ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಕಾಂಗ್ರೆಸ್ Archives » Page 10 of 10 » Dynamic Leader
October 23, 2024
Home Posts tagged ಕಾಂಗ್ರೆಸ್ (Page 10)
ದೇಶ ಬೆಂಗಳೂರು ರಾಜಕೀಯ ರಾಜ್ಯ

ಬೆಂಗಳೂರು: ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಹೋರಾಡುತ್ತಾ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3500 ಕಿ.ಮೀ. ನಡೆದು ಜನರಲ್ಲಿ ಸೌಹಾರ್ದತೆಯ ಸಂದೇಶವನ್ನು ಹರಡಿಸಿರುವ ರಾಹುಲ್ ಗಾಂಧಿಯವರ ನಡೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.  

2023, ಜನವರಿ 10 ರಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಪತ್ರ ಬರೆದು, ಜನವರಿ 30 ರಂದು ಶ್ರೀನಗರದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದರು. ಮಲ್ಲಿಕಾರ್ಜುನ ಖರ್ಗೆಯವರ ಆಹ್ವಾನ ಪತ್ರಕ್ಕೆ ಇಂದು ಪ್ರತಿಯುತ್ತರ ನೀಡಿದ ದೇವೇಗೌಡರು, ‘ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರುವುದಕ್ಕೆ ಧನ್ಯವಾದಗಳು, ರಾಷ್ಟ್ರಪಿತ ಹುತಾತ್ಮರಾದ ದಿನದಂದು ಶ್ರೀನಗರದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವುದು ತುಂಬಾ ಸೂಕ್ತವಾಗಿದೆ.

ನಾನು ಕಾರ್ಯಕ್ರಮಕ್ಕೆ ಖುದ್ದಾಗಿ ಹಾಜರಾಗಲು ಸಾಧ್ಯವಾಗದಿದ್ದರೂ ನನ್ನ ಶುಭಾಶಯಗಳು ರಾಹುಲ್ ಗಾಂಧಿಯವರಿಗಿದೆ. ಅವರು ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಹೋರಾಡುತ್ತಿದ್ದಾರೆ ಮತ್ತು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3500 ಕಿ.ಮೀ. ನಡೆದು ಜನರಲ್ಲಿ ಸೌಹಾರ್ದತೆಯ ಸಂದೇಶವನ್ನು ಹರಡಿಸಿದ್ದಾರೆ. ದಯವಿಟ್ಟು ಅವರಿಗೆ ನನ್ನ ಆಳವಾದ ಮೆಚ್ಚುಗೆಯನ್ನು ಸೂಚಿಸಿ’ ಎಂದು ಮಲ್ಲಿಕಾರ್ಜುನ ಖರ್ಗೆಯವರಿಗೆ ಇಂದು ಬರೆದ ಪತ್ರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ. 

ದೇಶ

ಹೊಸದಿಲ್ಲಿ: ಕಾಶ್ಮೀರದಲ್ಲಿ ಭಾರತ ಜೋಡೋ ಯಾತ್ರೆ ನಡೆಸುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೆಲವೆಡೆ ಪಾದಯಾತ್ರೆಯನ್ನು ತಪ್ಪಿಸಿ, ವಾಹನದಲ್ಲಿ ಹೋಗುವಂತೆ ಕೇಂದ್ರ ಗುಪ್ತಚರ ಮತ್ತು ಭದ್ರತಾ ಸಂಸ್ಥೆಗಳು ಎಚ್ಚರಿಕೆ ನೀಡಿವೆ ಎಂಬ ವರದಿಗಳು ಹೊರಬಿದ್ದಿವೆ. ರಾಹುಲ್ ಗಾಂಧಿ ಅವರ ಪ್ರಯಾಣದ ಮಾರ್ಗ ಮತ್ತು ರಾತ್ರಿಯ ವಾಸ್ತವ್ಯದ ಭದ್ರತಾ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಳೆದ ವರ್ಷ ಸೆಪ್ಟೆಂಬರ್ 7ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಿಂದ ಭಾರತ ಜೋಡೋ ಯಾತ್ರೆ ಆರಂಭಿಸಿದ್ದರು. ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ. ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಪಂಜಾಬ್, ಹರಿಯಾಣ ಮುಂತಾದ ಹಲವು ರಾಜ್ಯಗಳಲ್ಲಿ ಯಾತ್ರೆ ಕೈಗೊಂಡಿರುವ ಅವರು ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾತ್ರೆ ಕೈಗೊಳ್ಳಲಿದ್ದಾರೆ.

ಜನವರಿ 19ರಂದು ರಾಹುಲ್ ಗಾಂಧಿ ಲಕ್ಕನ್‌ಪುರ ಪ್ರವೇಶಿಸಲಿದ್ದಾರೆ. ರಾತ್ರಿ ಅಲ್ಲೇ ಇದ್ದು ಮರುದಿನ ಬೆಳಗ್ಗೆ ಕಥುವಾಗೆ ಹೊರಡುತ್ತಾರೆ. ನಂತರ ರಾತ್ರಿ ಚಟ್ವಾಲ್ ನಲ್ಲಿ ತಂಗುತ್ತಾರೆ. ಜನವರಿ 21 ರಂದು ಬೆಳಿಗ್ಗೆ ಹೀರಾನಗರದಿಂದ ಡ್ಯೂಕರ್ ಹವೇಲಿ ವರೆಗೆ ಪಾದಯಾತ್ರೆ ನಡೆಯಲಿದೆ. ಜನವರಿ 22 ರಂದು ವಿಜಯಪುರದಿಂದ ಸತ್ವಾರಿಗೆ ಪಾದಯಾತ್ರೆ ಮುನ್ನಡೆಯಲಿದೆ.

ಜನವರಿ 25 ರಂದು ರಾಹುಲ್ ಗಾಂಧಿ ಅವರು ಕಾಶ್ಮೀರದ ಬನಿಹಾಲ್‌ನಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ, ನಂತರ ಅನಂತನಾಗ್ ಜಿಲ್ಲೆಯ ಮೂಲಕ ಪ್ರಯಾಣಿಸಿ 2 ದಿನಗಳಲ್ಲಿ ಶ್ರೀನಗರವನ್ನು ತಲುಪಲಿದ್ದಾರೆ. ಶ್ರೀನಗರಕ್ಕೆ ಭೇಟಿ ನೀಡಿದಾಗ ರಾಹುಲ್ ಅವರ ಜೊತೆಯಲ್ಲಿ ಅತ್ಯಂತ ಸೀಮಿತ ಸಂಖ್ಯೆಯ ಜನರು ಮಾತ್ರ ಭಾಗವಹಿಸಬೇಕೆಂದು ಭದ್ರತಾ ಸಂಸ್ಥೆಗಳು ಸೂಚಿಸಿರುವುದಾಗಿ ಹೇಳಲಾಗುತ್ತಿದೆ.

ಕೆಲ ರಸ್ತೆಗಳು ಉದ್ವಿಗ್ನವಾಗಿರುವುದು ಗೊತ್ತಿರುವುದರಿಂದ ಮೆರವಣಿಗೆ ಮಾಡುವ ಬದಲು ಕಾರಿನಲ್ಲಿ ಹೋಗುವಂತೆ ರಾಹುಲ್ ಗಾಂಧಿಗೆ ಸೂಚಿಸಲಾಗಿದೆಯಂತೆ.

ಜನವರಿ 30 ರಂದು ಶ್ರೀನಗರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಲಿದ್ದು, ಅಲ್ಲಿ ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ಪೂರ್ಣಗೊಳ್ಳಲಿದೆ.

ಈ ಸಭೆಯಲ್ಲಿ ಆಮ್ ಆದ್ಮಿ ಪಕ್ಷ, ಚಂದ್ರಶೇಖರ ರಾವ್ ಅವರ ಭಾರತ ರಾಷ್ಟ್ರ ಸಮಿತಿ, ವೈಎಸ್‌ಆರ್ ಕಾಂಗ್ರೆಸ್, ಬಿಜು ಜನತಾ ದಳ, ಅಕಾಲಿದಳ, ಎಐಎಡಿಎಂಕೆ ಮತ್ತು ಓವೈಸಿ ಅವರ ಎಐಎಂಐಎಂಗೆ ಆಹ್ವಾನ ನೀಡಬಾರದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯ ಸುರಕ್ಷತೆಗೆ ಸಂಬಂಧಿಸಿದ ಸೂಚನೆಗಳು ಬಿಡುಗಡೆ ಮಾಡಲಾಗಿದೆ.

Z+ ಭದ್ರತೆ: ರಾಹುಲ್ ಗಾಂಧಿಗೆ ಈಗ Z+ ವರ್ಗದ ಭದ್ರತೆ ನೀಡಲಾಗಿದೆ. ಅದರಂತೆ 8 ರಿಂದ 9 ಕಮಾಂಡೋಗಳು ದಿನದ 24 ಗಂಟೆಯೂ ಅವರ ಸುತ್ತ ಕಾವಲು ಕಾಯಲಿದ್ದಾರೆ. ಕಳೆದ ತಿಂಗಳು ರಾಹುಲ್ ಗಾಂಧಿ ಅವರು ತಮ್ಮ ಯಾತ್ರೆಯ ಮಾರ್ಗದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು ಎಂಬುದು ಗಮನಾರ್ಹ.