ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಇಡಿ Archives » Dynamic Leader
October 23, 2024
Home Posts tagged ಇಡಿ
ದೇಶ

ನವದೆಹಲಿ: ಜಾರಿ ಇಲಾಖೆ ಬಂಧನದ ವಿರುದ್ಧ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಪ್ರಕರಣದ ತೀರ್ಪನ್ನು ದೆಹಲಿ ಹೈಕೋರ್ಟ್ ದಿನಾಂಕವನ್ನು ನಿರ್ದಿಷ್ಟಪಡಿಸದೆ ಮುಂದೂಡಿದೆ.

ಮದ್ಯ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಕೇಜ್ರಿವಾಲ್ ಬಂಧನದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಕೇಸ್ ದಾಖಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ಇಂದು ನಡೆಯಿತು.

ಜಾರಿ ನಿರ್ದೇಶನಾಲಯದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು, ತಪ್ಪಿತಸ್ಥರನ್ನು ಬಂಧಿಸಿ ಜೈಲಿಗಟ್ಟಬೇಕು ಎಂದು ವಾದಿಸಿದರು. ನಾವು ಅಪರಾಧ ಮಾಡುತ್ತೇವೆ. ಆದರೆ ಚುನಾವಣಾ ಕಾಲವಾದ್ದರಿಂದ ನಮ್ಮನ್ನು ಬಂಧಿಸಬಾರದು ಎಂದು ಹೇಳುವ ಹಕ್ಕು ವಿಚಾರಣಾಧೀನ ಕೈದಿಗಳಿಗೆ ಇಲ್ಲ.

ಇದು ಮೂರ್ಖತನ. ಚುನಾವಣೆಗೂ ಮುನ್ನ ರಾಜಕೀಯ ವ್ಯಕ್ತಿ ಕೊಲೆ ಮಾಡಿದರೆ ಬಂಧಿಸಬಾರದೇ? ಬಂಧನ ಕ್ರಮ ಕಿರುಕುಳ ಆಗುತ್ತದೆಯೇ? ಕೊಲೆ ಮಾಡಿದ ನಂತರ ಬಂಧಿಸುವುದು ಅಪರಾಧ ಎಂದು ಹೇಳಬಹುದೇ?  ಎಂದು ವಾದಿಸಿದರು.

ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಕೇಜ್ರಿವಾಲ್ ಅವರನ್ನು ಬಂಧಿಸುವ ಏಕೈಕ ಉದ್ದೇಶ ಅವರಿಗೆ ಕಿರುಕುಳ ನೀಡುವುದು ಮತ್ತು ದೆಹಲಿಯಲ್ಲಿ ಬಿಜೆಪಿಗೆ ನಿಜವಾದ ಸವಾಲಾಗಿರುವ ಆಮ್ ಆದ್ಮಿ ಪಕ್ಷವನ್ನು ಮೌನಗೊಳಿಸುವುದು. ಆಮ್ ಆದ್ಮಿ ಪಕ್ಷವನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ.

ಜಾರಿ ಇಲಾಖೆ ಬಳಿ ಯಾವುದೇ ಸಾಕ್ಷ್ಯಗಳಿಲ್ಲ. ಚುನಾವಣೆಗೂ ಮುನ್ನ ಮುಖ್ಯಮಂತ್ರಿಯನ್ನು ಬಂಧಿಸುವುದು ಅನಗತ್ಯ ಎಂದು ವಾಗ್ದಾಳಿ ನಡೆಸಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯವು ತೀರ್ಪನ್ನು ಅನಿರ್ದಿಷ್ಟಾವಧಿಗೆ ಮುಂದೂಡಿತು.

ದೇಶ

ಮನೀಶ್ ಸಿಸೋಡಿಯಾ ಸೇರಿದಂತೆ ನಾಯಕರ ಸತತ ಬಂಧನಗಳು ಮತ್ತು ಇದೀಗ ಕೇಜ್ರಿವಾಲ್ ಬಂಧನವು ಆಮ್ ಆದ್ಮಿ ಪಕ್ಷದ ಭವಿಷ್ಯವನ್ನು ಪ್ರಶ್ನಿಸುವಂತೆ ಮಾಡಿದೆ!

‘ಜೈಲಿನಲ್ಲಿದ್ದರೂ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ’ ಎಂದು ದೆಹಲಿ ಸಚಿವೆ ಆತಿಶಿ ಹೇಳಿದ್ದಾರೆ. ಆದರೆ, ಕಾನೂನು ಏನು ಹೇಳುತ್ತದೆ? ಪ್ರಜಾಪ್ರತಿನಿಧಿ ಕಾಯಿದೆ, 1951ರ ಪ್ರಕಾರ, ಜನರಿಂದ ಆಯ್ಕೆಯಾದ ನಾಯಕನನ್ನು ಕ್ರಿಮಿನಲ್ ಪ್ರಕರಣದಲ್ಲಿ ಬಂಧಿಸಿದರೆ, ಅವರು ತಪ್ಪಿತಸ್ಥರೆಂದು ಸಾಬೀತಾಗುವವರೆಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳುತ್ತದೆ.ಇದು ನೈತಿಕವಾಗಿ ಸರಿ ಎಂದರೆ, ಹೆಚ್ಚಿನ ತಜ್ಞರ ಉತ್ತರವು ಇಲ್ಲ ಎಂಬುದಾಗಿದೆ.

ಕೇಜ್ರಿವಾಲ್ ಅವರು ಅಧಿಕಾರದಲ್ಲಿ ಮುಂದುವರಿಯಲು ಬಯಸಿದರೂ ದೆಹಲಿ ಲೆಫ್ಟಿನೆಂಟ್ ಗವರ್ನರ್, ಸಾಂವಿಧಾನಿಕ ಯಂತ್ರೋಪಕರಣಗಳು ಸ್ಥಗಿತಗೊಂಡಿದೆ ಎಂದು ಹೇಳಿ, ಆರ್ಟಿಕಲ್ 239 ಎಬಿ ಮೂಲಕ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದು. ಆರ್ಟಿಕಲ್ 239 ಎಎ ಮೂಲಕ ಸರ್ಕಾರವನ್ನು ವಿಸರ್ಜಿಸಲು ಸಹ ಆದೇಶಿಸಬಹುದು.

ತಿಹಾರ್ ಜೈಲಿನ ಮಾಜಿ ಕಾನೂನು ಅಧಿಕಾರಿ ಸುನಿಲ್ ಗುಪ್ತಾ, ‘‘ಜೈಲಿನಿಂದ ಸರಕಾರ ನಡೆಸುವುದು ತುಂಬಾ ಕಷ್ಟದ ಕೆಲಸ. ಕುಟುಂಬದವರು, ಸಂಬಂಧಿಕರು ಅಥವಾ ಪಕ್ಷದ ಸದಸ್ಯರು ಯಾರೇ ಆಗಿರಲಿ, ವಾರಕ್ಕೆ ಎರಡು ಬಾರಿ ಮಾತ್ರ ಅವರನ್ನು ಭೇಟಿ ಮಾಡಬಹುದು ಎಂಬುದು ಜೈಲಿನ ನಿಯಮ. ಈ ನಿರ್ಬಂಧಗಳೊಂದಿಗೆ ಆಡಳಿತ ನಡೆಸುವುದು ಸುಲಭವಲ್ಲ,” ಎಂದು ಹೇಳಿದ್ದಾರೆ.

ಈ ಸಮಸ್ಯೆಯು ಎಎಪಿ-ಕಾಂಗ್ರೆಸ್ ಸಂಬಂಧವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದರೂ ಮದ್ಯದ ನೀತಿ ಹಗರಣವನ್ನು ಮೊದಲು ಬಯಲಿಗೆಳೆದದ್ದು ಕಾಂಗ್ರೆಸ್ ಎಂಬುದರಿಂದ ಈ ಸಂಬಂಧ ಹಳಸಲು ಕಾರಣವಾಗಬಹುದು. ಪ್ರಧಾನಿ ಮೋದಿಯವರನ್ನು ತೀವ್ರವಾಗಿ ಟೀಕಿಸಿದ ನಾಯಕರಲ್ಲಿ ಕೇಜ್ರಿವಾಲ್ ಕೂಡಾ ಒಬ್ಬರಾಗಿದ್ದರು.

ಅವರ ರಾಜಕೀಯ ದಳಪತಿ ಮನೀಶ್ ಸಿಸೋಡಿಯಾ ಸೇರಿದಂತೆ ನಾಯಕರ ಸತತ ಬಂಧನಗಳು ಮತ್ತು ಇದೀಗ ಕೇಜ್ರಿವಾಲ್ ಬಂಧನವು ಆಮ್ ಆದ್ಮಿ ಪಕ್ಷದ ಭವಿಷ್ಯವನ್ನು ಪ್ರಶ್ನಿಸುವಂತೆ ಮಾಡಿದೆ. ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರನ್, ಕೇಜ್ರಿವಾಲ್ ಬಂಧನದಿಂದ ‘ಭ್ರಷ್ಟಾಚಾರದಲ್ಲಿ ತೊಡಗಿರುವವರ ವಿರುದ್ಧ ಮೋದಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತಿದ್ದಾರೆ’ ಎಂಬ ಮಾತು ಲೋಕಸಭೆ ಚುನಾವಣೆ ವೇಳೆ ವ್ಯಾಪಕವಾಗಿ ಕೇಳಿಬರುವ ಸಾದ್ಯತೆಗಳಿವೆ.  

Uncategorized

ದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ. ದೆಹಲಿ ಸರ್ಕಾರದ ಮದ್ಯ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ಇಲಾಖೆ ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪ್ರಕರಣ ದಾಖಲಿಸಿದೆ. ಪ್ರಕರಣದಲ್ಲಿ ಹಾಜರಾಗುವಂತೆ ಹಲವು ಬಾರಿ ನೋಟಿಸ್ ನೀಡಿದರೂ ಕೇಜ್ರಿವಾಲ್ ಹಾಜರಾಗಲಿಲ್ಲ.

ಈ ಹಿನ್ನಲೆಯಲ್ಲಿ, ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರ ಮನೆ ಮೇಲೆ ಜಾರಿ ಇಲಾಖೆ ಇಂದು ದಾಳಿ ನಡೆಸುತ್ತಿದೆ. ಅದೇ ರೀತಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕರ ಮನೆ ಮೇಲೂ ದಾಳಿ ನಡೆಸಲಾಗುತ್ತಿದೆ.

ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್

ಇದಕ್ಕೂ ಮುನ್ನ ಇಂದು ಬೆಳಗ್ಗೆ 10 ಗಂಟೆಗೆ ಜಾರಿ ಇಲಾಖೆಯನ್ನು ಬಹಿರಂಗಪಡಿಸುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ಸಚಿವೆ ಅತಿಶಿ ಮರ್ಲೆನಾ ಹೇಳಿದ್ದ ಹಿನ್ನಲೆಯಲ್ಲಿ, ಇಂದು ಪಕ್ಷದ ಪದಾಧಿಕಾರಿಗಳ ಮನೆ ಮೇಲೆ ಜಾರಿ ಇಲಾಖೆ ದಾಳಿ ನಡೆಸಿರುವ ಘಟನೆ ಸಂಚಲನ ಮೂಡಿಸಿದೆ.

ಆಪರೇಷನ್ ಕಮಲ ನಡೆಸುವ ಹೊಣೆಯನ್ನು ಬಿಜೆಪಿ ತನಿಖಾ ಸಂಸ್ಥೆಗಳಿಗೆ ವಹಿಸಿದೆ ಎಂದು ತಟಸ್ಥವಾದ ಮಾಧ್ಯಮಗಳು ವಿಮರ್ಶಿಸುತ್ತಿದೆ. ಮತ್ತು ಕೆಲಸ ಮಾಡದ ಮಾಧ್ಯಮಗಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ದೇಶ

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರನ್ ಅವರನ್ನು ನಿನ್ನೆ ರಾತ್ರಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಏಳು ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಲಾಗಿದೆ. ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಈ ಹಿನ್ನಲೆಯಲ್ಲಿ, ಜಾರಿ ಇಲಾಖೆಯ ಕ್ರಮದ ವಿರುದ್ಧ ರಾಜ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ರಾತ್ರಿ ಬಂಧನವಾದ ನಂತರ, ಅವರು ತಮ್ಮ ‘ಎಕ್ಸ್’ ಸೈಟ್‌ನಲ್ಲಿ ಪೋಸ್ಟ್ ಮಾಡಿರುವ ಸಂದೇಶದಲ್ಲಿ, “ಇದೊಂದು ವಿರಾಮ. ಜೀವನವು ಒಂದು ದೊಡ್ಡ ಯುದ್ಧವಾಗಿದೆ. ನಾನು ಪ್ರತಿ ಕ್ಷಣವೂ ಹೋರಾಡಿದೆ; ಪ್ರತಿ ಕ್ಷಣವೂ ಹೋರಾಡುತ್ತೇನೆ. ಆದರೆ, ನಾನು ರಾಜಿ ಮಾಡಿಕೊಳ್ಳಲು ಮಂಡಿಯೂರುವುದಿಲ್ಲ” ಎಂದು ಹೇಳಿದ್ದಾರೆ.

“ಸೋಲು ಅಥವಾ ಗೆಲವು ನಾನು ಯಾವುದಕ್ಕೂ ಹೆದರುವುದಿಲ್ಲ; ನಾನು ಸೋಲನ್ನು ಒಪ್ಪಿಕೊಳ್ಳುವುದಿಲ್ಲ” ಎಂದು ಹೇಮಂತ್ ಸೋರೆನ್ ಹೇಳಿದ್ದಾರೆ.