ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಆಮ್ ಆದ್ಮಿ ಪಾರ್ಟಿ Archives » Page 2 of 3 » Dynamic Leader
October 21, 2024
Home Posts tagged ಆಮ್ ಆದ್ಮಿ ಪಾರ್ಟಿ (Page 2)
ದೇಶ

ಮನೀಶ್ ಸಿಸೋಡಿಯಾ ಸೇರಿದಂತೆ ನಾಯಕರ ಸತತ ಬಂಧನಗಳು ಮತ್ತು ಇದೀಗ ಕೇಜ್ರಿವಾಲ್ ಬಂಧನವು ಆಮ್ ಆದ್ಮಿ ಪಕ್ಷದ ಭವಿಷ್ಯವನ್ನು ಪ್ರಶ್ನಿಸುವಂತೆ ಮಾಡಿದೆ!

‘ಜೈಲಿನಲ್ಲಿದ್ದರೂ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ’ ಎಂದು ದೆಹಲಿ ಸಚಿವೆ ಆತಿಶಿ ಹೇಳಿದ್ದಾರೆ. ಆದರೆ, ಕಾನೂನು ಏನು ಹೇಳುತ್ತದೆ? ಪ್ರಜಾಪ್ರತಿನಿಧಿ ಕಾಯಿದೆ, 1951ರ ಪ್ರಕಾರ, ಜನರಿಂದ ಆಯ್ಕೆಯಾದ ನಾಯಕನನ್ನು ಕ್ರಿಮಿನಲ್ ಪ್ರಕರಣದಲ್ಲಿ ಬಂಧಿಸಿದರೆ, ಅವರು ತಪ್ಪಿತಸ್ಥರೆಂದು ಸಾಬೀತಾಗುವವರೆಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳುತ್ತದೆ.ಇದು ನೈತಿಕವಾಗಿ ಸರಿ ಎಂದರೆ, ಹೆಚ್ಚಿನ ತಜ್ಞರ ಉತ್ತರವು ಇಲ್ಲ ಎಂಬುದಾಗಿದೆ.

ಕೇಜ್ರಿವಾಲ್ ಅವರು ಅಧಿಕಾರದಲ್ಲಿ ಮುಂದುವರಿಯಲು ಬಯಸಿದರೂ ದೆಹಲಿ ಲೆಫ್ಟಿನೆಂಟ್ ಗವರ್ನರ್, ಸಾಂವಿಧಾನಿಕ ಯಂತ್ರೋಪಕರಣಗಳು ಸ್ಥಗಿತಗೊಂಡಿದೆ ಎಂದು ಹೇಳಿ, ಆರ್ಟಿಕಲ್ 239 ಎಬಿ ಮೂಲಕ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದು. ಆರ್ಟಿಕಲ್ 239 ಎಎ ಮೂಲಕ ಸರ್ಕಾರವನ್ನು ವಿಸರ್ಜಿಸಲು ಸಹ ಆದೇಶಿಸಬಹುದು.

ತಿಹಾರ್ ಜೈಲಿನ ಮಾಜಿ ಕಾನೂನು ಅಧಿಕಾರಿ ಸುನಿಲ್ ಗುಪ್ತಾ, ‘‘ಜೈಲಿನಿಂದ ಸರಕಾರ ನಡೆಸುವುದು ತುಂಬಾ ಕಷ್ಟದ ಕೆಲಸ. ಕುಟುಂಬದವರು, ಸಂಬಂಧಿಕರು ಅಥವಾ ಪಕ್ಷದ ಸದಸ್ಯರು ಯಾರೇ ಆಗಿರಲಿ, ವಾರಕ್ಕೆ ಎರಡು ಬಾರಿ ಮಾತ್ರ ಅವರನ್ನು ಭೇಟಿ ಮಾಡಬಹುದು ಎಂಬುದು ಜೈಲಿನ ನಿಯಮ. ಈ ನಿರ್ಬಂಧಗಳೊಂದಿಗೆ ಆಡಳಿತ ನಡೆಸುವುದು ಸುಲಭವಲ್ಲ,” ಎಂದು ಹೇಳಿದ್ದಾರೆ.

ಈ ಸಮಸ್ಯೆಯು ಎಎಪಿ-ಕಾಂಗ್ರೆಸ್ ಸಂಬಂಧವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದರೂ ಮದ್ಯದ ನೀತಿ ಹಗರಣವನ್ನು ಮೊದಲು ಬಯಲಿಗೆಳೆದದ್ದು ಕಾಂಗ್ರೆಸ್ ಎಂಬುದರಿಂದ ಈ ಸಂಬಂಧ ಹಳಸಲು ಕಾರಣವಾಗಬಹುದು. ಪ್ರಧಾನಿ ಮೋದಿಯವರನ್ನು ತೀವ್ರವಾಗಿ ಟೀಕಿಸಿದ ನಾಯಕರಲ್ಲಿ ಕೇಜ್ರಿವಾಲ್ ಕೂಡಾ ಒಬ್ಬರಾಗಿದ್ದರು.

ಅವರ ರಾಜಕೀಯ ದಳಪತಿ ಮನೀಶ್ ಸಿಸೋಡಿಯಾ ಸೇರಿದಂತೆ ನಾಯಕರ ಸತತ ಬಂಧನಗಳು ಮತ್ತು ಇದೀಗ ಕೇಜ್ರಿವಾಲ್ ಬಂಧನವು ಆಮ್ ಆದ್ಮಿ ಪಕ್ಷದ ಭವಿಷ್ಯವನ್ನು ಪ್ರಶ್ನಿಸುವಂತೆ ಮಾಡಿದೆ. ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರನ್, ಕೇಜ್ರಿವಾಲ್ ಬಂಧನದಿಂದ ‘ಭ್ರಷ್ಟಾಚಾರದಲ್ಲಿ ತೊಡಗಿರುವವರ ವಿರುದ್ಧ ಮೋದಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತಿದ್ದಾರೆ’ ಎಂಬ ಮಾತು ಲೋಕಸಭೆ ಚುನಾವಣೆ ವೇಳೆ ವ್ಯಾಪಕವಾಗಿ ಕೇಳಿಬರುವ ಸಾದ್ಯತೆಗಳಿವೆ.  

Uncategorized

ದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ. ದೆಹಲಿ ಸರ್ಕಾರದ ಮದ್ಯ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ಇಲಾಖೆ ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪ್ರಕರಣ ದಾಖಲಿಸಿದೆ. ಪ್ರಕರಣದಲ್ಲಿ ಹಾಜರಾಗುವಂತೆ ಹಲವು ಬಾರಿ ನೋಟಿಸ್ ನೀಡಿದರೂ ಕೇಜ್ರಿವಾಲ್ ಹಾಜರಾಗಲಿಲ್ಲ.

ಈ ಹಿನ್ನಲೆಯಲ್ಲಿ, ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರ ಮನೆ ಮೇಲೆ ಜಾರಿ ಇಲಾಖೆ ಇಂದು ದಾಳಿ ನಡೆಸುತ್ತಿದೆ. ಅದೇ ರೀತಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕರ ಮನೆ ಮೇಲೂ ದಾಳಿ ನಡೆಸಲಾಗುತ್ತಿದೆ.

ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್

ಇದಕ್ಕೂ ಮುನ್ನ ಇಂದು ಬೆಳಗ್ಗೆ 10 ಗಂಟೆಗೆ ಜಾರಿ ಇಲಾಖೆಯನ್ನು ಬಹಿರಂಗಪಡಿಸುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ಸಚಿವೆ ಅತಿಶಿ ಮರ್ಲೆನಾ ಹೇಳಿದ್ದ ಹಿನ್ನಲೆಯಲ್ಲಿ, ಇಂದು ಪಕ್ಷದ ಪದಾಧಿಕಾರಿಗಳ ಮನೆ ಮೇಲೆ ಜಾರಿ ಇಲಾಖೆ ದಾಳಿ ನಡೆಸಿರುವ ಘಟನೆ ಸಂಚಲನ ಮೂಡಿಸಿದೆ.

ಆಪರೇಷನ್ ಕಮಲ ನಡೆಸುವ ಹೊಣೆಯನ್ನು ಬಿಜೆಪಿ ತನಿಖಾ ಸಂಸ್ಥೆಗಳಿಗೆ ವಹಿಸಿದೆ ಎಂದು ತಟಸ್ಥವಾದ ಮಾಧ್ಯಮಗಳು ವಿಮರ್ಶಿಸುತ್ತಿದೆ. ಮತ್ತು ಕೆಲಸ ಮಾಡದ ಮಾಧ್ಯಮಗಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ದೇಶ ರಾಜಕೀಯ

ನವದೆಹಲಿ: ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ. ಈ ಹಿನ್ನಲೆಯಲ್ಲಿ, ‘ಕೇಜ್ರಿವಾಲ್ ಅವರನ್ನು ಬಂಧಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಅವರನ್ನು ಬಂಧಿಸಿದರೆ ದೆಹಲಿ ಸರಕಾರ ಜೈಲಿನಿಂದಲೇ ಕಾರ್ಯನಿರ್ವಹಿಸಲಿದೆ’ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಆಡಳಿತ ನಡೆಸುತ್ತಿದೆ. ಕಳೆದ 2021-2022ರ ಹಣಕಾಸು ವರ್ಷದಲ್ಲಿ, ಮದ್ಯ ಮಾರಾಟದ ನೀತಿಯನ್ನು ತಿದ್ದುಪಡಿ ಮಾಡಲಾಯಿತು. ಇದು ಖಾಸಗಿ ಕಂಪನಿಗಳು ಹಾಗೂ ಸಗಟು ವ್ಯಾಪಾರಿಗಳಿಗೆ ಅನುಕೂಲವಾಗಿದ್ದು, ಈ ಮೂಲಕ ಹಲವು ಕೋಟಿ ರೂ.ಗಳ ವಂಚನೆ ನಡೆದಿದೆ ಎಂಬ ದೂರುಗಳು ಕೇಳಿಬಂದವು.

ಇದಕ್ಕೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿದರು. ಇದರಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತು. ಈ ಪ್ರಕರಣದಲ್ಲಿ, ಅಬಕಾರಿ ಇಲಾಖೆ ಉಸ್ತುವಾರಿ ವಹಿಸಿಕೊಂಡಿದ್ದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಯಿತು. ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಲಾಗಿದೆ.

ಇತ್ತೀಚೆಗಷ್ಟೇ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ‘ಈ ವಿಷಯದಲ್ಲಿ ವಂಚನೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಹೀಗಾಗಿ ಜಾಮೀನು ನೀಡಲು ಸಾಧ್ಯವಿಲ್ಲ’ ಎಂದು ಆದೇಶ ಹೊರಡಿಸಿತು. ಈ ಹಿನ್ನಲೆಯಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಆಮ್ ಆದ್ಮಿ ಪಕ್ಷದ ಮುಖ್ಯ ಸಂಯೋಜಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶ್ನಾಲಯ ಸಮನ್ಸ್ ಜಾರಿಮಾಡಿದೆ.

ಇದರ ಪ್ರಕಾರ ಅರವಿಂದ್ ಕೇಜ್ರಿವಾಲ್ ಇಂದು ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಹಾಜರಾಗಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಅಧಿಕಾರಿಗಳು ಈಗಾಗಲೇ ವಿಚಾರಣೆ ನಡೆಸಿದ್ದಾರೆ. ಮೊದಲ ಬಾರಿಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿದೆ.

ಈ ಹಿನ್ನಲೆಯಲ್ಲಿ, ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು ತನಿಖೆಯ ನಂತರ ಅವರನ್ನು ಬಂಧಿಸುವ ಭೀತಿಯನ್ನು ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲ್ ಅವರನ್ನು ಬಂಧಿಸಿದರೆ ಸರ್ಕಾರವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಇದರ ಬಗ್ಗೆ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯ ಸಚಿವ ಸೌರಭ್ ಭಾರದ್ವಾಜ್ ನಿನ್ನೆ ಹೇಳಿಕೆ ನೀಡಿದ್ದಾರೆ:

‘ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದರೆ, ಸರ್ಕಾರವನ್ನು ಯಾರು ಮುನ್ನಡೆಸುತ್ತಾರೆ ಎಂಬುದನ್ನು ಪಕ್ಷದ ಹಿರಿಯ ನಾಯಕರು ಒಟ್ಟಾಗಿ ನಿರ್ಧರಿಸುತ್ತಾರೆ. ಪಕ್ಷದ ಎಲ್ಲಾ ನಾಯಕರು ಜೈಲಿನಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಹಾಗೆ ಎಲ್ಲರನ್ನೂ ಜೈಲಿಗೆ ಹಾಕಿದರೆ ಜೈಲಿನಿಂದಲೇ ಆಡಳಿತ ನಡೆಸುತ್ತೇವೆ.

ಈ ಸರ್ಕಾರ ನೀಡುತ್ತಿರುವ ಉಚಿತ ವಿದ್ಯುತ್, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯಗಳನ್ನು ನಿಲ್ಲಿಸಬೇಕೆಂದು ಬಿಜೆಪಿ ಬಯಸುತ್ತಿದೆ. ಆದರೆ, ಅದು ಸಾಧ್ಯವಿಲ್ಲ; ಜೈಲಿನಲ್ಲಿದ್ದರೂ ಜನರ ಸೇವೆ ಮಾಡುತ್ತೇವೆ’ ಎಂದು ಅವರು ಹೇಳಿದರು. ಪಕ್ಷದ ಸಂಸದ ರಾಘವ್ ಚಂದಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ತನಿಖೆಯ ನಂತರ ಬಂಧಿಸುವ ಭೀತಿಯನ್ನು ವ್ಯಕ್ತಪಡಿಸಿದ್ದಾರೆ.

ದೇಶ ರಾಜಕೀಯ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನೂ ಬಂಧಿಸಬಹುದು ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಹೇಳಿದ್ದಾರೆ.

ಹೊಸ ಮದ್ಯ ನೀತಿಯಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬಂಧನಕ್ಕೊಳಗಾಗಿ ಸುಮಾರು 8 ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿಯನ್ನು ಹಲವು ಬಾರಿ ತಿರಸ್ಕರಿಸಲಾಗಿದೆ. ಇಂದಿನ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳೂ ಜಾಮೀನು ನೀಡಲು ನಿರಾಕರಿಸಿದ್ದಾರೆ. 338 ಕೋಟಿ ಅಕ್ರಮ ಹಣ ವಿನಿಮಯವಾಗಿರುವುದಾಗಿ ಇಡಿ ಅಧಿಕಾರಿಗಳು ಸಾಕ್ಷ್ಯ ಸಹಿತ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಇದನ್ನು ಕೋರ್ಟ್ ಒಪ್ಪಿಕೊಂಡಿದೆ.

ಇದರ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಮನೋಜ್ ತಿವಾರಿ, “ಅಕ್ರಮ ಹಣ ವರ್ಗಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಹಲವು ನಾಯಕರು ಸಂಪರ್ಕ ಹೊಂದಿದ್ದಾರೆ. ಹೀಗಾಗಿ ಪ್ರಮುಖ ಮುಖಂಡರು ಏಕೆ ಕೇಜ್ರಿವಾಲ್ ಕೂಡ ಬಂಧನವಾಗಬಹುದು. ಅಷ್ಟೊಂದು ಆಧಾರಗಳು ಇದೆ ಎಂದು ತಿಳಿಯುತ್ತೇನೆ” ಎಂದು ಹೇಳಿದ್ದಾರೆ.

ಬೆಂಗಳೂರು

ಬೆಂಗಳೂರು: ಬೆಂಗಳೂರು ಬಂದ್ ವೇಳೆಯಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ವಹಿವಾಟುಗಳಿಗೆ ಯಾರಿಂದಲೂ ತೊಂದರೆಯಾಗಿಲ್ಲ. ಒಟ್ಟು 771 ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಬೆಂಗಳೂರು ನಗರಾದ್ಯಂತ ಈ ದಿನ (ಸೆ.26) ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ಕೆಲವು ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದವು. ಈ ಹಿನ್ನಲೆಯಲ್ಲಿ, ನಗರಾದ್ಯಂತ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಡಲಾಗಿತ್ತು. ಎಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆದಿರುವುದಿಲ್ಲ. ವಾಹನ ಸಂಚಾರ ಮತ್ತು ಸಾರ್ವಜನಿಕ ವಹಿವಾಟುಗಳಿಗೆ ಯಾರಿಂದಲೂ ದಕ್ಕೆ ಆಗದಂತೆ ನೋಡಿಕೊಳ್ಳಲಾಗಿತ್ತು.

ಇದನ್ನೂ ಓದಿ: ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು! – ಸಿದ್ದರಾಮಯ್ಯ

ಬಂದ್ ಅಂಗವಾಗಿ ಕೆಲವು ಸಂಘಟನೆಗಳು ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಮತ್ತು ಮೆರೆವಣಿಗೆ ಮಾಡಲು ಯತ್ನಿಸಿದ್ದು, ಅವರನ್ನು ಪೊಲೀಸರು ಮುಂಜಾಗ್ರತ ಕ್ರಮವಾಗಿ ಬಂಧಿಸಿ, ನಂತರ ಬಿಡುಗಡೆ ಮಾಡಿರುತ್ತಾರೆ. ಈ ರೀತಿ ಒಟ್ಟು 771 ಪ್ರತಿಭಟನಾಕಾರರನ್ನು ಬಂಧಿಸಲಾಗಿರುತ್ತದೆ. ಆಟೋರಿಕ್ಷ ಸಂಚಾರ ಸೇರಿದಂತೆ ಸಾರಿಗೆ ವ್ಯವಸ್ಥೆ ಸಾಮಾನ್ಯವಾಗಿದ್ದು, ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್‌ಗಳು ಸಾಮಾನ್ಯವಾಗಿ ತೆರೆದಿದ್ದವು.

ಇದನ್ನೂ ಓದಿ: ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನ: ಹೆಚ್.ಡಿ.ಕುಮಾರಸ್ವಾಮಿ

ಇದೇ ಅಂಗವಾಗಿ ಸುಮಾರು ಒಂದು ಸಾವಿರ ಜನರು ಪೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡು, ಈ ಸಮಯದಲ್ಲಿ ವಿವಿಧ ಸಂಘಟನೆ ಮುಖಂಡರು ಸರ್ಕಾರದ ದೋರೆಣೆಯ ವಿರುದ್ಧ ಪ್ರತಿಭಟಿಸಿರುತ್ತಾರೆ. ನಂತರ ರಾಜ್ಯದ ಮಂತ್ರಿಗಳಾದ ಆರ್.ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿ ತೆರಳಿರುತ್ತಾರೆ. ಒಟ್ಟಾರೆ, ಜನ-ಸಾಮಾನ್ಯರಿಗೆ ಯಾವುದೇ ತೊಂದರೆ ಆಗದೇ ಬಂದ್ ಶಾಂತಿಯುತವಾಗಿ ಮುಕ್ತಾಯಗೊಂಡಿರುತ್ತದೆ” ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ ನಾನು ನಿಮಗೆ ನೀಡಿದ ಉಡುಗರೆ: ಪ್ರಧಾನಿ ಮೋದಿ

ರಾಜಕೀಯ

ನವದೆಹಲಿ: ವಿರೋಧಪಕ್ಷಗಳ ‘ಇಂಡಿಯಾ’ ಮೈತ್ರಿಯ ಹೆಸರನ್ನು ‘ಭಾರತ’ ಎಂದು ಬದಲಾಯಿಸಿದರೆ ಏನು ಮಾಡುತ್ತೀರಿ? ಎಂದು ಬಿಜೆಪಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಶ್ನೆ ಕೇಳಿದ್ದಾರೆ.

ನವದೆಹಲಿಯಲ್ಲಿ 400 ಎಲೆಕ್ಟ್ರಿಕ್ ಬಸ್‌ಗಳನ್ನು ಪರಿಚಯಿಸಿ ನಂತರ ಮಾತನಾಡಿದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, “2023ರ ಅಂತ್ಯದ ವೇಳೆಗೆ ದೆಹಲಿಯಲ್ಲಿ 1900 ಎಲೆಕ್ಟ್ರಿಕ್ ಬಸ್‌ಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದ್ದಾರೆ. ಇಂದು ಬಿಡುಗಡೆಯಾದ ಎಲೆಕ್ಟ್ರಿಕ್ ಬಸ್‌ಗಳಲ್ಲಿ ಅಂಗವಿಕಲರಿಗಾಗಿ ಇಳಿಜಾರು (Ramp) ಗಳನ್ನು ಅಳವಡಿಸಲಾಗಿದೆ. ಅಲ್ಲದೆ ಪ್ರತಿ ಬಸ್ಸಿನಲ್ಲಿ 3 ಸಿಸಿಟಿವಿಗಳನ್ನು ಅಳವಡಿಸಲಾಗಿದೆ.

ನಮ್ಮ ದೇಶದಲ್ಲಿ 140 ಕೋಟಿ ಜನರಿದ್ದಾರೆ. ‘ಇಂಡಿಯಾ’ ಮೈತ್ರಿಯ ಹೆಸರನ್ನು ‘ಭಾರತ’ ಎಂದು ಬದಲಾಯಿಸಿದರೆ ಬಿಜೆಪಿಯವರಿಂದ ಏನು ಮಾಡಲು ಸಾಧ್ಯ? ಇಂಡಿಯಾ ಹೆಸರನ್ನು ‘ಭಾರತ್’ ಎಂದು ಬದಲಾಯಿಸುವ ಮಸೂದೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಮಂಡಿಸಲು ಹೊರಟಿದೆ ಎಂದು ಹೇಳುತ್ತಿರುವಾಗಲೇ ಮುಖ್ಯಮಂತ್ರಿ ಕೇಜ್ರಿವಾಲ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಮಣಿಪುರ: ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ ವಿಶ್ವಸಂಸ್ಥೆ; ತಿರಸ್ಕರಿಸಿದ ಭಾರತ!

ರಾಜಕೀಯ

ನವದೆಹಲಿ: ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ; ಫೆಡರಲಿಸಂ ಅಂತ್ಯಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ನಾವು ನಿರಂತರವಾಗಿ ವಿರೋಧಿಸುತ್ತಿದ್ದೇವೆ. ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದ ದೆಹಲಿ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ವಿರೋಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಪವನ್ ಖೇರಾ ಹೇಳಿದ್ದಾರೆ. ಈ ಸುಗ್ರೀವಾಜ್ಞೆಯನ್ನು ವಿರೋಧಿಸಿದರೆ ಮಾತ್ರ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುತ್ತೇವೆ ಎಂದು ಆಮ್ ಆದ್ಮಿ ಪಕ್ಷ ಹೇಳಿರುವ ಬೆನ್ನಲ್ಲೇ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದೆ.

ದೆಹಲಿಯಲ್ಲಿ ಯಾರಿಗೆ ಅಧಿಕಾರ ಎಂಬ ಬಗ್ಗೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದಿತ್ತು. ಈ ಸುಗ್ರೀವಾಜ್ಞೆಗೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ವಿರುದ್ಧ ಕೇಜ್ರಿವಾಲ್ ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಿಗೆ ತೆರಳಿ ಬೆಂಬಲ ಸಂಗ್ರಹಿಸಿದರು. ಕಾಂಗ್ರೆಸ್ ಮಾತ್ರ ಮೌನವಾಗಿತ್ತು.

ಇದಾದ ಬಳಿಕ ಈ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವನ್ನು ಕೂಡಲೇ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲೂ ಕಾಂಗ್ರೆಸ್ ತನ್ನ ನಿಲುವು ಪ್ರಕಟಿಸದಿರುವುದನ್ನು ವಿರೋಧಿಸಿ, ಕೇಜ್ರಿವಾಲ್ ಪತ್ರಿಕಾಗೋಷ್ಠಿಯನ್ನು ಬಹಿಷ್ಕರಿಸಿದ್ದರು.

ಸುಗ್ರೀವಾಜ್ಞೆಯನ್ನು ಬೆಂಬಲಿಸಲು ಕಾಂಗ್ರೆಸ್ ನಿರಾಕರಿಸಿದರೆ, ಮುಂದಿನ ದಿನಗಳಲ್ಲಿ ಪ್ರತಿಪಕ್ಷಗಳ ಸಭೆಗಳನ್ನು ಬಹಿಷ್ಕರಿಸುವುದಾಗಿ ಕೇಜ್ರಿವಾಲ್ ಘೋಷಿಸಿದ್ದರು. ಈ ಹಿನ್ನಲೆಯಲ್ಲಿ ಈ ತುರ್ತು ಸುಗ್ರೀವಾಜ್ಞೆಗೆ ವಿರುದ್ಧ; ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ಮುಂದಾಗಿದೆ.

ಈ ನಿಟ್ಟಿನಲ್ಲಿ ದೆಹಲಿ ಸರ್ಕಾರದ ಆಡಳಿತಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ವಿರೋಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಪವನ್ ಖೇರಾ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷ ಭಾಗವಹಿಸಲಿದೆ ಎಂದು ನಾನು ಭಾವಿಸುತ್ತೇನೆ. ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ನಮ್ಮ ನಿಲುವು ಸ್ಪಷ್ಟವಾಗಿದೆ. ಆ ಸುಗ್ರೀವಾಜ್ಞೆಯನ್ನು ನಾವು ಬೆಂಬಲಿಸುವುದಿಲ್ಲ. ಎಂದು ಹೇಳಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

2014ರಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿತ್ತು. ಅಂದಿನಿಂದ ಕೇಂದ್ರ ಸರ್ಕಾರವು ದೆಹಲಿ ಸರ್ಕಾರದ ನಿರ್ಧಾರಗಳಲ್ಲಿ ನಿರಂತರವಾಗಿ ಹಸ್ತಕ್ಷೇಪ ಮಾಡುತ್ತಾ ಬರುತ್ತಿದೆ. ಇದರಿಂದಾಗಿ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ನಡುವೆ ಸಂಘರ್ಷ ಏರ್ಪಟ್ಟಿದೆ. ಮತ್ತು 2019ರಲ್ಲಿ ನ್ಯಾಯಾಧೀಶ ಅಶೋಕ್ ಭೂಷಣ್ ಅವರ ಪೀಠವು “ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ” ಎಂದು ತೀರ್ಪು ನೀಡಿತ್ತು. ತರುವಾಯ, ಕೇಂದ್ರ ಸರ್ಕಾರದ ಅಧಿಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಲಾಯಿತು.

ಈ ಪ್ರಕರಣದಲ್ಲಿ ಸಾಂವಿಧಾನಿಕ ಪೀಠದ 5 ನ್ಯಾಯಮೂರ್ತಿಗಳು ಇತ್ತೀಚೆಗೆ ಸರ್ವಾನುಮತದ ತೀರ್ಪು ನೀಡಿದರು. ನ್ಯಾಯಮೂರ್ತಿಗಳ ತೀರ್ಪಿನಲ್ಲಿ, ‘‘2019ರಲ್ಲಿ ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರ ಪೀಠ ನೀಡಿದ ತೀರ್ಪಿಗೆ ಒಮ್ಮತವಿಲ್ಲ; ಜನರ ಹಿತವನ್ನು ಈಡೇರಿಸಲಿಕ್ಕಾಗಿಯೇ ಕಾನೂನುಗಳನ್ನು ಅಂಗೀಕರಿಸುವ ಅಧಿಕಾರವನ್ನು ಶಾಸಕಾಂಗ ಸಭೆಗಳಿಗೆ ನೀಡಲಾಗಿದೆ.

ಇದು ಕೇಂದ್ರಾಡಳಿತ ಪ್ರದೇಶವಾಗಿದ್ದರೂ, ದೆಹಲಿ ಸರ್ಕಾರ ಒಕ್ಕೂಟದ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತದೆ. ಪ್ರಜಾಪ್ರಭುತ್ವ ಮತ್ತು ಒಕ್ಕೂಟದ ನೀತಿ ಎಂದರೆ ನಮ್ಮ ರಾಜಕೀಯ ಶಾಸನದ ಮೂಲಭೂತ ರಚನೆಯ ಅಂಗ. ಕೆಲವು ನಿರ್ದಿಷ್ಟ ಅಂಶಗಳಲ್ಲಿ ಮಾತ್ರ ಕೇಂದ್ರ ಸರ್ಕಾರವು ಮಧ್ಯ ಪ್ರವೇಶಿಸುವ ಅಧಿಕಾರವನ್ನು ಹೊಂದಿರುತ್ತದೆ. ಅಧಿಕಾರಿಗಳು, ಸಚಿವರ ಆದೇಶವನ್ನು ಕಾರ್ಯಗತಗೊಳಿಸುವುದನ್ನು ತಡೆದರೆ, ಜಂಟಿ ಹೊಣೆಗಾರಿಕೆಗೆ ತೊಂದರೆಯಾಗುತ್ತದೆ.

ವಿಧಾನಸಭೆಯ ಅಧಿಕಾರಕ್ಕೆ ಹೊರಗೆ ಇರುವ ಕೆಲವು ಅಂಶಗಳಲ್ಲಿ ಮಾತ್ರ ಲೆಫ್ಟಿನೆಂಟ್ ಗವರ್ನರ್ ಮಧ್ಯೆ ಪ್ರವೇಶಿಸಬಹುದು. ಜನರ ಆಯ್ಕೆಯನ್ನು ಪ್ರತಿನಿಧಿಸುವ ಅಧಿಕಾರವನ್ನು ಶಾಸನಸಭೆಗೆ ನೀಡಲಾಗಿದೆ. ಪ್ರಜಾಪ್ರಭುತ್ವ ಸರ್ಕಾರದಲ್ಲಿ ಆಡಳಿತದ ಅಧಿಕಾರ, ಜನರಿಂದ ಆಯ್ಕೆಯಾದವರೊಂದಿಗೆ ಮಾತ್ರ ಇರಬೇಕು. ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್‌ಗಿಂತ ಮುಖ್ಯಮಂತ್ರಿಗೆ ಹೆಚ್ಚಿನ ಅಧಿಕಾರವಿದೆ” ಎಂದು ಹೇಳಿದೆ.

ಆದರೆ, ಸುಪ್ರೀಂ ಕೋರ್ಟ್‌ನ ಈ ಐತಿಹಾಸಿಕವಾದ ತೀರ್ಪನ್ನು ರದ್ದುಗೊಳಿಸುವ ಸಲುವಾಗಿ, ಕೇಂದ್ರ ಸರ್ಕಾರ ದೆಹಲಿಯ ಅಧಿಕಾರವನ್ನು ಲೆಫ್ಟಿನೆಂಟ್ ಗವರ್ನರ್‌ಗೆ ನೀಡುವ ತುರ್ತು ಕಾನೂನನ್ನು ರಾತ್ರೋರಾತ್ರಿ ಜಾರಿಗೆ ತಂದಿದೆ. ಜನರಿಂದ ಆಯ್ಕೆಯಾದ ಶಾಸಕಾಂಗಕ್ಕೆ ಅಧಿಕಾರ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನಲೆಯಲ್ಲಿ, ‘ಯಾವುದೇ ಶಾಸಕಾಂಗ ಅಥವಾ ನ್ಯಾಯಾಲಯವು ಆದೇಶವನ್ನು ಬದಲಾಯಿಸಲು ಸಾಧ್ಯವಿಲ್ಲ’ ಎಂಬ ಷರತ್ತಿನೊಂದಿಗೆ ಕೇಂದ್ರ ಸರ್ಕಾರ ತುರ್ತು ಕಾನೂನನ್ನು ಜಾರಿಗೆ ತಂದಿದೆ.

ಮುಂದಿನ 6 ತಿಂಗಳೊಳಗೆ ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದರೆ ಮಾತ್ರ ಈ ಸುಗ್ರೀವಾಜ್ಞೆ ಕಾನೂನಾಗಲಿದೆ. ಈ ಹಿನ್ನಲೆಯಲ್ಲಿ ದೆಹಲಿಯ ಆಮ್ ಆದ್ಮಿ ಸರ್ಕಾರವು ಈ ಕಾನೂನನ್ನು ಜಾರಿಗೆ ತರದಂತೆ ತಡೆಯಲು ಪ್ರಯತ್ನಿಸುತ್ತಿದೆ. ಲೋಕಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಬಹುಮತವನ್ನು ಹೊಂದಿವೆ.

ಇದರಿಂದಾಗಿ ವಿರೋಧ ಪಕ್ಷಗಳ ಬೆಂಬಲ ಪಡೆಯಲು ದೆಹಲಿ ಸರ್ಕಾರ ತೀವೃತೆಯನ್ನು ತೋರುತ್ತಿದೆ. ಇದಕ್ಕಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಪಕ್ಷ ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರುತ್ತಿದ್ದಾರೆ. ಅವರು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಇದೀಗ ಎನ್‌ಸಿಪಿ ನಾಯಕ ಶರದ್ ಪವಾರ್ ಅವರನ್ನು ಭೇಟಿಮಾಡಿ ಬೆಂಬಲ ಕೋರಿದ್ದಾರೆ. ಬಳಿಕ ಮಾತನಾಡಿದ ಅರವಿಂದ್ ಕೇಜ್ರಿವಾಲ್, “ರಾಜ್ಯಸಭೆಯಲ್ಲಿ ತುರ್ತು ಕಾಯ್ದೆಯನ್ನು ಸೋಲಿಸಿದರೆ, ಅದುವೇ 2024ರ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಪಂದ್ಯ ಆಗಲಿದೆ. 2024ರಲ್ಲಿ ಮೋದಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬ ಸಂದೇಶ ಇದಾಗಿರುತ್ತದೆ” ಎಂದು ಹೇಳಿದರು.

   

ರಾಜಕೀಯ

ಕೋಲ್ಕತ್ತಾ: ದೆಹಲಿ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತಂದಿರುವ ತುರ್ತು ಕಾಯ್ದೆಯನ್ನು ವಿರೋಧಿಸುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಬಂಗಾಳ ಮುಖ್ಯಮಂತ್ರಿ ಮಮತಾ ಬೆಂಬಲ ನೀಡಿದ್ದಾರೆ.

ದೆಹಲಿ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, “ದೆಹಲಿ ಸರ್ಕಾರವು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿತು. ಇದರ ವಿರುದ್ಧ ಕೇಂದ್ರ ಸರ್ಕಾರ ಹೊಸ ತುರ್ತು ಕಾಯ್ದೆಯನ್ನು ಜಾರಿಗೆ ತಂದಿದೆ. ಇದನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ಸಂಸದರು ವಿರೋಧಿಸಿದ್ದಾರೆ. ಈ ಹಿನ್ನಲೆಯಲ್ಲಿ ದೆಹಲಿ ಸರ್ಕಾರಕ್ಕೆ ಬೆಂಬಲವನ್ನು ಪಡೆಯಲು ಬಿಜೆಪಿ ಆಡಳಿತವಿಲ್ಲದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಕೇಜ್ರಿವಾಲ್ ಮುಂದಾಗಿದ್ದಾರೆ.

ಈ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪಕ್ಷದ ಮುಖಂಡರು ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದರು. ಆಗ ಇಬ್ಬರೂ ಕೇಂದ್ರ ಸರ್ಕಾರದ ತುರ್ತು ಕಾಯ್ದೆ ಬಗ್ಗೆ ಚರ್ಚೆ ನಡೆಸಿದರು.

ನಂತರ, ಮಮತಾ ಬ್ಯಾನರ್ಜಿ ಅವರು ಸುದ್ದಿಗಾರರಿಗೆ ಸಂದರ್ಶನ ನೀಡಿದರು:
“ದೆಹಲಿ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರದ ತುರ್ತು ಮಸೂದೆಯನ್ನು ತೃಣಮೂಲ ಕಾಂಗ್ರೆಸ್ ವಿರೋಧಿಸಲಿದೆ. ಈ ವಿಚಾರದಲ್ಲಿ ವಿರೋಧ ಪಕ್ಷಗಳು ಒಂದಾಗುವಂತೆ ಒತ್ತಾಯಿಸುತ್ತೇವೆ. ಕೇಂದ್ರ ಸರ್ಕಾರವು ಸಂವಿಧಾನವನ್ನು ಬದಲಾಯಿಸುತ್ತದೆಯೋ ಅಥವಾ ದೇಶದ ಹೆಸರನ್ನು ಬದಲಾಯಿಸುತ್ತದೆಯೋ ಎಂಬ ಭಯ ನಮಗಿದೆ” ಎಂದರು.

ದೇಶ

2024ರ ಸಂಸತ್ತಿನ ಚುನಾವಣೆಯಲ್ಲಿ ಜನ ಬಡ್ಡಿ ಸಮೇತ ಅಸಲನ್ನೂ ಮರುಪಾವತಿಸಲಿದ್ದಾರೆ ಎಂದು ಮನೀಶ್ ಸಿಸೋಡಿಯಾ ಬಂಧನವನ್ನು ಡಿಎಂಕೆ ಖಂಡಿಸಿದೆ.

ಚೆನ್ನೈ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ, ಡಿಎಂಕೆ ಖಜಾಂಚಿ ಟಿ.ಆರ್.ಬಾಲು ಖಂಡನೆ.

ಈ ಕುರಿತು ಡಿಎಂಕೆ ಖಜಾಂಚಿ ಹಾಗೂ ಡಿಎಂಕೆ ಪಕ್ಷದ ಸಂಸದೀಯ ಸಮಿತಿ ಅಧ್ಯಕ್ಷ ಟಿ.ಆರ್.ಬಾಲು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, “ಆಮ್ ಆದ್ಮಿ ನೇತೃತ್ವದ ದೆಹಲಿ ಸರ್ಕಾರದ ಹೊಸ ಮದ್ಯ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿರುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ. ವಿಚಾರಣೆಗೆ ಹಾಜರಾಗುವ ಮೊದಲು ‘ಸಿಬಿಐ ತನ್ನನ್ನು ಬಂದಿಸಲಿದೆ’ ಎಂದು ಮನೀಶ್ ಸಿಸೋಡಿಯಾ ಹೇಳಿದಂತೆಯೇ ಕೇಂದ್ರ ಸರ್ಕಾರದ ಸಿಬಿಐ ಇದೀಗ ಅವರನ್ನು ಬಂಧಿಸಿ 5 ದಿನಗಳ ಕಸ್ಟಡಿ ಪಡೆದಿದೆ.

ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳನ್ನು ವಿರೋಧ ಪಕ್ಷಗಳ ಮೇಲೆ ಬಳಸಿಕೊಳ್ಳುವ ಬಿಜೆಪಿಯ ಪ್ರವೃತ್ತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರ ಸರಕಾರದ ಅಧೀನದಲ್ಲಿರುವ ಎಲ್ಲಾ ಸಂಸ್ಥೆಗಳನ್ನು ತನ್ನ ಮಿತ್ರಪಕ್ಷಗಳೆಂದು ಬಿಂಬಿಸುವ ಮೂಲಕ ಪ್ರತಿಪಕ್ಷ ನಾಯಕರ ಮೇಲೆ ದಬ್ಬಾಳಿಕೆ ನಡೆಸುವ ಪ್ರವೃತ್ತಿ ಕಳವಳಕಾರಿಯಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಮಾತ್ರವಲ್ಲ, ಘೋರ ಕಾನೂನು ಭಾಹಿರವೂ ಆಗಿದೆ. ಈ ಆಡಳಿತದಲ್ಲಿ ಗುಪ್ತಚರ ಸಂಸ್ಥೆಗಳ ಸ್ವಾತಂತ್ರ್ಯವು ಗಾಳಿಯಲ್ಲಿ ಹಾರಿದಂತೆ ಬೇರೆ ಯಾವ ಆಡಳಿತದಲ್ಲೂ ಹೀಗಾಗಲಿಲ್ಲ. ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ಒಬ್ಬೊಬ್ಬರನ್ನಾಗಿ ಬಂಧಿಸುತ್ತಿರುವುದು ಇದರಿಂದ ಸಾಬೀತಾಗುತ್ತಿದೆ.

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಮ್ಮ ನೀತಿಗಳಿಗೆ ವಿರುದ್ಧವಾಗಿ ಯೋಚಿಸುವ ಸಾಹಿತಿಗಳು, ಪತ್ರಕರ್ತರು, ಚಿಂತಕರು, ಕಲಾವಿದರಿಗೆ ಬೆದರಿಕೆ ಹಾಕುವ ಪ್ರವೃತ್ತಿ ಆರಂಭವಾಗಿದೆ. ಬಿಜೆಪಿಯ ಇಂತಹ ಅಧಿಕಾರ ಬೆದರಿಕೆಯ ಆಕ್ಟೋಪಸ್ ಕೈಗಳು, 2024ರ ಸಂಸತ್ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ, ಅದು ಈಗ ಅತ್ಯಂತ ವೇಗವಾಗಿ ಮತ್ತು ಅರಾಜಕವಾಗಿ ವಿರೋಧ ಪಕ್ಷಗಳತ್ತ ಸಾಗಿ ಬರುತ್ತಿದೆ. “ಸಿಬಿಐಗೆ ಬಂಧಿಸಲು ಇಷ್ಟವಿಲ್ಲ. ಆದರೆ ರಾಜಕೀಯ ಒತ್ತಡದಿಂದ ಈ ಬಂಧನ ಮಾಡಲಾಗುತ್ತಿದೆ,’’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಪವನ್ನು ಸುಲಭವಾಗಿ ತಳ್ಳಿ ಹಾಕುವಂತಿಲ್ಲ.

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬರುತ್ತಿರುವ ಹಿಮಾಲಯದ ಆರೋಪಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಆಡಳಿತ ಪಕ್ಷವು ಈ ರೀತಿಯ ಬಂಧನಕ್ಕೆ ಮುಂದಾಗಿದೆ. ವಿರೋಧ ಪಕ್ಷಗಳ ಮೇಲೆ ಸೇಡು ತೀರಿಸಿಕೊಳ್ಳಲು, ಅಧಿಕಾರದಲ್ಲಿದ್ದಾಗ ಸರ್ಕಾರಿ ಸಂಸ್ಥೆಗಳನ್ನು ಬಳಸಿಕೊಂಡವರು, ನಂತರ ಇತಿಹಾಸದ ಕಸದ ಬುಟ್ಟಿಗೆ ಎಸೆಯಲ್ಪಟ್ಟ ಅನೇಕ ಉದಾಹರಣೆಗಳಿವೆ ಎಂಬುದನ್ನು ಕೇಂದ್ರ ಬಿ.ಜೆ.ಪಿ ಸರ್ಕಾರದಲ್ಲಿ ಸಿಬಿಐ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರು ಇದನ್ನು ನೆನಪು ಮಾಡಿಕೊಳ್ಳಬೇಕೆಂದು ನಾನು ಅವರಲ್ಲಿ ಕೇಳಿಕೊಳ್ಳುತ್ತೇನೆ.

ಮಾಧ್ಯಮಗಳನ್ನು ಬಳಸಿಕೊಂಡು ಸತ್ಯಗಳನ್ನು ಎಷ್ಟೇ ಮರೆಮಾಚಿದರೂ ಅದು ಜನಸಮೂಹದ ಮಧ್ಯೆ ಅಂಬಲವಾಗಿ ಬಿಡುತ್ತದೆ. ವಿರೋಧ ಪಕ್ಷಗಳ ಮೇಲೆ ಸೇಡು ತೀರಿಸಿಕೊಂಡು, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಉಗ್ರ ಪ್ರವೃತ್ತಿಯನ್ನು ಒಕ್ಕೂಟ ಬಿಜೆಪಿ ಸರಕಾರ ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ಈ ವಿಷಯಗಳನ್ನು ಗಮನಿಸುತ್ತಿರುವ ಜನರು ಕೇವಲ ವೀಕ್ಷಕರಾಗಿರುವುದಿಲ್ಲ; ಅವರು ಪಾಠ ಕಲಿಸುವ ನ್ಯಾಯಾಧೀಶರಾಗುತ್ತಾರೆ. ಮತ್ತು 2024ರ ಸಂಸತ್ತಿನ ಚುನಾವಣೆಯಲ್ಲಿ ಬಡ್ಡಿ ಸಮೇತ ಅಸಲನ್ನು ಮರು ಪಾವತಿಸುತ್ತಾರೆ ಎಂದು ನಾನು ನಿಮಗೆ ಎಚ್ಚರಿಸಲು ಬಯಸುತ್ತೇನೆ” ಎಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.