತು.

ಅದಾನಿ ಗ್ರೂಪ್ ಕಂಪನಿಗಳ ಷೇರುಗಳು ಸತತ ಮೂರನೇ ದಿನವೂ ನಿನ್ನೆ ಕುಸಿತವನ್ನು ಕಂಡವು. ಅದಾನಿ ಟೋಟಲ್ ಗ್ಯಾಸ್, ಅದಾನಿ ಗ್ರೀನ್ ಎನರ್ಜಿ, ಅದಾನಿ ಪವರ್, ಅದಾನಿ ಟ್ರಾನ್ಸ್‌ಮಿಷನ್, ಅದಾನಿ ವಿಲ್ಮರ್ ಮುಂತಾದವುಗಳ ಷೇರುಗಳ ಬೆಲೆ ವಿಪರೀತ ಕುಸಿತವನ್ನು ಕಂಡಿತು.

ಈ ಹಿನ್ನಲೆಯಲ್ಲಿ ಅದಾನಿಗೆ ಆರ್‌ಎಸ್‌ಎಸ್‌ನ ಆರ್ಥಿಕ ವಿಭಾಗ ಬೆಂಬಲ ನೀಡಿದೆ. ಆರ್‌ಎಸ್‌ಎಸ್‌ನ ಆರ್ಥಿಕ ವಿಭಾಗವಾದ ಸ್ವದೇಶಿ ಜಾಗರಣ ಮಂಚ್‌ ನೀಡಿರುವ ಹೇಳಿಕೆಯಲ್ಲಿ ‘ಅದಾನಿ ಹಣವನ್ನು ನಾಶ ಮಾಡುತ್ತಿಲ್ಲ, ಅವರು ಭಾರತದ ಮೂಲಸೌಕರ್ಯಗಳನ್ನು ನಿರ್ಮಿಸುತ್ತಿದ್ದಾರೆ; ಹಿಂಡೆನ್‌ಬರ್ಗ್ ವರದಿಯಿಂದ ಅಂತರಾಷ್ಟ್ರೀಯ ರಂಗದಲ್ಲಿ ಭಾರತದ ಹೆಸರಿಗೆ ಧಕ್ಕೆಯಾಗುವುದಿಲ್ಲ’ ಎಂದು ಹೇಳಿದೆ.