ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಡಿಎಂಕೆ Archives » Page 2 of 2 » Dynamic Leader
October 16, 2024
Home Posts tagged ಡಿಎಂಕೆ (Page 2)
ದೇಶ

ಮೋದಿಯ ಧಾರ್ಮಿಕ ಆರ್ಯ ಮಾದರಿಯನ್ನು ಸೋಲಿಸಲು ನಾಯಕರು ಮತ್ತು ಕಾರ್ಯಕರ್ತರ ಪಡೆ ಸಾಲುವುದಿಲ್ಲ; ಮೋದಿ ಮಾದರಿಯನ್ನು ಸೋಲಿಸಲು ಪೆರಿಯಾರ್ ಅವರ ದ್ರಾವಿಡ ಮಾದರಿಯೇ ಸರಿಯಾದ ಅಸ್ತ್ರ. ಎಂದು ಡಿಎಂಕೆ ಸಂಸದ ಎ.ರಾಜ ಹೇಳಿದ್ದಾರೆ.

ನೆನ್ನೆ ತಿರುಚ್ಚಿಯಲ್ಲಿ ಡಿಎಂಕೆ ತರಬೇತಿ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ರಾಜ, “ಇಂದು ಜಗತ್ತು ಭಾರತವನ್ನು ನೋಡಿ ಉಗುಳುತ್ತಿದೆ. ನಮ್ಮ ಊರಿನಲ್ಲಿ ಹಲವು ಜಾತಿ ಭೇದಗಳಿವೆ. ಬಡವ-ಶ್ರೀಮಂತ ಎಂಬ ಭೇದವಿದೆ. ಆದರೆ ಅದು ಯಾವುದೇ ಜಾತಿಯ ಮಹಿಳೆಯಾಗಿರಲಿ. ಆ ಮಹಿಳೆಯನ್ನು ಯಾರಾದರೂ ವಿವಸ್ತ್ರಗೊಳಿಸಲು ಸಾಧ್ಯವೇ? ನಾವು ಬಿಟ್ಟುಬಿಡುತ್ತೇವಾ? ಜಾತಿ ಭೇದ ನೋಡುವವರೂ ಕೂಡ, ಬೇರೆ ಜಾತಿಯ ಮಹಿಳೆಗೆ ಅನ್ಯಾಯವಾಗುತ್ತಿದ್ದರೆ ಪ್ರಶ್ನೆ ಮಾಡುತ್ತಾರೆ. ಈ ಮಣ್ಣಿನಲ್ಲಿ ಮಹಿಳೆಗೆ ಪ್ರತ್ಯೇಕ ಗೌರವವಿದೆ. ಆದರೆ ಇದು ಮೋದಿಯ ಬಳಿ ಕಾಣತ್ತಿಲ್ಲ.

ಒಂದು ಕಡೆ ಭ್ರಷ್ಟಾಚಾರ; ಒಂದು ಕಡೆ ಸರ್ವಾಧಿಕಾರ; ಇನ್ನೊಂದು ಕಡೆ ಧಾರ್ಮಿಕತೆ. ಮತೀಯತೆ ಮತ್ತು ಭ್ರಷ್ಟಾಚಾರ ಸೇರಿಕೊಂಡು ಡಿಎಂಕೆ ಪಕ್ಷವನ್ನು ನೋಡಿ, ಇದೊಂದು ಭ್ರಷ್ಟ ಪಕ್ಷ ಮತ್ತು ಕುಟುಂಬ ಆಡಳಿತ ಎಂದು ಹೇಳುತ್ತಿದೆ. ಹೌದು, ಇದು ಕುಟುಂಬ ಆಡಳಿತವೇ? ಗೋಪಾಲಪುರಂನ ಮನೆಯನ್ನು ಅಡಮಾನವಿಟ್ಟು, ಮಿಸಾದಲ್ಲಿ ಬಂಧಿತರಾಗಿ ಒಂದು ವರ್ಷಗಳಿಗೂ ಮೇಲಾಗಿ ಜೈಲಿನಲ್ಲಿದ್ದ ಕಾರ್ಯಕರ್ತರ ಕುಟುಂಬಕ್ಕೆ ಹಣ ಕಳುಹಿಸಿದ ಕುಟುಂಬದ ಯಜಮಾನನೇ ನಮ್ಮ ಕರುಣಾನಿಧಿ. ಈ ರೀತಿ ನೋಡುವುದಾದರೆ ಇದು ಕುಟುಂಬ ಆಡಳಿತವೇ? ನಮ್ಮ ಕುಟುಂಬವನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ (ಬಿಜೆಪಿ) ಇಲ್ಲ.

ಮೋದಿ ವಿರುದ್ಧ ಉತ್ತರದ ರಾಜ್ಯಗಳಲ್ಲಿ ದೊಡ್ಡ ಪಡೆಯೇ ಸೇರುತ್ತಿದೆ. ಆದರೆ ಮೋದಿ ಎಂಬ ಮತೀಯವಾದವನ್ನು ಸೋಲಿಸಲು ಈ ಪಡೆ ಸಾಲುವುದಿಲ್ಲ. ತತ್ವದ ಅಗತ್ಯವಿದೆ. ಪೆರಿಯಾರ್ ರವರ ದ್ರಾವಿಡ ತತ್ವವು ಮೋದಿಯನ್ನು ಬೀಳಿಸಬಲ್ಲ ಸರಿಯಾದ ಆಯುಧವಾಗಿದೆ. ಮೋದಿಯವರ ಆರ್ಯ ಮಾದರಿಯನ್ನು ಪೆರಿಯಾರ್ ಅವರ ದ್ರಾವಿಡ ಮಾದರಿಯಿಂದ ಮಾತ್ರ ಸೋಲಿಸಲು ಸಾಧ್ಯ” ಎಂದರು.

ದೇಶ

ಕೊಯಮತ್ತೂರು ಜಿಲ್ಲೆಯ ಮೇಟ್ಟುಪಾಳ್ಯಂ ನಗರಸಭೆಯಲ್ಲಿ 33 ವಾರ್ಡ್‌ಗಳಿವೆ. ಅಧ್ಯಕ್ಷರಾಗಿ ಮೆಹ್ರಿಬಾ ಪರ್ವೀನ್, ಉಪಾಧ್ಯಕ್ಷರಾಗಿ ಅರುಳ್ ವಡಿವು ಇದ್ದಾರೆ. ಈ ಹಿನ್ನಲೆಯಲ್ಲಿ, ನಗರಸಭೆ ವ್ಯಾಪ್ತಿಯ 11ನೇ ವಾರ್ಡ್‌ನಲ್ಲಿ ಡಿಎಂಕೆ ನಗರ ಕಾರ್ಯದರ್ಶಿ ಮೊಹಮ್ಮದ್ ಯೂನಸ್ ಅವರ ಪತ್ನಿ ಜಮೃತ್ ಬೇಗಂ ವಾರ್ಡ್ ಸದಸ್ಯರಾಗಿ ಇದ್ದಾರೆ.

ಅವರ ವಾರ್ಡ್‌ನಲ್ಲಿ ತ್ಯಾಜ್ಯ ನೀರು ಕಾಲುವೆ ದುರಸ್ತಿ, ವಸತಿ ಪ್ರದೇಶದಲ್ಲಿ ಕಸ ಸಂಗ್ರಹ, ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಕಾಮಗಾರಿ ನಡೆಸಲು ನಗರಸಭೆ ಆಡಳಿತ ಮಂಡಳಿಗೆ ವಾರ್ಡ್ ಸದಸ್ಯೆ ಜಮೃತ್ ಬೇಗಂ ಹಲವು ಬಾರಿ ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ನಗರಸಭೆ ಅಧ್ಯಕ್ಷರು ಸೂಕ್ತ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.

ಏತನ್ಮಧ್ಯೆ, ಅವರ 11ನೇ ವಾರ್ಡ್‌ನಲ್ಲಿ 5 ದಿನಗಳಿಂದ ಕಸ ಸಂಗ್ರಹಿಸಲು ಸ್ವಚ್ಛತಾ ಕಾರ್ಯಕರ್ತರು ಬಂದಿಲ್ಲ ಎಂದು ಹೇಳಲಾಗುತ್ತಿದೆ. ಇದರಿಂದ ವಾರ್ಡ್ನ ಜನರು ಅವರ ಮನೆಗೆ ತೆರಳಿ ವಾಗ್ವಾದ ನಡೆಸಿದ್ದಾರೆ. ಇದರಿಂದ ಹತಾಶರಾದ ಜಮೃತ್ ಬೇಗಂ ಹಾಗೂ ಅವರ ಪುತ್ರರು ವಾರ್ಡ್ ವ್ಯಾಪ್ತಿಯಲ್ಲಿ ಸಂಗ್ರಹವಾದ ಕಸವನ್ನು ವಿಲೇವಾರಿ ಮಾಡುವ ಕಾರ್ಯದಲ್ಲಿ ತೊಡಗಿದರು.

ಇದೇ ವೇಳೆ ನಗರಸಭೆ ಆಡಳಿತ ಕಸ ಸಂಗ್ರಹಿಸದ ಕಾರಣ ವಾರ್ಡ್ ಸದಸ್ಯರೊಬ್ಬರು ತಮ್ಮ ಪುತ್ರರೊಂದಿಗೆ ಸೇರಿ ಕಸ ಎತ್ತುತ್ತಿರುವುದನ್ನು ಕಂಡ ಬಡಾವಣೆಯ ನಿವಾಸಿಗಳು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

A DMK councillor of the Mettupalayam Municipality collected waste from houses, allegedly after conservancy workers of the civic body failed to do their duty for five days. M.Jamruth Begum, councillor of ward no: 11 of the municipality, stepped in for conservancy work on Tuesday along with her sons.

ರಾಜಕೀಯ

ಮೇಕೆದಾಟು ಅಣೆಕಟ್ಟು ಸಮಸ್ಯೆ, ಲೋಕಸಭಾ ಚುನಾವಣೆಗೆ ಡಿಎಂಕೆಯಿಂದ ಹೆಚ್ಚುವರಿ ಸ್ಥಾನಗಳನ್ನು ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ, ತಮಿಳುನಾಡು ಕಾಂಗ್ರೆಸ್ ಉಸ್ತುವಾರಿಯಾಗಿರುವ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ರಹಸ್ಯ ಸಭೆ ನಡೆಸಿರುವುದು ಬಹಿರಂಗವಾಗಿದೆ.

ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಹಾಗೂ ಕರ್ನಾಟಕ ರಾಜ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಮೊನ್ನೆ ಮತ್ತು ನಿನ್ನೆ ಅಳಗಿರಿ ಅವರು ಸಚಿವರ ನಿವಾಸದಲ್ಲಿ ಗೌಪ್ಯವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಮೇಕೆದಾಟು ಅಣೆಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಪಕ್ಷವನ್ನು ಮೈತ್ರಿಯಿಂದ ಹೊರತೆಗೆಯಿರಿ ಎಂದು, ಬಿಜೆಪಿ ವರಿಷ್ಟರು ಡಿಎಂಕೆ ಮೇಲೆ ಒತ್ತಡ ಹೇರುತ್ತಿದ್ದಾರೆ. ಡಿಎಂಕೆ-ಕಾಂಗ್ರೆಸ್ ಮೈತ್ರಿ ಮುಂದುವರಿಯಬೇಕಾದರೆ ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಕರ್ನಾಟಕ ಸರ್ಕಾರ ತಮಿಳುನಾಡಿನ ವಿರುದ್ಧ ನಿಲುವು ತಳೆಯಬಾರದು.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಜೂನ್ ಮತ್ತು ಜುಲೈನಲ್ಲಿ ತಮಿಳುನಾಡಿಗೆ ಹರಿಸಬೇಕಾದ ಕಾವೇರಿ ನೀರನ್ನು ಬಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಬೇಕು. ತಮಿಳುನಾಡಿನ ಜನತೆಯ ಹಿತಕ್ಕೆ ವಿರುದ್ಧವಾಗಿ, ಕರ್ನಾಟಕ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ, ತಮಿಳುನಾಡು ಕಾಂಗ್ರೆಸ್ ತಲೆಬಾಗುವುದಿಲ್ಲ. ಅಗತ್ಯಬಿದ್ದರೆ ವಿರುದ್ಧ ನಿಲುವು ತೆಗೆದುಕೊಳ್ಳಬೇಕಾಗುತ್ತದೆ.

ಆಗ ಮಾತ್ರ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ. ಡಿಎಂಕೆ ವಿರುದ್ಧ ಕಣಕ್ಕಿಳಿದರೆ ಕ್ಷೇತ್ರಗಳನ್ನು ಕಡಿಮೆ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಮುಂದಿನ ಹೆಜ್ಜೆಯನ್ನು ಅತ್ಯಂತ ಎಚ್ಚರಿಕೆಯಿಂದ ಮತ್ತು ಜಾಣ್ಮೆಯಿಂದ ನಿಭಾಯಿಸಬೇಕೆಂದು ಅಳಗಿರಿ ದಿನೇಶ್ ಗುಂಡೂರಾವ್ ಅವರನ್ನು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ದೇಶ ರಾಜಕೀಯ

ಚೆನ್ನೈ:ರಾಜ್ಯದಲ್ಲಿ ಯಾವ ಪಕ್ಷಕ್ಕೆ ಪ್ರಭಾವವಿದೆಯೋ ಆ ಪಕ್ಷದ ನೇತೃತ್ವದಲ್ಲಿ ಮೈತ್ರಿ ಮಾಡಿಕೊಳ್ಳಬೇಕು ಎಂದು ವಿರೋಧ ಪಕ್ಷಗಳ ಸಭೆಯಲ್ಲಿ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ.

ಬಿಹಾರ ರಾಜ್ಯದಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಿ, ಚೆನ್ನೈಗೆ ಹಿಂತಿರುಗಿದ ಮುಖ್ಯಮಂತ್ರಿ ಸ್ಟಾಲಿನ್ ಹೇಳಿದರು: “ಪಾಟ್ನಾದಲ್ಲಿ ನಡೆದ ವಿರೋಧ ಪಕ್ಷಗಳ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದು ನನಗೆ ಅತೀವ ಸಂತೋಷ ಮತ್ತು ಭರವಸೆಯನ್ನು ನೀಡಿದೆ. ಪಾಟ್ನಾ ಸಭೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಿದ್ದೇವೆ.

ಭಾರತದ ಪ್ರಜಾಪ್ರಭುತ್ವ, ಜಾತ್ಯತೀತತೆಯನ್ನು ಉಳಿಸಲು ಬಿಜೆಪಿ ಮತ್ತೆ ಸರ್ಕಾರ ರಚಿಸಬಾರದು ಎಂಬುದುಕ್ಕಾಗಿಯೇ ಈ ಸಭೆಯನ್ನು ಆಯೋಜಿಸಲಾಗಿತ್ತು. ಬಿಜೆಪಿಯನ್ನು ಸೋಲಿಸುವುದೇ ಎಲ್ಲ ಪಕ್ಷಗಳ ಒಂದೇ ಗುರಿಯಾಗಿದೆ. ರಾಜಕೀಯ ಪಕ್ಷಗಳ ನಡುವೆ ಕನಿಷ್ಠ ಕಾರ್ಯಕ್ರಮ ರೂಪಿಸುವಂತೆ ಒತ್ತಾಯಿಸಿದ್ದೇನೆ.

ಬಿಜೆಪಿಯನ್ನು ಸೋಲಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಪ್ರಸ್ತುತ ಪರಿಸ್ಥಿತಿಯು ಅದಕ್ಕೆ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದುಕೊಂಡಿದ್ದೇವು ಅದು ಈಗ ಪಾಟ್ನಾದಲ್ಲಿ ನೆರವೇರಿದೆ.

ಮೈತ್ರಿ ಮಾಡಿಕೊಳ್ಳಲು ಸಾಧ್ಯವಾಗದಿದ್ದರೆ ಕ್ಷೇತ್ರ ಹಂಚಿಕೊಳ್ಳಬಹುದು. ಕ್ಷೇತ್ರ ಹಂಚಿಕೆ ಸಾಧ್ಯವಾಗದಿದ್ದರೆ ಸಾಮಾನ್ಯ ಅಭ್ಯರ್ಥಿಯನ್ನು ಘೋಷಿಸಬಹುದು ಎಂದು ತೀರ್ಮಾನಿಸಲಾಗಿದೆ. ಮೈತ್ರಿ ರಚನೆಗೆ ಸಂಬಂಧಿಸಿದಂತೆ ಪಕ್ಷಗಳ ನಡುವೆ 7 ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದ್ದೇವೆ.

ರಾಜ್ಯದಲ್ಲಿ ಯಾವ ಪಕ್ಷಕ್ಕೆ ಪ್ರಭಾವವಿದೆಯೋ ಆ ಪಕ್ಷದ ನಾಯಕತ್ವದಲ್ಲಿ ಮೈತ್ರಿ ರಚನೆಯಾಗಬೇಕು ಎಂದು ಒತ್ತಾಯಿಸಲಾಗಿದೆ. ಪಾಟ್ನಾ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ” ಎಂದರು.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪದಕರು

ಕರ್ನಾಟಕದಲ್ಲಿ ತಮಿಳು ಭಾಷಿಕರು ಸುಮಾರು 1 ಕೋಟಿಗೂ ಮಿಗಿಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಆನೇಕಲ್, ಮಹದೇವಪುರ, ಕೆ.ಆರ್.ಪುರಂ, ಸಿ.ವಿ.ರಾಮನ್ ನಗರ, ಸರ್ವಜ್ಞ ನಗರ, ಪುಲಿಕೇಶಿನಗರ, ಶಿವಾಜಿನಗರ, ಶಾಂತಿನಗರ, ಬಿಟಿಎಂ ಲೇಔಟ್, ಜಯನಗರ, ಚಿಕ್ಕಪೇಟೆ, ಚಾಮರಾಜ ಪೇಟೆ, ಗಾಂಧಿನಗರ, ರಾಜಾಜಿನಗರ, ಯಶವಂತಪುರ ಹಾಗೂ ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು, ಮೈಸೂರು, ಹನೂರು, ಚಾಮರಾಜನಗರ, ಕೊಳ್ಳೇಗಾಲ, ಹಾಗೂ ಕೆಜಿಎಫ್ ಮುಂತಾದ 23 ಕ್ಷೇತ್ರಗಳಲ್ಲಿ ತಮಿಳರ ಮತಗಳೇ ನಿರ್ಣಾಯಕ.

ದಶಕಗಳ ಹಿಂದೆ ಈ ಕ್ಷೇತ್ರಗಳಲ್ಲಿ ತಮಿಳುನಾಡು ಮೂಲದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷದ ಅಭ್ಯರ್ಥಿಗಳು ಚುನಾವಣೆಗಳಲ್ಲಿ ಸ್ಪರ್ದಿಸುತ್ತಿದ್ದರು. ರಾಷ್ಟ್ರಮಟ್ಟದಲ್ಲಿ ಆಗುತ್ತಿರುವ ರಾಜಕೀಯ ಬದಲಾವಣೆಗಳು ಮತ್ತು ಎನ್‌ಡಿಎ ಹಾಗೂ ಯೂಪಿಎ ಮೈತ್ರಿ ಪಕ್ಷಗಳ ಕೋರಿಕೆಯ ಮೇರೆಗೆ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ಇಲ್ಲಿನ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿ ಚುನಾವಣೆಯಿಂದ ಹಿಂದೆ ಸರಿದವು.

ಯೂಪಿಎ ಮೈತ್ರಿ ಕೂಟದಲ್ಲಿರುವ ಡಿಎಂಕೆ ಮತ್ತು ಸಿದಂಬರಂ ಲೋಕಸಭಾ ಸದಸ್ಯ ತೋಲ್ ತಿರುಮಾವಳವನ್ ನೇತೃವದ “ವಿಡುದಲೈ ಚಿರುತ್ತೈಗಳ್” ಪಕ್ಷಕ್ಕೆ ಕರ್ನಾಟಕದಲ್ಲಿ ಶಾಖೆಗಳಿವೆ. ಮತ್ತು ಅಪಾರವಾದ ಕಾರ್ಯಕರ್ತರಿದ್ದಾರೆ. ವಿಚಾರವಾದಿ ಪೆರಿಯಾರ್ ರವರ ಅನುಯಾಯಿಗಳು ಸಾವಿರಾರು ಸಂಖ್ಯೆಯಲ್ಲಿದ್ದಾರೆ. ಇವರೆಲ್ಲರೂ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ ಈಗಾಗಲೇ ಘೋಷಣೆ ಮಾಡಿದೆ.

ಆದರೆ, ಎನ್‌ಡಿಎ ಮೈತ್ರಿ ಮೈತ್ರಿಕೂಟದಲ್ಲಿರುವ ಎಐಎಡಿಎಂಕೆ ಪಕ್ಷವು, ಮಾಜಿ ಮುಖ್ಯಮಂತ್ರಿಗಳಾದ ಎಡಪ್ಪಾಡಿ ಪಳನಿಸ್ವಾಮಿ, ಒ.ಪನ್ನೀರ್ ಸೆಲ್ವಂ, ಶಶಿಕಲಾ ಮತ್ತು ಟಿಟಿವಿ ದಿನಕರನ್ ಮುಂತಾದವರ ನಾಯಕತ್ವದ ಕಚ್ಚಾಟದಿಂದ ನಾಲ್ಕು ಭಾಗಗಳಾಗಿ ಹೊಡೆದೋಗಿದೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಮೈತ್ರಿಕೂಟದಲ್ಲಿರುವ ಬಿಜೆಪಿ ಈಗ ಹೊರಗೆ ನಿಂತು ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷವನ್ನು ಬಾಯಿಗೆ ಬಂದಂತೆ ವಿಮರ್ಶೆ ಮಾಡಿಕೊಂಡು ತಿರುಗಾಡುತ್ತಿದೆ. ಈರೋಡು ಉಪ ಚುನಾವಣೆಯಿಂದ ಎಐಎಡಿಎಂಕೆ ಮತ್ತು ತಮಿಳುನಾಡು ಬಿಜೆಪಿಯ ಸಂಬಂಧ ಅಷ್ಟೇನು ಸರಿಯಾಗಿಲ್ಲ.

ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ, ಆಡಳಿತ ರೂಡ ಡಿಎಂಕೆ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವ ಜೊತೆಯಲ್ಲೇ ಮಿತ್ರ ಪಕ್ಷವಾದ ಎಐಎಡಿಎಂಕೆ ಪಕ್ಷದ ನಾಯಕರುಗಳನ್ನೂ ವಿಮರ್ಶೆ ಮಾಡುತ್ತಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ‘ದಿನನಿತ್ಯ ಪತ್ರಿಕೆಗಳಲ್ಲಿ, ಟಿ.ವಿ.ವಾಹಿನಿಗಳಲ್ಲಿ ಹಾಗೂ ಸಾಮಾಜಿಕ ಮಾದ್ಯಮಗಳಲ್ಲಿ ಸುದ್ದಿಯಾಗಬೇಕು ಎಂಬುದಕ್ಕಾಗಿ ಸಾಕ್ಷ್ಯದಾರ ವಿಲ್ಲದ ವಿಷಯಗಳನ್ನು ಮುನ್ನಲೆಗೆ ತಂದು ಅಣ್ಣಾಮಲೈ ಮಾತನಾಡುತ್ತಿದ್ದಾರೆ’ ಎಂದು ಅಲ್ಲಿನ ದಿಎಂಕೆ ನಾಯಕರು ಹೇಳುತ್ತಿದ್ದಾರೆ. 2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಲ್ಲಿನ ಬಿಜೆಪಿ ಪಕ್ಷವು ಸುಮಾರು 2.62% ಮತಗಳನ್ನು ಮಾತ್ರವೇ ಪಡೆದಿತ್ತು. ಆದರೆ, ಅಲ್ಲಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತಮಿಳುನಾಡಿನಲ್ಲಿ ಪ್ರಬಲವಾದ ವಿರೋಧ ಪಕ್ಷ ನಾವೇ ಎಂದು ಎಲ್ಲಡೆಯೂ ಹೇಳಿಕೊಂಡು ಬರುತ್ತಿದ್ದಾರೆ. ತನ್ನನ್ನು ಎಂಜಿಆರ್, ಜಯಲಲಿತಾ ಹಾಗೂ ಕರುಣಾನಿಧಿ ಅವರೊಂದಿಗೆ ಹೋಲಿಕೆ ಮಾಡಿ ಮಾತನಾಡಿ ಎಲ್ಲರ ನಗೆಪಾಟಿಗೆ ಕಾರಣರಾಗಿದ್ದಾರೆ.

‘ರಫೇಲ್ ಕೈಗಡಿಯಾರದ ಬಿಲ್ಲಿನ ವಿಚಾರದಲ್ಲಿ ನಕಲಿ ರಶೀದಿಯನ್ನು ತೋರಿಸಿ, ದಿನಕ್ಕೊಂದು ಮಾತನಾಡುತ್ತಿದ್ದಾರೆ’ ಎಂದು ಅಲ್ಲಿನ ಜನ ಆಕ್ರೋಶವನ್ನು ವ್ಯಕ್ತಪಡಿಸಿ, ಶೋಷಿಯಲ್ ಮೀಡಿಯಾದಲ್ಲಿ ಮನಸ್ಸಿಗೆ ಬಂದಂತೆ ಮೀಮ್ಸ್ ಗಳನ್ನು ಹಾಕಿ ಕೀಟಲೆ ಮಾಡುತ್ತಿರುವುದು ದಿನನಿತ್ಯದ ಟ್ರೆಂಡಿಂಗ್ ಆಗಿದೆ. ‘ರಫೇಲ್ ವಾಚ್‌ಗೆ ಬಿಲ್ಲನ್ನು ಕೇಳಿದರೆ, ಅದಕ್ಕೆ ಪ್ರತಿಯುತ್ತರವಾಗಿ ಡಿಎಂಕೆ ಸರ್ಕಾರದ ಭ್ರಷ್ಟಾಚಾರಗಳನ್ನು ಏಪ್ರಿಲ್ ಒಂದರಂದು ಬಯಲುಗೊಳಿಸುತ್ತೇನೆ ಎಂದು ಹೇಳಿ, ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಕೆಲವರ ಆಸ್ತಿ ಪಟ್ಟಿಯನ್ನು ತೋರಿಸಿ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಅವರ ಮಂತ್ರಿಮಂಡಲದ ಸಹದ್ಯೋಗಿಗಳು ರೂ.1,343,170,000,000 ಕೋಟಿಯಷ್ಟು ಭ್ರಷ್ಟಾಚಾರ ಮಾಡಿದ್ದಾರೆ’ ಎಂದು ಹೇಳುತ್ತಿದ್ದಾರೆ’ ಎಂದು ಅಲ್ಲಿಂದ ವರದಿಗಳು ಹೇಳುತ್ತಿದೆ. ಇದನ್ನೇ ಕಾಯುತ್ತಿದ್ದ ಡಿಎಂಕೆ ಪಕ್ಷವು ಸಂಘಟನಾ ಕಾರ್ಯದರ್ಶಿ ಆರ್.ಎಸ್.ಭಾರತಿಯ ಮೂಲಕ ತಕ್ಷಣ ಅಣ್ಣಮಲೈಗೆ ಲೀಗಲ್ ನೋಟೀಸ್ ಕಳುಹಿಸಿ, ‘ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಅವರ ಕುಟುಂಬ ಸದಸ್ಯರು ಮತ್ತು ಡಿಎಂಕೆ ನಾಯಕರ ವಿರುದ್ಧ ಇತ್ತೀಚಿಗೆ ಮಾಡಿದ ಭಾಷಣ ಮತ್ತು ಭ್ರಷ್ಟಾಚಾರ ಆರೋಪಗಳಿಗಾಗಿ ಸಾರ್ವಜನಿಕವಾಗಿ ಬೇಷರತ್ ಕ್ಷಮೆಯಾಚಿಸಬೇಕು ಮತ್ತು 48 ಗಂಟೆಗಳ ಒಳಗೆ 500 ಕೋಟಿ ರೂಪಾಯಿಗಳ ನಷ್ಟವನ್ನು ಪಾವತಿಸಬೇಕು. ಅದನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು’ ಎಂದು ಲೀಗಲ್ ನೋಟಿಸ್ ಕಳುಹಿಸಿತು.

ಕೆಲವು ದಿನಗಳ ಹಿಂದೆ ಮಾತನಾಡಿದ ಅಣ್ಣಾಮಲೈ ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಮೈತ್ರಿಯನ್ನು ಮುಂದುವರಿಸಿದರೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಗರ್ವದಿಂದ ಕೇಂದ್ರದ ಬಿಜೆಪಿ ವರಿಷ್ಠರಿಗೆ ಬೆದರಿಕೆಯ ಸಂದೇಶವನ್ನು ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ‘ಮುಂದಿನ ಚುನಾವಣೆ ಎಐಎಡಿಎಂಕೆ ಜೊತೆಯಲ್ಲೇ’ ಎಂದು ಪ್ರತಿಕ್ರಿಯೆ ನೀಡಿದರು. ಇಷ್ಟಕ್ಕೆ ತನ್ನಗಾಗದ ಅಣ್ಣಾಮಲೈ ‘ಡಿಎಂಕೆ ಮಾತ್ರವಲ್ಲ ತಮಿಳುನಾಡಿನಲ್ಲಿ ಅಧಿಕಾರ ಚಲಾಯಿಸಿದ ಹಿಂದಿನ ಪಕ್ಷಗಳ ಭ್ರಷ್ಟಾಚಾರವನ್ನೂ ಬಯಲಿಗೆಳೆಯುತ್ತೇನೆ’ ಎಂದು ಎಐಎಡಿಎಂಕೆ ಪಕ್ಷಕ್ಕೆ ದಮಕಿ ಹಾಕಿದರು. ಇದರಿಂದ ಎಐಎಡಿಎಂಕೆ ಮತ್ತು ಬಿಜೆಪಿಯ ಸಂಬಂಧ ಅಳಸಿಹೋಗಿರುವುದು ಸುಳ್ಳೇನಲ್ಲ. ಇವರ ನಡವಳಿಕೆಯಿಂದ ಬೇಸತ್ತ ತಮಿಳುನಾಡು ಬಿಜೆಪಿಯ ರಾಜ್ಯಮಟ್ಟದ ಪದಾಧಿಕಾರಿಗಳು ಸುಮಾರು ಜನ ಪಕ್ಷವನ್ನು ತೊರೆದು ಬೇರೆ ಬೇರೆ ಪಕ್ಷಗಳಲ್ಲಿ ಸೇರಿಕೊಳುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಎನ್‌ಡಿಎ ಮಿತ್ರ ಪಕ್ಷವಾದ ಎಐಎಡಿಎಂಕೆ, ಕರ್ನಾಟಕದಲ್ಲಿ ತಮಿಳರ ಪ್ರಾಬಲ್ಯವಿರುವ ಕಡೆಗಳಲ್ಲಿ ಸ್ಪರ್ದಿಸಲು 4 ರಿಂದ 6 ಕ್ಷೇತ್ರಗಳನ್ನು ಒದಗಿಸಿಕೊಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಕೇಳಿತ್ತು. ಆದರೆ ಇದಕ್ಕೆ ಅಮಿತ್ ಶಾ ಒಪ್ಪಿಗೆ ನೀಡಲಿಲ್ಲವೆಂದು ಹೇಳಲಾಗುತ್ತಿದೆ. ಇದರಿಂದ ರೊಚ್ಚಿಗೆದ್ದ ಎಐಎಡಿಎಂಕೆ ಕೊನೆಯ ಕ್ಷಣದಲ್ಲಿ ಪುಲಿಕೇಶಿನಗರದಲ್ಲಿ ತಮ್ಮ ಅಭ್ಯರ್ಥಿ ಟಿ.ಅನ್ಬರಸನ್ ಅವರನ್ನು ಕಣಕ್ಕಿಳಿಸಿ ತಮ್ಮ ಪ್ರತಿರೋಧವನ್ನು ವ್ಯಕ್ತ ಪಡಿಸಿತು. ಈಗ ಬಿಜೆಪಿ ವರಿಷ್ಠರ ಕೋರಿಕೆಯ ಮೇರೆಗೆ ಅಲ್ಲಿ ತಮ್ಮ ಅಭ್ಯರ್ಥಿಯನ್ನು ವಾಪಸ್ಸು ಪಡೆದುಕೊಂಡಿದೆ.

ಬೆಂಗಳೂರು ನಗರದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕೆಂದು ಕಾರ್ಯತಂತ್ರ ರೂಪಿಸಿರುವ  ಬಿಜೆಪಿಗೆ, ತಮಿಳುನಾಡು ಬಿಜೆಪಿ ಅಧ್ಯಕ್ಷ ಹಾಗೂ ಕರ್ನಾಟಕ ಚುನಾವಣೆ ಸಹ ಉಸ್ತುವಾರಿಯಾದ ಅಣ್ಣಾಮಲೈ ಅವರಿಂದ ತಮಿಳರ ಪ್ರಾಬಲ್ಯವಿರುವ 23 ಕ್ಷೇತ್ರಗಳಲ್ಲಿ ತಮಿಳರ ಮತಗಳು ಕೈತಪ್ಪಿ ಹೋಗುವುದು ಬಹುತೇಕ ಖಚಿತವಾಗಿದೆ. ಕಾರಣ ಇಲ್ಲಿನ ಬಹುಪಾಲು ತಮಿಳರು ಇನ್ನು ಡಿಎಂಕೆ, ಎಐಎಡಿಎಂಕೆ, ವಿಡುದಲೈ ಚಿರುತ್ತೈಗಳ್, ದ್ರಾವಿಡರ್ ಕಳಗಂ ಹಾಗೂ ದ್ರಾವಿಡರ್ ವಿಡುದಲೈ ಕಳಗಂ ಮೂಂತಾದ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಉಳಿದವರಲ್ಲಿ ಹೆಚ್ಚಿನವರು ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಇದ್ದಾರೆ. ಬಿಜೆಪಿಯಲ್ಲಿ ಬೆರಳೆನಿಕೆಯ ತಮಿಳರೆ ಇದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಡಿಎಂಕೆ ವರಿಷ್ಠ ದಿವಂಗತ ಎಂ.ಕರುಣಾನಿಧಿ ಅವರ ಆಡಳಿತಾವದಿಯಲ್ಲಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಹಾಗೂ ಚೆನ್ನೈನಲ್ಲಿ ಸರ್ವಜ್ಞರ ಪ್ರತಿಮೆಯನ್ನು ಸ್ಥಾಪಿಸಲಾಯಿತು. ಇದರಿಂದ ಕರ್ನಾಟಕದಲ್ಲಿ ಯಡಿಯೂರಪ್ಪನವರ ಮೇಲೆ ಇಲ್ಲಿನ ತಮಿಳರು ಅಪಾರವಾದ ಗೌರವವನ್ನು ಇಟ್ಟಿದ್ದರು. ಈಗ ಅಣ್ಣಾಮಲೈಯಿಂದ ಅದೂ ಇಲ್ಲದಂತೆ ಆಗಿದೆ. ತಮಿಳುನಾಡಿನಲ್ಲಿರುವ ಆಡಳಿತ ಪಕ್ಷವಾದ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳನ್ನು ಹಾಗೂ ವಿರೋಧ ಪಕ್ಷವಾದ ಎಐಎಡಿಎಂಕೆಯನ್ನು ಕಟುವಾಗಿ ಟೀಕಿಸಿಕೊಂಡು ಇಲ್ಲಿಗೆ ಬಂದು ತಮಿಳರಲ್ಲಿ ಮತ ಕೇಳಿದರೆ ಯಾರುತಾನೇ ಓಟು ನೀಡುತ್ತಾರೆ.        

ದೇಶ ರಾಜಕೀಯ

ಡಿ.ಸಿ.ಪ್ರಕಾಶ್, ಸಂಪಾದಕರು

ತಮಿಳುನಾಡು: ತಮಿಳುನಾಡು ವಿಧಾನಸಭೆಯು ಸಾಮಾನ್ಯವಾಗಿ ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರ ಭಾಷಣದೊಂದಿಗೆ ಪ್ರಾರಂಭಿಸುತ್ತದೆ. ಅದರಂತೆ ಇಂದು (ಜನವರಿ 9) ಬೆಳಗ್ಗೆ 10 ಗಂಟೆಗೆ ರಾಜ್ಯಪಾಲ ಆರ್.ಎನ್.ರವಿ ಭಾಷಣದೊಂದಿಗೆ ವರ್ಷದ ಮೊದಲ ಸಭೆ ಆರಂಭವಾಯಿತು.

ಸಭಾಧ್ಯಕ್ಷರು ಎಂ.ಅಪ್ಪಾವು ಹಾಗೂ ಕಾರ್ಯದರ್ಶಿ ಕೆ.ಶ್ರೀನಿವಾಸನ್ ಅವರು ರಾಜ್ಯಪಾಲರನ್ನು ಸ್ವಾಗತಿಸಿದರು. ಇದಾದ ಬಳಿಕ ರಾಜ್ಯಪಾಲರಿಗೆ ಪೊಲೀಸ್ ಪರೇಡ್ ಗೌರವ ಸಲ್ಲಿಸಲಾಯಿತು. ಬೆಳಗ್ಗೆ 10 ಗಂಟೆಗೆ ಸರಿಯಾಗಿ ರಾಜ್ಯಪಾಲರು ವಿಧಾನಸಭೆಯಲ್ಲಿ ಭಾಷಣ ಆರಂಭಿಸಿದರು. ಅವರು ಭಾಷಣ ಮಾಡುವಾಗ ಸಾಮಾಜಿಕ ನ್ಯಾಯ, ಸ್ವಾಭಿಮಾನ, ಸಮಗ್ರ ಅಭಿವೃದ್ಧಿ, ಸಮಾನತೆ, ಮಹಿಳಾ ಹಕ್ಕುಗಳು, ಧಾರ್ಮಿಕ ಸೌಹಾರ್ದತೆ, ವೈವಿಧ್ಯತೆ, ಪೆರಿಯಾರ್, ಅಂಬೇಡ್ಕರ್, ಕಾಮರಾಜ್, ಅಣ್ಣಾದುರೈ, ಎಂ.ಕರುಣಾನಿಧಿ, ದ್ರಾವಿಡ ಮಾದರಿ ಆಡಳಿತ, ತಮಿಳುನಾಡು ಶಾಂತಿ ಉದ್ಯಾನದಂತಹ ಪದಗಳನ್ನು ಹೇಳಲು ನಿರಾಕರಿಸಿದರು.

ಭಾಷಣ ಆರಂಭವಾಗುತ್ತಿದ್ದಂತೆ ಡಿಎಂಕೆ ಮಿತ್ರಪಕ್ಷಗಳು “ಗೊ ಬ್ಯಾಕ್ ಗವರ್ನರ್” ಎಂಬ ಘೋಷಣೆಗಳನ್ನು ಕೂಗಿದರು. ರಾಜ್ಯಪಾಲರ ಭಾಷಣದ ನಂತರ ಅದರ ತಮಿಳು ಆವೃತಿಯನ್ನು ಸಭಾಧ್ಯಕ್ಷರು ಎಂ.ಅಪ್ಪಾವು ವಾಚಿಸಿದರು. ಅಪ್ಪಾವು ಅದನ್ನು ಓದುತ್ತಿರುವಾಗ ಮದ್ಯ ಪ್ರವೇಶಿಸಿದ ಪ್ರತಿಪಕ್ಷಗಳು ‘ಸರ್ಕಾರ ಸಿದ್ದಪಡಿಸಿದ್ದ ಭಾಷಣವನ್ನು ರಾಜ್ಯಪಾಲರು ಸರಿಯಾಗಿ ಓದಲಿಲ್ಲ’ ಎಂದು ಆರೋಪ ಮಾಡಿದವು.

ಅಪ್ಪಾವು ಮಾತು ಮುಗಿಸಿದ ಬಳಿಕ ಎದ್ದು ನಿಂತ ಮುಖ್ಯಮಂತ್ರಿ ಸ್ಟಾಲಿನ್, ಸರ್ಕಾರ ಸಿದ್ದಪಡಿಸಿದ್ದ ಭಾಷಣವನ್ನು ರಾಜ್ಯಪಾಲರು ಸರಿಯಾಗಿ ಓದಲಿಲ್ಲ ಎಂದು ಅಪಾದಿಸಿದರು. ರಾಜ್ಯಪಾಲರು ಓದಿದ ಭಾಗಗಳನ್ನು ಟಿಪ್ಪಣಿಗಳಲ್ಲಿ ಸೇರಿಸಬಾರದು ಎಂಬ ಗೊತ್ತುವಳಿಯನ್ನು ಮುಖ್ಯಮಂತ್ರಿ ಸ್ಟಾಲಿನ್ ಮಂಡಿಸಿದರು. ಮುಖ್ಯಮಂತ್ರಿ ಗೊತ್ತುವಳಿಯನ್ನು ಸಭೆಯಲ್ಲಿ ಮಂಡಿಸುತ್ತಿರುವಾಗಲೇ ರಾಜ್ಯಪಾಲರು ವಿಧಾನಸಭೆಯಿಂದ ಹೊರನಡೆದರು. ರಾಜ್ಯಪಾಲರು ತೆರಳಿದನಂತರ ಮುಖ್ಯಮಂತ್ರಿಗಳು ಮಂಡಿಸಿದ ಗೊತ್ತುವಳಿಯನ್ನು ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.

ವಿಧಾನಸಭೆ ಕಲಾಪ ಮುಗಿದ ಬಳಿಕ ರಾಷ್ಟ್ರಗೀತೆ ಮೊಳಗಿದಾಗ ರಾಜ್ಯಪಾಲರು ಸದನದಲ್ಲಿ ಇರಲಿಲ್ಲ ಎಂಬುದು ಗಮನಾರ್ಹ. ಭಾಷಣವನ್ನು ಅನುಮೋದಿಸಿದ ನಂತರ ಅದನ್ನು ಬದಲಾಯಿಸಿ ಸದನದಲ್ಲಿ ಓದುವುದನ್ನು ಒಪ್ಪಲು ಸಾಧ್ಯವಿಲ್ಲ. ಇದು ಕಲಾಪದ ಸಂಸ್ಕೃತಿಯಲ್ಲ. ಐತಿಹಾಸಿಕವಾದ ದ್ರಾವಿಡ ಚಳುವಳಿಯನ್ನು ಕಟ್ಟಿ, ಬ್ರಾಹ್ಮಣ್ಯಕ್ಕೆ ಸೆಡ್ಡು ಹೊಡೆದು ‘ಸನಾತನ ರೋಗಕ್ಕೆ ದ್ರಾವಿಡವೇ ಮದ್ದು’ ಎಂಬ ನಂಬಿಕೆಯನ್ನು ದಕ್ಷಿಣ ಭಾರತೀಯರಿಗೆ ನೀಡಿರುವ ತಮಿಳುನಾಡು ವಿಧಾನ ಸಭೆಯಲ್ಲಿ ಸಾಮಾಜಿಕ ನ್ಯಾಯ, ಸ್ವಾಭಿಮಾನ, ಸಮಗ್ರ ಅಭಿವೃದ್ಧಿ, ಸಮಾನತೆ, ಮಹಿಳಾ ಹಕ್ಕುಗಳು, ಧಾರ್ಮಿಕ ಸೌಹಾರ್ದತೆ, ವೈವಿಧ್ಯತೆ, ಪೆರಿಯಾರ್, ಅಂಬೇಡ್ಕರ್, ಕಾಮರಾಜ್, ಅಣ್ಣಾದುರೈ, ಎಂ.ಕರುಣಾನಿಧಿ, ದ್ರಾವಿಡ ಮಾದರಿ ಆಡಳಿತ, ತಮಿಳುನಾಡು ಶಾಂತಿ ಉದ್ಯಾನದಂತಹ ಪದಗಳನ್ನು ಹೇಳಲು ರಾಜ್ಯಪಾಲರು ನಿರಾಕರಿಸಿದ್ದಾರೆ ಎಂದರೆ ಇವರು ಎಂತಹ ಉಗ್ರ ಸನಾತನವಾದಿಯಾಗಿರಬೇಕು ಎಂಬುದನ್ನು ನೀವೇ ಊಹಿಸಿಕೊಳ್ಳಿ.

‘ರಾಜ್ಯಪಾಲರು ಇಂತಹ ಹಲವಾರು ಸಮಸ್ಯೆಗಳನ್ನು ದಿನನಿತ್ಯ ಸೃಷ್ಟಿಸುತ್ತಿರುವುದು ನಿಜಕ್ಕೂ ನನಗೆ ನೋವು ತಂದಿದೆ’ ಎಂದು ವಿಧಾನಸಭೆ ಸಭಾಪತಿ ಅಪ್ಪಾವು ಹೇಳಿರುವುದು ಗಮನಾರ್ಹವಾದದ್ದು.

‘ರಾಜ್ಯಪಾಲ ಆರ್.ಎನ್.ರವಿ ಉಗ್ರ ಸನಾತನವಾದಿ, ದ್ರಾವಿಡ ವಿರೋಧಿ, ಬಿಜೆಪಿ ಏಜೆಂಟ್’ ಎಂದೆಲ್ಲ ತಮಿಳುನಾಡು ಜನರು ಹೇಳುವುದು ಸರಿಯಾಗಿಯೇ ಇದೆ ಎಂಬುದನ್ನು ಇಂದಿನ ನಡವಳಿಕೆ ನಮಗೆ ತೋರಿಸಿಕೊಟ್ಟಿದೆ.