ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಆರ್.ಎನ್.ರವಿ Archives » Dynamic Leader
October 19, 2024
Home Posts tagged ಆರ್.ಎನ್.ರವಿ
ದೇಶ

ನವದೆಹಲಿ: ಉಪಕುಲಪತಿಗಳ ನೇಮಕದಲ್ಲಿ ರಾಜ್ಯ ಸರಕಾರದ ಅಧಿಕಾರವೂ ಸೇರಿದಂತೆ 13 ಮಸೂದೆಗಳು ತಮಿಳುನಾಡು ರಾಜ್ಯಪಾಲರ ಒಪ್ಪಿಗೆಗಾಗಿ ಕಾಯುತ್ತಿವೆ.

ಈ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳಿಗೆ ಅನುಮೋದನೆ ನೀಡದ ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ತಮಿಳುನಾಡು ಸರ್ಕಾರದ ಪರವಾಗಿ ಮೊಕದ್ದಮೆ ಹೂಡಲಾಗಿದೆ. ತಮಿಳುನಾಡು ಸರ್ಕಾರವು ಕಳುಹಿಸಿದ ಮಸೂದೆಗಳನ್ನು ಅನುಮೋದಿಸಲು ವಿಳಂಬದ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ.

ತಮಿಳುನಾಡು ವಿಧಾನಸಭೆ ಅಂಗೀಕರಿಸಿರುವ ವಿಧೇಯಕಗಳಿಗೆ ಕಾಲಮಿತಿಯಲ್ಲಿ ಅನುಮೋದನೆ ನೀಡುವಂತೆ ರಾಜ್ಯಪಾಲರಿಗೆ ಆದೇಶ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಮತ್ತು ಸರ್ಕಾರಿ ಆದೇಶಗಳನ್ನು ಅಂಗೀಕರಿಸಲು ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಬೇಕು ಎಂದೂ ಮನವಿ ಮಾಡಲಾಗಿದೆ.

ದೇಶ

ಚೆನ್ನೈ: ಸನಾತನ ಧರ್ಮದ ಕುರಿತು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೇಳಿಕೆಗೆ ಸಂಬಂಧಿಸಿದಂತೆ, ಮಾಹಿತಿ ಹಕ್ಕು ಕಾಯ್ದೆಯಡಿ ವಿವರಗಳನ್ನು ಕೋರಿ ಸಲ್ಲಿಸಿದ ಅರ್ಜಿಗೆ 8 ವಾರಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ರಾಜಭವನದ ಸಾರ್ವಜನಿಕ ಮಾಹಿತಿ ಮೇಲ್ಮನವಿ ಅಧಿಕಾರಿಗೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ.

ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಭಾಗವಹಿಸುತ್ತಿದ್ದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ, ಸನಾತನ ಧರ್ಮದ ಶ್ರೇಯಸ್ಸನ್ನು ವಿವರಿಸುತ್ತಾ, ಅದನ್ನು ಅನುಸರಿಸುವುದು ಮುಖ್ಯ ಎಂದು ನಿರಂತರವಾಗಿ ಹೇಳುತ್ತಿದ್ದರು. ಸನಾತನ ಧರ್ಮದ ಉಲ್ಲೇಖಗಳ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ, ಚೆನ್ನೈ ಮೂಲದ ಹಿರಿಯ ವಕೀಲ ಎಸ್.ದುರೈಸ್ವಾಮಿ ಅವರು ರಾಜ್ಯಪಾಲ ಆರ್.ಎನ್.ರವಿ ಅವರಿಗೆ ಅರ್ಜಿ ಸಲ್ಲಿಸಿ, ಸನಾತನ ಧರ್ಮದ ಬಗ್ಗೆ ಮಾಹಿತಿ ಒದಗಿಸುವಂತೆ ಕೋರಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ತಮಿಳುನಾಡು ರಾಜಭವನ ಕಚೇರಿಯ ಮಾಹಿತಿ ಅಧಿಕಾರಿ, ‘ವಕೀಲರು ಎತ್ತಿರುವ ಪ್ರಶ್ನೆಗಳು ಆರ್‌ಟಿಐ ಕಾಯ್ದೆಯಡಿ ಬರುವುದಿಲ್ಲ. ಅದಕ್ಕೆ ಸಂಬಂಧಪಟ್ಟ ಮಾಹಿತಿ ತಮ್ಮ ಕಛೇರಿಯಲ್ಲಿ ಲಭ್ಯವಿಲ್ಲ’ ಎಂಬ ಮಾಹಿತಿಯನ್ನು ಒದಗಿಸಿದ್ದರು.

ಸಾರ್ವಜನಿಕ ಮಾಹಿತಿ ಅಧಿಕಾರಿ ನೀಡಿದ ಅಪೂರ್ಣವಾದ ಮಾಹಿತಿಯ ವಿರುದ್ಧ, ವಕೀಲ ಎಸ್.ದುರೈಸ್ವಾಮಿ ಅವರು ಕಳೆದ ವರ್ಷ ನವೆಂಬರ್ 3 ರಂದು ರಾಜಭವನದ ಸಾರ್ವಜನಿಕ ಮಾಹಿತಿ ಮೇಲ್ಮನವಿ ಅಧಿಕಾರಿಗೆ ಸಕ್ಷನ್ 19(1) ರಡಿಯಲ್ಲಿ ಮೇಲ್ಮನವಿ ಸಲ್ಲಿಸಿದರು.

ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ

 ಅರ್ಜಿಯಲ್ಲಿ, ‘ರಾಜಕೀಯ ವ್ಯವಸ್ಥೆಯಲ್ಲಿ ಉನ್ನತ ಸ್ಥಾನದಲ್ಲಿರುವ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಸೂಕ್ತ ಉತ್ತರ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಅವರು ಸನಾತನ ಧರ್ಮದ ಬಗ್ಗೆ ಮಾತನಾಡಲು ಆಧಾರವೇನು ಎಂಬುದನ್ನು ತಿಳಿಸಬೇಕು’ ಎಂದು ಕೋರಿದ್ದರು.

ಈ ಮೇಲ್ಮನವಿಯ ಮೇಲೆ ರಾಜಭವನದ ಸಾರ್ವಜನಿಕ ಮಾಹಿತಿ ಮೇಲ್ಮನವಿ ಅಧಿಕಾರಿ ಕ್ರಮ ಕೈಗೊಳ್ಳದ ಕಾರಣ, ವಕೀಲ ದುರೈಸ್ವಾಮಿ ಅವರು ಮದ್ರಾಸ್ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದರು. ನ್ಯಾಯಮೂರ್ತಿ ಎಂ.ತಂಡಪಾಣಿ ಅವರ ಮುಂದೆ ಪ್ರಕರಣ ವಿಚಾರಣೆಗೆ ಬಂದಿತ್ತು.ಅರ್ಜಿದಾರರ ಪರವಾಗಿ ವಕೀಲ ಇಳಂಗೋವನ್ ವಾದ ಮಂಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ‘ವಕೀಲ ದುರೈಸ್ವಾಮಿ ಅವರ ಮೇಲ್ಮನವಿ ಕುರಿತು ರಾಜಭವನದ ಸಾರ್ವಜನಿಕ ಮಾಹಿತಿ ಮೇಲ್ಮನವಿ ಅಧಿಕಾರಿ 8 ವಾರಗಳಲ್ಲಿ ತೀರ್ಮಾನ ಕೈಗೊಳ್ಳಬೇಕು’ ಎಂದು ಆದೇಶಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದಾರೆ.

The Madras High Court has directed the appellant authority of Tamil Nadu Raj Bhavan to take action against the RTI application seeking an explanation about the Sanatan Dharma quotes used by the Governor during his speeches, within 8 weeks.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್, ಸಂಪಾದಕರು

ತಮಿಳುನಾಡು: ತಮಿಳುನಾಡು ವಿಧಾನಸಭೆಯು ಸಾಮಾನ್ಯವಾಗಿ ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರ ಭಾಷಣದೊಂದಿಗೆ ಪ್ರಾರಂಭಿಸುತ್ತದೆ. ಅದರಂತೆ ಇಂದು (ಜನವರಿ 9) ಬೆಳಗ್ಗೆ 10 ಗಂಟೆಗೆ ರಾಜ್ಯಪಾಲ ಆರ್.ಎನ್.ರವಿ ಭಾಷಣದೊಂದಿಗೆ ವರ್ಷದ ಮೊದಲ ಸಭೆ ಆರಂಭವಾಯಿತು.

ಸಭಾಧ್ಯಕ್ಷರು ಎಂ.ಅಪ್ಪಾವು ಹಾಗೂ ಕಾರ್ಯದರ್ಶಿ ಕೆ.ಶ್ರೀನಿವಾಸನ್ ಅವರು ರಾಜ್ಯಪಾಲರನ್ನು ಸ್ವಾಗತಿಸಿದರು. ಇದಾದ ಬಳಿಕ ರಾಜ್ಯಪಾಲರಿಗೆ ಪೊಲೀಸ್ ಪರೇಡ್ ಗೌರವ ಸಲ್ಲಿಸಲಾಯಿತು. ಬೆಳಗ್ಗೆ 10 ಗಂಟೆಗೆ ಸರಿಯಾಗಿ ರಾಜ್ಯಪಾಲರು ವಿಧಾನಸಭೆಯಲ್ಲಿ ಭಾಷಣ ಆರಂಭಿಸಿದರು. ಅವರು ಭಾಷಣ ಮಾಡುವಾಗ ಸಾಮಾಜಿಕ ನ್ಯಾಯ, ಸ್ವಾಭಿಮಾನ, ಸಮಗ್ರ ಅಭಿವೃದ್ಧಿ, ಸಮಾನತೆ, ಮಹಿಳಾ ಹಕ್ಕುಗಳು, ಧಾರ್ಮಿಕ ಸೌಹಾರ್ದತೆ, ವೈವಿಧ್ಯತೆ, ಪೆರಿಯಾರ್, ಅಂಬೇಡ್ಕರ್, ಕಾಮರಾಜ್, ಅಣ್ಣಾದುರೈ, ಎಂ.ಕರುಣಾನಿಧಿ, ದ್ರಾವಿಡ ಮಾದರಿ ಆಡಳಿತ, ತಮಿಳುನಾಡು ಶಾಂತಿ ಉದ್ಯಾನದಂತಹ ಪದಗಳನ್ನು ಹೇಳಲು ನಿರಾಕರಿಸಿದರು.

ಭಾಷಣ ಆರಂಭವಾಗುತ್ತಿದ್ದಂತೆ ಡಿಎಂಕೆ ಮಿತ್ರಪಕ್ಷಗಳು “ಗೊ ಬ್ಯಾಕ್ ಗವರ್ನರ್” ಎಂಬ ಘೋಷಣೆಗಳನ್ನು ಕೂಗಿದರು. ರಾಜ್ಯಪಾಲರ ಭಾಷಣದ ನಂತರ ಅದರ ತಮಿಳು ಆವೃತಿಯನ್ನು ಸಭಾಧ್ಯಕ್ಷರು ಎಂ.ಅಪ್ಪಾವು ವಾಚಿಸಿದರು. ಅಪ್ಪಾವು ಅದನ್ನು ಓದುತ್ತಿರುವಾಗ ಮದ್ಯ ಪ್ರವೇಶಿಸಿದ ಪ್ರತಿಪಕ್ಷಗಳು ‘ಸರ್ಕಾರ ಸಿದ್ದಪಡಿಸಿದ್ದ ಭಾಷಣವನ್ನು ರಾಜ್ಯಪಾಲರು ಸರಿಯಾಗಿ ಓದಲಿಲ್ಲ’ ಎಂದು ಆರೋಪ ಮಾಡಿದವು.

ಅಪ್ಪಾವು ಮಾತು ಮುಗಿಸಿದ ಬಳಿಕ ಎದ್ದು ನಿಂತ ಮುಖ್ಯಮಂತ್ರಿ ಸ್ಟಾಲಿನ್, ಸರ್ಕಾರ ಸಿದ್ದಪಡಿಸಿದ್ದ ಭಾಷಣವನ್ನು ರಾಜ್ಯಪಾಲರು ಸರಿಯಾಗಿ ಓದಲಿಲ್ಲ ಎಂದು ಅಪಾದಿಸಿದರು. ರಾಜ್ಯಪಾಲರು ಓದಿದ ಭಾಗಗಳನ್ನು ಟಿಪ್ಪಣಿಗಳಲ್ಲಿ ಸೇರಿಸಬಾರದು ಎಂಬ ಗೊತ್ತುವಳಿಯನ್ನು ಮುಖ್ಯಮಂತ್ರಿ ಸ್ಟಾಲಿನ್ ಮಂಡಿಸಿದರು. ಮುಖ್ಯಮಂತ್ರಿ ಗೊತ್ತುವಳಿಯನ್ನು ಸಭೆಯಲ್ಲಿ ಮಂಡಿಸುತ್ತಿರುವಾಗಲೇ ರಾಜ್ಯಪಾಲರು ವಿಧಾನಸಭೆಯಿಂದ ಹೊರನಡೆದರು. ರಾಜ್ಯಪಾಲರು ತೆರಳಿದನಂತರ ಮುಖ್ಯಮಂತ್ರಿಗಳು ಮಂಡಿಸಿದ ಗೊತ್ತುವಳಿಯನ್ನು ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.

ವಿಧಾನಸಭೆ ಕಲಾಪ ಮುಗಿದ ಬಳಿಕ ರಾಷ್ಟ್ರಗೀತೆ ಮೊಳಗಿದಾಗ ರಾಜ್ಯಪಾಲರು ಸದನದಲ್ಲಿ ಇರಲಿಲ್ಲ ಎಂಬುದು ಗಮನಾರ್ಹ. ಭಾಷಣವನ್ನು ಅನುಮೋದಿಸಿದ ನಂತರ ಅದನ್ನು ಬದಲಾಯಿಸಿ ಸದನದಲ್ಲಿ ಓದುವುದನ್ನು ಒಪ್ಪಲು ಸಾಧ್ಯವಿಲ್ಲ. ಇದು ಕಲಾಪದ ಸಂಸ್ಕೃತಿಯಲ್ಲ. ಐತಿಹಾಸಿಕವಾದ ದ್ರಾವಿಡ ಚಳುವಳಿಯನ್ನು ಕಟ್ಟಿ, ಬ್ರಾಹ್ಮಣ್ಯಕ್ಕೆ ಸೆಡ್ಡು ಹೊಡೆದು ‘ಸನಾತನ ರೋಗಕ್ಕೆ ದ್ರಾವಿಡವೇ ಮದ್ದು’ ಎಂಬ ನಂಬಿಕೆಯನ್ನು ದಕ್ಷಿಣ ಭಾರತೀಯರಿಗೆ ನೀಡಿರುವ ತಮಿಳುನಾಡು ವಿಧಾನ ಸಭೆಯಲ್ಲಿ ಸಾಮಾಜಿಕ ನ್ಯಾಯ, ಸ್ವಾಭಿಮಾನ, ಸಮಗ್ರ ಅಭಿವೃದ್ಧಿ, ಸಮಾನತೆ, ಮಹಿಳಾ ಹಕ್ಕುಗಳು, ಧಾರ್ಮಿಕ ಸೌಹಾರ್ದತೆ, ವೈವಿಧ್ಯತೆ, ಪೆರಿಯಾರ್, ಅಂಬೇಡ್ಕರ್, ಕಾಮರಾಜ್, ಅಣ್ಣಾದುರೈ, ಎಂ.ಕರುಣಾನಿಧಿ, ದ್ರಾವಿಡ ಮಾದರಿ ಆಡಳಿತ, ತಮಿಳುನಾಡು ಶಾಂತಿ ಉದ್ಯಾನದಂತಹ ಪದಗಳನ್ನು ಹೇಳಲು ರಾಜ್ಯಪಾಲರು ನಿರಾಕರಿಸಿದ್ದಾರೆ ಎಂದರೆ ಇವರು ಎಂತಹ ಉಗ್ರ ಸನಾತನವಾದಿಯಾಗಿರಬೇಕು ಎಂಬುದನ್ನು ನೀವೇ ಊಹಿಸಿಕೊಳ್ಳಿ.

‘ರಾಜ್ಯಪಾಲರು ಇಂತಹ ಹಲವಾರು ಸಮಸ್ಯೆಗಳನ್ನು ದಿನನಿತ್ಯ ಸೃಷ್ಟಿಸುತ್ತಿರುವುದು ನಿಜಕ್ಕೂ ನನಗೆ ನೋವು ತಂದಿದೆ’ ಎಂದು ವಿಧಾನಸಭೆ ಸಭಾಪತಿ ಅಪ್ಪಾವು ಹೇಳಿರುವುದು ಗಮನಾರ್ಹವಾದದ್ದು.

‘ರಾಜ್ಯಪಾಲ ಆರ್.ಎನ್.ರವಿ ಉಗ್ರ ಸನಾತನವಾದಿ, ದ್ರಾವಿಡ ವಿರೋಧಿ, ಬಿಜೆಪಿ ಏಜೆಂಟ್’ ಎಂದೆಲ್ಲ ತಮಿಳುನಾಡು ಜನರು ಹೇಳುವುದು ಸರಿಯಾಗಿಯೇ ಇದೆ ಎಂಬುದನ್ನು ಇಂದಿನ ನಡವಳಿಕೆ ನಮಗೆ ತೋರಿಸಿಕೊಟ್ಟಿದೆ.