ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ವೆಲ್‌ಫೇರ್ ಪಾರ್ಟಿ Archives » Dynamic Leader
October 17, 2024
Home Posts tagged ವೆಲ್‌ಫೇರ್ ಪಾರ್ಟಿ
ರಾಜಕೀಯ

ಬೆಂಗಳೂರು: ಕರ್ನಾಟಕದ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮಿತಿಯ ಬಹುನಿರೀಕ್ಷಿತ ಜಾತಿಗಣತಿ ವರದಿ ಅತಿ ಶೀಘ್ರದಲ್ಲಿ ಜಾರಿಗೆ ಬರಲಿ ಎಂದು ವಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಅಡ್ವಕೇಟ್ ತಾಹೇರ್ ಹುಸೇನ್ ರಾಜ್ಯ ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಅವರು, “ರಾಜ್ಯದಲ್ಲಿ ಕನಿಷ್ಟ ಪಕ್ಷ ಗ್ರಾಮ ಪಂಚಾಯತಿ ಸದಸ್ಯರೂ ಆಗದ ಸಮುದಾಯವಿದೆ. ಎಲ್ಲಾ ಸಮುದಾಯಗಳಿಗೆ ನ್ಯಾಯ ಬದ್ದವಾಗಿ ಆಡಳಿತ, ಶೈಕ್ಷಣಿಕ, ಸಾಮಾಜಿಕವಾಗಿ ಎಲ್ಲಾ ರಂಗಗಳಲ್ಲೂ ಸಮಾನ ಪ್ರಾತಿನಿಧ್ಯತೆ ಸಿಗಬೇಕಾಗಿದೆ. ಈ ನಿಟ್ಟಿನಲ್ಲಿ ಇಂತಹದ್ದೊಂದು ವರದಿ ಸಿದ್ದಪಡಿಸಿರುವುದು ಸ್ವಾಗತಾರ್ಹ. ಆದರೆ ಆ ವರದಿಗಳನ್ನು ಪೆಟ್ಟಿಗೆಯಲ್ಲಿಟ್ಟು ಕಾಲಹರಣ ಮಾಡುತ್ತಿರುವುದು ಆಕ್ಷೇಪಾರ್ಹ” ಎಂದು ಹೇಳಿದ್ದಾರೆ.

“ಈ ವರದಿಯ ಬಿಡುಗಡೆ ಕುರಿತು ಆತಂಕ ವ್ಯಕ್ತಪಡಿಸುವವರ ಸ್ವಾರ್ಥತೆ ಗಮನಿಸಬಹುದು. ಇದನ್ನು ಜನಹಿತಕ್ಕಿಂತ ರಾಜಕೀಯ ಲಾಭಕ್ಕಾಗಿ ಬಳಸಲು ಕೆಲವರು ಪ್ರಯತ್ನಿಸುತ್ತಿರುವುದು ಅಕ್ಷಮ್ಯ. ರಾಜ್ಯದ ಜನರ ಸಮಸ್ಯೆಗಳನ್ನು ನ್ಯಾಯಬದ್ದ ರೀತಿಯಲ್ಲಿ ನಿಭಾಯಿಸುವ ಮೂಲಕ ಜನಪ್ರತಿನಿಧಿಗಳು ತಮ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು” ಎಂದಿದ್ದಾರೆ.

“ಕಳೆದ ಬಾರಿಯ ಸಿದ್ದರಾಮಯ್ಯರ ಸರ್ಕಾರ ಈ ವರದಿ ತಯಾರಿಸಲು ಆಗಿನ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜುರವರನ್ನು ನೇಮಿಸಿತ್ತು. ನಂತರ ಅದರ ಹೊಣೆಗಾರಿಕೆ ಜಯಪ್ರಕಾಶ್ ಹೆಗ್ಡೆಯವರ ಪಾಲಿಗೆ ದೊರೆತಿತ್ತು. ಅವರು ಈಗಾಗಲೇ ಸರ್ಕಾರಕ್ಕೆ ವರದಿ ಸಮರ್ಪಸಿದ್ದಾರೆ. ಅದು 48 ಸಂಪುಟ ಹೊಂದಿದ್ದು 200 ಪುಟಗಳಷ್ಟು ವರದಿಯಿದೆ. 1351 ವಿವಿಧ ಜಾತಿಗಳ ಸಮೀಕ್ಷೆ ನಡೆಸಲಾಗಿದೆ” ಎಂದು ವಿವರಿದಿದ್ದಾರೆ.

“5.98 ಕೋಟಿ ಜನರನ್ನು ಸಮೀಕ್ಷೆಯಲ್ಲಿ ಸೇರಿಸಲಾಗಿದೆ. 3.98 ಕೋಟಿಗೂ ಹೆಚ್ಚು ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ) ವರ್ಗಗಳಿದ್ದು 1.87 ಕೋಟಿ ಲಿಂಗಾಯುತರು, ಒಕ್ಕಲಿಗರು, ಬ್ರಾಹ್ಮಣ ಮತ್ತಿತರ ಜಾತಿಗಳಿವೆ. ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಕೋಟಾ ಶಿಫಾರಸು ಮಾಡಿದೆ. ವೀರೇಶೈವ ಮತ್ತು ಲಿಂಗಾಯತರು ಒಂದೇ ಎಂದು ಸಮಿತಿ ಒತ್ತುಕೊಟ್ಟು ಹೇಳಿದೆ.

ಆರು ಕೋಟಿ ಜನರಲ್ಲಿ ಯಾವ ಯಾವ ಜಾತಿಯ ಜನರು ಎಷ್ಟೆಷ್ಟು ಮಂದಿಯಿದ್ದಾರೆಂದು ವರದಿಯಲ್ಲಿ ಹೇಳಲಾಗಿದ್ದು, ಈ ಎಲ್ಲಾ ಜಾತಿಯ ಜನರಿಗೆ ಅವರವರ ಅನುಪಾತಕ್ಕೆ ಅನುವಾಗಿ ಪ್ರಾತಿನಿಧ್ಯ ದೊರೆಯಬೇಕಾಗಿದೆ” ಎಂದು ಹೇಳಿರುವ ಅಡ್ವಕೇಟ್ ತಾಹೇರ್ ಹುಸೇನ್ ಅವರು, “ಕಾಂಗ್ರೆಸ್ ಪಕ್ಷ ಕಳೆದ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿಗಣತಿ ವರದಿ ಜಾರಿ ಮಾಡುತ್ತೇವೆಂದಾಗ ಸುಮ್ಮನಿದ್ದವರು ಇದೀಗ ತಗಾದೆ ತೆಗೆಯುತ್ತಿರುವುದು ಸರಿಯಲ್ಲ” ಎಂದು ವಿರೋಧಪಕ್ಷಗಳನ್ನು ಟೀಕಿಸಿದ್ದಾರೆ.

ರಾಜಕೀಯ

ಬೆಂಗಳೂರು: ಓರ್ವ ಜನಪ್ರತಿನಿಧಿಯಾಗಿ ಮಹಿಳೆಯರ ಬಗ್ಗೆ ಇಷ್ಟೊಂದು ಕೀಳುಮಟ್ಟದ ಮಾತುಗಳನ್ನಾಡಿರುವ ಶಾಸಕ ಮುನಿರತ್ನ ರವರ ನಡೆ ಅತ್ಯಂತ ಖಂಡನೀಯ ಮತ್ತು ಅವರ ಶಾಸಕತ್ವವನ್ನು ಈ ಕೂಡಲೇ ರದ್ದು ಪಡಿಸಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯ ಅಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಒತ್ತಾಸಿದ್ದಾರೆ.

ಮಾನ್ಯ ಸಭಾಪತಿಗಳು ಮುನಿರತ್ನ ಅವರ ಶಾಸಕತ್ವವನ್ನು ಈ ಕೂಡಲೇ ರದ್ದು ಪಡಿಸಬೇಕು ಎಂದು ಒತ್ತಾಯಿಸಿರುವ ಅವರು, “ಇದು ಕೇವಲ ಒಕ್ಕಲಿಗ ಸಮುದಾಯಕ್ಕೆ ಮಾತ್ರವಲ್ಲ ಇಡೀ ಮಹಿಳಾ ಸಮೂಹಕ್ಕೆ ಮಾಡಿದ ಅವಮಾನವಾಗಿದೆ. ಮಹಿಳೆಯರ ಬಗ್ಗೆ ಇವರಿಗೆ ಎಷ್ಟು ಗೌರವವಿದೆ ಎಂಬುದು ಇವರ ಈ ಕೃತ್ಯದಿಂದ ಬಹಿರಂಗಗೊಂಡಿದೆ. ಇಂತಹ ಶಾಸಕರಿಗೆ ನೈತಿಕತೆಯ ಪಾಟದ ಅಗತ್ಯವಿದೆ” ಎಂದು ಹೇಳಿದ್ದಾರೆ.

“ಚಿತ್ರರಂಗದಿಂದ ಬಂದು ರಾಜಕೀಯ ರಂಗದಲ್ಲಿ ಸಭ್ಯತೆ ಮೆರೆದವರು ಅದೆಷ್ಟೋ ಮಂದಿಯಿದ್ದಾರೆ. ಆದರೆ ಇವರು, ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚೆಲುವರಾಜು ರವರಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದೂ ಅಲ್ಲದೇ ಅವರ ಪತ್ನಿಯನ್ನು ನಿಂದಿಸುವ ಹಂತಕ್ಕೆ ತಲುಪಿದ್ದಾರೆಂದರೆ ಇವರಲ್ಲಿ ಅಹಂಕಾರ ಪೊಗರು ಅವೆಷ್ಟಿವೆ ಎಂಬುದನ್ನು ಅಂದಾಜಿಸಬಹುದು” ಎಂದು ಕಿಡಿಕಾರಿದ್ದಾರೆ.

“ಜನಪ್ರತಿನಿಧಿ ಎನಿಸಿಕೊಳ್ಳಲು ಇವರೆಷ್ಟು ಅರ್ಹರು? ಜನರು ಜನಪ್ರತಿನಿಧಿಗಳನ್ನು ಆರಿಸುವಾಗ ಅವರ ನೈತಿಕತೆಯನ್ನು ಕೂಡಾ ಮಾನದಂಡವನ್ನಾಗಿಸಬೇಕು. ಇಲ್ಲದಿದ್ದಲ್ಲಿ ಇಂತಹದ್ದು ಮರುಕಳಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಬೆಂಗಳೂರು

ಬೆಂಗಳೂರು: ಬ್ರಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ಸ್ಟಾರ್ ಹೋಟೆಲ್‌ಗಳಿಗೆ ಮಧ್ಯರಾತ್ರಿ ಒಂದು ಗಂಟೆಯವರೆಗೆ ತೆರೆಯಲು ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಖಂಡಿಸಿದ್ದಾರೆ.

“ಬಡ ಬೀದಿ ವ್ಯಾಪಾರಿಗಳಿಗೆ ರಾತ್ರಿ ಹತ್ತು ಗಂಟೆಯಾದರೆ ಸಾಕು, ದರ್ಪದಿಂದ ಕಿರುಕುಳ ನೀಡಿ ಬಂದ್ ಮಾಡಿಸುತ್ತಾರೆ. ಮದ್ಯ ವ್ಯಸನಿಗಳಿಂದಲೇ ಅಪರಾಧ ಹೆಚ್ಚಾಗುತ್ತಿದ್ದರೂ ಅದಕ್ಕೆ ಸಮಯ ವಿಸ್ತರಿಸಿ ಇನ್ನಷ್ಟು ಹೆಚ್ಚಿಸಲು ಅನುವು ಮಾಡಿಕೊಡುವ ಸರ್ಕಾರಕ್ಕೆ ಇತ್ತೀಚೆಗೆ ಕುಡುಕರ ಮೇಲೆ ಒಲವು ಹೆಚ್ಚಾದಂತೆ ಕಾಣುತ್ತಿದೆ. ಇತ್ತೀಚೆಗೆ ಸ್ಕಾಚ್ ಗಳ ಬೆಲೆಯಲ್ಲಿ ತೀವ್ರ ಇಳಿಕೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಕುಡಿತಕ್ಕೆ ಅವಕಾಶ ಕೊಟ್ಟು ರಾಜ್ಯದ ಶಾಂತಿ ನೆಮ್ಮದಿಯನ್ನು ಹಾಳು ಮಾಡಲು ಸರ್ಕಾರ ಹೊರಟಿದೆಯೇ ಎಂದು ಪ್ರಶ್ನಿಸಿದ ಅವರು,  ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಎಲ್ಲಾ ಅಪರಾಧ ಪ್ರಕ್ರಿಯೆಗಳು ಮದ್ಯ ವ್ಯಸನಿಗಳಿಂದಲೇ ಹೆಚ್ಚಾಗಿ ನಡೆಯುತ್ತದೆ ಎಂಬ ಸಾಮಾನ್ಯ ಪ್ರಜ್ಞೆಯಾದರೂ ಸರಕಾರಕ್ಕೆ ಇರಬೇಡವೇ?  ಇದನ್ನು ತಡೆಗಟ್ಟುವ ಬದಲು ಅದನ್ನು ಸುಗಮಗೊಳಿಸಲು ಹೊರಟಿರುವುದು ಖಂಡನೀಯ.

ಸರ್ಕಾರವು ಕೇವಲ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಮಾಡುವ ಇಂತಹ ನಡೆಯನ್ನು ನಮ್ಮ ವೆಲ್ಫೇರ್ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು” ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ರಾಜಕೀಯ

ಬೆಂಗಳೂರು: ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕಾರಣಕ್ಕೆ ಸಂಬಂಧಿಸಿದಂತೆ ಮೊದಲನೇ ಆರೋಪಿ ರಾಮಚಂದ್ರಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಮೂರನೇ ಆರೋಪಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಪ್ರಕರಣದಲ್ಲಿ, ‘ಮೇಲ್ಮನವಿ ಮಾಡಲು ಇದು ಅರ್ಹ ಪ್ರಕರಣವಲ್ಲ’ ಎಂದಿರುವ ಸರ್ಕಾರದ ನಡೆಗೆ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಅಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ಕಾನೂನಿನ ಕುಣಿಕೆಯಿಂದ ಕೋಮುವಾದಿಗಳಿಗೆ ಪಾರಾಗಲು ಸರ್ಕಾರ ಅವಕಾಶ ನೀಡುವುದಲ್ಲದೆ ಇನ್ನೇನು? ಸರ್ಕಾರ ಯಾರ ಹಿತವನ್ನು ಕಾಪಾಡುತ್ತಿದೆ ಎಂದು ಅರ್ಥೈಸಲು ಬೇರೆ ಕಾರಣ ಬೇಕಿಲ್ಲ. ಸರ್ಕಾರದ ಇಂತಹ ಧೋರಣೆಗಳಿಂದ ಕೋಮುವಾದಿ ಶಕ್ತಿಗಳಿಗೆ ಇನ್ನಷ್ಟು ಧ್ಯರ್ಯ ಬಂದಂತಾಗಿದೆ.

ಪುನೀತ್ ಕೆರೆಹಳ್ಳಿಯಂತಹ ಸಮಾಜ ಘಾತುಕರು ಕಾನೂನನ್ನು ಕೈಗೆತ್ತಿಕೊಳ್ಳಲು ಸರ್ಕಾರದ ಇಂತಹ ನಿರ್ಧಾರಗಳೇ ಕಾರಣ. ಸರ್ಕಾರ ಇಂತಹವರ ಮೇಲೆ ಯಾಕೆ ಮಮಕಾರ ತೋರಿಸುತ್ತಿದೆ. ಕಾನೂನಿಗೆ ಸವಾಲು ಹಾಕುತ್ತಿರುವ ಪುನೀತ್ ಕೆರೆಹಳ್ಳಿ ಮೆರೆಯಲು ಕಾಂಗ್ರೆಸ್ ಸರ್ಕಾರ ಯಾಕೆ ಅವಕಾಶ ಮಾಡಿಕೊಡುತ್ತಿದೆ” ಎಂದು ಅವರು ಸರಕಾರವನ್ನು ಪ್ರಶ್ನಿಸಿದ್ದಾರೆ.

ಅತನನ್ನು ನಿಯಂತ್ರಿಸಲು ಸರ್ಕಾರ ಆತಂಕ ಪಡುತ್ತಿದೆಯೇ? ಕಾಂಗ್ರೆಸ್ ಕೋಮುವಾದಿಗಳಿಗೆ ಹಿತಕಾರಿಯಾಗಿ ವರ್ತಿಸುತ್ತಿದೆ. ಕಳೆದ ಬಾರಿಯ ಬಿಜೆಪಿ ಸರ್ಕಾರದ ಕೋಮು ಧ್ರುವೀಕರಣದಿಂದ ಬೇಸತ್ತ ಜನರು ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿದರು. ಕಾಂಗ್ರೆಸ್ ಸರ್ಕಾರ ಬಂದರೆ ಕೋಮುವಾದಿಗಳ ಸದ್ದಡಗುವುದು ಎಂದು ಭಾವಿಸಿದ್ದರು. ಆದರೆ, ಸರ್ಕಾರದ ಈಗಿನ ನಡೆ ನೋಡಿದರೆ ಅದು ಕೇವಲ ಭ್ರಮೆ ಎಂದೆನಿಸುತ್ತದೆ.

ಯಾಕೆಂದರೆ, ಒಂದೆಡೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಸರ್ಕಾರಕ್ಕೆ ಕವಡೆ ಕಾಸಿನ ಬೆಲೆಯನ್ನೂ ನೀಡುತ್ತಿಲ್ಲ. ಆತ ಅನಾರೋಗ್ಯದ ನೆಪದಲ್ಲಿ ಆಸ್ಪತ್ರೆ ಸೇರಿ ಪಾರಾಗುತ್ತಾನೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಡುತ್ತಿರುವುದೇಕೆ? ಈ ಪ್ರಕರಣಗಳನ್ನು ಗಮನಿಸಿದರೆ ಸರ್ಕಾರ ಯಾರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ಅರ್ಥವಾಗುತ್ತದೆ. ತಮ್ಮನ್ನು ಚುನಾಯಿಸಿದ ಮತದಾರರಿಗೆ ದ್ರೋಹ ಬಗೆಯದೆ ಸರ್ಕಾರ ತನ್ನ ಕರ್ತವ್ಯ ನಿರ್ವಹಿಸಲು ಮುಂದಾಗಬೇಕೆಂದು ತಾಹೇರ್ ಹುಸೇನ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಕೋಮುವಾದ, ಭ್ರಷ್ಟಾಚಾರದಿಂದ ಬೇಸತ್ತ ಜನರು ಕಾಂಗ್ರೆಸ್ ಪಕ್ಷಕ್ಕೆ ಭಾರೀ ಬಹುಮತ ನೀಡಿ ಅಧಿಕಾರದಲ್ಲಿ ಕೂರಿಸಿದರು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜನರನ್ನು ವಂಚಿಸಿ ಭ್ರಷ್ಟಾಚಾರದಲ್ಲಿ ಭಾಗಿಯಾದ ವರದಿಗಳು ಬಹಿರಂಗವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದು ಕೋಮುವಾದದಷ್ಟೇ ಅಪಾಯಕಾರಿ ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯ ಅಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

ಅವರು ಮಾತನಾಡುತ್ತಾ, “ಕೋಮುವಾದದಂತೆ ಭೃಷ್ಟಾಚಾರವು ರಾಜ್ಯದ ಹಿತ ದೃಷ್ಟಿಯಿಂದ ಕೊನೆಗಾಣಬೇಕಾಗಿದೆ. ಮತ ನೀಡಿ ಚುನಾಯಿಸಿದ ಜನರ ಹಿತಕ್ಕಿಂತ ಪಕ್ಷದ ಹಿತಾಸಕ್ತಿ ಮತ್ತು ಸ್ವಾರ್ಥಹಿತಾಸಕ್ತಿಯೇ ಮುಖ್ಯ ಎಂಬುದು ಎದ್ದು ಕಾಣುತ್ತಿದೆ. ಇಲ್ಲಿ ಯಾರೂ ಸುಭಗರಲ್ಲ ಎಂದು ಮಾಧ್ಯಮಗಳ ವರದಿಗಳು ಬಹಿರಂಗ ಪಡಿಸುತ್ತದೆ. ಸಮುದಾಯದ ಅಭಿವೃದ್ಧಿ ನಿಗಮಗಳು ಸೇರಿದಂತೆ ಇನ್ನಿತರ ಮಂಡಳಿಗಳಲ್ಲಿ ಕಳೆದ ವರ್ಷಗಳಲ್ಲಿಯೇ ಸುಮಾರು ನಾಲ್ಕು ನೂರು ಕೋಟಿ ರೂಪಾಯಿಗೂ ಅಧಿಕವಾದ ಮೊತ್ತವನ್ನು ಅಕ್ರಮವಾಗಿ ಅನಧಿಕೃತ ಖಾತೆಗಳಿಗೆ ಜಮೆ ಮಾಡಿ, ಫಲಾನುಭವಿಗಳಿಗೆ ಸಲ್ಲಬೇಕಾದ ಹಣವನ್ನು ದುರುಪಯೋಗ ಪಡಿಸಲಾಗಿದೆ.

ಈ ಅವಧಿಯಲ್ಲಿ, ಸಿದ್ದರಾಮಯ್ಯರ ಅವಧಿಯೂ ಸೇರಿದಂತೆ ಜಗದೀಶ್ ಶೆಟ್ಟರ್, ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಕೂಡಾ ಮುಖ್ಯ ಮಂತ್ರಿಯಾಗಿದ್ದರು. ಈ ಬಗ್ಗೆಯೂ ತನಿಖೆ ನಡೆಯಬೇಕು” ಎಂದು ಹೇಳಿದ ತಾಹೇರ್ ಹುಸೇನ್, “ಈಗ ವಿಧಾನ ಸಭೆಯಲ್ಲಿ ಭೃಷ್ಟಾಚಾರ, ಅಕ್ರಮ ತಡೆಯುವ ಮಾತನಾಡುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಂದಾಯ ಸಚಿವರಾಗಿದ್ದಾಗ ಬೆಳೆ ನಷ್ಟ ಪರಿಹಾರದಲ್ಲೂ ಅಕ್ರಮ ನಡೆದಿದೆ. ಸಂಬಂಧವೇ ಇಲ್ಲದ ಅನ್ಯ ಖಾತೆದಾರರ ಖಾತೆಗೆ ಕೋಟ್ಯಾಂತರ ರೂಪಾಯಿ ಪಾವತಿಯಾದ ಬಗ್ಗೆ ಚರ್ಚೆ ನಡೆಯುತ್ತಿದೆ. ಪರಸ್ಪರ ಸೇಡಿನ ರಾಜಕೀಯ ಮಾಡಿ ಜನರನ್ನು ವಂಚಿಸಬೇಡಿ. ವಾಲ್ಮೀಕಿ ನಿಗಮದ ಹಗರಣ ಬೆಳಕಿಗೆ ಬಂದ ಮೇಲೆ ಬಿಜೆಪಿ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಪರಿಶೀಲನೆಗೆ ಸರ್ಕಾರ ಸಿದ್ಧವಾಗಿದೆ.

ಬಿಜೆಪಿ ವಿರುದ್ಧ ಆರೋಪ ಕೇಳಿ ಬಂದಾಗ ಕೇಂದ್ರದಿಂದ ಇಡಿ ಓಡೋಡಿ ರಾಜ್ಯಕ್ಕೆ ಬಂತು. ಈ ಎರಡೂ ನಡೆಯನ್ನು ಪರಸ್ಪರ ಟೀಕಿಸುತ್ತಿದ್ದಾರೆ. ಈಗ ಇಡಿ ಯ ಮೇಲೆ ಕೇಸನ್ನೂ ದಾಖಲಿಸಲಾಗಿದೆ. ಮುಖ್ಯಮಂತ್ರಿಗಳ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರುತ್ತಿರುವ ಆರೋಪಗಳು ಕೇಳಿ ಬರುತ್ತಿವೆ. ಇದು ಸಭ್ಯ ರಾಜಕಾರಣವಲ್ಲ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇದು ಉತ್ತಮ ಬೆಳವಣಿಗೆಯಲ್ಲ. ಭ್ರಷ್ಟಾಚಾರವನ್ನು ತೊಡೆದು ಹಾಕಲು, ಅಪರಾಧಿಗಳು ಕಾನೂನಿನಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡದೆ, ಪ್ರಾಮಾಣಿಕ ರೀತಿಯ ಪ್ರಯತ್ನ ಮಾಡಿ, ರಾಜ್ಯದ ಜನರ ಅಭಿವೃದ್ದಿಯತ್ತ ಗಮನಹರಿಸಲು ಆಡಳಿತ ಮತ್ತು ವಿರೋಧಪಕ್ಷ ಗಮನ ಹರಿಸಲಿ” ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯ

ಕಲಬುರಗಿ:  ಕಳೆದ ಒಂದೂವರೆ ವರ್ಷದಿಂದ ಮುಚ್ಚಲ್ಪಟ್ಟಿದ್ದ ಇಂದಿರಾ ಕ್ಯಾಂಟೀನನ್ನು ಮತ್ತೆ ತೆರೆದಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಬಡವರಿಗೆ, ವಿಧ್ಯಾರ್ಥಿಗಳಿಗೆ ಕೂಲಿ ಕಾರ್ಮಿಕರಿಗೆ ಆಸ್ಪತ್ರೆಯ ಬಡರೋಗಿಗಳಿಗೆ ಆಶಾ ಕಿರಣವಾಗಿದ್ದ ಇಂದಿರಾ ಕ್ಯಾಂಟೀನ್ ಗೆ ಬೀಗ ಜಡಿದಿದ್ದು ಸ್ಥಳೀಯರಲ್ಲಿ ಬೇಸರ ತಂದಿತ್ತು.

ಇದರ ವಿರುದ್ಧವಾಗಿ ವೆಲ್ಪೇರ್ ಪಾರ್ಟಿಯು ತೀವ್ರ ಸ್ವರೂಪದ ಹೋರಾಟ ಮಾಡಿದರ ಫಲವಾಗಿ, ಸರ್ಕಾರ ಮತ್ತು ಜಿಲ್ಲಾಡಳಿತವು ಇಂದಿರಾ ಕ್ಯಾಂಟೀನನ್ನು ಪುನರಾರಂಭಗೊಳಿಸಿದೆ. ಈ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕಲಬುರಗಿ ಜಿಲ್ಲಾ ಶಾಖೆ ಕ್ರತಜ್ಞತೆ ಸಲ್ಲಿಸುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯ

ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಗಳನ್ನು ಟೀಕಿಸುತ್ತಾ ಅಧಿಕಾರಕ್ಕೇರಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಿದ್ದು ಖಂಡನಾರ್ಹ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಕನ್ನಡ ನಾಡ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

ಅವರು ಮಾತನಾಡುತ್ತಾ, ಸಂಕಷ್ಟದಿಂದ ಕೂಡಿದ ಜನತೆಗೆ ಗ್ಯಾರಂಟಿ ಯೋಜನೆಗಳ ಮೂಲಕ ಸ್ವಲ್ಪ ನೆಮ್ಮದಿ ನೀಡಿದ್ದ ಸರ್ಕಾರ, ಲೋಕಸಭಾ ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದು ನಾಡಿನ ಜನತೆಗೆ ಬಗೆದ ದ್ರೊಹವಾಗಿದೆ.

ಆದ್ದರಿಂದ ರಾಜ್ಯ ಸರಕಾರ ತಕ್ಷಣ ಸ್ಪಂದಿಸಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡುವ ಮೂಲಕ ಜನತೆಯ ಹಿತವನ್ನು ಕಾಪಾಡಲು ಸರಕಾರ ಮುಂದಾಗಬೇಕೆಂದು ಅವರು ಸರಕಾರವನ್ನು ಆಗ್ರಹಿಸಿದ್ದಾರೆ.

ರಾಜಕೀಯ

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶದಿಂದ ದ್ವೇಷ ಮತ್ತು ಅಹಂಕಾರದ ರಾಜಕಾರಣಕ್ಕೆ ಮತದಾರ ಮೂಗುದಾರ ತೊಡಿಸಿದ್ದಾನೆ. ಬಣ್ಣದ ಮಾತುಗಳು ಹೆಚ್ಚು ಕಾಲ ನಡೆಯದು ಎಂಬುದು ಈ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಅಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ

ಅವರು ಮಾತನಾಡುತ್ತಾ, ‘ಸ್ವತಃ ಪ್ರಧಾನಿಗಳೇ ಧರ್ಮದ ಭಾವನೆ ಕೆರಳಿಸುವ ಪ್ರಯತ್ನ ಮಾಡಿಯೂ ರಾಜ್ಯದಲ್ಲಿ ಮೋದಿ ವರ್ಚಸ್ಸು ಪರಿಣಾಮ ಬೀರಲಿಲ್ಲ; ಕೈಯಲ್ಲಿರುವ ಸೀಟನ್ನು ಉಳಿಸಿಕೊಳ್ಳಲು ಅವರಿಂದಾಗಲಿಲ್ಲ. ರಾಜ್ಯ ಸರ್ಕಾರ ಕೂಡಾ ಹೆಚ್ಚಾಗಿ ಗ್ಯಾರಂಟಿಯನ್ನೇ ಅವಲಂಭಿಸಿತು. ನಿರೀಕ್ಷಿತ ಸ್ಥಾನವನ್ನು ಗಳಿಸದಿದ್ದರೂ ಒಂಬತ್ತು ಸ್ಥಾನ ಬಗಲಿಗೆ ಹಾಕಿದೆ. ಬಿಜೆಪಿಯ ಅಹಂಕಾರದ ಹುಚ್ಚು ನಾಗಾಲೋಟಕ್ಕೆ ಮತದಾರ ಲಗಾಮು ಹಾಕಿದ್ದಾನೆ.

ಕೇಂದ್ರದ ಆರ್ಥಿಕ ನೀತಿ, ರೈತರನ್ನು ಸತಾಯಿಸಿದ್ದು, ಕಾರ್ಪೊರೇಟ್ ದಿಗ್ಗಜರ ಹಿತಾಸಕ್ತಿಗಳನ್ನು ಕಾಪಾಡಿದ್ದು ಕೇಂದ್ರದ ಬಗ್ಗೆ ಜನರಿಗೆ ಅಸಹನೆ ಮೂಡಿಸಿದೆ. ರಾಮಮಂದಿರದ ವಿಚಾರ ಪ್ರಸ್ತಾಪಿಸಿ ಭಾವನಾತ್ಮಕವಾಗಿ ಮತವನ್ನಾಗಿಸುವ ಪ್ರಯತ್ನ ಫಲ ನೀಡಲಿಲ್ಲ. ರಾಜ್ಯ ಸರ್ಕಾರವನ್ನು ಉರುಳಿಸಲು ಇನ್ನು ಬಿಜೆಪಿ ಮುಂದಾಗದು. ತಮ್ಮವರನ್ನು ನಿಯಂತ್ರಿಸುವ ಕಾರ್ಯದಲ್ಲಿ ಲೀನವಾಗಬಹುದು. 

ರಾಜ್ಯದಲ್ಲಿ ಕಾಂಗ್ರೆಸ್ ಗೆ ನಿರೀಕ್ಷಿತಾ ಫಲಿತಾಂಶ ದೊರಕಲಿಲ್ಲ ಈ ಫಲಿತಾಂಶದಿಂದ ಕಾಂಗ್ರೆಸ್ ಕೂಡ ಪಾಠ ಕಲಿಯಬೇಕಾಗಿದೆ. ಕೇವಲ ಗ್ಯಾರಂಟಿಗಳಿಂದ ಗೆಲ್ಲಲಾಗದು. ದ್ವೇಷ ರಾಜಕಾರಣವನ್ನು ಮಟ್ಟ ಹಾಕಿ, ಭ್ರಷ್ಟಾಚಾರ ರಹಿತರಾಗಿ ಜನರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಮುಂದಾಗಬೇಕು ಎಂದು ಅವರು ಕರೆ ನೀಡಿದ್ದಾರೆ.

ರಾಜ್ಯ

ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಹಗರಣದಿಂದ ನಾಡಿನ ಜನತೆ ತಲೆ ಎತ್ತಿ ನಡೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ  ಅನೈತಿಕ ವ್ಯವಹಾರವನ್ನು ಹಿಡಿದು ಎರಡು ಪಕ್ಷಗಳು ಆರೋಪ ಪ್ರತ್ಯರೋಪ ಮಾಡುತ್ತಾ ಮಾತಿನ ಸಮರ ನಡೆಸುತ್ತಿರುವುದು ನಾಚಿಕೆಗೇಡಿನ ವಿಷಯ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಅಭಿಪ್ರಾಯ ಪಟ್ಟಿದ್ದಾರೆ.

ಹಣ, ಅಧಿಕಾರ ಬಳಸಿ ಅನೈತಿಕ ಸಂಬಂಧ ಬೆಳೆಸಿದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ರಾಜ್ಯದ ಮಾನ ಹರಾಜಾಗಿದೆ. ದೇಶದಾದ್ಯಂತ ಈ ಪ್ರಕರಣ ಸುದ್ದಿಯಾಗಿದೆ. ಅತ್ಯಾಚಾರ ಆರೋಪಿ ಪ್ರಜ್ವಲ್ ನನ್ನು ಹಿಡಿದು ಹೆಡೆಮುರಿಕಟ್ಟಿ ಬಂಧಿಸಿ ರಾಜ್ಯದ ಗೌರವ ಕಾಪಾಡುವ ಬದಲು, ಪೆನ್ ಡ್ರೈವ್ ಬಹಿರಂಗ ಪಡಿಸಿದವರು ಯಾರು ಎಂಬ ಚರ್ಚೆಯಾಗುತ್ತಿರುವುದು ಹಾಸ್ಯಾಸ್ಪದ. ರಾಜಕೀಯ ಪ್ರಭಾವ ಬಳಸಿ ದೇಶದಿಂದ ಆರೋಪಿಗಳು ಪರಾರಿಯಾಗುವುದು ಇಲ್ಲಿ ಸಾಮಾನ್ಯವಾಗಿದೆ.

ಇಂತಹ ಬೆಳವಣಿಗೆಗಳಿಗೆ ಅಂತ್ಯ ಹಾಡಬೇಕು. ಮೊದಲು ಆರೋಪಿ ಸ್ಥಾನದಲ್ಲಿರುವವರನ್ನು ಬಂಧಿಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸಲು ಪಕ್ಷಗಳು ಪ್ರಯತ್ನಿಸಬೇಕಾಗಿದೆ. ಎಷ್ಟೇ ಪ್ರತಿಷ್ಠಿತ ಕುಟುಂಬವಾದರೂ ಸರಿ, ಇಂತಹ ಅನಾಗರಿಕ ಹಗರಣದ ಆರೋಪಿಗಳನ್ನು ಯಾರೂ ಬೆಂಬಲಿಸಬಾರದು. ಕನ್ನಡ ನಾಡಿನ ಮಾನಕ್ಕೆ ದಕ್ಕೆ ತಂದಿರುವ ಪ್ರಕರಣದಲ್ಲಿ ರಾಜಕೀಯವನ್ನು ಬದಿಗಿಟ್ಟು, ಪ್ರಾಮಾಣಿಕವಾಗಿ… ನ್ಯಾಯಬದ್ದವಾಗಿ… ವರ್ತಿಸಿ, ಆರೋಪಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದಂತೆ ಕ್ರಮ ಕೈಗೊಂಡು, ಸಂತ್ರಸ್ತರಿಗೆ ನ್ಯಾಯ ಒದಗಿಸಿಕೊಡಬೇಕೆಂದು ತಾಹೇರ್ ಹುಸೇನ್ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ರಾಜಕೀಯ

ಬೆಂಗಳೂರು: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ವಿರುದ್ಧ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಅವಹೇಳನಕಾರಿ ಮಾತನಾಡಿದ ದೇಶದ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ನೀಡಲಾಗಿದೆ.  

ಚುನಾವಣಾಧಿಕಾರಿಯನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್, ವೆಲ್ಫೇರ್ ಪಾರ್ಟಿಯು ದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಮಾಡಲು ಪ್ರಯತ್ನಿಸುತ್ತಿದೆ ಎಂದು ಅಮಿತ್ ಶಾ ಸುಳ್ಳಾರೋಪ ಹೊರಿಸಿದ್ದಾರೆ; ಇದು ಪಕ್ಷದ ವರ್ಚಸ್ಸಿಗೆ ದಕ್ಕೆ ತಂದಿರುತ್ತದೆ.

ವೆಲ್ಫೇರ್ ಪಾರ್ಟಿ ಚುನಾವಣಾ ಆಯೋಗದಲ್ಲಿ ಅಧಿಕೃತವಾಗಿ ನೋಂದಾಯಿತ ಪಕ್ಷವಾಗಿದ್ದು ಕಳೆದ 13 ವರ್ಷಗಳಿಂದ ಸಾಂವಿಧಾನಿಕವಾಗಿ ಸೇವೆ ಸಲ್ಲಿಸುತ್ತಿದೆ. ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿ, ಯಾವುದೇ ಸಾಧನೆ ಮಾಡದೆ, ಸೋಲಿನ ಸುಳಿವಿನಿಂದ ಹತಾಶರಾಗಿರುವ ಅಮಿತ್ ಶಾ ಅವರು ಇಂತಹ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ.

ಜನರು ಇಂತಹದ್ದಕ್ಕೆ ಚುನಾವಣೆಯಲ್ಲಿ ಸೂಕ್ತ ರೀತಿಯಲ್ಲಿ ಉತ್ತರ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ. ತಂಡದಲ್ಲಿ ಪಕ್ಷದ ಉಪಾಧ್ಯಕ್ಷ  ಹಬಿಬುಲ್ಲಾಹ ಖಾನ್, ಪ್ರಧಾನ ಕಾರ್ಯದರ್ಶಿ ರಿಯಾಝ್ ಮುಖಂಡರಾದ ಪ್ರಭಾಕರ್ ರವರು ಪಾಲ್ಗೊಂಡಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.