ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಇಂಡಿಯಾ ಮೈತ್ರಿಕೂಟ Archives » Page 2 of 9 » Dynamic Leader
October 23, 2024
Home Posts tagged ಇಂಡಿಯಾ ಮೈತ್ರಿಕೂಟ (Page 2)
ರಾಜಕೀಯ

ನವದೆಹಲಿ: ಉತ್ತರ ಪ್ರದೇಶದಲ್ಲಿ ಇತ್ತೀಚೆಗಿನ ಲೋಕಸಭೆ ಚುನಾವಣೆ ಫಲಿತಾಂಶದಿಂದ ತೃಪ್ತರಾಗಿರುವ ಕಾಂಗ್ರೆಸ್ ಪಕ್ಷವು ಜೂನ್ 11 ರಿಂದ 15 ರವರೆಗೆ ‘ಧಯವಾದ್ ಯಾತ್ರೆ’ಯನ್ನು ಘೋಷಿಸಿದೆ. ಯಾತ್ರೆಯು ರಾಜ್ಯದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳನ್ನು ತಲುಪುವ ಗುರಿಯನ್ನು ಹೊಂದಿದ್ದು, ಇದರ ಮೂಲಕ ಸಾರ್ವಜನಿಕರಿಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತದೆ ಮತ್ತು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಸಂದೇಶಗಳನ್ನು ರವಾನಿಸುವ ಮಾಹಿತಿಯನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶ ಉಸ್ತುವಾರಿ ಅವಿನಾಶ್ ಪಾಂಡೆ ಅವರು ಹಂಚಿಕೊಂಡಿದ್ದಾರೆ.

ಶುಕ್ರವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪಾಂಡೆ, ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯು ಪ್ರತಿ ಕ್ಷೇತ್ರಗಳ ಲೋಕಸಭಾ ಚುನಾವಣಾ ಫಲಿತಾಂಶಗಳನ್ನು ಪರಿಶೀಲಿಸಿದೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸಿ 6ರಲ್ಲಿ ಗೆಲುವು ಸಾಧಿಸಿದರೆ, ಮೈತ್ರಿಕೂಟ 43 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪರಿಶೀಲನಾ ಸಭೆಯಲ್ಲಿ ಮಹಿಳೆಯರ ಹಕ್ಕು ಸೇರಿದಂತೆ ಒಂಬತ್ತು ಪ್ರಸ್ತಾವನೆಗಳನ್ನು ಅಂಗೀಕರಿಸಲಾಗಿದೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಪರಿಣಾಮವನ್ನು ಪಾಂಡೆ ಎತ್ತಿ ತೋರಿಸಿದರು, ಇದು ಸಾರ್ವಜನಿಕರನ್ನು ಪ್ರತಿಧ್ವನಿಸಿದೆ ಎಂದು ಹೇಳಿದ್ದಾರೆ. ಸಂವಿಧಾನದ ಬೆದರಿಕೆಗಳ ನಡುವೆಯೂ ಉತ್ತರ ಪ್ರದೇಶದ ಜನರು ತಮ್ಮ ಜವಾಬ್ದಾರಿಗಳನ್ನು ಅದ್ಭುತವಾಗಿ ನಿರ್ವಹಿಸಿದ್ದಾರೆ ಎಂದು ಅವರು ಒತ್ತಿ ಹೇಳಿದರು. ಸೀಮಿತ ಸಂಪನ್ಮೂಲಗಳ ಹೊರತಾಗಿಯೂ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಪ್ರಚಂಡ ಪ್ರಯತ್ನವನ್ನು ಮಾಡಿದರು, ಇದರ ಪರಿಣಾಮವಾಗಿ ರಾಜ್ಯದಲ್ಲಿ ಗಮನಾರ್ಹ ಬದಲಾವಣೆಗಳು ಸಂಭವಿಸಿದವು ಎಂದು ಹೇಳಿದರು.

ರಾಜಕೀಯ

“ಇದು ನಮ್ಮ ಸ್ಫೂರ್ತಿದಾಯಕ ಧೀಮಂತರಾದ ಛತ್ರಪತಿ ಶಿವಾಜಿ ಮಹಾರಾಜರು, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವವಾಗಿದೆ!”

ಮಹಾರಾಷ್ಟ್ರದ ಸಾಂಗ್ಲಿ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ವಿಶಾಲ್ ಪಾಟೀಲ್ ಅವರು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದಾಳುತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ವಿಶಾಲ್ ಪಾಟೀಲ್ ಅವರ ಸೇರ್ಪಡೆಯಿಂದ ಕಾಂಗ್ರೆಸ್ ಸಂಸದರ ಬಲ 100ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಇಂಡಿಯಾ ಮೈತ್ರಿಕೂಟದ ಬಲ 233ಕ್ಕೆ ಏರಿಕೆಯಾಗಿದೆ.

ಪಾಟೀಲ ಅವರ ಬೆಂಬಲವನ್ನು ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮಹಾರಾಷ್ಟ್ರದ ಜನರು ವಿಶ್ವಾಸಘಾತುಕತನ, ದುರಹಂಕಾರ ಮತ್ತು ವಿಭಜನೆಯ ರಾಜಕಾರಣವನ್ನು ಸೋಲಿಸಿದರು. ಇದು ನಮ್ಮ ಸ್ಫೂರ್ತಿದಾಯಕ ಧೀಮಂತರಾದ ಛತ್ರಪತಿ ಶಿವಾಜಿ ಮಹಾರಾಜರು, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವವಾಗಿದೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಾಂಗ್ಲಿಯಿಂದ ಆಯ್ಕೆಯಾದ ಸಂಸದ ವಿಶಾಲ್ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದನ್ನು ಸ್ವಾಗತಿಸುತ್ತೇನೆ. ಸಂವಿಧಾನ ಚಿರಾಯುವಾಗಲಿ!

ರಾಜಕೀಯ

ನವದೆಹಲಿ: ದೇಶಾದ್ಯಂತ 7 ಹಂತಗಳಲ್ಲಿ ನಡೆದ 18ನೇ ಲೋಕಸಭೆ ಚುನಾವಣೆಯ ಮತ ಎಣಿಕೆ ನಿನ್ನೆ ನಡೆದಿದ್ದು, ಫಲಿತಾಂಶ ಪ್ರಕಟವಾಗಿದೆ. ಇದರಲ್ಲಿ ಇಂಡಿಯಾ ಮೈತ್ರಿಕೂಟ 234 ಸ್ಥಾನಗಳನ್ನು ಪಡೆದುಕೊಂಡಿದ್ದು, ಬಿಜೆಪಿ ಮೈತ್ರಿಕೂಟ 292 ಸ್ಥಾನಗಳನ್ನು ಪಡೆದುಕೊಂಡಿದೆ.

ಈ ಹಿನ್ನೆಲೆಯಲ್ಲಿ, ಬಿಜೆಪಿ ಏಕಾಂಗಿಯಾಗಿ 240 ಸೀಟು ಗೆದ್ದರೂ ಬಹುಮತ ಪಡೆಯಲು ಸಾಧ್ಯವಾಗದ ಕಾರಣ ಮೈತ್ರಿ ಪಕ್ಷಗಳೊಂದಿಗೆ ಸೇರಿ ಅಧಿಕಾರ ಹಿಡಿಯಬೇಕಾದ ಅನಿವಾರ್ಯತೆ ಬಿಜೆಪಿಗೆ ಎದುರಾಗಿದೆ.

ಇಂಡಿಯಾ ಮೈತ್ರಿಕೂಟ ಚಂದ್ರಬಾಬು ನಾಯ್ಡು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ಮುಂದುವರಿಸಲಿದ್ದು, ಆ ಇಬ್ಬರು ಮುಖ್ಯಮಂತ್ರಿಗಳು ಇಂಡಿಯಾ ಮೈತ್ರಿಗೆ ಬೆಂಬಲ ನೀಡಿದರೆ ಇಂಡಿಯಾ ಮೈತ್ರಿಕೂಟ ಬಹುಮತ ಪಡೆದು ಸರ್ಕಾರವನ್ನು ಹಿಡಿಯಲಿದೆ. ಆದರೆ, ಆ ಎರಡು ಪಕ್ಷಗಳು ಬಿಜೆಪಿ ಮೈತ್ರಿಕೂಟದಲ್ಲಿವೆ.

400ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಹೇಳಿಕೊಂಡಿದ್ದ ಬಿಜೆಪಿಗೆ 272 ಕ್ಷೇತ್ರಗಳಲ್ಲಿ ಅಧಿಕಾರ ಹಿಡಿಯಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆ ನಡೆಯಿತು.

ಸಲಹಾ ಸಭೆಯ ನಂತರ ಸುದ್ದಿಗಾರರನ್ನು ಭೇಟಿ ಮಾಡಿದ ಮಲ್ಲಿಕಾರ್ಜುನ ಖರ್ಗೆ, ”ಬಿಜೆಪಿಯ ದ್ವೇಷ ರಾಜಕಾರಣ ಮತ್ತು ಭ್ರಷ್ಟಾಚಾರದ ವಿರುದ್ಧ ಜನರು ತೀರ್ಪು ನೀಡಿದ್ದಾರೆ. ಬಿಜೆಪಿ ಸರಕಾರದ ಫ್ಯಾಸಿಸ್ಟ್ ನೀತಿಗಳ ವಿರುದ್ಧ ಇಂಡಿಯಾ ಮೈತ್ರಿಕೂತ ಹೋರಾಟವನ್ನು ಮುಂದುವರಿಸಲಿದೆ.

ಧಾರ್ಮಿಕ ರಾಜಕೀಯ ಶಕ್ತಿಗಳು ಬೆಳೆಯದಂತೆ ಮಾಡಿದ್ದೇವೆ. ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ನೀತಿಗಳ ವಿರುದ್ಧವೂ ಜನರು ಮತ ಹಾಕಿದ್ದಾರೆ. ಮೋದಿಯ ಶ್ರೀಮಂತ ಆಪ್ತರಿಗೆ ಅನುಕೂಲವಾಗುವ ನೀತಿಗಳ ವಿರುದ್ಧವೂ ಜನರು ಮತ ಹಾಕಿದ್ದಾರೆ.

ಇಂಡಿಯಾ ಮೈತ್ರಿಕೂಟವನ್ನು ಬೆಂಬಲ ನೀಡಿದ್ದಕ್ಕಾಗಿ ಭಾರತದ ಜನರಿಗೆ ಧನ್ಯವಾದಗಳು. ಬಿಜೆಪಿಗೆ ಜನ ತಕ್ಕ ಉತ್ತರ ನೀಡಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಂಡವಾಳಶಾಹಿಗಳ ವಿರುದ್ಧ, ಭಾರತದ ಸಂವಿಧಾನವನ್ನು ರಕ್ಷಿಸಲು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಜನರು ನೀಡಿರುವ ತೀರ್ಪು ಇದಾಗಿದೆ” ಎಂದು ಹೇಳಿದರು.

ರಾಜಕೀಯ

ಬಿಜೆಪಿಗೆ ಏಕ ಬಹುಮತ ಇಲ್ಲದ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಇಂಡಿಯಾ ಮೈತ್ರಿಕೂಟಾ ಪ್ರಯತ್ನಿಸುತ್ತಿದೆ!

ನವದೆಹಲಿ: ದೇಶಾದ್ಯಂತ ಒಟ್ಟು 543 ಸಂಸದೀಯ ಕ್ಷೇತ್ರಗಳಿಗೆ 7 ಹಂತಗಳಲ್ಲಿ ಚುನಾವಣೆ ನಡೆದಿದೆ. ನಿನ್ನೆ ನಡೆದ ಚುನಾವಣೆಯಲ್ಲಿ ಚಲಾವಣೆಯಾದ ಮತಗಳ ಎಣಿಕೆ ನಡೆದಿದೆ. ಇದರಲ್ಲಿ ಬಿ.ಜೆ.ಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಬಿಜೆಪಿ ಜೊತೆಗಿನ ಮೈತ್ರಿ ಪಕ್ಷಗಳು ಒಟ್ಟು 52 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಈ ಮೂಲಕ ಬಿ.ಜೆ.ಪಿ ಮೈತ್ರಿಕೂಟ 292 ಸ್ಥಾನಗಳನ್ನು ಗೆದ್ದಿದೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ಅಗತ್ಯವಿರುವ 272 ಕ್ಷೇತ್ರಗಳ ಪೈಕಿ ಬಿಜೆಪಿ ಮೈತ್ರಿಕೂಟ 292 ಸ್ಥಾನಗಳನ್ನು ಗೆದ್ದುಕೊಂಡಿದೆ.

ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟ 234 ಕ್ಷೇತ್ರಗಳನ್ನು ಗೆದ್ದಿದೆ. ಇದರಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ 99 ಸ್ಥಾನಗಳನ್ನು ಗೆದ್ದಿದೆ. ಯಾವುದೇ ಮೈತ್ರಿಗೆ ಸೇರದ ಪಕ್ಷಗಳು 17 ಸ್ಥಾನಗಳನ್ನು ಹೊಂದಿವೆ. ಬಿಜೆಪಿಗೆ ಏಕ ಬಹುಮತ ಇಲ್ಲದ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಇಂಡಿಯಾ ಮೈತ್ರಿಕೂಟ ಕೂಡ ಪ್ರಯತ್ನಿಸುತ್ತಿದೆ.

ಇಂಡಿಯಾ ಮೈತ್ರಿಕೂಟವು ಬಿಜೆಪಿ ಮಿತ್ರಪಕ್ಷವಾದ ತೆಲುಗು ದೇಶಂ ಮತ್ತು ಸಂಯುಕ್ತ ಜನತಾದಳದೊಂದಿಗೆ ಮಾತುಕತೆ ನಡೆಸುತ್ತಿದೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಉದ್ಧವ್ ಠಾಕ್ರೆ ಅವರ ಶಿವಸೇನೆ, ರಾಹುಲ್ ಗಾಂಧಿ ಪ್ರಧಾನಿಯಾಗಲು ತನ್ನ ಬೆಂಬಲವನ್ನು ವ್ಯಕ್ತಪಡಿಸಿದೆ.

ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಇಂದು (ಬುಧವಾರ) ಸಂಜೆ ಇಂಡಿಯಾ ಮೈತ್ರಿ ಪಕ್ಷದ ನಾಯಕರ ಸಭೆ ನಡೆಯಲಿದೆ. ಇದಕ್ಕಾಗಿ ಮೈತ್ರಿ ಪಕ್ಷದ ನಾಯಕರನ್ನು ಆಹ್ವಾನಿಸಲಾಗಿದೆ. ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಅಖಿಲೇಶ್ ಯಾದವ್ ಸೇರಿದಂತೆ ನಾಯಕರು ಭಾಗವಹಿಸಲಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್

ಆಂಧ್ರಪ್ರದೇಶದ 175 ಕ್ಷೇತ್ರಗಳಲ್ಲಿ 134 ಕ್ಷೇತ್ರಗಳಲ್ಲಿ ಚಂದ್ರಬಾಬು ಗೆದ್ದಿದ್ದಾರೆ: ಜಗನ್ಮೋಹನ್ ಪ್ರತಿಪಕ್ಷ ಸ್ಥಾನಮಾನವನ್ನೂ ಕಳೆದುಕೊಂಡಿದ್ದಾರೆ.

ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅಧಿಕಾರಕ್ಕೆ ಬರುತ್ತಿದ್ದಂತೆ, ಜಗನ್ಮೋಹನ್ ರೆಡ್ಡಿ ವಿರೋಧ ಪಕ್ಷವಾಗುವ ಅರ್ಹತೆಯನ್ನೂ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದಲ್ಲಿ ಇದೇ 13ರಂದು ಒಂದೇ ಹಂತದಲ್ಲಿ ವಿಧಾನಸಭೆ ಮತ್ತು ಸಂಸತ್ ಚುನಾವಣೆ ನಡೆದಿತ್ತು. ರಾಜ್ಯದಲ್ಲಿ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ, ತೆಲುಗು ದೇಶಂ, ಜನಸೇನಾ ಮತ್ತು ಬಿಜೆಪಿ ಮತ್ತೊಂದು ತಂಡವಾಗಿ ಹಾಗೂ ಕಾಂಗ್ರೆಸ್-ಕಮ್ಯುನಿಸ್ಟ್ ಪ್ರತ್ಯೇಕ ತಂಡವಾಗಿ ಸ್ಪರ್ಧಿಸಿದ್ದವು. ಇದರಿಂದಾಗಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು.

ಆಂಧ್ರಪ್ರದೇಶದ ಒಟ್ಟು 175 ವಿಧಾನಸಭಾ ಕ್ಷೇತ್ರಗಳ ಪೈಕಿ 88 ಕ್ಷೇತ್ರಗಳನ್ನು ಗೆದ್ದ ಪಕ್ಷ ಸರ್ಕಾರ ರಚಿಸಲಿದೆ. ನಿನ್ನೆ ರಾಜ್ಯಾದ್ಯಂತ 33 ಸ್ಥಳಗಳಲ್ಲಿ 401 ಕೇಂದ್ರಗಳಲ್ಲಿ ಮತ ಎಣಿಕೆ ನಡೆಸಲಾಯಿತು. ಮತ ಎಣಿಕೆಯಲ್ಲಿ ತೆಲುಗು ದೇಶಂ ಪಕ್ಷ ಮೊದಲಿನಿಂದಲೂ ಮುನ್ನಡೆಯನ್ನು ಕಾಯ್ದುಕೊಂಡು ಬಂದಿದ್ದು, ಕೊನೆಯಲ್ಲಿ 134 ಸ್ಥಾನಗಳನ್ನು ಗೆದ್ದಿರುವುದಾಗಿ ಘೋಷಿಸಲಾಯಿತು. ಪಕ್ಷಕ್ಕೆ ಮೂರನೇ ಎರಡರಷ್ಟು ಶಾಸಕರ ಬೆಂಬಲ ಸಿಕ್ಕಿದೆ. ನಟ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ 21 ಸ್ಥಾನಗಳನ್ನು ಗೆದ್ದುಕೊಂಡಿದೆ.

ಬಿಜೆಪಿ 8 ಸ್ಥಾನಗಳನ್ನು ಪಡೆದುಕೊಂಡಿದೆ. ಈ ಮೂಲಕ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (NDA) 164 ಸ್ಥಾನಗಳನ್ನು ಗೆದ್ದುಕೊಂಡಿದೆ. ಜಗನ್ಮೋಹನ್ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಕೇವಲ 12 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಜಗನ್ ಅವರ ಪಕ್ಷಕ್ಕೆ ಪ್ರಮುಖ ಪ್ರತಿಪಕ್ಷ ಸ್ಥಾನಮಾನವೂ ಸಿಗಲಾರದು.

ವಿರೋಧ ಪಕ್ಷದ ನಾಯಕರಾಗಿ ಪವನ್ ಕಲ್ಯಾಣ್ ಆಯ್ಕೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಆಂಧ್ರಪ್ರದೇಶದ 25 ಲೋಕಸಭಾ ಕ್ಷೇತ್ರಗಳ ಪೈಕಿ ತೆಲುಗು ದೇಶಂ 16, ಜನಸೇನೆ 2, ಬಿಜೆಪಿ 3 ಮತ್ತು ವೈಎಸ್‌ಆರ್ ಕಾಂಗ್ರೆಸ್ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಒಂದೇ ಒಂದು ಸ್ಥಾನ ಸಿಗಲಿಲ್ಲ.

ಕಿಂಗ್ ಮೇಕರ್ ಚಂದ್ರಬಾಬು ನಾಯ್ಡು
ಲೋಕಸಭಾ ಚುನಾವಣಾ ಫಲಿತಾಂಶದ ಪ್ರಕಾರ, ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನೇತೃತ್ವದ ತೆಲುಗು ದೇಶಂ ಒಟ್ಟು 16 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮುನ್ನಡೆ ಸಾಧಿಸಿದೆ. ಹೀಗಾಗಿ ತೆಲುಗುದೇಶಂ ಪ್ರಭಾವ ಹೆಚ್ಚಿದೆ. ಬಿಜೆಪಿಗೆ ಬಹುಮತ ಸಿಗದ ಕಾರಣ ಹೊಸ ಸರ್ಕಾರ ರಚಿಸುವ ಟ್ರಂಪ್ ಕಾರ್ಡ್ ತೆಲುಗು ದೇಶಂ ಬಳಿ ಇದೆ ಎಂದು ರಾಜಕೀಯ ತಜ್ಞರ ಅಭಿಪ್ರಾಯವಾಗಿದೆ. ಚಂದ್ರಬಾಬು ನಾಯ್ಡು ಕಿಂಗ್ ಮೇಕರ್ ಆಗಿ ಹೊರಹೊಮ್ಮಿದ್ದಾರೆ?

ಎನ್.ಡಿಎ ಮೈತ್ರಿಕೂಟ 293 ಕಡೆ ಗೆಲುವನ್ನು ಸಾಧಿಸಿ ಬಹುಮತ ಪಡೆದಿದ್ದರೂ ಬಿಜೆಪಿ ಪ್ರತ್ಯೇಕವಾಗಿ ಮ್ಯಾಜಿಕ್ ನಂಬರ್ 272 ಅನ್ನು ತಲುಪುವಲ್ಲಿ ವಿಪಲವಾಗಿದೆ. ಅದು ಬರೀ 240 ಸ್ಥಾನಗಳನ್ನು ಮಾತ್ರ ಪಡೆದು ಹಿನ್ನೆಡೆಯನ್ನು ಅನುಭವಿಸಿದೆ. ಇದು ರಾಷ್ಟ್ರಮಟ್ಟದಲ್ಲಿ ಟ್ರೆಂಡಿಂಗ್ ವಿಷಯವಾಗಿದೆ. ವಿಶ್ವಗುರು, ದೇವಮಾನವ, ನಂ.1 ಪ್ರಧಾನಿ ಎಂದೆಲ್ಲಾ ಹೇಳಿಕೊಂಡಿದ್ದ ಮೋದಿ 3ನೇ ಬಾರಿಗೆ ಅಧಿಕಾರದ ಚುಕ್ಕಾಣಿ ಇಡಿಯಬೇಕಾದರೆ ಮೈತ್ರಿಪಕ್ಷಗಳ ಸಹಾಯ… ಸಹಮತ ಬೇಕು.

ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್, ನಿತೀಶ್ ಕುಮರ್ ಮುಂತಾದವರ ಬೆಂಬಲ ಪಡೆದು, ಸರ್ಕಾರ ರಚಿಸಿಕೊಂಡ ಮೇಲೆ ಆಪರೇಷನ್ ಕಮಲದ ಮೂಲಕ ಇದೇ ಪಕ್ಷಗಳನ್ನು ಕೆಡವಿ, ಬಿಜೆಪಿ ಬಹುಮತದೊಂದಿಗೆ 5 ವರ್ಷಗಳು ಅಧಿಕಾರ ನಡೆಸುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ. ಇದಕ್ಕೆ ನಮ್ಮಲ್ಲಿ ಅನೇಕ ಉದಾಹರಣೆಗಳಿವೆ.        

ರಾಜಕೀಯ

ನವದೆಹಲಿ: ಸಂಸತ್ ಚುನಾವಣೆಯ ಮತದಾನ ಮುಗಿದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿತು. ಇದರಲ್ಲಿ ಬಹುತೇಕ ಸಮೀಕ್ಷೆಗಳು ಆಡಳಿತಾರೂಢ ಬಿಜೆಪಿ ಪರವಾಗಿತ್ತು. ಸಮೀಕ್ಷೆ ನಡೆಸಿದ ಬಹುತೇಕ ಕಂಪೆನಿಗಳು, ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ 300ಕ್ಕೂ ಹೆಚ್ಚು ಸ್ಥಾನಗಳನ್ನು ವಶಪಡಿಸಿಕೊಳ್ಳಲಿದೆ ಎಂದು ಹೇಳಿದರು.

ಇಂಡಿಯಾ ಟುಡೇ ಮತ್ತು ಆಕ್ಸಿಸ್ ಮೈ ಇಂಡಿಯಾ ಜಂಟಿಯಾಗಿ ನಡೆಸಿದ ಸಮೀಕ್ಷೆಯಲ್ಲಿ, ಬಿ.ಜೆ.ಪಿ ಮೈತ್ರಿಕೂಟವು 361 ರಿಂದ 401 ಸ್ಥಾನಗಳನ್ನು ವಶಪಡಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿ ಮಾಡಿತ್ತು. ಆದರೆ ಇಂದು ಬಿಡುಗಡೆಯಾದ ಚುನಾವಣಾ ಫಲಿತಾಂಶಗಳು ಚುನಾವಣೋತ್ತರ ಸಮೀಕ್ಷೆಗನ್ನು ಸುಳ್ಳೆಂದು ಸಾಬೀತುಪಡೆಸಿವೆ.

ಮತ ಎಣಿಕೆಯ ಆರಂಭದಿಂದಲೂ ಬಿ.ಜೆ.ಪಿ ಮೈತ್ರಿಕೂಟಕ್ಕೆ ಸವಾಲೆಸೆಯುವ ರೀತಿಯಲ್ಲಿ ಇಂಡಿಯಾ ಮೈತ್ರಿಕೂಟವೂ ಹಲವೆಡೆ ಮುನ್ನಡೆ ಸಾಧಿಸಿವೆ. ಸದ್ಯಕ್ಕೆ ಬಿ.ಜೆ.ಪಿ ಮೈತ್ರಿಕೂಟ 291 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 234 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ದೆಹಲಿಯಲ್ಲಿ ಸುದ್ದಿಗಾರರನ್ನು ಭೇಟಿ ಮಾಡಿದರು.

ಆಗ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಸಂವಿಧಾನವನ್ನು ರಕ್ಷಿಸಲು ಜನರು ನಮಗೆ ಮತ ನೀಡುತ್ತಾರೆ ಎಂದು ನಾವು ಭಾವಿಸಿದ್ದೆವು. ಬಿಜೆಪಿ ಅಷ್ಟೇ ಅಲ್ಲ ಸಿಬಿಐ, ಜಾರಿ ನಿರ್ದೇಶನಾಲಯದ ವಿರುದ್ಧ ನಿಂತು ಗೆದ್ದಿದ್ದೇವೆ. ಜನರ ತೀರ್ಪು ಸಂವಿಧಾನದ ರಕ್ಷಣೆಗೆ ಸಹಕಾರಿಯಾಗಿದೆ. ಸಂಸತ್ತಿನಲ್ಲಿ ವಿರೋಧ ಪಕ್ಷಗಳ ಧ್ವನಿ ಕೇಳುವ ಭರವಸೆ ಇದೆ. ಜನರು ಪ್ರಧಾನಿ ಮೋದಿಯನ್ನು ಕಡೆಗಣಿಸಿದ್ದಾರೆ. ರೈತರು, ಬಡವರು ಮತ್ತು ಪರಿಶಿಷ್ಟ ಪಂಗಡದವರು ಸಂವಿಧಾನವನ್ನು ಉಳಿಸಿದ್ದಾರೆ.

ನಾನು ಎರಡೂ ಕ್ಷೇತ್ರಗಳಲ್ಲಿ ಯಶಸ್ವಿಯಾಗಿದ್ದೇನೆ. ರಾಯ್ಬರೇಲಿ ಮತ್ತು ವಯನಾಡು ಕ್ಷೇತ್ರದ ಜನತೆಗೆ ಧನ್ಯವಾದಗಳು. ವಯನಾಡು, ರಾಯ್ಬರೇಲಿ ಕ್ಷೇತ್ರಗಳಲ್ಲಿ ಯಾವುದನ್ನುರಾಜೀನಾಮೆ ನೀಡಬೇಕು ಎಂಬುದನ್ನು ಇನ್ನು ನಿರ್ಧರಿಸಿಲ್ಲ. ನಾಳೆ ದೆಹಲಿಯಲ್ಲಿ ಇಂಡಿಯಾ ಮೈತ್ರಿ ಪಕ್ಷಗಳ ಸಮಾಲೋಚನಾ ಸಭೆ ನಡೆಯಲಿದೆ. ನಾವು ನಮ್ಮ ಮೈತ್ರಿ ಪಕ್ಷಗಳನ್ನು ಗೌರವಿಸುತ್ತೇವೆ ಮತ್ತು ಅವರನ್ನು ಸಂಪರ್ಕಿಸದೆ ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ.

ನಾಳೆ ನಡೆಯಲಿರುವ ಸಭೆಯಲ್ಲಿ, ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಮತ್ತು ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾ ದಳ ಪಕ್ಷಗಳನ್ನು ಮೈತ್ರಿಕೂಟಕ್ಕೆ ಆಹ್ವಾನಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದರು.

ರಾಜಕೀಯ

ಡಿ.ಸಿ.ಪ್ರಕಾಶ್

ದೇಶಾದ್ಯಂತ 7 ಹಂತಗಳಲ್ಲಿ ನಡೆದ ಸಂಸತ್ ಚುನಾವಣೆ ನಿನ್ನೆ (ಜೂನ್ 1) ಮುಕ್ತಾಯಗೊಂಡಿದೆ. ಆ ಬಳಿಕ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಅದರಲ್ಲಿ ಬಹುತೇಕ ಸಮೀಕ್ಷೆಗಳು ಬಿಜೆಪಿ ಪರವಾಗಿಯೇ ಬಂದಿವೆ. ಅದರಲ್ಲೂ ಬಿಜೆಪಿ ಮೈತ್ರಿಕೂಟ 350ರಿಂದ 371ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಸಮೀಕ್ಷೆಗಳು ಬಹಿರಂಗಪಡಿಸಿವೆ.

ದೇಶಾದ್ಯಂತ ಬಿಜೆಪಿಯೇ ಭಾರಿ ಬಹುಮತ ಪಡೆಯಲಿದ್ದು, ಬಿಜೆಪಿ ಆಡಳಿತವಿಲ್ಲದ ಪ್ರಮುಖ ರಾಜ್ಯಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದು ವರದಿಯಾಗಿದೆ. ಆದರೆ, NewsX, NDTV, India News ಪ್ರಕಟಿಸಿರುವ ಸಮೀಕ್ಷೆಗಳಲ್ಲಿ ಬಿಜೆಪಿ ಮೈತ್ರಿ 371, ಇಂಡಿಯಾ ಮೈತ್ರಿ 125, ಇತರರು 47 ಎಂದು ಒಂದೇ ರೀತಿಯ ಫಲಿತಾಂಶಗಳನ್ನು ಪ್ರಕಟಿಸಿದೆ. ಇದರಿಂದ ಈ ಕಂಪನಿಗಳು ಬಿಜೆಪಿ ನೀಡಿದ್ದನ್ನೇ ಪ್ರಕಟಿಸಿವೆ ಎಂದು ಟೀಕಿಸಲಾಗುತ್ತಿದೆ.

ಹೇಳಿಕೊಟ್ಟಂತೆ, ಬಿಜೆಪಿ 370ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿವಿಧ ಕಂಪನಿಗಳು ಪ್ರಕಟಿಸಿರುವ ಸಮೀಕ್ಷೆಗಳು ಎಲ್ಲರಲ್ಲೂ ಅನುಮಾನ ಮೂಡಿಸಿದ್ದು, ಪ್ರಸ್ತುತ ಸ್ಪರ್ಧಿಸಿದ ಕ್ಷೇತ್ರಗಳಿಗಿಂತ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಮೈತ್ರಿ ಗೆಲವು ಸಾಧಿಸಲಿದೆ ಎಂದು ಸಮೀಕ್ಷೆಯ ಫಲಿತಾಂಶಗಳು ದೊಡ್ಡ ಆಘಾತವನ್ನುಂಟು ಮಾಡಿದೆ.

ರಾಹುಲ್ ಗಾಂಧಿ

ಈ ಹಿನ್ನೆಲೆಯಲ್ಲಿ, ಚುನಾವಣಾ ಸಮೀಕ್ಷೆಗಳು ಈಗ ಟೀಕೆಗೆ ಗುರಿಯಾಗುತ್ತಿವೆ. ಈ ಕುರಿತು ಇಂದು ರಾಹುಲ್ ಗಾಂಧಿ ನೀಡಿದ ಸಂದರ್ಶನದಲ್ಲಿ, “ಲೋಕಸಭೆ ಚುನಾವಣೆಯಲ್ಲಿ 295 ಸ್ಥಾನಗಳನ್ನು ಗೆಲ್ಲುವ ಮೂಲಕ ಇಂಡಿಯಾ ಮೈತ್ರಿಕೂಟವು ಸರ್ಕಾರವನ್ನು ರಚಿಸಲಿದೆ. ನಿನ್ನೆ ಬಿಡುಗಡೆಯಾದ ಚುನಾವಣೋತ್ತರ ಸಮೀಕ್ಷೆಗಳು EXIT POLL ಅಲ್ಲ, ಮೋದಿಯವರ ಮೀಡಿಯಾ POLL” ಎಂದು ಅವರು ಟೀಕಿಸಿದ್ದಾರೆ.

ಆಮ್ ಆದ್ಮಿ ಸಂಸದ ಸಂಜಯ್ ಸಿಂಗ್, “ನಿನ್ನೆಯ EXIT POLL ಫಲಿತಾಂಶಗಳಿಂದ ಮೋದಿ ಜಿಗಿದು ನೃತ್ಯ ಮಾಡುತ್ತಾರೆ. ಆದರೆ ನಿಜವಾದ ಫಲಿತಾಂಶ ಜೂನ್ 4 ರಂದು ಹೊರಬೀಳಲಿದೆ. ಬಿಜೆಪಿ ನಿಜವಾಗಿಯೂ ಸ್ನೇಹಪರ ಪಕ್ಷವೇ ಆಗಿದೆ. ಆದ್ದರಿಂದಲೇ 442 ಸ್ಥಾನಗಳ ಪೈಕಿ 110 ಸ್ಥಾನಗಳನ್ನು ಮಿತ್ರಪಕ್ಷಗಳಿಗೆ ನೀಡಿದೆ.

ಆಮ್ ಆದ್ಮಿ ಸಂಸದ ಸಂಜಯ್ ಸಿಂಗ್

2021ರಲ್ಲಿ AAJ TAK, AXIS, MY INDIA ಮುಂತಾದ ಸಂಸ್ಥೆಗಳು, ಬಿಜೆಪಿ 160 ಸ್ಥಾನಗಳನ್ನು ಗೆದ್ದು ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚಿಸಲಿದೆ ಎಂದು ಸಮೀಕ್ಷೆಯನ್ನು ಬಿಡುಗಡೆ ಮಾಡಿತ್ತು. ಆಗ ಬಿಜೆಪಿ ಮುಖಂಡರೆಲ್ಲ ಸಿಹಿ ನೀಡಿ ಸಂತಸ ಪಟ್ಟುಕೊಂಡರು. ಆದರೆ ಚುನಾವಣೆಯ ಅಂತ್ಯಕ್ಕೆ ಬಿಜೆಪಿಗೆ ಸಿಕ್ಕಿದ್ದು ಬರೀ 77 ಸ್ಥಾನ ಮಾತ್ರ.

ಈಗ ಮೋದಿಗೆ ಗೋಡಿ ಮೀಡಿಯಾ ಕೊಟ್ಟಿರುವ 400 ಸೀಟುಗಳಲ್ಲಿ ಬಿಜೆಪಿಗೆ 200 ಕ್ಕಿಂತ ಕಡಿಮೆ ಸ್ಥಾನಗಳೇ ಬರುತ್ತವೆ. ಮತ ಎಣಿಕೆ ವೇಳೆ ನಿಜವಾದ ಫಲಿತಾಂಶ ಹೊರಬೀಳಲಿದೆ” ಎಂದು ಹೇಳಿದ್ದಾರೆ.

ಶಿವಸೇನೆಯ (ಉದ್ದವ್) ಸಂಜಯ್ ರಾವತ್

ಶಿವಸೇನೆಯ (ಉದ್ದವ್) ಸಂಜಯ್ ರಾವತ್, ” ಚುನಾವಣೋತ್ತರ ಸಮೀಕ್ಷೆಗಳೆಂದು ಹೇಳಿಕೊಳ್ಳುವ ಅಂಕಿಅಂಶಗಳನ್ನು ಬಿಡುಗಡೆ ಮಾಡುವುದು CORPORATE ಆಟವಾಗಿದೆ. ನೀವು ಹಣ ಪಾವತಿಸಿದರೆ, ಅವರು ನಿಮಗೆ ಅಗತ್ಯವಿರುವ ಸಂಖ್ಯೆಗಳನ್ನು ಬಿಡುಗಡೆ ಮಾಡುತ್ತಾರೆ. ಯಾರು ಹೆಚ್ಚು ಹಣ ಕೊಡುತ್ತಾರೋ ಅವರ ಪರವಾಗಿ ಭವಿಷ್ಯ ನುಡಿಯುವುದು ಆ ಮಾಧ್ಯಮಗಳ ಕೆಲಸವಾಗಿದೆ. ಇಂಡಿಯಾ ಮೈತ್ರಿಕೂಟ 295 ರಿಂದ 310 ಸ್ಥಾನಗಳನ್ನು ಪಡೆದು ಸರ್ಕಾರ ರಚಿಸುವುದು ಖಚಿತ” ಎಂದು ಹೇಳಿದ್ದಾರೆ.

ರಾಜಕೀಯ

ಅಂಚೆ ಮತಗಳನ್ನು ಮೊದಲು ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಿದ ನಂತರವೇ ವಿದ್ಯುನ್ಮಾನ ಮತಯಂತ್ರದಲ್ಲಿ ದಾಖಲಾದ ಮತಗಳನ್ನು ಎಣಿಕೆ ಮಾಡಬೇಕು!

ನವದೆಹಲಿ: ಇಂಡಿಯಾ ಮೈತ್ರಿಕೂಟದ  ನಾಯಕರುಗಳಾದ ಟಿ.ಆರ್.ಬಾಲು, ಅಭಿಷೇಕ್ ಮನು ಸಿಂಘ್ವಿ ಮತ್ತು ಇತರರು ದೆಹಲಿಯಲ್ಲಿ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ, ಮತ ಎಣಿಕೆ ವೇಳೆ ಯಾವುದೇ ಅವ್ಯವಹಾರ ನಡೆಯದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಲೋಕಸಭೆ ಚುನಾವಣೆ 7 ಹಂತಗಳಲ್ಲಿ ನಡೆದಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಇಂಡಿಯಾ ಮೈತ್ರಿಕೂಟದ ನಾಯಕರುಗಳಾದ ಟಿ.ಆರ್.ಬಾಲು, ಅಭಿಷೇಕ್ ಮನು ಸಿಂಘ್ವಿ, ಸೀತಾರಾಮ್ ಯೆಚೂರಿ, ಟಿ.ರಾಜಾ ಮತ್ತಿತರರು ದೆಹಲಿಯಲ್ಲಿ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ, ಮತ ಎಣಿಕೆ ವೇಳೆ ಯಾವುದೇ ಅವ್ಯವಹಾರ ನಡೆಯದೇ ಇರುವುದನ್ನು ಖಚಿತಪಡಿಸಬೇಕು ಎಂದು ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “3 ಪ್ರಮುಖ ಸಮಸ್ಯೆಗಳ ಕುರಿತು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಮತ ಎಣಿಕೆ ನ್ಯಾಯಯುತವಾಗಿ ನಡೆಯಬೇಕು. ಯಾವುದೇ ಅವ್ಯವಹಾರ ನಡೆಯದೇ ಇರುವುದನ್ನು ಖಚಿತಪಡಿಸಬೇಕು. ಅಂಚೆ ಮತಪತ್ರಗಳನ್ನು ಮೊದಲು ಎಣಿಕೆ ಮಾಡಿ ತಕ್ಷಣವೇ ಫಲಿತಾಂಶಗಳನ್ನು ಪ್ರಕಟಿಸಬೇಕು.

ಅಂಚೆ ಮತಗಳ ಎಣಿಕೆಯ ನಂತರವೇ ವಿದ್ಯುನ್ಮಾನ ಮತಯಂತ್ರದಲ್ಲಿ ದಾಖಲಾದ ಮತಗಳನ್ನು ಎಣಿಕೆ ಮಾಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದೇವೆ. ಅಂಚೆ ಮತಪತ್ರಗಳ ಫಲಿತಾಂಶವನ್ನು ಪ್ರಕಟಿಸದೆ ಮತಯಂತ್ರಗಳಲ್ಲಿ ದಾಖಲಾದ ಮತಗಳನ್ನು ಪ್ರಕಟಿಸುವುದು ಕಾನೂನಿಗೆ ವಿರುದ್ಧವಾಗಿದೆ” ಎಂದು ಅವರು ಹೇಳಿದರು.

INDIA LEADERS MET CHIEF ELECTION COMMISSIONER

INDIA leaders met Chief Election Commissioner and other members of the ECI with following demands:

•Issue clear, detailed guidelines for the counting process on 04.06.2024.

•Clarify counting postal ballots first, per Conduct of Election Rules 1961.

•Ensure CCTV-monitored safe movement of Control Units.

•Verify date/time on Control Units & confirm voting start/end times.

•Specify slips, tags, and details for counting agents.

•Display poll date, candidates, and total votes before candidate-wise results.

•Avoid rushing; allow agents to record results before proceeding. Strengthen transparency and faith in the electoral process!

ರಾಜಕೀಯ

ಮೋದಿ 3ನೇ ಬಾರಿ ಪ್ರಧಾನಿಯಾಗುವುದಿಲ್ಲ, ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ ಎಂದು ಎಎಪಿ ಶಾಸಕ ಸೋಮನಾಥ್ ಭಾರ್ತಿ ಹೇಳಿದ್ದಾರೆ.

ನವದೆಹಲಿ: ಲೋಕಸಭೆ ಚುನಾವಣೆಯನ್ನು ದೇಶಾದ್ಯಂತ 7 ಹಂತಗಳಲ್ಲಿ ನಡೆಸಲಾಗಿದೆ. 4 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಲೋಕಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಗೆಲ್ಲುತ್ತದೆ ಎಂದು ಚುನಾವಣೋತ್ತರ ಬಿಡುಗಡೆಯಾದ ಸಮೀಕ್ಷೆಯ ಫಲಿತಾಂಶಗಳು ಸೂಚಿಸುತ್ತದೆ.

ಎನ್ ಡಿಎ ಮೈತ್ರಿಕೂಟ 350ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದೂ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ, ಎಎಪಿ ಶಾಸಕ ಸೋಮನಾಥ್ ಭಾರ್ತಿ ಹೇಳುವಂತೆ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಜೂನ್ 4ರ ಮತ ಎಣಿಕೆ ನಂತರ ತಪ್ಪು ಎಂದು ಸಾಬೀತಾಗಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ 3ನೇ ಬಾರಿಗೆ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಭಾವುಕರಾಗಿ ಹೇಳಿದ್ದಾರೆ. ಸೋಮನಾಥ್ ಭಾರ್ತಿ ಅವರು ನವದೆಹಲಿ ಲೋಕಸಭಾ ಕ್ಷೇತ್ರಕ್ಕೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರ ವಿರುದ್ಧ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಸ್ಪರ್ಧಿಸಿದ್ದಾರೆ. ಬಾನ್ಸುರಿಗೆ ಇದು ಮೊದಲ ಚುನಾವಣೆ.

2019ರಲ್ಲಿ ಬಿಜೆಪಿ ಎಲ್ಲಾ 7 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಈ ಬಾರೀ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳುತ್ತಿವೆ. ಆದರೆ, ಸೋಮನಾಥ್ ಭಾರ್ತಿ ಅವರು ಪ್ರಕಟಿಸಿರುವ ಎಕ್ಸ್ ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ, ಆಮ್ ಆದ್ಮಿ ಪಕ್ಷವು 4 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ ಪಕ್ಷವು 3 ಕ್ಷೇತ್ರಗಳಲ್ಲಿ ಈ ಬಾರಿ ಗೆಲ್ಲುತ್ತದೆ ಎಂದು ಹೇಳಿದ್ದಾರೆ.

ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ. ಮೋದಿ 3ನೇ ಅವಧಿಗೆ ಪ್ರಧಾನಿಯಾಗುವುದಿಲ್ಲ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ವಿರುದ್ಧ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ.

ದೇಶ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಸಂಜೆ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಕನ್ಯಾಕುಮಾರಿಯಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ.

ಮೇ 30 ರಂದು ತಮಿಳುನಾಡಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಮೇ 31 ಮತ್ತು ಜೂನ್ 1 ರಂದು ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಬಂಡೆಯಲ್ಲಿ ಧ್ಯಾನ ಮಾಡಲಿದ್ದಾರೆ. ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಪ್ರಧಾನಿ ಮೋದಿ ಧ್ಯಾನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ 2019ರ ಸಂಸತ್ ಚುನಾವಣೆಯ ಕೊನೆಯ ಹಂತದ ಮತದಾನದ ವೇಳೆ ಪ್ರಧಾನಿ ಮೋದಿ ಹಿಮಾಲಯಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿ ಅಲ್ಲಿನ ಗುಹೆಯೊಂದಕ್ಕೆ ತೆರಳಿ ಧ್ಯಾನ ಮಾಡಿದರು. ಈ ಪ್ರಯಾಣದಲ್ಲಿ ಅವರು ಕೇದಾರನಾಥ ಶಿವ ದೇವಾಲಯದಲ್ಲಿ ಪೂಜೆಯನ್ನೂ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ, ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಸೆಲ್ವಪೆರುಂತಗೈ ಅವರು ತಮ್ಮ ಎಕ್ಸ್ ಪೇಜ್ ನಲ್ಲಿ “ಪ್ರಜಾಪ್ರತಿನಿಧಿ ಕಾಯ್ದೆಯಂತೆ ಚುನಾವಣಾ ನೀತಿ ನಿಯಮಗಳು ಜಾರಿಯಲ್ಲಿರುವ ಕಾರಣ ಮೋದಿಯವರ ಕನ್ಯಾಕುಮಾರಿ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡಬಾರದು.

ಚುನಾವಣೆಗೆ ಮುನ್ನ 48 ಗಂಟೆಗಳ ವಿರಾಮದ ವೇಳೆಯಲ್ಲಿ ಇಂತಹ ಘಟನೆಯ ಮೂಲಕ ಮಾಧ್ಯಮಗಳನ್ನು ಬಳಸಿಕೊಂಡು ರಹಸ್ಯವಾಗಿ ಪ್ರಚಾರ ಮಾಡಲು ಮೋದಿ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ. ನಾಳೆ (ಇಂದು) ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ನೀಡಬೇಕಿದೆ. ಅಗತ್ಯವಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾರೆ.